ವಿಸ್ತಾರ TOP 10 NEWS |ಚಾಮರಾಜಪೇಟೆಯಲ್ಲಿ ಯಥಾಸ್ಥಿತಿಯಿಂದ ಜಾರ್ಖಂಡ್‌ CM ಬದಲಾವಣೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS |ಚಾಮರಾಜಪೇಟೆಯಲ್ಲಿ ಯಥಾಸ್ಥಿತಿಯಿಂದ ಜಾರ್ಖಂಡ್‌ CM ಬದಲಾವಣೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

5G service, assembly session karnataka, Bommai Chief minister, chamarajapet, chamarajpet ground, Explainer, Hemant Soren, Kannada and culture department, karnataka, latest, Siddaramaiah, siddaramayya, tumakuru accident, tumkur accident, WhatsApp New Update
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನೇಕ ದಿನಗಳಿಂದ ವಿವಾದದ ಕೇಂದ್ರಬಿಂದುವಾಗಿ ಇತ್ತೀಚೆಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಂತಿಯುತವಾಗಿ ಆಚರಿಸಲಾಗಿರುವ ಚಾಮರಾಜಪೇಟೆ ಮೈದಾನದ ಕುರಿತು ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ಸರ್ಕಾರ ಹಾಗೂ ಪ್ರತಿಪಕ್ಷದ ನಡುವಿನ ಅನೇಕ ಹಗ್ಗಜಗ್ಗಾಟದ ನಡುವೆಯೇ ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಕಲ್ಲು ಗಣಿಗಾರಿಕೆ ಗುತ್ತಿಗೆ ಪ್ರಕರಣದಲ್ಲಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ (Hemant Soren) ಅವರ ತಲೆದಂಡವಾಗಿದೆ. ವೈಯಕ್ತಿಕ ಮೆಸೇಜಿಂಗ್‌ ಪ್ಲಾಟ್‌ಫಾರಂ ವಾಟ್ಸ್‌ಆ್ಯಪ್ ಹೊಸ ಫೀಚರ್‌ಗಳನ್ನು ಪರಿಚಯಿಸಿದೆ ಎನ್ನುವುದು ಸೇರಿದಂತೆ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ಚಾಮರಾಜಪೇಟೆ ಮೈದಾನದ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್‌ ಆದೇಶ, ಗಣೇಶೋತ್ಸವಕ್ಕೂ ಅವಕಾಶ ಇಲ್ಲ?
ಬೆಂಗಳೂರಿನ ಚಾಮರಾಜಪೇಟೆ ಮೈದಾನ ವಿವಾದಕ್ಕೆ ಸಂಬಂಧಿಸಿ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ರಾಜ್ಯ ಹೈಕೋರ್ಟ್‌ ಮೌಖಿಕ ಆದೇಶ ನೀಡಿದೆ. ಹೀಗಾಗಿ ಈ ಬಾರಿ ಗಣೇಶೋತ್ಸವಕ್ಕೆ ಅವಕಾಶ ಸಿಗುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತಿದೆ. ಮೈದಾನವನ್ನು ಕಂದಾಯ ಇಲಾಖೆಯ ಆಸ್ತಿ ಎಂದು ಘೋಷಿಸಿದ ಬಿಬಿಎಂಪಿ ಜಂಟಿ ಆಯುಕ್ತರ ಆದೇಶವನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ಈ ಮಹತ್ವದ ಸೂಚನೆಯನ್ನು ನೀಡಿದೆ.
ಹೈಕೋರ್ಟ್‌ ಆದೇಶದ ಪ್ರಕಾರ ಸದ್ಯಕ್ಕೆ ವರ್ಷಕ್ಕೆ ಎರಡು ಬಾರಿ ಮುಸ್ಲಿಮರ ಸಾಮೂಹಿಕ ಪ್ರಾರ್ಥನೆಗೆ ಮತ್ತು ಆಟದ ಮೈದಾನವಾಗಿ ಬಳಸಬಹುದು. ರಾಷ್ಟ್ರ ಧ್ವಜಾರೋಹಣಕ್ಕೆ ಯಾವುದೇ ಅನುಮತಿ ಬೇಕಾಗಿಲ್ಲ. ಆದರೆ, ಇದನ್ನು ಉಳಿದು ಬೇರೆ ಯಾವ ಉದ್ದೇಶಕ್ಕೂ ಬಳಸದೆ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕಾಗಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

2. ಬೆಂಗಳೂರಿನಲ್ಲೇ ವಿಧಾನ ಮಂಡಲ ಅಧಿವೇಶನ, 40% ಕಮಿಷನ್‌, ಮೊಟ್ಟೆ, ಸಾವರ್ಕರ್‌ ಫೈಟ್‌ ಸಾಧ್ಯತೆ
ವಿಧಾನಮಂಡಲ ಅಧಿವೇಶನವನ್ನು ಈ ಬಾರಿ ಬೆಂಗಳೂರಿನಲ್ಲೇ ಸೆ.12ರಿಂದ ಆಯೋಜಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಜೆ.ಸಿ. ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದು, ಶನಿವಾರ ಹಾಗೂ ಭಾನುವಾರ ಹೊರತುಪಡಿಸಿ ಹತ್ತು ದಿನ ಅಧಿವೇಶನ ನಡೆಯುತ್ತದೆ ಎಂದಿದ್ದಾರೆ. ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವ ಕುರಿತೂ ಚರ್ಚೆಗಳಾಗಿದ್ದು, ಅಂತಿಮವಾಗಿ ಬೆಂಗಳೂರಿನಲ್ಲೇ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಅಧಿವೇಶನದಲ್ಲಿ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಹಗ್ಗಜಗ್ಗಾಟಕ್ಕೆ ಸಾವರ್ಕರ್‌ ವಿಚಾರ, ಮೊಟ್ಟೆ ವಿವಾದ, 40% ಆರೋಪದಂತಹ ಮೂರ್ನಾಲ್ಕು ವಿಚಾರಗಳು ಕೋಲಾಹಲ ಎಬ್ಬಿಸುವ ಸಾಧ್ಯತೆಯಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

