ವಿಸ್ತಾರ TOP 10 NEWS | ನೋಟು ಅಮಾನ್ಯವನ್ನು ಮಾನ್ಯ ಮಾಡಿದ ಸುಪ್ರೀಂಕೋರ್ಟ್‌, ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ, ಮತ್ತಷ್ಟು ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ನೋಟು ಅಮಾನ್ಯವನ್ನು ಮಾನ್ಯ ಮಾಡಿದ ಸುಪ್ರೀಂಕೋರ್ಟ್‌, ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ, ಮತ್ತಷ್ಟು ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news-Demonetisation verdict to delhi crime and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Demonetisation verdict | ನೋಟು ಬ್ಯಾನ್‌ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಚಾರಿತ್ರಿಕ ತೀರ್ಪು
ಕೇಂದ್ರ ಸರ್ಕಾರ 2016ರ ನವೆಂಬರ್‌ 8 ರಂದು ಹೊರಡಿಸಿದ್ದ 500 ರೂ. ಹಾಗೂ 1000 ರೂ. ನೋಟುಗಳ ಅಮಾನ್ಯತೆಯನ್ನು ಸುಪ್ರೀಂಕೋರ್ಟ್‌( Demonetisation verdict) ಎತ್ತಿ ಹಿಡಿದಿದೆ. ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ನೋಟು ಬ್ಯಾನ್‌ ಕ್ರಮವನ್ನು ಪ್ರಶ್ಮಿಸಿ ಸಲ್ಲಿಸಿದ್ದ 58 ಅರ್ಜಿಗಳನ್ನು ತಿರಸ್ಕರಿಸಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಮತ್ತಷ್ಟು ಓದಿಗಾಗಿ: Demonetisation verdict | ಮೋದಿ ಸರ್ಕಾರದ ನೋಟು ಅಮಾನ್ಯತೆ ವಿರುದ್ಧ ನ್ಯಾಯಮೂರ್ತಿ ಬಿವಿ ನಾಗರತ್ನ ಹೇಳಿದ್ದೇನು?

2. Siddheshwar Swamiji | ಸಿದ್ದೇಶ್ವರ ಶ್ರೀಗಳು ಆಹಾರ ಸ್ವೀಕರಿಸುತ್ತಿಲ್ಲ, ಆಸ್ಪತ್ರೆಗೆ ಶಿಫ್ಟ್‌ ಆಗಲು ಒಪ್ಪುತ್ತಿಲ್ಲ: ವೈದ್ಯ ಪಾಟೀಲ್‌
ನಡೆದಾಡುವ ದೇವರು, ಜಗತ್ತಿನ ಶ್ರೇಷ್ಠ ಸಂತ, ಪ್ರವಚನದ ಮೂಲಕ ವಿಶ್ವಾದ್ಯಂತ ಭಕ್ತರನ್ನು ಹೊಂದಿದ್ದ ದಣಿವರಿಯದ ಮಹಾನ್ ದಾರ್ಶನಿಕ, ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddheshwar Swamiji) ಆರೋಗ್ಯ ಚೇತರಿಕೆಗಾಗಿ ಭಕ್ತರು ದೇವರಿಗೆ ಮೊರೆ ಇಟ್ಟಿದ್ದಾರೆ, ಸ್ವಾಮೀಜಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಅಲ್ಲದೆ, ರಾಜಕೀಯ ನಾಯಕರು, ವಿವಿಧ ಮಠಾಧೀಶರು ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Accident In Delhi | ದೆಹಲಿ ಯುವತಿ ಆ್ಯಕ್ಸಿಡೆಂಟ್​ ಕೇಸ್​​ನಲ್ಲಿ ಬಿಜೆಪಿ ಮುಖಂಡ ಅರೆಸ್ಟ್​; ರಾಜಕೀಯ ಸ್ವರೂಪ ಪಡೆದ ಪ್ರಕರಣ
ದೆಹಲಿಯಲ್ಲಿ ನಡೆದ ಭೀಕರ ಕಾರು ಅಪಘಾತವೀಗ (Accident In Delhi) ರಾಜಕೀಯ ಸ್ವರೂಪಕ್ಕೆ ತಿರುಗಿದೆ. ಇಲ್ಲಿನ ಸುಲ್ತಾನ್​​ಪುರಿಯಲ್ಲಿ ಹೊಸವರ್ಷದ ದಿನವೇ 20ವರ್ಷದ ಯುವತಿಯೊಬ್ಬಳು ಅತ್ಯಂತ ದಾರುಣವಾಗಿ ಮೃತಪಟ್ಟಿದ್ದಳು. ಈ ಅಮಾನುಷ ಕೃತ್ಯಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕ ಅಮಿತ್​ ಮಿತ್ತಲ್​​ರನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Mahadayi Dispute | ಮಹದಾಯಿ ಡಿಪಿಆರ್‌ಗೆ ಕೇಂದ್ರದ ಸಮ್ಮತಿ ವಿರೋಧಿಸಿ ಶೀಘ್ರವೇ ಮೋದಿ ಬಳಿ ನಿಯೋಗ ಎಂದ ಗೋವಾ
ಮಹದಾಯಿ ನದಿಗೆ (Mahadayi Dispute) ಅಡ್ಡಲಾಗಿ ಎರಡು ಅಣೆಕಟ್ಟುಗಳನ್ನು ನಿರ್ಮಿಸುವ ಕರ್ನಾಟಕದ ಸಮಗ್ರ ಯೋಜನಾ ವರದಿಗೆ (ಡಿಪಿಆರ್‌) ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದಕ್ಕೆ ಗೋವಾ ಸರ್ಕಾರ ಕ್ಯಾತೆ ತೆಗೆದಿದೆ. ಡಿಪಿಆರ್‌ಗಳಿಗೆ ಅನುಮೋದನೆ ನೀಡಿರುವುದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನಿಯೋಗ ಕೊಂಡೊಯ್ಯಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Kalasa Bhanduri | ಹೋರಾಟ ಮಾಡಿದವರನ್ನು ಹೊಡೆದು ಜೈಲಿಗೆ ಕಳಿಸಿದ್ದು ಕಾಂಗ್ರೆಸ್‌: ಸಚಿವ ಗೋವಿಂದ ಕಾರಜೋಳ

