ವಿಸ್ತಾರ TOP 10 NEWS | ಮಂಗಳೂರಲ್ಲಿ ಮೋದಿ ಹವಾದಿಂದ ರಿಷಿ ಸುನಕ್‌ ಸೋಲುವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ಮಂಗಳೂರಲ್ಲಿ ಮೋದಿ ಹವಾದಿಂದ ರಿಷಿ ಸುನಕ್‌ ಸೋಲುವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Vistara TOP 10 02092022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಬಹುದಿನಗಳ ನಿರೀಕ್ಷೆಯ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ನೆರವೇರಿದೆ. ಕೇಂದ್ರ ಸರ್ಕಾರವು ಅಭಿವೃದ್ಧಿ ದೃಷ್ಟಿಕೋನದಲ್ಲಿ ಮುನ್ನಡೆಯುತ್ತಿರುವುದನ್ನು ಮೋದಿ ವಿವರಿಸಿದ್ದಾರೆ. ಮುರುಘಾಶ್ರೀಗಳ ವಿರುದ್ಧದ ಪ್ರಕರಣದಲ್ಲಿ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ವಹಿಸಲಾಗಿದೆ, 2016ರಲ್ಲಿ ತಮಗೆ ಲಭಿಸಿದ್ದ ಬಸವಶ್ರೀ ಪ್ರಶಸ್ತಿಯನ್ನು ಲೇಖಕ ಪಿ. ಸಾಯಿನಾಥ್‌ ವಾಪ್ಸಿ ಮಾಡಿದ್ದಾರೆ, ನೌಕಾದಳದ ಧ್ವಜದಲ್ಲಿದ್ದ ಸೇಂಟ್‌ ಜಾರ್ಜ್‌ ಕ್ರಾಸ್‌ ಅನ್ನು ತೆಗೆಯಲಾಗಿದೆ, ದೇಶಕ್ಕೆ ಐಎನ್‌ಎಸ್‌ ವಿಕ್ರಾಂತ್‌ ಸಮರ್ಪಣೆಯಾಗಿದೆ ಎಂಬುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Modi in Mangalore | ಜನರ ಆಕಾಂಕ್ಷೆಯೇ ನಮಗೆ ಆದೇಶ: ಮಂಗಳೂರಿನಲ್ಲಿ ಮೋದಿ ಹವಾ
ದೇಶವನ್ನು ಅಭಿವೃದ್ಧಿಯ ದಿಕ್ಕಿನಲ್ಲಿ ಕೊಂಡೊಯ್ಯಬೇಕೆಂದರೆ ಜನರ ಆಕಾಂಕ್ಷೆಗಳಿಗೆ ತಕ್ಕಂತೆ ನಡೆಯಬೇಕು ಎನ್ನುವುದನ್ನು ನಾವು ಅರಿತಿದ್ದೇವೆ. ಹಾಗಾಗಿ ಜನರ ಆಕಾಂಕ್ಷೆಗಳೇ ನಮಗೆ ಆದೇಶವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ (Modi in Mangalore) ತಿಳಿಸಿದ್ದಾರೆ. ಮಂಗಳೂರಿನ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಆಯೋಜಿಸಿದ್ದ ಸುಮಾರು 3,800 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶದಲ್ಲಿ ನೆರೆದಿದ್ದ ಬೃಹತ್‌ ಜನಸ್ತೋಮವನ್ನುದ್ದೇಶಿಸಿ ಮೋದಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಪ್ರವಾಸದ ಎಲ್ಲ ಸುದ್ದಿಗಳನ್ನೂ ಒಂದೇ ಕಡೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

2. ಮುರುಘಾಶ್ರೀ ಪ್ರಕರಣ | ಶ್ರೀಗಳನ್ನು ಕಟಕಟೆಯಲ್ಲಿ ನಿಲ್ಲಿಸಿದ ಜಡ್ಜ್‌, 4 ದಿನ ಕಸ್ಟಡಿ, ಆಸ್ಪತ್ರೆ ಹೈಡ್ರಾಮಾಕ್ಕೆ ತೆರೆ
ಗುರುವಾರ ರಾತ್ರಿ ಬಂಧಿತರಾದ ಇಲ್ಲಿನ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾಶರಣರನ್ನು ನಾಲ್ಕು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಅಂದರೆ ಅವರು ಸೆ.೫ರವರೆಗೆ ಪೊಲೀಸ್‌ ಕಸ್ಟಡಿಯಲ್ಲಿ ಇರಬೇಕಾಗುತ್ತದೆ. ಶ್ರೀಗಳನ್ನು ಅನಾರೋಗ್ಯದ ನೆಪ ಒಡ್ಡಿ ತನಗೆ ತಿಳಿಸದೆಯೇ ಆಸ್ಪತ್ರೆಗೆ ದಾಖಲಿಸಿದ್ದರಿಂದ ನ್ಯಾಯಾಧೀಶರು ಜೈಲು ಅಧೀಕ್ಷಕರ ವಿರುದ್ಧ ಕೋರ್ಟ್‌ ಗರಂ ಆದರು. ಈ ನಡುವೆ ವಿಚಾರಣೆ ವೇಳೆ ಶ್ರೀಗಳನ್ನು ಕಟಕಟೆಯಲ್ಲಿ ನಿಲ್ಲಿಸಿದ ಘಟನೆಯೂ ನಡೆಯಿತು. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಮುರುಘಾ ಶ್ರೀ ಬಂಧನ, ವಿಚಾರಣೆ ಕುರಿತು ಎಲ್ಲ ಸುದ್ದಿಗಳನ್ನೂ ಒಂದೇ ಕಡೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

3. ಮುರುಘಾಶ್ರೀ ಪ್ರಕರಣ | ಶ್ರೀಗಳ ಬಂಧನದ ಬೆನ್ನಲ್ಲೇ ಪಿ.ಸಾಯಿನಾಥ್‌ರಿಂದ ಬಸವಶ್ರೀ ಪ್ರಶಸ್ತಿ ವಾಪಸ್‌!
ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಚಿತ್ರದುರ್ಗ ಮಠದ ಡಾ.ಶಿವಮೂರ್ತಿ ಮುರುಘಾಶರಣರನ್ನು ಬಂಧಿಸಿ, ಅವರನ್ನು ಪೊಲೀಸ್‌ ಕಸ್ಟಡಿಗೆ ವಹಿಸಿದ ಬೆನ್ನಲ್ಲೇ ಹಿರಿಯ ಪತ್ರಕರ್ತ, ಲೇಖಕ ಪಿ.ಸಾಯಿನಾಥ್‌ ಅವರು ಬಸವಶ್ರೀ ಪ್ರಶಸ್ತಿಯನ್ನು ವಾಪಸ್‌ ಮಾಡಿದ್ದಾರೆ. ಮುರುಘಾ ಮಠವು ಪ್ರತಿ ವರ್ಷ ಸಾಧಕರಿಗೆ ಬಸವಶ್ರೀ ಪ್ರಶಸ್ತಿ ನೀಡುತ್ತದೆ. ಅದರಂತೆ, ಪಿ. ಸಾಯಿನಾಥ್‌ ಅವರಿಗೆ ೨೦೧6ರಲ್ಲಿ ಬಸವಶ್ರೀ ಪ್ರಶಸ್ತಿ ನೀಡಲಾಗಿತ್ತು. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Britain PM | ಬ್ರಿಟನ್ ಮುಂದಿನ ಪ್ರಧಾನಿ ಲಿಜ್ ಟ್ರಸ್, ರಿಷಿ ಸುನಕ್‌ಗೆ ಕೈ ತಪ್ಪಿದ ಪಟ್ಟ
ಬ್ರಿಟನ್‌ನ ಮುಂದಿನ ಪ್ರಧಾನಿ (Britain PM) ಯಾರಾಗಲಿದ್ದಾರೆ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ದೊರಕುತ್ತಿದೆ. ಹೌದು, ನಿರೀಕ್ಷೆಯಂತೆ ಲಿಜ್ ಟ್ರಸ್ (Liz Truss) ಬ್ರಿಟನ್ ಪ್ರಧಾನಿಯಾಗುವುದು ಪಕ್ಕಾಗಿದೆ. ಭಾರತೀಯ ಸಂಜಾತ ಮತ್ತು ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ (Rishi Sunak) ಅಂತಿಮ ಸ್ಪರ್ಧೆಯಲ್ಲಿ ಟ್ರಸ್ ಎದುರು ಸೋಲೊಪ್ಪಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ಬ್ರಿಟನ್‌ ಪ್ರಧಾನಿಯಾಗುವ ಅವಕಾಶವನ್ನು ಸುನಕ್ ಕಳೆದುಕೊಂಡಿದ್ದಾರೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. INS Vikrant | ಸ್ವದೇಶಿ ನಿರ್ಮಿತ ಯುದ್ಧವಾಹಕ ಐಎನ್ಎಸ್ ವಿಕ್ರಾಂತ್ ಕಾರ್ಯಾರಂಭ
ಐಎನ್ಎಸ್ ವಿಕ್ರಾಂತ್ (INS Vikrant) ವಿಶೇಷ ಮತ್ತು ವಿಶಿಷ್ಟ ಹಡಗು ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇದೊಂದು ತೇಲಾಡುವ ನಗರವಾಗಿದೆ ಎಂದರು. ಯುದ್ಧ ವಿಮಾನಗಳನ್ನು ಹೊತ್ತೊಯ್ಯುವ ಮತ್ತು ಸ್ವದೇಶಿ ನಿರ್ಮಿತ ಐಎನ್ಎಸ್ ವಿಕ್ರಾಂತ್ ಹಡಗಿನ ಕಾರ್ಯಾರಂಭಕ್ಕೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. ವಿಸ್ತಾರ ವಿಶೇಷ | ನೌಕಾಪಡೆಗೆ ಛತ್ರಪತಿ ಶಿವಾಜಿ ಮಹಾರಾಜರ ಛಾಪು: ನೂತನ ಧ್ವಜ ಅನಾವರಣ