3. Hemant Soren | ಜಾರ್ಖಂಡ್‌ ಸಿಎಂ ತಲೆದಂಡ, ಹೇಮಂತ್‌ ಸೊರೆನ್‌ ಪತ್ನಿಯೇ ಮುಂದಿನ ಮುಖ್ಯಮಂತ್ರಿ?
ಕಲ್ಲು ಗಣಿಗಾರಿಕೆ ಗುತ್ತಿಗೆ ಪ್ರಕರಣದಲ್ಲಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ (Hemant Soren) ಅವರ ತಲೆದಂಡವಾಗಿದೆ. ಅವರನ್ನು ಅನರ್ಹಗೊಳಿಸಬೇಕು ಎಂದು ಚುನಾವಣೆ ಆಯೋಗವು ಶಿಫಾರಸು ಮಾಡಿದ ಬೆನ್ನಲ್ಲೇ ಅನರ್ಹಗೊಳಿಸಲು ರಾಜ್ಯಪಾಲರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಹೇಮಂತ್‌ ಸೊರೆನ್‌ ಅವರು ಹುದ್ದೆಯಿಂದ ಕೆಳಗಿಳಿದ ಬಳಿಕ ಅವರ ಪತ್ನಿ ಕಲ್ಪನಾ ಸೊರೆನ್‌ ಅವರು ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

4. Tumkur accident | ಶಿರಾ ಬಳಿ ಭೀಕರ ರಸ್ತೆ ಅಪಘಾತ, 10 ಕಾರ್ಮಿಕರ ಸಾವು
ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ಗುರುವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ್ದು, ೧೦ ಮಂದಿ ಮೃತಪಟ್ಟಿದ್ದಾರೆ. 12ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟಿದ್ದ ೧೦ ಜನರಲ್ಲಿ ಆರು ಮಂದಿಯ ನೇತ್ರದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ಸಾವಿನ ದುಃಖದಲ್ಲಿಯೂ ಕುಟುಂಬದವರು ಸಾರ್ಥಕತೆ (Tumkur Accident) ಮೆರೆದಿದ್ದಾರೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

5. ಸಿದ್ದರಾಮಯ್ಯ ಕಣ್ಣಿಗೆ ಎಣ್ಣೆ ಬಿಟ್ಕೊಂಡಿದ್ರ?: 40% ಆರೋಪದ ಕುರಿತು ಸಿಎಂ ಬೊಮ್ಮಾಯಿ ಆಕ್ರೋಶ
ರಾಜ್ಯ ಸರ್ಕಾರದಲ್ಲಿ ಕಾಮಗಾರಿಗಳಿಗಾಗಿ 40% ಕಮಿಷನ್‌ ಪಡೆಯಲಾಗುತ್ತಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತಿಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಇಷ್ಟು ದಿನ ಸಿದ್ದರಾಮಯ್ಯ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡಿದ್ದರಾ ಎಂದು ಪ್ರಶ್ನಿಸಿದ್ದಾರೆ. ಈ ಹಿಂದೆಯೂ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿತ್ತು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಹಾಗಾದರೆ ಇಷ್ಟು ದಿನ ಅವರು ಏಕೆ ಸುಮ್ಮನಿದ್ದರು? ಸುಮ್ಮನೆ ರಾಜಕೀಯಕ್ಕಾಗಿ ಹೇಳಿಕೆ ನೀಡಬಾರದು ಎಂದಿದ್ದಾರೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

6. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲ ಟ್ರಸ್ಟ್‌ಗಳ ನೇಮಕ ಆದೇಶ ಒಂದೇ ದಿನಕ್ಕೆ ರದ್ದು!
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನದ 21 ಟ್ರಸ್ಟ್‌ಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿದ್ದ ಆದೇಶವನ್ನು ಒಂದು ದಿನದೊಳಗೇ ರಾಜ್ಯ ಸರ್ಕಾರ ರದ್ದುಪಡಿಸಿದೆ. 21 ಟ್ರಸ್ಟ್‌ಗಳಿಗೆ ತಲಾ ಒಬ್ಬರು ಅಧ್ಯಕ್ಷರು, ಒಟ್ಟು 147 ಸದಸ್ಯರು, ತಲಾ ಒಬ್ಬರು ಸದಸ್ಯ ಕಾರ್ಯದರ್ಶಿಯನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿತ್ತು. ಪ್ರಮುಖವಾಗಿ ಇದರಲ್ಲಿ ಪೂರ್ಣಚಂದ್ರ ತೇಜಸ್ವಿ ಟ್ರಸ್ಟ್‌ಗೆ ದಿವಂಗತ ರಾಜೇಶ್ವರಿ ಅವರನ್ನು ನೇಮಕ ಮಾಡಿದ್ದು ಸರ್ಕಾರಕ್ಕೆ ಇರಸುಮುರಸು ಉಂಟುಮಾಡಿತ್ತು. ಗಳಗನಾಥ ಮತ್ತು ರಾಜಪುರೋಹಿತ ಪ್ರತಿಷ್ಠಾನಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಿದ್ದನ್ನು ಚಕ್ರವರ್ತಿ ಸೂಲಿಬೆಲೆ ತಿರಸ್ಕರಿಸಿದ್ದರು. ಅದೇ ರೀತಿ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನವನ್ನು ನರೇಂದ್ರ ರೈ ದೇರ್ಲ ನಿರಾಕರಿಸಿದ್ದರು. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

