ವಿಸ್ತಾರ TOP 10 NEWS | ಮೋದಿಗೆ ಮಾತೃ ವಿಯೋಗದಿಂದ, ರಾಜ್ಯದಲ್ಲಿ ಅಮಿತ್‌ ಶಾ ಸಂಚಲನದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ಮೋದಿಗೆ ಮಾತೃ ವಿಯೋಗದಿಂದ, ರಾಜ್ಯದಲ್ಲಿ ಅಮಿತ್‌ ಶಾ ಸಂಚಲನದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news modi mother heeraben demise to amit shah in karnataka and more prominent news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Amit Shah | ಸಂಸದೆ ಸುಮಲತಾರನ್ನೂ BJP ಲೆಕ್ಕಕ್ಕೆ ಸೇರಿಸಿಕೊಂಡ ಅಮಿತ್‌ ಶಾ!: JDS-Congress ವಿರುದ್ಧ ವಾಗ್ದಾಳಿ
ಇಲ್ಲಿಯವರೆಗೆ ಕರ್ನಾಟಕದಲ್ಲಿ ಅಧಿಕಾರ ನಡೆಸಿರುವ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಭ್ರಷ್ಟಾಚಾರ ಹಾಗೂ ಕುಟುಂಬ ರಾಜಕಾರಣವನ್ನು ನಡೆಸಿದ್ದು, ಅವರನ್ನು ಕಿತ್ತೊಗೆದು ಈ ಬಾರಿ ಭಾರತೀಯ ಜನತಾ ಪಕ್ಷಕ್ಕೆ ಸರಳ ಬಹುಮತ ನೀಡಿ ಎಂದು ಕೇಂದ್ರ ಗೃಹಸಚಿವ ಹಾಗೂ ಸಹಕಾರ ಸಚಿವ ಅಮಿತ್‌ ಶಾ (amit shah) ಕರೆ ನೀಡಿದ್ದಾರೆ. ಮಂಡ್ಯದಲ್ಲಿರುವ ಬಾಲಕರ ಸರ್ಕಾರಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಸಮಾವೇಶದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವಿರುದ್ಧ ಅಮಿತ್‌ ಶಾ ಹರಿಹಾಯ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Amit Shah | ಗೃಹಸಚಿವರಿಗೆ ತಲೆಬಾಗಿ ನಮಿಸುವೆ ಎಂದ ಎಚ್‌.ಡಿ. ದೇವೇಗೌಡ; ಅಮಿತ್‌ ಶಾಗೆ ಹೊಗಳಿಕೆಯ ಸುರಿಮಳೆ
ಅಮೂಲ್‌ ಡೈರಿ ಸ್ಥಾಪನೆ ಮೂಲಕ ದೇಶದಲ್ಲಿ ಕ್ಷೀರ ಕ್ರಾಂತಿ ಮಾಡಿದ ವರ್ಗೀಸ್‌ ಕುರಿಯನ್‌ ಅವರ ಮಾರ್ಗದಲ್ಲೇ ಕೇಂದ್ರ ಗೃಹಸಚಿವ ಹಾಗೂ ಸಹಕಾರ ಸಚಿವ ಅಮಿತ್‌ ಶಾ (amit shah) ಸಾಗುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Amit Shah | ನಂದಿನಿ ಅಸ್ತಿತ್ವಕ್ಕೆ ಧಕ್ಕೆ ಆತಂಕ?: ಮತ್ತೆ ಗೊಂದಲಕ್ಕೆ ಕಾರಣವಾಯಿತು ಅಮಿತ್‌ ಶಾ ಮಾತು
ಮೆಗಾ ಡೈರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಸಚಿವ ಅಮಿತ್‌ ಶಾ (amit shah) ಆಡಿತ ಮಾತುಗಳು, ರಾಜ್ಯದ ಪ್ರತಿಷ್ಠಿತ ನಂದಿನಿ ಬ್ರ್ಯಾಂಡ್‌ ಅಸ್ತಿತ್ವದ ಕುರಿತು ಗೊಂದಲಗಳನ್ನು ಹುಟ್ಟುಹಾಕಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅಮಿತ್‌ ಶಾ ಪ್ರವಾಸದ ಸಂಪೂರ್ಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ.

