ವಿಸ್ತಾರ TOP 10 NEWS | ಮತಾಂತರ ನಿಷೇಧಕ್ಕೆ ಸಮ್ಮತಿಯಿಂದ ಫೆಡರರ್‌ ವಿದಾಯದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ಮತಾಂತರ ನಿಷೇಧಕ್ಕೆ ಸಮ್ಮತಿಯಿಂದ ಫೆಡರರ್‌ ವಿದಾಯದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

TOP 10 NEWS 15092022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಜಾರಿಯಾಗಿ, ವಿಧಾನಸಭೆ ಅನುಮೋದನೆ ಪಡೆದಿದ್ದ ಮತಾಂತರ ನಿಷೇಧ ಕಾಯ್ದೆ ವಿಧಾನ ಪರಿಷತ್‌ನಲ್ಲಿ ಒಪ್ಪಿಗೆ ಪಡೆದು ಈಗ ಅಧಿಕೃತವಾಗಿದೆ. ಇನ್ನು ರಾಜ್ಯಪಾಲರ ಅನುಮೋದನೆಯೊಂದೇ ಬಾಕಿ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಚರ್ಚೆ ನಡೆಸಲು ವಿಧಾನಸಭೆ ಒಪ್ಪಿದೆ, ರಾಜ್ಯಾದ್ಯಂತ ಎಂಜಿನಿಯರ್ಸ್‌ ಡೇ ಹಾಗೂ ಸರ್‌. ಎಂ.ವಿ. ಜನ್ಮದಿನ ಆಚರಿಸಲಾಗಿದೆ, ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಗೆ ರಾಜ್ಯ ಸರ್ಕಾರ ಆಘಾತ ನೀಡಿದೆ, 20 ಗ್ರ್ಯಾನ್‌ಸ್ಲಾಮ್‌ ವಿಜೇತ ಟೆನ್ನಿಸ್‌ ಆಟಗಾರ ರೋಜರ್‌ ಫೆಡರರ್‌ ವಿದಾಯ ಘೋಷಿಸಿದ್ದಾರೆ ಎನ್ನುವುದು ಸೇರಿ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ಮತಾಂತರ ನಿಷೇಧ ಕಾಯಿದೆ ಈಗ ಅಧಿಕೃತ: ಕಾಂಗ್ರೆಸ್‌, ಜೆಡಿಎಸ್‌ ಸಭಾತ್ಯಾಗದ ನಡುವೆ ಮೇಲ್ಮನೆಯಲ್ಲೂ ವಿಧೇಯಕ ಪಾಸ್‌
ಬಲವಂತದ ಮತಾಂತರ, ಆಮಿಷದ ಮತಾಂತರಗಳನ್ನು ತಡೆಯುವ ಉದ್ದೇಶದ್ದೆಂದು ಹೇಳಲಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ (Anti conversion bill)ಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರ ಸಭಾತ್ಯಾಗದ ನಡುವೆ ವಿಧಾನ ಪರಿಷತ್‌ ಅಂಗೀಕಾರ ನೀಡಿದೆ. ಇದರೊಂದಿಗೆ ವಿಧಾನಸಭೆಯಲ್ಲಿ ಈಗಾಗಲೇ ಅನುಮೋದನೆ ಪಡೆದು ಸುಗ್ರೀವಾಜ್ಞೆಯ ಬಲದಲ್ಲಿ ಜಾರಿಯಲ್ಲಿದ್ದ ಈ ವಿಧೇಯಕ ಅಧಿಕೃತ ಕಾನೂನಾಗಿ ಜಾರಿಗೆ ಬರಲಿದೆ. ವಿಧೇಯಕವನ್ನು ವಿರೋಧಿಸಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರು ಸಭಾತ್ಯಾಗ ಮಾಡಿದ ಬಳಿಕ ಧ್ವನಿಮತದಿಂದ ಅಂಗೀಕಾರವನ್ನು ನೀಡಲಾಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಅಧಿವೇಶನದ ಇನ್ನಷ್ಟು ಸುದ್ದಿಗಳು 👇🏾
🔴PSI Scam | ಕಾನೂನು ಸಚಿವರ Law ಪಾಯಿಂಟ್‌ಗೆ ತಲೆಯಾಡಿಸಿ ಸುಮ್ಮನಾದ ಲಾಯರ್‌ ಸಿದ್ದರಾಮಯ್ಯ !
🔴ʼಗೋಡೌನ್‌ʼ ರೀತಿ ರಂಗಮಂದಿರ ನಿರ್ಮಾಣ | ಕಾರ್ಯಾಂಗದ ಮೇಲೆ ಸ್ಪೀಕರ್‌ ಬೇಸರ; ಹೊಸ ನೀತಿ ಘೋಷಿಸಿದ ಸುನಿಲ್‌ಕುಮಾರ್‌

