ವಿಸ್ತಾರ TOP 10 NEWS | ಬೆಂಗಳೂರು Pothole ಸಮಸ್ಯೆಯಿಂದ ಮಂಗಳೂರು Toll Gate ವಿವಾದದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ಬೆಂಗಳೂರು Pothole ಸಮಸ್ಯೆಯಿಂದ ಮಂಗಳೂರು Toll Gate ವಿವಾದದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

TOP 10 NEWS 18102022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ವಾಹನ ಸವಾರರ ಜೀವನವನ್ನೇ ನರಕವಾಗಿಸಿರುವ ಬೆಂಗಳೂರು ರಸ್ತೆ ಗುಂಡಿಗಳು ಇದೀಗ ರಾಷ್ಟ್ರೀಯ ಮಟ್ಟದಲ್ಲೂ ಬ್ರ್ಯಾಂಡ್‌ ಬೆಂಗಳೂರಿನ ಮಾನ ತೆಗೆಯುತ್ತಿವೆ. ಕರ್ನಾಟಕದಲ್ಲಿ ಮುಂದಿನ 8 ವರ್ಷಗಳಲ್ಲಿ ಜನಸಂಖ್ಯೆ ಪ್ರಮಾಣ ಕುಸಿಯುವುದರ ಕುರಿತು ಮೋಹನದಾಸ್‌ ಪೈ ವರದಿಯಲ್ಲಿ ಉಲ್ಲೇಖವಾಗಿದೆ, ಬಿಸಿಸಿಐ ಅಧ್ಯಕ್ಷರಾಗಿ ಕನ್ನಡಿಗ ಆಯ್ಕೆಯಾಗಿದ್ದಾರೆ, ಬಿಲ್ಕಿಸ್‌ ಬಾನೊ ಪ್ರಕರಣದಲ್ಲಿ ಗುಜರಾತ್‌ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‌ ಗರಂ ಆಗಿದೆ, ಮಂಗಳೂರಿನಲ್ಲಿ ಟೋಲ್‌ಗೇಟ್‌ ವಿರುದ್ಧದ ಪ್ರತಿಭಟನೆ ಜೋರಾಗಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

Blank Blue

1. ವಿಸ್ತಾರ Explainer | ಮಳೆ ಅನಾಹುತ, ರಸ್ತೆ ಗುಂಡಿ: ಬೆಂಗಳೂರಿನ ಪ್ರತಿಷ್ಠೆ ರಾಷ್ಟ್ರ ಮಟ್ಟದಲ್ಲಿ ಬೀದಿಪಾಲು

ಬೆಂಗಳೂರು ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಮೂರನೇ ಅತಿದೊಡ್ಡ ನಗರ. ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ, ಐಟಿ ಹಬ್ ಎಂದೆಲ್ಲ ಕರೆಸಿಕೊಳ್ಳುವ ಬೆಂಗಳೂರು ಕೋಟ್ಯಂತರ ಮಂದಿಯ ಬದುಕು ರೂಪಿಸಿದೆ. ಆದರೆ ಈಗ ಮಳೆ ಮತ್ತು ರಸ್ತೆ ಗುಂಡಿಗಳಿಂದಾಗಿ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತುತ್ತಾಗಿದೆ. ಮಳೆ ಮತ್ತು ರಸ್ತೆ ಗುಂಡಿಗಳು ಬೆಂಗಳೂರಿನ ಪ್ರತಿಷ್ಠೆಯನ್ನು ಮಣ್ಣು ಪಾಲು ಮಾಡಿವೆ. ಇದಕ್ಕೆ ಯಾರು ಹೊಣೆ? ಬೆಂಗಳೂರು ಅಭಿವೃದ್ಧಿಗಾಗಿ ಸರ್ಕಾರ ಮೀಸಲಿಡುವ ಸಾವಿರಾರು ಕೋಟಿ ರೂ.ಗಳು ಎಲ್ಲಿ ಹೋಗುತ್ತವೆ? ಈ ಕುರಿತ ಅವಲೋಕನ ಇಲ್ಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Vistara ವಿಶ್ಲೇಷಣೆ | 8 ವರ್ಷದಲ್ಲಿ ಕರ್ನಾಟಕ ಜನಸಂಖ್ಯೆ ಕುಸಿತ: ಮೋಹನದಾಸ್‌ ಪೈ ವರದಿ

