ವಿಸ್ತಾರ TOP 10 NEWS : ಬಿಜೆಪಿ ಚುನಾವಣೆ ಉಸ್ತುವಾರಿ ನೇಮಕದಿಂದ, ವಾಣಿ ಜಯರಾಂ ಹಾಡು ನಿಲ್ಲಿಸಿದವರೆಗಿನ ಪ್ರಮುಖ ಸುದ್ದಿಗಳು - Vistara News

ಕರ್ನಾಟಕ

ವಿಸ್ತಾರ TOP 10 NEWS : ಬಿಜೆಪಿ ಚುನಾವಣೆ ಉಸ್ತುವಾರಿ ನೇಮಕದಿಂದ, ವಾಣಿ ಜಯರಾಂ ಹಾಡು ನಿಲ್ಲಿಸಿದವರೆಗಿನ ಪ್ರಮುಖ ಸುದ್ದಿಗಳು

ವಿಸ್ತಾರ TOP 10 NEWS: ರಾಜ್ಯ, ದೇಶ ಮಟ್ಟದಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟ ಇದು. ರಾಜ್ಯ ಬಿಜೆಪಿಗೆ ಉಸ್ತುವಾರಿ ನೇಮಿಸಿದ್ದರಿಂದ ಆರಂಭವಾಗಿ ಕಾಂಗೆಸ್‌, ಜೆಡಿಎಸ್‌ನಲ್ಲಿ ನಡೆದ ಬೆಳವಣಿಗೆಗಳ ನೋಟ ಇಲ್ಲಿದೆ. ಜತೆಗೆ ಹಾಡು ನಿಲ್ಲಿಸಿದ ಖ್ಯಾತ ಗಾಯಕಿ ವಾಣಿ ಜಯರಾಂ ಅವರ ಬದುಕಿನ ನಾನಾ ಕಥನಗಳನ್ನು ಒಳಗೊಂಡಿದೆ.

VISTARANEWS.COM


on

TOP 10 News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

1. ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್‌, ಸಹಪ್ರಭಾರಿಗಳಾಗಿ ಅಣ್ಣಾಮಲೈ, ಮನಸುಖ್‌ ಮಂಡಾವಿಯಾ
ಬೆಂಗಳೂರು:
ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ (Karnataka Election) ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮತ್ತು ಕೇಂದ್ರ ಆರೋಗ್ಯ ಸಚಿವ ಮನಸುಖ್‌ ಮಂಡಾವಿಯಾ ಅವರನ್ನು ಸಹ ಉಸ್ತುವಾರಿಗಳಾಗಿ ನೇಮಿಸಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೨. ಜೆಡಿಎಸ್‌ನಿಂದ ಕೆ.ಎಂ.ಶಿವಲಿಂಗೇಗೌಡ, ಎ.ಟಿ.ರಾಮಸ್ವಾಮಿ ಜೆಡಿಎಸ್‌ನಿಂದ ಔಟ್‌; ಎ.ಮಂಜು ಇನ್
ಹಾಸನ ಜಿಲ್ಲೆಯ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ಅರಕಲಗೂಡಿನ ಶಾಸಕ ಎ.ಟಿ ರಾಮಸ್ವಾಮಿ ಜೆಡಿಎಸ್‌ನಿಂದ (JDS Politics) ವಸ್ತುಶಃ ಹೊರಬಿದ್ದಿದ್ದಾರೆ. ಇತ್ತ ಎ. ಮಂಜು ಅವರು ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬಂದಿದ್ದಾರೆ. ಅರಕಲಗೂಡಿನಿಂದ ಎ.ಮಂಜು ಅವರಿಗೆ ಟಿಕೆಟ್‌ ಘೋಷಣೆಯಾಗಿದೆ, ಅರಸೀಕರೆಯಲ್ಲೂ ಸೂಕ್ತ ಅಭ್ಯರ್ಥಿ ಇದ್ದಾರೆ ಎಂದಿದ್ದಾರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