2. ಸರ್.ಎಂ.ವಿ.ಗೆ ಸರ್ಕಾರದ ಗೌರವ: ಮುಂದಿನ ವರ್ಷದ ಆಚರಣೆ ಘೋಷಿಸಿದ ಸಿಎಂ ಬೊಮ್ಮಾಯಿ
ಎಂಜಿನಿಯರ್ಸ್‌ ದಿನದಂದು ಭಾರತರತ್ನ ಸರ್‌ ಎಂ. ವಿಶ್ವೇಶ್ವರಯ್ಯ ಅವರಿಗೆ ರಾಜ್ಯ ಸರ್ಕಾರ ವಿಶೇಷ ಗೌರವ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಬೆಂಗಳೂರಿನಲ್ಲಷ್ಟೆ ಅಲ್ಲದೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಆಯೋಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಅರಣ್ಯಗಳ ಸಿವಿಲ್​ ಎಂಜಿನಿಯರ್​​ಗಳು ಯಾರೆಂದು ಗೊತ್ತಾ? ಅವರಿಗೂ ಶುಭ ಕೋರಬಹುದಾ?
ನೀವು ನೆನಪಿನಲ್ಲಿಟ್ಟುಕೊಳ್ಳಲೇಬೇಕಾದ ವಿಶ್ವೇಶ್ವರಯ್ಯರ ಹತ್ತು ಹೇಳಿಕೆಗಳು ಇವು

3. ಉತ್ತರ ಪ್ರದೇಶದಲ್ಲಿ ದಲಿತ ಸೋದರಿಯರ ಬರ್ಬರ ಹತ್ಯೆ: ಶವ ಪರೀಕ್ಷೆ ವರದಿಯಲ್ಲೇನಿದೆ?
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಹತ್ಯೆಯಾದ ದಲಿತ ಸಹೋದರಿಯ ಪೋಸ್ಟ್ ಮಾರ್ಟಮ್​ ವರದಿ ಹೊರಬಿದ್ದಿದೆ. ಇವರಿಬ್ಬರ ಮೇಲೆ ಅತ್ಯಾಚಾರವಾಗಿದ್ದು ಶವಪರೀಕ್ಷೆಯಲ್ಲಿ ದೃಢಪಟ್ಟಿದೆ. ಈಗಾಗಲೇ ಬಂಧಿತರಾಗಿರುವ ಆರೋಪಿಗಳಾದ ಚೋಟು, ಜುನೈದ್, ಸೊಹೈಲ್, ಹಫೀಜುಲ್, ಕರಿಮುದ್ದೀನ್ ಮತ್ತು ಆರಿಫ್ ತಾವು ರೇಪ್​ ಮಾಡಿದ್ದಾಗಿ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ ಮತ್ತು ತಾವೇನೆಲ್ಲ ಮಾಡಿದೆವು ಎಂಬುದನ್ನೂ ವಿವರಿಸಿದ್ದಾರೆ. ಆರು ಮಂದಿ ಆರೋಪಿಗಳು ನೀಡಿದ ವಿವರಣೆಯನ್ನು ಪೊಲೀಸರು ಮಾಧ್ಯಮಗಳ ಎದುರು ಬಿಚ್ಚಿಟ್ಟಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. super speciality hospital | ಉತ್ತರ ಕನ್ನಡ ಜಿಲ್ಲೆ ಬೇಡಿಕೆ ತಿರಸ್ಕರಿಸಿದ ಸರ್ಕಾರ, ಆರ್ಥಿಕ ಇಲಾಖೆ ತಣ್ಣೀರು
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ (Super specialty hospital) ಸ್ಥಾಪಿಸಬೇಕು ಎಂದು ಆಗ್ರಹಿಸಿ ನಡೆದ ದೊಡ್ಡ ಮಟ್ಟದ ಹೋರಾಟಕ್ಕೂ ಫಲ ಸಿಕ್ಕಿಲ್ಲ. ರಾಜ್ಯ ಸರ್ಕಾರ ಈ ಭಾಗದ ಜನರು ಮತ್ತು ಬೆಂಗಳೂರಿನಲ್ಲಿರುವ ಉತ್ತರ ಕನ್ನಡವಾಸಿಗಳು ಮಾಡಿದ ಸಾಕಷ್ಟು ಪ್ರಯತ್ನಗಳು, ಕೊಟ್ಟ ಮನವಿಗಳು, ರಕ್ತದಲ್ಲಿ ಬರೆದ ಪತ್ರಗಳು ಯಾವುದೂ ಸದ್ಯಕ್ಕೆ ವರ್ಕ್‌ ಆದಂತೆ ಕಾಣುತ್ತಿಲ್ಲ. ರಾಜ್ಯ ಸರ್ಕಾರ ಉತ್ತರ ಕನ್ನಡದ ಜನರ ಬೇಡಿಕೆಗೆ ತಣ್ಣೀರು ಹಾಕಿದೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟಿಲ್ಲ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. ವಿಮ್ಸ್‌ ಆಸ್ಪತ್ರೆ ಸಾವಿನ ಹೊಣೆ ಹೊರದ ಸರ್ಕಾರ: ಆಕಸ್ಮಿಕವಲ್ಲ, ಕೊಲೆ ಎಂದ ಸಿದ್ದರಾಮಯ್ಯ
ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಉಂಟಾದ ಸಾವುಗಳು ಅಲ್ಲಿನ ವಿದ್ಯುತ್ ಕಡಿತದಿಂದ ಆಗಿದೆ ಎಂಬ ಕುರಿತು ಚರ್ಚೆ ನಡೆಯುತ್ತಿರುವಾಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಳಸಿದ ಪದಪ್ರಯೋಗ ಕೆಲಹೊತ್ತು ವಾಗ್ವಾದಕ್ಕೆ ಕಾರಣವಾಯಿತು.
ಹಳೆ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ವಿದ್ಯುತ್‌ ವ್ಯತ್ಯಯ ಉಂಟಾದ ಸಂದರ್ಭದಲ್ಲಿ ವೆಂಟಿಲೇಟರ್ ಗೆ ವಿದ್ಯುತ್‌ ಸಂಪರ್ಕ ಕಡಿತವಾಗಿ ಮೃತಪಟ್ಟಿದ್ದಾರೆ. ವಿದ್ಯುತ್‌ ಇಲ್ಲದ ಸಂದರ್ಭದಲ್ಲಿ ಜನರೇಟರ್‌ ಅನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕಿದ್ದು ಸರ್ಕಾರದ ಕರ್ತವ್ಯವಾಗಿತ್ತು. ಆದರೆ ವಿದ್ಯುತ್‌ ವೈಫಲ್ಯವಾಗಿ ಮೃತಪಟ್ಟಿದ್ದಾರೆ. ಇದು ಸರ್ಕಾರವೇ ರೂಪಿಸಿರುವ ಸಂಚು, ಕೊಲೆ. ಇದಕ್ಕೆ ಹೊಣೆ ಹೊತ್ತು ಕೂಡಲೆ ಪರಿಹಾರ ನೀಡಬೇಕು ಎಂದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಬಳ್ಳಾರಿ ವಿಮ್ಸ್ ಆಸ್ಪತ್ರೆ ವಿದ್ಯುತ್‌ ಸಮಸ್ಯೆ: ಇಬ್ಬರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಲು ಸಮಿತಿ ರಚನೆ

