vistara top 10 news congress facing heat from aspirants to oppose to amul entry into karnataka and more newsವಿಸ್ತಾರ TOP 10 NEWS: ಕಾಂಗ್ರೆಸ್‌ಗೆ ಬಂಡಾಯದ ಬಿಸಿಯಿಂದ, ಅಮುಲ್‌ ಪ್ರವೇಶಕ್ಕೆ ವಿರೋಧದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS: ಕಾಂಗ್ರೆಸ್‌ಗೆ ಬಂಡಾಯದ ಬಿಸಿಯಿಂದ, ಅಮುಲ್‌ ಪ್ರವೇಶಕ್ಕೆ ವಿರೋಧದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news congress facing heat from aspirants to oppose to amul entry into karnataka and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Karnataka Elections : ಕಾಂಗ್ರೆಸ್‌ಗೆ 2ನೇ ಪಟ್ಟಿಯಲ್ಲಿ ಭಾರಿ ಒಳಪೆಟ್ಟು: 42 ಕ್ಷೇತ್ರಗಳ ಪೈಕಿ 10ರಲ್ಲಿ ಬಂಡಾಯ
ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Elections) ಸಂಬಂಧಿಸಿ ಕಾಂಗ್ರೆಸ್‌ ಬಿಡುಗಡೆ ಮಾಡಿದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಚಿತ್ರದುರ್ಗ, ಕಲಘಟಗಿ, ಕಡೂರು, ಕಿತ್ತೂರು, ಸವದತ್ತಿ, ಗೋಕಾಕ್, ಗಂಗಾವತಿ ಸೇರಿದಂತೆ ಸುಮಾರು 10 ಕಡೆಗಳಲ್ಲಿ ಬಂಡಾಯ ಮತ್ತು ಒಳಪೆಟ್ಟಿನ ಆತಂಕ ಎದುರಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Modi in Karnataka: ಏ. 8, 9ರಂದು ಪ್ರಧಾನಿ ಮೋದಿ ಮೈಸೂರು, ಚಾಮರಾಜನಗರ ಪ್ರವಾಸ; ಕ್ಷಣಕ್ಷಣದ ಟೂರ್‌ ಪ್ಲ್ಯಾನ್‌ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್‌ 8 ಮತ್ತು 9ರಂದು ಮೈಸೂರು‌, ಚಾಮರಾಜನಗರ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೋದಿ ಅವರು ಆಗಮಿಸುತ್ತಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಪ್ರಧಾನಿ ರಾಜ್ಯ ಪ್ರವಾಸದ (Modi in Karnataka) ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. BJP Karnataka: ದೆಹಲಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಟಿಕೆಟ್‌ ಆಯ್ಕೆ ಪೂರ್ವಭಾವಿ ಸಭೆ ರದ್ದು
ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನವದೆಹಲಿಯಲ್ಲಿ ಶುಕ್ರವಾರ ಸಂಜೆ ನಡೆಯಬೇಕಿದ್ದ ಪೂರ್ವಭಾವಿ ಸಭೆ ರದ್ದಾಗಿದೆ. ಶನಿವಾರ ಸಂಜೆ ಟಿಕೆಟ್‌ ಆಯ್ಕೆ ಸಭೆ ನಡೆಯಲಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿ ಎಲ್ಲರೂ ಉಪಸ್ಥಿತರಿರಲಿದ್ದಾರೆ. ಆದರೆ ಅದಕ್ಕೂ ಮುನ್ನ, ಕರ್ನಾಟಕದ ಸದಸ್ಯರು ಒಂದು ಸಭೆ ನಡೆಸುವುದು ನಿರ್ಧಾರವಾಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Mallikarjun Kharge: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವೆ: ಪ್ರಿಯಾಂಕ್‌ ಖರ್ಗೆ ಹೇಳಿಕೆ
ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರಿನ ರೀತಿಯಲ್ಲೆ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದೆ ಎಂಬ ಚಕ್ರವರ್ತಿ ಸೂಲಿಬೆಲೆ ಆರೋಪದ ವಿಚಾರಕ್ಕೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಮಾನಹಾನಿ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Nandini: ಕರ್ನಾಟಕದ ಮಾರುಕಟ್ಟೆಗೆ ಅಮುಲ್‌ ಕೊಡಲಿದೆ ಎಂಟ್ರಿ; ನಂದಿನಿ ಹಾಲಿಗಿಂತ ಅಮುಲ್‌ ಎಷ್ಟು ದುಬಾರಿ?
ಗುಜರಾತ್‌ ಮೂಲಕ ಸಹಕಾರಿ ಸಂಸ್ಥೆ ಅಮೂಲ್‌ ಈಗಾಗಲೆ ವಿವಿಧ ಉತ್ಪನ್ನಗಳನ್ನು ಕರ್ನಾಟಕದ ಮಾರುಕಟ್ಟೆಯಲ್ಲಿ ಹೊಂದಿದ್ದು, ಇದೀಗ ಹಾಲು ಮತ್ತು ಮೊಸರು ಮಾರಾಟಕ್ಕೆ ಮುಂದಾಗಿದೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ನಂದಿನಿ (Nandini) ಬ್ರ್ಯಾಂಡ್‌ಗೆ ಈಗಾಗಲೆ ಅನೇಕ ಖಾಸಗಿ ಬ್ರ್ಯಾಂಡ್‌ಗಳು ಸ್ಪರ್ಧೆ ಒಡ್ಡುತ್ತಿದ್ದು, ಇದೀಗ ಅಮುಲ್‌ ಸಹ ಸೇರ್ಪಡೆಯಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. CNG PNG Price: ಪಿಎನ್‌ಜಿ, ಸಿಎನ್‌ಜಿ ದರ ಇಳಿಕೆ! ಶನಿವಾರದಿಂದಲೇ ಪರಿಷ್ಕೃತ ರೇಟ್ ಜಾರಿ
ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಮತ್ತು ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (CNG) ದರವನ್ನು ಕಡಿಮೆ ಮಾಡುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಗುರುವಾರ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ(Cabinet Decision). ದೇಶೀಯವಾಗಿ ಉತ್ಪಾದಿಸುವ ನೈಸರ್ಗಿಕ ಅನಿಲದ ಬಹುಪಾಲು ಹೊಸ ಬೆಲೆ ಕಾರ್ಯವಿಧಾನ(APM) ಜಾರಿ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Fact Check Body: ನಕಲಿ ಸುದ್ದಿ ತಡೆಗೆ ಫ್ಯಾಕ್ಟ್‌ ಚೆಕ್‌ ವಿಭಾಗ ಘೋಷಿಸಿದ ಕೇಂದ್ರ, ಇದರ ಕಾರ್ಯ ಹೇಗೆ? ಕ್ರಮ ಏನು?
ಆನ್‌ಲೈನ್‌ ಯುಗದಲ್ಲಿ ನಕಲಿ ಸುದ್ದಿಗಳ ಹಾವಳಿ ಜಾಸ್ತಿಯಾಗಿದೆ. ಅದರಲ್ಲೂ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿಯನ್ನು ಹರಡುವುದು, ತಪ್ಪು ಮಾಹಿತಿ ನೀಡುವುದು ಹೇರಳವಾಗಿ ನಡೆಯುತ್ತಿದೆ. ಹೀಗೆ, ನಕಲಿ ಸುದ್ದಿಗಳ ಹಾವಳಿಯನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ನಕಲಿ ಸುದ್ದಿಗಳನ್ನು ಪತ್ತೆ ಹಚ್ಚಲು ಕೇಂದ್ರ ಸರ್ಕಾರವು ನೂತನ ಫ್ಯಾಕ್ಟ್‌ ಚೆಕ್‌ ವಿಭಾಗವನ್ನು (Fact Check Body) ಘೋಷಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. IPL 2023 : ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಬಟ್ಲರ್ ಡೌಟ್​, ಮದುವೆಗೆಂದು ಊರಿಗೆ ಹೋದ ಮಿಚೆಲ್​ ಮಾರ್ಷ್​​