4. Heeraben Modi | ಬಾಳಿದಷ್ಟೇ ಸರಳವಾಗಿ ಭಗವಂತನಲ್ಲಿ ಲೀನವಾದರು ತಾಯಿ ಹೀರಾಬೆನ್​; ಪ್ರಧಾನಿ ಮೋದಿ ಸೂಚನೆ ಏನಿತ್ತು?
ಹೀರಾಬೆನ್​​ ತನ್ನ ಮಗನೇ ಪ್ರಧಾನಿಯಾದರೂ ಅದೆಷ್ಟು ಸರಳವಾಗಿ ಬಾಳಿದ್ದರೋ, ಅವರು ಮೃತಪಟ್ಟ ಮೇಲೆ ಅಂತಿಮ ವಿಧಿವಿಧಾನಗಳು-ಅಂತಿಮ ಸಂಸ್ಕಾರವೂ ಅಷ್ಟೇ ಸರಳವಾಗಿ ನಡೆದುಹೋಯಿತು. ಪ್ರಧಾನಿ ಮೋದಿ, ಮನಸು ಮಾಡಿದ್ದರೆ ತಮ್ಮ ಶತಾಯುಷಿ ತಾಯಿಯ ಅಂತ್ಯ ಸಂಸ್ಕಾರವನ್ನು ಇನ್ನಷ್ಟು ಆಡಂಬರವಾಗಿ ಮಾಡಬಹುದಿತ್ತು. ಆದರೆ ಹಾಗೆ ಮಾಡದೆ ಅವರು ಮಾದರಿಯಾದರು. ಈ ಕುರಿತು ಸಂಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೀರಾಬೆನ್‌ ಮೋದಿಯವರ ನಿಧನದ ಕುರಿತ ಸಂಪೂರ್ಣ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

5. Heeraben Modi Passes Away | ತಾಯಿ ಹೀರಾಬೆನ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್‌ಗೆ ಬೆಳಗ್ಗೆ ಧಾವಿಸಿ, ಅಗಲಿದ ತಾಯಿ ಹೀರಾಬೆನ್‌ ಅವರಿಗೆ ಅಂತಿಮ ನಮನಗಳನ್ನು (Heeraben Modi Passes Away) ಸಲ್ಲಿಸಿದರು. ಅಹಮದಾಬಾದ್‌ನಲ್ಲಿ ಹೀರಾಬೆನ್‌ ಅವರ ಪಾರ್ಥಿವ ಶರೀರಕ್ಕೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Rishabh Pant | ರಿಷಭ್​ ಪಂತ್​ ಆರೋಗ್ಯ ಸ್ಥಿತಿ ಕುರಿತು ಮ್ಯಾಕ್ಸ್​​ ಆಸ್ಪತ್ರೆಯ ವೈದ್ಯರು ಕೊಟ್ಟ ಹೇಳಿಕೆಗಳೇನು?
ಕಾರು ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕ್ರಿಕೆಟರ್​ ರಿಷಭ್ ಪಂತ್ (Rishabh Pant) ಅವರ ಆರೋಗ್ಯ ಸ್ಥಿತಿಯ ಬಗ್ಗೆ ಡೆಹ್ರಾಡೂನ್​ನ ಮ್ಯಾಕ್ಸ್​ ​ ಆಸ್ಪತ್ರೆಯ ಮೊದಲ ಬುಲೆಟಿನ್​ ಬಿಡುಗಡೆ ಮಾಡಿದೆ. ಅದರ ಪ್ರಕಾರ ಯುವ ಕ್ರಿಕೆಟಿಗ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ರೀತಿಯ ಆತಂಕಗಳು ಇಲ್ಲ. ಆದರೆ, ಆಗಿರುವ ಗಾಯಗಳಿಗೆ ಚಿಕಿತ್ಸೆ ಮುಂದುವರಿಯಲಿದ್ದು, ಸಂಜೆ ವೇಳೆ ಇನ್ನೊಂದು ಬುಲೆಟಿನ್ ಬಿಡುಗಡೆಯಾಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ರಿಷಭ್‌ ಪಂತ್‌ ಅಪಘಾತದ ಕುರಿತ ಎಲ್ಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