ದೇಶದಲ್ಲೆ ಅತ್ಯಧಿಕ ಸ್ಟಾರ್ಟಪ್‌ಗಳನ್ನು ಹೊಂದಿರುವ ರಾಜ್ಯ, ತಂತ್ರಜ್ಞಾನದ ರಾಜಧಾನಿ ಎಂಬ ಹೆಗ್ಗಳಿಕೆ ಹೊಂದಿರುವ ಕರ್ನಾಟಕ ರಾಜ್ಯಕ್ಕೆ ಮುಂದಿನ ಎಂಟು ವರ್ಷದಲ್ಲಿ ಹೆಚ್ಚಿನ ಸವಾಲುಗಳು ಹಾಗೂ ಜನಸಂಖ್ಯೆಯ ಗಂಡಾಂತರ ಎದುರಾಗಲಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಮುಖ್ಯವಾಗಿ, ಕುಸಿಯುತ್ತಿರುವ ಫಲವತ್ತತೆ, ಯುವಕರ ಸಂಖ್ಯೆ ಕುಸಿತ, ಹಿರಿಯ ನಾಗರಿಕರ ಸಂಖ್ಯೆ ಹೆಚ್ಚಳದಂತಹ ಅನೇಕ ಸಂಗತಿಗಳನ್ನು ತಿಳಿಸಿಕೊಟ್ಟಿದೆ.
ಇನ್ಫೋಸಿಸ್‌ ಸಹ ಸಂಸ್ಥಾಪಕ ಟಿ.ವಿ. ಮೋಹನದಾಸ್‌ ಪೈ ಹಾಗೂ ಆರ್ಥಿಕ ತಜ್ಞೆ ನಿಶಾ ಹೊಳ್ಳ ಅವರು ಸಿದ್ಧಪಡಿಸಿ, ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರ ಬಿಡುಗಡೆ ಮಾಡಿದ ʼಕರ್ನಾಟಕ- $೧ ಲಕ್ಷ ಕೋಟಿ ಜಿಡಿಪಿ ಮಹತ್ವಾಕಾಂಕ್ಷೆʼ ಕುರಿತ ವರದಿಯಲ್ಲಿ ಇಂತಹ ಅಂಶಗಳನ್ನು ತಿಳಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. ಹಲಾಲ್‌ ಮಾರ್ಕ್‌ ವಸ್ತುಗಳ ಖರೀದಿಸದಂತೆ ಜಾಗೃತಿ; ಕೆಎಫ್‌ಸಿ ಎದುರು ಪ್ರತಿಭಟನೆ

ರಾಜ್ಯದಲ್ಲಿ ಹಿಂದೂ ಜನಜಾಗೃತಿ ಸಮಿತಿ ಆರಂಭಿರುವ ಹಲಾಲ್‌ ಮುಕ್ತ ದೀಪಾವಳಿ ಅಭಿಯಾನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇಸ್ಲಾಮಿಕ್‌ ನಿಯಮಗಳಂತೆ ಸಿದ್ಧಪಡಿಸಿರುವ ಹಲಾಲ್‌ ಮಾರ್ಕ್‌ ಹೊಂದಿರುವ ಮಾಂಸ ಮತ್ತು ಇತರ ಯಾವುದೇ ವಸ್ತುಗಳನ್ನು ಖರೀದಿಸಬಾರದು ಎಂದು ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಧಾನ ಉದ್ದೇಶ. ಈ ನಿಟ್ಟಿನಲ್ಲಿ ಹಲವು ಸಂಘಟನೆಗಳು ಕೈ ಜೋಡಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ, ಅಭಿಯಾನಗಳು ನಡೆಯುತ್ತಿವೆ. ಶ್ರೀರಾಮ ಸೇನೆಯ ಸ್ಥಾಪಕ ಪ್ರಮೋದ್‌ ಮುತಾಲಿಕ್‌ ಕೂಡಾ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Blank Blue

4. Roger Binny | ಕನ್ನಡಿಗ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

1983ರ ವಿಶ್ವ ಕಪ್ ವಿಜೇತ ತಂಡದ ಭಾಗವಾಗಿದ್ದ ಕರ್ನಾಟಕ ಮೂಲದ ಕ್ರಿಕೆಟಿಗ ರೋಜರ್ ಬಿನ್ನಿ (Roger Binny) ಅವರು ಭಾರತೀಯ ಕ್ರಿಕೆಟ್ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷರಾಗಿ ಅವಿರೋಧವಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಇವರು ಬಿಸಿಸಿಐಗೆ 36ನೇ ಅಧ್ಯಕ್ಷರು. ಈ ಮೊದಲು ಸೌರವ್ ಗಂಗೂಲಿ ಅಧ್ಯಕ್ಷರಾಗಿದ್ದರು. ಜಯ ಶಾ ಅವರು ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಇತರ ಪದಾಧಿಕಾರಿಗಳ ಪಟ್ಟಿ ಹೀಗಿದೆ: ಆಶೀಶ್ ಸೇಲಾರ್-ಖಜಾಂಚಿ, ರಾಜೀವ್ ಶುಕ್ಲಾ-ಉಪಾಧ್ಯಕ್ಷ ಮತ್ತು ದೇವಜಿತ್ ಸೈಕಿಯಾ ಜಂಟಿ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿದ್ದ ಅರುಣ್ ಧುಮಾಲ್ ಅವರು ಮುಂದಿನ ಐಪಿಎಲ್ ಅಧ್ಯಕ್ಷರಾಗಲಿದ್ದಾರೆ. ಮತ್ತಷ್ಟು ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Toll gate ಗಲಾಟೆ: ಮಂಗಳೂರಿನಲ್ಲಿ ಟೋಲ್ ಗೇಟ್ ಕಿತ್ತೆಸೆಯಲು ಮುಂದಾದ ಪ್ರತಿಭಟನಾಕಾರರು