7. 5G services | ದೇಶದಲ್ಲಿ ಅಕ್ಟೋಬರ್​ 12ರೊಳಗೇ ಶುರುವಾಗಲಿದೆ 5ಜಿ ಸೇವೆ; ಕೇಂದ್ರ ಸಚಿವರಿಂದ ಮಹತ್ವದ ಘೋಷಣೆ
ದೇಶದಲ್ಲಿ 5ಜಿ ನೆಟ್ವರ್ಕ್​ ಸೇವೆ (5G Services) ಶೀಘ್ರವೇ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದ್ದರೂ ಯಾವಾಗಿನಿಂದ ಶುರು ಎಂಬ ಬಗ್ಗೆ ಇನ್ನೂ ನಿಖರ ಮಾಹಿತಿ ಇಲ್ಲ. ಹೀಗಿರುವಾಗ ಇಂದು ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಅಶ್ವಿನಿ ವೈಷ್ಣವ್​ ಅವರು ಒಂದು ಮಹತ್ವದ ಘೋಷಣೆ ಮಾಡಿದ್ದಾರೆ. ಭಾರತದಲ್ಲಿ 5ಜಿ ಅಂತರ್ಜಾಲ ಸೇವೆಯನ್ನು ಆದಷ್ಟು ಕ್ಷಿಪ್ರವಾಗಿ ಅಂದರೆ ಅಕ್ಟೋಬರ್​ 12ರೊಳಗೇ ಪ್ರಾರಂಭಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

8. WhatsApp New Feature: ವಾಟ್ಸ್‌ಆ್ಯಪ್ ಗ್ರೂಪ್‌ನೊಳಗೇ ಮತ್ತೆ ಗ್ರೂಪ್ಸ್ ಮಾಡಿ!
ಬಳಕೆದಾರರ ಅಗತ್ಯಗಳಿಗೆ ತಕ್ಕಂತೆ ಹೊಸ ಫೀಚರ್ಸ್ ಮತ್ತು ಸೌಲಭ್ಯಗಳನ್ನು ಒದಗಿಸುವಲ್ಲಿ ಮೆಟಾ ಒಡೆತನದ ವಾಟ್ಸ್‌ಆ್ಯಪ್ ಯಾವಾಗಲೂ ಮುಂದಿರುತ್ತದೆ. ವಾಟ್ಸ್‌ಆ್ಯಪ್ ಮಾಲೀಕ ಮಾರ್ಕ್‌ ಜುಕರ್‌ಬರ್ಗ್ ಅವರು ಈ ವರ್ಷದ ಆರಂಭದಲ್ಲಿ ಘೋಷಣೆಯೊಂದನ್ನು ಮಾಡಿ, ವಾಟ್ಸ್‌ಆ್ಯಪ್ ಗ್ರೂಪ್‌ನೊಳಗೇ ಮತ್ತೆ ಚಿಕ್ಕ ಗ್ರೂಪ್‌ ಮಾಡಲು ಅನುಕೂಲವಾಗುವ ಫೀಚರ್ಸ್ ಅಭಿವೃದ್ಧಿಪಡಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಘೋಷಣೆ ಮಾಡಿ ಕೆಲವಾರು ತಿಂಗಳ ಬಳಿಕ ಅದೀಗ ನಿಜವಾಗುತ್ತಿದೆ. ಈ ಹೊಸ ವಾಟ್ಸ್‌ಆ್ಯಪ್ ಫೀಚರ್ (WhatsApp New Feature) ಇದೀಗ ಬೀಟಾ ಬಳಕೆದಾರರಿಗೆ ಲಭ್ಯವಾಗಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

9. Asia Cup- 2022 | ಎಲ್ಲೆಲ್ಲಿ ನಡೆಯುತ್ತವೆ ಏಷ್ಯಾ ಕಪ್ ಪಂದ್ಯಗಳು, ವೇಳಾಪಟ್ಟಿ ಇಂತಿದೆ
ಏಷ್ಯಾ ಖಂಡದ ಆರು ಕ್ರಿಕೆಟ್‌ ದೇಶಗಳ ನಡುವೆ ನಡೆಯಲಿರುವ Asia Cup- 2022 ಕ್ರಿಕೆಟ್‌ ಟೂರ್ನಿ ಆರಂಭಕ್ಕೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಟಿ೨೦ ಮಾದರಿಯಲ್ಲಿ ನಡೆಯುವ ಹಾಲಿ ಆವೃತ್ತಿಯ ಏಷ್ಯಾ ಕಪ್‌ ಪಂದ್ಯಗಳು ಯುಎಇನ ಎರಡು ಸ್ಟೇಡಿಯಮ್‌ಗಳಲ್ಲಿ ನಡೆಯಲಿವೆ. ಅರ್ಹತಾ ಸುತ್ತಿನ ಪಂದ್ಯಗಳು ಒಮನ್‌ನಲ್ಲಿ ನಡೆದಿದ್ದು, ಪ್ರಮುಖ ಪಂದ್ಯಗಳು ಆಗಸ್ಟ್‌ ೨೮ರಂದು ಆರಂಭವಾಗಲಿದೆ. ಈ ಬಾರಿಯ ಟೂರ್ನಿಯ ಕುರಿತು ಮಾಹಿತಿ ಇಲ್ಲಿದೆ.

