ವಿಸ್ತಾರ TOP 10 NEWS | ಮಂಗಳೂರು ಬಾಂಬ್‌ ಸ್ಫೋಟದಿಂದ ನ್ಯೂಜಿಲೆಂಡ್‌ ವಿರುದ್ಧ ಜಯದವರೆಗಿನ ಪ್ರಮುಖ 10 ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ಮಂಗಳೂರು ಬಾಂಬ್‌ ಸ್ಫೋಟದಿಂದ ನ್ಯೂಜಿಲೆಂಡ್‌ ವಿರುದ್ಧ ಜಯದವರೆಗಿನ ಪ್ರಮುಖ 10 ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news mangalore blast to cricket series against new zealand and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಉಗ್ರಕೃತ್ಯ ಖಚಿತಪಟ್ಟಿದ್ದು, ಅಪರಾಧಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ನವಶಕ್ತಿ ಸಮಾವೇಶದ ಮೂಲಕ ದಲಿತ ಮತಗಳ ಮೇಲೆ ಕಣ್ಣಿಟ್ಟಿದೆ, ಮತದಾರರ ದತ್ತಾಂಶ ಅಕ್ರಮ ಸಂಗ್ರಹ ಪ್ರಕರಣದ ವಿಚಾರಣೆ ಮುಂದುವರಿದಿದೆ, ಚಾಮರಾಜನಗರದಲ್ಲಿ ಅಸ್ಪೃಶ್ಯತೆ ಪ್ರಕರಣ ಬೆಳಕಿಗೆ ಬಂದಿದೆ, ಗುಜರಾತ್‌ ಚುನಾವಣೆ ಗರಿಗೆದರಿದೆ, ನ್ಯೂಜಿಲೆಂಡ್‌ ವಿರುದ್ಧದ ಸರಣಿಯಲ್ಲಿ ಭಾರತ ಜಯಗಳಿಸಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Mangalore Blast | ಮಂಗಳೂರಿನ ಆಟೊ ರಿಕ್ಷಾದಲ್ಲಿ ಲಘು ಐಇಡಿ ಬಾಂಬ್‌ ಸ್ಫೋಟ
ಮಂಗಳೂರಿನಲ್ಲಿ ಶನಿವಾರ ಆಟೊ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ( Mangalore Blast ) ಲಘು ಐಇಡಿ ಬಾಂಬ್‌ ಅನ್ನು ಬಳಸಲಾಗಿದೆ ಎಂದು ತನಿಖೆಯಿಂದ ಗೊತ್ತಾಗಿದೆ. ಪ್ಲಾನ್ ಮಾಡಿದ್ದ ಸ್ಥಳಕ್ಕೆ ಸಾಗಿಸುವ ಮೊದಲೆ ಆಟೊ ರಿಕ್ಷಾದಲ್ಲಿ ಈ ಬಾಂಬ್‌ ಸ್ಫೋಟವಾಗಿದೆ. ಇದನ್ನು ಭಯೋತ್ಪಾದಕ ಕೃತ್ಯ ಎಂದು ಪೊಲೀಸ್‌ ಇಲಾಖೆ ದೃಢಪಡಿಸಿದೆ.
ಈಗಾಗಲೇ ಈ ಸ್ಫೋಟದಲ್ಲಿ ಭಾಗಿಯಾಗಿರುವ ಒಬ್ಬನನ್ನು ಮಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆತನಿಗೆ ಸ್ಫೋಟದಲ್ಲಿ ಗಾಯಗಳಾಗಿದ್ದು,… ಚಿಕಿತ್ಸೆ ನೀಡಲಾಗುತ್ತಿದೆ. ಜತೆಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Mangalore Blast | ಆಟೋ ಸ್ಫೋಟದ ಮಾಸ್ಟರ್‌ ಮೈಂಡ್‌ ಶಾರೀಕ್‌; ಮಂಗಳೂರು ಗೋಡೆ ಬರಹ ಪ್ರಕರಣದ 2ನೇ ಆರೋಪಿ ಈತ
ಮಂಗಳೂರಿನಲ್ಲಿ ಶನಿವಾರ (ನ. ೧೯) ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ (Mangalore Blast) ಪ್ರಕರಣಕ್ಕೆ ಸಂಬಂಧಪಟ್ಟಂತೆ ಟ್ವಿಸ್ಟ್‌ ಸಿಕ್ಕಿದ್ದು, ಶಾರೀಕ್‌ ಎಂಬಾತನೇ ಸ್ಫೋಟದ ಮಾಸ್ಟರ್ ಮೈಂಡ್ ಎಂಬುದು ತಿಳಿದುಬಂದಿದೆ. ಈತ ಮಂಗಳೂರು ಗೋಡೆ ಬರಹ ಪ್ರಕರಣ ಹಾಗೂ ಶಿವಮೊಗ್ಗದಲ್ಲಿ ಪ್ರೇಮ್‌ ಸಿಂಗ್‌ಗೆ ಚಾಕು ಇರಿತ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಶಾರೀಕ್ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿಯಾಗಿದ್ದಾನೆ. ಈತ ತೀರ್ಥಹಳ್ಳಿಯಲ್ಲಿ ಬಟ್ಟೆ ಅಂಗಡಿ‌ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Mangalore Blast | ಪ್ರೇಮ್‌ ರಾಜ್‌ಗೂ ಮಂಗಳೂರು ಸ್ಫೋಟಕ್ಕೂ ಸಂಬಂಧ ಇಲ್ಲ: ಡಿಜಿಪಿ ಪ್ರವೀಣ್‌ ಸೂದ್‌
ಮಂಗಳೂರಿನಲ್ಲಿ ಶನಿವಾರ (ನ. ೧೯) ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ (Mangalore Blast) ಪ್ರಕರಣದಲ್ಲಿ ಕೇಳಿಬಂದಿರುವ ಹುಬ್ಬಳ್ಳಿ ಮೂಲದ, ತುಮಕೂರಿನಲ್ಲಿ ರೇಲ್ವೆ ನೌಕರರಾಗಿರುವ ಪ್ರೇಮ್‌ ರಾಜ್‌ ಒಬ್ಬ ಸಂತ್ರಸ್ತನಷ್ಟೇ, ಅವರಿಗೂ ಮಂಗಳೂರು ಆಟೋ ಸ್ಫೋಟ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಸ್ಪಷ್ಟನೆ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Mangalore Blast | ಪಿಎಫ್​ಐ ನಿಷೇಧಕ್ಕೆ ಪ್ರತೀಕಾರವಾ ಈ ಮಂಗಳೂರು ಆಟೋ ಸ್ಫೋಟ? -ಮಾಹಿತಿ ಕಲೆ ಹಾಕುತ್ತಿರುವ ಪೊಲೀಸ್​
ನಾಗುರಿ ಬಳಿ ಶನಿವಾರ ಸಂಜೆ 4.40ರ ಹೊತ್ತಿಗೆ ಆಟೋ ಸ್ಫೋಟವಾಗಿದ್ದು ಈಗ ರಾಷ್ಟ್ರಮಟ್ಟದಲ್ಲಿ ಸಂಚಲನ ನಡೆಸಿದ ಸುದ್ದಿಯಾಗಿ ಮಾರ್ಪಾಡಾಗಿದೆ. ಮೊದಲು ಇದು ಸಿಲಿಂಡರ್​ ಬ್ಲಾಸ್ಟ್​ ಕೇಸ್​ ಅಂದುಕೊಳ್ಳಲಾಯಿತು. ಆದರೆ ಈಗ ಅದೊಂದು ಭಯೋತ್ಪಾದಕ ಕೃತ್ಯ ಎಂಬುದು ಸಾಬೀತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಇದನ್ನೇ ಹೇಳಿದ್ದು, ರಾಷ್ಟ್ರೀಯ ತನಿಖಾ ದಳ (ಎನ್​ಐಎ) ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. ವಿಸ್ತಾರ Explainer | ಪ್ರೆಷರ್‌ ಕುಕ್ಕರ್‌ ಬಾಂಬ್‌: ತಯಾರಿ ಸುಲಭ, ಪರಿಣಾಮ ಭೀಕರ