7. Post Office Interest Rates | ಠೇವಣಿಯ ಬಡ್ಡಿ ಹೆಚ್ಚಳ, ಪೋಸ್ಟ್‌ ಆಫೀಸ್‌ ಗ್ರಾಹಕರಿಗೆ ಹೊಸ ವರ್ಷದ ಸಿಹಿ ಸುದ್ದಿ
ಅಂಚೆ ಕಚೇರಿಗಳಲ್ಲಿ ಕಿರು ಅವಧಿಗೆ ಠೇವಣಿ ಮಾಡುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದೆ. ಅಂಚೆ ಕಚೇರಿಯ ಹಲವು ಯೋಜನೆಗಳ ಮೇಲಿನ ಬಡ್ಡಿದರವನ್ನು 20 ಮೂಲಾಂಕಗಳಿಂದ 110 ಮೂಲಾಂಕಗಳಿಗೆ ಏರಿಕೆ (Post Office Interest Rates) ಮಾಡಲಾಗಿದ್ದು, ಇದರಿಂದ ಕೋಟ್ಯಂತರ ಠೇವಣಿದಾರರಿಗೆ ಹೆಚ್ಚಿನ ಲಾಭವಾಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Reservation | ಒಕ್ಕಲಿಗ, ಪಂಚಮಸಾಲಿ ಒಬಿಸಿ ಮೀಸಲಾತಿ ಪರಿಷ್ಕರಣೆ ಎಲೆಕ್ಷನ್‌ ಗಿಮಿಕ್‌: ಮಾಜಿ ಸಿಎಂ ಸಿದ್ದರಾಮಯ್ಯ
ಒಬಿಸಿ ೩ಎ ಮೀಸಲಾತಿ ಹೊಂದಿದ್ದ ಒಕ್ಕಲಿಗರಿಗೆ 2ಸಿ ಹಾಗೂ ೩ಬಿ ಮೀಸಲಾತಿ ಹೊಂದಿದ್ದ ಪಂಚಮಸಾಲಿ ಸಮುದಾಯಕ್ಕೆ 2ಡಿ ಎಂದು ರಾಜ್ಯ ಸರ್ಕಾರ ಹೊಸದಾಗಿ ಪ್ರವರ್ಗ ಸೃಷ್ಟಿಸಿದೆ. ಈ ಬಗ್ಗೆ ನಮಗೆ ಪೂರ್ಣ ಮಾಹಿತಿ ಸಿಕ್ಕಿಲ್ಲ. ಮೀಸಲಾತಿ (Reservation) ಶೇಕಡಾ ಇಂತಿಷ್ಟೇ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಎಲ್ಲಿಂದ ಕೊಡುತ್ತಾರೆ ಎಂದು ತೀರ್ಮಾನವಾಗಿಲ್ಲ. ಈ ಮೀಸಲಾತಿ ಪರಿಷ್ಕರಣೆ ಎಲೆಕ್ಷನ್‌ ಗಿಮಿಕ್‌ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. SC ST Reservation | ಎಸ್‌ಸಿ ಎಸ್‌ಟಿ ಹೊಸ ಮೀಸಲಾತಿಯ ರೋಸ್ಟರ್‌ ಪ್ರಕಟ; ನೇಮಕಾತಿಗೆ ದಾರಿ ಸುಗಮ
ರಾಜ್ಯದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ನೇಮಕಾತಿ ಹಾಗೂ ಹುದ್ದೆಗಳಲ್ಲಿ ಮೀಸಲಾತಿ (SC ST Reservation) ಹೆಚ್ಚಳ ಮಾಡಿ ಕಳೆದ ಅಕ್ಟೋಬರ್‌ನಲ್ಲಿ ಸುಗ್ರೀವಾಜ್ಞೆ ಹೊರಡಿಸಿದ್ದ ರಾಜ್ಯ ಸರ್ಕಾರ ಈಗ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿಮಾಡಬೇಕಾದ ರಿಕ್ತಸ್ಥಾನಗಳಿಗೆ ಬಿಂದುಗಳನ್ನು ಗುರುತಿಸಿ ಆದೇಶ ಹೊರಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. ಭವಿಷ್ಯ ಪ್ರಶ್ನೋತ್ತರ | ಖರ್ಚು ಜಾಸ್ತಿಯಾಗುತ್ತಲೇ ಇದೆ, ಸಾಲ ತುಂಬಾ ಆಗಿದೆ, ಏನು ಮಾಡೋದು ಗುರೂಜಿ?
ಭವಿಷ್ಯ ಪ್ರಶ್ನೋತ್ತರ | ಇದು ಜ್ಯೋತಿಷ್ಯದ ಹೊಸ ಅಂಕಣ. ಇಲ್ಲಿ ನಮ್ಮ ಓದುಗರು ಕೇಳುವ ಪ್ರಶ್ನೆಗಳಿಗೆ ರಾಜಗುರು ಬಿ. ಎಸ್‌. ದ್ವಾರಕನಾಥ್‌ ಅವರು ಉತ್ತರಿಸಲಿದ್ದಾರೆ, ಪರಿಹಾರ ಸೂಚಿಸಲಿದ್ದಾರೆ. ಇಲ್ಲಿ ನೀವೂ ಪ್ರಶ್ನೆ ಕೇಳಬಹುದು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