ಕಳೆದ ಹಲವು ವರ್ಷಗಳಿಂದ ಭಾರೀ ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟನ್ನು ಕಿತ್ತೆಸೆಯಲು ಮುಂದಾಗಿರುವ ಪ್ರತಿಭಟನಾಕಾರರನ್ನು ತಡೆಯಲು ಹರಸಾಹಸ ಪಡುತ್ತಿದ್ದಾರೆ. ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದರೂ ಲೆಕ್ಕಿಸದೆ ಪ್ರತಿಭಟನಾಕಾರರು ಮುಂದಾಗಿದ್ದು, ಪೊಲೀಸರು ಲಾಠಿಚಾರ್ಜ್‌ ಮೂಲಕ ಚದುರಿಸಲು ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಹಲವು ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Bilkis Bano Case | ಅಪರಾಧಿಗಳ ಬಿಡುಗಡೆ ಸಂಬಂಧ ಗುಜರಾತ್ ಅಫಿಡವಿಟ್‌ಗೆ ಸುಪ್ರೀಂ ಗರಂ

ಬಿಲ್ಕಿಸ್ ಬಾನೊ ಗ್ಯಾಂಗ್ ರೇಪ್ ಪ್ರಕರಣ(Bilkis Bano Case)ದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಸಂಬಂಧ ಗುಜರಾತ್ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್‌ ರೀತಿಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರ ಸಲ್ಲಿಸಿರುವ ಅಫಿಡವಿಟ್ ದೊಡ್ಡದಾಗಿದೆ, ಸರಿಯಾದ ಹೇಳಿಕೆಗಳ ಕೊರತೆ ಇದೆ. ಅಲ್ಲದೇ, ಯಾವುದೇ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಿಯಾಗಿ ಪಾಲಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Helicopter Crash | ಕೇದಾರನಾಥ್‌ನಲ್ಲಿ ಹೆಲಿಕಾಪ್ಟರ್ ಪತನ, 6 ಮಂದಿ ಸಾವು

ಉತ್ತರಾಖಂಡದ ಕೇದಾರನಾಥ ಬಳಿಯ ಗರುಡ ಚೆಟ್ಟಿ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಹೆಲಿಕಾಪ್ಟರ್ ದುರಂತ(Helicopter Crash)ದಲ್ಲಿ ಪೈಲಟ್ ಸೇರಿ ಸೇರಿ ಒಟ್ಟು 6 ಜನರು ಮೃತಪಟ್ಟಿದ್ದಾರೆ. ಈ ಹೆಲಿಕಾಪ್ಟರ್ ಕೇದಾರನಾಥ ಕ್ಷೇತ್ರಕ್ಕೆ ಯಾತ್ರಿಗಳನ್ನು ಕರೆದುಕೊಂಡು ಹೋಗುತ್ತಿತ್ತು. ಕೇದರನಾಥದಿಂದ 2 ಕಿ.ಮೀ ದೂರದಲ್ಲಿ ಈ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿರುವ ಶಂಕೆಯೂ ಇದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Blank Blue

