ವಿಸ್ತಾರ TOP 10 NEWS | ರಾಮನಗರದಲ್ಲಿ ʼದಕ್ಷಿಣದ ಅಯೋಧ್ಯೆʼಯಿಂದ ಪ್ರಧಾನಿ ಮೋದಿ ತಾಯಿ ಅನಾರೋಗ್ಯದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ರಾಮನಗರದಲ್ಲಿ ʼದಕ್ಷಿಣದ ಅಯೋಧ್ಯೆʼಯಿಂದ ಪ್ರಧಾನಿ ಮೋದಿ ತಾಯಿ ಅನಾರೋಗ್ಯದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news-mini-ayodhya-in-ramanagar-to-modi mother hospitalized and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿರುವಂತೆ ರಾಮನಗರದಲ್ಲಿ ಅಯೋಧ್ಯಾ ಮಾದರಿಯನ್ನು ನಿರ್ಮಿಸುವ ಸಚಿವ ಅಶ್ವತ್ಥನಾರಾಯಣ ಹೇಳಿಕೆ ಸಂಚಲನ ಮೂಡಿಸಿದೆ. ಹಳೆ ಮೈಸೂರಿನಲ್ಲಿ ಅಮಿತ್‌ ಶಾ ಆಗಮನ ಮತ್ತಷ್ಟು ಸಂಚಲನ ಮೂಡಿಸಿದೆ. ಬೂಸ್ಟರ್‌ ಲಸಿಕೆ ಕೊರತೆ ಎದುರಾಗಿದೆ. ಅನಾರೋಗ್ಯಕ್ಕೀಡಾದ ತಾಯಿಯನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ, ಮಹಾರಾಷ್ಟ್ರದಲ್ಲಿ ಲೋಕಾಯುಕ್ತ ಕಾಯ್ದೆಗೆ ಒಪ್ಪಿಗೆ ನೀಡಲಾಗಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Ramanagara | ಅಶ್ವತ್ಥನಾರಾಯಣ ಮಂದಿರವನ್ನು ಕಟ್ಟಲಿ ಎಂದ ಡಿಕೆಶಿ; ಅವರಿಗೂ ರಾಮನಗರಕ್ಕೂ ಸಂಬಂಧ ಏನು ಎಂದ ಎಚ್‌ಡಿಡಿ
ರಾಮನಗರದ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ನಿರ್ಮಾಣ ಮಾಡಲಾಗುವುದು ಎಂಬ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರ ಯೋಜನೆ ಕುರಿತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Amit Shah | ಹಳೆ ಮೈಸೂರಿನಲ್ಲಿ ಕಹಳೆ ಮೊಳಗಿಸಿದ ಬಿಜೆಪಿ; HDK ಟೀಕೆ ಮೂಲಕ ಅಮಿತ್‌ ಶಾಗೆ ಸ್ವಾಗತ ಕೋರಿದ ಪಕ್ಷ
ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರು ಡಿಸೆಂಬರ್‌ 30ರಂದು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಹಳೆ ಮೈಸೂರಿನಲ್ಲಿ ಪಕ್ಷದ ಕಹಳೆ ಮೊಳಗಿಸಲು ಎನ್ನುವುದು ಇದೀಗ ಸುಸ್ಪಷ್ಟವಾಗಿದೆ. ರಾಜ್ಯ ಬಿಜೆಪಿ ಟ್ವಿಟರ್‌ ಖಾತೆ ಮೂಲಕ ಬಹಿರಂಗವಾಗಿಯೇ ಈ ಮಾಹಿತಿಯನ್ನು ನೀಡಲಾಗಿದ್ದು, ಹಳೆ ಮೈಸೂರಿನಲ್ಲಿ ಬಿಜೆಪಿ ಸಂಚಲನ ಆರಂಭದ ಮೊದಲ ಹೆಜ್ಜೆಯಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Coronavirus | ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ ಕೊರತೆ; ಕಾರ್ಬಿವ್ಯಾಕ್ಸ್‌ ಬೂಸ್ಟರ್‌ ಡೋಸ್‌ಗೆ ಜನ ಹಿಂದೇಟು
