ವಿಸ್ತಾರ TOP 10 NEWS: ಪಟ್ಟು ಬಿಡದ ಸರ್ಕಾರಿ ನೌಕರರು, ದೆಹಲಿ ಡಿಸಿಎಂ ಸಿಸೋಡಿಯಾ ರಾಜೀನಾಮೆ ಇತ್ಯಾದಿ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS: ಪಟ್ಟು ಬಿಡದ ಸರ್ಕಾರಿ ನೌಕರರು, ದೆಹಲಿ ಡಿಸಿಎಂ ಸಿಸೋಡಿಯಾ ರಾಜೀನಾಮೆ ಇತ್ಯಾದಿ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news-govt employees demands not met to sisodia resignation and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Govt Employees Strike: ಸಿಎಸ್‌ ಸಂಧಾನ ವಿಫಲ; ಮನವೊಲಿಕೆಗೂ ಬಗ್ಗದ ಸರ್ಕಾರಿ ನೌಕರರ ಸಂಘ, ಸರ್ಕಾರದ ಅಧಿಕೃತ ಆದೇಶಕ್ಕೆ ಪಟ್ಟು
7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವ ಬದ್ಧತೆಯನ್ನು ಸರ್ಕಾರ ದೃಢವಾಗಿ ಪ್ರದರ್ಶಿಸಬೇಕು ಎಂದು ಆಗ್ರಹಿಸಿ ಮಾರ್ಚ್‌ ಒಂದರಿಂದ ಕರೆ ನೀಡಲಾಗಿರುವ ಸರ್ಕಾರಿ ನೌಕರರ ಮುಷ್ಕರವನ್ನು ಮನವೊಲಿಸಿ ತಡೆಯುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಪ್ರಯತ್ನ ವಿಫಲಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Govt Employees Strike : ಸರ್ಕಾರಿ ನೌಕರರ ಮುಷ್ಕರ ಹೇಗಿರಲಿದೆ? ನೌಕರರು ಪ್ರತಿಭಟನೆ ವೇಳೆ ಏನು ಮಾಡಲಿದ್ದಾರೆ?
7ನೇ ವೇತನ ಆಯೋಗದ (7th pay commission) ವರದಿಯ ಜಾರಿಯು ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಮಧ್ಯಂತರ ಪರಿಹಾರ ಘೋಷಿಸಬೇಕು ಹಾಗೂ ಹಳೆ ಪಿಂಚಣಿ ಯೋಜನೆಯನ್ನು (OPS) ಜಾರಿಗೊಳಿಸಲೇಬೇಕೆಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರರು ಮಾರ್ಚ್‌ 1 ರಿಂದ ಮುಷ್ಕರ ನಡೆಸುವುದಾಗಿ ಪ್ರಕಟಿಸಿದ್ದಾರೆ. ಈ ಪ್ರತಿಭಟನೆ (Govt Employees Strike) ಹೇಗಿರುತ್ತದೆ? ನೌಕರರು ಈ ಪ್ರತಿಭಟನೆ ಸಂದರ್ಭದಲ್ಲಿ ಏನು ಮಾಡಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Molasses Scam: ಕಾಕಂಬಿ ರಫ್ತು ಹಗರಣದಲ್ಲಿ ಸಿಎಂ, ಕೇಂದ್ರ ಸಚಿವರು ಭಾಗಿ: ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ ಆರೋಪ
ಕರ್ನಾಟಕದಲ್ಲೇ ಕಾಕಂಬಿ ( Molasses) ಕೊರತೆ ಇದ್ದರೂ ಗೋವಾ ಬಂದರಿನ ಮೂಲಕ ರಫ್ತು ಮಾಡುವ ಮೂಲಕ ಭ್ರಷ್ಟಾಚಾರ ಹಾಗೂ ಬೊಕ್ಕಸಕ್ಕೆ ತೆರಿಗೆ ನಷ್ಟ ಉಂಟು ಮಾಡಲಾಗಿದೆ ಎಂದು ಕಾಂಗ್ರೆಸ್‌ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Molasses Scam: ಕಾಕಂಬಿ ಹಗರಣ ಆರೋಪದ ಕುರಿತು ಸಿಎಂ ಬೊಮ್ಮಾಯಿ, ಅಬಕಾರಿ ಸಚಿವ ಗೋಪಾಲಯ್ಯ ಪ್ರತಿಕ್ರಿಯೆ

