ವಿಸ್ತಾರ TOP 10 NEWS | ಸಕ್ಕರೆ ನಾಡಿಗೆ ತೆರಳಲಿರುವ ನುಡಿತೇರಿನಿಂದ, ಸ್ಯಾಂಟ್ರೊ ರವಿಯ ಇನ್ನಷ್ಟು ಪಾತಕಗಳವರೆಗೆ ಪ್ರಮುಖ ಸುದ್ದಿಗಳು - Vistara News

ಕನ್ನಡ ಸಾಹಿತ್ಯ ಸಮ್ಮೇಳನ

ವಿಸ್ತಾರ TOP 10 NEWS | ಸಕ್ಕರೆ ನಾಡಿಗೆ ತೆರಳಲಿರುವ ನುಡಿತೇರಿನಿಂದ, ಸ್ಯಾಂಟ್ರೊ ರವಿಯ ಇನ್ನಷ್ಟು ಪಾತಕಗಳವರೆಗೆ ಪ್ರಮುಖ ಸುದ್ದಿಗಳು

ವಿಸ್ತಾರ TOP 10 NEWS: ರಾಜ್ಯ, ದೇಶ, ಕ್ರಿಕೆಟ್‌, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಬೆಳವಣಿಗೆಗಳ ಪ್ರಮುಖ ಸುದ್ದಿ ತೋರಣ ಇಲ್ಲಿದೆ.

VISTARANEWS.COM


on

TOP 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕನ್ನಡದ ನಾಡು ನುಡಿಯ ೮೬ನೇ ಮಹೋತ್ಸವಕ್ಕೆ ತೆರೆ ಬಿದ್ದಿದೆ. ಮುಂದಿನ ಸಾಹಿತ್ಯ ಸಮ್ಮೇಳನಕ್ಕಾಗಿ ನುಡಿತೇರು ಸಕ್ಕರೆ ನಾಡಿಗೆ ತೆರಳಲಿದೆ. ವಿವಾದಿತ ಸ್ಯಾಂಟ್ರೊ ರವಿ ಗೃಹ ಸಚಿವರ ಮನೆಯಲ್ಲೇ ಕುಳಿತು ದುಡ್ಡು ಎಣಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಮೇಲೆ ಹೊಸ ಹೊಸ ರೀತಿಯಲ್ಲಿ ಮುಗಿಬಿದ್ದ ಬಿಜೆಪಿ ಮತ್ತು ಚಿತ್ರದುರ್ಗದಲ್ಲಿ ಬೃಹತ್‌ ಸಮಾವೇಶದ ಮೂಲಕ ಸೆಡ್ಡು ಹೊಡೆದ ಕಾಂಗ್ರೆಸ್‌ನ ಸವಾಲಿನ ಸುದ್ದಿ. ರಾಹುಲ್‌ ಗಾಂಧಿ ಅವರ ಚಳಿ ತಡೆಯುವ ರಹಸ್ಯ ಸ್ಫೋಟಗೊಂಡದ್ದು, ರಿಷಭ್‌ ಪಂತ್‌ ಅವರು ಐಪಿಎಲ್‌ ಆಡದಿದ್ದರೂ ೧೬ ಕೋಟಿ ರೂ. ಸಿಗುವುದರ ರಹಸ್ಯದೊಂದಿಗೆ, ೧೨ ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟ ಆತಂಕದ ಘಟನೆ ಸಹಿತ ನಾನಾ ವಲಯಗಳ ಪ್ರಮುಖ ಸುದ್ದಿಗಳ ಗುಚ್ಛವಿದು ವಿಸ್ತಾರ TOP 10 NEWS.

1. ಏಲಕ್ಕಿ ನಾಡಿನಿಂದ ಸಕ್ಕರೆ ನಾಡಿಗೆ ಸವಿನುಡಿ ತೇರು: ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ
ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಕ್ಕರೆ ನಾಡು ಮಂಡ್ಯದಲ್ಲಿ ಆಯೋಜನೆ ಮಾಡಲು ನಿರ್ಧಾರ ಮಾಡಲಾಗಿದೆ. ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಡುವೆಯೇ ಕಸಾಪ ಅಧ್ಯಕ್ಷ ಡಾ. ಮಹೇಶ್‌ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೨. ಅನ್ಯ ಭಾಷೆ ಹೇರಬೇಡಿ, ಹೋರಾಟಗಾರರನ್ನು ಬಿಡುಗಡೆ ಮಾಡಿ: ನಾಡು-ನುಡಿಯ ಕುರಿತು 6 ನಿರ್ಣಯ
ಹಾವೇರಿ:
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಒಟ್ಟು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಹಿಂದಿ ಹಾಗೂ ಇನ್ನಾವುದೇ ಭಾಷೆಯನ್ನು ಕನ್ನಡದ ಮೇಲೆ ಹೇರುವಂತಿಲ್ಲ ಎನ್ನುವ ನಿರ್ಣಯವನ್ನೂ ಅಂಗೀಕರಿಸಲಾಗಿದೆ. ಸಮ್ಮೇಳನದ ಅಂತಿಮ ದಿನವಾದ ಭಾನುವಾರ ಒಟ್ಟು ಆರು ನಿರ್ಣಯಗಳ ಕುರಿತು ಕಸಾಪ ಗೌರವ ಕೋಶಾಧ್ಯಕ್ಷ ಬಿ.ಎಂ. ಪಟೀಲ್‌ ಪಾಂಡು ಮಾಹಿತಿ ನೀಡಿದರು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ವರದಿಗಳನ್ನೂ ಓದಿ
ಸಾಹಿತಿಗಳು ರಾಜಕೀಯ ಮಾಡಬೇಡಿ: ಮುಸ್ಲಿಂ ಪ್ರಾತಿನಿಧ್ಯದ ಕುರಿತು ಕಸಾಪಕ್ಕೆ ಬಿ.ಕೆ. ಹರಿಪ್ರಸಾದ್‌ ಬುದ್ಧಿಮಾತು
– ಒಡೆಯುವವರನ್ನು ತಿರಸ್ಕರಿಸಿ: ಹರಿಪ್ರಸಾದ್ ಮಾತಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ತಿರುಗೇಟು

೩. ಗೃಹ ಸಚಿವರ ಮನೆಯಲ್ಲೇ 15 ಲಕ್ಷ ರೂ. ಎಣಿಸಿದ ಸ್ಯಾಂಟ್ರೋ ರವಿ!
ಮೈಸೂರಿನ ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣದ ಲೆಕ್ಕ ಹಾಕಿರುವ ಫೋಟೊ ತೆಗೆದವರು ಯಾರು? ಅವರ ಮನೆಯಲ್ಲಿ ೧೫ ಲಕ್ಷ ಎಣಿಕೆ ಮಾಡಿದ್ದರ ಬಗ್ಗೆ ಅವರೇ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ರಾಜ್ಯಾದ್ಯಂತ ಸ್ಯಾಂಟ್ರೋ ರವಿ ಪ್ರಭಾವ! ಯುವತಿಗೆ 1.83 ಲಕ್ಷ ಮೌಲ್ಯದ ರ‍್ಯಾಡೋ ವಾಚ್ ಗಿಫ್ಟ್!
ಸುಳ್ಳು ಕೇಸು ಹಾಕಿ ಪೊಲೀಸರು, ಅಧಿಕಾರಿಗಳನ್ನು ಕಾಡುತ್ತಿರುವ ಸ್ಯಾಂಟ್ರೋ ರವಿ, ಅದಕ್ಕೇ ಅವರಿಗೆ ಭಯ!