ಮಂಗಳೂರಲ್ಲಿ ಶನಿವಾರ ಸಂಜೆ ಸಂಭವಿಸಿದ ಆಟೋ ಸ್ಫೋಟದಲ್ಲಿ ಇಬ್ಬರು ಜನರಿಗೆ ಗಾಯಗಳಾಗಿವೆ. ಪ್ರೆಷರ್ ಕುಕ್ಕರ್ ಬಾಂಬ್ ಸ್ಫೋಟ (Pressure Cooker Bomb) ಇದಾಗಿದ್ದು, ಆಗಾಗ ನಾವು ಈ ಬಗ್ಗೆ ಕೇಳುತ್ತಿರುತ್ತೇವೆ. ಏನಿದು ಪ್ರೆಷರ್ ಕುಕ್ಕರ್ ಬಾಂಬ್? ಎಷ್ಟು ಪರಿಣಾಮಕಾರಿ? ಇದು ಉಗ್ರರ ಫೇವರಿಟ್ ಬಾಂಬ್ ಏಕೆ?(ವಿಸ್ತಾರ Explainer) ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. BJP ನವಶಕ್ತಿ ಸಮಾವೇಶ | ದಲಿತರನ್ನು ಮತ್ತಷ್ಟು ಸೆಳೆದು ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಬಲ ಪ್ರದರ್ಶನ
ಗಣಿನಾಡು ಬಳ್ಳಾರಿಯಲ್ಲಿ ಭಾನುವಾರ ನಡೆದ ಪರಿಶಿಷ್ಟ ಪಂಗಡದ ನವಶಕ್ತಿ ಸಮಾವೇಶ ಕೇವಲ ಒಂದು ಸಮುದಾಯದ ಸಮಾವೇಶವಾಗಿ ಉಳಿಯದೆ, ಇದೊಂದು ದಲಿತ ಸಮುದಾಯದ ಮತಗಳನ್ನು ಸೆಳೆಯಲು ಕಾಂಗ್ರೆಸ್‌ ದಲಿತರ ಪಕ್ಷ, ಬಿಜೆಪಿ ಮೇಲ್ವರ್ಗ ಪಕ್ಷ ಎನ್ನುವ ಹಣೆಪಟ್ಟಿ ಕಳಚಿಹಾಕುವ ಪ್ರಯತ್ನ ನಡೆಯಿತು. ಇದಕ್ಕೆ ಉದಾಹರಣೆ ಸಹಿತವಾಗಿ ಪ್ರಮುಖ ಮುಖಂಡರು ಕೆಲವೊಂದು ಉದಾಹರಣೆಗಳನ್ನು ಲಕ್ಷಾಂತರ ಜನರ ಮಧ್ಯೆ ತೆರೆ ದಿಡುವ ಪ್ರಯತ್ನ ಮಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Voter Data | ʼಚಿಲುಮೆʼ ಮೊಬೈಲ್‌ ಆ್ಯಪ್‌ ಡೆವಲಪರ್‌ ವಶಕ್ಕೆ; ತೀವ್ರ ವಿಚಾರಣೆ
ಚಿಲುಮೆ ಸಂಸ್ಥೆ ವತಿಯಿಂದ ಮತದಾರರ ಮಾಹಿತಿಯನ್ನು (Voter Data) ಅಕ್ರಮವಾಗಿ ಸಂಗ್ರಹಿಸಿದ ಆರೋಪ ಎದುರಿಸುತ್ತಿರುವ ಚಿಲುಮೆ ಸಂಸ್ಥೆಗೆ ಮೊಬೈಲ್‌ ಆ್ಯಪ್‌ ಡೆವಲಪ್‌ ಮಾಡಿಕೊಟ್ಟಿದ್ದವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದರು.
ಡೆವಲಪರ್‌ ಸಂಜೀವ್‌ ಶೆಟ್ಟಿಯನ್ನು ಭಾನುವಾರ ವಶಕ್ಕೆ ಪಡೆದ ಹಲಸೂರು ಗೇಟ್‌ ಪೊಲೀಸರು ವಿಚಾರಣೆ ನಡೆಸಿದ್ದು, ಯಾವ ಉದ್ಧೇಶಕ್ಕೆ ಆ್ಯಪ್ ಕೇಳಿದ್ದರು? ಎಷ್ಟು ಆ್ಯಪ್ ತಯಾರು ಮಾಡಿಕೊಡಲಾಗಿದೆ? ಮತದಾರರ ಬಗ್ಗೆ ಆ್ಯಪ್ ನಲ್ಲಿ ಡೀಟೇಲ್ಸ್ ಅಪ್ಲೋಡ್ ಮಾಡಲಾಗಿದ್ಯಾ? ಹೀಗೆ ಅನೇಕ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ. ಖುದ್ದು ಕೇಂದ್ರ ವಿಭಾಗ ಡಿಸಿಪಿ‌ ಶ್ರೀನಿವಾಸ್ ಗೌಡರಿಂದ ನಾಲ್ಕೈದು ಗಂಟೆ ವಿಚಾರಣೆ ನಡೆಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Untouchability | ಹೆಗ್ಗೋಠಾರ ಗ್ರಾಮಕ್ಕೆ ತಹಸೀಲ್ದಾರ್‌ ಭೇಟಿ; ಟ್ಯಾಂಕ್‌ನಲ್ಲಿ ದಲಿತರಿಗೆ ನೀರು ಕುಡಿಸಿ ಸಹಬಾಳ್ವೆ ಸಂದೇಶ
ದಲಿತ ಮಹಿಳೆ ನೀರು ಕುಡಿದಿದ್ದರಿಂದ ಟ್ಯಾಂಕ್‌ನಲ್ಲಿದ್ದ ನೀರು ಖಾಲಿ ಮಾಡಿದ ಪ್ರಕರಣ(Untouchability) ನಡೆದಿದ್ದ ತಾಲೂಕಿನ ಹೆಗ್ಗೋಠಾರ ಗ್ರಾಮಕ್ಕೆ ತಹಸೀಲ್ದಾರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ನೀರಿನ ಟ್ಯಾಂಕ್‌ಗಳು ಸಾರ್ವಜನಿಕರ ಬಳಕೆಗಾಗಿ ಇವೆ ಎಂದು ಹೇಳಿ, ಗ್ರಾಮದ ತೊಂಬೆಗಳಲ್ಲಿ ದಲಿತ ಯುವಕರಿಗೆ ನೀರು ಕುಡಿಸಿ, ಯಾವುದೇ ರೀತಿಯ ಅಸ್ಪೃಶ್ಯತೆ ಆಚರಣೆ ಮಾಡದೆ ಸಹಬಾಳ್ವೆ ನಡೆಸಬೇಕು ಎಂದು ಗ್ರಾಮಸ್ಥರಿಗೆ ಸೂಚಿಸಿದರು.ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರು ಕಿರು ನೀರು ಸರಬರಾಜು ಟ್ಯಾಂಕ್‌ನಲ್ಲಿ ನೀರು ಕುಡಿದರೆಂಬ ಕಾರಣಕ್ಕೆ ಟ್ಯಾಂಕ್‌ನಲ್ಲಿದ್ದ ನೀರನ್ನು ಖಾಲಿ ಮಾಡಿ ಗೋಮೂತ್ರ ಹಾಕಿ ಶುದ್ಧಿಕರಿಸಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Narendra Modi | ಗುಜರಾತ್‌ ಚುನಾವಣೆ ರ‍್ಯಾಲಿಗೂ ಮುನ್ನ ಸೋಮನಾಥ ದೇಗುಲದಲ್ಲಿ ಮೋದಿ ಅಭಿಷೇಕ
ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಾಲು ಸಾಲು ರ‍್ಯಾಲಿಗಳನ್ನು ನಡೆಸುತ್ತಿದ್ದು, ಭಾನುವಾರ (ನವೆಂಬರ್‌ 20) ಚುನಾವಣೆ ರ‍್ಯಾಲಿ ಆರಂಭಕ್ಕೂ ಮುನ್ನ ಸೋಮನಾಥ ದೇವಾಲಯಕ್ಕೆ (Somnath Temple) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಶಿವನಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Gujarat Election | 7 ಬಂಡಾಯ ನಾಯಕರನ್ನು ಪಕ್ಷದಿಂದ ಅಮಾನತು ಮಾಡಿದ ಬಿಜೆಪಿ