4. Manish Sisodia Resigns: ಬಂಧನದ ಬೆನ್ನಲ್ಲೇ ಡಿಸಿಎಂ ಸ್ಥಾನಕ್ಕೆ ಮನೀಷ್‌ ಸಿಸೋಡಿಯಾ ರಾಜೀನಾಮೆ
ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಮನೀಷ್‌ ಸಿಸೋಡಿಯಾ (Manish Sisodia Resigns) ಅವರು ತಮ್ಮ ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೆಯೇ, ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಸತ್ಯೇಂದರ್‌ ಜೈನ್‌ ಅವರೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಬ್ಬರ ರಾಜೀನಾಮೆಯನ್ನು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಸ್ವೀಕರಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Karnataka Election: ವೀರೇಂದ್ರ ಪಾಟೀಲ್‌, ನಿಜಲಿಂಗಪ್ಪಗೆ ಕಾಂಗ್ರೆಸ್‌ ಅವಮಾನ ಮಾಡಿಲ್ಲ: ಮೋದಿ ಮಾತಿಗೆ ಡಿ.ಕೆ. ಶಿವಕುಮಾರ್‌ ಉತ್ತರ
ಕಾಂಗ್ರೆಸ್‌ ಪಕ್ಷವು ವೀರೇಂದ್ರ ಪಾಟೀಲರು ಹಾಗೂ ಎಸ್‌. ನಿಜಲಿಂಗಪ್ಪ ಅವರಿಗೆ ಅವಮಾನ ಮಾಡಿದೆ, ಇದೀಗ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಅವಮಾನಿಸುತ್ತಿದೆ ಎಂದು ಚುನಾವಣೆ ಹೊಸ್ತಿಲಲ್ಲಿ (Karnataka Election) ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಖಂಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. ಬಿಜೆಪಿ ನನ್ನನ್ನು ಮೂಲೆಗುಂಪು ಮಾಡಿಲ್ಲ, ಟಿಪ್ಪು-ಹಿಜಾಬ್​ಗಳೆಲ್ಲ ಅನಗತ್ಯ ವಿಚಾರಗಳು: ಬಿ.ಎಸ್​. ಯಡಿಯೂರಪ್ಪನವರ ಮಾತುಗಳಿವು
ಬಿಜೆಪಿ ಹಿರಿಯ, ಜನಮೆಚ್ಚಿದ ನಾಯಕ ಬಿ.ಎಸ್​.ಯಡಿಯೂರಪ್ಪ(BS Yediyurappa)ನವರು ಫೆ.27ರಂದು 80ನೇ ವರ್ಷದ ಜನ್ಮದಿನ ಆಚರಿಸಿಕೊಂಡರು. ಅವರ ಜನ್ಮದಿನದಂದೇ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದು ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟಿಸಿದರು. ಯಡಿಯೂರಪ್ಪನವರಿಗೆ ಶುಭಕೋರಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಗೆಲುವಿಗೆ ಅಗತ್ಯವಿರುವ ‘ಬ್ರಹ್ಮಾಸ್ತ್ರ’ವನ್ನು ಬಿ.ಎಸ್​.ಯಡಿಯೂರಪ್ಪನವರ ರೂಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಲ್ಲಿ ನಿಯೋಜಿಸಿದ್ದಾರೆ. ಇದೇ ಹೊತ್ತಲ್ಲಿ, ಬಿ.ಎಸ್.ಯಡಿಯೂರಪ್ಪನವರು ನ್ಯೂಸ್​ 18 ಮಾಧ್ಯಮಕ್ಕೆ ನೀಡಿದ ಸಂದರ್ಶನದ ಸಾರಾಂಶ ಇಲ್ಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Vijaya Sankalpa Yatre: ಬುಧವಾರದಿಂದ ಶುರುವಾಗುವ ಯಾತ್ರೆಯನ್ನಾದರೂ ಸಫಲಗೊಳಿಸುವ ಯತ್ನದಲ್ಲಿ ಬಿಜೆಪಿ
ಈಗಾಗಲೆ ಜನಸಂಕಲ್ಪ ಯಾತ್ರೆಯನ್ನು ಬಿಜೆಪಿ ಆರಂಭಿಸಿತ್ತಾದರೂ ಅದು ಹೆಚ್ಚಿನ ಸದ್ದು ಮಾಡದೆ ತನ್ನಿಂತಾನೆ ಮುಕ್ತಾಯಗೊಂಡಿದೆ. ಇದೀಗ ನಾಲ್ಕು ರಥ ಯಾತ್ರೆಗಳಿಗೆ ಬುಧವಾರದಿಂದ ಚಾಲನೆ ನೀಡಲಾಗುತ್ತಿದೆ. ಈ ಯಾತ್ರೆಯನ್ನು ಸಫಲಗೊಳಿಸುವುದು ಚುನಾವಣೆ ಮೇಲೆ ಹೆಚ್ಚಿನ ಪರಿಣಾಮ ಬೀರುವುದರಿಂದ ಬಿಜೆಪಿ ಹೆಚ್ಚಿನ ಜಾಗ್ರತೆ ವಹಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟನೆ ನೆರವೇರಿಸಲಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. GDP Growth : 2022ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಜಿಡಿಪಿ 4.4% ಕ್ಕೆ ಇಳಿಕೆ
ಭಾರತದ ಜಿಡಿಪಿ ಬೆಳವಣಿಗೆ (GDP) ಪ್ರಸಕ್ತ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ಅಂದರೆ ಅಕ್ಟೋಬರ್-ಡಿಸೆಂಬರ್‌ ಅವಧಿಯಲ್ಲಿ 4.4%ರಷ್ಟು ದಾಖಲಾಗಿದೆ.( GDP Growth) ಅಂಕಿ ಅಂಶಗಳ ಸಚಿವಾಲಯವು ಜಿಡಿಪಿ ಕುರಿತ ವರದಿಯನ್ನು ಮಂಗಳವಾರ ಬಿಡುಗಡೆಗೊಳಿಸಿದ್ದು, 2022-23ರ ಅಕ್ಟೋಬರ್-ಡಿಸೆಂಬರ್‌ ಅವಧಿಯಲ್ಲಿ 40.19 ಲಕ್ಷ ಕೋಟಿ ರೂ. ಜಿಡಿಪಿ ಮೌಲ್ಯ ದಾಖಲಾಗಿತ್ತು. 2021-22ರ ಇದೇ ಅವಧಿಯಲ್ಲಿ 38.51 ಲಕ್ಷ ಕೋಟಿ ರೂ. ಮೌಲ್ಯದ ಜಿಡಿಪಿ ದಾಖಲಾಗಿತ್ತು. ಅಧಿಕ ಹಣದುಬ್ಬರ, ಬೇಡಿಕೆಯ ಮಂದಗತಿಯ ಪರಿಣಾಮ ಜಿಡಿಪಿ ಬೆಳವಣಿಗೆ ಕೂಡ ನಿರೀಕ್ಷೆಗಿಂತ ತುಸು ಕಡಿಮೆಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Ghar Wapsi : ಅಸ್ಸಾಂನಲ್ಲಿ 35 ಕುಟುಂಬಗಳ 250 ಮಂದಿ ಘರ್​ ವಾಪ್ಸಿ, ಕ್ರೈಸ್ತ ಧರ್ಮದಿಂದ ಸನಾತನ ಧರ್ಮಕ್ಕೆ
ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 250 ಹಿಂದುಗಳನ್ನು ಮಾತೃ ಧರ್ಮಕ್ಕೆ ವಾಪಸ್​ ಕರೆತರಲಾಗಿದ್ದು (Ghar Wapsi), ಅಖಿಲ ಭಾರತೀಯ ಘರ್​ ವಾಪ್ಸಿ ಸಮಿತಿಯ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿತ್ತು. ಫೆಬ್ರವರಿ 21ರಂದು ಇಲ್ಲಿನ ಚಿಕ್ನಿಪಲಿ ಎಂಬಲ್ಲಿ ಕಾರ್ಯಕ್ರಮ ಆಯೋಜಿಸಿ, ಗಂಗಾಜಲದಲ್ಲಿ ಪಾದ ತೊಳೆಯುವ ಮೂಲಕ ಮಾತೃ ಧರ್ಮಕ್ಕೆ ವಾಪಸ್​ ಕರೆತರಲಾಗಿದೆ. ಧರ್ಮ ಜಾಗರಣ್​ ಸಮನ್ವಯ ವಿಭಾಗ ಹಾಗೂ ಆರ್ಯ ಸಾಮ್​ ಸಂಸ್ಥೆಯೂ ಈ ಕಾರ್ಯಕ್ರಮದ ನೇತೃತ್ವ ವಹಿಸಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Viral News: ಉದ್ಯೋಗಿಯ ಹುಟ್ಟುಹಬ್ಬವನ್ನು ಖಾಸಗಿ ಜೆಟ್‌‌ನಲ್ಲಿ ಆಚರಿಸಿದ ಅನಂತ್ ಅಂಬಾನಿ!
ಉದ್ಯೋಗಿಗಳಿಗೆ ಬೋನಸ್‌ ನೀಡುವುದು, ಗಿಫ್ಟ್‌ಗಳನ್ನು ನೀಡುವುದು ಮಾಮೂಲಿ. ಆದರೆ ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ (Anant Ambani) ತಮ್ಮ ಸಂಸ್ಥೆಯ ಉದ್ಯೋಗಿಯೊಬ್ಬರ ಬರ್ತ್‌ಡೇ ಅನ್ನೇ ಅದ್ಧೂರಿಯಾಗಿ ಸಂಭ್ರಮಿಸಿದ್ದಾರೆ. ಖಾಸಗಿ ಜೆಟ್‌ನಲ್ಲಿ ಜನ್ಮದಿನಾಚರಣೆ ಆಚರಿಸುವ ಮೂಲಕ ಉದ್ಯೋಗಿಗೆ ಖುಷಿ (Viral News) ಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. HD DeveGowda: ವಯೋಸಹಜ ಅನಾರೋಗ್ಯ: ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ದೇವೇಗೌಡರಿಗೆ ಚಿಕಿತ್ಸೆ
  2. ಚಂದ್ರಯಾನ-3 ರಾಕೆಟ್ ಎಂಜಿನ್ ಪರೀಕ್ಷೆ ಯಶಸ್ವಿ: ಇಸ್ರೋ
  3. Cancer Detection Technology: ಕ್ಯಾನ್ಸರ್‌ ಕಣಗಳ ಪತ್ತೆಗೆ ಹೊಸ ಉಪಕರಣ
  4. Rishabh Pant: ಶೀಘ್ರದಲ್ಲೇ ಕ್ರಿಕೆಟ್‌ಗೆ ಮರಳುವೆ; ರಿಷಭ್‌ ಪಂತ್‌ ವಿಶ್ವಾಸ
  5. ಕಾಶ್ಮೀರಿ ಪಂಡಿತ ಸಂಜಯ್​ ಶರ್ಮಾನನ್ನು ಕೊಂದ ಉಗ್ರನ ಹತ್ಯೆ; ಪುಲ್ವಾಮಾದಲ್ಲಿ ಮುಂದುವರಿದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Murder in PG: ಮೊನ್ನೆಯೇ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