10. ವಿಸ್ತಾರ Explainer | ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ; ನೈಜ ಕಥೆಯೇನು?
ಬಿಲ್ಕಿಸ್​ ಬಾನೊ ಅತ್ಯಾಚಾರ ಪ್ರಕರಣದ (Bilkis Bano Case) 11 ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ ಇಂದು ವಿಚಾರಣೆ ಮಾಡಿದೆ. ಪ್ರತಿಕ್ರಿಯೆ ನೀಡುವಂತೆ ಗುಜರಾತ್​ ಸರ್ಕಾರಕ್ಕೆ ನೋಟಿಸ್​ ಕೂಡ ನೀಡಿದೆ. ಈ ಅತ್ಯಾಚಾರ ಆರೋಪಿಗಳನ್ನು ಬಿಟ್ಟಿದ್ದು ತಪ್ಪು, ಇವರನ್ನೆಲ್ಲ ಮತ್ತೊಮ್ಮೆ ಜೈಲಿಗೆ ಕಳಿಸಿ ಎಂಬ ಅಗ್ರಹ ಬಲವಾಗಿ ಕೇಳಿಬರುತ್ತಿದೆ. ಸದ್ಯದ ಮಟ್ಟಿಗೆ ದೇಶದಲ್ಲಿ ಪ್ರಚಲಿತ ವಿಷಯ ಬಿಲ್ಕಿಸ್​ ಬಾನೊ ರೇಪ್​ ಕೇಸ್​ ಆರೋಪಿಗಳನ್ನು ಬಿಡುಗಡೆ ಮಾಡಿದ್ದು ಎಷ್ಟು ಸರಿ ಎಂಬ ಪ್ರಶ್ನೆ. 15 ವರ್ಷಗಳ ಹಿಂದಿನ ಕೇಸ್​ ಇದೀಗ ಮತ್ತೆ ದೊಡ್ಡ ಮಟ್ಟದಲ್ಲಿ ಸುದ್ದಿ-ಸದ್ದು ಮಾಡುತ್ತಿರುವುದೇಕೆ? 2002ರಲ್ಲಿ ಏನಾಗಿತ್ತು? ಎಂಬ ಬಗ್ಗೆ ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನದ ಇನ್ನಷ್ಟು ಪ್ರಮುಖ ಸುದ್ದಿಗಳು
Raja Singh Row | ಹೈದರಾಬಾದ್‌ನಲ್ಲಿ ಪ್ರತಿಭಟನೆ ಬೆನ್ನಲ್ಲೇ ಶಾಸಕ ರಾಜಾ ಸಿಂಗ್‌ ಮರು ಬಂಧನ
Delhi Politics | ದೆಹಲಿ ಸರಕಾರ ಉರುಳಿಸಲು ಬಿಜೆಪಿ 800 ಕೋಟಿ ರೂ. ಮೀಸಲಿಟ್ಟಿದೆ ಎಂದ ಕೇಜ್ರಿವಾಲ್‌
Liger Movie | ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಕ್ಲೈಮ್ಯಾಕ್ಸ್‌: ಷರಾ ಬರೆದ ಟ್ವಿಟ್ಟಿಗರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

Traffic Advisory : ಜೂನ್‌ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಅಂದು ಮತ ಎಣಿಕೆ ನಡೆಯುವ ಕೇಂದ್ರದ ಸುತ್ತಮುತ್ತ ಬೆಂಗಳೂರಿನಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಅದರ ಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Traffic Advisory
Koo

ಬೆಂಗಳೂರು: ಜೂನ್‌ 4ರ ಮಂಗಳವಾರದಂದು ಲೋಕಸಭಾ ಚುನಾವಣೆ 2024ರ (Lok sabha election 2024) ಮತ ಎಣಿಕೆ ನಡೆಯಲಿದೆ. ಹೀಗಾಗಿ ಮತ ಎಣಿಕೆ ನಡೆಯುವ ಕೇಂದ್ರಗಳ ಸುತ್ತಮುತ್ತ ನಿಷೇಧ (Traffic Advisory) ಹೇರಲಾಗಿದೆ. ಜೂ.4 ಬೆಳಗ್ಗೆ 6 ಗಂಟೆಯಿಂದ ಮತ ಎಣಿಕೆ ಮುಗಿಯುವವರೆಗೂ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ. ಬೆಂಗಳೂರಿನ ಸೇಂಟ್‌ ಜೋಸೆಪ್‌ ಕಾಲೇಜು, ಎಸ್ಎಸ್ಎಂಆರ್‌ವಿ ಕಾಲೇಜು ಹಾಗೂ ಮೌಂಟ್ ಕಾರ್ಮೆಲ್ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಸಂಚಾರವನ್ನು (Traffic Advisory) ನಿರ್ಬಂಧಿಸಲಾಗಿದೆ.