10. INDvsNZ | ಮಿನುಗಿದ ಸೂರ್ಯ, ಹೂಡಾ, ನ್ಯೂಜಿಲ್ಯಾಂಡ್‌ ವಿರುದ್ಧ ಭಾರತಕ್ಕೆ 65 ರನ್‌ ಜಯ
ಸೂರ್ಯಕುಮಾರ್‌ ಯಾದವ್‌ (೧೧೧ *ರನ್‌, ೫೧ ಎಸೆತ, ೧೧ ಫೋರ್‌, ೭ ಸಿಕ್ಸರ್‌) ಅವರ ಸ್ಫೋಟಕ ಬ್ಯಾಟಿಂಗ್‌ ಹಾಗೂ ದೀಪಕ್ ಹೂಡಾ (೧೦ ರನ್‌ಗಳಿಗೆ ೪ ವಿಕೆಟ್‌) ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಮಿಂಚಿದ ಭಾರತ ತಂಡ ನ್ಯೂಜಿಲ್ಯಾಂಡ್‌ (INDvsNZ) ವಿರುದ್ಧದ ಟಿ೨೦ ಸರಣಿಯ ಎರಡನೇ ಪಂದ್ಯದಲ್ಲಿ ೬೫ ರನ್‌ಗಳ ಭರ್ಜರಿ ವಿಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ ೧-೦ ಮುನ್ನಡೆ ಪಡೆದುಕೊಂಡಿತು. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದ ಕಾರಣ ಮೂರನೇ ಪಂದ್ಯದಲ್ಲಿ ಸರಣಿ ವಿಜೇತರು ಯಾರು ಎಂಬುದು ನಿರ್ಣಯವಾಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