3. ‌೧ರಿಂದ ೫ನೇ ತರಗತಿಯಲ್ಲಿ ಕಲಿಯುವ ಪರಿಶಿಷ್ಟ ಮಕ್ಕಳ ಕುಟುಂಬಕ್ಕೆ ಹಣ: ಕಾಂಗ್ರೆಸ್‌ ಮತ್ತೊಂದು ಘೋಷಣೆ
1ನೇ ತರಗತಿಯಿಂದ 5ನೇ ತರಗತಿಯವರೆಗೆ ಸರ್ಕಾರಿ ಶಾಲೆಗೆ ತೆರಳುವ ಮಕ್ಕಳಿರುವ ಎಸ್‌ಸಿ, ಎಸ್‌ಟಿ ಕುಟುಂಬಗಳಿಗೆ ಹಣ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್‌ನ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಘೋಷಿಸಿದ್ದಾರೆ. ಇದನ್ನು ಒಳಗೊಂಡ ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. ದೆಹಲಿಯಿಂದ ಮುಂಬೈನತ್ತ ಹಾರಿದ ರಮೇಶ್‌ ಜಾರಕಿಹೊಳಿ; ಸಿಐಡಿ ತನಿಖೆಗೆ ಸಿಡಿ ಕೇಸ್‌ ವಹಿಸಲು ಒತ್ತಡ ತಂತ್ರ
ತಮ್ಮ ವಿರುದ್ಧದ ಸಿಡಿ ಬಿಡುಗಡೆ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕೈವಾಡವಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪಟ್ಟುಹಿಡಿದು ಕುಳಿತಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಅಮಿತ್‌ ಶಾ ಭೇಟಿ ಬಳಿಕ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್‌ ಬೆನ್ನು ಬಿದ್ದಿದ್ದಾರೆ. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

5. ಫೆ.7ರೊಳಗೆ ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ಘೋಷಿಸಿ; ಕಾಗಿನೆಲೆ ಶ್ರೀ ಒತ್ತಾಯ
ಕುರುಬ ಸಮಾಜದಿಂದ ಎಸ್‌ಟಿ ಮೀಸಲಾತಿ ಹೋರಾಟ ಪಾದಯಾತ್ರೆ ನಡೆಸಿ ಎರಡು ವರ್ಷಗಳಾಗಿದೆ. ಕುಲಶಾಸ್ತ್ರ ಅಧ್ಯಯನ ವರದಿ ಸರ್ಕಾರದ ಬಳಿಯಿದೆ. ಎಸ್‌ಟಿ ಮೀಸಲಾತಿಗಾಗಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು. ಫೆಬ್ರವರಿ 7ರ ಒಳಗಾಗಿ ಈ ಬಗ್ಗೆ (ST Status to Kurubas) ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಒತ್ತಾಯಿಸಿದ್ದಾರೆ. ಪೂರ್ಣ ಲೇಖನಕ್ಕೆ ಇಲ್ಲಿ ಕ್ಲಿಕ್​ ಮಾಡಿ