ಏಪ್ರಿಲ್​ 8ರಂದು ನಡೆಯಲಿರುವ ಐಪಿಎಲ್​ನ ಡಬಲ್ ಹೆಡರ್​ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡ ಪರಸ್ಪರ ಎದುರಾಗಲಿವೆ. ಈ ಪಂದ್ಯಕ್ಕೆ ಇತ್ತಂಡಗಳ ಇಬ್ಬರು ವಿದೇಶಿ ಆಟಗಾರರು ಅಲಭ್ಯರಾಗುವ ಸಾಧ್ಯತೆಗಳಿವೆ. ರಾಜಸ್ಥಾನ್​ ತಂಡದ ಜೋಸ್​ ಬಟ್ಲರ್​ ಹಾಗೂ ಡೆಲ್ಲಿ ತಂಡದ ಆಲ್​ರೌಂಡರ್​ ಮಿಚೆಲ್​ ಮಾರ್ಷ್​ ಅಲಭ್ಯರಾಗಲಿದ್ದಾರೆ. ಬಟ್ಲರ್​ ಗಾಯದ ಸಮಸ್ಯೆಗೆ ಒಳಗಾದರೆ ಮಿಚೆಲ್​ ಮಾರ್ಷ್​ ತಮ್ಮ ಮದುವೆ ಕಾರಣಕ್ಕೆ ವಿಶ್ರಾಂತಿ ತೆಗೆದುಕೊಂಡು ಆಸ್ಟ್ರೇಲಿಯಾಗೆ ಮರಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Karnataka Rain: ಮಳೆ ಎಂದು ಮರದ ಆಸರೆ ಪಡೆದರೆ ಸಿಡಿಲು ಬಡಿದು ಪ್ರಾಣ ಕಳೆದುಕೊಂಡರು
ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, (Karnataka Rain) ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಗದಗ ಜಿಲ್ಲೆಯ ಲಿಂಗದಾಳ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಕುರಿಗಾಹಿಗಳು ಮೃತಪಟ್ಟಿದ್ದಾರೆ. ಶರಣಪ್ಪ ಪುರದ (21), ದೇವೆಂದ್ರ ಬಾಡಗಿ (18) ಮೃತ ದುರ್ದೈವಿಗಳಾಗಿದ್ದಾರೆ. ಇವರ ಜತೆಗೆ ಇದ್ದ ಮತ್ತೊಬ್ಬ ಬಾಲಕ ಸುನೀಲ್ ಶ್ರೀಕಾಂತ ಪವಾರ ಎಂಬಾತನಿಗೂ ಸಿಡಿಲು ಬಡಿದಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. ChatGPT: ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗ್ತಾರಾ?-ಹಾಗಾಗಲು ಏಲಿಯನ್​ಗಳೇ ಭೂಮಿಗೆ ಬರಬೇಕು ಎಂದು ಉತ್ತರಿಸಿದ ಚಾಟ್ ​ಜಿಪಿಟಿ
ಇಂಗ್ಲಿಷ್​ ಮಾಧ್ಯಮವೊಂದು ಚಾಟ್​ ಜಿಪಿಟಿ ಬಳಿ ಭಾರತದ ರಾಜಕೀಯ ಸನ್ನಿವೇಶದ ಬಗ್ಗೆ ಪ್ರಶ್ನೆ ಮಾಡಿತ್ತು. ಈ ಮಾಧ್ಯಮದಲ್ಲಿ ಕೆಲಸ ಮಾಡುವವರೊಬ್ಬರು ‘ರಾಹುಲ್ ಗಾಂಧಿ ಭವಿಷ್ಯದಲ್ಲಿ ಭಾರತದ ಪ್ರಧಾನಮಂತ್ರಿಯಾಗಬಹುದಾದ ಸಾಧ್ಯತೆಗಳು ಎಷ್ಟಿವೆ?’ ಎಂದು ನೇರವಾಗಿ ಪ್ರಶ್ನಿಸಿದ್ದರು. ಅದಕ್ಕೆ ಚಾಟ್​ ಜಿಪಿಟಿ ಚೆನ್ನಾಗಿ ಉತ್ತರಿಸಿದೆ. ‘ನಾನ್ಯಾವಾಗ ಇಂಗ್ಲೆಂಡ್ ರಾಣಿಯಾಗುತ್ತೇನೋ..ಆಗ ರಾಹುಲ್ ಗಾಂಧಿ ಭಾರತದ ಪ್ರಧಾನಮಂತ್ರಿಯಾಗಬಹುದು’ ಎಂದು ಕೊನೆಯಲ್ಲಿ ಹೇಳುವ ಮೂಲಕ, ರಾಹುಲ್ ಗಾಂಧಿ ಭಾರತದ ಪ್ರಧಾನಮಂತ್ರಿಯಾಗುವ ಸಾಧ್ಯತೆಯನ್ನು ಅಲ್ಲಗಳೆದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. KCET 2023 : ಸಿಇಟಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ; ಏ.9 ಅರ್ಜಿ ಸಲ್ಲಿಸಲು ಕೊನೆಯ ದಿನ
  2. Covid 19 Updates: ಕೋವಿಡ್ ಪರಿಸ್ಥಿತಿ ಎದುರಿಸಲು ಏ.10, 11ರಂದು ಆಸ್ಪತ್ರೆಗಳ ಅಣಕು ಪ್ರದರ್ಶನಕ್ಕೆ ಕೇಂದ್ರ ಸೂಚನೆ
  3. Rudresh Murder : ರುದ್ರೇಶ್‌ ಕೊಲೆ ಆರೋಪಿ ಮಹಮ್ಮದ್‌ ಗೌಸ್‌ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಎನ್‌ಐಎ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bomb Threat: ಬಾಯ್‌ ಫ್ರೆಂಡ್‌ ಬಿಟ್ಟು ಹೋಗ್ತಾನೆ ಎಂದು ಬೆಂಗಳೂರು ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಕರೆ ಮಾಡಿದ ಯುವತಿ!