ಪ್ರತಿರೋಧಕ ಶಕ್ತಿ ಹೊಂದಿರುವ ಕೋವಿಶೀಲ್ಡ್‌ ಹಾಗೂ ಕೊವ್ಯಾಕ್ಸಿನ್‌ ಕೊರತೆ ಎದುರಾಗಿದ್ದು, ಬೆಂಗಳೂರಿನಲ್ಲಿ ಹಲವು ಕಡೆ ನೋ ಸ್ಟಾಕ್‌ ಬೋರ್ಡ್‌ ಕಂಡುಬರುತ್ತಿದೆ. ಇವುಗಳಿಗೆ ಪರ್ಯಾಯವಾಗಿ ಈಗಾಗಲೇ ಚಾಲ್ತಿಯಲ್ಲಿರುವ “ಕಾರ್ಬಿವ್ಯಾಕ್ಸ್‌” ಅನ್ನು ಬೂಸ್ಟರ್‌ ಡೋಸ್‌ ಆಗಿ ಪಡೆಯಲು ವೈದ್ಯರು ಸೂಚಿಸುತ್ತಿದ್ದರೂ ಜನ ಮಾತ್ರ ಹಿಂದೇಟು ಹಾಕುತ್ತಿರುವ ಬಗ್ಗೆ ವರದಿಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Heeraben Modi | ಅನಾರೋಗ್ಯಕ್ಕೀಡಾದ ತಾಯಿಯನ್ನು ನೋಡಲು ಆಸ್ಪತ್ರೆಗೆ ಆಗಮಿಸಿದ ಪ್ರಧಾನಿ ಮೋದಿ; ರಾಹುಲ್​ ಗಾಂಧಿ ಭಾವನಾತ್ಮಕ ಟ್ವೀಟ್​​
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಾಯಿ ಹೀರಾಬೆನ್​​ರನ್ನು ನೋಡಲು ಪ್ರಧಾನಿ ನರೇಂದ್ರ ಮೋದಿಯವರು ಅಹ್ಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ಭೇಟಿಕೊಟ್ಟಿದ್ದಾರೆ. ಹಾಗೇ, ಅಮ್ಮನ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Al-Qaeda Targets India | ಇಸ್ಲಾಂ ರಾಷ್ಟ್ರಗಳು ಭಾರತವನ್ನು ಬಾಯ್ಕಾಟ್‌ ಮಾಡಲಿ, ಹಿಂದುಗಳನ್ನು ಓಡಿಸಲಿ: ಅಲ್‌ಕೈದಾ ಮತ್ತೆ ಕುತಂತ್ರ
ಕರ್ನಾಟಕದಲ್ಲಿ ಭುಗಿಲೆದ್ದಿದ್ದ ಹಿಜಾಬ್‌ ಪರ ಹೋರಾಟದಲ್ಲಿ ಮೂಗು ತೂರಿಸಿದ್ದ, ‘ಅಲ್ಲಾ ಹು ಅಕ್ಬರ್’‌ ಎಂದು ಘೋಷಣೆ ಕೂಗಿದ ಮಂಡ್ಯ ವಿದ್ಯಾರ್ಥಿನಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಅಲ್‌ಕೈದಾ (Al-Qaeda Targets India) ಉಗ್ರ ಸಂಘಟನೆಯು ಈಗ ಭಾರತದ ವಿಚಾರದಲ್ಲಿ ಮತ್ತೆ ಉದ್ಧಟತನ ಮಾಡಿದೆ. “ಇಸ್ಲಾಮಿಕ್‌ ರಾಷ್ಟ್ರಗಳು ಭಾರತವನ್ನು ಬಾಯ್ಕಾಟ್‌ ಮಾಡಬೇಕು” ಎಂದು ಕರೆ ನೀಡುವ ಮೂಲಕ ಹೊಸ ಉಪಟಳ ಮಾಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Terrorists Killed | ಜಮ್ಮುವಿನಲ್ಲಿ ನಾಲ್ವರು ಉಗ್ರರ ಹತ್ಯೆ; ಭದ್ರತಾ ಪಡೆ ಗುಂಡಿನ ದಾಳಿಗೆ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್​