6. Hijab Row | ಸಮವಸ್ತ್ರ ಕುರಿತು ನಿಯಮ ರೂಪಿಸುವ ಹಕ್ಕು ಶಿಕ್ಷಣ ಸಂಸ್ಥೆಗಳಿಗಿದೆ ಎಂದ ಸುಪ್ರೀಂ ಕೋರ್ಟ್
ಕರ್ನಾಟದಲ್ಲಿ ಉಂಟಾದ ಹಿಜಾಬ್‌ ವಿವಾದದ‌ (Hijab Row) ಕುರಿತು ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. “ಸಮವಸ್ತ್ರದ ಕುರಿತು ನಿಯಮ ರೂಪಿಸುವ ಅಧಿಕಾರ ಶಿಕ್ಷಣ ಸಂಸ್ಥೆಗಳಿಗಿದೆ” ಎಂದು ಹೇಳಿದೆ. ನ್ಯಾಯಾಲಯದ ಅಭಿಪ್ರಾಯವು ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿದಾರರಿಗೆ ಹಿನ್ನಡೆಯುಂಟು ಮಾಡಿದೆ ಎಂದೇ ಹೇಳಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. ಡಿ.ಕೆ. ಶಿವಕುಮಾರ್‌ಗೆ ED ಸಂಕಷ್ಟ | ವಾರದಲ್ಲಿ ಹಾಜರಾಗಲು ಸಮನ್ಸ್‌: ಖಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ
ಅಕ್ರಮ ಹಣ ಸಂಗ್ರಹಣೆ ಹಾಗೂ ವರ್ಗಾವಣೆ ಪ್ರಕರಣಕ್ಕೆ ಸಂಬಂದಿಸಿ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ. ಸೆಪ್ಟೆಂಬರ್‌ 19ರಂದು ಹಾಜರಾಗುವಂತೆ ಹೇಳಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್‌ ಬಂಧನಕ್ಕೊಳಗಾಗಿದ್ದರು ಹಾಗೂ ಅನೇಕ ಬಾರಿ ವಿಚಾರಣೆಗೂ ಹಾಜರಾಗಿದ್ದರು. ಮುಂದಿನ ವಾರದಲ್ಲಿ ಹಾಜರಾಗಿ ವಿಚಾರಣೆ ಎದುರಿಸಿ ಎಂದು ಸಮನ್ಸ್‌ ನೀಡಲಾಗಿದೆ. ಸಮನ್ಸ್‌ ದೊರೆತಿರುವುದನ್ನು ಡಿ.ಕೆ. ಶಿವಕುಮಾರ್‌ ಖಚಿತಪಡಿದ್ದಾರೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: ED ಎಂದರೆ ಜಾರಿ ನಿರ್ದೇಶನಾಲಯ ಅಲ್ಲ; ಹೊಸ ಹೆಸರು ನೀಡಿದ ಕಾಂಗ್ರೆಸ್‌ ನಾಯಕ ಸುರ್ಜೆವಾಲ