4. ಕಾಂಗ್ರೆಸ್-ಬಿಜೆಪಿ ನಡುವೆ ಥಟ್ ಅಂತ ಹೇಳಿ ಫೈಟ್; ಶಿಕ್ಷಕರ ನೇಮಕಾತಿ‌ ಅಕ್ರಮ V/S 40% ಕಮಿಷನ್‌ ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಲ್ಕೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ವಿವಿಧ ಸಮಾವೇಶಗಳು, ಯಾತ್ರೆಗಳು, ಸಭೆಗಳು ಸೇರಿದಂತೆ ಹಲವು ರೀತಿಯ ಚಟುವಟಿಕೆಯನ್ನು ಆಯೋಜನೆ ಮಾಡುತ್ತಿವೆ. ಈ ಮೂಲಕ ಮತದಾರರ ಮನ ಮುಟ್ಟುವ ತಂತ್ರಗಾರಿಕೆಗೆ ಮೊರೆಹೋಗಿವೆ. ಪೇಸಿಎಂ, ಕೆಸಿಸಿ (ಕಂಗಾಲ ಕಾಂಗ್ರೆಸ್‌ ಕಂಪನಿ)ಗಳಂತಹ ಅಭಿಯಾನಗಳ ಬಳಿಕ ಈಗ “ಥಟ್ ಅಂತ ಹೇಳಿ” ಅಭಿಯಾನವು ಕಾಂಗ್ರೆಸ್‌-ಬಿಜೆಪಿ ಮಧ್ಯೆ ಶುರುವಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೫. ಅಂದಿನ ಟಿಪ್ಪು ಇಂದಿನ ಸಿದ್ದುವೇ? ಸಿದ್ದು ನಿಜ ಕನಸುಗಳು ಪುಸ್ತಕ ಸಿದ್ಧಪಡಿಸಿದ ಬಿಜೆಪಿ: ಜ. 9ಕ್ಕೆ ರಿಲೀಸ್‌ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರ ಮೇಲೆ ಬಗೆಬಗೆಯ ಅಸ್ತ್ರ ಪ್ರಯೋಗ ಮಾಡುತ್ತಿರುವ ಬಿಜೆಪಿ (Siddaramaiah VS BJP) ಈಗ ಹೊಸದೊಂದು ಅಸ್ತ್ರ ರೆಡಿ ಮಾಡಿದೆ. ಅದುವೇ ಒಂದು ಪುಸ್ತಕ! ಟಿಪ್ಪು ನಿಜ ಕನಸುಗಳು ಮಾದರಿಯಲ್ಲಿ ʻಸಿದ್ದು ನಿಜ ಕನಸುಗಳುʼ! ಪುಸ್ತಕವನ್ನು ಬಿಜೆಪಿ ಸಿದ್ಧಪಡಿಸಿದ್ದು, ಸೋಮವಾರ ಅದರ ಬಿಡುಗಡೆ ನಡೆಯಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. Rishabh Pant | ಐಪಿಎಲ್​ ಆಡದಿದ್ದರೂ ಪಂತ್​ಗೆ 16 ಕೋಟಿ ರೂ. ಸಿಗಲಿದೆ; ಇದು ಹೇಗೆ ಸಾಧ್ಯ?
ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್​ ಪಂತ್(Rishabh Pant)​ ಚೇತರಿಕೆಗೆ ಸುಮಾರು 9 ತಿಂಗಳು ಸಮಯ ತೆಗೆದುಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್​ ಈ ವರ್ಷ ನಡೆಯುವ ಎಲ್ಲ ಕ್ರಿಕೆಟ್​ ಸರಣಿಯಿಂದ ದೂರ ಉಳಿಯುವುದು ಬಹುತೇಕ ಖಚಿತಗೊಂಡಂತಿದೆ. ‌ ಆದರೆ ಅವರಿಗೆ ೧೬ ಕೋಟಿ ರೂ. ಸಿಗಲಿದೆ. ಅದು ಹೇಗೆ? ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಚಳಿ ನಿಗ್ರಹಕ್ಕೆ ರಾಹುಲ್‌ ಟಿ ಶರ್ಟ್‌ ಒಳಗೆ ಥರ್ಮಲ್‌ ಉಡುಪು, ಕೈ-ಕಮಲ ಕೆಸರೆರಚಾಟ
ಬಿಜೆಪಿ ಹಾಗೂ ಕಾಂಗ್ರೆಸ್‌ ಇರುವುದೇ ಹಾಗೆ. ದೇಶ, ಧರ್ಮ, ಸೇನೆ, ಜಾತಿ, ಉಡುಪು, ಮಾಂಸಾಹಾರ ಸೇರಿ ಪ್ರತಿಯೊಂದು ವಿಷಯದಲ್ಲೂ ಕೆಸರೆರಚಾಟ ಮಾಡಿದ್ದರೆ ಎರಡೂ ಪಕ್ಷಗಳಿಗೆ ಆಗುವುದಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಚಳಿ ನಿಗ್ರಹಕ್ಕೆ ಟಿ-ಶರ್ಟ್‌ ಒಳಗೆ ಥರ್ಮಲ್‌ ಉಡುಪು ಧರಿಸಿದ್ದು ಕೂಡ ಎರಡೂ ಪಕ್ಷಗಳ ಮಧ್ಯೆ ವಾಕ್ಸಮರ ಶುರುವಾಗಲು ಕಾರಣವಾಗಿದೆ. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೮. Actor Yash‌ birthday | ಮಗ ಸರ್ಕಾರಿ ಅಧಿಕಾರಿ ಆಗಬೇಕೆಂಬ ಆಸೆ ಅಪ್ಪನದಾಗಿತ್ತು: ಯಶ್‌ ಬಗ್ಗೆ ಕೆಲವು ಗೊತ್ತಿರದ ಸಂಗತಿಗಳು ಇಲ್ಲಿವೆ!
