ವಿಸ್ತಾರ TOP 10 NEWS | ರಾಜ್ಯ ರಾಜಧಾನಿಯಲ್ಲಿ ಮೋದಿ ಮೇನಿಯಾದಿಂದ ರಾಜೀವ್‌ ಗಾಂಧಿ ಹಂತಕರ ಬಂಧಮುಕ್ತದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ರಾಜ್ಯ ರಾಜಧಾನಿಯಲ್ಲಿ ಮೋದಿ ಮೇನಿಯಾದಿಂದ ರಾಜೀವ್‌ ಗಾಂಧಿ ಹಂತಕರ ಬಂಧಮುಕ್ತದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news 11112022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಶುಕ್ರವಾರ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ವಿವಿಧ ಸಮುದಾಯಗಳಿಗೆ ರಾಜಕೀಯ ಸಂದೇಶವನ್ನೂ ನೀಡಿದ್ದಾರೆ. ಶಾಸಕ ಎಂ. ಪಿ. ರೇಣುಕಾಚಾರ್ಯ ಸಹೋದರ ಪುತ್ರನ ಸಾವಿನ ಪ್ರಕರಣ ಹೊಸ ತಿರುವು ಪಡೆದಿದೆ, ಸತೀಶ್‌ ಜಾರಕಿಹೊಳಿ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ, ವಿಶ್ವಕಪ್‌ನಿಂದ ಹೊರಬಿದ್ದ ಟೀಂ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ, ರಾಜೀವ್‌ ಗಾಂಧಿ ಹಂತಕರನ್ನು ಸುಪ್ರೀಂಕೋರ್ಟ್‌ ಬಿಡುಗಡೆ ಮಾಡಿದೆ ಎನ್ನುವವರೆಗಿನ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Modi in Bengaluru | ನಾಡಪ್ರಭು ಕೆಂಪೇಗೌಡ ಪ್ರತಿಮೆ, ರಾಜ್ಯ, ದೇಶದ ಅಭಿವೃದ್ಧಿಗೆ ಸ್ಫೂರ್ತಿದಾಯಕ: ಪ್ರಧಾನಿ ನರೇಂದ್ರ ಮೋದಿ
ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಭವ್ಯ ಪ್ರತಿಮೆಯು ಕರ್ನಾಟಕ ಮತ್ತು ಭಾರತದ ಭವಿಷ್ಯದ ಪ್ರಗತಿಗೆ ಪ್ರೇರಣೆ ನೀಡಲಿದೆ (Modi in Bengaluru) ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಭಾರತದಲ್ಲಿ ತಂತ್ರಜ್ಞಾನ ಮತ್ತು ಸ್ಟಾರ್ಟಪ್‌ಗಳ ಆವಿಷ್ಕಾರಕ್ಕೆ ಬೆಂಗಳೂರು ಅಮೋಘ ಕೊಡುಗೆ ನೀಡಿದೆ. ಸ್ಟಾರ್ಟಪ್‌ ಎಂದರೆ ಹೊಸ ವಿಶ್ವಾಸ, ಹೊಸ ಸಂಶೋಧನೆಗೆ ಹಾದಿ ಮಾಡಿಕೊಡುತ್ತದೆ. ಈವತ್ತು ಜಾಗತಿಕ ಸ್ಟಾರ್ಟಪ್‌ ನಕಾಶೆಯಲ್ಲಿ ಬೆಂಗಳೂರು ತನ್ನ ಛಾಪು ಮೂಡಿಸಿದೆ. ಇಂದು ಆರಂಭವಾಗಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಒಂದೇ ಅಲ್ಲ, ಇದು ಅಭಿವೃದ್ಧಿಯ ನವ ಯುಗದ ಒಂದು ಝಲಕ್‌ ಮಾತ್ರ. ಭಾರತ ತನ್ನ ಮಂದಗತಿಯ, ಪ್ರಯಾಸದ ದಿನಗಳ ಬದಲಿಗೆ ವೇಗದ ಪ್ರಗತಿಯತ್ತ ಮುನ್ನಡೆಯಲಿದೆ. ಮುಂಬರುವ ದಿನಗಳಲ್ಲಿ ದೇಶಾದ್ಯಂತ 400ಕ್ಕೂ ಹೆಚ್ಚು ವಂದೇ ಭಾರತ್‌ ಹೈಸ್ಪೀಡ್‌ ರೈಲುಗಳು ಸಂಚಾರ ನಡೆಸಲಿವೆ ಎಂದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Modi in Bengaluru | ಡಬ್ಬಲ್‌ ಎಂಜಿನ್‌ ಸರ್ಕಾರದಿಂದ ರಾಜ್ಯಕ್ಕೆ ಲಾಭ; ಮತ್ತೆ ಮೋದಿ ಪ್ರತಿಪಾದನೆ
ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ರಾಜ್ಯದ ಜನತೆಗೆ ಲಾಭವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರತಿಪಾದಿಸಿದ್ದಾರೆ. “ಡಬ್ಬಲ್‌ ಎಂಜಿನ್‌ ಸರ್ಕಾರʼʼ ಜಾರಿಗೆ ತಂದ ವಿವಿಧ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು, ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಕೊಡುಗೆಗಳನ್ನು ವಿವರಿಸಿದ್ದಾರೆ. ಬೆಂಗಳೂರು ನಗರ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ನಡೆದ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಜಲ್‌ ಜೀವನ್‌, ಮನೆ ಮನೆಗೆ ಗಂಗೆ, ಆಯುಷ್ಮಾನ್‌ ಭಾರತ್‌, ಪಿಎಂ ಕಿಸಾನ್‌, ಪಿಎಂ ಸ್ವನಿಧಿ ಯೋಜನೆಗಳ ರಾಜ್ಯದ ಫಲಾನುಭವಿಗಳ ಕುರಿತು ಮಾಹಿತಿ ನೀಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Modi In Bengaluru | ರಾಜ್ಯ ಸರ್ಕಾರ ಎಚ್‌.ಡಿ. ದೇವೇಗೌಡರಿಗೆ ಅವಮಾನ ಮಾಡಿದೆ ಎಂದ ಜೆಡಿಎಸ್‌, ಸಾಮಾಜಿಕ ಜಾಲತಾಣದಲ್ಲಿ ಬಿರುಸಿನ ಚರ್ಚೆ
ನಾಡಿನ ಪರಂಪರೆಗೆ ಹೊಸ ಸೇರ್ಪಡೆಯಾದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನು ಆಹ್ವಾನಿಸದೇ ಅವಮಾನಿಸಲಾಗಿದೆ ಎಂದು ರಾಜ್ಯ ಜೆಡಿಎಸ್‌ ಘಟಕ ಆರೋಪಿಸಿದೆ. “ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ ಎಚ್‌.ಡಿ. ದೇವೇಗೌಡ ಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರ್ಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Modi In Bengaluru | ದೇವೇಗೌಡರನ್ನು ಕರೆಯದೆ ರಾಜ್ಯ ಸರ್ಕಾರ ಸಣ್ಣತನ ತೋರಿದೆ ಎಂದ ಟಿ.ಎ.ಶರವಣ