Bomb Threat: ಗೆಳೆಯ ಬೆಂಗಳೂರಿನಿಂದ ಮುಂಬೈಗೆ ಹೋಗೋದನ್ನು ತಡೆಯುವ ಉದ್ದೇಶದಿಂದ ಯುವತಿ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಿದ್ದಳು, ಆದರೆ, ಇದೀಗ ಆಕೆಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

bomb threat
Koo

ಬೆಂಗಳೂರು: ತನ್ನನ್ನು ಬಾಯ್‌ ಫ್ರೆಂಡ್‌ ಬಿಟ್ಟು ಹೋಗಬಾರದು ಎಂದು ಯುವತಿಯೊಬ್ಬಳು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ (hoax bomb threat call) ಕರೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹುಸಿ ಬಾಂಬ್ ಕರೆ (Bomb Threat) ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಹಿನ್ನೆಲೆಯಲ್ಲಿ ಯುವತಿ ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾಳೆ.

ಪುಣೆ ಮೂಲದ ಇಂದ್ರ ರಾಜ್ವಾರ್ (29) ಆರೋಪಿ ಯುವತಿ. ಈಕೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಈಕೆಯ ಗೆಳೆಯ ಮೀರ್ ರಾಜಾ ಮೆಹ್ದಿ ಎಂಬಾತ ಬೆಂಗಳೂರಿನಿಂದ ಮುಂಬೈಗೆ ತೆರಳಲು ಏರ್‌ಪೋರ್ಟ್‌ಗೆ ಹೋಗಿದ್ದ. ಆದರೆ, ಆತ ತನ್ನನ್ನು ಬಿಟ್ಟು ಹೋಗಬಾರದು ಎಂದು ಯುವತಿ ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಿದ್ದಳು. ಗೆಳೆಯನನ್ನು ತಡೆಯುವ ಉದ್ದೇಶದಿಂದ ಯುವತಿ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಿದ್ದಳು, ಆದರೆ, ಇದೀಗ ಆಕೆಗೆ ಸಂಕಷ್ಟ ಎದುರಾಗಿದೆ.

ವ್ಯಕ್ತಿಯೊಬ್ಬರ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದರಿಂದ ಸಿಬ್ಬಂದಿ ತಕ್ಷಣವೇ ಅಲರ್ಟ್‌ ಆಗಿ, ಮಿರ್ ರಜಾ ಮೆಹದಿಯನ್ನು ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ. ಆದರೆ ಯಾವುದೇ ಸ್ಫೋಟಕಗಳು ಕಂಡುಬರದ ಹಿನ್ನೆಲೆಯಲ್ಲಿ ಹುಸಿ ಬಾಂಬ್‌ ಬೆದರಿಕೆ ಬಂದಿದೆ ಎನ್ನುವುದು ತಿಳಿದುಬಂದಿದೆ.

ತನ್ನ ಗೆಳೆಯ ಮುಂಬೈ ವಿಮಾನ ಹತ್ತುವುದನ್ನು ತಡೆಯುವುದು ಆಕೆಯ ಉದ್ದೇಶವಾಗಿತ್ತು. ಆದರೆ, ಅದು ಉಲ್ಟಾ ಹೊಡೆದಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಜೂನ್ 26 ರಂದು ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏರ್‌ಪೋರ್ಟ್‌ನಲ್ಲಿ ಪರಿಶೀಲನೆ ನಡೆಸಿದಾಗ ಹುಸಿ ಬಾಂಬ್‌ ಕರೆ ಮಾಡಿದ್ದ ಯುವತಿ ಇಂದ್ರ ರಾಜ್ವಾರ್ ಕೂಡ ಅಲ್ಲೇ ಇದ್ದದ್ದು ಕಂಡುಬಂದಿದೆ. ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಯುವತಿ ಮತ್ತು ಯುವಕ ಇಬ್ಬರೂ ಮುಂಬೈಗೆ ಪ್ರಯಾಣಿಸಲು ಆಗಮಿಸಿದ್ದರು ಎಂದು ತಿಳಿದುಬಂದಿದೆ. ಇಬ್ಬರೂ ಪ್ರತ್ಯೇಕವಾಗಿ ಟಿಕೆಟ್‌ ಕೂಡ ಬುಕ್‌ ಮಾಡಿದ್ದರು.

ಇದನ್ನೂ ಓದಿ | Viral News: ಶಾಕಿಂಗ್‌ ಘಟನೆ! ಬುದ್ದಿ ಹೇಳಿದ ಗುರುವನ್ನೇ ಚುಚ್ಚಿ ಕೊಂದ ವಿದ್ಯಾರ್ಥಿ

ಯುವತಿ ಮತ್ತು ಮೆಹ್ದಿ ನಡುವೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದವು. ಹೀಗಾಗಿ ಮುಂಬೈಗೆ ಹೋಗುತ್ತಿದ್ದ ಯುವಕನನ್ನು ತಡೆಯಲು ಯುವತಿ ಏರ್‌ಪೋರ್ಟ್‌ ಸಹಾಯವಾಣಿಗೆ ಹುಸಿ ಬಾಂಬ್‌ ಕರೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಮಳೆ

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

No Rain : ಚನ್ನಗಿರಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಮಳೆ ಇಲ್ಲದೆ ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಮುನಿಸಿಕೊಂಡಿರುವ ವರುಣ ದೇವನಿಗಾಗಿ ಕಂತೆ ಭಿಕ್ಷೆ (Davanagere News ) ಎತ್ತುತ್ತಿದ್ದಾರೆ.

VISTARANEWS.COM


on

By

Davanagere news
Koo

ದಾವಣಗೆರೆ: ರಾಜ್ಯಾದ್ಯಂತ ಮಳೆಯು (Karnataka Rain) ಅಬ್ಬರಿಸುತ್ತಿದ್ದರೂ, ಅದೊಂದು ಗ್ರಾಮಕ್ಕೆ ಮಾತ್ರ ಈವರೆಗೆ ಮಳೆಯೇ (No Rain) ಆಗಿಲ್ಲ. ಮುಂಗಾರು ಸಂಪೂರ್ಣವಾಗಿ ಆವರಿಸಿದ್ದರೂ, ದಾವಣಗೆರೆಯ ಆ ಗ್ರಾಮದಲ್ಲಿ (Davanagere News ) ಮಳೆ ಇಲ್ಲದೇ ಬರೆ ಎಳದಂತಾಗಿದೆ. ಮಳೆ ಇಲ್ಲದೆ ಜನರಲ್ಲಿ ಆತಂಕ ಶುರುವಾಗಿದ್ದು, ಇದೀಗ ಮುನಿಸಿಕೊಂಡಿರುವ ವರುಣ ದೇವನಿಗಾಗಿ ಕಂತೆ ಭಿಕ್ಷೆ ಎತ್ತುತ್ತಿದ್ದಾರೆ.