ಕನ್ನಡ ಚಿತ್ರರಂಗವನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ ಕೆಜಿಎಫ್​ ಸಿನಿಮಾದ ನಾಯಕ ರಾಕಿಂಗ್‌ ಸ್ಟಾರ್‌ ಯಶ್‌ಗೆ ಜನವರಿ 8ರಂದು 37ನೇ ಜನುಮ ದಿನದ ಸಂಭ್ರಮ.​ ಅಭಿಮಾನಿಗಳಿಗೆ ಪತ್ರ ಬರೆದು ಪತ್ನಿ, ಮಕ್ಕಳೊಂದಿಗೆ ಬರ್ತ್ ಡೇ ಸೆಲೆಬ್ರೇಷನ್‌ಗೆ ದುಬೈಗೆ ಹಾರಿದ್ದಾರೆ ಯಶ್. ಯಶ್‌ ಬಗ್ಗೆ ಕೆಲವು ಗೊತ್ತಿರದ ಸಂಗತಿಗಳು ಇಲ್ಲಿವೆ! ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೯. Tweaks In Twitter | ಫೆಬ್ರವರಿಯಿಂದ ಟ್ವಿಟರ್‌ನಲ್ಲಿ 280 ಪದಗಳ ಮಿತಿ ರದ್ದು, ದೀರ್ಘ ಟ್ವೀಟ್‌ಗಳಿಗೆ ಅವಕಾಶ
ಮುಂದಿನ ಫೆಬ್ರವರಿಯಿಂದ ಟ್ವಿಟರ್‌ನಲ್ಲಿ ಹಲವಾರು ಹೊಸ ಬದಲಾವಣೆಗಳು ನಡೆಯಲಿವೆ. ಮುಖ್ಯವಾಗಿ ಸುದೀರ್ಘವಾದ ಟ್ವೀಟ್‌ ಬರಹಗಳಿಗೂ ಅವಕಾಶ ಸಿಗಲಿದೆ. ಟ್ವಿಟರ್‌ನಲ್ಲಿ ಈಗ ಟ್ವೀಟ್‌ ಮಾಡುವಾಗ 280 ಪದಗಳ ಮಿತಿ ಇದೆ. ಆದರೆ ಫೆಬ್ರವರಿಯಿಂದ ಈ ಮಿತಿ ರದ್ದಾಗಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಕೇವಲ 12 ವರ್ಷದ ಬಾಲಕ ಹೃದಯಾಘಾತದಿಂದ ಮೃತ್ಯು, ಮಲಗಿದ್ದಾಗಲೇ ಕಾಡಿತು ಎದೆ ನೋವು
ಕೇವಲ ೧೨ ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ (Heart attack) ಪ್ರಾಣ ಕಳೆದುಕೊಂಡಿದ್ದಾನೆ. ಮನೆಯಲ್ಲಿ ಮಲಗಿದ್ದ ವೇಳೆ ಒಮ್ಮಿಂದೊಮ್ಮೆಗೇ ಎದೆನೋವು ಕಾಣಿಸಿಕೊಂಡಿದ್ದು, ನೋವಿನಿಂದ ನರಳಿ ಮಂಚದಿಂದ ಕೆಳಗೆ ಉರುಳಿ ಬಿದ್ದು ಮೃತಪಟ್ಟಿದ್ದಾನೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇತರ ಪ್ರಮುಖ ಸುದ್ದಿಗಳು
1. ಅಮೆರಿಕದ ಸಿಂಗರ್ ಮನೆಯ ಬೆಕ್ಕು ಜಗತ್ತಿನ 3ನೇ ಶ್ರೀಮಂತ ಸಾಕುಪ್ರಾಣಿ! ಟಾಪ್‌ ೨ ಯಾವ ಪ್ರಾಣಿ?
೨. ಕಾಂಗ್ರೆಸ್‌ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಪರ ಮತಯಾಚಿಸಿದ ಬಿಜೆಪಿ ಸಂಸದ ಜಿ.ಎಸ್.ಬಸವರಾಜು!
೩. ಜಯಲಲಿತಾ ಅವರನ್ನು ಕೊಂದಿದ್ದು ಮೋದಿ, ವಿವಾದ ಹುಟ್ಟುಹಾಕಿದ ಡಿಎಂಕೆ ಶಾಸಕ
೪. ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಸರಕಾರಿ ನೌಕರನ ಬಂಧನ: ಮಕ್ಕಳಿಗೆ ಪುಸ್ತಕ ಹಂಚುತ್ತಿದ್ದ!
೫. Surendran K Pattel | ಕಾಸರಗೋಡಿನಲ್ಲಿ ಬೀಡಿ ಕಟ್ಟುತ್ತಿದ್ದ ಬಾಲಕ ಈಗ ಅಮೆರಿಕದಲ್ಲಿ ಜಿಲ್ಲಾ ನ್ಯಾಯಾಧೀಶ
೬. ಮುಳುಗುತ್ತಿರುವ ಜೋಶಿಮಠ: ಕೇಂದ್ರ ಸಭೆ, ಸೋಮವಾರ ಅಧಿಕಾರಿಗಳ ಭೇಟಿ, ಇಲ್ಲಿದೆ ಸಮಗ್ರ ವರದಿ
೭. ಪರಿಶಿಷ್ಟರ ಕೈಗೆ ಹಣ ಸಿಗಬಾರದು ಎಂದು ಬಿಜೆಪಿ ಮೀಸಲಾತಿ ತಪ್ಪಿಸಿದೆ: ಮಲ್ಲಿಕಾರ್ಜುನ ಖರ್ಗೆ
೮. ಮೇಲ್ಜಾತಿಯವರಿಗೆ ಶೇ.10 ಮೀಸಲಾತಿ ಸಂವಿಧಾನ ಬಾಹಿರ: ಸಿದ್ದರಾಮಯ್ಯ ಕಿಡಿ
೯. ಕೂಡಲ ಸಂಗಮ ತ್ರಿವೇಣಿ ಸಂಗಮ, ಗೋಕರ್ಣದಲ್ಲಿ ಸಿದ್ದೇಶ್ವರ ಶ್ರೀ ಚಿತಾಭಸ್ಮ ವಿಲೀನ
೧೦. ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ ಮಾಡಿದವರು 18 ಗಂಟೆಯಲ್ಲಿ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Kannada Sahitya Sammelana: ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 5 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ಕನ್ನಡ ಭಾಷೆಯ ಜ್ಞಾನ ಇಂದು ದೇಶ-ವಿದೇಶಗಳಲ್ಲಿ ಪಸರಿಸಿದೆ. ಯಾವುದೇ ದೇಶಕ್ಕೆ ಹೋದರು ನಮ್ಮ ಕನ್ನಡಿಗರು ನೆಲೆಸಿರುವುದನ್ನು ನಾವು ಕಾಣುತ್ತೇವೆ. ಕನ್ನಡ ಭಾಷೆಗಿರುವ ಶ್ರೀಮಂತಿಕೆಯ ಸಾಹಿತ್ಯ, ಸಂಸ್ಕೃತಿ, ಅಪಾರ ಜ್ಞಾನ ಸಂಪತ್ತಿನಿಂದಾಗಿ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