modi

8. Modi Birthday | ಮೋದಿ ಫೋಟೊಗೆ ಹಾಲಿನ ಅಭಿಷೇಕ, ಹೋಮ-ಹವನ ನಡೆಸುವಂತಿಲ್ಲ: ಹಾಗಾದರೆ ಏನು ಮಾಡಲಾಗುತ್ತದೆ?
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್‌ಸಿ ಎನ್. ರವಿಕುಮಾರ್ ತಿಳಿಸಿದ್ದಾರೆ. ಮೋದಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕದಂತಹ ಕಾರ್ಯ ಮಾಡಬಾರದು. ಯುವಮೋರ್ಚಾದಿಂದ ಎಲ್ಲ ಜಿಲ್ಲೆಗಳಲ್ಲಿ ಒಟ್ಟು 11 ಸಾವಿರ ಯೂನಿಟ್ ರಕ್ತದಾನ ನಡೆಯಲಿದೆ. ದೇಶದಲ್ಲಿ ಇದೊಂದು ಗಿನ್ನೆಸ್ ದಾಖಲೆ ಆಗಬೇಕು ಎಂಬ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Sukesh Case | ‘ರಕ್ಕಮ್ಮ’ ಜಾಕ್ವೆಲಿನ್, ನೋರಾ ಬಳಿಕ ಇನ್ನೂ 4 ನಟಿಯರ ವಿಚಾರಣೆ ಸಾಧ್ಯತೆ
ಸುಕೇಶ್ ಚಂದ್ರಶೇಖರ್ 200 ಕೋಟಿ ರೂ. ಸುಲಿಗೆ (Sukesh Case) ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಮೂಲದ, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ದಿಲ್ಲಿ ಪೊಲೀಸ್‌ ಆರ್ಥಿಕ ಅಪರಾಧ ವಿಂಗ್ 8 ಗಂಟೆಗಳ ಕಾಲ ತೀವ್ರ ವಿಚಾರಣೆಗೊಳಪಡಿಸಿದೆ. ಈ ವಿಚಾರಣೆ ಬೆನ್ನಲ್ಲೇ ಬಾಲಿವುಡ್‌ನ ಕೆಲವು ನಟ- ನಟಿಯರು ವಿಚಾರಣೆಯ ಭಯವನ್ನು ಎದುರಿಸುತ್ತಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್‌ಗೆ ಒಟ್ಟು ಮೂರು ಸಮನ್ಸ್ ನೀಡಲಾಗಿತ್ತು. ಆಗಸ್ಟ್ 29 ಮತ್ತು ಸೆಪ್ಟೆಂಬರ್ 12ರ ಸಮನ್ಸ್‌ಗೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಅಂತಿಮವಾಗಿ ಅವರು ಗುರುವಾರ ವಿಚಾರಣೆಗೆ ಹಾಜರಾಗಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Roger Federer | ವೃತ್ತಿ ಟೆನಿಸ್‌ಗೆ ವಿದಾಯ ಹೇಳಿದ ದಿಗ್ಗಜ ರೋಜರ್‌ ಫೆಡರರ್‌
೨೦ ಗ್ರ್ಯಾನ್‌ ಸ್ಲಾಮ್ ಪ್ರಶಸ್ತಿಗಳ ವಿಜೇತ ಸ್ವಿಜರ್ಲೆಂಡ್‌ನ ಟೆನಿಸ್ ತಾರೆ ರೋಜರ್‌ ಫೆಡರರ್‌ ವೃತ್ತಿ ಕ್ರೀಡೆಗೆ ಗುರುವಾರ ವಿದಾಯ ಘೋಷಿಸಿದ್ದಾರೆ. ಲೇವರ್‌ ಕಪ್‌ ೨೦೨೨ರ ಬಳಿಕ ಅಂತಾರಾಷ್ಟ್ರೀಯ ಟೆನಿಸ್‌ ಅಂಗಣದಿಂದ ಅವರು ಹೊರಕ್ಕುಳಿಯಲಿದ್ದು, ತಮ್ಮ ನಿವೃತ್ತಿಯ ಕುರಿತು ಸುದೀರ್ಘವಾದ ಪತ್ರವೊಂದನ್ನು ಬರೆದಿದ್ದಾರೆ. ಲೇವರ್‌ ಕಪ್‌ ಸೆಪ್ಟೆಂಬರ್‌೨೩ರಿಂದ ಲಂಡನ್‌ನಲ್ಲಿ ನಡೆಯಲಿದ್ದು, ATP ಟೂರ್‌ನ ಈ ಟೆನಿಸ್‌ ಟೂರ್ನಿ ಅವರ ವೃತ್ತಿ ಟೆನಿಸ್‌ನ ಕೊನೇ ಸ್ಪರ್ಧೆಯಾಗಿದೆ. ತಮ್ಮ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಧನ್ಯವಾದ ಹೇಳಿರುವ ಅವರು, ೪೧ ವರ್ಷವಾಗಿರುವುದರಿಂದ ಇದು ವಿದಾಯಕ್ಕೆ ಸೂಕ್ತ ಕಾಲ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