5. NPS News | ಸರ್ಕಾರದಿಂದ ಒಪಿಎಸ್‌ ಜಾರಿ ಕುರಿತು ಚರ್ಚಿಸುವ ಭರವಸೆ; 14 ದಿನಗಳ ಧರಣಿ ಸತ್ಯಾಗ್ರಹ ಅಂತ್ಯ
ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್‌) ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರ ಸಂಘ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿದ್ದ ಬೃಹತ್‌ ಧರಣಿ ಪ್ರತಿಭಟನೆಯನ್ನು (NPS News) ಸೋಮವಾರ ಅಂತ್ಯಗೊಳಿಸಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Karnataka Election | ಶಿವಾಜಿನಗರದಲ್ಲಿ ಬಿಜೆಪಿ ಗೆದ್ದರೆ ರಾಜ್ಯದಲ್ಲಿ 130 ಸ್ಥಾನ ಖಚಿತ: ಸಿಎಂ ಬಸವರಾಜ ಬೊಮ್ಮಾಯಿ; ಬೂತ್‌ ವಿಜಯ್‌ ಅಭಿಯಾನಕ್ಕೆ ಚಾಲನೆ
ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದರೆ ರಾಜ್ಯದಲ್ಲಿ ಬಿಜೆಪಿಯು 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎನ್ನುವುದು ಕರ್ನಾಟಕ ರಾಜಕೀಯ (Karnataka Election) ದಿಕ್ಸೂಚಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಬೊಮ್ಮಾಯಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Viral story | ಗರ್ಭಿಣಿಯಾಗಿದ್ದಕ್ಕೆ ಕೆಲಸದಿಂದ ವಜಾ! 15 ಲಕ್ಷ ರೂ ಪರಿಹಾರ ಪಡೆದಳಾಕೆ!
ಗರ್ಭಿಣಿ ಎಂದು ಕಚೇರಿಯಲ್ಲಿ ತಿಳಿಸಿದ್ದಕ್ಕಾಗಿ, ಆಕೆಯನ್ನು ಗರ್ಭಿಣಿಯೆಂಬ ಕಾರಣಕ್ಕೆ ಕೆಲಸದಿಂದ ತೆಗೆದು ಹಾಕಲಾಗಿದೆಯಂತೆ. ಈ ಸಂಬಂಧ ಆ ಮಹಿಳೆ, ಕಾನೂನಿನ ಮೊರೆ ಹೋದಳು. ಆಕೆ, ಬರೋಬ್ಬರಿ ೧೫ ಲಕ್ಷ ರೂಪಾಯಿಗಳ ಪರಿಹಾರವನ್ನು ಪಡೆದಿದ್ದಾರೆ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Karnataka Election | ಅಮಿತ್‌ ಶಾ ದೇವೇಗೌಡರ ಉಗುರಿಗೂ ಸಮವಲ್ಲ ಎಂದ ಎಚ್‌ಡಿಕೆ, ಬಿಜೆಪಿ ಪತನ ಆರಂಭ ಎಂದು ಕಿಡಿ
ಅಮಿತ್ ಶಾ ಅವರು ಯಾವಾಗ ದೇವೇಗೌಡರು ಭ್ರಷ್ಟರು ಅಂದರೋ ಆಗಲೇ ಅವರ ಪತನ ಆರಂಭ ಆಗಿಹೋಗಿದೆ. ಅವರು ದೇವೇಗೌಡರ ಉಗುರಿಗೂ ಸಮವಲ್ಲ ಎಂದು ಆಕ್ರೋಶದಿಂದ ಮಾತನಾಡಿದ್ದಾರೆ (Karnataka Election) ಮಾಜಿ ಸಿಎಂ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Suicide Case | ಡೆತ್‌ ನೋಟ್‌ನಲ್ಲಿ ಬಸವರಾಜ ಬೊಮ್ಮಾಯಿ ಹೆಸರು ಬರೆದರೆ ಏನು ಮಾಡ್ತೀರಿ?: ಯಾವುದೇ ತನಿಖೆಗೆ ಸಿದ್ಧ ಎಂದ ಅರವಿಂದ ಲಿಂಬಾವಳಿ
ಪ್ರದೀಪ್‌ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರರಕಣದಲ್ಲಿ (Suicide Case) ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಕುರಿತು ಸುದ್ದಿಗೋಷ್ಠಿ ನಡೆಸಿರುವ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ, ಯಾವುದೇ ರೀತಿಯ ತನಿಖೆಗೂ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Murder Case | ಕ್ಲಾಸ್‌ ರೂಮ್‌ನಲ್ಲಿಯೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಂದ ಪಾಗಲ್‌ ಪ್ರೇಮಿ; ತಾನೂ ಇರಿದುಕೊಂಡ!
ಬೆಂಗಳೂರಿನ ರಾಜಾನುಕುಂಟೆ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಯುವಕನೊಬ್ಬ ಯುವತಿಗೆ ಚಾಕು (Murder Case) ಇರಿದು ಕೊಂದಿದ್ದಾನೆ. ಕ್ಲಾಸ್‌ ರೂಮ್‌ನಲ್ಲಿಯೇ ವಿದ್ಯಾರ್ಥಿನಿಗೆ ಪವನ್ ಕಲ್ಯಾಣ ಎಂಬ ಯುವಕ ಚಾಕು ಹಾಕಿದ್ದಾನೆ. ಆಕೆ ತನ್ನ ಪ್ರೀತಿಯನ್ನು ಒಪ್ಪಿಲಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆಂದು ಹೇಳಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