ಮಳೆ ಬಾರದೆ ಇದ್ದಾಗ ಹಿಂದಿನ ಕಾಲದಿಂದಲೂ ಈ ಪದ್ಧತಿ ನಡೆದುಕೊಂಡು ಬಂದಿದೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಮಳೆರಾಯ ನಾಪತ್ತೆಯಾಗಿದ್ದಾನೆ. ಹೀಗಾಗಿ ಮಳೆಗಾಗಿ ಕಂತೆ ಭಿಕ್ಷೆ ಎತ್ತುತ್ತಿದ್ದಾರೆ. ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಮಳೆ ಬರುತ್ತಿದ್ದರೆ, ಈ ಗ್ರಾಮದಲ್ಲಿ ಮಳೆಯೇ ಆಗುತ್ತಿಲ್ಲ. ಬಾರದ ಮಳೆಯಿಂದಾಗಿ ರೈತರು ಸೇರಿ ಗ್ರಾಮದ ಜನರು ಕಂಗಲಾಗಿದ್ದಾರೆ.

ಮಳೆಗಾಗಿ ದೇವರ ಮೊರೆ ಹೋಗಿರುವ ಗ್ರಾಮಸ್ಥರು ಕಂತೆ ಭಿಕ್ಷೆ ಎತ್ತುತ್ತಿದ್ದಾರೆ. ಮನೆ ಮನೆಗೆ ತೆರಳಿ ಕಂತೆ ಭಿಕ್ಷೆ ಬೇಡಿ ಸಾಮೂಹಿಕ ಪ್ರಸಾದ ಮಾಡಲಿದ್ದಾರೆ. ಗ್ರಾಮದಿಂದ ದೀಕ್ಷೆ ಪಡೆದ ಮುರುಘಾಸ್ವಾಮಿಗಳ ನೇತೃತ್ವದಲ್ಲಿ ಸತತ ಐದು ದಿನಗಳ ಕಾಲ ಭಿಕ್ಷಾಟನೆ ಮಾಡಲಾಗುತ್ತದೆ. ನಂತರ ಸಾಮೂಹಿಕ ಪ್ರಸಾದ ಸೇವನೆ ಮಾಡಲಾಗುತ್ತದೆ. ಈ ರೀತಿ ಆಚರಣೆಯಿಂದ ಮಳೆ ಬರುತ್ತೆ ಎನ್ನುವ ನಂಬಿಕೆ ಇದೆ.

ಇದನ್ನೂ ಓದಿ: Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

ಸಮುದ್ರಕ್ಕೆ ಇಳಿಯದಂತೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ 3 ದಿನ ನಿರಂತರವಾಗಿ ಸುರಿದ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ವೀಕೆಂಡ್ ಎಂಜಾಯ್ ಮಾಡಲು ಪ್ರವಾಸಿಗರರ ದಂಡು ಬೀಚ್‌ ಕಡೆಗೆ ಮುಖ ಮಾಡಿದೆ. ಆದರೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಉಡುಪಿ ಜಿಲ್ಲೆಯ ಕಾಪು ಬೀಚ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸಮುದ್ರ ದಡದಲ್ಲಿಯೇ ಸೆಲ್ಫಿ ತೆಗೆದು ಸಮಾಧಾನಪಟ್ಟುಕೊಳ್ಳುತ್ತಿದ್ದಾರೆ. ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ಸ್ ಎಚ್ಚರಿಕೆ ನೀಡುತ್ತಿದ್ದು, ಬೀಚ್‌ ಉದ್ದಕ್ಕೂ ಕಣ್ಗಾವಲು ಇಟ್ಟಿದ್ದಾರೆ. ಹೀಗಾಗಿ ಪ್ರವಾಸಿಗರು ದೂರದಲ್ಲಿಯೇ ನಿಂತು ಕಡಲಬ್ಬರವನ್ನು ವೀಕ್ಷಿಸುತ್ತಿದ್ದಾರೆ. ಮಳೆ ನಿಂತ ಹಿನ್ನೆಲೆಯಲ್ಲಿ ಬೀಚ್‌ನಲ್ಲಿ ಸಮಯ ಕಳೆಯುವ ಉದ್ದೇಶದಿಂದ ಆಗಮಿಸಿದ ಪ್ರವಾಸಿಗರು ನಿರಾಸೆಯಿಂದ ವಾಪಸಾಗುತ್ತಿದ್ದಾರೆ.