4. Modi In Bengaluru | ಕುಲ ಕುಲ ಕುಲವೆಂದು ಹೊಡೆದಾಡದಿರಿ ಎನ್ನುತ್ತಲೇ ʼಗೌಡʼರ ಕೋಟೆಯ ಮೇಲೆ ಕಣ್ಣಿಟ್ಟ ನರೇಂದ್ರ ಮೋದಿ
ಸಂತ ಕನಕದಾಸರ ಜಯಂತಿಯಂದು ಬೆಂಗಳೂರಿಗೆ ಆಗಮಿಸಿ ಅವರ ಮಾತುಗಳನ್ನೇ ಉಲ್ಲೇಖಿಸುತ್ತ ಬೆಂಗಳೂರಿನ ಜನತೆಯ ಮನೂರೆಗೊಂಡಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಆದರೆ ಮೋದಿ ಮೇನಿಯಾ ಬೆಂಗಳೂರಿಗಷ್ಟೇ ಸೀಮಿತವಾಗಿತ್ತು ಎಂದುಕೊಂಡರೆ ಅದು ತಪ್ಪು. ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳ ಪ್ರತಿ ನಡೆಯೂ ರಾಜಕೀಯ ಉದ್ದೇಶವನ್ನು ಹೊಂದಿರುತ್ತದೆ ಎನ್ನುವುದು ಖಚಿತ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ಪ್ರವಾಸವೂ ಅನೇಕ ರಾಜಕೀಯ ಸಂದೇಶಗಳನ್ನು ತನ್ನೊಳಗೆ ಹುದುಗಿಸಿಕೊಂಡಿದೆ. ಪೂರ್ಣ ವಿಶ್ಲೇಷಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

5. Chandru death| ಚಂದ್ರಶೇಖರ್‌ ಕಾರಿಗೆ ಹಿಂದಿನಿಂದ ಬೇರೆ ಕಾರು ಡಿಕ್ಕಿ ಹೊಡೆದಿತ್ತಾ? FSL ವರದಿ ಹೇಳೋದೇನು?
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರ ಎಂ.ಪಿ. ರಮೇಶ್‌ ಅವರ ಪುತ್ರ ಚಂದ್ರಶೇಖರ್‌ ಅನುಮಾನಾಸ್ಪದ ಸಾವಿನ ತನಿಖೆ ಚುರುಕುಗೊಂಡಿದೆ. ಈ ನಡುವೆಯೇ ಚಂದ್ರಶೇಖರ್ ಸಾವು ಅಪಘಾತದಿಂದಲೇ ಸಂಭವಿಸಿದ್ದು ಎಂಬುದು ಬಹುತೇಕ ಖಚಿತವಾಗಿದೆ. ಆದರೆ, ಅಪಘಾತ ಆಕಸ್ಮಿಕವಾಗಿ ಆಗಿದೆಯೆ ಅಥವಾ ಬೇರೆ ಯಾರಾದರೂ ಅಪಘಾತ ಮಾಡಿಸಿದರೇ ಎನ್ನುವ ಅನುಮಾನಗಳು ಎದುರಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Fadnavis | ಸಂಭಾಜಿ ಮಹಾರಾಜ್‌ಗೆ ಸತೀಶ್‌ ಜಾರಕಿಹೊಳಿ ಅವಮಾನ: ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ ಆರೋಪ
ಹಿಂದೂ ಎಂಬ ಪದಕ್ಕೆ ಕೆಟ್ಟ ಅರ್ಥಗಳಿವೆ ಎಂದು ಹೇಳುವ ಮೂಲಕ ಇತ್ತೀಚೆಗೆ ವಿವಾದ ಸೃಷ್ಟಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೀವ್ರ ವಿರೋಧದ ಬಳಿಕ ತಮ್ಮ ಹೇಳಿಕೆ ಹಿಂಪಡೆದು ವಿಷಾದ ವ್ಯಕ್ತಪಡಿಸಿದ್ದರು. ಆದರೆ ಈಗ ಅವರ ವಿರುದ್ಧ ಮತ್ತೊಂದು (Fadnavis) ವಿವಾದ ಸುತ್ತಿಕೊಂಡಿದೆ. ಕಾಂಗ್ರೆಸ್‌ ಶಾಸಕ ಸತೀಶ್‌ ಜಾರಕಿಹೊಳಿ ಅವರು ಮರಾಠಾ ಇತಿಹಾಸ ಪುರುಷ ಛತ್ರಪತಿ ಸಂಭಾಜಿ ಮಹಾರಾಜ್‌ಗೆ ಅವಮಾನಿಸಿದ್ದಾರೆ ಎಂದು ಮಹಾರಾಷ್ಟ್ರದ ಡಿಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್‌ ಆರೋಪಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Rajiv Gandhi Assassination | ರಾಜೀವ್ ಗಾಂಧಿ ಹತ್ಯೆ ಅಪರಾಧಿಗಳನ್ನು ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ (Rajiv Gandhi Assassination) ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ನಳಿನಿ, ಶ್ರೀಹರನ್, ಆರ್ ಪಿ ರವಿಚಂದ್ರನ್ ಮತ್ತು ಇತರ ನಾಲ್ವರು ಸುಪ್ರೀಂ ಕೋರ್ಟ್ ಶುಕ್ರವಾರ ಬಂಧಮುಕ್ತಗೊಳಿಸಿದೆ. ಜಸ್ಟೀಸ್ ಬಿ ಆರ್ ಗವಾಯಿ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠವು ಈ ಆದೇಶವನ್ನು ಮಾಡಿದೆ. ಕಳೆದ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವನ್ನು ಬಳಸಿಕೊಂಡು, ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 7ನೇ ಆರೋಪಿಯಾಗಿದ್ದ ಪೆರಾರಿವಲನನ್ನು ಬಿಡುಗಡೆ ಮಾಡಿತ್ತು. ಅದೇ ಆದೇಶವು ಉಳಿದ ಅಪರಾಧಿಗಳು ಅನ್ವಯವಾಗುತ್ತದೆ ಎಂದು ದ್ವಿಸದಸ್ಯ ಪೀಠವು ಅಭಿಪ್ರಾಯಪಟ್ಟಿದೆ. ತಮಿಳುನಾಡು ಸರ್ಕಾರ ಕೂಡ 2018ರಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲರಿಗೆ ಮಾಡಿದ್ದ ಮನವಿಯನ್ನು ಪೀಠ ಉಲ್ಲೇಖಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Team India | ಟೀಮ್‌ ಇಂಡಿಯಾದ ಪ್ರದರ್ಶನಕ್ಕಿಂತ ಓರಿಯೊ ಪಕೋಡಾ ಚೆನ್ನಾಗಿತ್ತು! ಹೀಗೆಂದಿದ್ದು ಯಾರು?
ಇಂಗ್ಲೆಂಡ್‌ ವಿರುದ್ಧದ ಟಿ೨೦ ವಿಶ್ವ ಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ಭಾರತ ತಂಡದ (Team India) ಆಟಗಾರರು ನಾನಾ ರೀತಿಯಲ್ಲಿ ಟ್ರೋಲ್‌ಗೆ ಒಳಗಾಗುತ್ತಿದ್ದಾರೆ. ಈ ಹಣಾಹಣಿಯಲ್ಲಿ ಭಾರತದ ಪ್ರದರ್ಶನದ ಬಗ್ಗೆ ಮಂದಿ ಬಗೆಬಗೆಯಲ್ಲಿ ಮಾತಾನಾಡುತ್ತಿರುವ ಜತೆಗೆ ಇ ಕಾಮರ್ಸ್‌ ಸಂಸ್ಥೆಗಳು, ಫುಡ್‌ ಡೆಲಿವರಿ App ಗಳು ಕೂಡ ಟ್ರೋಲ್‌ ಮಾಡಿವೆ. ಅಂಥ ಕೆಲವು ಟ್ರೋಲ್‌ಗಳ ವಿವರ ಇಲ್ಲಿದೆ.