Bengaluru News: ಪಿಎಂ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದಲ್ಲಿ ಅಸಾಧಾರಣ ಅಭಿವೃದ್ಧಿ ಆಗಿದ್ದು, ಪ್ರಪಂಚದ ಎಲ್ಲ ದೇಶಗಳ ಪ್ರೀತಿ, ವಿಶ್ವಾಸ, ಗೌರವವನ್ನು ಭಾರತ ಪಡೆಯುವಂತಾಗಿದೆ. ಭಾರತದ ಜತೆ ವ್ಯಾಪಾರ, ವಹಿವಾಟು, ಸ್ನೇಹಕ್ಕಾಗಿ ಪ್ರಪಂಚದ ಅನೇಕ ದೇಶಗಳು ಹಾತೊರೆಯುತ್ತಿವೆ. ಇದೆಲ್ಲಕ್ಕೂ ಮೋದಿ ಅವರ ಆಡಳಿತವೇ ಕಾರಣ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.

VISTARANEWS.COM


on

Former DCM Govinda Karajola pressmeet
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಭಿವೃದ್ಧಿ ಎಂಬುದು ಕೇವಲ ಭಾಷಣಕ್ಕೆ ಸೀಮಿತ ಆಗಲಿಲ್ಲ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅವರು ಕಾರಣಕರ್ತರಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ (Bengaluru News) ತಿಳಿಸಿದರು.

ನಗರದ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದಲ್ಲಿ ಅಸಾಧಾರಣ ಅಭಿವೃದ್ಧಿ ಆಗಿದೆ. ಪ್ರಪಂಚದ ಎಲ್ಲ ದೇಶಗಳ ಪ್ರೀತಿ, ವಿಶ್ವಾಸ, ಗೌರವವನ್ನು ಭಾರತ ಪಡೆಯುವಂತಾಗಿದೆ. ಭಾರತದ ಜತೆ ವ್ಯಾಪಾರ, ವಹಿವಾಟು, ಸ್ನೇಹಕ್ಕಾಗಿ ಪ್ರಪಂಚದ ಅನೇಕ ದೇಶಗಳು ಹಾತೊರೆಯುತ್ತಿವೆ. ಇದೆಲ್ಲಕ್ಕೂ ಮೋದಿ ಅವರ ಆಡಳಿತವೇ ಕಾರಣ ಎಂದು ತಿಳಿಸಿದರು.