VISTARANEWS.COM


on

Murder in PG Case
Koo

ಬೆಂಗಳೂರು: ರಾಜಧಾನಿಯ ಕೋರಮಂಗಲ ಪಿಜಿಯೊಂದರಲ್ಲಿ (Murder in PG) ಕೃತಿ ಕುಮಾರಿ ಎಂಬ ಯುವತಿಯನ್ನು ಹತ್ಯೆ (Krithi Kumari Murder) ಮಾಡಿದ ಪಾತಕಿ ಅಭಿಷೇಕ್‌ನನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು (Bangalore police) ಮಧ್ಯಪ್ರದೇಶಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಮೊನ್ನೆಯೇ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಫೂಟೇಜ್‌ಗಳು, ಪ್ರತ್ಯಕ್ಷದರ್ಶಿಗಳು ಹಾಗೂ ಆರೋಪಿಯ ಪ್ರೇಯಸಿಯ ಹೇಳಿಕೆಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

ಏನಿದು ಪ್ರಕರಣ?

ರಾಜಧಾನಿಯ ಕೋರಮಂಗಲದ ಪಿಜಿಯಲ್ಲಿ ಕೊಲೆಯಾಗಿ (Murder in PG) ಹೋದ ಕೃತಿ ಕುಮಾರಿ ಮರ್ಡರ್ (Krithi Kumari Murder) ಪ್ರಕರಣದಲ್ಲಿ ಪಾತಕಿಯ ಬರ್ಬರತೆಯ ಬಗ್ಗೆ ಬೆಚ್ಚಿ ಬೀಳಿಸುವ ಇನ್ನಷ್ಟು ವಿವರಗಳು ಹೊರಬಿದ್ದಿವೆ. ಕೊಲೆಯಾಗಿ ಹೋದವಳು ಈತನ ಪ್ರೇಯಸಿಯ (lover) ಗೆಳತಿಯಾಗಿದ್ದು, ಈ ದುಷ್ಟನ ಕೈಯಿಂದ ಗೆಳತಿಯನ್ನು ಬಿಡಿಸುವ ಯತ್ನದಲ್ಲಿ ತಾನೇ ಮರ್ಡರ್‌ (Murder Case) ಆಗಿದ್ದಾಳೆ.

ಆರೋಪಿ ಅಭಿಷೇಕ್‌ ತಾನು ಪ್ರೀತಿಸಿದವಳನ್ನು ಗೃಹ ಬಂಧನದಲ್ಲಿಟ್ಟಿದ್ದ. ಆಕೆಯನ್ನು ಕಾಪಾಡಿದ ಆಕೆಯ ಗೆಳತಿಯೇ ಜೀವ ಕಳೆದುಕೊಂಡಿದ್ದಾಳೆ. ಅಭಿಷೇಕ್‌ ಯುವತಿಯೊಬ್ಬಳೊಂದಿಗೆ ಪ್ರೀತಿಯಲ್ಲಿದ್ದ. ತನ್ನ ಪ್ರೇಯಸಿಯನ್ನು ಬಲವಂತವಾಗಿ ಬಾಡಿಗೆ ರೂಮ್‌ನಲ್ಲಿ ಇರಿಸಿಕೊಂಡಿದ್ದ. ಕೊಲೆಗೂ ಮೂರು ದಿನದ ಹಿಂದೆ ಬಾಡಿಗೆ ರೂಮ್ ಮಾಡಿ, ಆಕೆಯನ್ನು ಕರೆದೊಯ್ದು ಬಲವಂತವಾಗಿ ರೂಮ್‌ನಲ್ಲಿಟ್ಟುಕೊಂಡಿದ್ದ.