9. Gyanvapi Case | ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕ ಶಿವಲಿಂಗದ ರಕ್ಷಣೆ ಮುಂದುವರಿಸಲು ಸುಪ್ರೀಂ ಆದೇಶ
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ (Gyanvapi Case) ಸಿಕ್ಕಿರುವ ಶಿವಲಿಂಗದ ರಕ್ಷಣೆಯನ್ನು ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಮುಂದಿನ ಆದೇಶದವರೆಗೆ ಶಿವಲಿಂಗಕ್ಕೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ನೇತೃತ್ವದ ಪೀಠವು ಆದೇಶ ಹೊರಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Sensex | ಜಾಗತಿಕ ಷೇರು ಪೇಟೆಯ ಚೇತರಿಕೆ, ಸೆನ್ಸೆಕ್ಸ್‌ 1,181 ಅಂಕ ಜಿಗಿತ
ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ (Sensex) ಶುಕ್ರವಾರ 1,181 ಅಂಕ ಜಿಗಿಯಿತು. ಅಮೆರಿಕದಲ್ಲಿ ನಿರೀಕ್ಷೆಗೂ ಮೀರಿ ಹಣದುಬ್ಬರ ತೀವ್ರತೆ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಡ್ಡಿ ದರ ಏರಿಕೆಯ ಸಾಧ್ಯತೆ ಕಡಿಮೆಯಾಗಿದೆ. ಹೀಗಾಗಿ ಜಾಗತಿಕ ಮಟ್ಟದಲ್ಲಿ ಷೇರು ಸೂಚ್ಯಂಕಗಳು ಜಿಗಿಯಿತು. ಪ್ರಮುಖ ಕರೆನ್ಸಿಗಳೆದುರು ಡಾಲರ್‌ ಕೂಡ ಮೌಲ್ಯವನ್ನು ಇಳಿಸಿಕೊಂಡಿತು. ಸೆನ್ಸೆಕ್ಸ್‌ 61,795ಕ್ಕೆ ದಿನದ ವಹಿವಾಟು ಮುಕ್ತಾಯಗೊಳಿಸಿದರೆ, ನಿಫ್ಟಿ 321 ಅಂಕ ಗಳಿಸಿ 18,349ಕ್ಕೆ ಸ್ಥಿರವಾಯಿತು. ಬಹುತೇಕ ಎಲ್ಲ ಕ್ಷೇತ್ರಗಳ ಷೇರುಗಳು ಲಾಭ ಗಳಿಸಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

1. Siddhanth Suryavanshi | ಜಿಮ್ ಮಾಡುತ್ತಿದ್ದ ವೇಳೆ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ನಿಧನ
2. Psychopath Person | ಮೃತ ಹೆಣ್ಣುಮಕ್ಕಳ ಬೆತ್ತಲೆ ಫೋಟೊ ಕ್ಲಿಕ್ಕಿಸಿ ವಿಕೃತಿ; ಮಡಿಕೇರಿ ಜಿಲ್ಲಾಸ್ಪತ್ರೆ ಸಿಬ್ಬಂದಿಯ ಕಾಮ ಚೇಷ್ಟೆ!
3. Himachal Pradesh Election | ಹಿಮಾಚಲ ಪ್ರದೇಶ ವಿಧಾನಸಭೆ ಎಲೆಕ್ಷನ್, ನಾಳೆ ಮತದಾನ, ಡಿ.8ಕ್ಕೆ ರಿಸಲ್ಟ್
4. ಮೊಗಸಾಲೆ ಅಂಕಣ | ಸಡಿಲವಾಗುತ್ತಿರುವ ರಾಜ್ಯ-ಕೇಂದ್ರ ಸಂಬಂಧ: ಜ್ವಾಲಾಮುಖಿ ಸ್ಫೋಟ?
5. ಬೆಳಕಿನ ಗರಿ ಅಂಕಣ | ಬಂಧನದಿಂದ ಬಿಡುಗಡೆಯತ್ತ ಸಾಗಿಸುವ ಸೈಕಲ್
6. ಕಲಿತ ಶಾಲೆ, ಉಳಿದುಕೊಂಡಿದ್ದ ಹಾಸ್ಟೆಲ್‌ಗೆ ಭೇಟಿ ನೀಡಿ, ಭಾವುಕರಾಗಿ ಕಣ್ಣೀರು ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

Hassan Pen Drive Case: ಈ ಪ್ರಕರಣದ ಬಗ್ಗೆ ಸ್ವಲ್ಪ ಸಮಯ ಕಾಯೋಣ ಎಂದು ಎಚ್.ಡಿ. ದೇವೇಗೌಡರು ಹೇಳುತ್ತಿದ್ದಾರೆ. ಆದರೆ, ತಡ ಮಾಡಿದಷ್ಟು ಪಕ್ಷಕ್ಕೆ ಮುಜುಗರ ಜಾಸ್ತಿ. ಹೀಗಾಗಿ ಇಂದೇ ಉಚ್ಚಾಟನೆ ಮಾಡಿ. ಜತೆಗೆ ಶಾಸಕರು ಬಹಿರಂಗವಾಗಿ ಧ್ವನಿ ಎತ್ತಿದ್ದಾರೆ. ಇದನ್ನು ಮುಂದುವರಿಸುವುದು ಬೇಡ ಎಂದು ಹಿರಿಯ ನಾಯಕರ ನಿಯೋಗ ದೇವೇಗೌಡರ ಬಳಿ ಹೇಳಿದೆ. ಕೊನೆಗೆ ದೇವೇಗೌಡರು ಕೋರ್ ಕಮಿಟಿಯಲ್ಲಿ ನಿರ್ಧಾರ ಮಾಡಿ ಎಂದು ಸೂಚನೆ ನೀಡಿದ್ದಾರೆ.

VISTARANEWS.COM


on

Hassan Pen Drive Case Deve Gowda refuses to expel Prajwal and What is the reason
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ವಿವಾದ ಭುಗಿಲೆದ್ದಿದೆ. ಪ್ರಜ್ವಲ್‌ ಅವರನ್ನು ಕೂಡಲೇ ಉಚ್ಚಾಟನೆ ಮಾಡುವಂತೆ ಪಕ್ಷದ ಶಾಸಕರಿಂದ ಒತ್ತಡ ಬರುತ್ತಿದ್ದರೂ, ಕ್ರಮ ಕೈಗೊಳ್ಳಲು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರು (HD Devegowda) ಹಿಂದೇಟು ಹಾಕಿದ್ದಾರೆ.