ಇದನ್ನೂ ಓದಿ: SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ನನ್ನ ಜೀವನದಲ್ಲಿ ಇದೊಂದು ಸುವರ್ಣಾವಕಾಶ ಎಂದು ಭಾವಿಸುವೆ. ನರೇಂದ್ರ ಮೋದಿ ಅವರು ಕಳೆದ 23 ವರ್ಷಗಳಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದು, ಗುಜರಾತ್ ಮುಖ್ಯಮಂತ್ರಿಗಳಾಗಿ, ದೇಶದ ಪ್ರಧಾನಮಂತ್ರಿಗಳಾಗಿ ದೇಶದ ಅಭಿವೃದ್ಧಿ ಮಾಡಿದ್ದಾರೆ. ಅಲ್ಲದೆ ಕಳಂಕರಹಿತ ರಾಜಕಾರಣ ಮಾಡಿದ ಏಕೈಕ ಶ್ರೇಷ್ಠ ವ್ಯಕ್ತಿ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಒಂದೇ ಪಕ್ಷದವರು 60 ವರ್ಷಗಳ ಕಾಲ ಆಡಳಿತ ಮಾಡಿದ್ದಾರೆ. ಅವರು ಕಳಂಕ ಹೊತ್ತುಕೊಂಡರು. ಆದರೆ ಮೋದಿ ಅವರು ದೇಶದ ಅಭಿವೃದ್ಧಿ ಮಾಡಿ ಪ್ರಪಂಚದ ಅನೇಕ ದೇಶಗಳ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ. ಅವರ ಜತೆ ಲೋಕಸಭಾ ಸದಸ್ಯನಾಗಿ ಕೆಲಸ ಮಾಡುವ ಅವಕಾಶ ನನಗೆ ಲಭಿಸುತ್ತಿರುವುದು ಜೀವನದ ಸುವರ್ಣಾವಕಾಶ ಎನ್ನಲು ಕಾರಣ ಎಂದು ವಿವರಿಸಿದರು.

ಮೋದಿ ಅವರ ನೇತೃತ್ವದ ಕಾರ್ಯಕ್ರಮಗಳು, ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮೂಲಕ ಮತಯಾಚನೆ ಮಾಡಲಿದ್ದೇವೆ. ಜೆಡಿಎಸ್ ಪಕ್ಷವು ಎನ್‍ಡಿಎ ತೆಕ್ಕೆಗೆ ಬಂದಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಇದನ್ನೂ ಓದಿ: Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ರುದ್ರಯ್ಯ, ಲಕ್ಷ್ಮೀನಾರಾಯಣ್, ರಾಜ್ಯ ವಕ್ತಾರರಾದ ಮೋಹನ್ ವಿಶ್ವ, ಸುರಭಿ ಹೋದಿಗೆರೆ, ವೆಂಕಟೇಶ್ ದೊಡ್ಡೇರಿ ಇದ್ದರು.

Continue Reading

ಪ್ರಮುಖ ಸುದ್ದಿ

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Women Slapped : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Women Slapped
Koo

ಬೆಂಗಳೂರು: ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ (PTI) ಮಹಿಳಾ ವರದಿಗಾರರ (Female Journalist) ಮೇಲೆ ಮತ್ತೊಂದು ಸುದ್ದಿ ಸಂಸ್ಥೆ ಎಎನ್ಐನಲ್ಲಿ (ANI) ಕೆಲಸ ಮಾಡುತ್ತಿರುವ ಪತ್ರಕರ್ತನೊಬ್ಬ (Male Journalist) ದೈಹಿಕವಾಗಿ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಉಪ ಮುಖ್ಯಮಂತ್ರಿ ಡಿ . ಕೆ. ಶಿವಕುಮಾರ್ ಅವರು ನಡೆಸಿದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇಬ್ಬರೂ ವರದಿಗಾರರು ತೀವ್ರ ವಾಗ್ವಾದ ನಡೆಸಿದ್ದು, ಅಂತಿಮವಾಗಿ ಎಎನ್ಐ ವರದಿಗಾರ ಪಿಟಿಐ ವರದಿಗಾರ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇತರ ಸುದ್ದಿ ಸಂಸ್ಥೆಗೆ ಸೇರಿದವರು ಎಎನ್ಐ ವರದಿಗಾರನನ್ನು ದೂರ ತಳ್ಳಿ ಇನ್ನಷ್ಟು ಗಲಾಟೆಯಾಗದಂತೆ ನೋಡಿಕೊಂಡಿದ್ದಾರೆ. ಇವೆಲ್ಲವು ವಿಡಿಯೊದಲ್ಲಿ ದಾಖಲಾಗಿದೆ.

“ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಟಿಐ ಯುವ ವರದಿಗಾರ್ತಿಯೊಬ್ಬರ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಲೈಂಗಿಕ ಕಿರುಕುಳ ನೀಡಲಾಗಿದೆ. ಇದು ಎಎನ್ಐ ವರದಿಗಾರನ ಅಸಹ್ಯಕರ ವರ್ತನೆ. ಎಎನ್ಐ ತನ್ನ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ಖಂಡಿಸುತ್ತದೆಯೇ? ಎಂದು ಪಿಟಿಐ ವಿಡಿಯೊ ಸಮೇತ ಟ್ವೀಟ್ ಮಾಡಿದೆ.