1. ಮೋಸ್ಟ್​ ವಾಂಟೆಡ್​ ಖಲಿಸ್ತಾನಿ ಉಗ್ರ ಹರ್ವಿಂದರ್​ ಸಿಂಗ್ ರಿಂದಾ ಪಾಕಿಸ್ತಾನದಲ್ಲಿ ಸಾವು; ಹತ್ಯೆಯ ಹೊಣೆ ಹೊತ್ತ ಬಂಬಿಹಾ ಗ್ಯಾಂಗ್​
2. Chhattisgarh Murder | 11 ಲಕ್ಷ ರೂ.ಗಾಗಿ ಪ್ರಿಯತಮೆಯನ್ನೇ ಕೊಂದು, 4 ದಿನ ಮೆಡಿಕಲ್‌ ಶಾಪ್‌ನಲ್ಲಿಟ್ಟವ ಸಿಕ್ಕಿದ್ದು ಹೇಗೆ?
೩. Fifa World Cup | ವಿಶ್ವ ಕಪ್​ ಪಂದ್ಯ ಆರಂಭಕ್ಕೂ ಮುನ್ನವೇ ಮ್ಯಾಚ್​ ಫಿಕ್ಸಿಂಗ್​ ಮಾಡೀತೇ ಕತಾರ್!​
4. Aindrila Sharma | ಬದುಕುಳಿಯಲಿಲ್ಲ ನಟಿ ಐಂದ್ರಿಲಾ ಶರ್ಮಾ; 2 ಬಾರಿ ಕ್ಯಾನ್ಸರ್​ ಗೆದ್ದಿದ್ದಾಕೆ, ಹೃದಯ ಸ್ತಂಭನದಿಂದ ಸಾವು
5. ಸಾಲಭಂಜಿಕೆ ಅಂಕಣ | ಅದೃಷ್ಟ ಬೇಕು ಪದ್ಯ ಓದಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