  1. Pakistan Hindu | ಅಲ್ಪಸಂಖ್ಯಾತ ಹಿಂದುಗಳ ಸುರಕ್ಷತೆ ಕೈಗೊಳ್ಳಿ: ಪಾಕಿಸ್ತಾನಕ್ಕೆ ಭಾರತ ತಾಕೀತು
  2. RIP Pele | ಬ್ರೆಜಿಲ್​ನ ಫುಟ್ಬಾಲ್​ ದಿಗ್ಗಜ ಪೀಲೆ ನಿಧನಕ್ಕೆ ಹಲವು ಗಣ್ಯರ ಸಂತಾಪ
  3. Numerology Predictions 2023 | ಸಂಖ್ಯಾಶಾಸ್ತ್ರದ ಪ್ರಕಾರ ಹೊಸ ವರ್ಷ ಹೇಗಿರಲಿದೆ?, ನಿಮ್ಮ ಭವಿಷ್ಯ ಹೇಗಿದೆ?
  4. Love Jihad | ಲವ್ ಜಿಹಾದ್ ತಡೆಗೆ ವಿಹಿಂಪದಿಂದ ಹೆಲ್ಪ್‌ಲೈನ್‌ ಆರಂಭ; ಮಾಹಿತಿ ಸಿಕ್ಕರೆ ಕರೆ ಮಾಡಿ ತಿಳಿಸಲು ಮನವಿ
  5. ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್​ ರೈಲಿಗೆ ಚಾಲನೆ ವೇಳೆ ಜೈ ಶ್ರೀರಾಮ್​ ಘೋಷಣೆ; ವೇದಿಕೆ ಏರದೆ ಮೌನವಾಗಿ ಕುಳಿತ ಮಮತಾ ಬ್ಯಾನರ್ಜಿ
  6. Tunisha Sharma Death | ತುನಿಶಾ ಶರ್ಮಾಳನ್ನು ಇಸ್ಲಾಂಗೆ ಮತಾಂತರಗೊಳಿಸಲು ಶಿಜಾನ್‌ ಒತ್ತಾಯ, ಸಂಚಲನ ಸೃಷ್ಟಿಸಿದ ನಟಿಯ ತಾಯಿ ಹೇಳಿಕೆ
  7. ಧವಳ ಧಾರಿಣಿ ಅಂಕಣ | ಜಗದ್ವಂದ್ಯನನ್ನು ಹೆತ್ತೂ ತಬ್ಬಲಿಯಾದ ಮಹಾತಾಯಿ
  8. New Year 2023 | ಹೊಸ ವರ್ಷದಲ್ಲಿ ಯಾವ ರಾಜ್ಯಗಳಲ್ಲಿ ಚುನಾವಣೆ? ಹೇಗಿದೆ ಪಕ್ಷಗಳ ರಣತಂತ್ರ?
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Hassan Pen Drive Case: ಪ್ರಜ್ವಲ್‌ ಪೆನ್‌ಡ್ರೈವ್‌ ರಿಲೀಸ್‌ ಹಿಂದೆ ಎಚ್‌ಡಿಕೆ? ಡಿಕೆ ಬ್ರದರ್ಸ್‌ ಹೇಳಿದ ಸ್ಫೋಟಕ ಮಾಹಿತಿ ಏನು?