ಆದರೆ ಪ್ರೇಯಸಿ ರೂಮ್‌ನಲ್ಲಿ ಇರಲಾಗದೆ ಒದ್ದಾಡಿದ್ದಳು. ರೂಮ್‌ಮೇಟ್ ಪಿಜಿಗೆ ಬರಲಿಲ್ಲ ಏಕೆಂದು ವಿಚಾರಿಸಿದಾಗ ಕೃತಿ ಕುಮಾರಿ, ಆರೋಪಿ ಆಕೆಯನ್ನು ಕೂಡಿ ಹಾಕಿದ್ದರ ಮಾಹಿತಿಯನ್ನು ಪಡೆದುಕೊಂಡಿದ್ದಳು. ನಂತರ ಸಮಯ ನೋಡಿ ಗೆಳತಿಯನ್ನು ರೂಮ್‌ನಿಂದ ಕರೆತರಲು ಪ್ಲ್ಯಾನ್ ಮಾಡಿದ್ದು, ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ಪಿಜಿಗೆ ಕರೆತಂದಿದ್ದಳು. ಕೊಲೆ‌ ನಡೆದ ಹಿಂದಿನ ದಿನ ಗೃಹಬಂಧನದಲ್ಲಿದ್ದ ಗೆಳತಿಯನ್ನು ಕೃತಿ ಪಾರುಮಾಡಿದ್ದಳು. ಈಕೆಯ ಈ ಮಾನವೀಯ ನಡತೆಯೇ ಆಕೆಯ ಜೀವ ತೆಗೆದಿದೆ.

ಈ ವಿಚಾರ ಗೊತ್ತಾಗಿದ್ದೇ ತಡ ಕೃತಿ ಮೇಲೆ ಆರೋಪಿ ಅಭಿಷೇಕ್‌ ತೀವ್ರವಾಗಿ ಕೋಪಗೊಂಡಿದ್ದ. ತನ್ನ ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಕ್ಕೆ ಕೋಪಗೊಂಡು ಮಂಗಳವಾರ ರಾತ್ರಿ‌ 11.10ರ ಸುಮಾರಿಗೆ ಏಕಾಏಕಿ ಪಿಜಿಗೆ ಹೋಗಿದ್ದ. ಒಳ ಹೋದವನೇ ಸೀದಾ ಕೃತಿ ಕುಮಾರಿಗೆ ಚಾಕುವಿನಿಂದ ಯದ್ವಾತದ್ವಾ ಇರಿದು ಎಸ್ಕೇಪ್ ಆಗಿದ್ದಾನೆ.

ಘಟನೆ ನಡೆದದ್ದು ಹೀಗೆ

ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್‌ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Continue Reading

ಪ್ರಮುಖ ಸುದ್ದಿ

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Kaveri Aarti: ನಾಡಿನ ಪುಣ್ಯನದಿ ಕಾವೇರಮ್ಮನಿಗೆ ಕಾವೇರಿ ಆರತಿ ಮಾಡುವ ಯೋಜನೆ ಬಗ್ಗೆ ಸರ್ಕಾರದಿಂದ ಚಿಂತನೆ ನಡೆದಿದ್ದು, ಕಾವೇರಿ ಆರತಿಗಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ಸಮಿತಿ ರಚಿಸಿದೆ.

VISTARANEWS.COM


on

kaveri aarti
Koo

ಬೆಂಗಳೂರು: ಹಿಮಾಲಯದ (Himalayas) ತಪ್ಪಲು ಪುಣ್ಯಕ್ಷೇತ್ರಗಳಾದ ಹರಿದ್ವಾರ, ಹೃಷಿಕೇಶ, ಕಾಶಿಯಲ್ಲಿ ನಡೆಯುವ ಮನಮೋಹಕ ಗಂಗಾರತಿ (Ganga Aarti) ಮಾದರಿಯಲ್ಲಿ ಕರ್ನಾಟಕದಲ್ಲಿಯೂ ʼಕಾವೇರಿ ಆರತಿʼ (Kaveri Aarti) ಏರ್ಪಡಿಸಲು ರಾಜ್ಯ ಸರಕಾರ (Karnataka Govt) ಸಜ್ಜಾಗಿದ್ದು, ಮುಂದಿನ ದಸರಾ (Dussehra) ಅವಧಿಯ ಹೊತ್ತಿಗೆ ಅದನ್ನು ಕಾರ್ಯಗತಗೊಳಿಸಲು ಚಿಂತಿಸಿದೆ.

ನಾಡಿನ ಪುಣ್ಯನದಿ ಕಾವೇರಮ್ಮನಿಗೆ ಕಾವೇರಿ ಆರತಿ ಮಾಡುವ ಯೋಜನೆ ಬಗ್ಗೆ ಸರ್ಕಾರದಿಂದ ಚಿಂತನೆ ನಡೆದಿದ್ದು, ಕಾವೇರಿ ಆರತಿಗಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ಸಮಿತಿ ರಚಿಸಿದೆ.

ಆಗಸ್ಟ್ ಮೊದಲ ವಾರ ಮಧ್ಯಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಪ್ರವಾಸ ಕೈಗೊಳ್ಳಲಿರುವ ಸಮಿತಿ, ವಾರಾಣಸಿ, ಹೃಷಿಕೇಶ ಮತ್ತು ಗಯಾಕ್ಕೆ ತೆರಳಿ ಅಲ್ಲಿ ಮಾಡಲಾಗುವ ಆರತಿ ಸಂಪ್ರದಾಯಗಳನ್ನು ವೀಕ್ಷಿಸಿ‌ ವರದಿ‌ ನೀಡಲಿದೆ. ಸಮಿತಿಯಲ್ಲಿ ಶಾಸಕರಾದ ರವಿ ಗಾಣಿಗ, ದಿನೇಶ್ ಗೂಳಿಗೌಡ ಸೇರಿದಂತೆ 10ಕ್ಕೂ ಹೆಚ್ಚಿನ ಶಾಸಕರು ಇದ್ದಾರೆ.