6. ವಿಸ್ತಾರ ಅಂಕಣ: ʻಸಬ್ ಕಾ ಸಾಥ್-ಸಬ್ ಕಾ ವಿಕಾಸ್ʼ ಎಂದು ಹೇಳುವ ಅನಿವಾರ್ಯತೆ ತಂದಿಟ್ಟಿದ್ದು ಯಾರು?
2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎಂದು ಹೇಳಿದಾಗ, ಇತಿಹಾಸ ತಿಳಿದ ಅನೇಕರಿಗೆ ಕೇಳಿಸಿದ್ದು, “ಹಿಂದು-ಮುಸ್ಲಿಮರ ಜತೆಗೆ, ಹಿಂದು-ಮುಸ್ಲಿಮರ ವಿಕಾಸ” ಎಂದೇ. ನಿಜಕ್ಕೂ ಈ ಸಬ್‌ ಕಾ ಸಾಥ್‌ -ಸಬ್‌ ಕಾ ವಿಕಾಸ್‌ನ ಒಳಾರ್ಥ ಏನು? ಎಲ್ಲರ ಅಭಿವೃದ್ಧಿ ಎಂಬ ಈ ಪರಿಕಲ್ಪನೆ ಹುಟ್ಟಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದ್ದು ಯಾಕೆ ಎನ್ನುವ ಬಗ್ಗೆ ವಿಶ್ಲೇಷಿಸಿದ್ದಾರೆ ವಿಸ್ತಾರನ್ಯೂಸ್‌ನ ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ ಅವರು. ಪೂರ್ಣ ಲೇಖನಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಪದ್ಮಭೂಷಣ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ​ ಇನ್ನಿಲ್ಲ
ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಮ್​ ಇಂದು ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಚೆನ್ನೈನ ನುಂಗಂಬಾಕ್ಕಂನ ಹಡೋಸ್ ರಸ್ತೆಯಲ್ಲಿರುವ ಅವರ ಮನೆಯಲ್ಲೇ ನಿಧನರಾಗಿದ್ದಾರೆ. ವಾಣಿ ಜಯರಾಂ​ ಹಣೆಗೆ ಗಾಯವಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕನ್ನಡ, ತಮಿಳು, ತೆಲುಗು, ಭೋಜಪುರಿ, ಮಲಯಾಳಂ, ಹಿಂದಿ ಸೇರಿ ಹಲವು ಭಾಷೆಗಳಲ್ಲಿ ೧೦೦೦೦ಕ್ಕೂ ಹೆಚ್ಚು ಹಾಡು ಹಾಡಿದ ಹೆಗ್ಗಳಿಕೆ ಇವರದ್ದು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ವಾಣಿ ಜಯರಾಂ ಅವರ ಮಹಾಸಾಧನೆಗೆ ಸಂಬಂಧಿಸಿದ ಇನ್ನಷ್ಟು ವರದಿಗಳು ವಿಸ್ತಾರ ನ್ಯೂಸ್‌ನಲ್ಲಿವೆ.
ವಾಣಿ ಜಯರಾಮ್ ಹಾಡಿರುವ ಜನಪ್ರಿಯ 25 ಕನ್ನಡ ಹಾಡುಗಳ ಪಟ್ಟಿ ಇಲ್ಲಿದೆ
ಸಂಗೀತಕ್ಕಾಗಿ ಬ್ಯಾಂಕ್​ ಉದ್ಯೋಗವನ್ನೇ ಬಿಟ್ಟವರು ವಾಣಿ ಜಯರಾಂ; ಸಾಧನೆಗೆ ಬೆಂಬಲವಾಗಿ ನಿಂತಿದ್ದರು ಪತಿ
ಗಾನ ಕೋಗಿಲೆ ವಾಣಿ ಜಯರಾಂ ನಡೆದು ಬಂದ ದಾರಿ
ಕನ್ನಡದಲ್ಲಿ 600 ಸೇರಿ 10 ಸಾವಿರಕ್ಕೂ ಅಧಿಕ ಹಾಡು ಹಾಡಿದ್ದ ವಾಣಿ ಜಯರಾಮ್‌

8. ಅಯೋಧ್ಯೆ ರಾಮಮಂದಿರ ಸ್ಫೋಟಿಸುವ ಬೆದರಿಕೆ, ನಿಷೇಧಿತ ಪಿಎಫ್‌ಐನ ಮೂವರು ವಶಕ್ಕೆ
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು ಸ್ಫೋಟಿಸುವ ಕುರಿತು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ನಿಷೇಧಿತ ಪಿಎಫ್‌ಐನ ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ನಿಷೇಧಿತ ವಸ್ತು ಬಳಕೆ; ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅಮಾನತು
ಭಾರತದ ಖ್ಯಾತ ಜಿಮ್ನಾಸ್ಟ್ ದೀಪಾ ಕರ್ಮಾಕರ್ ನಿಷೇಧಿತ ವಸ್ತು ಬಳಸಿರುವುದು ಸಾಬೀತಾದ ಕಾರಣ ಅವರಿಗೆ ಅಂತಾರಾಷ್ಟ್ರೀಯ ಪರೀಕ್ಷಾ ಸಂಸ್ಥೆ 21 ತಿಂಗಳ ಕಾಲ ಯಾವುದೇ ಕ್ರೀಡೆಯಲ್ಲಿ ಪಾಲ್ಗೊಳ್ಳದಂತೆ ಅಮಾನತು ಶಿಕ್ಷೆ ವಿಧಿಸಿದೆ. ಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್‌ ಮಾಡಿ