ಸಮುದ್ರ ಪಾಲಾಗುತ್ತಿರುವ ಮೀನುಗಾರಿಕ ರಸ್ತೆ

ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಕಡಲು ಪ್ರಕ್ಷಬ್ಧಗೊಂಡಿದ್ದು, ಪಡುಕರೆ ಬೀಚ್‌ನಲ್ಲಿ ಅಬ್ಬರಿಸುತ್ತಿರುವ ರಕ್ಕಸಗಾತ್ರದ ಅಲೆಗಳಿಂದಾಗಿ ಮೀನುಗಾರಿಕ ರಸ್ತೆ ಸಮುದ್ರ ಪಾಲಾಗುತ್ತಿದೆ. ಸಮುದ್ರದ ಅಲೆಗಳ ಅಬ್ಬರ ಜಾಸ್ತಿಯಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ. ಗಾಳಿ ಮಳೆಯಿಂದಾಗಿ ಅರಬ್ಬಿ ಸಮುದ್ರ ಅಬ್ಬರಿಸುತ್ತಿದೆ. ಈಗಾಗಲೇ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

ಕಲಬುರಗಿಯಲ್ಲೂ ಮಳೆಯ ಅಬ್ಬರ

ಇನ್ನು ಕಲಬುರಗಿಯಲ್ಲಿ ಶನಿವಾರ ರಾತ್ರಿಯಿಡಿ ವರ್ಷಧಾರೆಯಾಗಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಫಜಲಪುರ ತಾಲೂಕಿನಲ್ಲಿ ಸಿದ್ದನೂರ್‌ನಿಂದ ರೆವೂರ್‌ಗೆ ಹೋಗುವ ಮಾರ್ಗದ ಬಳಿ ಇರುವ ಹಳ್ಳದಲ್ಲಿ ನೀರಿನ ಪ್ರಮಾನ ಹೆಚ್ಚಾಗಿದ್ದು, ಪ್ರಯಾಣಿಕರ ಪರದಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Karnataka Rain : ಬೆಂಗಳೂರು, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ (Heavy Rain Effect) ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಮಧ್ಯೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ಕಾರವಾರ: ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆಯು (Heavy Rain) ಅಬ್ಬರಿಸಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ (Karnataka Rain) ಇತ್ತು.. ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್‌, ಕಾಟನ್‌ಪೇಟೆ, ಕೆಆರ್‌ ಮಾರ್ಕೆಟ್‌ ,ಟೌನ್ ಹಾಲ್, ಶಿವಾನಂದ ಸರ್ಕಲ್, ಮೈಸೂರು ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ಜಿಟಿ ಜಿಟಿಯಾಗಿ ಶುರುವಾದ ಮಳೆಯು ನಂತರ ಕೆಲ ಕಾಲ ಅಬ್ಬರಿಸಿತ್ತು. ಇತ್ತ ಧಾರವಾಡ ನಗರದಲ್ಲೂ ನಿರಂತರ ಮಳೆಯಾಗಿದೆ. ಬೆಳಗ್ಗೆಯಿಂದಲ್ಲೂ ಬಿಟ್ಟು ಬಿಡದೆ ಸುರಿಯುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಿಂದಾಗಿ ಸವಾರರು ಪರದಾಡಿದರು. ಧಾರವಾಡ ಗ್ರಾಮೀಣ ಕೆಲ ಭಾಗಗಳಲ್ಲಿ ಹೊರತುಪಡಿಸಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ನಿರಂತರ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆಯು ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ. ಶೃಂಗೇರಿ ತಾಲೂಕಿನ ಕೂತು ಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪದೆಪದೇ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ತಾಲೂಕು ಆಡಳಿತವು ಗುಡ್ಡಗಾಡು ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಅಡ್ಡಲಾಗಿ ಬಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿತ್ತು. ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಹೆದ್ದಾರಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆವರೆಗೆ ವಾಹನಗಳು ಹೆದ್ದಾರಿಯ ಮತ್ತೊಂದು ಬದಿಯಿಂದ ಸಂಚರಿಸುತ್ತಿದ್ದವು.

ಮುಂದುವರಿದ ಪ್ರವಾಸಿಗರ ಹುಚ್ಚಾಟ

ಬೆಳಗಾವಿಯ ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನೀರು ರಭಸವಾಗಿ ಧುಮ್ಮಿಕ್ಕುವ ಸ್ಥಳಗಳಲ್ಲಿ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಜತೆಗೆ ಕೆಲವರು ಬಂಡೆಗಲ್ಲುಗಳ‌ ಮೇಲೆ ಕುಳಿತು ಊಟ ಮಾಡುತ್ತಿರುವುದು ಕಂಡು ಬಂದಿದೆ. ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮಳೆಯಲ್ಲೇ ಟ್ರಾಫಿಕ್‌ಗೆ ಸಿಲುಕಿದ ಪ್ರವಾಸಿಗರು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಮಳೆಯಲ್ಲೇ ಟ್ರಾಫಿಕ್‌ನಲ್ಲಿ ಸಿಲುಕಿದರು. ಸುಮಾರು ಎರಡು ಗಂಟೆ ಕಾಲ ನಿಂತಲ್ಲೇ ನಿಲ್ಲುಂತಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಟೂರಿಸ್ಟ್‌ಗಳು ಆಗಮಿಸಿದ್ದರು.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಳೆಗೆ ಜಲಾಶಯಗಳು ಭರ್ತಿ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಾಜ್ಯದ ಹಲವೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಭರ್ತಿಗೆ ಎರಡು ಅಡಿ ಬಾಕಿ‌ ಇದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಗಣನೀಯವಾಗಿ ಏರಿಕೆ ಆಗುತ್ತಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಅಣೆಕಟ್ಟಾಗಿದೆ.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ನಿನ್ನೆ ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು ಭಾನುವಾರ 18. 24 ಗೆ ಏರಿಕೆ ಆಗಿದೆ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಸಂತಸ ಹೆಚ್ಚಿಸಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ಆಗಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ 10 ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Dengue Cases in Mysore: ಮೈಸೂರಿನಲ್ಲಿ ಡೆಂಗ್ಯೂಗೆ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

Dengue Cases in Mysore: ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದಾರೆ.