VISTARANEWS.COM


on

Minister Dinesh Gundurao drives for the 5th Kannada Sahitya Sammelana in Bengaluru

ಬೆಂಗಳೂರು: ನಗರದ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೆಳಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು.‌ ಬಳಿಕ ಶ್ರೀರಾಮ್‌ಪುರ ಸನ್ ರೈಸ್ ವೃತ್ತದಿಂದ ಶೇಷಾದ್ರಿಪುರಂವರೆಗೆ ಕನ್ನಡ ಜಾಗೃತಿ ಮೆರವಣಿಗೆ ನಡೆಸಲಾಯಿತು.‌ ಸಾವಿರಾರು ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿ ಕನ್ನಡ ಹಬ್ಬಕ್ಕೆ ಮೆರಗು ನೀಡಿದರು.‌ ವಿವಿಧ ಸಾಂಸ್ಕೃತಿಕ ಮೇಳಗಳು ಕನ್ನಡ ಜಾಗೃತಿ ಮೆರವಣಿಗೆಯಲ್ಲಿ ಗಮನ ಸೆಳೆದವು.

ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದಲ್ಲಿ ಸಾಂಸ್ಕೃತಿಕ ಭಂಡಾರವೇ ಇದೆ. ಕನ್ನಡ ಭಾಷೆಯ ಜ್ಞಾನ ಇಂದು ದೇಶ ವಿದೇಶಗಳಲ್ಲಿ ಪಸರಿಸಿದೆ. ಯಾವುದೇ ದೇಶಕ್ಕೆ ಹೋದರು ನಮ್ಮ ಕನ್ನಡಿಗರು ನೆಲೆಸಿರುವುದನ್ನು ನಾವು ಕಾಣುತ್ತೇವೆ. ಕನ್ನಡ ಭಾಷೆಗಿರುವ ಶ್ರೀಮಂತಿಕೆಯ ಸಾಹಿತ್ಯ, ಸಂಸ್ಕೃತಿ, ಅಪಾರ ಜ್ಞಾನ ಸಂಪತ್ತಿನಿಂದಾಗಿ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

ಗಾಂಧಿನಗರದಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, ಕನ್ನಡಕ್ಕೆ ನಮ್ಮ ಕಡೆಯಿಂದ ಒಂದು ಸಣ್ಣ ಸೇವೆ. ಯುವಕರು ನಮ್ಮ ಕನ್ನಡ ಭಾಷೆಯಲ್ಲಿರುವ ಜ್ಞಾನವನ್ನು ಸಂಪಾದಿಸಿಕೊಂಡು, ಕನ್ನಡ ಸೇವೆಗೆ ಸದಾ ಸಜ್ಜಾಗಿರಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

ವಿ.ರಾಣಿ ಗೋವಿಂದರಾಜು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದಲ್ಲಿ ಕವಿ ಗೋಷ್ಠಿ ಸೇರಿದಂತೆ, ಕನ್ನಡ ನಾಳೆಗಳು ಹೇಗಿರಬೇಕು ಹಾಗೂ ಸರ್ವಜನಾಂಗದ ಶಾಂತಿಯ ತೋಟ- ಗಾಂಧಿನಗರ ಕ್ಷೇತ್ರ ಎಂಬ ಗೋಷ್ಠಿಗಳನ್ನು ಆಯೋಜಿಸಲಾಗಿತ್ತು. ಅಲ್ಲದೇ ಕನ್ನಡ ಸೇವೆ ಸಲ್ಲಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 50 ಕ್ಕೂ ಹೆಚ್ಚು ಗಣ್ಯರನ್ನು ಇದೇ ವೇಳೆ ಗೌರವಿಸಿ, ಸನ್ಮಾನಿಸಲಾಯಿತು.

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Karnataka Rain : ಭಾರಿ ಮಳೆಗೆ (Heavy Rain Alert) ಉಕ್ಕಿ ಹರಿಯುತ್ತಿದ್ದ ಸೇತುವೆ ಮೇಲೆ ಹೋದ ರಾಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಮತ್ತೊಂದು ಕಡೆ ಮನೆಯೊಂದು ನೆಲಸಮವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರೆ, ಮರಗಳು ಧರೆಗುರುಳಿವೆ.

VISTARANEWS.COM


on

Karnataka Rain

ಚಿಕ್ಕಮಗಳೂರು: ಭಾರಿ ಮಳೆಯು (Karnataka Rain) ಸಾವು-ನೋವಿಗೆ ಕಾರಣವಾಗುತ್ತಿದೆ. ಅಬ್ಬರಿಸುತ್ತಿರುವ ಮಳೆಗೆ ಸೇತುವೆಗಳು ಮುಳುಗಡೆಯಾಗಿವೆ. ಚಿಕ್ಕಮಗಳೂರಿನ ಹೆಬ್ಬಾಳೆ ಸೇತುವೆ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ಹೋಗುವಾಗ ರಾಸುವೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಹೆಬ್ಬಾಳೆ ಸೇತುವೆ ಮೇಲೆ 2-3 ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು, ದಡ ತುಸು ದೂರದಲ್ಲೇ ಇದ್ದಾಗ ನದಿಗೆ ದನವೊಂದು ಬಿದ್ದಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನಿಂದ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆಯಲ್ಲಿ, ಜನರ ಕಣ್ಣೇದುರೇ ಭದ್ರೆಯ ಒಡಲಲ್ಲಿ ರಾಸು ಕೊಚ್ಚಿ ಹೋಗಿದೆ.

ರಸ್ತೆಗೆ ಬಿದ್ದ ಬೃಹತ್‌ ಮರ

ಪ್ರವಾಸಿಗರ ನಿಷೇಧದಿಂದ ಭಾರೀ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಮುಳ್ಳಯ್ಯನಗಿರಿ ರಸ್ತೆಯ ಮೂರನೇ ತಿರುವಿನಲ್ಲಿ ಘಟನೆ ನಡೆದಿದೆ. ವಾಹನಗಳು ಇಲ್ಲದಿದ್ದರಿಂದ ಅನಾಹುತ ತಪ್ಪಿದೆ. ಗುಡ್ಡದ ಮಣ್ಣಿನ ಸಮೇತ ಮರ ಬಿದ್ದು, ಸ್ಥಳೀಯ ಗ್ರಾಮಸ್ಥರು ಓಡಾಡಲು ಪರದಾಟ ಅನುಭವಿಸಿದರು. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಮರ ತೆರವು ಮಾಡಲಾಯಿತು.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆಯು ಆರ್ಭಟಿಸುತ್ತಿದ್ದು ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿಯ ಉಪ ನದಿಗಳ ನೀರಿನ ಮಟ್ಟ ಏರಿಕೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಭರ್ತಿ‌ಯಾಗಿದೆ. ಭಗಂಡೇಶ್ವರ ಸನ್ನಿದಿಯ ಮೆಟ್ಟಿಲವರೆಗೂ ನೀರು ನಿಂತಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಏರಿಕೆಯಾಗುತ್ತಿದ್ದು, ಭಾಗಮಂಡಲ-ನಾಪೋಕ್ಲು ರಸ್ತೆಯು 3ನೇ ಬಾರಿಗೆ ಬಂದ್ ಆಗುತ್ತಿದೆ.

ಮಂಗಳೂರಲ್ಲಿ 12 ಮನೆಗಳಿಗೆ ನುಗ್ಗಿದ ನೇತ್ರಾವತಿ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬಂಟ್ವಾಳದ ಪಾಣೆಮಂಗಳೂರು ಆಲಡ್ಕದಲ್ಲಿ ಸುಮಾರು 12 ಮನೆಗಳಿಗೆ ನೀರು ನುಗ್ಗಿದೆ. ಅಪಾಯದಲ್ಲಿದ್ದ 12 ಮನೆಗಳ ಜನರನ್ನು ಜಿಲ್ಲಾಡಳಿತ ಸ್ಥಳಾಂತರ ಮಾಡಿದೆ. ಮಂಗಳೂರಲ್ಲಿ ನೇತ್ರಾವತಿ ಅಬ್ಬರ

ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳದಿಂದಾಗಿ ಬೋಳಿಯಾರ್ ಗ್ರಾಮದ ಅಮ್ಮೆಂಬಳದಲ್ಲಿ ಸಂಪರ್ಕ ಕಡಿತಗೊಂಡಿದೆ. ಅಮ್ಮೆಂಬಳ-ಜಾರದಗುಡ್ಡೆ ಸಂಪರ್ಕ ಕಡಿತವಾಗಿದೆ. ನೇತ್ರಾವತಿ ನದಿ ನೀರು ಗದ್ದೆ ಪೂರ್ತಿ ಆವರಿಸಿದೆ. ಸುಮಾರು ನೂರ ಎಪ್ಪತ್ತೈದುಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ನೆರೆ ನೀರು ಆವರಿಸಿದೆ. ಈ ಹಿನ್ನೆಲೆಯಲ್ಲಿ 7 ಕಿ.ಮೀ ಸುತ್ತುಬಳಸಿ ಹೋಗಬೇಕಿದೆ. ರಸ್ತೆ ನಿರ್ಮಾಣ ಮಾಡುವಂತೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಉಡುಪಿಯಲ್ಲಿ ಮನೆ ನೆಲಸಮ, ಸೋಮೇಶ್ವರದಲ್ಲಿ ಗುಡ್ಡ ಕುಸಿತ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಟ್ಟೆಗುಡ್ಡೆ ಎಂಬಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಕಡೆಕಾರು ಪಂಚಾಯತ್‌ನ ಶಾರದ ಪೂಜಾರ್ತಿ ಎಂಬುವವರ ಮನೆ ನೆಲಸಮವಾಗಿದೆ. ಸುಮಾರು 30 ವರ್ಷ ಹಳೆಯದಾದ ಮನೆಯಲ್ಲಿ ಒಟ್ಟು 10 ಮಂದಿ ವಾಸಿಸುತ್ತಿದ್ದರು. ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದು, ಮನೆ ಕುಸಿಯುವ ಮೊದಲೇ ಓಡಿ ಹೋಗಿದ್ದರಿಂದ ಅಪಾಯ ತಪ್ಪಿದೆ. ಮನೆ ಬೀಳುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉಡುಪಿಯ ಬೈಂದೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಕ್ಕೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಬೈಂದೂರು ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ಸೋಮೇಶ್ವರ ಗುಡ್ಡ ಕುಸಿಯುತ್ತಿದೆ. ಗುಡ್ಡದ ಮೇಲೆ ಖಾಸಗಿಯವರ ಅನಧೀಕೃತ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡಕ್ಕೆ ಸಂಪರ್ಕ ಕಲ್ಪಿಸಲು ಗುಡ್ಡ ಕೊರೆದು ರಸ್ತೆ ನಿರ್ಮಿಸಿದ್ದಾರೆ. ಯಾವುದೇ ಸ್ಥಳೀಯ ಪರವಾನಿಗೆ ಇಲ್ಲದೆ ಕಟ್ಟಡ ನಿರ್ಮಾಣ ಮಾಡಿರುವ ಆರೋಪವಿದೆ. ನಿರಂತರ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಬಳಿ ಗುಡ್ಡ ಕುಸಿತ ಉಂಟಾಗಿದೆ. ಹೀಗಾಗಿ ಸೋಮೇಶ್ವರ ಬೀಚ್ ರಸ್ತೆ ಬಂದ್ ಮಾಡಿದ್ದಾರೆ. ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದಂತಾಗಿದೆ. ಗುಡ್ಡ ಸಂಪೂರ್ಣ ಕುಸಿದರೆ ಬೈಂದೂರು ಪ್ರಸಿದ್ಧ ಪ್ರವಾಸಿ ತಾಣ ಕಣ್ಮರೆಯಾಗಲಿದೆ.

ಪಶ್ಚಿಮ ಘಟ್ಟದಲ್ಲೂ ಮಳೆ ಅಬ್ಬರ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ಹೆಮ್ಮಡಗಾ ಬಳಿ ಅಪಾಯದ ಮಟ್ಟ ಮೀರಿ ಹಾಲತ್ರಿ ಹಳ್ಳ ಹರಿಯುತ್ತಿದೆ. ಸೇತುವೆ ಬಂದ್‌ ಆಗಿದ್ದರಿಂದ ಇಪ್ಪತ್ತೈದು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸೇತುವೆಗೆ ತಡೆಗೋಡೆ ಇಲ್ಲದೇ ಜೀವ ಕೈಯಲ್ಲಿ ಹಿಡಿದು ಸಾಗುವಂತಾಗಿದೆ. ರಾತ್ರಿ ವೇಳೆ ಸ್ವಲ್ಪ ನೀರು ಸೇತುವೆ ಮೇಲಿದ್ದರೂ ಹಳ್ಳಕ್ಕೆ ಬೀಳುವ ಸಾಧ್ಯತೆ ಇದೆ.

ಸುತ್ತೂರು ಸೇತುವೆ ಮುಳುಗಡೆ

ಮೈಸೂರು – ಸುತ್ತೂರು ಗ್ರಾಮಕ್ಕೆ ಸಂಪರ್ಕ ಕೇಂದ್ರವಾಗಿದ್ದ ಸೇತುವೆ ಮುಳುಗಡೆ ಆಗಿದೆ. ಬೀಚನಹಳ್ಳಿಯ ಕಬಿನಿ ಡ್ಯಾಂ ಭರ್ತಿಯಾದ ಹಿನ್ನೆಲೆಯಲ್ಲಿ 70 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಹೀಗಾಗಿ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸೇತುವೆ ಮುಳುಗಡೆಯಾಗಿ, ಸುತ್ತೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಸ್ಥಗಿತಗೊಂಡಿದೆ. ಸೇತುವೆ ಮೇಲೆ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ.

ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ

ಶಿವಮೊಗ್ಗದ ಹೊಸನಗರ ತಾಲೂಕಿನ ಅರಸಾಳು ಬಟಾಣಿಜೆಡ್ಡು ಬಳಿ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಭಾರಿ ಮಳೆಗೆ ಬೃಹತ್ ಮರವೊಂದು ರೈಲ್ವೆ ಹಳಿಗಳ ಮೇಲೆ ಬಿದ್ದಿದೆ. ಜತೆಗೆ ವಿದ್ಯುತ್ ತಂತಿಗಳಿಗೂ ಸಹ ಹಾನಿಯಾಗಿದೆ. ಇದರಿಂದಾಗಿ ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಮರಬಿದ್ದ ಕಾರಣ ಅರಸಾಳು ಬಳಿಯ ಬಟಾಣಿಜೆಡ್ಡು ಬಳಿ ನಿಲ್ಲುವಂತಾಯಿತು. 7.15ಕ್ಕೆ ಶಿವಮೊಗ್ಗ ತಲುಪಬೇಕಿದ್ದ ರೈಲು 9 ಗಂಟೆಗೆ ಆಗಮಿಸಿತು. ಸುಮಾರು ಎರಡು ತಾಸು ಕಾದ ಪ್ರಯಾಣಿಕರು ಹೈರಾಣಾದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Kannada Sahitya Sammelana: ಡಿಸೆಂಬರ್‌ 20, 21, 22ರಂದು ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Kannada Sahitya Sammelana: ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ.

VISTARANEWS.COM


on

mandya kannada sahitya sammelana

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು (Kannada Sahitya Sammelana) ಮಂಡ್ಯದಲ್ಲಿ ಡಿಸೆಂಬರ್‌ 20, 21, 22ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಂಡ್ಯದಲ್ಲಿ 48ನೇ ಸಾಹಿತ್ಯ ಸಮ್ಮೇಳನ 1974ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63ನೇ ಸಾಹಿತ್ಯ ಸಮ್ಮೇಳನ 1994ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಳೆದ ವರ್ಷ ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳ ನಡೆದಿತ್ತು. 2023ರ ಜನವರಿ 6, 7, 8ರಂದು ಸಾಹಿತ್ಯ ಸಮ್ಮೇಳನ ಕವಿ ದೊಡ್ಡರಂಗೇಗೌಡರ ಅಧ್ಯಕ್ಷತೆಯನ್ನು ನಡೆದಿತ್ತು.

ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ | ಬೆಟ್ಟದಂತೆ ಬಂದ ಜನ. ಮುಗಿಯಿತೇ ಸಮ್ಮಿಲನ?

Continue Reading

ಕನ್ನಡ ಸಾಹಿತ್ಯ ಸಮ್ಮೇಳನ

Sahitya Sammelana: ಮಾ.20 ರಂದು ಸಾಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ವಿ.ಗಣೇಶ್ ಅಧ್ಯಕ್ಷತೆ

Sahitya Sammelana: ಹಿರಿಯ ಸಾಹಿತಿ ವಿ.ಗಣೇಶ್ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಾಸಕ ಹಾಲಪ್ಪ ಅವರು ಉದ್ಘಾಟಿಸಲಿದ್ದಾರೆ.