Hassan Pen Drive Case: ಈ ಪ್ರಕರಣದಲ್ಲಿ ಹೆಣ್ಣು ಮಕ್ಕಳ ಸಮಸ್ಯೆ ಮುಖ್ಯವಾಗಿದೆ. ಯಾರು ಬಿಡುಗಡೆ ಮಾಡಿದರು ಎಂಬುದು ಅಲ್ಲ. ಕುಮಾರಸ್ವಾಮಿ ಅವರು ದಿನಕ್ಕೊಂದು ಹೇಳಿಕೆಯನ್ನು ಕೊಡುತ್ತಾ ಇರುತ್ತಾರೆ. ಡಿ.ಕೆ. ಶಿವಕುಮಾರ್‌ ಮೇಲೆ ಯಾವ ಆರೋಪ ಬಿಟ್ಟಿದ್ದಾರೆ? ಎಲ್ಲ ತರಹದ ಆರೋಪವನ್ನೂ ಮಾಡುತ್ತಾರೆ. ಇದರ ಹಿಂದೆ ಕುಮಾರಸ್ವಾಮಿ ಕೈವಾಡ ಇದೆ. ಹಾಸನ ನಾಯಕರ ಕೈವಾಡ ಇದೆ. ಈ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇತ್ತು ಎಂದು ಡಿ.ಕೆ. ಸುರೇಶ್‌ ಹೇಳಿದ್ದಾರೆ.

VISTARANEWS.COM


on

Hassan Pen Drive Case HDK behind Prajwal Pen Drive release DK Brothers allegations
Koo