  1. Hombale Films | ಅಧಿಕೃತ ಪೋಸ್ಟ್‌ ಮೂಲಕ ಕೊನೆಗೂ ಸೀಕ್ರೆಟ್‌ ರಿವೀಲ್‌ ಮಾಡಿದ ಹೊಂಬಾಳೆ ಫಿಲ್ಮ್ಸ್‌!
  2. Vaikuntha Ekadashi 2023 | ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ;‌ ಎಲ್ಲೆಲ್ಲಿ ಹೇಗಿತ್ತು?
  3. Road Accident Deaths | ಮಧ್ಯಾಹ್ನ 3ರಿಂದ ರಾತ್ರಿ 9 ಗಂಟೆವರೆಗೆ ವಾಹನ ಓಡಿಸಬೇಡಿ! ಇದಕ್ಕೇನು ಕಾರಣ?
  4. Coronavirus | ಸೆಪ್ಟೆಂಬರ್‌ನಲ್ಲೇ ಬೆಂಗಳೂರಿಗೆ ಕಾಲಿಟ್ಟಿತ್ತು ಬಿಎಫ್.7 ರೂಪಾಂತರಿ!
  5. Rangayana row | ರಂಗಾಯಣ ನಾಟಕ ʻಸಾಂಬಶಿವʼದಲ್ಲಿ ಸಿದ್ದರಾಮಯ್ಯ, ಕೈ ನಾಯಕರ ಅಪಹಾಸ್ಯ, ವೇದಿಕೆಗೆ ನುಗ್ಗಿದ ಫ್ಯಾನ್ಸ್‌
  6. Pakistan Economy Collapse | ಪ್ಲಾಸ್ಟಿಕ್‌ನಲ್ಲಿ ಅಡುಗೆ ಅನಿಲ ತುಂಬಿಸಿ ಹೊತ್ತೊಯ್ಯುವ ದುಸ್ಥಿತಿ, ದಿವಾಳಿಯತ್ತ ಪಾಕಿಸ್ತಾನ
  7. Unemployment in India | ಶೇ.8.3ಕ್ಕೇರಿದ ದೇಶದ ನಿರುದ್ಯೋಗ ದರ! ಯಾವ ರಾಜ್ಯದಲ್ಲಿ ಹೆಚ್ಚು?
  8. Kannada Sahitya Sammelana | ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಂತಿಮ ಹಂತದ ಸಿದ್ಧತೆ; ಕನಕದಾಸರ ಕೋಟೆ ಮಾದರಿ ವೇದಿಕೆ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Prajwal Revanna Case: ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಕಸ್ಟಡಿಗೆ ಪಡೆಯುತ್ತಿದ್ದಾರೆ.

VISTARANEWS.COM


on

Prajwal Revanna Case Devaraje Gowda
Koo

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರನ್ನು ಇಂದು ಪೊಲೀಸ್ ಕಸ್ಟಡಿಗೆ ಪಡೆಯಲಾಗುತ್ತಿದೆ. ಎರಡು ದಿನಗಳ ಕಾಲ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ವಿಡಿಯೊ ವೈರಲ್‌ (video viral) ಮಾಡಿದವರ ಕುರಿತು ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ ಎನ್ನುತ್ತಿದ್ದ ವಕೀಲ ದೇವರಾಜೇಗೌಡ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನವಾಗಿದ್ದರು.

ಹೊಳೆನರಸೀಪುರ ಪೊಲೀಸರು ದೇವರಾಜೇಗೌಡ ಅವರನ್ನು ಇಂದು ಬೆಳಗ್ಗೆ ಕಸ್ಟಡಿಗೆ ತೆಗೆದುಕೊಳ್ಳಲಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಹೊಳೆನರಸೀಪುರದ ಜೆಎಂಎಫ್‌ಸಿ ಕೋರ್ಟ್ ಅನುಮತಿ ನೀಡಿದೆ. ಇಂದಿನಿಂದ ಮೇ 16ರ ಬೆಳಗ್ಗೆ 12 ಗಂಟೆವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಲಿದ್ದಾರೆ.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಕಸ್ಟಡಿಗೆ ಪಡೆಯುತ್ತಿದ್ದಾರೆ. ಹಾಸನದ ಜಿಲ್ಲಾ ಕಾರಾಗೃಹದಿಂದ ಕೆಲವೇ ಕ್ಷಣದಲ್ಲಿ ದೇವರಾಜೇಗೌಡರನ್ನು ಪೊಲೀಸರು ಕರೆದೊಯ್ಯಲಿದ್ದು, ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ.

ಅತ್ಯಾಚಾರ ಕೇಸ್‌ನ ಆರೋಪಿ ದೇವರಾಜೇಗೌಡ ಅವರನ್ನು ಬುಧವಾರ ಬೆಳಗ್ಗೆ 9 ಗಂಟೆಯಿಂದ ಮೇ 16 ರ ರಾತ್ರಿ ವರೆಗೆ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡಲು ಹೊಳೆನರಸೀಪುರ ನಗರ ಠಾಣೆ ಪೊಲೀಸರು ಮನವಿ ಮಾಡಿದ್ದರು. ಹೀಗಾಗಿ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಮೇ 11 ರಂದು ದೇವರಾಜೇಗೌಡ ಬಂಧನವಾಗಿತ್ತು. ನಾಳ ಬೆಳಗ್ಗೆ 9 ಗಂಟೆಗೆ ಹಾಸನದ ಜಿಲ್ಲಾ ಕಾರಾಗೃಹದಿಂದ ದೇವರಾಜೇಗೌಡ ಅವರನ್ನು ಪೊಲೀಸರು ಕರೆದೊಯ್ಯಲಿದ್ದಾರೆ.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಮಹಿಳೆಯೊಬ್ಬರು ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ದೇವರಾಜೇಗೌಡ ವಿರುದ್ಧ ಕೇಳಿ ಬಂದಿದೆ.

ಇದನ್ನೂ ಓದಿ | Prajwal Revanna Case: ಎಚ್‌.ಡಿ. ರೇವಣ್ಣ ಜಾಮೀನು ಅರ್ಜಿಯ ರೋಚಕ ವಾದ – ಪ್ರತಿವಾದ; ಇಲ್ಲಿದೆ ಇಂಚಿಂಚು ಡಿಟೇಲ್ಸ್‌

ಕಿಡ್ನ್ಯಾಪ್‌ ಕೇಸ್; ಸತೀಶ್ ಬಾಬು ಹೊರತು ಪಡಿಸಿ ಮೂವರಿಗೆ ನ್ಯಾಯಾಂಗ ಬಂಧನ

ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನವಾಗಿರುವ ಸತೀಶ್ ಬಾಬು ಹೊರತುಪಡಿಸಿ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ವರು ಆರೋಪಿಗಳನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದರು. ಸಂತ್ರಸ್ರೆ ಕಿಡ್ನ್ಯಾಪ್‌ಗೆ ಸಹಕರಿಸಿದ್ದ ಆರೋಪದಲ್ಲಿ ಬಂಧನವಾಗಿದ್ದ ಮಧು, ಮನು, ಸುಜಯ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