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಸಿಬ್ಬಂದಿ ಭರ್ಜರಿ ಬೇಟೆಯಾಡಿದ್ದಾರೆ. ಜಮ್ಮು ಹೊರವಲಯದಲ್ಲಿ ಸಾಗುತ್ತಿದ್ದ ಟ್ರಕ್​​​ನಲ್ಲಿ ಅಡಗಿದ್ದ ನಾಲ್ವರು ಭಯೋತ್ಪಾದಕರನ್ನು ಕೊಂದು ಹಾಕಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Maharashtra Lokayukta Bill | ಅಣ್ಣಾ ಹಜಾರೆ ಕನಸು ನನಸು, ಮಹಾರಾಷ್ಟ್ರದಲ್ಲಿ ಲೋಕಾಯುಕ್ತ ಬಿಲ್ ಪಾಸ್,‌ ಇನ್ನು ಸಿಎಂ ವಿರುದ್ಧವೂ ತನಿಖೆ
ಭ್ರಷ್ಟಾಚಾರ ತಡೆ, ಭ್ರಷ್ಟಾಚಾರ ಎಸಗುವ ರಾಜಕಾರಣಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ದಿಸೆಯಲ್ಲಿ ಮಹಾರಾಷ್ಟ್ರ ಐತಿಹಾಸಿಕ ನಡೆ ಇಟ್ಟಿದೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವ ಅಧಿಕಾರವಿರುವ ‘ಲೋಕಾಯುಕ್ತ ವಿಧೇಯಕ’ಕ್ಕೆ ಮಹಾರಾಷ್ಟ್ರ ವಿಧಾನಸಭೆಯು ಅಂಗೀಕಾರ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. AK Antony | ಮೋದಿಯನ್ನು ಸೋಲಿಸಲು ಕಾಂಗ್ರೆಸ್‌ಗೆ ಹಿಂದುಗಳ ಬೆಂಬಲ ಅನಿವಾರ್ಯ ಎಂದ ಕೈ ನಾಯಕ ಎ.ಕೆ.ಆ್ಯಂಟನಿ
“ನರೇಂದ್ರ ಮೋದಿ ಅವರ ಸರ್ಕಾರವನ್ನು ಸೋಲಿಸಲು ಕಾಂಗ್ರೆಸ್‌ಗೆ ಹಿಂದುಗಳ ಬೆಂಬಲ ಅತ್ಯಗತ್ಯವಾಗಿದೆ. ಇದರ ದೃಷ್ಟಿಯಿಂದ ನಾವು ಬಹುಸಂಖ್ಯಾತರ ವಿಶ್ವಾಸವನ್ನು ಗಳಿಸಲೇಬೇಕಿದೆ. ಕೇವಲ ಅಲ್ಪಸಂಖ್ಯಾತರ ಬೆಂಬಲದಿಂದ ಕಾಂಗ್ರೆಸ್‌ ಗೆಲುವು ಸಾಧಿಸಲು ಸಾಧ್ಯವಿಲ್ಲʼ ಎಂದು ಕೇಂದ್ರದ ಮಾಜಿ ಸಚಿವ ಎ.ಕೆ.ಆ್ಯಂಟನಿ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. SC ST Reservation | ಮುಂಬಡ್ತಿಯಲ್ಲಿಯೂ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; ಸರ್ಕಾರದಿಂದ ಆದೇಶ
ರಾಜ್ಯದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಹಾಗೂ ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ (SC ST Reservation) ಹೆಚ್ಚಳ ಮಾಡಿ ಕಳೆದ ಅಕ್ಟೋಬರ್‌ನಲ್ಲಿ ಸುಗ್ರೀವಾಜ್ಞೆ ಹೊರಡಿಸಿದ್ದ ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರರ ಮುಂಬಡ್ತಿಯಲ್ಲಿಯೂ ಈ ಮೀಸಲಾತಿ ಹೆಚ್ಚಳವನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Hassan Blast | ಮಹಿಳೆಯ ಹಿಂದೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ, ಅವಳಿಗೆ ಪಾಠ ಕಲಿಸಲು ಮಿಕ್ಸಿ ಬಾಂಬ್‌ ಕಳಿಸಿದ!