ಬೆಂಗಳೂರು/ಯಾದಗಿರಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ. ಹಾಸನ ನಾಯಕರ ಕೈವಾಡ ಇದೆ. ಬಿಜೆಪಿ ಮುಖಂಡ ದೇವೇರಾಜೇಗೌಡ ಮೊದಲು ಭೇಟಿ ಮಾಡಿದ್ದು ಯಾರನ್ನು ಎಂದು ಡಿ.ಕೆ. ಸಹೋದರರು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಎಚ್‌ಡಿಕೆ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.‌ಕೆ. ಸುರೇಶ್ ಹರಿಹಾಯ್ದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್‌, ಕುಮಾರಸ್ವಾಮಿಗೆ ಡಿ‌.ಕೆ‌. ಶಿ‌ವಕುಮಾರ್‌ ಅವರನ್ನು ನೆನಪು ಮಾಡಿಕೊಳ್ಳದಿದ್ದರೆ ನಿದ್ದೆ ಬರಲ್ಲ, ಊಟ ಸೇರಲ್ಲ. ನಮ್ಮ ಹತ್ತಿರ ಪೆನ್‌ಡ್ರೈವ್‌ ಇದ್ದಿದ್ದರೆ, ಅದನ್ನು ಚುನಾವಣೆಗೆ ಮೊದಲೇ ಬಿಡುಗಡೆ ಮಾಡುತ್ತಿದ್ದೆವು. ಇಲ್ಲೀಗ ವ್ಯವಸ್ಥಿತವಾಗಿ ನುಣುಚಿಕೊಳ್ಳುವ ಪ್ರಯತ್ನವನ್ನು ಮಾಡುತ್ತಾ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಈ ಪ್ರಕರಣದಲ್ಲಿ ಹೆಣ್ಣು ಮಕ್ಕಳ ಸಮಸ್ಯೆ ಮುಖ್ಯವಾಗಿದೆ. ಯಾರು ಬಿಡುಗಡೆ ಮಾಡಿದರು ಎಂಬುದು ಅಲ್ಲ. ಕುಮಾರಸ್ವಾಮಿ ಅವರು ದಿನಕ್ಕೊಂದು ಹೇಳಿಕೆಯನ್ನು ಕೊಡುತ್ತಾ ಇರುತ್ತಾರೆ. ಡಿ.ಕೆ. ಶಿವಕುಮಾರ್‌ ಮೇಲೆ ಯಾವ ಆರೋಪ ಬಿಟ್ಟಿದ್ದಾರೆ? ಎಲ್ಲ ತರಹದ ಆರೋಪವನ್ನೂ ಮಾಡುತ್ತಾರೆ. ಇದರ ಹಿಂದೆ ಕುಮಾರಸ್ವಾಮಿ ಕೈವಾಡ ಇದೆ. ಹಾಸನ ನಾಯಕರ ಕೈವಾಡ ಇದೆ. ಈ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇತ್ತು ಎಂದು ಡಿ.ಕೆ. ಸುರೇಶ್‌ ಹೇಳಿದರು.

ಬಹಳ ಮುಂಚೆಯಿಂದ ಈ ಸುದ್ದಿ ಇತ್ತು. ವಿಡಿಯೊ ಬಿಡುಗಡೆ ಆಗಿರಲಿಲ್ಲ. ಬಿಡುಗಡೆ ಆದ ಮೇಲೆ ಚರ್ಚೆ ಆಗುತ್ತಿದೆ. ಸುಮ್ಮನೆ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಿದ್ದಾರೆ. ಅದು ಕುಟುಂಬದ ಪಾರ್ಟಿ, ಯಾವಾಗ ಬೇಕಾದರೂ ತೆಗೆದುಕೊಳ್ಳುತ್ತಾರೆ. ಬೇಕಾದಾಗ ಪಾರ್ಟಿಯಿಂದ ಬಿಡುತ್ತಾರೆ ಎಂದು ಡಿ.ಕೆ. ಸುರೇಶ್‌ ವ್ಯಂಗ್ಯವಾಡಿದರು.