VISTARANEWS.COM


on

V Ganesh writer Sahitya Sammelana sagara
ಹಿರಿಯ ಸಾಹಿತಿ ವಿ.ಗಣೇಶ್.

ಸಾಗರ: ಇಲ್ಲಿನ ಶಿವಪ್ಪ ನಾಯಕ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ತಾಲೂಕು ಮಟ್ಟದ 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು (Sahitya Sammelana) ಹಿರಿಯ ಸಾಹಿತಿ ವಿ.ಗಣೇಶ್ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ಮಾ. 20ರಂದು ಬೆಳಗ್ಗೆ 9 ರಿಂದ ಆಯೋಜಿಸಲಾಗಿದೆ.

ಬೆಳಗ್ಗೆ 8.45ಕ್ಕೆ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ರಾಷ್ಟ್ರ ಧ್ವಜಾರೋಹಣ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನಾಗೇಶ್ ಬ್ಯಾಲಾಳ ನಾಡ ಧ್ವಜವನ್ನು ಹಾಗೂ ಕಸಾಪ ಅಧ್ಯಕ್ಷ ವಿ.ಟಿ.ಸ್ವಾಮಿ ನಾಡ ಧ್ಜಜಾರೋಹಣ ನೆರವೇರಿಸುವರು.

ಬೆಳಗ್ಗೆ 9ಕ್ಕೆ ಶಿವಪ್ಪ ನಾಯಕ ನಗರ ಆಶ್ರಮ ಶಾಲೆಯಿಂದ ಸಮ್ಮೇಳಾಧ್ಯಕ್ಷರ ಮೆರವಣಿಗೆಯನ್ನು ಕಲಾ ತಂಡಗಳೊಂದಿಗೆ ಆಯೋಜಿಸಿದ್ದು ಬಿಇಒ ಯಮನೂರಪ್ಪ, ನಗರಸಭೆ ಸದಸ್ಯರಾದ ಸವಿತಾವಾಸು, ಮಧುಮಾಲತಿ, ಉಮೇಶ್ ಎ, ಸಬೀನಾ ತನ್ವೀರ್, ಬಿ.ಎಚ್.ಲಿಂಗರಾಜ್, ಗಜೇಂದ್ರ, ಡಿ.ಕೆ.ಮೋಳೆ ಮೊದಲಾದವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Rishab Shetty: ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಪೂರ್ತಿಯಾಗಿ ಮಾಡಿದ್ರಾ ರಿಷಬ್‌?ವಿಡಿಯೊದಲ್ಲಿ ಏನಿದೆ?

ಬೆಳಗ್ಗೆ 10ಕ್ಕೆ ಶಾಸಕ ಎಚ್. ಹರತಾಳು ಹಾಲಪ್ಪ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸಾಹಿತಿ ಡಾ.ನಾ.ಡಿಸೋಜ ದಿಕ್ಸೂಚಿ ಮಾತುಗಳನ್ನಾಡುವರು. ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ ಆಶಯ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಮೋಹನ್ ಮೂರ್ತಿ, ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಸೀಲ್ದಾರ್ ಮಲ್ಲೇಶ್ ಬೀರಪ್ಪ ಪೂಜಾರ್, ನಗರಸಭೆ ಸದಸ್ಯ ಬಿ.ಎಚ್.ಲಿಂಗರಾಜ್, ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಜಿ, ಪ್ರಮುಖರಾದ ಬಿ.ಆರ್.ಜಯಂತ್, ಗಣೇಶ್ ಪ್ರಸಾದ್, ಸೈಯದ್ ಜಾಕೀರ್, ವಿಜಯ ಕುಮಾರ್ ವಿ.ಕೆ, ಮೊದಲಾದವರು ಉಪಸ್ಥಿತರಿರುವರು.

ಬೆಳಗ್ಗೆ 11.45 ಕ್ಕೆ ವರ್ತಮಾನದ ಸಾಹಿತ್ಯ ಮತ್ತು ಸಾಂಸ್ಕೃತಿಕ ತಲ್ಲಣಗಳು ಕುರಿತ ಗೋಷ್ಠಿಯ ಅಧ್ಯಕ್ಷತೆಯನ್ನು ಪತ್ರಕರ್ತ ಕೆ.ಎನ್.ವೆಂಕಟಗಿರಿ ವಹಿಸಲಿದ್ದು ಶಿವಮೊಗ್ಗ ಕಮಲಾ ನೆಹರೂ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಆರಡಿ ಮಲ್ಲಯ್ಯ ಕಟ್ಟೇರ ವಿಷಯ ಮಂಡಿಸಲಿದ್ದಾರೆ. ವೇದಿಕೆಯಲ್ಲಿ ಗಣಪತಿ ಮಂಡಗಳಲೆ, ಶಿವಾನಂದ ಕುಗ್ವೆ, ಪರಮೇಶ್ವರ ದೂಗೂರು, ಲಕ್ಷ್ಮಣ್ ಸಾಗರ್, ರವಿರಾಜ್ ಮಂಡಗಳಲೆ, ರಾಮಚಂದ್ರ ಸಾಗರ್, ಸಫ್ರಾಜ್ ಚಂದ್ರಗುತ್ತಿ, ಡಾ.ಕೆಳದಿ ವೆಂಕಟೇಶ್ ಜೋಯಿಸ್, ಸತೀಶ್ ಕೆ. ಉಪಸ್ಥಿತರಿರುವರು. ಮಧ್ಯಾಹ್ನ 12.45ರಿಂದ ನಡೆಯುವ ಎರಡನೇ ಗೋಷ್ಠಿ ರಾಜಕೀಯ ಮತ್ತು ಮಹಿಳಾ ಪ್ರಾತಿನಿಧ್ಯ ಗೋಷ್ಠಿ ಅಧ್ಯಕ್ಷತೆಯನ್ನು ಹೆಸರಾಂತ ವೈದ್ಯೆ ಡಾ.ರಾಜನಂದಿನಿ ಕಾಗೋಡು ವಹಿಸಲಿದ್ದು ಸಾಹಿತಿ ಹಾಗೂ ಉಪನ್ಯಾಸಕಿ ಡಾ. ವಸುಮತಿ ಗೌಡ ವಿಷಯ ಮಂಡಿಸುವರು. ವೇದಿಕೆಯಲ್ಲಿ ಎನ್.ಲಲಿತಮ್ಮ, ಶರಾವತಿ ಸಿ.ರಾವ್, ರೋಹಿಣಿ ಶರ್ಮ, ಚೂಡಾಮಣಿ ರಾಮಚಂದ್ರ, ಸುಮಂಗಲ ರಾಮಕೃಷ್ಣ, ವೀಣಾ ನಾಯ್ಡು, ಕಸ್ತೂರಿ ಸಾಗರ್, ನಾದಿರ ಪರ್ವಿನ್ ಉಪಸ್ಥಿತರಿರುವರು.

ಮಧ್ಯಾಹ್ನ 2.15ಕ್ಕೆ ಸಮ್ಮೇಳನಾಧ್ಯಕ್ಷರ ಸಾಹಿತ್ಯಾವಲೋಕನ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಅಂಬ್ರಯ್ಯ ಮಠ ವಹಿಸಲಿದ್ದು, ಸಾಹಿತಿ ಡಾ.ಗುರುದತ್ತ ಶಿವಮೊಗ್ಗ ಇವರು ವಿಷಯ ಮಂಡಿಸಲಿದ್ದಾರೆ. ಗೋಷ್ಠಿಯಲ್ಲಿ ಕೃಷ್ಣಯ್ಯ, ತಿಮ್ಮಪ್ಪ ಕಲಸಿ, ಪ್ರೊ.ಮಹಾಬಲೇಶ್ವರ, ಶಕುಂತಲ ಹಿರೇಮಠ, ಈಳಿ ಶ್ರೀಧರ್, ಎಸ್.ಬಿ.ಮಹಾದೇವ್, ಬಿ.ಜಿ.ಮಂಜಪ್ಪ, ಮ.ಸ.ನಂಜುಂಡಸ್ವಾಮಿ, ದಿನೇಶ್ ಶಿರವಾಳ, ರಮೇಶ್ ಕೆಳದಿ, ಸತ್ಯನಾರಾಯಣ ಖಂಡಿಕಾ, ಬಿ.ಡಿ.ರವಿಕುಮಾರ್ ಉಪಸ್ಥಿತರಿರುವರು.