ಈ ಪ್ರಕರಣದ ಬಗ್ಗೆ ಸ್ವಲ್ಪ ಸಮಯ ಕಾಯೋಣ ಎಂದು ಎಚ್.ಡಿ. ದೇವೇಗೌಡರು ಹೇಳುತ್ತಿದ್ದಾರೆ. ಆದರೆ, ತಡ ಮಾಡಿದಷ್ಟು ಪಕ್ಷಕ್ಕೆ ಮುಜುಗರ ಜಾಸ್ತಿ. ಹೀಗಾಗಿ ಇಂದೇ ಉಚ್ಚಾಟನೆ ಮಾಡಿ. ಜತೆಗೆ ಶಾಸಕರು ಬಹಿರಂಗವಾಗಿ ಧ್ವನಿ ಎತ್ತಿದ್ದಾರೆ. ಇದನ್ನು ಮುಂದುವರಿಸುವುದು ಬೇಡ ಎಂದು ಹಿರಿಯ ನಾಯಕರ ನಿಯೋಗ ದೇವೇಗೌಡರ ಬಳಿ ಹೇಳಿದೆ. ಕೊನೆಗೆ ದೇವೇಗೌಡರು ಕೋರ್ ಕಮಿಟಿಯಲ್ಲಿ ನಿರ್ಧಾರ ಮಾಡಿ ಎಂದು ಸೂಚನೆ ನೀಡಿದ್ದಾರೆ.

ದೇವೇಗೌಡರಿಗೆ ಕಾಡುತ್ತಿದೆಯಾ ಆ ಭಯ?

ಎಚ್.ಡಿ. ದೇವೇಗೌಡ ಅವರಿಗೆ ಉಚ್ಚಾಟನೆ ಮಾಡುವುದು ದೊಡ್ಡ ವಿಷಯ ಅಲ್ಲದಿದ್ದರೂ, ಮುಂದಿನ ಪರಿಣಾಮದ ಬಗ್ಗೆ ಭಯ ಇದೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿದರೆ, ಎಚ್.ಡಿ. ರೇವಣ್ಣ (HD Revanna) ಅವರೇ ಮುಂದಿನ ಟಾರ್ಗೆಟ್‌ ಆಗಲಿದ್ದಾರೆ. ಈ ಪ್ರಕರಣಗಳಲ್ಲಿ ರೇವಣ್ಣ ಹೆಸರು ಸಹ ಪ್ರಸ್ತಾಪ ಆಗಿರುವುದರಿಂದ ಕಾಂಗ್ರೆಸ್ ರೇವಣ್ಣ ವಿರುದ್ಧ ಮುಗಿಬೀಳುತ್ತದೆ. ರೇವಣ್ಣನ ವಿರುದ್ಧವೂ ಅಭಿಯಾನ ಶುರುವಾಗುತ್ತದೆ. ಆಗ ಅನಿವಾರ್ಯವಾಗಿ ರೇವಣ್ಣ ಅವರನ್ನೂ ಉಚ್ಚಾಟನೆ ಮಾಡುವ ಪರಿಸ್ಥಿತಿ ನಿರ್ಮಾಣವಾದರೆ ಎಂಬ ಆತಂಕ, ಭಯ ಎಚ್.ಡಿ. ದೇವೇಗೌಡ ಅವರದ್ದಾಗಿದೆ.

ಪಕ್ಷ ಉಳಿಯುತ್ತಾ ಎಂಬ ಆತಂಕ!

ಒಂದು ವೇಳೆ ರೇವಣ್ಣ ಹಾಗೂ ಪ್ರಜ್ವಲ್‌ ಅವರನ್ನು ಉಚ್ಚಾಟನೆ ಮಾಡಿದ್ದೇ ಆದಲ್ಲಿ ಕುಟುಂಬದಲ್ಲಿ ರಾಜಕೀಯ ಭಿನ್ನಾಭಿಪ್ರಾಯ ಹೆಚ್ಚಾಗುತ್ತದೆ. ಆ ಬಳಿಕ ಜೆಡಿಎಸ್ ಪಕ್ಷ ಉಳಿಯುವುದೇ ಅನುಮಾನ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಾಂಗ್ರೆಸ್‌ ಕೂಡಾ ಜೆಡಿಎಸ್‌ ಪಕ್ಷ ನಿರ್ನಾಮ ಆಗುವುದನ್ನೇ ಕಾಯುತ್ತಿದೆ. ಹೀಗಾಗಿ ಉಚ್ಚಾಟನೆ ಮಾಡಿ ಅವರ ಅಸ್ತ್ರ ಇನ್ನಷ್ಟು ಗಟ್ಟಿ ಮಾಡುವುದು ಬೇಡ ಎಂಬ ಯೋಚನೆಯಲ್ಲಿ ಎಚ್.ಡಿ. ದೇವೇಗೌಡ ಅವರು ಇದ್ದಾರೆ.

ಪಕ್ಷದ ನಾಯಕರ ವಾದ ಏನು?

ಇದು ಏನೇ ಇದ್ದರೂ ದಿಟ್ಟ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಜತೆಗೆ ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಹೆಚ್ಚಿಸಲು ಈ ಕ್ರಮವನ್ನು ತೆಗೆದುಕೊಳ್ಳಲೇ ಬೇಕಾಗುತ್ತದೆ. ಪಕ್ಷಕ್ಕೆ ಆದ ಮುಜುಗರ ತಪ್ಪಿಸಲು ಪ್ರಜ್ವಲ್ ಉಚ್ಚಾಟನೆ ಅನಿವಾರ್ಯ ಎಂದು ಹಿರಿಯ ನಾಯಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ನಾಳೆ ಉಚ್ಚಾಟನೆ?

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS leader) ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಜೆಡಿಎಸ್‌ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಭಾರಿ ಮುಜುಗರವನ್ನುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಕೆಲವೇ ಕ್ಷಣದಲ್ಲಿ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಕುರಿತು ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಸುಳಿವು ನೀಡಿದ್ದಾರೆ. ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಹೀಗಾಗಿ ನಾಳೆ (ಏಪ್ರಿಲ್‌ 30) ಒಳಗೆ ಪ್ರಜ್ವಲ್ ವಿರುದ್ಧ ಶಿಸ್ತುಕ್ರಮ ಗ್ಯಾರಂಟಿ ಎಂದು ಹೇಳಲಾಗುತ್ತಿದೆ.

ಏಕೆ ಈ ಕ್ರಮ?

ಈಗಾಗಲೇ ಜೆಡಿಎಸ್‌ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಅಲ್ಲದೆ, ಈ ಪ್ರಕರಣ ಈಗ ದೇಶಾದ್ಯಂತ ಸಂಚಲನ ಉಂಟುಮಾಡಿದೆ. ಮೈತ್ರಿ ಪಕ್ಷ ಬಿಜೆಪಿ ಕೂಡ ಇದರಿಂದ ಮುಜುಗರ ಅನುಭವಿಸುತ್ತಿದೆ. ದೇಶದ ಹಲವು ಕಡೆ ಇನ್ನೂ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದಾದರೆ ಬಿಜೆಪಿಗೆ ಇದು ತೀವ್ರ ಇರಿಸುಮುರಿಸನ್ನು ತರುತ್ತದೆ. ಅಲ್ಲದೆ, ವಿಪಕ್ಷಗಳ ಟೀಕೆಯನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳಲು ಪ್ರಜ್ವಲ್ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಬಂದಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್, ಎಚ್.ಡಿ. ರೇವಣ್ಣ ಉಚ್ಚಾಟನೆಗೆ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಒತ್ತಾಯ

ಇನ್ನು ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿ ಎಂದು ಜೆಡಿಎಸ್‌ ಶಾಸಕ ಮಂಜುನಾಥ್ ಅವರು ತಮ್ಮ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ ಮೂಲಕ ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಸಮೃದ್ಧಿ ಮಂಜುನಾಥ್‌ ಮನವಿಯಲ್ಲೇನಿದೆ?

“ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಹಾಸನದ ಲೀಲೆಗಳು ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ.

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ??

ಪಕ್ಷದ ರಾಷ್ಟ್ರಾಧ್ಯಕ್ಷರು ಎಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ 19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್‌ ಅವರು ಮುಖ್ಯವೋ ತೀರ್ಮಾನಿಸಬೇಕಿದೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

24 ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ. ನಿಮ್ಮ ತೀರ್ಮಾನದ ಮೇಲೆ ಪಕ್ಷದ ಮುಂದಿನ ಭವಿಷ್ಯವಿದೆಯೆಂಬುದು ಮತ್ತೊಮ್ಮೆ ತಿಳಿಸಲು ಬಯಸುತ್ತೇನೆ” ಎಂದು ಫೇಸ್‌ಬುಕ್‌ನಲ್ಲಿ ಸಮೃದ್ಧಿ ಮಂಜುನಾಥ್ ಬರೆದುಕೊಂಡಿದ್ದಾರೆ.

ನಾಳೆಯ ಕೋರ್‌ ಕಮಿಟಿ ಸಭೆ ಬಳಿಕ ನಿರ್ಧಾರ

ಈ ಸಂಬಂಧ ನಾಳೆ (ಏಪ್ರಿಲ್‌ 30) ಜೆಡಿಎಸ್‌ ಕೋರ್‌ ಕಮಿಟಿ ಸಭೆ ಕರೆಯಲಾಗಿದ್ದು. ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಬಳಿಕ ಉಚ್ಚಾಟನೆ ಕ್ರಮ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Continue Reading

Lok Sabha Election 2024

PM Narendra Modi: ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು? ವಿಡಿಯೊ ಕಂಡರೆ ನೀವೇನು ಮಾಡಬೇಕು?

PM Narendra Modi: ನನ್ನ ವಿರುದ್ಧವಾಗಿ ಫೇಕ್‌ ವಿಡಿಯೊ ಸಿದ್ಧಪಡಿಸಿ ಸೋಷಿಯಲ್‌ ಮೀಡಿಯಾಗಳಲ್ಲಿ ಬಿಡುತ್ತಾರೆ. ಮಾರ್ಫ್ ಮಾಡಿ ವಿಡಿಯೊ ಬಿಡುಗಡೆ ಮಾಡುತ್ತಾರೆ ಎಂದು ಡೀಪ್ ಫೇಕ್‌ ವಿಡಿಯೊ ಪ್ರಕರಣಗಳು ಹರಿದಾಡುತ್ತಿರುವ ಬಗ್ಗೆ ಗರಂ ಆದ ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್‌ ಬಚ್ಚನ್ ಸೇರಿ ಹಲವು ಸ್ಟಾರ್‌ಗಳ ಡೀಪ್‌ ಫೇಕ್‌ ವಿಡಿಯೊ ಮಾಡಲಾಗಿದೆ. ನನ್ನ ಧ್ವನಿ ಹೋಲುವಂತೆ ನಕಲು ಮಾಡಿ ಸಾಮಾಜಿಕ ತಾಣದಲ್ಲಿ ಬಿಡುತ್ತಾರೆ. ಈ ರೀತಿಯ ಫೇಕ್ ವಿಡಿಯೊ ಬಿಡುವ ಸಂಚುಕೋರರ ಬಗ್ಗೆ ಜಾಗ್ರತೆ ಇರಲಿ ಎಂದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

VISTARANEWS.COM


on

PM Narendra modi in Bagalakote and talk about DeepFake Video
Koo

ಬಾಗಲಕೋಟೆ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಸಮಾವೇಶ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಡೀಪ್‌ ಫೇಕ್‌ (Deep Fake) ಬಗ್ಗೆ ಮಾತನಾಡಿದ್ದಾರೆ. ತಮ್ಮ ಭಾಷಣದ ರೀತಿ ಮಾರ್ಫ್‌ ಮಾಡಿ ವಿಡಿಯೊವನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿಬಿಡುತ್ತಿರುವ ಗ್ಯಾಂಗ್‌ ಸಕ್ರಿಯವಾಗಿದೆ. ಇಂಥ ವಿಡಿಯೊ ನಿಮಗೆ ಕಂಡುಬಂದಲ್ಲಿ ಆ ವಿಡಿಯೊ ಸಹಿತ ಪೊಲೀಸರಿಗೆ ದೂರು ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕರೆ ನೀಡಿದರು.

ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆಯಲ್ಲಿ ಸೋತು ಮೈದಾನ ಬಿಟ್ಟು ಹೋದವರಿಂದ ಫೇಕ್‌ ವಿಡಿಯೊ ಮಾಡಲಾಗುತ್ತಿದೆ. ಸಾಮಾಜಿಕ ತಾಣಗಳಲ್ಲಿ ಫೇಕ್ ವಿಡಿಯೋ ಬಿಡುವ ಕಾರ್ಯದಲ್ಲಿದ್ದಾರೆ ಅವರೆಲ್ಲರೂ ನಿರತರಾಗಿದ್ದಾರೆ. ಆ ರೀತಿ ಫೇಕ್ ವಿಡಿಯೊಗಳು ನಿಮ್ಮ ಗಮನಕ್ಕೆ ಬಂದರೆ ಪೊಲೀಸರಿಗೆ ಕೊಡಿ. ನಮ್ಮ ದೇಶದ ಕಾನೂನಿನಲ್ಲಿ ಫೇಕ್‌ ವಿಡಿಯೊ ಗ್ಯಾಂಗ್‌ಗೆ ಶಿಕ್ಷೆ ಮಾಡುತ್ತೇವೆ ಎಂದು ಹೇಳಿದರು.

ನನ್ನ ವಿರುದ್ಧವಾಗಿ ಫೇಕ್‌ ವಿಡಿಯೊ ಸಿದ್ಧಪಡಿಸಿ ಸೋಷಿಯಲ್‌ ಮೀಡಿಯಾಗಳಲ್ಲಿ ಬಿಡುತ್ತಾರೆ. ಮಾರ್ಫ್ ಮಾಡಿ ವಿಡಿಯೊ ಬಿಡುಗಡೆ ಮಾಡುತ್ತಾರೆ ಎಂದು ಡೀಪ್ ಫೇಕ್‌ ವಿಡಿಯೊ ಪ್ರಕರಣಗಳು ಹರಿದಾಡುತ್ತಿರುವ ಬಗ್ಗೆ ಗರಂ ಆದ ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್‌ ಬಚ್ಚನ್ ಸೇರಿ ಹಲವು ಸ್ಟಾರ್‌ಗಳ ಡೀಪ್‌ ಫೇಕ್‌ ವಿಡಿಯೊ ಮಾಡಲಾಗಿದೆ. ನನ್ನ ಧ್ವನಿ ಹೋಲುವಂತೆ ನಕಲು ಮಾಡಿ ಸಾಮಾಜಿಕ ತಾಣದಲ್ಲಿ ಬಿಡುತ್ತಾರೆ. ಈ ರೀತಿಯ ಫೇಕ್ ವಿಡಿಯೊ ಬಿಡುವ ಸಂಚುಕೋರರ ಬಗ್ಗೆ ಜಾಗ್ರತೆ ಇರಲಿ ಎಂದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ

ಒಬಿಸಿ ಸಮುದಾಯಗಳ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್‌ ಸರ್ಕಾರ ಷಡ್ಯಂತ್ರ ರೂಪಿಸಿದೆ. ಹಿಂದುಳಿದ ವರ್ಗಗಳು ಹಾಗೂ ಎಸ್‌ಸಿ, ಎಸ್‌ಟಿ ಮೀಸಲಾತಿಗೂ ಕುತ್ತು ತರಲು ಕಾಂಗ್ರೆಸ್‌ ಹೊರಟಿದೆ. ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಹಂಚಿಕೆ ಮಾಡಲು ಕಾಂಗ್ರೆಸ್‌ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಧರ್ಮದ ರಾಜಕಾರಣ ಮಾಡಲು ಕಾಂಗ್ರೆಸ್‌ನಿಂದ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ. ಎಸ್‌ಸಿ – ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ತೆಗೆದು ಮುಸ್ಲಿಮರಿಗೆ ನೀಡಲು ಸಂಚು ರೂಪಿಸಲಾಗಿದೆ. ಆದರೆ, ನಾನು ಕಾಂಗ್ರೆಸ್ ನಾಯಕರ ರಾಜಕಾರಣದ ಸಂಚು ಫಲಿಸಲು ನಾನು ಬಿಡುವುದಿಲ್ಲ. ಮುಸ್ಲಿಮರನ್ನು ಓಲೈಸುತ್ತಾ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ವಿರುದ್ಧ ಸಂಚು ಮಾಡುತ್ತಿದ್ದಾರೆ. ಮೀಸಲಾತಿ, ನಿಮ್ಮ ಹಕ್ಕು, ನಿಮ್ಮ ಅಧಿಕಾರವನ್ನು ಕಿತ್ತುಕೊಳ್ಳಲು ಈ ನಿಮ್ಮ ನರೇಂದ್ರ ಮೋದಿ ಬಿಡುವುದಿಲ್ಲ. ನಿಮ್ಮ ರಕ್ಷಣೆಗೋಸ್ಕರ ಮೋದಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ವೇಳೆ ನಾನು ನಿಮಗೆ ಮಾತು ಕೊಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಾಗಲಕೋಟೆ ಕಾರ್ಯಕ್ರಮ

ಈ ಚುನಾವಣೆಯು ವಿಕಸಿತ ಭಾರತಕ್ಕೆ ನಡೆಯುತ್ತಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ದೇಶ ಆಗುತ್ತದೆ. ನಿಮ್ಮ ಒಂದು ವೋಟು ನಮಗೆ ಈ ಶಕ್ತಿಯನ್ನು ತಂದು ಕೊಡಲಿದೆ.

ಮೋಜು ಮಸ್ತಿ ಮಾಡುವವರಿಂದ, ರಜೆ ಹಾಕುವವರಿಂದ ದೇಶದ ಅಭಿವೃದ್ಧಿ ಅಸಾಧ್ಯ. ದೇಶದ ಪ್ರಗತಿಗಾಗಿ ಗುರಿ ಬೇಕು. ಅದಕ್ಕಾಗಿ ಕಷ್ಟಪಟ್ಟು ದುಡಿಯಬೇಕು. ನಿಮ್ಮ ಮೋದಿ ಈ ಕೆಲಸವನ್ನು ಮಾಡಲಿದ್ದಾರೆ. 24/7 ಮಾದರಿಯಲ್ಲಿ ನಿಮ್ಮ ಸೇವೆಗಾಗಿ ನನ್ನ ಜೀವನವನ್ನು ಮುಡಿಪಾಗಿಟ್ಟಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ ಈಗ ಏನು ಮಾಡುತ್ತಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿರುವುದು ಮಾತ್ರವಲ್ಲದೆ, ದೇಶವನ್ನು ಲೂಟಿ ಹೊಡೆಯುವ ಕೆಲಸಕ್ಕೆ ಕೈಹಾಕಿದೆ. ಇಂಥ ಕಾಂಗ್ರೆಸ್‌ ಸರ್ಕಾರ ನಿಮಗೆ ಬೇಕಾ? ಇದಲ್ಲದೆ ಕಾಂಗ್ರೆಸ್‌ ಹೈಕಮಾಂಡ್‌ನವರು ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕ ಕಾಂಗ್ರೆಸ್‌ ನಾಯಕರು ಲೂಟಿ ಗ್ಯಾಂಗ್‌ ಅನ್ನು ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಹಾಗೂ ಆ ಪಕ್ಷದ ನಾಯಕರೇ ಮೂಲ ಕಾರಣರಾಗಿದ್ದಾರೆ. ಇಂಥವರಿಗೆ ದೇಶದ ಜವಾಬ್ದಾರಿಯನ್ನು ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕಟ್ಟಕಡೆಯ ಹಳ್ಳಿಗಳಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸಿಲ್ಲ. ಕೋಟ್ಯಂತರ ಜನ ಮೂಲ ಸೌಕರ್ಯದಿಂದ ವಂಚಿತರಾಗಿದ್ದರು. ಆದರೆ, ಹಳ್ಳಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಕೊಡಿಸಿದ್ದು, ನಮ್ಮ ಸರ್ಕಾರದಿಂದ ಎಂಬುದು ಮುಖ್ಯ. ಇನ್ನು ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಜೀವನ್‌ ಮಿಷನ್‌ ಅನ್ನು ಪ್ರಾರಂಭ ಮಾಡಿದ್ದೇವೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಶೇ. 17ರಷ್ಟು ಮಂದಿಗೆ ಮಾತ್ರ ನೀರಿನ ಸಂಪರ್ಕ ಇತ್ತು. ಇಂದು ನಮ್ಮ ಆಡಳಿತದಲ್ಲಿ ಶೇ. 75ರಷ್ಟು ನೀರಿನ ಸಂಪರ್ಕ ಇದೆ. ಇನ್ನು ಕರ್ನಾಟಕದಲ್ಲಿ ಕುಡಿಯುವ ನೀರಿಲ್ಲದೆ ಜನರು ಕಷ್ಟಪಡುತ್ತಿದ್ದಾರೆ. ಕಾಂಗ್ರೆಸ್‌ನ ಭ್ರಷ್ಟಾಚಾರದ ಪಾಪಕ್ಕೆ ಶಿಕ್ಷೆ ಕೊಡಬೇಕೇ? ಬೇಡವೇ? ಹೀಗಾಗಿ ನೀವು ಈ ಮೇ 7ರಂದು ಮತ ಚಲಾವಣೆ ಮಾಡಿ ಬಿಜೆಪಿ ಜಯಕ್ಕೆ ಕಾರಣರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಾದಾಮಿ, ಐಹೊಳೆ, ಪಟ್ಟದಕಲ್ಲು ಪಾರಂಪರಿಕ ಸ್ಥಳಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ವಿಜಯಪುರದಲ್ಲೂ ಏರ್ಪೋರ್ಟ್‌ ನಿರ್ಮಾಣ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ. ಇಳಕಲ್‌ ಸೀರೆಗಾಗಿ ಒಂದು ಗ್ರಾಮ ಒಂದು ಉತ್ಪನ್ನ ಎಂದು ಮಾಡಿದೆವು. ತಳವಾರ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿದ್ದು ನಮ್ಮ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳಿಗೆ ಏನಾಯಿತು? ನೇಹಾ ಮೇಲೆ ಒಂದಾದ ಮೇಲೆ ಒಂದರಂತೆ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಆದರೆ, ಕಾಂಗ್ರೆಸ್‌ ಏನು ಕ್ರಮ ಕೈಗೊಂಡಿದೆ. ತುಷ್ಟೀಕರಣಕ್ಕಾಗಿ ಇದು ಯಾವ ಹಂತಕ್ಕೆ ಬೇಕಾದರೂ ಹೋಗಲಿದೆ. ಇನ್ನು ಬೆಂಗಳೂರಿನಲ್ಲಿ ಹನುಮಾನ್‌ ಚಾಲೀಸಾವನ್ನು ಪಠಣ ಮಾಡಿದರೆ ಗಲಾಟೆ ಮಾಡುತ್ತಾರೆ, ಹಲ್ಲೆ ನಡೆಸುತ್ತಾರೆ. ಇದರ ಬಗ್ಗೆ ಏನು ಕ್ರಮ ಕೈಗೊಂಡರು? ಅಲ್ಲದೆ, ಬೆಂಗಳೂರು ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಬಗ್ಗೆ ಕಾಂಗ್ರೆಸ್‌ ಸರ್ಕಾರ ಹೇಳಿದ್ದು ಏನು? ಸಿಲಿಂಡರ್‌ ಬ್ಲಾಸ್ಟ್‌ ಎಂದು ಹೇಳಿಬಿಟ್ಟರು. ಕೊನೆಗೆ ಬ್ಯುಸಿನೆಸ್‌ ಶತ್ರುಗಳು ಮಾಡಿದ್ದು ಎಂದು ಹೇಳಿದರು. ಇದು ಕಾಂಗ್ರೆಸ್‌ನ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ಕಂಬನಿ