Cylinder Blast : ಬೆಂಗಳೂರಲ್ಲಿ ಮಧ್ಯರಾತ್ರಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದ್ದು, ಒಂದೇ ಕುಟುಂಬದ ಐವರು ಗಂಭೀರ ಗಾಯಗೊಂಡಿದ್ದಾರೆ. ಪ್ರತ್ಯೇಕ ಕಡೆಗಳಲ್ಲಿ ಅಗ್ನಿ ಅವಘಡಗಳು (Fire Accident ) ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.

VISTARANEWS.COM


on

By

cylinder blast in Bengaluru
Koo

ಬೆಂಗಳೂರು: ಬೆಂಗಳೂರಿನ ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದಲ್ಲಿ ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು (Cylinder Blast) ಐವರು ಗಂಭೀರ ಗಾಯಗೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಒಂದೇ ಕುಂಟುಂಬದ ಐವರಿಗೆ ಶೇ.90ರಷ್ಟು ಸುಟ್ಟ ಗಾಯಗಳಿಗೆ (Fire Accident ) ತುತ್ತಾಗಿದ್ದಾರೆ.

ದಂಪತಿ ಮದನ್ ಚೌಹಾರ (32), ಪ್ರೇಮ್ ಜಾಲ(28) ಹಾಗೂ ಮಕ್ಕಳಾದ ಹಿರದ್ (12), ಪ್ರಶಾಂತ್ (06), ಅನಿತಾ (8) ಈ ಐವರು ಗಂಭೀರ ಗಾಯಗೊಂಡಿದ್ದಾರೆ. ತಡರಾತ್ರಿ ಗ್ಯಾಸ್‌ ಲಿಂಕ್‌ ಆಗಿದ್ದು, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಸಿಲಿಂಡರ್‌ ಸ್ಫೋಟಗೊಂಡಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿದ್ದವರಿಗೆ ಗಂಭೀರವಾದ ಸುಟ್ಟು ಗಾಯವಾಗಿವೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ನೇಪಾಳ ಮೂಲದ ಕುಟುಂಬವು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸಂಪಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್‌ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

ಬಾಗಲಕೋಟೆಯಲ್ಲೂ ಸಿಲಿಂಡರ್‌ ಸ್ಫೋಟ; ಸುಟ್ಟು ಭಸ್ಮವಾದ ಫ್ಯಾಕ್ಟರಿ

ಸಿಲಿಂಡರ್ ಸ್ಫೋಟಕ್ಕೆ ಸ್ವೀಟ್, ಬಡಂಗ್ ತಯಾರಿಕ ಫ್ಯಾಕ್ಟರಿ ಸುಟ್ಟು ಭಸ್ಮವಾಗಿದೆ. ಬಾಗಲಕೋಟೆಯ ರಬಕವಿ ನಗರದದಲ್ಲಿ ಘಟನೆ ನಡೆದಿದೆ. ರಬಕವಿಯ ಕಂಟಿ ಬಸವೇಶ್ವರ ದೇವಾಲಯ ಹತ್ತಿರ ಇರುವ ಬಡಂಗ್ ಫ್ಯಾಕ್ಟರಿಯಲ್ಲಿ ಬುಧವಾರ ತಡರಾತ್ರಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮಹಮ್ಮದ್ ಹುಸೇನ್ ಗೋಕಾಕ್ ಎಂಬುವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡದಿಂದಾಗಿ ಅಂದಾಜು 50-60 ಲಕ್ಷ ರೂ ಹಾನಿ ಸಾಧ್ಯತೆ ಇದೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಟೆಕ್ನೋವಾ ಟೇಪ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದಲ್ಲಿರುವ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಟೆಕ್ನೋವಾ ಟೇಪ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಿಂದಾಗಿ ಕಾಟಾನ್ ಬಾಕ್ಸ್ ಮತ್ತು ಟೆಪ್ಸ್ ಎಲ್ಲವೂ ಸುಟ್ಟು ಕರಕಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ನಾಲ್ಕು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಲಕ್ಷಾಂತರ ರೂ.ಗಳ ಕಚ್ಚಾವಸ್ತುಗಳು ಬೆಂಕಿಗಾಹುತಿ ಆಗಿದ್ದವಿ.