ಪಿಟಿಐ ಈ ಘಟನೆಯನ್ನು ಖಂಡಿಸಿದೆ ಮತ್ತು ವೀಡಿಯೊದಲ್ಲಿ ಕಾಣಿಸಿಕೊಂಡ ತಮ್ಮ ಉದ್ಯೋಗಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಎನ್ಐ ಆಡಳಿತ ಮಂಡಳಿಗೆ ಮನವಿ ಮಾಡಿದೆ. ಎಫ್ಐಆರ್ ಕೂಡ ದಾಖಲಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

“ನಮ್ಮ ಆಡಳಿತ ಮಂಡಳಿ ಮತ್ತು ಪತ್ರಕರ್ತೆಯ ಸಹೋದ್ಯೋಗಿಗಳು ಆಕ್ರೋಶಗೊಂಡಿದ್ದಾರೆ ಮತ್ತು ಈ ಅಪ್ರಚೋದಿತ ಹಲ್ಲೆಯನ್ನು ಬಲವಾಗಿ ಖಂಡಿಸಿದ್ದಾರೆ. ಪಿಟಿಐ ತನ್ನ ಉದ್ಯೋಗಿಗಳನ್ನು ರಕ್ಷಿಸಲು ಬದ್ಧವಾಗಿದೆ. ಆಘಾತಕಾರಿ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ. ಪಿಟಿಐ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಿದ್ದೇವೆ” ಎಂದು ಪಿಟಿಐ ಹೇಳಿಕೆ ಬಿಡುಗಡೆ ಮಾಡಿದೆ.

ಘಟನೆಯ ಬಗ್ಗೆ ಅನೇಕ ನಾಯಕರು ಕಳವಳ ವ್ಯಕ್ತಪಡಿಸಿದರು ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸುಂದರ್, “ಇಂದು ಬೆಂಗಳೂರಿನಲ್ಲಿ ಪಿಟಿಐ ಪತ್ರಕರ್ತೆಯನ್ನು ದೈಹಿಕವಾಗಿ ಮತ್ತು ಮೌಖಿಕವಾಗಿ ನಿಂದಿಸಿದ ಪುರುಷ ಪತ್ರಕರ್ತನ ನಡವಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಯಸುತ್ತೇನೆ ಎಂದು ಬರೆದಿದ್ದಾರೆ.

ಏತನ್ಮಧ್ಯೆ, ಎಎನ್ಐ ವರದಿಗಾರ ತನ್ನ ಮೇಲೆ ಮೊದಲು ಮಹಿಳಾ ಪತ್ರಕರ್ತೆ ಹಲ್ಲೆ ನಡೆಸಿದ್ದರು ಎಂದು ಪ್ರತಿ ಎಫ್ಐಆರ್ ದಾಖಲಿಸಲಿದ್ದಾರೆ. ಅದಕ್ಕೆ ಪೂರಕವಾಗಿ ಪರಚಿದ ಮುಖದ ಚಿತ್ರ ಹಾಕಿದ್ದಾರೆ. ಆದಾಗ್ಯೂ, ಎಎನ್ಐ ಪತ್ರಕರ್ತ ನವೀನ್ ಕಪೂರ್ ನೀಡಿದ ಸ್ಪಷ್ಟೀಕರಣದ ಪ್ರಕಾರ, ಉದ್ಯೋಗದಾತರು ಅವರನ್ನು ತಾತ್ಕಾಲಿಕವಾಗಿ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

Continue Reading

ಕರ್ನಾಟಕ

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Road Accident: ಟಾಟಾ ಏಸ್‌ ವಾಹನದ ಟೈರ್‌ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಹಲಗೇರಿ ಬಳಿ ಈ ಘಟನೆ ನಡೆದಿದೆ.

VISTARANEWS.COM


on

Tata Ace vehicle overturned Two persons dead five seriously injured
Koo

ಹಾವೇರಿ: ಟಾಟಾ ಏಸ್‌ ವಾಹನದ ಟೈರ್‌ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಹಲಗೇರಿ ಬಳಿ (Road Accident) ಗುರುವಾರ ಸಂಜೆ ಈ ಘಟನೆ ನಡೆದಿದೆ.