A Manju and Naveen Gowda

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು (A Manju) ಎಂದು ಕಾಂಗ್ರೆಸ್‌ ಕಾರ್ಯಕರ್ತ ನವೀನ್‌ ಗೌಡ (Naveen Gowda) ಆರೋಪಿಸಿ ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದರ ವಿರುದ್ಧ ಎಸ್‌ಐಟಿಗೆ ದೂರು ದಾಖಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಂಜು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು, ನವೀನ್ ಗೌಡ ವಿರುದ್ಧ ದೂರು ನೀಡಿದ್ದಾರೆ. ಪೆನ್ ಡ್ರೈವ್ ಅನ್ನು ಶಾಸಕ ಎ. ಮಂಜು ಅವರಿಗೆ ಕೊಟ್ಟಿದ್ದಾಗಿ ಭಾನುವಾರ ನವೀನ್‌ ಗೌಡ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದ. ಈ ಆರೋಪಕ್ಕೆ ಸಿಟ್ಟಾಗಿರುವ ಮಂಜು ಈಗ ದೂರು ನೀಡಿದ್ದಾರೆ.

ನನಗೆ ಏಪ್ರಿಲ್ 20 ರಂದು ಪೆನ್ ಡ್ರೈವ್ ಸಿಕ್ಕಿತ್ತು. ನಾನದನ್ನು ಏಪ್ರಿಲ್‌ 21ರಂದು ಅರಕಲಗೂಡು ಶಾಸಕ ಮಂಜು ಅವರಿಗೆ ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದ. ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿತ್ತು. ಆದರೆ, ಪೋಸ್ಟ್ ಮಾಡಿ‌ ಸ್ವಲ್ಪ ಸಮಯದ ಬಳಿಕ ನವೀನ್ ಗೌಡ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತನಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾನೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತನಾಗಿದ್ದ. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನವೀನ್ ಗೌಡನ ಮೇಲೆ ಈಗಾಗಲೇ ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷವಾಗಿ ಶಾಸಕ ಎ. ಮಂಜು ವಿರುದ್ಧ ಪೋಸ್ಟ್ ಹಾಕಿ ಕೆಲವೇ ಸಮಯದ ಬಳಿಕ ಡಿಲೀಟ್‌ ಮಾಡಿದ್ದ.

ದೂರು ನೀಡಿದ ಎ. ಮಂಜು

ಈ ಸಂಬಂಧ ಎಸ್‌ಐಟಿಗೆ ಬಂದ ಶಾಸಕ ಎ. ಮಂಜು ಅವರು ನವೀನ್‌ ಗೌಡನ ಮೇಲೆ ದೂರು ದಾಖಲು ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೀನ್ ಗೌಡನಿಗೆ ಏಪ್ರಿಲ್‌ 20ರಂದು ಅಶ್ಲೀಲ ವಿಡಿಯೊದ ಪೆನ್‌ಡ್ರೈವ್‌ ಸಿಗುತ್ತದೆ. ಅದನ್ನು ಏಪ್ರಿಲ್‌ 21ರಂದು ನನಗೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ನನಗೆ ಪೆನ್ ಡ್ರೈವ್ ಅನ್ನು ಯಾಕೆ ಕೊಡಬೇಕು ಎಂಬುದನ್ನು ಮನಸ್ಸು ಮುಟ್ಟಿ ಹೇಳಿಕೊಳ್ಳಲಿ. ನವೀನ್ ಗೌಡ ನನಗೆ ಪರಿಚಯವೇ ಇಲ್ಲ. ನವೀನ್ ಗೌಡ ತಪ್ಪಿಸಿಕೊಳ್ಳಲು ಹಾಗೂ ಎಸ್ಐಟಿ ತನಿಖೆಯ ದಿಕ್ಕು ತಪ್ಪಿಸಲು ಈ ಹೇಳಿಕೆ ಕೊಟ್ಟಿದ್ದಾರೆ. ನನಗೆ ಗೊತ್ತಿಲ್ಲದೆಯೇ ಈ ಪ್ರಕರಣದ ಹಿಂದೆ ಯಾರಿದ್ದಾರೆಂದು ಹೇಳಲ್ಲ ಎಂದು ಹೇಳಿದರು.

Continue Reading

ಕ್ರೈಂ

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Murder Case: ಮಲಗಿದ್ದ ವ್ಯಕ್ತಿಯನ್ನು ದರದರನೆ ಎಳೆದು ತಂದ ಆಸಾಮಿ ನಂತರ ರಸ್ತೆ ಪಕ್ಕ ಬಿದ್ದಿದ್ದ ಕಲ್ಲು ತಲೆ ಮೇಲೆ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಇಬ್ಬರ ಗುರುತೂ ಪತ್ತೆಯಾಗಿಲ್ಲ.

VISTARANEWS.COM


on

jayanagar murder case
Koo

ಬೆಂಗಳೂರು: ರಸ್ತೆಯ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ (Jayanagar murder case) ನಡೆಸಿದ ಘಟನೆ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಜಯನಗರ (Jayanagar murder case) 7ನೇ ಬಡಾವಣೆಯಲ್ಲಿ ನಡೆದಿದೆ. ರಾತ್ರಿ 12ರ ಹೊತ್ತಿಗೆ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

ಮೃತನ ಗುರುತು ಪತ್ತೆಯಾಗಿಲ್ಲ. ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಪಾನಮತ್ತನಾಗಿ ಈತ ಮಲಗಿದ್ದ ಎನ್ನಲಾಗಿದೆ. ಮತ್ತೊಬ್ಬ ಬಂದು ಆತನ ಮೇಲೆ ಬಿದ್ದಿದ್ದಾನೆ. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಮಲಗಿದ್ದ ವ್ಯಕ್ತಿಯನ್ನು ದರದರನೆ ಎಳೆದು ತಂದ ಆಸಾಮಿ ನಂತರ ರಸ್ತೆ ಪಕ್ಕ ಬಿದ್ದಿದ್ದ ಕಲ್ಲು ತಲೆ ಮೇಲೆ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಘಟನೆ ಸ್ಥಳಕ್ಕೆ ಭೇಟಿ ನೀಡಿರುವ ಬನಶಂಕರಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ನಡೆದ ಸುತ್ತಮುತ್ತಲಿನ ಮನೆಗಳ ಸಿಸಿಟಿವಿ ಫೂಟೇಜ್‌ ಆಧರಿಸಿ ವ್ಯಕ್ತಿಯ ತಲಾಶೆ ನಡೆಸಲಾಗುತ್ತಿದೆ. ಕೊಲೆಯಾದ ವ್ಯಕ್ತಿಯ ವಿವರಗಳೂ ಗೊತ್ತಾಗಿಲ್ಲ. ಯಾವುದೇ ಐಡಿ ಈತನ ಬಳಿ ಕಂಡುಬಂದಿಲ್ಲ.

ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Continue Reading

ಪ್ರಮುಖ ಸುದ್ದಿ

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

HD Revanna Bail: ಇಂದು ರೇವಣ್ಣ ಅವರು ಪರಪ್ಪನ ಅಗ್ರಹರ ‌ಜೈಲಿನಿಂದ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ, ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರಹಾರ ಜೈಲು ಬಳಿ ಸೇರುವ‌ ಸಾಧ್ಯತೆ ಇದೆ. ಹೀಗಾಗಿ ಜೈಲಿನ ರಸ್ತೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

VISTARANEWS.COM


on

HD Revanna Bail
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಹಾಗೂ ಅಪಹರಣ (Kidnap case) ಪ್ರಕರಣದಲ್ಲಿ ಆರು ದಿನಗಳಿಂದ ಪರಪ್ಪನ ಅಗ್ರಹಾರ ಜೈಲುವಾಸಿಯಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna jailed) ಅವರಿಗೆ ನಿನ್ನೆ ಜಾಮೀನು (HD Revanna Bail) ದೊರೆತಿದೆ. ಆದರೆ ಇಂದು ಸಂಜೆಯವರೆಗೂ ಅವರು ಜೈಲಿನಲ್ಲಿರಬೇಕಾಗಿದೆ.

ಕಿಡ್ನಾಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಎಚ್.ಡಿ.ರೇವಣ್ಣನವರಿಗೆ ಇಂದು ಸೆರೆವಾಸ ಅಂತ್ಯವಾಗಲಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಲಿದ್ದಾರೆ. ಆದರೆ ಮೊದಲಿಗೆ ಜಾಮೀನಿನ ಶೂರಿಟಿ ಪ್ರಕ್ರಿಯೆಯನ್ನು ಕೋರ್ಟಿನಲ್ಲಿ ಮುಗಿಸಬೇಕು. ಬೇಲ್ ಕಾಪಿ ಜೈಲಿನ ಅಧಿಕಾರಿಗಳಿಗೆ ಮುಖತಃ ಬರಬೇಕು. ಬೇಲ್ ಕಾಪಿ ಬಂದ ಬಳಿಕ ಸಂಜೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ನಿನ್ನೆ ಸಂಜೆ ಜಾಮೀನು ಸಿಕ್ಕ ಖುಷಿಯಲ್ಲಿದ್ದ ರೇವಣ್ಣ ರಾತ್ರಿ 12 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದರು. ಇಂದು ಬೆಳಿಗ್ಗೆ 4 ಗಂಟೆಗೆ ಎದ್ದು ಕೆಲ ಹೊತ್ತು ಬ್ಯಾರಕ್‌ನಲ್ಲಿ ವಾಕಿಂಗ್ ಮಾಡಿದ್ದಾರೆ. ಕೊಠಡಿಯಲ್ಲಿದ್ದ ದೇವರ ಪೋಟೋಗೆ ಪೂಜೆ ಮಾಡಿದ್ದಾರೆ. ಜೈಲು ಸಿಬ್ಬಂದಿ ನೀಡಿದ ಚಹಾವನ್ನು ಕುಡಿದು ರಿಲ್ಯಾಕ್ಸ್ ಆಗಿದ್ದು, ದಿನಪತ್ರಿಕೆ ಓದಿ ವಿದ್ಯಮಾನಗಳ ಕಡೆ ಕಣ್ಣಾಡಿಸಿದ್ದಾರೆ.

ಜೈಲಿಗೆ ಬಂದ ದಿನದಿಂದ ಮೌನಕ್ಕೆ ಜಾರಿದ್ದ ರೇವಣ್ಣ, ಆಪ್ತರ ಭೇಟಿ ವೇಳೆ ಕಣ್ಣೀರು ಹಾಕಿ ನೋವನ್ನು ಹೇಳಿಕೊಳ್ಳುತ್ತಿದ್ದರು. ಆರು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸಿರುವ ಅವರಿಗೆ ನ್ಯಾಯಾಲಯ ಕೊನೆಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇಂದು ರೇವಣ್ಣ ಅವರು ಪರಪ್ಪನ ಅಗ್ರಹರ ‌ಜೈಲಿನಿಂದ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ, ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರಹಾರ ಜೈಲು ಬಳಿ ಸೇರುವ‌ ಸಾಧ್ಯತೆ ಇದೆ. ಹೀಗಾಗಿ ಜೈಲಿನ ರಸ್ತೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇಬ್ಬರು ಎಸಿಪಿ, 6 ಜನ ಇನ್ಸ್ಪೆಕ್ಟರ್, 15 ಜನ‌ ಸಬ್ ಇನ್ಸ್ಪೆಕ್ಟರ್ ಸೇರಿ 200 ಸಿಬ್ಬಂದಿಯಿಂದ‌ ಭದ್ರತೆ ಒದಗಿಸಲಾಗಿದೆ. 12 ಗಂಟೆ ಒಳಗೆ ಕೋರ್ಟ್ ‌ಜಾಮೀನು ಪ್ರಕ್ರಿಯೆ ಮುಗಿಸಿ ರೇವಣ್ಣ ಪರ ವಕೀಲರು ಜಾಮೀನು ‌ಪ್ರತಿ ಪಡೆಯಲಿದ್ದು, 1‌ ಗಂಟೆಯೊಳಗೆ ಜಾಮೀನು ‌ಪ್ರತಿಯನ್ನು ಜೈಲು ತಲುಪಿಸುವ ಸಾಧ್ಯತೆ ಇದೆಯೆಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣಗೆ ಜಾಮೀನು ಸಿಗುವುದಕ್ಕೆ ಕಾರಣಗಳೇನು?