ಉಡುಪಿಯಲ್ಲೂ ಅಗ್ನಿ ಅವಘಡ

ಉಡುಪಿಯ ಪಾದೂರು ಮರದ ಹುಡಿ ಗೋಡೌನ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಪಾಪು ತಾಲೂಕಿನ ಮಾದೂರಿನಲ್ಲಿರುವ ಮರದಹುಡಿ ಸಂಗ್ರಹದ ಘಟಕದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಉಡುಪಿ ಅಗ್ನಿಶಾಮಕ ದಳದವರಿಂದ ಕಾರ್ಯಾಚರಣೆ ನಡೆಸಿದ್ದರು, ಮರದ ಹುಡುಗಿ ತಗಳಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದರಿಂದ ಅವಘಡ ತಪ್ಪಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್‌ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

Lokayukta Raid: ಮೈಸೂರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನಿಗೆ ನಾಲ್ಕು ವರ್ಷ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ. ಉಡುಪಿಯಲ್ಲಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

VISTARANEWS.COM


on

By

Lokayukta Raid
Koo

ಮೈಸೂರು/ಉಡುಪಿ: ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ (Lokayukta Raid) ಇಟ್ಟಿದ್ದರು. ಇದೀಗ ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ. 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕೆ.ಆರ್. ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಡಾ.ಪುಟ್ಟಸ್ವಾಮಿ ಶಿಕ್ಷೆಗೊಳಗಾದ ವೈದ್ಯರಾಗಿದ್ದಾರೆ. ಕಳೆದ 2017ರ ಏಪ್ರಿಲ್ 12ರಂದು ದೇವರಾಜು ಎಂಬುವವರು ದೂರು ನೀಡಿದ್ದರು. ಪುಟ್ಟಸ್ವಾಮಿ 26 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸಲಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಆರೋಪಿ ಪುಟ್ಟಸ್ವಾಮಿ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಾ ಪುಟ್ಟಸ್ವಾಮಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ಹಾಕಲಾಗಿದೆ.

Lokayukta Raid

ಉಡುಪಿಯಲ್ಲಿ ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಅಧಿಕಾರಿಗಳು

ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಉಪ್ಪೂರು ಪಿಡಿಓ ಇನಾಯತ್ ಉಲ್ಲಾ ಬೇಗ್ ಹಾಗೂ ಪಂಚಾಯತ್ ಬಿಲ್ ಕಲೆಕ್ಟರ್ ಸಂಜಯ್ ಕೂಡ ಸಿಕ್ಕಿಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಸಿಲುಕಿದ್ದಾರೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರಿಬ್ಬರಿಗೂ ಜೂನ್ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Illegal Bangla Immigrants: ಸಿಸಿಬಿ ದಾಳಿ, ಬೆಂಗಳೂರಿನಲ್ಲಿ ನೂರಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Illegal Bangla Immigrants: ಬೆಂಗಳೂರಿನ ನಾಲ್ಕು ಡಿವಿಷನ್‌ಗಳಲ್ಲಿರುವ ಅಕ್ರಮ ನಿವಾಸಿಗಳ ಮನೆ ಮೇಲೆ ದಾಳಿ ನಡೆದಿದೆ. ಬಾಂಗ್ಲಾ ಗಡಿಭಾಗದಲ್ಲಿ ನುಸುಳಿ ಅಕ್ರಮವಾಗಿ ಬೆಂಗಳೂರಿಗೆ ಬಂದಿರುವ ಪ್ರಜೆಗಳು ಇವರಾಗಿದ್ದು, ದೇಶದಲ್ಲಿ ನೆಲೆಸುವುದಕ್ಕೆ ಯಾವುದೇ ಸೂಕ್ತ ದಾಖಲೆ ಇವರ ಬಳಿ ಇಲ್ಲ.

VISTARANEWS.COM


on

Illegal Bangla Immigrants
Koo

ಬೆಂಗಳೂರು: ಸೆಂಟ್ರಲ್‌ ಕ್ರೈಂ ಬ್ರಾಂಚ್‌ ಪೊಲೀಸರು (CCB police) ನಿನ್ನೆ ಮಧ್ಯರಾತ್ರಿ ಬೆಂಗಳೂರು (bangalore) ನಗರದ ಹಲವು ಕಡೆಗಳಲ್ಲಿ ದಾಳಿ (raid) ನಡೆಸಿದ್ದು, ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ನೂರಕ್ಕೂ ಅಧಿಕ ಬಾಂಗ್ಲಾದೇಶಿ (Illegal Bangla Immigrants) ವಲಸಿಗರನ್ನು ಬಂಧಿಸಿದ್ದಾರೆ.

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ಮನೆ ಮೇಲೆ ಸಿಸಿಬಿ ಪೊಲೀಸರ ಮಿಡ್ ನೈಟ್ ಅಪರೇಷನ್ ನಡೆದಿದೆ. ಬೆಂಗಳೂರಿನ ನಾಲ್ಕು ಡಿವಿಷನ್‌ಗಳಲ್ಲಿರುವ ಅಕ್ರಮ ನಿವಾಸಿಗಳ ಮನೆ ಮೇಲೆ ದಾಳಿ ನಡೆದಿದೆ. ಬಾಂಗ್ಲಾ ಗಡಿಭಾಗದಲ್ಲಿ ನುಸುಳಿ ಅಕ್ರಮವಾಗಿ ಬೆಂಗಳೂರಿಗೆ ಬಂದಿರುವ ಪ್ರಜೆಗಳು ಇವರಾಗಿದ್ದು, ದೇಶದಲ್ಲಿ ನೆಲೆಸುವುದಕ್ಕೆ ಯಾವುದೇ ಸೂಕ್ತ ದಾಖಲೆ ಇವರ ಬಳಿ ಇಲ್ಲ.