VISTARANEWS.COM


on

Dengue Cases in Mysore
Koo

ಮೈಸೂರು: ಜಿಲ್ಲೆಯಲ್ಲಿ ಡೆಂಗ್ಯೂಗೆ ಎರಡನೇ ಬಲಿಯಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ (Dengue Cases in Mysore) ಸಾವಿಗೀಡಾಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತ ಮೃತಪಟ್ಟಿದ್ದರು.

ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

ಹಾಸನ: ಶಂಕಿತ ಡೆಂಗ್ಯೂಗೆ (Dengue Cases in Hassan) 26 ವರ್ಷದ ಯುವತಿ ಬಲಿಯಾಗಿರುವ ಘಟನೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂಲೂನಾಯ್ಕ-ಸುಮಿತ್ರಾದೇವಿ ಎಂಬುವವರ ಪುತ್ರಿ ಸುಪ್ರಿತಾ (26) ಮೃತ ಯುವತಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರಿತಾಗೆ ಬಹುಅಂಗಾಗ ವೈಫಲ್ಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಪ್ರಿತಾ ಮೃತಪಟ್ಟಿದ್ದಾಳೆ. ಇದರಿಂದ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.

ಇದನ್ನೂ ಓದಿ | Dengue fever: ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

Rat fever: ಡೆಂಗ್ಯೂ ರುದ್ರ ನರ್ತನದ ನಡುವೆ ಹಾವೇರಿಯಲ್ಲಿ ಬಾಲಕನಿಗೆ ಇಲಿ ಜ್ವರ!

ಹಾವೇರಿ: ಡೆಂಗ್ಯೂ ರುದ್ರ ನರ್ತನದ ನಡುವೆ ಜಿಲ್ಲೆಯಲ್ಲಿ ಇಲಿ ಜ್ವರ (Rat fever) ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ 12 ವರ್ಷದ ಬಾಲಕನಿಗೆ ಇಲಿ ಜ್ವರ ದೃಢಪಟ್ಟಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದೊಂದು ವಾರದಿಂದ ಬಾಲಕ ಜ್ವರದಿಂದ ಬಳಲುತ್ತಿದ್ದ . ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಇಲಿ ಜ್ವರ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸದ್ಯ ಬಾಲಕನ ಆರೋಗ್ಯ ಸ್ಥಿರವಾಗಿದೆ.

ಈ ಬಗ್ಗೆ ಜಿಲ್ಲಾಸ್ಪತ್ರೆಯ ಡಾ.ಭಾಗ್ಯ ಪ್ರತಿಕ್ರಿಯಿಸಿ, ಬಾಲಕನಿಗೆ ಇಲಿ ಜ್ವರ ಬಂದಿರುವುದು ನೆನ್ನೆ ಗೊತ್ತಾಗಿದೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕನ‌ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಡೆಂಗ್ಯೂ ಜ್ವರದ ಲಕ್ಷಣಗಳೇ ಇಲಿ ಜ್ವರ ಕಾಣಿಸಿಕೊಂಡವರಲ್ಲೂ ಕಂಡುಬರುತ್ತವೆ ಎಂದು ತಿಳಿಸಿದರು.

ಏನಿದು ಇಲಿ ಜ್ವರ, ಹೇಗೆ ಹರಡುತ್ತದೆ?

ವೈಜ್ಞಾನಿಕವಾಗಿ ಲೆಪ್ಟೊಸ್ಪಿರೋಸಿಸ್ ಎಂದು ಕರೆಯಲ್ಪಡುವ ಇಲಿ ಜ್ವರ, ಲೆಪ್ಟೊಸ್ಪೈರಾ ಎಂಬ ಬ್ಯಾಕ್ಟೀರಿಯಗಳ ಮೂಲಕ ಪ್ರಾಣಿಗಳಿಂದ ಮಾನವರಿಗೆ ಹರಡುವ ರೋಗವಾಗಿದೆ. ಮುಖ್ಯವಾಗಿ ಇಲಿ, ಹೆಗ್ಗಣಗಳಿಂದ ಈ ರೋಗಾಣುಗಳು ಹರಡುವುದರಿಂದ ಇದಕ್ಕೆ ಇಲಿ ಜ್ವರವೆಂದು ಹೆಸರು. ಈ ರೋಗ ಕೇವಲ ಮನುಷ್ಯರನ್ನಷ್ಟೇ ಅಲ್ಲ ದನ, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಬೆಕ್ಕು, ವನ್ಯಮೃಗಗಳು ಹೀಗೆ ಬಹುತೇಕ ಪ್ರಾಣಿಗಳನ್ನು ಬಾಧಿಸುತ್ತದೆ.