ಮುಂದಿನ ದಸರಾ ಹಬ್ಬದ ಸಂದರ್ಭದಲ್ಲಿ ಕಾವೇರಿ ಆರತಿ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಮಿತಿಯ ಅಧ್ಯಯನ ಪ್ರವಾಸದ ಅಂತಿಮ ಹಂತದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸಮಿತಿಯೊಂದಿಗೆ ಸೇರುವ ಸಾಧ್ಯತೆ ಇದೆ.

ಕಾವೇರಿ ಆರತಿ ಆಯೋಜನೆಗೆ ಕೆಆರ್‌ಎಸ್ ಜಲಾಶಯ ಸೂಕ್ತ ಎನ್ನಲಾಗಿತ್ತು. ಆದರೆ ಅಲ್ಲಿ ಸ್ಥಳಾವಕಾಶದ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ತಲಕಾಡು ಅಥವಾ ಸಂಗಮದಲ್ಲಿ ಕಾವೇರಿ ಆರತಿ ಆಯೋಜಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಇನ್ನೊಂದು ಕಡೆಯಿಂದ, ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲದಲ್ಲಿಯೇ ಆರತಿ ನಡೆಸಬೇಕು ಎಂಬ ಸಲಹೆಯೂ ಬಂದಿದೆ.

ಚಲುವರಾಯಸ್ವಾಮಿ ನೇತೃತ್ವದ ಸಮಿತಿ ವರದಿ ನೀಡಿದ ನಂತರ ಜಾಗ ಅಂತಿಮವಾಗಲಿದೆ. ಕಾವೇರಿ ಆರತಿ ಆಯೋಜನೆಗೂ ಮುನ್ನ ಕಾವೇರಿ ತಾಯಿಗೆ ದೇವಸ್ಥಾನ ನಿರ್ಮಾಣ ಮಾಡುವ ಚಿಂತನೆಯಿದೆ. ಕಾವೇರಿ ಆರತಿಯ ವರದಿ ಪಡೆಯುವುದು, ಕಾರ್ಯಕ್ರಮ ಆಯೋಜನೆ ಹೊಣೆ ಜಲಸಂಪನ್ಮೂಲ ಇಲಾಖೆಯದ್ದಾಗಿರಲಿದೆ. ಧಾರ್ಮಿಕ ದತ್ತಿ, ಲೋಕೋಪಯೋಗಿ ಇಲಾಖೆಗಳು ಸಹಕಾರ ನೀಡಲಿವೆ.

ಕಾವೇರಿ ಆರತಿಯನ್ನು ಪ್ರವಾಸಿಗರ ಕಣ್ಮನ ಸೆಳೆಯುವ ಬೃಹತ್ ಕಾರ್ಯಕ್ರಮವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದೆ. ಕನಿಷ್ಠ 5ರಿಂದ 6 ಸಾವಿರ ಜನರು ಸೇರುವಂತೆ ಮಾಡುವುದು ಉದ್ದೇಶ. ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ಆಯೋಜಿಸಲು ಚಿಂತಿಸಲಾಗಿದೆ. ಆರಂಭದಲ್ಲಿ ವಾರಕ್ಕೆ ಒಂದು ಬಾರಿ, ನಂತರ ಎರಡು ಬಾರಿ, ಮೂರು ಬಾರಿ ಹೀಗೆ ಹೆಚ್ಚಿಸುತ್ತ ಹೋಗುವ ಬಗ್ಗೆ ಚಿಂತಿಸಲಾಗಿದೆ.

ಕೊಡಗಿನಲ್ಲಿ ನಡೆಯುತ್ತಿದೆ

ಕೊಡಗಿನಲ್ಲಿ 2011ರಿಂದಲೇ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ನಮಾಮಿ ಕಾವೇರಿ ಎಂಬ ಸಂಘಟನೆ ಪ್ರತಿ ತಿಂಗಳು ಹುಣ್ಣಿಮೆಯಂದು ಕಾವೇರಿಗೆ ಆರತಿ ಕಾರ್ಯಕ್ರಮ ಮಾಡುತ್ತ ಬಂದಿದ್ದು, ಇತ್ತೀಚೆಗೆ 161 ನೇ ಕಾವೇರಿ ಆರತಿ ಕಾರ್ಯಕ್ರಮ ಕೊಡಗಿನ 14 ಕಡೆಗಳಲ್ಲಿ ಏಕಕಾಲದಲ್ಲಿ ನಡೆದಿದೆ. ಕಲುಷಿತಗೊಳ್ಳುತ್ತಿರುವ ಕಾವೇರಿ ನದಿ ಮೇಲೆ ಧಾರ್ಮಿಕ ಭಾವನೆ ಬರಲಿ, ಅದರ ಪಾವಿತ್ರ್ಯತೆಯನ್ನು ಪ್ರತಿಯೊಬ್ಬರೂ ಕಾಪಾಡುವಂತಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಈವರೆಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಸ್ವಾಮೀಜಿಗಳು, ತಮಿಳುನಾಡಿನ ಸ್ವಾಮೀಜಿಗಳೂ ಪಾಲ್ಗೊಂಡಿದ್ದಾರೆ. ಹಿಂದೊಮ್ಮೆ ಸರಕಾರದಿಂದಲೂ ‘ಕಾವೇರಿ ಉತ್ಸವ” ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾವೇರಿ ನೀರಾವರಿ ನಿಗಮದ ಮೂಲಕ ಅದ್ದೂರಿ ಆರತಿ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಸೂಚನೆ; ಸರ್ವಪಕ್ಷ‌ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Continue Reading

ಪ್ರಮುಖ ಸುದ್ದಿ

Students Night: ವಿದ್ಯಾರ್ಥಿಗಳು ಕುಡಿದು ಕುಪ್ಪಳಿಸಲು ʼಸ್ಟೂಡೆಂಟ್ಸ್‌ ನೈಟ್‌ʼ ಆಯೋಜಿಸಿದ ಬಾರ್‌ ಮಾಲಿಕ! ಕಾರ್ಯಕ್ರಮ ರದ್ದು