ಭಾರತೀಯ ನೌಕಾಪಡೆಗೆ ಸ್ವದೇಶಿ ನಿರ್ಮಿತ ಹಡಗಿನ ಜತೆಗೆ ಹೊಚ್ಚ ಹೊಸ ಧ್ವಜವೂ ಲಭಿಸಿದೆ. ಈ ಬಾರಿ ರೂಪಿಸಿರುವ ಧ್ವಜದಲ್ಲಿ, ಬ್ರಿಟಿಷರ ವಸಾಹತು ಗುರುತನ್ನು ಸಂಪೂರ್ಣ ಅಳಿಸಿರುವ ಜತೆಗೇ ಸ್ವದೇಶಿ ತತ್ವವನ್ನೂ ಅಳವಡಿಸಲಾಗಿದೆ. ಧ್ವಜದಲ್ಲಿದ್ದ ಸೇಂಟ್‌ ಜಾರ್ಜ್‌ ಕ್ರಾಸ್‌ ಅನ್ನು ತೆಗೆದುಹಾಕಲಾಗಿದೆ. ಒಂದು ಮೂಲೆಯಲ್ಲಿ ತ್ರಿವರ್ಣ ಧ್ವಜವಿದ್ದರೆ ಮತ್ತೊಂದು ಕಡೆ ನೌಕಾದಳದ ಲಾಂಛನವಿದೆ. ಲಾಂಛನದ ಸುತ್ತ ಅಷ್ಟಕೋನವಾಗಿ ರೂಪಿಸಲಾಗಿದೆ. ಅಷ್ಟಕೋನ ಎನ್ನುವುದು, ಅಷ್ಟ ದಿಕ್ಕುಗಳಲ್ಲೂ ಸಮುದ್ರವನ್ನು ಕಾಯುವ ಸಂಕಲ್ಪವನ್ನು ಮೂಡಿಸುತ್ತದೆ. ಜತೆಗೆ, ಛತ್ರಪತಿ ಶಿವಾಜಿ ಮಹಾರಾಜದ ರಾಜಮುದ್ರೆಯೂ ಇದೇ ಅಷ್ಟಕೋನಾಕಾರವನ್ನು ಹೊಂದಿತ್ತು. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Starbucks | ಅಮೆರಿಕದ ಸ್ಟಾರ್‌ಬಕ್ಸ್‌ ಕಾಫಿ ಹೌಸ್‌ ಸಿಇಒ ಆಗಿ ಲಕ್ಷ್ಮಣ್ ನರಸಿಂಹನ್‌ ನೇಮಕ
ಅಮೆರಿಕ ಮೂಲದ ಬಹುರಾಷ್ಟ್ರೀಯ ಸರಣಿ ಕಾಫಿ ಹೌಸ್‌ ಸ್ಟಾರ್‌ಬಕ್ಸ್‌ನ (Starbucks) ನೂತನ ಸಿಇಒ ಆಗಿ ಲಕ್ಷ್ಮಣ್‌ ನರಸಿಂಹನ್‌ ನೇಮಕವಾಗಿದ್ದಾರೆ. ಇದರೊಂದಿಗೆ ವಿಶ್ವದ ಅತಿ ದೊಡ್ಡ ಕಾಫಿ ಕೆಫೆ ಸರಣಿಯ ಸಾರಥ್ಯ ಭಾರತೀಯ ಮೂಲದ ಸಿಇಒಗೆ ಸಿಕ್ಕಿದಂತಾಗಿದೆ. ಅವರಿಗೆ ವಾರ್ಷಿಕ 10.37 ಕೋಟಿ ರೂ. ವೇತನ, 12.6 ಕೋಟಿ ರೂ. ಬೋನಸ್ ಹಾಗೂ ೭೩ ಕೋಟಿ ರೂ. ಇನ್ಸೆಂಟಿವ್ ಪಡೆಯಲಿದ್ದಾರೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. AIFF Election | ಫುಟ್ಬಾಲ್‌ ಒಕ್ಕೂಟಕ್ಕೆ ಕಲ್ಯಾಣ್‌ ಅಧ್ಯಕ್ಷ, ಒಕ್ಕೂಟದ ಉನ್ನತ ಸ್ಥಾನವೇರಿದ ಮೊದಲ ಕ್ರೀಡಾಪಟು
ಅಖಿಲ ಭಾರತ ಫುಟ್ಬಾಲ್‌ ಒಕ್ಕೂಟಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಮೋಹನ್‌ ಬಗಾನ್‌ ತಂಡದ ಮಾಜಿ ಗೋಲ್‌ಕೀಪರ್‌ ಕಲ್ಯಾಣ್‌ ಚೌಬೆ ಗೆಲುವು ಸಾಧಿಸಿದ್ದು, ಸಂಸ್ಥೆಯ ೮೫ ವರ್ಷಗಳ ಇತಿಹಾಸದಲ್ಲಿ ಉನ್ನತ ಸ್ಥಾನ ಅಲಂಕರಿಸಿದ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದಾರೆ.