  • ರೇವಣ್ಣ ಅವರೇ ಕಿಡ್ನ್ಯಾಪ್ ಮಾಡಿಸಿದ್ದು ಎನ್ನುವುದಕ್ಕೆ ಸಾಕ್ಷಿ ಇಲ್ಲ.
  • ಸಿಆರ್‌ಪಿಸಿ ಅಡಿ ಸಂತ್ರಸ್ತೆ ನೀಡಿದ್ದ ಹೇಳಿಕೆಯಲ್ಲೂ ಪ್ರಸ್ತಾಪ ಇಲ್ಲ.
  • ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಸಾಕ್ಷಿ ಒದಗಿಸಲು ಎಸ್‌ಐಟಿ ವಿಫಲವಾಗಿದೆ.
  • ಎಚ್‌.ಡಿ. ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್ ಅನ್ನಲು ಸಾಕ್ಷಿ ಇಲ್ಲ.

ರೇವಣ್ಣ ಅವರಿಗೆ ಏಕೆ ಜಾಮೀನು ಕೊಡಲಾಗುತ್ತಿದೆ ಎಂಬುದಾಗಿ ಈ ಮೇಲಿನ ಕಾರಣಗಳನ್ನು ಉಲ್ಲೇಖಿಸಿ, ನ್ಯಾಯಾಧೀಶರು ಸ್ಪಷ್ಟವಾಗಿ ಆದೇಶಿಸಿದ್ದಾರೆ. ಆದರೆ, ಕೆಲವು ಷರತ್ತುಗಳನ್ನು ನ್ಯಾಯಾಲಯವು ವಿಧಿಸಿದೆ.

8 ಷರತ್ತುಗಳನ್ನು ವಿಧಿಸಿ ಬೇಲ್ ಕೊಟ್ಟ ಕೋರ್ಟ್!

  1. 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಕೊಡಬೇಕು
  2. ಇಬ್ಬರ ಶ್ಯೂರಿಟಿಯನ್ನು ಒದಗಿಸಿಕೊಡಬೇಕು
  3. ಯಾವ ಕಾರಣಕ್ಕೂ ದೇಶ ಬಿಟ್ಟು ಹೋಗಬಾರದು
  4. ಕೇಸ್ ಆಗಿರುವ ಕೆ.ಆರ್.ನಗರಕ್ಕೆ ಹೋಗಬಾರದು
  5. ಎಸ್‌ಐಟಿ ತನಿಖೆಗೆ ಸೂಕ್ತ ಸಹಕಾರ ನೀಡಲೇಬೇಕು
  6. ಯಾವುದೇ ರೀತಿಯ ಸಾಕ್ಷ್ಯ ನಾಶ ಮಾಡಬಾರದು
  7. ಪಾಸ್ ಪೋರ್ಟ್ ಅನ್ನು ಕೋರ್ಟ್‌ಗೆ ಸಲ್ಲಿಸಬೇಕು.
  8. ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯದಿಂದ ಹೊರಹೋಗುವಂತಿಲ್ಲ.

ಸಂತ್ರಸ್ತೆ ಹೇಳಿಕೆಯ ವಿಡಿಯೊ ಪ್ರಸ್ತಾಪ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ವಾದ – ಪ್ರತಿವಾದಗಳು ನಡೆದಿವೆ. ಕಲಾಪ ಆರಂಭವಾಗುತ್ತಿದ್ದಂತೆ ವಾದ ಮಂಡಿಸಿದ ಎಸ್‌ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, 2 ವಿಚಾರಗಳಿಗೆ ಸಂಬಂಧಿಸಿ ಆರೋಪಿಗೆ ಜಾಮೀನು ಕೊಡಬೇಡಿ. ಒಂದು ಪ್ರಕರಣದ ಗಂಭೀರತೆಯನ್ನು ನೋಡಬೇಕಿದ್ದು, ಇದರಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿದೆ. ಕಿಡ್ನ್ಯಾಪ್ ಕೇಸಲ್ಲೂ ಈಗಾಗಲೇ 2ನೇ ಆರೋಪಿ ಹೇಳಿಕೆಯನ್ನು ಪಡೆಯಲಾಗಿದೆ. ಈ ನಡುವೆ ಸಂತ್ರಸ್ತೆಯ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಂತ್ರಸ್ತೆ ಸ್ಪಷ್ಟನೆ ನೀಡಿದ್ದಾರೆ ಎಂಬುದಾಗಿ ವಿಡಿಯೋ ವೈರಲ್ ಬಗ್ಗೆ ಕೋರ್ಟ್‌ಗೆ ಮಾಹಿತಿಯನ್ನು ನೀಡಿದರು.

ಮೊದಲು ತನಿಖಾ ವರದಿ ಕೊಡಿ ಎಂದ ನ್ಯಾಯಾಧೀಶರು

ಈ ವೇಳೆ ಮಧ್ಯಪ್ರವೇಶ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ತನಿಖಾಧಿಕಾರಿಯ ಇನ್‌ವೆಸ್ಟಿಗೇಷನ್‌ ರಿಪೋರ್ಟ್ ಅನ್ನು ಮೊದಲು ಸಲ್ಲಿಸಿ. ಕಿಡ್ನ್ಯಾಪ್ ಕೇಸ್‌ ಸಂಬಂಧ ಏನೇನು ವಿಚಾರಗಳು ನಡೆದಿವೆ ಎಂಬುದನ್ನು ತಿಳಿಯಬೇಕು ಎಂದು ಎಸ್‌ಪಿಪಿಗೆ ಸೂಚಿಸಿದರು. ಆಗ ರೇವಣ್ಣ ಪರ ವಕೀಲ ಸಿ.ವಿ. ನಾಗೇಶ್‌, ತನಿಖಾ ವರದಿಯನ್ನು ನಮಗೂ ಕೊಟ್ಟಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ಇನ್‌ವೆಸ್ಟಿಗೇಷನ್ ರಿಪೋರ್ಟ್‌ ಅನ್ನು ಸಲ್ಲಿಸಲಾಯಿತು. ಇದಕ್ಕೆ ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ರಿಂದ ಆಕ್ಷೇಪ ವ್ಯಕ್ತವಾಯಿತು. ಬಳಿಕ ತಮಗೂ ಒಂದು ಕಾಪಿ ನೀಡಲು ಕೇಳಿದ್ದು, ಅವರಿಗೂ ಒಂದು ಪ್ರತಿಯನ್ನು ನೀಡಲಾಯಿತು.