ನಗರದಲ್ಲಿ ಡಿಸೆಂಬರ್‌ ೨೬ರ ಸೋಮವಾರ ಸಂಜೆ ಕೊರಿಯರ್ ಅಂಗಡಿಯಲ್ಲಿ ನಡೆದಿದ್ದ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಾಸನದ ವಿಚ್ಛೇದಿತ ಮಹಿಳೆಗೆ ಮ್ಯಾಟ್ರಿಮೊನಿಯಲ್ಲಿ ಪರಿಚಿತನಾದ ಅನೂಪ್‌ ಕುಮಾರ್‌ ಎಂಬಾತ ಆಕೆಯ ರೂಪಕ್ಕೆ ಮರುಳಾಗಿ ಒಂದಿಷ್ಟು ಕಾಲ ಆಕೆ ಜತೆ ಓಡಾಡಿದ್ದ. ಲಕ್ಷಾಂತರ ರೂ. ಹಣವನ್ನೂ ನೀಡಿದ್ದ ಎನ್ನಲಾಗಿದೆ. ಆದರೆ, ಕೊನೆಗೆ ಆಕೆ ತನ್ನನ್ನು ದೂರ ಮಾಡಲು ಮುಂದಾದಾಗ ಆಕೆಯನ್ನು ಸಾಯಿಸಲು ಇಲ್ಲವೇ ಸೌಂದರ್ಯವನ್ನು ವಿರೂಪಗೊಳಿಸಲು ಮಾಡಿದ ತಂತ್ರವೇ ಈ ಮಿಕ್ಸಿ ಬಾಂಬ್‌! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

  1. Devadasi system | ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಜೀವಂತ, ಮುತ್ತು ಕಟ್ಟಿಸಿದ ಪ್ರಕರಣ ಬೆಳಕಿಗೆ
  2. Siddheshwar Swamiji | ಭಕ್ತರಿಗೆ ದರ್ಶನ ನೀಡಿದ ಶ್ರೀ ಸಿದ್ದೇಶ್ವರ ಸ್ವಾಮೀಜಿ; ಆರೋಗ್ಯದ ಕುರಿತ ವದಂತಿಗಳಿಗೆ ತೆರೆ
  3. Drunken teacher | ಡ್ಯೂಟಿ ಟೈಮಲ್ಲೇ ಮತ್ತೇರಿದ ಮಾಸ್ಟರ್; ಶಾಲೆ ಜಗುಲಿಯಲ್ಲೇ ಮಲಗಿ ಹೊರಳಾಟ; ಇದು ಅಲಂಗಾರು ಶಾಲೆಯ ಗೋಳಾಟ
  4. ಶಿರಸಿ ಪ್ರತ್ಯೇಕ ಜಿಲ್ಲೆ | ಪಕ್ಷಾತೀತವಾಗಿ ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ ನಿಯೋಗ: ಸಕಾರಾತ್ಮಕ ಸ್ಪಂದನೆ
  5. Year- end special | ಬ್ರಹ್ಮೋಸ್‌, ಅಗ್ನಿ, ಪೃಥ್ವಿII : ಪ್ರಳಯಾಂತಕ ಕ್ಷಿಪಣಿಗಳನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತ
  6. ಮಗು ಹೆತ್ತುಕೊಡಲಿಲ್ಲ ಎಂದು ಪತ್ನಿಯ ಗುಪ್ತಾಂಗವನ್ನು ಬ್ಲೇಡ್​​ನಿಂದ ಕೊಯ್ದ ದುಷ್ಟ ಪತಿ; ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading
Advertisement
Latest16 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest1 day ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 day ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 day ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest1 day ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest2 days ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest2 days ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