8. ಜಯಲಲಿತಾ ಸಾವಿನ ಪ್ರಕರಣದಲ್ಲಿ ಶಶಿಕಲಾ ತಪ್ಪಿತಸ್ಥೆ, ಹೆಚ್ಚಿನ ತನಿಖೆಗೆ ಶಿಫಾರಸು

ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾವಿನ ಸಂದರ್ಭದ ಕುರಿತು ತನಿಖೆ ನಡೆಸಿದ್ದ ಆರ್ಮುಘಸ್ವಾಮಿ ಕಮಿಷನ್ (Arumughaswamy Commission) ವರದಿಯನ್ನು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. 2016ರಲ್ಲಿ ಜಯಲಲಿತಾ ಅವರು ನಿಧನರಾಗಿದ್ದರು. ಅವರ ಸಾವಿನ ಪರಿಸ್ಥಿತಿಯ ಕುರಿತು ತನಿಖೆ ನಡೆಸುವಂತೆ ಒತ್ತಾಯ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎ ಆರ್ಮುಘಸ್ವಾಮಿ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಈ ಆಯೋಗ ನೀಡಿದ್ದ ವರದಿಯನ್ನು ಸ್ವೀಕರಿಸಿದ್ದ ಸರ್ಕಾರ ಇದೀಗ ವಿಧಾನಸಭೆಯಲ್ಲಿ ಮಂಡಿಸಿದೆ. ಜಯಲಲಿತಾ ಅವರು ಆಪ್ತೆ ವಿ ಶಶಿಕಲಾ ಅವರನ್ನು ತಪ್ಪಿತಸ್ಥೆ ಎಂದು ನಮೂದಿಸಿರುವ ಆಯೋಗವು ಅವರ ವಿರುದ್ಧ ಹೆಚ್ಚಿನ ತನಿಖೆಗೆ ಶಿಫಾರಸು ಮಾಡಿದೆ. ಇದೇ ವೇಳೆ, ಶಶಿಕಲಾ ಜತೆ ಇನ್ನೂ ಹಲವರನ್ನು ತಪ್ಪಿತಸ್ಥರು ಎಂದು ಹೆಸರಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Asia Cup 2023 | ಏಷ್ಯಾ ಕಪ್‌ಗೆ ಭಾರತ ತಂಡ ಪಾಕಿಸ್ತಾನ ಪ್ರವಾಸ ಮಾಡಲ್ಲ ಎಂದ ಜಯ್‌ ಶಾ

ಮುಂಬಯಿ : ಪಾಕಿಸ್ತಾನದ ಅತಿಥ್ಯದಲ್ಲಿ ೨೦೨೩ರಲ್ಲಿ ನಡೆಯಲಿರುವ ಏಷ್ಯಾ ಕಪ್‌ನಲ್ಲಿ ಪಾಲ್ಗೊಳ್ಳಲು ಭಾರತ ತಂಡ ಪಾಕಿಸ್ತಾನಕ್ಕೆ ಪ್ರವಾಸ ಮಾಡುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಹೇಳಿದ್ದಾರೆ. ಮಂಗಳವಾರ ಮುಂಬಯಿಯಲ್ಲಿ ನಡೆದ ಬಿಸಿಸಿಐ ವಾರ್ಷಿಕ ಮಹಾಸಭೆಯ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು ಭಾರತ ತಂಡ ಪಾಕ್‌ಗೆ ಪ್ರಯಾಣ ಮಾಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಮುಂದಿನ ವರ್ಷದ ಏಷ್ಯಾ ಕಪ್‌ ಹಾಗೂ ೨೦೨೫ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ನಡೆಸುವ ಆತಿಥ್ಯ ಲಭಿಸಿತ್ತು. ಹೀಗಾಗಿ ರಾಜಕೀಯ ವೈರತ್ವ ಹೊಂದಿರುವ ಪಾಕಿಸ್ತಾನದ ನೆಲಕ್ಕೆ ಭಾರತ ತಂಡ ಕಾಲಿಡುವುದೇ ಎಂಬ ಪ್ರಶ್ನೆ ಎದ್ದಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Kantara Collection | 18 ದಿನದಲ್ಲಿ ₹150 ಕೋಟಿ ಕ್ಲಬ್ ಸೇರಿತಾ ಕಾಂತಾರ?

ಕರುನಾಡಿನ ಕರಾವಳಿ ಕಥೆ ಈಗ ಜಗತ್ತಿನಾದ್ಯಂತ ಮನೆಮಾತಾಗಿದೆ. ‘ಕಾಂತಾರ’ ದೊಡ್ಡ ಯಶಸ್ಸು ಪಡೆಯುವ ಜೊತೆಗೆ ಬಾಕ್ಸ್​ ಆಫೀಸ್​ನಲ್ಲೂ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದೆ. ಬಿಡುಗಡೆಯಾದ 18 ದಿನದಲ್ಲಿ ‘ಕಾಂತಾರ’ ಸಿನಿಮಾ ₹150 ಕೋಟಿ (Kantara Collection) ಗಳಿಸುವ ಮೂಲಕ ಹೊಸ ಇತಿಹಾಸ ಬರೆದಿದೆ. ಹಾಗೇ ₹150 ಕೋಟಿ ಗಳಿಸಿದ ಕನ್ನಡದ 5ನೇ ಸಿನಿಮಾ ಎಂಬ ಹೆಗ್ಗಳಿಕೆಗೂ ‘ಕಾಂತಾರ’ ಪಾತ್ರವಾಗಿದೆ. ‘ಕೆಜಿಎಫ್-1’ ಮೊದಲ ಬಾರಿಗೆ ₹150 ಕೋಟಿ ಸೇರಿದ ಕನ್ನಡ ಸಿನಿಮಾ ಆಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