ಸೇಂಟ್‌ ಜೋಸೆಫ್‌ ಕಾಲೇಜು ಸುತ್ತಮುತ್ತ ಪಾರ್ಕಿಂಗ್ ನಿಷೇಧ

ವಿಠಲ್‌ ಮಲ್ಯ ರಸ್ತೆಯಲ್ಲಿರುವ ಸೇಂಟ್ ಜೋಸೆಫ್‌ ಕಾಲೇಜಿನ ಸುತ್ತಮುತ್ತಲಿನ ರಸ್ತೆಗಳಲ್ಲಿ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ. ಸಾರ್ವಜನಿಕರು ರಸ್ತೆಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದೇ ಬದಲೀ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಲು ಕೋರಲಾಗಿದೆ. ವಾಹನಗಳ ಪಾರ್ಕಿಂಗ್ ಮಾಡಲು ನಿಷೇಧಿಸಿರುವ ರಸ್ತೆಗಳು ಹೀಗಿವೆ.
-ವಿಠಲ್ ಮಲ್ಯ ರಸ್ತೆ :- ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಚಂಡ್ ಜಂಕ್ಷನ್‌ವರೆಗೆ
-ಆರ್.ಆರ್.ಎಂ.ಆರ್ ರಸ್ತೆ- ರಿಚ್ಚಂಡ್ ಸರ್ಕಲ್‌ನಿಂದ ಹಡ್ರನ್ ಜಂಕ್ಷನ್‌ವರೆಗೆ
-ಎನ್ ಆರ್ ರಸ್ತೆ: ಹಡ್ನನ್ ಸರ್ಕಲ್‌ನಿಂದ ಟೌನ್ ಹಾಲ್ ಜಂಕ್ಷನ್‌ವರೆಗೆ
-ಕೆ ಬಿ ರಸ್ತೆ: ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವೀನ್ಸ್ ಜಂಕ್ಷನ್‌ವರೆಗೆ
-ಕೆ ಜಿ ರಸ್ತೆ ಪೊಲೀಸ್ ಕಾರ್ನರ್ ಜಂಕ್ಷನ್‌ನಿಂದ ಮೈಸೂರು ಬ್ಯಾಂಕ್ ಜಂಕ್ಷನ್‌ವರೆಗೆ
-ನೃಪತುಂಗ ರಸ್ತೆ : ಕೆ ಆರ್ ಜಂಕ್ಷನ್‌ನಿಂದ ಪೊಲೀಸ್ ಕಾರ್ನರ್‌ವರೆಗೆ
-ಕ್ವೀನ್ಸ್ ರಸ್ತೆ: ಬಾಳೇಕುಂದ್ರಿ ಸರ್ಕಲ್‌ನಿಂದ ಸಿ.ಟಿ.ಓ ಸರ್ಕಲ್‌ವರೆಗೆ
-ಸೆಂಟ್ರಲ್‌ ಸ್ಟ್ರೀಟ್‌ ರಸ್ತೆ- ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್‌ ಕುಂಬ್ಳೆ ವೃತ್ತದ ವರೆಗೆ
-ಎಂ.ಜಿ ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್‌ ಜಂಕ್ಷನ್‌ವರೆಗೆ

ಸವಾರರು ವಾಹನಗಳನ್ನು ಪಾರ್ಕಿಂಗ್ ಮಾಡಬೇಕಾದರೆ ಸೇಂಟ್ ಜೋಸೆಫ್ ಕಾಲೇಜು ಮೈದಾನ, ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬಹುದು.

ಜಯನಗರ ಟಿ ಬ್ಲ್ಯಾಕ್‌ ಸಂಚಾರ ನಿರ್ಬಂಧ

ಮೈಕೋಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಲೋಕಸಭೆ ಚುನಾವಣೆ-2024ರ ಮತ ಎಣಿಕೆ ನಡೆಯಲಿದೆ. ಮತ ಎಣಿಕೆಯ ಸ್ಥಳದಲ್ಲಿ ಸೂಕ್ತ ಸಂಚಾರ ಬಂದೋಬಸ್ತ್ ಏರ್ಪಡಿಸುವ ಸಲುವಾಗಿ ಸಂಚಾರ ಮಾರ್ಪಾಡು ಮಾಡಲಾಗಿದೆ.

ಜೂನ್‌ 4 ರಂದು ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಬೆಳಗ್ಗೆ 06 ಗಂಟೆಯಿಂದ ಮತ ಎಣಿಕೆ ಮುಗಿಯುವವರೆಗೆ ಜಯನಗರ ಟಿ ಬ್ಲಾಕ್‌ ನಿರ್ಬಂಧಿಸಲಾಗಿದೆ. 18ನೇ ಮುಖ್ಯ ರಸ್ತೆ ಮತ್ತು 28ನೇ ಮುಖ್ಯ ರಸ್ತೆಯ ಮಧ್ಯದಲ್ಲಿ ಬರುವ 36ನೇ ಕ್ರಾಸ್ ಹಾಗೂ 32ನೇ ಇ ಕ್ರಾಸ್ ರಸ್ತೆ ಮತ್ತು 39ನೇ ಕ್ರಾಸ್ ರಸ್ತೆ ಜಂಕ್ಷನ್ ನಡುವೆ ಬರುವ 26ನೇ ಮುಖ್ಯ ರಸ್ತೆಯನ್ನು ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

-ಈಸ್ಟ್ ಎಂಡ್ ಮುಖ್ಯ ರಸ್ತೆ, 39ನೇ ಕ್ರಾಸ್ ರಸ್ತೆ, 18ನೇ ಮುಖ್ಯ ರಸ್ತೆ, 32ನೇ ಇ ಕ್ರಾಸ್ ರಸ್ತೆಗಳನ್ನು ಬಳಸಬಹುದಾಗಿರುತ್ತದೆ.

ಮೌಂಟ್‌ ಕಾರ್ಮೆಲ್‌ ಕಾಲೇಜು ಸುತ್ತಮುತ್ತ ಸಂಚಾರ ನಿರ್ಬಂಧ

ಬೆಂಗಳೂರಿನ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಕೇಂದ್ರದಲ್ಲಿ ಲೋಕಸಭಾ ಚುನಾವಣೆ 2024ರ ಮತ ಎಣಿಕೆ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಸೇರುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಅರಮನೆ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತಿದೆ.

ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ನಿಂದ ಮಿನುಗುತಾರೆ ಕಲ್ಪನಾ ಜಂಕ್ಷನ್‌ ಹಾಗೂ ಮಿನುಗುತಾರೆ ಕಲ್ಪನಾ ಜಂಕ್ಷನ್‌ನಿಂದ ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ವರೆಗೆ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು

-ಪ್ಯಾಲೇಸ್ ರಸ್ತೆಯಿಂದ ಎಂಸಿಸಿ ಕಾಲೇಜು, ಕಲ್ಪನಾ ಜಂಕ್ಷನ್ ಮತ್ತು ಚಂದ್ರಿಕಾ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು- ಪ್ಯಾಲೇಸ್ ರಸ್ತೆ- ಎಡ ತಿರುವು ಪಡೆದು ಚಕ್ರವರ್ತಿ ಲೇಔಟ್- ಮುಖ್ಯ ಪ್ಯಾಲೇಸ್- ವಸಂತನಗರ ಅಂಡರ್ ಬ್ರಿಡ್ಜ್ ಎಡ ತಿರುವು ಪಡೆದು ಎಂ.ವಿ.ಜಯರಾಮ ರಸ್ತೆ, ಹಳೆ ಉದಯ ಟಿವಿ ಜಂಕ್ಷನ್-ಎಡ ತಿರುವು-ಕಂಟೋನ್ಸೆಂಟ್ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.

ಬಸವೇಶ್ವರ ಜಂಕ್ಷನ್ ಕಡೆಯಿಂದ ಉದಯ ಟಿವಿ ಜಂಕ್ಷನ್ ಮತ್ತು ಜಯಮಹಲ್ ರಸ್ತೆಯ ಕಡೆಗೆ ಸಂಚರಿಸುವವರು ಬಸವೇಶ್ವರ ಜಂಕ್ಷನ್ – ಓಲ್ಡ್ ಹೈಗೌಂಡ್ ಜಂಕ್ಷನ್, ಕಲ್ಪನಾ ಜಂಕ್ಷನ್ ಬಲ ತಿರುವು-ಚಂದ್ರಿಕಾ ಜಂಕ್ಷನ್-ಎಡ ತಿರುವು ಅಯ್ಯಪ್ಪಸ್ವಾಮಿ ಟೆಂಪಲ್ ಉದಯ ಟಿವಿ ಜಂಕ್ಷನ್ ಕಡೆಯಿಂದ ಎಡ ತಿರುವು-ಎಂ ವಿ ಜಯರಾಂ ರಸ್ತೆ, ಅಥವಾ ನೇರ -ಜಯಮಹಲ್ ರಸ್ತೆ ಅಥವಾ ಬಲ ತಿರುವು ರೈಲ್ವೆ ಸ್ಪಷನ್ ರಸ್ತೆ-ಕಂಟೋನ್ಮಂಟ್ ಮೂಲಕ ಫ್ರೀಜರ್ ಟೌನ್ ಅಥವಾ ಕ್ವೀನ್ಸ್‌ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Education News : ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದ್ದು, ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಆದರೆ ನೀಟ್ ಪರೀಕ್ಷೆ ಬಳಿಕವೇ ಎಂಜಿನಿಯರ್ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

VISTARANEWS.COM


on

By

education News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೀಟ್‌ ಪರೀಕ್ಷೆ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಈ ಬಾರಿ ಎಷ್ಟೆಂದು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರವಾಸ

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

ಧುಮ್ಮಿಕ್ಕಿ ಹರಿಯುತ್ತಿರೋ ಮುತ್ಯಾಲಮಡು ಜಲಪಾತ (Muthyala Maduvu Waterfalls) ಕಾಣಲು ಬೆಂಗಳೂರು ನಗರವಾಸಿಗಳು ಸೇರಿದಂತೆ ದೂರದೂರದಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ. ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಿಂದ ಈ ಪ್ರವಾಸಿತಾಣದ ಸೊಬಗು ಮತ್ತಷ್ಟು ಹೆಚ್ಚಾಗಿದೆ.

VISTARANEWS.COM


on

By

Muthyala Maduvu Waterfalls
Koo

ವರದಿ: ಅಂಬರೀಷ್, ಆನೇಕಲ್

ಆನೇಕಲ್(ಬೆಂಗಳೂರು): ಹಚ್ಚ ಹಸುರಿನ ಗಿಡ ಮರಗಳ ನಡುವೆ ಧುಮ್ಮಿಕ್ಕುತ್ತಿರುವ ಬೆಂಗಳೂರು (bengaluru) ಹೊರವಲಯದಲ್ಲಿರುವ ಆನೇಕಲ್ (anekal) ತಾಲೂಕಿನ ಮುತ್ಯಾಲಮಡುವು ಜಲಪಾತ (Muthyala Maduvu Waterfalls) ಈಗ ಪ್ರವಾಸಿಗರನ್ನು ಸೆಳೆಯುತ್ತಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ಸುತ್ತಮುತ್ತ ನಿರಂತರ ಮಳೆಯಾಗುತ್ತಿರುವ ಜಲರಾಶಿಯಿಂದ ಮೈತುಂಬಿಕೊಂಡಿರುವ ಎಲ್ಲರ ಕಣ್ಮನ ಸೆಳೆಯುತ್ತಿದೆ.

ಧುಮ್ಮಿಕ್ಕಿ ಹರಿಯುತ್ತಿರೋ ಮುತ್ಯಾಲಮಡುವು ಜಲಪಾತ ಕಾಣಲು ಬೆಂಗಳೂರು ನಗರವಾಸಿಗಳು ಸೇರಿದಂತೆ ದೂರದೂರದಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ. ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಿಂದ ಈ ಪ್ರವಾಸಿತಾಣದ ಸೊಬಗು ಮತ್ತಷ್ಟು ಹೆಚ್ಚಾಗಿದೆ.