ಇಂದು ಬೆಳಗ್ಗೆ ಬಿಜೆಪಿ ನಾಯಕ ಹಾಗೂ ಸಾಮಾಜಿಕ ನ್ಯಾಯದ ಸಿಪಾಯಿ ವಿ. ಶ್ರೀನಿವಾಸ್‌ ಪ್ರಸಾದ್ ನಿಧನ ಸುದ್ದಿ ಕೇಳಿ ನನಗೆ ನೋವಾಯಿತು. ಚಾಮರಾಜನಗರದ ಸಂಸದರಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ಜನರ ನಾಯಕನಾಗಿ ರಾಜಕೀಯದಲ್ಲಿ ಬೆಳೆದು ಹಲವು ದಶಕಗಳಿಂದ ಸಾಮಾಜಿಕ ಜೀವನದಲ್ಲಿದ್ದರು. ಬಡವರು, ಶೋಷಿತರು ಹಾಗೂ ವಂಚಿತರ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕೇಂದ್ರ ಹಾಗೂ ರಾಜ್ಯದಲ್ಲಿ ಮಂತ್ರಿಯೂ ಆಗಿ ಜನಸೇವೆ ಮಾಡಿದ್ದನ್ನು ಯಾವಾಗಲೂ ಮರೆಯಲ್ಲ. ಶ್ರೀನಿವಾಸ್ ಪ್ರಸಾದ್ ಆತ್ಮಕ್ಕೆ ಸದ್ಗತಿ ಸಿಗಬೇಕು, ಪ್ರಸಾದ್ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಸಿಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥಿಸಿದರು.

ಇದನ್ನೂ ಓದಿ: Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

ಬಾಲಕಿಯ ಫೋಟೊ ತೆಗೆಯಲು ಹೇಳಿದ ಮೋದಿ!

ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಫೋಟೊವನ್ನು ಬಾಲಕಿಯೊಬ್ಬಳು ಪ್ರದರ್ಶನ ಮಾಡುತ್ತಿದ್ದಳು. ಇದನ್ನು ಭಾಷಣದ ಮಧ್ಯೆಯೇ ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಸ್‌ಪಿಜಿ ಕಮಾಂಡೋಗಳಿಗೆ ಸೂಚಿಸಿ, ಆ ದೃಶ್ಯದ ಒಂದು ಫೋಟೊವನ್ನು ತೆಗೆದಿಟ್ಟುಕೊಳ್ಳಲು ಹೇಳಿದರು.

Continue Reading

ರಾಜಕೀಯ

Hassan Pen Drive Case: ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಉಚ್ಚಾಟನೆ? ಎಚ್‌.ಡಿ. ದೇವೇಗೌಡರ ನಿರ್ಧಾರ ಏನು?

Hassan Pen Drive Case: ಈಗಾಗಲೇ ಜೆಡಿಎಸ್‌ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಅಲ್ಲದೆ, ಈ ಪ್ರಕರಣ ಈಗ ದೇಶಾದ್ಯಂತ ಸಂಚಲನ ಉಂಟುಮಾಡಿದೆ. ಮೈತ್ರಿ ಪಕ್ಷ ಬಿಜೆಪಿ ಕೂಡ ಇದರಿಂದ ಮುಜುಗರ ಅನುಭವಿಸುತ್ತಿದೆ. ದೇಶದ ಹಲವು ಕಡೆ ಇನ್ನೂ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದಾದರೆ ಬಿಜೆಪಿಗೆ ಇದು ತೀವ್ರ ಇರಿಸುಮುರಿಸನ್ನು ತರುತ್ತದೆ. ಹೀಗಾಗಿ ಕ್ರಮಕ್ಕೆ ಬಿಜೆಪಿಯಿಂದಲೂ ಒತ್ತಡ ಇದೆ ಎನ್ನಲಾಗಿದೆ. ಅಲ್ಲದೆ, ಜೆಡಿಎಸ್‌ ಶಾಸಕರು ಸಹ ಒಬ್ಬೊಬ್ಬರಾಗಿ ಧ್ವನಿ ಎತ್ತುತ್ತಿದ್ದಾರೆ.

VISTARANEWS.COM


on

Hasan Pen Drive case Prajwal Revanna expelled from JDS
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS leader) ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಜೆಡಿಎಸ್‌ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಭಾರಿ ಮುಜುಗರವನ್ನುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಕೆಲವೇ ಕ್ಷಣದಲ್ಲಿ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಕುರಿತು ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಸುಳಿವು ನೀಡಿದ್ದಾರೆ. ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಹೀಗಾಗಿ ನಾಳೆ (ಏಪ್ರಿಲ್‌ 30) ಒಳಗೆ ಪ್ರಜ್ವಲ್ ವಿರುದ್ಧ ಶಿಸ್ತುಕ್ರಮ ಗ್ಯಾರಂಟಿ ಎಂದು ಹೇಳಲಾಗುತ್ತಿದೆ.

ಏಕೆ ಈ ಕ್ರಮ?