ಮಧ್ಯಾಹ್ನ 3ಕ್ಕೆ ನಡೆಯುವ ಕಾವ್ಯ ಕಲರವ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ.ಜಯಪ್ರಕಾಶ್ ಮಾವಿನಕುಳಿ ವಹಿಸಲಿದ್ದು, ಗೋಷ್ಠಿಯಲ್ಲಿ ಕುಸುಮ ಸುಬ್ಬಣ್ಣ, ಶಂಕರ್ ಅಳ್ವಿಕೋಡು, ತಸ್ರಿಫ್ ಇಬ್ರಾಹಿಂ ಉಪಸ್ಥಿತರಿರುವರು. ಕವಿಗೋಷ್ಠಿಯಲ್ಲಿ ಭಾಗೀರಥಿ, ಚಂದ್ರಶೇಖರ್ ಸಿರಿವಂತೆ, ಯೋಗೀಶ್ ಭಟ್, ಚಂದ್ರಮೌಳಿ, ವಿಷ್ಣುಮೂರ್ತಿ, ಆನಂದಪುರ, ಪಾಲಾಕ್ಷಪ್ಪ ಎಸ್.ಎನ್, ಗವಿಯಪ್ಪ ಎಲ್.ಟಿ., ಜಗನ್ನಾಥ ಕೆ, ಗಜಾನನ, ಡಾ.ಅನ್ನಪೂರ್ಣ, ಅರ್ಚನ ಪ್ರಸನ್ನ, ಅವಿನಾಶ್ ಜಿ, ಗಾರ್ಗಿ ಬಂದಗದ್ದೆ, ಭದ್ರಪ್ಪ ಗೌಡ, ವೆಂಕಟೇಶ್ ಸಂಪ, ಕವನ ವಾಚಿಸಲಿದ್ದಾರೆ, ಎಚ್.ಜಿ.ಸುಬ್ರಹ್ಮಣ್ಯ ಭಟ್, ಕೋದಂಡ ಸಾಗರ್, ದೀಪಕ್ ಸಾಗರ್, ಸಹನಾ ಜಿ ಭಟ್ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: World Sleep Day : ಉದ್ಯೋಗಿಗಳಿಗೆ ಸಾವಕಾಶ ನಿದ್ದೆ ಮಾಡಲು ರಜೆ ಘೋಷಿಸಿದ ಬೆಂಗಳೂರಿನ ವೇಕ್‌ಫಿಫ್ಟ್

ಸಂಜೆ 4ಕ್ಕೆ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದು ಶಾಸಕರಾದ ಎಚ್. ಹರತಾಳು ಹಾಲಪ್ಪ ಅಧ್ಯಕ್ಷತೆ ವಹಿಸಲಿದ್ದು ಸಂಸದರಾದ ಬಿ.ವೈ.ರಾಘವೇಂದ್ರ, ಮಾಜಿ ವಿಧಾನ ಸಭಾಧ್ಯಕ್ಷರಾದ ಕಾಗೋಡು ತಿಮ್ಮಪ್ಪ ಸಾಧಕರನ್ನು ಸನ್ಮಾನಿಸುವರು, ಈ ಸಂದರ್ಭದಲ್ಲಿ ಸಹಾಯಕ ಪೊಲೀಸ್ ಅಧಿಕಾರಿ ರೋಹನ್ ಜಗದೀಶ್, ಪ್ರಮುಖರಾದ ಅಶ್ವಿನಿ ಕುಮಾರ್, ಟಿ.ಡಿ.ಮೇಘರಾಜ್, ಐ.ಎನ್.ಸುರೇಶ್ ಬಾಬು, ಶ್ರೀನಿವಾಸ್ ಆರ್, ಟಿ.ವಿ.ಪಾಂಡುರಂಗ ಉಪಸ್ಥಿತರಿರುವರು, ಡಾ.ಎಚ್.ಎಸ್.ಮೋಹನ್-ಸಾಹಿತ್ಯ, ಮುನಾಫ್ ಶ್ರೀಧರನಗರ-ಕಾಯಕ, ಗಣಪತಿಯಪ್ಪ ಜಂಬೂರು ಮನೆ-ಕೃಷಿ, ಅಬಸೆ ದಿನೇಶ್ ಕುಮಾರ್ ಜೋಷಿ-ಸಮಾಜಸೇವೆ, ಎಂ.ಎಸ್.ಗೌಡರು —ಕಾನೂನು, ಫ್ರಾನ್ಸಿಸ್ ಪಿಯೂಸ್ ಫರ್ನಾಂಡಿಸ್-ಸಾಂಸ್ಕೃತಿಕ, ಡಿ.ಎಂ.ಗಜಾನನ-ಕಲೆ, ಮಂಜಣ್ಣ-ಶ್ರಮಜೀವಿ, ಸಾವಿತ್ರಿ-ಮಹಿಳಾ ಕ್ಷೇತ್ರ, ರೋಟರಿ ರಕ್ತನಿಧಿ-ಸಂಘ ಸಂಸ್ಥೆ, ಸರ್ಕಾರಿ ಉರ್ದು ಪ್ರೌಢಶಾಲೆ-ಶಿಕ್ಷಣ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು.

ಇದನ್ನೂ ಓದಿ: Shakib Al Hasan: ಜುವೆಲ್ಲರಿ ಶಾಪ್​ ಉದ್ಘಾಟನೆ ಕಾರ್ಯಕ್ರಮದಲ್ಲಿ ಹಲ್ಲೆಗೊಳಗಾದ ಬಾಂಗ್ಲಾ ಆಟಗಾರ​; ವಿಡಿಯೊ ವೈರಲ್

ಸಂಜೆ 5.30ಕ್ಕೆ ಕ.ಸಾ.ಪ ಅಧ್ಯಕ್ಷ ವಿ.ಟಿ.ಸ್ವಾಮಿ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಸಾಹಿತಿ ಹಾಗೂ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಶುಭಾ ಮರವಂತೆ ಸಮಾರೋಪ ನುಡಿಗಳನ್ನಾಡುವರು. ವೇದಿಕೆಯಲ್ಲಿ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಅರವಿಂದ ರಾಯ್ಕರ್, ಹೈಕೋರ್ಟ್ ಹಿರಿಯ ನ್ಯಾಯವಾದಿ ಕೆ. ದಿವಾಕರ್, ಪೌರಾಯುಕ್ತ ಸಿ.ಚಂದ್ರಪ್ಪ, ಹೆಚ್.ಕೆ.ನಾಗಪ್ಪ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಉಮೇಶ್ ಹಿರೇನೆಲ್ಲೂರು, ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಎಸ್.ವಿ.ಹಿತಕರ್ ಜೈನ್, ಆಟೋ ಚಾಲಕರ ಸಂಘದ ಅಧ್ಯಕ್ಷ ಜನಾರ್ಧನ ಪೂಜಾರಿ ಮೊದಲಾದವರು ಉಪಸ್ಥಿತರಿರುವರು.