ಕಾಂಗ್ರೆಸ್ ಭ್ರಷ್ಟಾಚಾರದ ಸಮಗ್ರ ದಾಖಲೆ ರಾಹುಲ್ ಗಾಂಧಿಗೆ ರವಾನೆ: ಸಿಎಂ ಬಸವರಾಜ ಬೊಮ್ಮಾಯಿ
MSP | ಗೋಧಿ, ಸಾಸಿವೆ, ಬಾರ್ಲಿ ಸೇರಿ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ
5G | ಕಳೆದ 12 ತಿಂಗಳಲ್ಲಿ ಟೆಲಿಕಾಂ ಸಂಬಂಧಿತ ಉದ್ಯೋಗ ಹೆಚ್ಚಳ
RSS | ಸಂಘ ಪರಿವಾರದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರಿಗೆ ಹೆಚ್ಚೆಚ್ಚು ಅವಕಾಶ ನೀಡಲು ಆರ್​ಎಸ್​ಎಸ್​ ಚಿಂತನೆ
⭕Video| ಅಮ್ಮ ನನಗಾಗಿ ಸನ್​ಸ್ಕ್ರೀನ್​ ಕಳಿಸಿಕೊಟ್ಟಿದ್ದಾರೆ, ಆದರೆ ನಾನು ಬಳಸುತ್ತಿಲ್ಲ; ಯಾತ್ರೆ ಮಧ್ಯೆ ರಾಹುಲ್​ ಗಾಂಧಿ ಮಾತುಕತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Physical Abuse: ಹಿಟಾಚಿ ಕೆಳಗೇ 7 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಪಿಶಾಚಿ

Physical Abuse: ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಾಯಿ ಮತ್ತು ಮಗು ಗರುಡ ಮಾಲ್ ಪಕ್ಕದಲ್ಲಿ ಭಿಕ್ಷೆ ಬೇಡುತ್ತಿದ್ದವರಾಗಿದ್ದು, ತಾಯಿಗೆ ಮಾತು ಬಾರದು. ಮಗುವಿನಲ್ಲಿ ಆಗುತ್ತಿರುವ ರಕ್ತಸ್ರಾವ ಗಮನಿಸಿ ತಾಯಿ ಮತ್ತು ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.

VISTARANEWS.COM


on

Pune Police 60 Hours Operation; Drugs worth more than Rs 1300 crore seized
Koo

ಬೆಂಗಳೂರು: ರಾಜಧಾನಿಯಲ್ಲಿ ಕಾಮಪಿಶಾಚಿಯೊಬ್ಬ 7 ವರ್ಷದ ಹೆಣ್ಣುಮಗುವಿನ ಮೇಲೆ‌ ಅತ್ಯಾಚಾರ (Physical Abuse) ಎಸಗಿದ್ದಾನೆ. ಪಾನಿಪುರಿ ಕೊಡಿಸ್ತೇನೆ ಅಂತ ಕರೆದೊಯ್ದವನು ಈ ಅಮಾನುಷ ಕೃತ್ಯ (Crime News) ಎಸಗಿದ್ದಾನೆ.

ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಾಯಿ ಮತ್ತು ಮಗು ಗರುಡ ಮಾಲ್ ಪಕ್ಕದಲ್ಲಿ ಭಿಕ್ಷೆ ಬೇಡುತ್ತಿದ್ದವರಾಗಿದ್ದು, ತಾಯಿಗೆ ಮಾತು ಬಾರದು. ಮಗುವಿನಲ್ಲಿ ಆಗುತ್ತಿರುವ ರಕ್ತಸ್ರಾವ ಗಮನಿಸಿ ತಾಯಿ ಮತ್ತು ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.

ಮೂಕ ತಾಯಿಯ ಮಗುವನ್ನು ರೇಪ್ ಮಾಡಿದ 54ರ ವ್ಯಕ್ತಿ, ಪಾನಿಪುರಿ ಕೊಡಿಸುತ್ತೇನೆ ಎಂದು ಮಗುವನ್ನು ಕರೆದೊಯ್ದು ರಸ್ತೆಯ ಪಕ್ಕದಲ್ಲಿದ್ದ ಹಿಟಾಚಿ ಕೆಳಗೆ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ರೇಪ್‌ ಮಾಡಿದವನೂ ನಿರ್ವಸತಿ ವ್ಯಕ್ತಿ ಎಂದು ತಿಳಿದುಬಂದಿದೆ. ಮೆಗ್ರಾತ್ ರೋಡ್ ಮುಖ್ಯರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ತರಲಾಗಿದ್ದ ಹಿಟಾಚಿ ರಸ್ತೆ ಪಕ್ಕ ನಿಂತಿತ್ತು. ಸದ್ಯ ಮಗುವಿಗೆ ಮೆಡಿಕಲ್ ಚೆಕಪ್‌ ಮಾಡಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಅಶೋಕನಗರ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಿಸಿಕೊಳ್ಳುತ್ತಿದ್ದಾರೆ.

ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

ತುಮಕೂರು: ಚುನಾವಣೆ ಸಂಬಂಧಿತ ಗಲಾಟೆ ಸಂಭವಿಸಿದ ಬಳಿಕ ವಾಟರ್ ಮ್ಯಾನ್ ಒಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಕಿಚ್ಚೇವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಂದ್ರಪ್ಪ (56) ಮೃತ ವಾಟರ್ ಮ್ಯಾನ್. ಹುಲಿಯೂರುದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು “ನೀನು ಬಿಜೆಪಿ ಪರವಾಗಿ ಕೆಲಸ‌ ಮಾಡ್ತಿಯಾ?” ಎಂದು ಈತನ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಚಂದ್ರಪ್ಪ ಶವ ಪತ್ತೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಾದ ನಟೇಶ್, ರವೀಶ್, ವೆಂಕಟೇಶ, ಸಂತೋಷ ನಿನ್ನೆ ಗಲಾಟೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಧರಣಿ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

Continue Reading

ಕ್ರೈಂ

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

UDR Case: ಹುಲಿಯೂರುದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು “ನೀನು ಬಿಜೆಪಿ ಪರವಾಗಿ ಕೆಲಸ‌ ಮಾಡ್ತಿಯಾ?” ಎಂದು ಈತನ ಮೇಲೆ ಹಲ್ಲೆ (Assault case) ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಚಂದ್ರಪ್ಪ ಶವ ಪತ್ತೆಯಾಗಿದೆ.

VISTARANEWS.COM


on

Crime Scene
Koo

ತುಮಕೂರು: ಚುನಾವಣೆ (Lok sabha Election 2024) ಸಂಬಂಧಿತ ಗಲಾಟೆ ಸಂಭವಿಸಿದ ಬಳಿಕ ವಾಟರ್ ಮ್ಯಾನ್ (Water man) ಒಬ್ಬರು ಅನುಮಾನಾಸ್ಪದವಾಗಿ (UDR Case, unnatural death) ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಕಿಚ್ಚೇವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಂದ್ರಪ್ಪ (56) ಮೃತ ವಾಟರ್ ಮ್ಯಾನ್. ಹುಲಿಯೂರುದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು “ನೀನು ಬಿಜೆಪಿ ಪರವಾಗಿ ಕೆಲಸ‌ ಮಾಡ್ತಿಯಾ?” ಎಂದು ಈತನ ಮೇಲೆ ಹಲ್ಲೆ (Assault case) ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಚಂದ್ರಪ್ಪ ಶವ ಪತ್ತೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಾದ ನಟೇಶ್, ರವೀಶ್, ವೆಂಕಟೇಶ, ಸಂತೋಷ ನಿನ್ನೆ ಗಲಾಟೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಧರಣಿ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Road Accident) ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ.

ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ.

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ.ವೈ. ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

Continue Reading

ಪ್ರಮುಖ ಸುದ್ದಿ

Lok Sabha Election 2024: ಇಂದು ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

Lok Sabha Election 2024: ದಕ್ಷಿಣ ಕರ್ನಾಟಕದ ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು – ಕೊಡಗು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ.

VISTARANEWS.COM


on

Lok Sabha Election
Koo

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನಕ್ಕೆ (Voting) ಕ್ಷಣಗಣನೆ ಶುರುವಾಗಿದೆ. ಶುಕ್ರವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ನಾಗರೀಕರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ದಕ್ಷಿಣ ಕರ್ನಾಟಕದ ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು – ಕೊಡಗು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ.

30 ಸಾವಿರದ 602 ಮತಗಟ್ಟೆ

14 ಕ್ಷೇತ್ರಗಳಲ್ಲಿ ಒಟ್ಟು 2 ಕೋಟಿ 88 ಲಕ್ಷದ 19 ಸಾವಿರದ 342 ಮತದಾರರಿದ್ದು, ಅದರಲ್ಲಿ ಮೊದಲ ಬಾರಿ ಮತ ಚಲಾಯಿಸುವ ಯುವ ಮತದಾರರು 5,99,444 ಮಂದಿ ಇದ್ದಾರೆ. 1 ಕೋಟಿ 44 ಲಕ್ಷದ 28 ಸಾವಿರದ 99 ಪುರುಷ ಮತದಾರರಿದ್ದಾರೆ. ಹಾಗೆಯೇ 1 ಕೋಟಿ 43 ಲಕ್ಷದ 88 ಸಾವಿರದ 176 ಮಹಿಳೆಯರು ಮತದಾನದ ಮಾಡಲಿದ್ದಾರೆ. 3,067 ತೃತೀಯಲಿಂಗಿಗಳು ಇದ್ದಾರೆ. 30 ಸಾವಿರದ 602 ಮತಗಟ್ಟೆ ತೆರೆಯಲಾಗಿದ್ದು, 4 ಲಕ್ಷ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಇದ್ರ ಜೊತೆಗೆ 5,000 ಮೈಕ್ರೋ ಅಬ್ಸರ್ವರ್‌ಗಳ ನೇಮಕ ಮಾಡಲಾಗಿದ್ದು, 50,000 ಸಿವಿಲ್ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇನ್ನು 65 ಅರೆಸೇನಾ ಪಡೆ ತುಕಡಿ ಹಾಗೂ ಸಶಸ್ತ್ರ ಪೊಲೀಸ್ ಪಡೆಯೂ ಕಣ್ಗಾವಲು ಇರಿಸಲಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 14 ಲೋಕಸಭಾ ಕ್ಷೇತ್ರಗಳ ಪೈಕಿ ಕೋಲಾರ, ಚಾಮರಾಜನಗರ ಹಾಗೂ ಚಿತ್ರದುರ್ಗ ಎಸ್‌ಸಿ ಮೀಸಲು ಕ್ಷೇತ್ರಗಳಾಗಿವೆ.