ಈಸ್ಟ್‌ ಬೆಂಗಾಲ್‌ ತಂಡದ ಪರವಾಗಿಯೂ ಆಡಿದ್ದ ೪೫ ವರ್ಷದ ಕಲ್ಯಾಣ್‌ ಚೌಬೆ ಅವರು ತಮ್ಮ ಪ್ರತಿಸ್ಪರ್ಧಿ ಭಾರತ ಫುಟ್ಬಾಲ್ ತಂಡದ ದಿಗ್ಗಜ ಭೈಚುಂಗ್ ಭುಟಿಯಾ ಅವರನ್ನು ೩೩-೧ ಮತಗಳಿಂದ ಸೋಲಿಸಿಗೆ ಅಧ್ಯಕ್ಷ ಸ್ಥಾನ ಅಲಂಕರಿಸಿದರು. ರಾಜ್ಯ ಫುಟ್ಬಾಲ್‌ ಸಂಸ್ಥೆಗಳಲ್ಲಿ ಕಲ್ಯಾಣ್ ಚೌಬೆ ಅವರಿಗೆ ಹೆಚ್ಚು ಬೆಂಬಲಿಗರು ಇದ್ದ ಕಾರಣ ಈ ಫಲಿತಾಂಶವನ್ನು ನಿರೀಕ್ಷಿಸಲಾಗಿತ್ತು. ಆದಾಗ್ಯೂ ಅಖಿಲ ಭಾರತ ಫುಟ್ಬಾಲ್‌ ಒಕ್ಕೂಟದಲ್ಲಿದ್ದ ರಾಜಕಾರಣಿಗಳ ರಾಜ್ಯಭಾರ ಸದ್ಯದ ಮಟ್ಟಿಗೆ ಕೊನೆಗೊಂಡಿದೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. ವಿಸ್ತಾರ Explainer | ಏನಿದು ಡಿಜಿಟಲ್ ರೇಪ್? ಶಿಕ್ಷೆಯಾದ ದೇಶದ ಮೊದಲ ಪ್ರಕರಣ ಯಾವುದು?
ದೇಶದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ರೇಪ್ (Digital Rape) ಅಪರಾಧಕ್ಕಾಗಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯವು ವಿಧಿಸಿದೆ. ಈ ಡಿಜಿಟಲ್ ರೇಪ್ ಬಗ್ಗೆ ಜನರಿಗೆ ಅಷ್ಟೊಂದು ಅರಿವು ಇಲ್ಲ. ಡಿಜಿಟಲ್ ರೇಪ್ ಅಂದರೆ, ವರ್ಚುವಲ್ ಅಥವಾ ಆನ್‌ಲೈನ್ ರೇಪ್ ಅಲ್ಲ. ಪೋಕ್ಸೋ(POCSO)ಮತ್ತು ಐಪಿಸಿ ಸೆಕ್ಷನ್ 375ರಡಿ ದಂಡನಾರ್ಹವಾಗಿರುವ ಈ ಅಪರಾಧ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಈ ಕುರಿತು Explainerಗೆ ಇಲ್ಲಿ ಕ್ಲಿಕ್‌ ಮಾಡಿ.

10. Sudeep birthday | ಹುಟ್ಟುಹಬ್ಬದ ದಿನವೇ ಜಗ ಮೆಚ್ಚುವ ಕಾರ್ಯಕ್ಕೆ ಕಿಚ್ಚ ಸುದೀಪ್‌ ಸಿದ್ಧ!
ಒಂದು ಕಡೆ ನಟ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬದ (Sudeep birthday) ಸಂಭ್ರಮ ಕರುನಾಡಿನಾದ್ಯಂತ ಸದ್ದು ಮಾಡುತ್ತಿದೆ. ಮತ್ತೊಂದು ಕಡೆ ಸದ್ದೇ ಇಲ್ಲದೆ ಸಮಾಜಮುಖಿ ಕಾರ್ಯಕ್ಕೆ ಅವರು ಮುಂದಾಗಿದ್ದಾರೆ. ಹೌದು, ಗೋ ಸಂಪತ್ತಿನ ಸಂರಕ್ಷಣೆಗಾಗಿ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕಿಚ್ಚ ಸುದೀಪ್‌ ಕೈಜೋಡಿಸಿದ್ದಾರೆ. ಈ ಮೂಲಕ ಅವರು ತಮ್ಮ ಕೋಟ್ಯಂತರ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಸುದೀಪ್‌ ಅವರನ್ನು ಪುಣ್ಯಕೋಟಿ ರಾಯಭಾರಿಯಾಗಿ ನೇಮಿಸಲಾಗಿದೆ. ಈ ಕುರಿತು ಸಚಿವ ಪ್ರಭು ಬಿ. ಚವ್ಹಾಣ್‌ ಅಧಿಕೃತ ಆದೇಶವನ್ನೂ ಹೊರಡಿಸಿದ್ದಾರೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest17 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest18 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest18 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest20 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest20 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest22 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest23 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest24 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest2 days ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