Students Night: ʼಸ್ಟೂಡೆಂಟ್ಸ್ ವೆಡ್‌ನೆಸ್‌ಡೇ ನೈಟ್ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಮುಕ್ತ ಆಹ್ವಾನವನ್ನು ನಗರದ ದೇರೆಬೈಲ್ ಕೊಂಚಾಡಿಯಲ್ಲಿರುವ ಲಿಕ್ಕರ್‌ ಲಾಂಜ್‌ ಎಂಬ ಬಾರ್‌ ನೀಡಿತ್ತು. ಈ ಬಾರ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ ಲಿಕ್ಕರ್ ಲಾಂಜ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

VISTARANEWS.COM


on

students night
Koo

ಮಂಗಳೂರು: ವಿದ್ಯಾರ್ಥಿಗಳು ಕುಡಿದು ಕುಣಿದ ಕುಪ್ಪಳಿಸಲು ಬಾರ್‌ ನೈಟ್‌ (Students Night) ಕಾರ್ಯಕ್ರಮ ಆಯೋಜಿಸಿದ್ದ ಬಾರ್‌ ಮಾಲೀಕರ ಕಾರ್ಯಕ್ರಮವನ್ನು ಪೊಲೀಸರು (Mangalore police) ಬಂದ್‌ ಮಾಡಿಸಿದ್ದಾರೆ. ಇದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ʼಸ್ಟೂಡೆಂಟ್ಸ್ ವೆಡ್‌ನೆಸ್‌ಡೇ ನೈಟ್ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಮುಕ್ತ ಆಹ್ವಾನವನ್ನು ನಗರದ ದೇರೆಬೈಲ್ ಕೊಂಚಾಡಿಯಲ್ಲಿರುವ ಲಿಕ್ಕರ್‌ ಲಾಂಜ್‌ ಎಂಬ ಬಾರ್‌ ನೀಡಿತ್ತು. ಈ ಬಾರ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ ಲಿಕ್ಕರ್ ಲಾಂಜ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಸಂಜೆ 7 ಗಂಟೆಯಿಂದ ಮಧ್ಯರಾತ್ರಿ ವರೆಗೆ ಮದ್ಯ ಸಹಿತ ಪಾರ್ಟಿ ಕಾರ್ಯಕ್ರಮವನ್ನು ಆಯೋಜಿಸಲು ಸಮಯ ನಿಗದಿಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಆಹಾರ, ಮದ್ಯ, ಮ್ಯೂಸಿಕ್, ಮನೋರಂಜನಾ ಕಾರ್ಯಕ್ರಮಗಳಿರುವುದಾಗಿ ಪ್ರಚಾರ ಮಾಡಲಾಗಿತ್ತು. ಇಷ್ಟು ಮಾತ್ರವಲ್ಲದೆ ವಿದ್ಯಾರ್ಥಿಗಳು ಸ್ಕೂಲ್ ಐಡಿ (ಗುರುತು ಕಾರ್ಡ್) ತೋರಿಸಿದರೆ ಬಿಲ್‌ನಲ್ಲಿ ಶೇ.15ರಷ್ಟು ಕಡಿತದ ಆಫರ್ ನೀಡಲಾಗಿತ್ತು. ಈ ಇವೆಂಟ್‌ಗೆ ವಿದ್ಯಾರ್ಥಿನಿಯರು ಬಂದರೆ ಅವರಿಗೆ ಫ್ರೀ ಶೂಟರ್ಸ್ ಸ್ಪೆಷಲ್ ಆಫರ್ ನೀಡುವ ಭರವಸೆಯನ್ನು ನೀಡಲಾಗಿತ್ತು.

ಕೊಂಚಾಡಿಯ ಬಾರ್‌ನಲ್ಲಿ ಆಯೋಜಿಸಿದ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದ್ದಂತೆ ಸಾರ್ವಜನಿಕರಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾವೂರು ಪೊಲೀಸರು ಕಾರ್ಯಕ್ರಮವನ್ನೇ ರದ್ದುಮಾಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಾರ್‌ನ ಮಾಲೀಕರಿಗೆ ಕಾವೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ಮಾತ್ರವಲ್ಲದೆ ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್(ಎಪಿಪಿ)ಗೆ ಪತ್ರ ಬರೆದು ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಪೊಲೀಸ್‌ ಮೂಲಗಳು ಸಲಹೆ ಕೇಳಿದ್ದಾರೆಂದು ತಿಳಿದು ಬಂದಿದೆ. ವಿದ್ಯಾರ್ಥಿಗಳನ್ನು ಬಾರ್‌ಗೆ ಆಹ್ವಾನಿಸಿ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಹಾಕಿದ್ದಕ್ಕಾಗಿ ಅಬಕಾರಿ ಇಲಾಖೆ ಈಗಾಗಲೇ 7 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ ಬಾರ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಪತ್ರ ಬರೆದಿದ್ದು, ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಮಾಹಿತಿ ಕೇಳಿದ್ದೇವೆ. ಅವರ ಉತ್ತರ ಬಂದ ಕೂಡಲೇ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Continue Reading

ಪ್ರಮುಖ ಸುದ್ದಿ

Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ

Uttara kannada landslide: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್‌ ಪತ್ತೆಗೆ ಹೆಚ್ಚಿನ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ರಕ್ಷಣಾ ಸಚಿವರಿಗೆ ಕೇರಳ‌ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ. ದಕ್ಷಿಣ ಮತ್ತು ಪೂರ್ವ ನೌಕಾ ಕಮಾಂಡ್‌ಗಳಿಂದ ಹೆಚ್ಚಿನ ಮುಳುಗು ತಜ್ಞರನ್ನು ನೇಮಿಸಲು, ರಿಮೋಟ್ ಚಾಲಿತ ವಾಹನಗಳು, ಆಧುನಿಕ ಉಪಕರಣಗಳನ್ನು ಶೋಧ ಕಾರ್ಯಕ್ಕೆ ನೀಡಲು ಅವರು ಮನವಿ ಮಾಡಿದ್ದಾರೆ.