ಸಮ್ಮೇಳನಾಧ್ಯಕ್ಷರ ಪರಿಚಯ

ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ಸಾಹಿತ್ಯ ಭವನದಲ್ಲಿ ಮಾ. 20 ರಂದು ಆಯೋಜಸಿರುವ ತಾಲೂಕು ಮಟ್ಟದ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ವಿ.ಗಣೇಶ್ ಅವರು ಸಾಹಿತ್ಯ, ಶಿಕ್ಷಣ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral Video : ರಾಷ್ಟ್ರೀಯ ಹೆದ್ದಾರಿಯಲ್ಲಿ ಬರ್ತ್‌ಡೇ ಆಚರಿಸಿಕೊಂಡ ಯೂಟ್ಯೂಬರ್‌; ಪೊಲೀಸರಿಂದ ಭರ್ಜರಿ ಗಿಫ್ಟ್‌!

ಸಾಗರದ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸುಮಾರು 38 ವರ್ಷಗಳ ಕಾಲ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಾ ಸಹಸ್ರಾರು ವಿದ್ಯಾರ್ಥಿಗಳಿಗೆ ಗಣಿತ ಮತ್ತು ಇಂಗ್ಲಿಷ್ ಎರಡನ್ನೂ ಬೋಧಿಸುತ್ತಾ ಮೆಚ್ಚಿನ ಶಿಕ್ಷಕರಾಗಿ ಅವರ ಬದುಕನ್ನು ಬೆಳಗುವುದರಲ್ಲಿ ಸಹಕಾರಿಯಾಗಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಿ ರಾಜ್ಯಕ್ಕೆ ಮಾದರಿ ಕಾಲೇಜನ್ನಾಗಿ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ನಿವೃತ್ತಿ ನಂತರ ನಿಂತ ನೀರಾಗದೆ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲೂ ಪಾಂಡಿತ್ಯವನ್ನು ಹೊಂದಿರುವ ಗಣೇಶ್‍ ಅವರು ಎರಡೂ ಭಾಷೆಗಳಲ್ಲಿ ಕಥೆ, ಕಾದಂಬರಿ, ಕವನ, ಅನುವಾದ ಮುಂತಾದ ಎಲ್ಲ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದಾರೆ. ಮಕ್ಕಳ ಸಾಹಿತ್ಯ ಕುರಿತು ಹೆಚ್ಚಿನ ಕೃತಿ ರಚನೆ ಮಾಡಿದ್ದಾರೆ.

ಇದನ್ನೂ ಓದಿ: Puneeth Rajkumar: ರಾಘಣ್ಣನ ಕುಟುಂಬದಿಂದ ಅನ್ನದಾನ, ಸಸಿಗಳ ವಿತರಣೆ

ಸಾರ್ವಜನಿಕ ಕ್ಷೇತ್ರದಲ್ಲಿಯೂ ಸಾಕಷ್ಟು ಸೇವೆ ಸಲ್ಲಿಸುತ್ತಾ ಬಂದಿರುವ ವಿ.ಗಣೇಶ್, ಸುಗಮ ಸಂಗೀತ ಪರಿಷತ್, ಸಿರಿಗನ್ನಡ ವೇದಿಕೆ, ಸ್ಮಾರ್ತ ಬ್ರಾಹ್ಮಣ ಒಕ್ಕೂಟ, ಎಸ್.ವಿ.ಪಿ. ಕಾಲೋನಿ ರಾಮ ಮಂದಿರ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗೃಹ ನಿರ್ಮಾಣ ಸಂಘ ಸೇರಿದಂತೆ ವಿವಿಧ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕರಾಗಿ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಷ್ಠಾನದ ರಾಷ್ಟ್ರೀಯ ಪ್ರಶಸ್ತಿ, ರಾಷ್ಟ್ರಮಟ್ಟದ ಸಹೃದಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಸುಮ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಾಗರದ ಶ್ರೀ ಶೃಂಗೇರಿ ಶಂಕರ ಮಠ, ನಿವೃತ್ತ ನೌಕರರ ಸಂಘ, ರಾಷ್ಟ್ರೋತ್ತಾನ ಪರಿಷತ್ತು, ಹೊಸಪೇಟೆಯ ಶಂಕರ ಸಾಹಿತ್ಯ ಪರಿಷತ್ತು,, ಜನ್ ಜೀವನ್ ಜಾಗೃತ್ ವೇದಿಕೆ ಮುಂತಾದ ಸಂಸ್ಥೆಗಳಿಂದ ಸನ್ಮಾನಿಸಲ್ಪಟ್ಟಿರುತ್ತಾರೆ. ಇತ್ತೀಚೆಗೆ ಶಿಕಾರಿಪುರದ ಹಳೆಯ ವಿದ್ಯಾರ್ಥಿಗಳ ಸಂಘವು ಶ್ರೀಯುತರನ್ನು ಗೌರವಿಸಿ ಪ್ರಸನ್ನವದನ ಪ್ರಥಿತರು ಎಂಬ ಅಭಿನಂದನಾ ಗ್ರಂಥವನ್ನು ಅರ್ಪಿಸಿರುತ್ತಾರೆ.

ಪತ್ನಿ ನಿರ್ಮಲಾ ಅವರೊಂದಿಗೆ ಸಾಗರದಲ್ಲಿ ವಾಸವಾಗಿರುವ ಗಣೇಶ್ ಅವರಿಗೆ ಸಾಫ್ಟ್ ವೇರ್ ಎಂಜಿನಿಯುರುಗಳಾಗಿ ಕೆಲಸ ಮಾಡುತ್ತಿರುವ ಆಕಾಶ್ ಮತ್ತು ಅವಿನಾಶ್ ಎಂಬ ಇಬ್ಬರು ಮಕ್ಕಳಿದ್ದಾರೆ. ಆಕಾಶ್ ಕೆನಡಾದಲ್ಲಿದ್ದರೆ, ಅವಿನಾಶ್ ಪತ್ನಿಯೊಂದಿಗೆ ಬೆಂಗಳೂರಿನಲ್ಲಿದ್ದಾರೆ. ಗಣೇಶ್ ಅವರ ಇಬ್ಬರು ಮಕ್ಕಳೂ ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವುದು ವಿಶೇಷವಾಗಿದೆ.

ಇದನ್ನೂ ಓದಿ: Kr pura to Whitefield Metro: ಕೆ.ಆರ್. ಪುರಂನಿಂದ ವೈಟ್ ಫೀಲ್ಡ್ ಮೆಟ್ರೋ ಓಡಾಟಕ್ಕೆ ಕೌಂಟ್‌ಡೌನ್‌ ಆರಂಭ; ಮಾರ್ಚ್‌ 25ಕ್ಕೆ ಡೇಟ್‌ ಫಿಕ್ಸ್‌!

Continue Reading
Advertisement
Latest17 hours ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest19 hours ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest20 hours ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest22 hours ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest23 hours ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest24 hours ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest24 hours ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

Latest1 day ago

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

Latest2 days ago

ಇಂದು ಸಂಜೆ ಒಳಗೆ ಖಾತೆ ಹಂಚಿಕೆ : ಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

Latest2 days ago

ರಾಜ್ಯ ವಿಧಾನಸಭೆ ಸ್ಪೀಕರ್ ಆಯ್ಕೆ ಕಸರತ್ತು: ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್ ಹೆಸರುಗಳು ಮುಂಚೂಣಿಯಲ್ಲಿ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