ಬೆಂಗಳೂರು ಉತ್ತರ ಕ್ಷೇತ್ರ 2,911 ಮತಗಟ್ಟೆಗಳನ್ನು ಹೊಂದಿದ್ದು, ಇದು ಅತ್ಯಧಿಕ ಆಗಿದೆ. ಅದಲ್ಲದೇ ಈ ಕ್ಷೇತ್ರದಲ್ಲಿ 32.1 ಲಕ್ಷ ಮತದಾರರು ಇದ್ದಾರೆ. 10 ಕ್ಷೇತ್ರಗಳಲ್ಲಿ 15ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದು, ಎರಡು ಇವಿಎಂಗಳನ್ನು ಬಳಸಲಾಗುತ್ತಿದೆ. ಇನ್ನು, ಮತದಾನದ ಪ್ರಮಾಣ ಹೆಚ್ಚಳಕ್ಕೆ ಚುನಾವಣಾ ಆಯೋಗ ಅನೇಕ ಜಾಗೃತಿಗಳನ್ನು, ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದು, ಈ ಬಾರಿಯಾದರೂ ಮತದಾನದ ಪ್ರಮಾಣ ಹೆಚ್ಚಳ ಆಗುತ್ತಾ ನೋಡಬೇಕಿದೆ. 2019ರಲ್ಲಿ ಶೇ.68.8ರಷ್ಟು ಮತದಾನ ರಾಜ್ಯದಲ್ಲಿ ಆಗಿತ್ತು.

ವಿಶೇಷ ಚೇತನರಿಗೆ ಉಚಿತ ಬೈಕು, ಆಟೋ, ಟ್ಯಾಕ್ಸಿ ಸೇವೆ

ಏಪ್ರಿಲ್‌‌ 26ಕ್ಕೆ ಮತದಾನ ನಡೆಯುವ 14 ಕ್ಷೇತ್ರಗಳ ವ್ಯಾಪ್ತಿಗಳಲ್ಲೂ ಸರ್ಕಾರಿ ರಜೆ ಘೋಷಣೆಯಾಗಿದೆ. ಜೊತೆಗೆ ಬೆಂಗಳೂರಲ್ಲಿ ಮತದಾನ ಮುಗಿಸಿ ಊರಿನ ಕಡೆ ಹೊರಡೋರಿಗೆ ಅನುಕೂಲ ಆಗಲಿ ಅಂತ ನಮ್ಮ ಮೆಟ್ರೋ ರೈಲು ಸೇವೆ ರಾತ್ರಿ 12ರವರೆಗೂ ವಿಸ್ತರಣೆ ಮಾಡಿದ್ದಾರೆ. ಇನ್ನು ಮತದಾನಕ್ಕೆ ತೆರಳುವ ವಿಶೇಷ ಚೇತನರಿಗೆ ಉಚಿತ ಬೈಕು, ಆಟೋ, ಟ್ಯಾಕ್ಸಿ ಸೇವೆ ಜೊತೆಗೆ ಹಿರಿಯ ನಾಗರಿಕರಿಗೂ ರ್ಯಾಪಿಡೋದಿಂದ ಉಚಿತ ಟ್ಯಾಕ್ಸಿ ಸೇವೆ ಘೋಷಣೆಯಾಗಿದೆ. 2019ರ ಚುನಾವಣೆಯಲ್ಲಿ ರಾಜ್ಯದಲ್ಲಿ 68.81% ಮತದಾನ ಆಗಿತ್ತು.. ಈ ವರ್ಷ ಗರಿಷ್ಠ ಮತದಾನ ಮಾಡಿ ಅಂತ ಆಯೋಗ ಮನವಿ ಮಾಡಿದೆ.