VISTARANEWS.COM


on

uttara kannada landslide shirur
Koo

ಕಾರವಾರ: ಅಂಕೋಲಾ ಶಿರೂರು ಗುಡ್ಡಕುಸಿತ (Uttara Kannada Landslide, Ankola landslide) ಪ್ರಕರಣದಲ್ಲಿ ನಾಪತ್ತೆಯಾದವರಿಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ (search Operation) 12ನೇ ದಿನಕ್ಕೆ ಕಾಲಿಟ್ಟಿದೆ. ಗುಡ್ಡಕುಸಿತದಲ್ಲಿ ನಾಪತ್ತೆಯಾಗಿದ್ದ 11 ಮಂದಿ ಪೈಕಿ 8 ಶವ ಪತ್ತೆಯಾಗಿದ್ದು, ಇನ್ನೂ ಮೂವರಿಗಾಗಿ ನದಿಯಲ್ಲಿ ಶೋಧ ಮುಂದುವರಿದಿದೆ. ಕೇರಳದ ಡ್ರೈವರ್‌ ಶೋಧಕ್ಕಾಗಿ ಹೆಚ್ಚಿನ ಪ್ರಯತ್ನ ವಹಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ (Kerala CM Pinarayi Vijayan) ಮನವಿ ಮಾಡಿದ್ದಾರೆ.

ಈಗಾಗಲೇ ಹೆದ್ದಾರಿಯಲ್ಲಿ ಬಿದ್ದಿದ್ದ ಟನ್ನುಗಟ್ಟಲೆ ಮಣ್ಣನ್ನು ಅಲ್ಲಿಂದ ತೆರವು ಮಾಡಲಾಗಿದೆ. ಹೋಟೆಲ್‌ ಅವಶೇಷಗಳೂ ದೊರೆತಿವೆ. ಆದರೆ ಇನ್ನೂ ಮೂವರ ಶವಗಳು ಮಾತ್ರ ಪತ್ತೆಯಾಗಿಲ್ಲ. ಗಂಗಾವಳಿ ನದಿಯಲ್ಲಿ ದೆಹಲಿಯ ಎನ್‌ಡಿಆರ್‌ಎಫ್ ತಂಡ‌ ಡ್ರೋನ್ ಮೂಲಕ ಸ್ಕ್ಯಾನಿಂಗ್ ನಡೆಸಿದ್ದು, ನದಿಯಲ್ಲಿ ಸ್ಕ್ಯಾನಿಂಗ್ ಮೂಲಕ ಲಾರಿ ಇರುವ ಸ್ಥಳ ಗುರುತು ಮಾಡಲಾಗಿದೆ. ಆದರೆ ಡೈವಿಂಗ್ ಮಾಡಿ ಲಾರಿಯನ್ನು ಪರಿಶೀಲಿಸಲು ನದಿಯ ಹರಿವು ಅಡ್ಡಿಯಾಗಿದೆ. ಡೈವಿಂಗ್‌ಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಫ್ಲೋಟಿಂಗ್ ಫ್ಲಾಟ್‌ಫಾರಂ ತರಿಸುತ್ತಿದೆ. ಇಂದು ಫ್ಲೋಟಿಂಗ್ ಫ್ಲಾಟ್‌ಫಾರಂ ಬಳಸಿ ನದಿಯಲ್ಲಿರುವ ಲಾರಿಯ ಶೋಧಕ್ಕೆ ಪ್ರಯತ್ನಿಸಲಾಗುತ್ತದೆ.

ನದಿಯಲ್ಲಿ ಕೂಡ ಮಣ್ಣು ಸಂಗ್ರಹವಾಗಿದ್ದು, ಮಣ್ಣಿನಡಿ ನಾಪತ್ತೆಯಾಗಿರುವವರಿಗೆ ಶೋಧ ನಡೆಯಬೇಕಿದೆ. ಗುಡ್ಡಕುಸಿತದಿಂದ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ತೆರವು ಕಾರ್ಯ ಪೂರ್ಣವಾಗಿದ್ದು, ಹೆದ್ದಾರಿ ಸಂಚಾರ ಪುನರಾರಂಭಕ್ಕೆ ಜಿಯಾಲಾಜಿಸ್ಟ್ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಸಂಚಾರಕ್ಕೆ ಹೆದ್ದಾರಿ ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಂಡು ವಾಹನಗಳಿಗೆ ಅವಕಾಶ ಕೊಡಬೇಕಿದೆ.

ಪಿಣರಾಯಿ ವಿಜಯನ್ ಮೊರೆ

ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್‌ ಪತ್ತೆಗೆ ಹೆಚ್ಚಿನ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ರಕ್ಷಣಾ ಸಚಿವರಿಗೆ ಕೇರಳ‌ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ. ದಕ್ಷಿಣ ಮತ್ತು ಪೂರ್ವ ನೌಕಾ ಕಮಾಂಡ್‌ಗಳಿಂದ ಹೆಚ್ಚಿನ ಮುಳುಗು ತಜ್ಞರನ್ನು ನೇಮಿಸಲು, ರಿಮೋಟ್ ಚಾಲಿತ ವಾಹನಗಳು, ಆಧುನಿಕ ಉಪಕರಣಗಳನ್ನು ಶೋಧ ಕಾರ್ಯಕ್ಕೆ ನೀಡಲು ಅವರು ಮನವಿ ಮಾಡಿದ್ದಾರೆ.

ಜುಲೈ 16ರಂದು ನಡೆದಿದ್ದ ಗುಡ್ಡಕುಸಿತ ದುರಂತದಲ್ಲಿ ಕೇರಳ ಮೂಲದ ಲಾರಿ ನಾಪತ್ತೆಯಾಗಿತ್ತು. ಲಾರಿಯಲ್ಲಿದ್ದ ಚಾಲಕ ಅರ್ಜುನ ಸಹ ನಾಪತ್ತೆಯಾಗಿದ್ದರು. ಇದುವರೆಗೂ ನಾಪತ್ತೆಯಾಗಿರುವವರಿಗಾಗಿ ಶೋಧ ಮುಂದುವರಿದಿದೆ.