ಈಗಾಗಲೇ ಜೆಡಿಎಸ್‌ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಅಲ್ಲದೆ, ಈ ಪ್ರಕರಣ ಈಗ ದೇಶಾದ್ಯಂತ ಸಂಚಲನ ಉಂಟುಮಾಡಿದೆ. ಮೈತ್ರಿ ಪಕ್ಷ ಬಿಜೆಪಿ ಕೂಡ ಇದರಿಂದ ಮುಜುಗರ ಅನುಭವಿಸುತ್ತಿದೆ. ದೇಶದ ಹಲವು ಕಡೆ ಇನ್ನೂ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದಾದರೆ ಬಿಜೆಪಿಗೆ ಇದು ತೀವ್ರ ಇರಿಸುಮುರಿಸನ್ನು ತರುತ್ತದೆ. ಅಲ್ಲದೆ, ವಿಪಕ್ಷಗಳ ಟೀಕೆಯನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳಲು ಪ್ರಜ್ವಲ್ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಬಂದಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್, ಎಚ್.ಡಿ. ರೇವಣ್ಣ ಉಚ್ಚಾಟನೆಗೆ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಒತ್ತಾಯ

ಇನ್ನು ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿ ಎಂದು ಜೆಡಿಎಸ್‌ ಶಾಸಕ ಮಂಜುನಾಥ್ ಅವರು ತಮ್ಮ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ ಮೂಲಕ ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಸಮೃದ್ಧಿ ಮಂಜುನಾಥ್‌ ಮನವಿಯಲ್ಲೇನಿದೆ?

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಹಾಸನದ ಲೀಲೆಗಳು ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ.

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ??

ಪಕ್ಷದ ರಾಷ್ಟ್ರಾಧ್ಯಕ್ಷರು ಎಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ 19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್‌ ಅವರು ಮುಖ್ಯವೋ ತೀರ್ಮಾನಿಸಬೇಕಿದೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

24 ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ. ನಿಮ್ಮ ತೀರ್ಮಾನದ ಮೇಲೆ ಪಕ್ಷದ ಮುಂದಿನ ಭವಿಷ್ಯವಿದೆಯೆಂಬುದು ಮತ್ತೊಮ್ಮೆ ತಿಳಿಸಲು ಬಯಸುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಸಮೃದ್ಧಿ ಮಂಜುನಾಥ್ ಬರೆದುಕೊಂಡಿದ್ದಾರೆ.

ನಾಳೆಯ ಕೋರ್‌ ಕಮಿಟಿ ಸಭೆ ಬಳಿಕ ನಿರ್ಧಾರ

ಈ ಸಂಬಂಧ ನಾಳೆ (ಏಪ್ರಿಲ್‌ 30) ಜೆಡಿಎಸ್‌ ಕೋರ್‌ ಕಮಿಟಿ ಸಭೆ ಕರೆಯಲಾಗಿದ್ದು. ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಬಳಿಕ ಉಚ್ಚಾಟನೆ ಕ್ರಮ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಬಳ್ಳಾರಿ

Lok Sabha Election 2024: ದರೋಜಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಬಿರುಸಿನ ಪ್ರಚಾರ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ, ದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Ballari Lok Sabha Constituency Congress Candidate E Tukaram Election Campaign in Daroji
Koo

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ, ದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಚುನಾವಣಾ (Lok Sabha Election 2024) ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

ದರೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದ ಕಾಂಗ್ರೆಸ್‌ ಅಭ್ಯರ್ಥಿ ಈ.ತುಕಾರಾಂ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಏನನ್ನೂ ಕೊಡಲಿಲ್ಲ. ಆದರೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಎಲ್ಲಾ ಸೌಲಭ್ಯಗಳನ್ನೂ ನೀಡುತ್ತಾ ಬಂದಿದೆ. ಅನ್ನಭಾಗ್ಯದಿಂದ ಹಿಡಿದು ಮೂಲಸೌಕರ್ಯಗಳನ್ನು ಒದಗಿಸುತ್ತಿದೆ ಎಂದ ಅವರು, ಬಿಜೆಪಿಗೆ ಬಡವರ ಬಗ್ಗೆ ಕನಿಕರ ಇಲ್ಲ ಎಂದು ಅವರು ದೂರಿದರು.

ಇದನ್ನೂ ಓದಿ: Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

ಈ ಬಾರಿಯ ಚುನಾವಣೆಯಲ್ಲಿ ಹಸ್ತದ ಗುರುತಿಗೆ ಮತ ನೀಡಿ, ತಮ್ಮನ್ನು ಗೆಲ್ಲಿಸುವಂತೆ ಮತದಾರರದಲ್ಲಿ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತೋರಣಗಲ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಕಾಂಬ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜನಾರ್ಧನ, ದರೋಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Hassan Pen Drive Case Deve Gowda refuses to expel Prajwal and What is the reason
ಕರ್ನಾಟಕ25 seconds ago

Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

Pro-Khalistan slogan
Latest7 mins ago

Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

prachi nigam online troll
ವೈರಲ್ ನ್ಯೂಸ್12 mins ago

Prachi Nigam: “ನಾನು ಟಾಪ್‌ ಬರಲೇಬಾರದಿತ್ತು…” ಮೀಸೆಯಿಂದಾಗಿ ಟ್ರೋಲ್‌ಗೊಳಗಾದ ಬೋರ್ಡ್‌ ಎಕ್ಸಾಮ್‌ ಟಾಪರ್‌ ಹುಡುಗಿಯ ನೋವು

PM Narendra modi in Bagalakote and talk about DeepFake Video
Lok Sabha Election 202434 mins ago

PM Narendra Modi: ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು? ವಿಡಿಯೊ ಕಂಡರೆ ನೀವೇನು ಮಾಡಬೇಕು?

Virat kohli
ಪ್ರಮುಖ ಸುದ್ದಿ34 mins ago

Virat kohli : ಕಾಮೆಂಟ್ರಿ ಬಾಕ್ಸ್​​ನಲ್ಲಿ ಕುಳಿತ ವಿಮರ್ಶೆ ಮಾಡುವುದು ಸುಲಭ; ಕೊಹ್ಲಿ ತಿರುಗೇಟು ಕೊಟ್ಟಿದ್ದು ಯಾರಿಗೆ?

kanhaiya kumar
ದೇಶ37 mins ago

Lok Sabha Election 2024: ಎಲೆಕ್ಷನ್‌ ಹೊತ್ತಲ್ಲೇ ಕಾಂಗ್ರೆಸ್‌ಗೆ ಬಿಗ್‌ ಶಾಕ್! ಕನ್ಹಯ್ಯ ಕುಮಾರ್‌ಗೆ ಸ್ವಪಕ್ಷದಲ್ಲೇ ವಿರೋಧ

Hasan Pen Drive case Prajwal Revanna expelled from JDS
ರಾಜಕೀಯ47 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಉಚ್ಚಾಟನೆ? ಎಚ್‌.ಡಿ. ದೇವೇಗೌಡರ ನಿರ್ಧಾರ ಏನು?

Ballari Lok Sabha Constituency Congress Candidate E Tukaram Election Campaign in Daroji
ಬಳ್ಳಾರಿ1 hour ago

Lok Sabha Election 2024: ದರೋಜಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಬಿರುಸಿನ ಪ್ರಚಾರ

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election: ಇಂದೋರ್​ ಕಾಂಗ್ರೆಸ್​ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಚುನಾವಣೆಗೆ ಮೊದಲೇ ಬಿಜೆಪಿಗೆ ಮತ್ತೊಂದು ಸೀಟು!

PM Narendra modi in Bagalakote and Attack on Congress
Lok Sabha Election 20241 hour ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20241 hour ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202422 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202424 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