10. World Cancer Day 2023 : ಜೀವನ ಶೈಲಿ ಮೇಲೆ ನಿಗಾ ಇಟ್ಟರೆ ಕ್ಯಾನ್ಸರ್​ ಆತಂಕವೇ ಇರುವುದಿಲ್ಲ!
ರ್ಷಂಪ್ರತಿ ಒಂದು ಕೋಟಿಗೂ ಹೆಚ್ಚಿನ ಜೀವಗಳನ್ನು ಬಲಿ ಪಡೆಯುತ್ತಿದೆ ಕ್ಯಾನ್ಸರ್‌ ಎಂಬ ಮಾರಿ. ಕ್ಯಾನ್ಸರ್‌ ಸಂಬಂಧಿತ ೧೦ ಸಾವುಗಳಲ್ಲಿ ೭ ಮಂದಿ ಕೆಳ ಮತ್ತು ಮಧ್ಯಮ ವರ್ಗದಲ್ಲೇ ಇರುವವರು. ಇದರಲ್ಲಿ ಖೇದವಾಗುವ ಇನ್ನೂ ಒಂದು ವಿಷಯವೆಂದರೆ, ಇದಿಷ್ಟೂ ಸಾವುಗಳಲ್ಲಿ ಶೇ. ೪೦ರಷ್ಟು ತಪ್ಪಿಸಬಹುದಾದಂಥವು. ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು, ಮೊದಲಿಗೇ ರೋಗ ಪತ್ತೆಯಾಗಿ, ಸೂಕ್ತ ಚಿಕಿತ್ಸೆ ದೊರೆತರೆ ಕ್ಯಾನ್ಸರ್‌ ಗುಣಪಡಿಸಬಹುದು. ಫೆಬ್ರವರಿ ೪ರ ಕ್ಯಾನ್ಸರ್‌ ದಿನದ ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ನಲ್ಲಿ ಹಲವು ಪ್ರಮುಖ ವರದಿಗಳಿವೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇತರ ಪ್ರಮುಖ ಸುದ್ದಿಗಳು
೧. Agniveer Recruitment: ಅಗ್ನಿವೀರ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ, ಏನಿದು?
‌೨. ಹಣೆಗೆ ತಿಲಕ ಇಡಲು ನಿರಾಕರಿಸಿದ ಸಿರಾಜ್​, ಉಮ್ರಾನ್​ ಮಲಿಕ್, ವಿಕ್ರಮ್‌ ರಾಥೋಡ್‌​; ವಿಡಿಯೊ ವೈರಲ್​
೩. Kantara Movie : ಸಮಸ್ಯೆ ಹೇಳಿಕೊಂಡು ಬಂದ ವಿವಾಹಿತೆಯನ್ನು ತಾನೇ ವರಿಸುವುದಾಗಿ ಹೇಳಿದ ದೈವ ಪಾತ್ರಿ!
೪. ಶಿಕ್ಷಕರು ವಿದ್ಯಾರ್ಥಿಗೆ ಹೊಡೆಯುವುದು ಅಪರಾಧವಲ್ಲ: ಬಾಂಬೆ ಹೈಕೋರ್ಟ್‌
೫. ಪಕ್ಷಗಳು ಒಡೆದರೂ ಒಂದು ಪಕ್ಷ ಅಧಿಕಾರಕ್ಕೆ ಬರಲಿದೆ: ಕೋಡಿಮಠ ಶ್ರೀ ಭವಿಷ್ಯ
೬. ಪತ್ನಿ ಹರಿಪ್ರಿಯಾಗಾಗಿ ಸ್ಪೆಷಲ್‌ ಅಡುಗೆ ಮಾಡಿ ಉಣಬಡಿಸಿದ ವಸಿಷ್ಠ ಸಿಂಹ
೭. Doctor negligence: ಅನಾರೋಗ್ಯದಿಂದ ಬಾಲ ನಟಿ ಬಲಿ, ವೈದ್ಯರ ನಿರ್ಲಕ್ಷ್ಯ ಆರೋಪ
೮. ತಾತಯ್ಯ ತತ್ವಾಮೃತಂ : ಒಂದಂಶ ಕಡಿಮೆಯಾಗಿದ್ದರೂ ಚಿನ್ನವು ಅಪರಂಜಿಯಾಗುವುದಿಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Rakshit Shetty Richard Anthony Produce By Hombale
ದೇಶ5 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ5 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ5 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ1 day ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 day ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ1 day ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ1 day ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ1 day ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