ಹೆಚ್ಚಾಗಿ ಇಲಿ, ಹೆಗ್ಗಣಗಳ ಮೂಲಕ ಈ ರೋಗ ಹರಡುತ್ತದೆ. ರೋಗಪೀಡಿತ ಇಲಿಗಳು ಹಾಗೂ ಪ್ರಾಣಿಗಳ ಮೂತ್ರದ ಮೂಲಕ ಈ ಕಾಯಿಲೆ ಹರಡುತ್ತದೆ. ಆದರೆ ಮನುಷ್ಯನಿಂದ ಮನುಷ್ಯನಿಗೆ ಇದು ಹರಡುವುದಿಲ್ಲ. ಮಣ್ಣಿನಲ್ಲಿ ಈ ರೋಗಾಣುಗಳು ಸುಮಾರು 6 ಗಂಟೆವರೆಗೆ ಜೀವಂತವಿದ್ದರೆ, ನೀರಿನಲ್ಲಿ ಅರು ತಿಂಗಳವರೆಗೆ ಬದುಕಬಲ್ಲವು. ಹಾಗಾಗಿ ಮಳೆಗಾಲದಲ್ಲಿ ಈ ರೋಗದ ಹಾವಳಿ ಜಾಸ್ತಿ ಇರುತ್ತದೆ.

ಇದನ್ನೂ ಓದಿ | Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ವಾಂತಿಯಂತಹ ರೋಗಲಕ್ಷಣಗಳು ಇರುತ್ತವೆ. ಕೆಲವು ಪ್ರಕರಣಗಳಲ್ಲಿ ಇದು ಮೂತ್ರಪಿಂಡ ವೈಫಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಹೀಗಾಗಿ ಸಕಾಲದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ಅಗತ್ಯವಾಗಿದೆ.

Continue Reading
Advertisement
Viral Video
ವೈರಲ್ ನ್ಯೂಸ್4 mins ago

Viral Video: ದುಬೈ ಮಾಲ್‌ನಲ್ಲಿ ಬೊಂಬೆಗಳೊಂದಿಗೆ ಬೊಂಬೆಯಾದ ಮಾಡೆಲ್‌! ಗ್ರಾಹಕರು ಕಕ್ಕಾಬಿಕ್ಕಿ

bomb threat
ಕರ್ನಾಟಕ5 mins ago

Bomb Threat: ಬಾಯ್‌ ಫ್ರೆಂಡ್‌ ಬಿಟ್ಟು ಹೋಗ್ತಾನೆ ಎಂದು ಬೆಂಗಳೂರು ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಕರೆ ಮಾಡಿದ ಯುವತಿ!

Puri Jagannath Yatra
ಧಾರ್ಮಿಕ14 mins ago

Puri Jagannath Yatra: ಪ್ರತಿ ವರ್ಷ ಹೊಸ ರಥ, ಜಗನ್ನಾಥನಿಗೆ ಜ್ವರ! ಪುರಿ ರಥ ಯಾತ್ರೆ ವಿಶೇಷ ಹಲವು!

Riyan Parag
ಪ್ರಮುಖ ಸುದ್ದಿ19 mins ago

Riyan Parag : ರಿಯಾನ್ ಪರಾಗ್​​ ಈ ಸಾಧನೆ ಮಾಡಿದ ಭಾರತದ ಮೊದಲ ಪುರುಷ ಆಟಗಾರ

Davanagere news
ಮಳೆ30 mins ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Viral News
ದೇಶ47 mins ago

Viral News: ಶಾಕಿಂಗ್‌ ಘಟನೆ! ಬುದ್ದಿ ಹೇಳಿದ ಗುರುವನ್ನೇ ಚುಚ್ಚಿ ಕೊಂದ ವಿದ್ಯಾರ್ಥಿ

ಪ್ರಮುಖ ಸುದ್ದಿ55 mins ago

Ravi Bishnoi : ಭಾರತ ಪರ ಸ್ಪಿನ್​ ಬೌಲಿಂಗ್​​ನಲ್ಲಿ ವಿಶೇಷ ಸಾಧನೆ ಮಾಡಿದ ರವಿ ಬಿಷ್ಣೋಯ್​​

Shashi Tharoor
ಕ್ರೀಡೆ1 hour ago

Shashi Tharoor: ಜಿಂಬಾಬ್ವೆ ಎದುರು ಭಾರತಕ್ಕೆ ಸೋಲು: ಲೇವಡಿ ಮಾಡಿದ ಶಶಿ ತರೂರ್

Karnataka Rain
ಮಳೆ1 hour ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Money Guide
ಮನಿ-ಗೈಡ್1 hour ago

Money Guide: ನಿಮ್ಮ ಎಲ್‌ಐಸಿ ಪಾಲಿಸಿ ಲ್ಯಾಪ್ಸ್‌ ಆಗಿದೆಯಾ? ನವೀಕರಿಸಲು ಹೀಗೆ ಮಾಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Davanagere news
ಮಳೆ30 mins ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 hour ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ11 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ23 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