ಪ್ರವಾಸಿಗರ ಹಾಟ್​ ಸ್ಪಾಟ್​ ಆಗಿರುವ ಮುತ್ಯಾಲಮಡುವು ಫಾಲ್ಸ್ ಸುಮಾರು 300 ಅಡಿ ಎತ್ತರದಿಂದ ಕಣಿವೆಯತ್ತ ಹರಿದು ಬರುತ್ತದೆ. ಹಾಲ್ನೊರೆಯಂತೆ ಕಾಣುವ ಜಲಪಾತದ ಸೌಂದರ್ಯ ರಾಶಿ ಎಲ್ಲರ ಕಣ್ಮನ ಸೆಳೆಯುತ್ತಿದೆ.
ಜಲಪಾತದ ಸೌಂದರ್ಯ ಕಂಡು ಪ್ರವಾಸಿಗರು ಫುಲ್ ಖುಷ್ ಆಗಿದ್ದು, ಅನೇಕರು ಸುರಿಯುವ ಮಳೆಯ ನಡುವೆಯೂ ನೀರಿನಲ್ಲಿ ಮಿಂದೇಳುತ್ತಿದ್ದಾರೆ. ಜಲಪಾತದ ರಮಣೀಯ ಸೊಬಗನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

ಆನೇಕಲ್ ನಿಂದ ಸುಮಾರು 5 ಕಿ.ಮೀ ಮತ್ತು ಬೆಂಗಳೂರಿನಿಂದ 40 ಕಿ.ಮೀ. ದೂರದಲ್ಲಿರುವ ಮುತ್ಯಾಲಮಡು ಇರುವ ಸ್ಥಳವನ್ನು ಪರ್ಲ್ ವ್ಯಾಲಿ ಎಂದೂ ಕರೆಯುತ್ತಾರೆ.


ಮುತ್ತಿನ ಕಣಿವೆ

ಈ ಸ್ಥಳವು ಜಲಪಾತ ಮತ್ತು ಪರ್ವತ ಶ್ರೇಣಿಗಳಿಗೆ ಹೆಸರುವಾಸಿಯಾಗಿದೆ. ಜಲಪಾತದ ನೀರು ಸಸ್ಯಗಳ ನಡುವೆ ಕೆಳಗೆ ಇಳಿಯುವಾಗ ಮುತ್ತುಗಳ ಸರಮಾಲೆಯಂತೆ ಕಾಣುವುದರಿಂದ ಇದನ್ನು ಪರ್ಲ್ ವ್ಯಾಲಿ ಅಥವಾ ಮುತ್ತಿನ ಕಣಿವೆ ಎನ್ನಲಾಗುತ್ತದೆ.


ಪ್ರವಾಸಿಗರ ಆಕರ್ಷಣೆ

ಜಲಪಾತದ ಸಮೀಪದಲ್ಲಿ ಒಂದು ಶಿವನ ದೇವಾಲಯವಿದೆ. ಇಲ್ಲಿ ಪ್ರತಿದಿನ ಬೆಳಗ್ಗೆ ಪೂಜೆ ನಡೆಯುತ್ತದೆ. ಜಲಪಾತದಿಂದಾಗಿ ಈ ಸ್ಥಳವು ವಿವಿಧ ಜಾತಿಯ ಪಕ್ಷಿಗಳ ಆಶ್ರಯತಾಣವಾಗಿದೆ.

ಸಾಕಷ್ಟು ಪರ್ವತ ರೋಹಿಗಳು, ಟ್ರೆಕ್ಕಿಂಗ್ ಉತ್ಸಾಹಿಗಳೂ ಇಲ್ಲಿಗೆ ಭೇಟಿ ನೀಡುತ್ತಾರೆ. ಇಲ್ಲಿನ ಸಮೀಪದ ಮತ್ತೊಂದು ಪ್ರವಾಸಿ ಆಕರ್ಷಣೆ ತಟ್ಟೆಕೆರೆ ಸರೋವರ.

ತೆರೆದ ಅರಣ್ಯ ಪ್ರದೇಶ ಮತ್ತು ನಗರಕ್ಕೆ ಸಮೀಪವಾಗಿರುವುದರಿಂದ ಎಲ್ಲರಿಗೂ ಇಲ್ಲಿ ಪ್ರವೇಶವಿದೆ. ಚಾರಣ ಪ್ರಿಯರಿಗೆ ಸೂಕ್ತ ಅವಕಾಶವೂ ಇಲ್ಲಿದೆ.


ಭೇಟಿಗೆ ಯಾವ ಸಮಯ ಸೂಕ್ತ ?

ಮುತ್ಯಾಲಮಡುವು ಜಲಪಾತಕ್ಕೆ ಭೇಟಿ ನೀಡಲು ಸೂಕ್ತ ಸಮಯ ಬೆಳಗ್ಗೆ 6ರಿಂದ ಸಂಜೆ 7ರವರೆಗೆ. ನವೆಂಬರ್ ವರೆಗೆ ಇಲ್ಲಿ ಜಲಧಾರೆ ತುಂಬಿ ಹರಿಯುವುದರಿಂದ ಈ ಸಂದರ್ಭದಲ್ಲಿ ಭೇಟಿ ನೀಡಬಹುದು.

ಇದನ್ನೂ ಓದಿ: Konark Tourist Destination: ರಜೆಯಲ್ಲಿ ಕೋನಾರ್ಕ್‌ಗೆ ಹೋದಾಗ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಲು ಮರೆಯಬೇಡಿ

ಬೆಂಗಳೂರಿನಿಂದ ಎಷ್ಟು ದೂರ?

ಮುತ್ಯಾಲಮಡುವು ಜಲಪಾತ ಪ್ರದೇಶಕ್ಕೆ ಪ್ರವೇಶ ಶುಲ್ಕ ಕನಿಷ್ಠ ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ. ಬೆಂಗಳೂರಿನಿಂದ ಮುತ್ಯಾಲಮಡು ಜಲಪಾತಕ್ಕೆ ಹೊಸೂರು ರಸ್ತೆ ಮೂಲಕ 1.16 ಗಂಟೆ ಪ್ರಯಾಣವಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಮುತ್ಯಾಲಮಡುವು ಜಲಪಾತಕ್ಕೆ ಬನ್ನೇರುಘಟ್ಟ ಮುಖ್ಯ ರಸ್ತೆ/ ಜಿಗಣಿ – ಆನೇಕಲ್ ರಸ್ತೆ ಮೂಲಕ 45 ನಿಮಿಷದ ಪ್ರಯಾಣವಿದೆ.