ಇದನ್ನೂ ಓದಿ: Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

Continue Reading

ಮಳೆ

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

Karnataka Weather Forecast : ಮತ್ತೆ ವಿಪರೀತ ತಾಪಮಾನವು ಜನರ ತಲೆಕೆಡಿಸಿದೆ. ಕೆಲವಡೆ ಮಳೆಯು ಅಬ್ಬರಿಸಿದ್ದರೂ, ಅದರ ದುಪ್ಪಟ್ಟು ಎಂಬಂತೆ ಬಿಸಿಲ ಧಗೆಯು ಹೆಚ್ಚಾಗಿದೆ. ಕರ್ನಾಟಕದಲ್ಲಿ ಹೀಟ್‌ ವೇವ್‌ ಹೆಚ್ಚುತ್ತಿದ್ದು ಹವಾಮಾನ ತಜ್ಞರು ಯೆಲ್ಲೋ ಅಲರ್ಟ್‌ ಘೋಷಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರವು (rain News) ಕಡಿಮೆ ಆಗಿದ್ದು, ಶುಷ್ಕ ವಾತಾವರಣವು (Dry Weather) ಮುಂದುವರಿದಿದೆ. ಏ.26ರಂದು ಶುಕ್ರವಾರ ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಇರಲಿದೆ. ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲ ಧಗೆಯು ಹೆಚ್ಚಾಗಿ ಇರಲಿದೆ.

ತಾಪಮಾನ ಎಚ್ಚರಿಕೆ

ಕರ್ನಾಟಕದ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಿರಲಿದೆ. ಏ. 26 ರಂದು ಕರಾವಳಿ ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಹೀಟ್‌ ವೇವ್‌ ಇರಲಿದೆ. ಏ. 28 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

ಹೀಟ್‌ವೇವ್‌ ವಾರ್ನಿಂಗ್‌

ಹೀಟ್‌ ವೇವ್ಸ್‌ ಅಥವಾ ಶಾಖದ ಅಲೆಯ ಸಮಯದಲ್ಲಿ ಮಾಡಬೇಕಾದದ್ದು ಮತ್ತು ಮಾಡಬಾರದ ಕೆಲಸಗಳ ಕುರಿತು ಹವಾಮಾನ ತಜ್ಞರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಹೀಟ್‌ ವೇವ್ಸ್‌ನಿಂದಾಗಿ ಅತಿಯಾದ ಒತ್ತಡ ಉಂಟಾಗಿ ಇದು ಸಾವಿಗೆ ಕಾರಣವಾಗಬಹುದು.

1.ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

2.ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

3.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

4.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.

5.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

6.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗಿನ ಕೆಲಸ ಮಾಡುವುದನ್ನು ತಪ್ಪಿಸಿ.

7.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ.

8.ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.

9.ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

10.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ

11.ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

12.ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹವನ್ನು ತಂಪಾಗಿ ಇರಲು ಸಹಾಯ ಮಾಡುತ್ತದೆ.

13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.

ಸನ್‌ಸ್ಟ್ರೋಕ್‌ ಚಿಕಿತ್ಸೆಗಾಗಿ ಸಲಹೆಗಳು

-ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ.
-ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
-ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ರೈತರು/ಕೃಷಿ ಕಾರ್ಮಿಕರು

ಹೊಲದಲ್ಲಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿ ಬಳಸಿ. ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಇನ್ನೂ ಪ್ರಯಾಣಿಸುವಾಗ ನಿಮ್ಮೊಂದಿಗೆ ನೀರನ್ನು ಒಯ್ಯಿರಿ. ಕ್ರೀಡಾಪಟು ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pune Police 60 Hours Operation; Drugs worth more than Rs 1300 crore seized
ಕ್ರೈಂ28 mins ago

Physical Abuse: ಹಿಟಾಚಿ ಕೆಳಗೇ 7 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಪಿಶಾಚಿ

Lok Sabha Election 2024 sandalwood celebs where do cast their votes
ರಾಜಕೀಯ30 mins ago

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

China Road
ದೇಶ40 mins ago

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

Lok sabha election 2024
ದೇಶ1 hour ago

Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

Crime Scene
ಕ್ರೈಂ1 hour ago

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

lok sabha election 2024 sudha murthy voting
Live News2 hours ago

Lok Sabha Election 2024: ಲೋಕಸಭೆ ಚುನಾವಣೆ 2024 ಮತದಾನ Live News

ಅಂಕಣ2 hours ago

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Eating Bread
ಆಹಾರ/ಅಡುಗೆ2 hours ago

Eating Bread: ನಿತ್ಯವೂ ಬ್ರೆಡ್‌ ತಿನ್ನುತ್ತೀರಾ? ಹಾಗಿದ್ದರೆ ಖರೀದಿಸುವ ಮುನ್ನ ಇವಿಷ್ಟು ತಿಳಿದಿರಲಿ

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election 2024: ಇಂದು ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

Karnataka Weather Forecast
ಮಳೆ3 hours ago

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ4 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ17 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ17 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ20 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202422 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