ಗುಪ್ತಚರ ಮಾಹಿತಿ ಆಧರಿಸಿ ದಾಳಿ ಮಾಡಿರುವ ಸಿಸಿಬಿ ತಂಡ ಮಧ್ಯರಾತ್ರಿ 1 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೂ ಆಪರೇಷನ್ ನಡೆಸಿದೆ. ನೂರಕ್ಕೂ ಹೆಚ್ಚ ಅಕ್ರಮ ನಿವಾಸಿಗಳನ್ನು ಪತ್ತೆ ಹಚ್ಚಲಾಗಿದೆ. ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಇವರಲ್ಲಿ ಹಲವರು ವೋಟರ್‌ ಐಡಿ ಕೂಡ ಮಾಡಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಇವರೊಂದಿಗೆ, ಸೂಕ್ತ ದಾಖಲೆಗಳ ಪರಿಶೀಲನೆ ಮಾಡದೆ ಇವರಿಗೆ ಬಾಡಿಗೆ ಮನೆಗಳನ್ನು ಹಾಗೂ ಕೊಠಡಿಗಳನ್ನು ನೀಡಿದವರನ್ನು ಕೂಡ ಪ್ರಶ್ನಿಸಲಾಗುತ್ತಿದೆ. ಇವರಲ್ಲಿ ಹೆಚ್ಚಿನವರು ಫ್ಯಾಕ್ಟರಿ, ಕೂಲಿ, ಹೋಟೆಲ್‌ಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ. ಹಲವರು ಕೆಲವು ವರ್ಷಗಳಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ಗೊತ್ತಾಗಿದೆ.

ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ಸಿಎಎ (CAA) ಅಡಿಯಲ್ಲಿ ಪೌರತ್ವ ಕಲ್ಪಿಸಿರುವ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು 14 ಜನರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಸಿಎಎ ನಿಯಮಗಳ ಜಾರಿಗೆ ಕೇಂದ್ರ ಸರ್ಕಾರವು ಕಳೆದ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಆ ಮೂಲಕ ದೇಶದಲ್ಲಿ ಸಿಎಎ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, 14 ಜನರಿಗೆ ಪ್ರಮಾಣಪತ್ರಗಳನ್ನು ನೀಡಿದೆ.

ಇದನ್ನೂ ಓದಿ: ಹನಿ ಟ್ರ್ಯಾಪ್‌ ಮಾಡಿ ಕೋಲ್ಕತಾಗೆ ಕರೆಸಿಕೊಂಡು ಬಾಂಗ್ಲಾದೇಶ ಸಂಸದನ ಕೊಲೆ; ಚರ್ಮ ಸುಲಿದು, ದೇಹ ಪೀಸ್‌ ಪೀಸ್‌

Continue Reading

ಬೆಂಗಳೂರು ಗ್ರಾಮಾಂತರ

Elephant Attack : ಆನೇಕಲ್‌ನಲ್ಲಿ ರೈತನ ಬೆನ್ನು ಮೂಳೆ ಮುರಿದ ಕಾಡಾನೆ; ವೃದ್ಧನ ಸ್ಥಿತಿ ಗಂಭೀರ

Elephant Attack : ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ದಾಳಿ ಮಾಡಿರುವ ಕಾಡಾನೆಯು ಬೆನ್ನು ಮೂಳೆ ಮುರಿಯುವಂತೆ ಮಾಡಿದೆ. ಗಂಭೀರ ಗಾಯಗೊಂಡಿರುವ ರೈತ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮತ್ತೊಂದು ಕಡೆ ಕಾಡಾನೆಯೊಂದು ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿದೆ.

VISTARANEWS.COM


on

By

Elephant attack
Koo

ಆನೇಕಲ್: ರೈತರೊಬ್ಬರ ಮೇಲೆ ಕಾಡಾನೆ ದಾಳಿ (Elephant Attack) ಮಾಡಿದ್ದರಿಂದ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರವಾಗಿ ಗಾಯಗೊಂಡ ರೈತ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿ ಬಳಿ ಘಟನೆ ನಡೆದಿದೆ. ಚಿನ್ನಬರಿಯಪ್ಪ (70) ಆನೆ ದಾಳಿಗೊಳಗಾದ ರೈತ.