ಅರ್ಜುನ್‌ಗಾಗಿ ಇಡೀ ಕೇರಳ ಪ್ರಾರ್ಥಿಸುತ್ತಿದೆ: ಶಾಸಕ ಕೆ.ಎಂ.ಆಶ್ರಫ್

ಒಂದು ವಾರ ಕಳೆದರೂ ಅಲ್ಲಿದ್ದ ಹೋಟೆಲ್ ಆಗಲಿ ಅಥವಾ ಲಾರಿ ಡ್ರೈವರ್ ಅರ್ಜುನ್‌ನ ಸುಳಿವು ಸಿಕ್ಕಿರಲಿಲ್ಲ. ಮೊನ್ನೆ (ಗುರುವಾರ) ದೆಹಲಿ ತಂಡ ನಡೆಸಿದ ಡ್ರೋನ್ ಕಾರ್ಯಚರಣೆಯಲ್ಲಿ ನದಿಯಲ್ಲಿ ಲಾರಿ ಹಾಗೂ ಕ್ಯಾಬಿನ್ ಇರುವ ಬಗ್ಗೆ ಸುಳಿವು ಸಿಕ್ಕಿತ್ತು. ಆದರೆ ನದಿಯ ಹರಿವು ಹೆಚ್ಚಾಗಿದ್ದ ಕಾರಣ ಶೋಧ ಕಾರ್ಯವನ್ನು ಮುಂದುವರೆಸಲು ಆಗಲಿಲ್ಲ. ಹೀಗಾಗಿ ಶುಕ್ರವಾರ ಎರಡು ಬೃಹತ್ ಹಿಟಾಚಿಗಳ ಮೂಲಕ ದಡದಲ್ಲಿನ ಮಣ್ಣು ತೆರವು ಕೆಲಸ ಮುಂದುವರಿಸಲಾಯಿತು. ಜತೆಗೆ ಇನ್ನುಳಿದ ಮೂವರಿಗಾಗಿ ಹೋಟೆಲ್ ಇದ್ದ ಜಾಗದಲ್ಲೇ ಪುನಃ ಹುಡುಕಾಟ ನಡೆದಿದೆ. ಸ್ಥಳೀಯ ಶಾಸಕ ಸತೀಶ್ ಸೈಲ್ ತಡರಾತ್ರಿಯವರೆಗೂ ಸ್ಥಳದಲ್ಲೇ ಹಾಜರಿದ್ದರು.

ಮಂಜೇಶ್ವರದ ಶಾಸಕ ಕೆ.ಎಂ. ಆಶ್ರಫ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚಾಲಕ ಅರ್ಜುನಗಾಗಿ ಇಡೀ ಕೇರಳ ಜನತೆ ಪ್ರಾರ್ಥನೆ ಮಾಡುತ್ತಿದೆ. ಪ್ರತಿಕ್ಷಣವೂ ಅರ್ಜುನ ಜೀವಂತವಾಗಿ ಸಿಕ್ಕೇ ಸಿಗುತ್ತಾನೆ ಎನ್ನುವ ಭರವಸೆಯಲ್ಲಿದ್ದಾರೆ. ದೇಶವು ಇದಕ್ಕೂ ದೊಡ್ಡ ಸಮಸ್ಯೆಗಳನ್ನು ಎದುರಿಸಿದೆ, ನಾವು ಹಿಂಜರಿಯದೆ ಆದಷ್ಟು ಬೇಗ ಅರ್ಜುನ ಬಳಿಗೆ ತಲುಪಿ ಅವನನ್ನು ಮೇಲೇತ್ತುವ ಕೆಲಸ ಆಗಬೇಕು. ಇವತ್ತಿನ ಕಾರ್ಯಾಚರಣೆಯಲ್ಲಿ ಲಾರಿ ಸಿಗುವ ಭರವಸೆ ಇದೆ, ಇಲ್ಲವಾದರೆ ನಮ್ಮ ಹನ್ನೊಂದು ದಿನದ ಶ್ರಮ ವ್ಯರ್ಥವಾಗುತ್ತದೆ. ಹಾಗಾಗಿ ಶುಕ್ರವಾರ ಫಲಿತಾಂಶ ಬಂದೆ ಬರುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ ಎಂದಿದ್ದರು.

ಕೇರಳ ಲೋಕಪಯೋಗಿ ಹಾಗೂ ಪ್ರವಾಸೋದ್ಯಮ ಸಚಿವ ರಿಯಾಜ್ ಅಹ್ಮದ್ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ದೆಹಲಿ ತಜ್ಞರ ತಂಡದಿಂದ ಲಾರಿ ಇರುಬಹುದಾಗಿದೆ ಎನ್ನುವ ಜಾಗದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಿಲ್ಲಾಡಳಿತ ಜತೆಗೆ ಸಭೆ ನಡೆಸಿ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದುಕೊಂಡರು. ಸಚಿವರ ಜತೆಗೆ ಕೇರಳದ ಶಾಸಕರಾದ ಸಚ್ಚಿನ್ ದೇವ್, ಅಶ್ರಫ್ ಉಪಸ್ಥಿತರಿದ್ದು, ಶಾಸಕ ಸತೀಶ್ ಸೈಲ್ ಸಮ್ಮುಖದಲ್ಲೆ ಸಭೆ ನಡೆಯಿತು. ಇದೇ ವೇಳೆ ಜಿಲ್ಲಾಡಳಿತ ಮೃತ ಗ್ಯಾಸ್ ಟ್ಯಾಂಕರ್ ಚಾಲಕ ಶರವಣ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್‌ ಅನ್ನು ಕೇರಳ ಸಚಿವರ ಕೈಯಲ್ಲೇ ವಿತರಿಸಿದರು.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

Continue Reading
Advertisement
Encounter in Kupwara
ದೇಶ24 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ27 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ36 mins ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ49 mins ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್50 mins ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ1 hour ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್1 hour ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ

students night
ಪ್ರಮುಖ ಸುದ್ದಿ1 hour ago

Students Night: ವಿದ್ಯಾರ್ಥಿಗಳು ಕುಡಿದು ಕುಪ್ಪಳಿಸಲು ʼಸ್ಟೂಡೆಂಟ್ಸ್‌ ನೈಟ್‌ʼ ಆಯೋಜಿಸಿದ ಬಾರ್‌ ಮಾಲಿಕ! ಕಾರ್ಯಕ್ರಮ ರದ್ದು

Salman Khan New Pics From Iulia Vantur Birthday Party
ಸಿನಿಮಾ2 hours ago

Salman Khan: ಗರ್ಲ್​ಫ್ರೆಂಡ್ ಬರ್ತ್​ಡೇ ಪಾರ್ಟಿಯಲ್ಲಿ ಸಖತ್‌ ಎಂಜಾಯ್‌ ಮಾಡಿದ ಸಲ್ಮಾನ್ ಖಾನ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ15 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