ಸಿ.ವಿ.ನಾಗೇಶ್ ವಾದ

ಇಬ್ಬರೂ ಎಸ್‌ಪಿಪಿಗಳ ವಾದ ಮಂಡನೆ ನಂತರ ಸಿ.ವಿ. ನಾಗೇಶ್ ವಾದವನ್ನು ಆರಂಭಿಸಿದರು. ಏಪ್ರಿಲ್ 29ಕ್ಕೆ ಕಿಡ್ನ್ಯಾಪ್ ಮಾಡಿದರೆ, ದೂರು ಕೊಡಲು ತಡ ಯಾಕೆ ಮಾಡಿದರು? ಸಂತ್ರಸ್ತ ಮಹಿಳೆ ಎಚ್.ಡಿ.ರೇವಣ್ಣ ಅವರ ಸಂಬಂಧಿಯಾಗಿದ್ದಾರೆ. ಸುಮಾರು ವರ್ಷ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಕೆಲಸ ಮಾಡಿದ್ದವರನ್ನು ಯಾಕೆ ಕಿಡ್ನ್ಯಾಪ್ ಮಾಡಬೇಕು? ಮನೆ ಕೆಲಸ ಮಾಡುತ್ತಿದ್ದರಲ್ಲ, ಕರೆದುಕೊಂಡು ಬನ್ನಿ ಅಂದಿರಬಹುದು. ಇಲ್ಲಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ರೇವಣ್ಣ ಅರೆಸ್ಟ್ ಆದ ದಿನವೇ ಸಂತ್ರಸ್ತೆ ಮಹಿಳೆ ಹುಣಸೂರಿನಲ್ಲಿ ಪತ್ತೆಯಾಗಿದ್ದಾರೆ. ಮೈಸೂರಿನ ಹುಣಸೂರು ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಪತ್ತೆ ಆಗಿದ್ದರು. ಸಂತ್ರಸ್ತ ಮಹಿಳೆ ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರ ಆರೋಪಿಸಿದ್ದಾರೆ. ರೇವಣ್ಣ ವಿರುದ್ಧ ಸಂತ್ರಸ್ತೆ ಮಹಿಳೆ ಯಾವುದೇ ಆರೋಪವನ್ನು ಮಾಡಿಲ್ಲ ಎಂದು ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಸಂತ್ರಸ್ತ ಮಹಿಳೆಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಆರೋಪದ ಬಗ್ಗೆ ವಾದ ಮಂಡಿಸಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯು ಸಿಆರ್‌ಪಿಸಿ 161 ಅಡಿಯಲ್ಲಿ ಹೇಳಿಕೆ ನೀಡುವಾಗ, ಕೇವಲ ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಅಂತಾ ಆರೋಪ ಮಾಡಿದ್ದಾಳೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಎರಡು ರಿಮ್ಯಾಂಡ್‌ ಅರ್ಜಿ ಸಲ್ಲಿಕೆಯಾಗಿದೆ. ಕಿಡ್ನ್ಯಾಪ್ ಮಾಡಿದ್ದಾರೆ ಅಂತಾ ಮಹಿಳೆಯ ಮಗನಿಗೆ ಹೇಗೆ ಗೊತ್ತಾಯ್ತು? ಅದು ಊಹೆಯಷ್ಟೇ. ಸಂತ್ರಸ್ತೆಯ ಮಗನಿಗೆ ಯಾರೂ ಕಾಲ್ ಮಾಡಿ ಡಿಮ್ಯಾಂಡ್ ಮಾಡಿಲ್ಲ. ಇನ್ನು ಸಂತ್ರಸ್ತ ಮಹಿಳೆಯನ್ನು ಅಂದು ಹುಣಸೂರಿನ ಬಳಿ ರಕ್ಷಣೆ ಮಾಡಲಾಗಿದೆ. ಆಪ್ತ ಸಮಾಲೋಚನೆ ಮಾಡಿ, ಆಕೆಯನ್ನು ಸುರಕ್ಷಿತ ಕೊಠಡಿಯಲ್ಲಿಡಲಾಗಿದೆ. ಈ ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಿಲ್ಲ ಏಕೆ? ಇಲ್ಲಿಯ ತನಕ ರೇವಣ್ಣ ವಿರುದ್ಧ ಯಾವುದೇ ಸಾಕ್ಷಿಯನ್ನೂ ಸಂಗ್ರಹಿಸಿಲ್ಲ, ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿಸಿಲ್ಲ. ಸಂತ್ರಸ್ತ ಮಹಿಳೆಯನ್ನು ಕೇವಲ ಆಪ್ತ ಸಮಾಲೋಚನೆಯಲ್ಲಿ ಇರಿಸಿದ್ದಾರೆ ಎಂದು ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಸಂತ್ರಸ್ತ ಮಹಿಳೆಯನ್ನು ಹುಣಸೂರಿನ ತೋಟದಿಂದ ರಕ್ಷಣೆ ಮಾಡಿದರಾ? ಎಸ್‌ಐಟಿ ಎಲ್ಲಿಂದ ಮಹಿಳೆಯನ್ನು ಕರೆತಂದರು? ಅವರ ಸಂಬಂಧಿಕರ ಮನೆಯಿಂದ ಸಂತ್ರಸ್ತೆಯನ್ನು ಕರೆ ತಂದಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಎರಡು ಕಡೆ ರೆಕಾರ್ಡ್ ಆಗಿದೆ. ಒಂದು ಕಡೆ ಫೋಟೋ ಶಾಪ್‌ವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ತರಕಾರಿ ಅಂಗಡಿ ಸಿಸಿ ಕ್ಯಾಮರಾದಲ್ಲಿ ಇದು ಸೆರೆಯಾಗಿದೆ. ಅನುಮತಿ ನೀಡಿದರೆ ಸೆರೆಯಾಗಿರುವ ದೃಶ್ಯವನ್ನು ತೋರಿಸಲು ನಾವು ಸಿದ್ಧ. ಈಗ ನ್ಯಾಯಾಲಯದಲ್ಲಿಯೇ ಪ್ಲೇ ಮಾಡುತ್ತೇವೆ. ಸ್ಪೆಷಲ್ ಇನ್‌ವೆಸ್ಟಿಗೇಷನ್ ಟೀಮ್ ವಿರುದ್ಧವೇ ಸಿ.ವಿ. ನಾಗೇಶ್ ಆರೋಪಿಸಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್‌ಐಟಿಯವರೇ ಟ್ಯಾಂಪರಿಂಗ್ ಮಾಡುತ್ತಿದ್ದಾರೆ. ಆದರೆ, ಎಸ್‌ಪಿಪಿಯವರು ಸಂತ್ರಸ್ತೆ ಹೇಳಿಕೆಯನ್ನು ಟ್ಯಾಂಪರಿಂಗ್ ಆಗಿದೆ ಎಂದು ಹೇಳಿದ್ದಾರೆ. ವೈರಲ್ ಆದ ಸ್ಪಷ್ಟನೆ ವಿಡಿಯೊದಲ್ಲಿ ಸಂತ್ರಸ್ತೆಯೇ ಹೇಳಿಕೊಂಡಿದ್ದಾರೆ. ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲವೆಂದಿದ್ದಾರೆ. ನಮ್ಮ ಕುಟುಂಬಕ್ಕೆ ತೊಂದರೆಯಾದರೆ ಅವರೇ ಹೊಣೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸಂಬಂಧಿಕರ ಮನೆಯಲ್ಲಿದ್ದೇನೆ. ಬೇಗ ಬರುತ್ತೇನೆ ಎಂದೂ ಹೇಳಿದ್ದಾರೆ. ಯಾರೂ ಬೆದರಿಕೆ ಹಾಕಿಲ್ಲ, ಬಲವಂತವಾಗಿಯೂ ಕರೆದೊಯ್ದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೀಗೆಲ್ಲಾ ಸಂತ್ರಸ್ತೆಯೇ ವಿಡಿಯೊ ಮೂಲಕ ಹೇಳಿದ್ದಾರೆ. ಹಾಗಾಗಿ ಕಿಡ್ನ್ಯಾಪ್ ಹೇಗೆ ಆಗುತ್ತದೆ. ಈ ಕಾರಣಕ್ಕಾಗಿ ರೇವಣ್ಣ ಅವರಿಗೆ ಜಾಮೀನು ನೀಡಬೇಕು ಎಂದು ಸಿ.ವಿ. ನಾಗೇಶ್‌ ಕೋರಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಚುನಾವಣಾ ತಕರಾರು ಅರ್ಜಿ ತರುವುದು ಬೇಡ. ಎಸ್‌ಪಿಪಿ ವಾದದ ಅಂಶಗಳನ್ನು ಆಕ್ಷೇಪಿಸಿ ರೇವಣ್ಣ ಪರ ವಕೀಲರು ವಾದ ಮಂಡಿಸಿದರು. ಎಚ್.ಡಿ.ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಸಾಬೀತಾಗಿಲ್ಲ. ಹಿಂದಿನ ಕೇಸ್‌ಗಳು ಸಾಬೀತಾಗಿದ್ದರೆ ಯಾಕೆ ಎಲ್ಲವೂ ಬಿ ರಿಪೋರ್ಟ್ ಆಗುತ್ತಿತ್ತು? ಎಂದು ಪ್ರಶ್ನೆ ಮಾಡಿದರು.

ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಎಸ್‌ಐಟಿ ಲೋಪವೆಸಗಿದೆ. ಅದರಲ್ಲಿ ಸಂತ್ರಸ್ತೆಯ ಹೇಳಿಕೆ ಒಂದು ಪ್ಯಾರಾ ಇದೆ. ಅದು ಬಿಟ್ಟು ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಆರೋಪಿ ಹೇಳಿಕೆಯೇ ಇದೆ. ಸಂತ್ರಸ್ತ ಮಹಿಳೆಯ ಹೇಳಿಕೆ ಒಂದು ಪ್ಯಾರಾ ಬಿಟ್ಟರೆ ಬೇರೆ ಇಲ್ಲವೇ ಇಲ್ಲ. ಯಾವಾಗಲೂ ಹೇಳಿಕೆ ದಾಖಲು ಮಾಡಿಕೊಳ್ಳುವುದೇ ಎಸ್‌ಐಟಿ ಕೆಲಸನಾ? ಸಂತ್ರಸ್ತೆ ಏನು ಹೇಳ್ತಾರೆ? ಏನು ಹೇಳಲ್ಲ ಅಂತಾ ಹೇಳಿಕೆ ದಾಖಲಾಗಬೇಕು. ಆಕೆ ಎಸ್‌ಐಟಿ ಸುಪರ್ದಿಯಲ್ಲಿರುವಾಗ ಏನನ್ನೂ ಮಾಡಿಲ್ಲ. ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿರುವಂತೆ ಯಾವುದೇ ಸಾಕ್ಷಿ ಸಂಗ್ರಹಿಸಿಲ್ಲ. ಆದರೆ, ನ್ಯಾಯಾಲಯಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಿದ್ದಾರೆ ಎಂದು ನಾಗೇಶ್ ಹೇಳಿದರು.

ಇದನ್ನೂ ಓದಿ: Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Continue Reading

ಮಳೆ

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather Forecast: ರಾಜ್ಯದ ವಿವಿಧೆಡೆ ಮಳೆ ಅಬ್ಬರ (Heavy Rain)ಮುಂದುವರಿದಿದೆ. ಮೇ 14ರಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಹವಾಮಾನ ಇಲಾಖೆಯು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case Devaraje Gowda
ಕ್ರೈಂ6 mins ago

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Federation Cup
ಕ್ರೀಡೆ13 mins ago

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Israel-Hamas Conflict
ವಿದೇಶ20 mins ago

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

IPL 2024 Points Table
ಕ್ರೀಡೆ37 mins ago

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

jayanagar murder case
ಕ್ರೈಂ41 mins ago

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Viral News
ದೇಶ1 hour ago

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

HD Revanna Bail
ಪ್ರಮುಖ ಸುದ್ದಿ1 hour ago

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Kalki 2898 AD
ಸಿನಿಮಾ2 hours ago

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

mumbai hoarding collapse
ಪ್ರಮುಖ ಸುದ್ದಿ2 hours ago

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Vertigo Problem
ಆರೋಗ್ಯ3 hours ago

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ15 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ15 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ16 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ16 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ22 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