ಜಮೀನಿನ ಕಡೆ ಹೋಗುತ್ತಿದ್ದಾಗ ಏಕಾಏಕಿ ನುಗ್ಗಿದ ಕಾಡಾನೆ ಅಟ್ಟಾಡಿಸಿ ದಾಳಿ ಮಾಡಿದೆ. ಪರಿಣಾಮ ಕೈ ಹಾಗೂ ಸೊಂಟದ ಭಾಗದ ಮೂಳೆಗಳು ಮುರಿದು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡು ನರಳಾಡುತ್ತಿದ್ದ ಚಿನ್ನಬರಿಯಪ್ಪರನ್ನು ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಗಾಯಾಳು ರೈತನನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

elephant attack in Anekal

ಆನೇಕಲ್‌ನಲ್ಲಿ ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಪಲತೊಟ್ಟನಪಲ್ಲಿ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿದೆ. ಗ್ರಾಮದ ಸಮೀಪ ಹಾದು ಹೋಗಿದ್ದ ವಿದ್ಯುತ್ ತಂತಿಯನ್ನು ಗಂಡಾನೆ ತುಳಿದಿದೆ.

ಕಳೆದ ರಾತ್ರಿ ಗ್ರಾಮಕ್ಕೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿದ್ದವು. ಇಳಿಜಾರು ಪ್ರದೇಶದಲ್ಲಿ ಹೋಗುತ್ತಿದ್ದದ್ದಾಗ ಒಂದು ಕಾಡಾನೆಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಆನೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಉಡುಪಿಯಲ್ಲಿ ಚಿರತೆ ಓಡಾಟ

ಹಾಡುಹಗಲಿನಲ್ಲೇ ಚಿರತೆ ಕಾಣಿಸಿಕೊಂಡು ಜನರಲ್ಲಿ ಭಯವನ್ನು ಹುಟ್ಟಿಸುತ್ತಿದೆ. ಉಡುಪಿಯ ಕಾರ್ಕಳ ತಾಲೂಕು ಹಾಳೆಕಟ್ಟೆ ಕಲ್ಯಾ ಮಲಯ್ಯಬೆಟ್ಟು ಎಂಬಲ್ಲಿ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಅಡ್ಡಾದಿಡ್ಡಿಯಾಗಿ ಯಾವುದೇ ಭಯವಿಲ್ಲದೆ ಚಿರತೆ ಓಡಾಡುತ್ತಿದೆ. ಆದಷ್ಟು ಶೀಘ್ರದಲ್ಲಿ ಚಿರತೆಯನ್ನು ಹಿಡಿದು ರಕ್ಷಣೆ ನೀಡುವಂತೆ ಜನರು ಒತ್ತಾಯಿಸಿದ್ದಾರೆ. ಚಿರತೆ ಸಂಚಾರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
cylinder blast in Bengaluru
ಕ್ರೈಂ2 mins ago

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

T20 World Cup 2007
ಕ್ರಿಕೆಟ್23 mins ago

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

Gold Rate Today
ಚಿನ್ನದ ದರ24 mins ago

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Munawar Faruqui second wife Mehzabeen Coatwala single mom and makeup artist
ಬಾಲಿವುಡ್24 mins ago

Munawar Faruqui:  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ ಎರಡನೇ ಪತ್ನಿ ಸಿಂಗಲ್‌ ಪೇರೆಂಟ್‌!

Lokayukta Raid
ಕ್ರೈಂ44 mins ago

Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್‌ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

Illegal Bangla Immigrants
ಕ್ರೈಂ56 mins ago

Illegal Bangla Immigrants: ಸಿಸಿಬಿ ದಾಳಿ, ಬೆಂಗಳೂರಿನಲ್ಲಿ ನೂರಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Viral News
ವೈರಲ್ ನ್ಯೂಸ್59 mins ago

Viral News: ಸರ ಕದ್ದು ಪರಾರಿಯಾಗಲು ಬೈಕ್‌ ಏರಿದವರಿಗೆ ಕಾದಿತ್ತು ಶಾಕ್‌; ವಿಡಿಯೊ ಇಲ್ಲಿದೆ

PM Narendra Modi
ದೇಶ1 hour ago

PM Narendra Modi: ಮೋದಿ ಧ್ಯಾನ ಮಾಡುವುದು ನೀತಿ ಸಂಹಿತೆ ಉಲ್ಲಂಘನೆಯೆ? ಕಾನೂನು ತಜ್ಞರ ಅಭಿಪ್ರಾಯ ಹೀಗಿದೆ

Saanvi Sudeep New Tattoo Piku meaning
ಸ್ಯಾಂಡಲ್ ವುಡ್1 hour ago

Saanvi Sudeep: ಟ್ಯಾಟೂ ಹಾಕಿಸಿಕೊಂಡ ಕಿಚ್ಚ ಸುದೀಪ್‌ ಮುದ್ದಿನ ಮಗಳು: ʻPIKUʼ ಅರ್ಥ ಏನು?

Nandamuri Balakrishna Pushes Away Actress Anjali
ಟಾಲಿವುಡ್1 hour ago

Nandamuri Balakrishna: ಕುಡಿದು ಬಂದು ವೇದಿಕೆ ಮೇಲೆ ನಟಿ ಅಂಜಲಿಯನ್ನು ತಳ್ಳಿದ್ರಾ ಬಾಲಯ್ಯ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