Continue Reading

ಕ್ರೀಡೆ

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

CAN vs USA: ಇಂದು ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಶ್ರೇಯಸ್ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ 16 ಎಸೆತಗಳಿಂದ ಅಜೇಯ 32 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಸಿಡಿಯಿತು. 20 ರನ್​ಗಳು ಬೌಂಡರಿ ಮತ್ತು ಸಿಕ್ಸರ್​ ಮೂಲಕವೇ ದಾಖಲಾಯಿತು.

VISTARANEWS.COM


on

CAN vs USA
Koo

ನ್ಯೂಯಾರ್ಕ್​: 9ನೇ ಆವೃತ್ತಿಯ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಇಂದು(ಭಾನುವಾರ) ನಡೆದ ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ(CAN vs USA) ತಂಡ ಕೆನಡಾ ವಿರುದ್ಧ ಭರ್ಜರಿ 7 ವಿಕೆಟ್​ಗಳ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಕೆನಡಾ ಪರ ಕರ್ನಾಟಕದ, ದಾವಣಗೆರೆ ಮೂಲದ ಆಟಗಾರ ಶ್ರೇಯಸ್ ಮೋವಾ(Shreyas Movva) ಕೂಡ ಕಣಕ್ಕಿಳಿದು ಚೊಚ್ಚಲ ಟಿ20 ವಿಶ್ವಕಪ್​ ಪಂದ್ಯವನ್ನಾಡಿದ ಹಿರಿಮೆಗೆ ಪಾತ್ರರಾದರು.

ಕರ್ನಾಟಕ ಪರವೂ ಆಡಿದ್ದರು


ಹೌದು, 30 ವರ್ಷದ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಆಗಿರುವ ಶ್ರೇಯಸ್ ಮೋವಾ ದಾವಣಗೆರೆಯವರಾಗಿದ್ದಾರೆ. ಬಾಲ್ಯದ ದಿನದಲ್ಲಿ ಅಂದರೆ, 2006ರಲ್ಲಿ ದಾವಣಗೆರೆ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದು, ಬಳಿಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸುವ ಅಂತಾರಾಜ್ಯ ವಯೋಮಿತಿ ಒಳಗೊಂಡ 19 ವರ್ಷದೊಳಗಿನ, 16 ವರ್ಷದೊಳಗಿನ ಪಂದ್ಯಾವಳಿಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಕೆನಡಾ ಪೌರತ್ವ


ದಾವಣಗೆರೆಯ ಬಾಪೂಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ಶ್ರೇಯಸ್, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕೆನಡಾಕ್ಕೆ ತರೆಳಿದರು. ಇಲ್ಲಿಯೂ ಕೂಡ ಕ್ರಿಕೆಟ್​ ನಂಟು ಬಿಡದ ಇವರು ಅಲ್ಲಿನ ಸ್ಥಳೀಯ ಕ್ರಿಕೆಟ್​ ಟೂರ್ನಿಗಳಲ್ಲಿ ಆಡುವ ಮೂಲಕ ಗಮನಸೆಳೆದಿದ್ದರು. ಬಳಿಕ ಕೆನಡಾ ದೇಶದ ಪೌರತ್ವ ಪಡೆದು ಇದೀಗ ಕೆನಡಾ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಇದುವರೆಗೆ 6 ಟಿ20 ಮತ್ತು 7 ಏಕದಿನ ಪಂದ್ಯಗಳನ್ನಾಡಿ ಒಟ್ಟು 171 ರನ್​ ಬಾರಿಸಿದ್ದಾರೆ. ವಿಕೆಟ್​ ಕೀಪರ್​ ಆಗಿರುವ ಇವರು ಇದೇ ವರ್ಷ ನಡೆದಿದ್ದ ನೇಪಾಳ ವಿರುದ್ಧದ ಏಕದಿನ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

ಇದನ್ನೂ ಓದಿ USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

ಇಂದು ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಶ್ರೇಯಸ್ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ 16 ಎಸೆತಗಳಿಂದ ಅಜೇಯ 32 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಸಿಡಿಯಿತು. 20 ರನ್​ಗಳು ಬೌಂಡರಿ ಮತ್ತು ಸಿಕ್ಸರ್​ ಮೂಲಕವೇ ದಾಖಲಾಯಿತು. ಆದರೆ ಪಂದ್ಯ ಸೋತ ಕಾರಣ ಇವರ ಈ ಬ್ಯಾಟಿಂಗ್​ ಪ್ರದರ್ಶನ ವ್ಯರ್ಥವಾಯಿತು.

ಪಂದ್ಯ ಸೋತ ಕೆನಡಾ


ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

Continue Reading
Advertisement
Aaron Jones
ಕ್ರಿಕೆಟ್7 mins ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್12 mins ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 202420 mins ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

education News
ಬೆಂಗಳೂರು32 mins ago

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Sushant Singh Rajput's sister cries as she visits Kedarnath
ಬಾಲಿವುಡ್36 mins ago

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

PM Narendra Modi
ದೇಶ41 mins ago

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

Muthyala Maduvu Waterfalls
ಪ್ರವಾಸ57 mins ago

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

CAN vs USA
ಕ್ರೀಡೆ1 hour ago

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

Raveena Tandon attacked In Mumbai After Being Accused Of Rash Driving
ಬಾಲಿವುಡ್1 hour ago

Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

gold rate today
ಕರ್ನಾಟಕ1 hour ago

Gold Rate Today: ಬಂಗಾರ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು20 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