ಲಕ್ಷ್ಮಣ ಗುಡ್ಡಪ್ಪ ಕುಳಗಟ್ಟಿ (50), ಸೈನಾಜಬೇಗಂ ಅಮಾನುಲ್ಲಾ (30) ಮೃತ ದುರ್ದೈವಿಗಳು. ಗದಿಗೆಮ್ಮ ಕುಳಗಟ್ಟಿ (40), ಬೀರಪ್ಪ ಬುಳ್ಳಾಪುರ (80), ಅಮಾನುಲ್ಲಾ ದಿವಾನ ಅಜ್ಜಣ್ಣನವರ (38), ಅನಿಶಾಬಾನು ದಿವಾನ ಅಜ್ಜಣ್ಣನವರ (11), ಜೀಶಾನ ಗುಡ್ಡಮ್ಮನವರ (9) ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ಚಿಕ್ಕಕಬ್ಬಾರ ಗ್ರಾಮದಿಂದ ರಾಣೆಬೆನ್ನೂರಿನ ಎಪಿಎಂಸಿಗೆ ಸೂರ್ಯಕಾಂತಿ ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹಲಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Continue Reading

ಬೆಂಗಳೂರು

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Bengaluru News: ಭಯೋತ್ಪಾದನೆ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಟೀಕಿಸಿದ್ದಾರೆ.

VISTARANEWS.COM


on

BJP State Vice President Malavika Avinash latest statement
Koo

ಬೆಂಗಳೂರು: ಕರ್ನಾಟಕವು (Karnataka) ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಕಳವಳ (Bengaluru News) ವ್ಯಕ್ತಪಡಿಸಿದರು.

ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆಯ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ ಎಂದು ಟೀಕಿಸಿದರು.

ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಮತ್ತು ಆ ಸ್ಫೋಟದ ಕುರಿತು ಎನ್‍ಐಎ ತನಿಖೆ ನಡೆಯುತ್ತಿದೆ. ಮೊದಲಿಗೆ ಪೊಲೀಸ್ ತನಿಖೆ ನಡೆಯುತ್ತಿತ್ತು. ಇದೀಗ ಸಿಸಿಬಿ ಮತ್ತು ಎನ್‍ಐಎ ತನಿಖೆ ನಡೆಯುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

ಎನ್‍ಐಎ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ನಿನ್ನೆ ದಾಳಿ ನಡೆಸಿದೆ. ಶಿವಮೊಗ್ಗದವರಾದ ಇಬ್ಬರು ಪ್ರಮುಖ ಆರೋಪಿಗಳ ಕುರಿತು ಮಾಹಿತಿ ಲಭಿಸಿದೆ. ಇಲ್ಲಿನ ಸ್ಫೋಟಕ್ಕೂ ಮಂಗಳೂರಿನ ಸ್ಫೋಟಕ್ಕೂ ಸಂಬಂಧ ಇದೆ ಎಂದು ತಿಳಿಸಿದರೂ, ಮುಖ್ಯಮಂತ್ರಿಯವರು ಅದನ್ನು ಅಲ್ಲಗಳೆದಿದ್ದಾರೆ ಎಂದು ಆರೋಪಿಸಿದ ಅವರು, ಭಯೋತ್ಪಾದನೆ ನಿಗ್ರಹಕ್ಕೆ ಪ್ರಯತ್ನ ಮಾಡದೆ ಸರ್ಕಾರವು ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ತಿಳಿಸಿದರು.

ತರಬೇತಿ ಪಡೆದದವರೇ ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ್ದಾರೆ. ಇದಕ್ಕೆ ಪೂರ್ವ ತಯಾರಿ ಮಾಡಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಸರ್ಕಾರವು ತುಷ್ಟೀಕರಣದ ರಾಜಕಾರಣ ಮಾಡುತ್ತಿರುವಂತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್ ಇತಿಹಾಸದಲ್ಲಿ ವಿಭಿನ್ನ ಸಾಧನೆ ಮಾಡಿದ ಎಸ್​ಆರ್​​ಎಚ್​​ ಬೌಲರ್​ ಉನಾದ್ಕಟ್​

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾ ರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಗೋವಿಂದ ಮತ್ತು ಬಿಬಿಎಂಪಿ ಮಾಜಿ ಸದಸ್ಯೆ ಹೇಮಲತಾ ಶೇಟ್ ಉಪಸ್ಥಿತರಿದ್ದರು.

Continue Reading
Advertisement
Former DCM Govinda Karajola pressmeet
ಬೆಂಗಳೂರು4 mins ago

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

crime news
ಕ್ರೈಂ17 mins ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ20 mins ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ34 mins ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Xiaomi Car in China
ಪ್ರಮುಖ ಸುದ್ದಿ1 hour ago

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

viral video
ವೈರಲ್ ನ್ಯೂಸ್1 hour ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

BJP State Vice President Malavika Avinash latest statement
ಬೆಂಗಳೂರು1 hour ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 20241 hour ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Uttara Kannada Lok Sabha constituency Congress candidate Dr Anjali Nimbalkar latest statement
ಉತ್ತರ ಕನ್ನಡ2 hours ago

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Rameswaram cafe bomb blast case
ಬೆಂಗಳೂರು2 hours ago

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20249 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202410 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ18 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