ದೇವರಾಜೇಗೌಡ ಮೊದಲು ಯಾರನ್ನು ಭೇಟಿ ಮಾಡಿದ್ದ? ಡಿಕೆಶಿ ಪ್ರಶ್ನೆ

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಮತೆ ಯಾದಗಿರಿಯ ಸುರಪುರ ತಾಲೂಕಿನ ದೇವತ್ಗಲ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಮೊದಲು ದೇವರಾಜೇಗೌಡ ಯಾರನ್ನು ಭೇಟಿ ಮಾಡಿದ್ದ? ನಮಗೆ ಗೊತ್ತಿರುವ ಮಾಹಿತಿ ಪ್ರಕಾರ ಮೊದಲಿಗೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ. ಅದಾದ ಮೇಲೆ ಬಿಜೆಪಿ ಅವರಿಗೆ ಪೆನ್‌ ಡ್ರೈವ್ ಕೊಟ್ಟಿದ್ದ. ನಾವು ಮಾಡಬೇಕು ಅಂದಿದ್ದರೆ ಹೇಗೆ ಮಾಡಬೇಕು ಅಂತ ಗೊತ್ತಿತ್ತು. ನಮಗೆ ಅಂತಹ ಕೆಲಸದ ಅವಶ್ಯಕತೆ ಇಲ್ಲ. ಕುಮಾರಸ್ವಾಮಿ ನಾರಿ ಶಕ್ತಿ ಬಗ್ಗೆ, ತಂದೆ ತಾಯಿ ಬಗ್ಗೆ ಗೌರವವಿದೆ ಅಂತ ಹೇಳುತ್ತಾರಲ್ಲ. ಬಿಜೆಪಿಯವರೂ ಹೇಳುತ್ತಾರಲ್ಲವಾ? ಮೊದಲು ಆ ತಾಯಂದಿರಲ್ಲಿ ಹೋಗಿ ಗೌರವ ಕೊಟ್ಟು ಸಾಂತ್ವನ ಹೇಳಿ, ಧೈರ್ಯ ತುಂಬುವ ಕೆಲಸ ಮಾಡಲಿ ಎಂದು ಹೇಳಿದರು.

ಮಹಾನಾಯಕ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಯಾವ ನಾಯಕ ಅಂತಾದರೂ ಹೇಳಲಿ, ನಾನು ಮಾತನಾಡುತ್ತೇನೆ. ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿ ನಾನಲ್ಲ. ಸೂರಜ್ ರೇವಣ್ಣ ಅವರು ಬಂದಿದ್ದರು. ಏನೇನು ಮಾತನಾಡಿದ್ದರು ಅಂತ ಅವರನ್ನೇ ಕೇಳಿ ಎಂದು ಹೇಳಿದರು.

ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ 24 ಗಂಟೆಯೊಳಗೆ ವಿಚಾರಣೆಗೆ ಹಾಜಾರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಒಂದು ವೇಳೆ ಗಡುವಿನೊಳಗೆ ವಿಚಾರಣೆಗೆ ಹಾಜರಾಗದೇ ಇದ್ದರೆ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇದೆ. ಇಲ್ಲವೇ ಇನ್ನೂ ಎರಡು ಬಾರಿ ನೋಟಿಸ್‌ ನೀಡಿ ಕಾಯಬಹುದಾಗಿದೆ. ಈ ಎಲ್ಲವೂ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟ ವಿಷಯವಾಗಿದೆ.

ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ.

ಸದ್ಯ ಆರೋಪಿಗಳು ವಿಚಾರಣೆಗೆ ಬರುವ ನಿರೀಕ್ಷೆಯಲ್ಲಿ ಎಸ್ಐಟಿ ಇದೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನೋಟಿಸ್‌ನಲ್ಲಿ ಸಮಯ ನಿಗದಿ ಮಾಡಲಾಗಿಲ್ಲ.

ಹೊಳೆನರಸೀಪುರದ ಮನೆಯಲ್ಲಿ ಹೋಮ ಮಾಡಿಸಿದ ರೇವಣ್ಣ

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಹೊಳೆನರಸೀಪುರದ ನಿವಾಸಲ್ಲಿ ಹೋಮ ಮಾಡಿಸಿದ್ದಾರೆ ಎನ್ನಲಾಗಿದೆ. ಯಾವ ಹೋಮವನ್ನು ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಬುಧವಾರ ಹೋಮ ಪೂರ್ಣಗೊಂಡ ಬಳಿಕ ಅಲ್ಲಿಂದ ಬೆಂಗಳೂರಿನತ್ತ ವಾಪಸ್‌ ಆಗಿದ್ದಾರೆ.

ಮೊದಲ ನೋಟಿಸ್‌ಗೆ ಪ್ರಜ್ವಲ್‌ ಗೈರು ಪಕ್ಕಾ

ಎಸ್‌ಐಟಿ ನೀಡಿರುವ ಮೊದಲ ನೋಟಿಸ್‌ಗೆ ಪ್ರಜ್ವಲ್‌ ರೇವಣ್ಣ ಗೈರಾಗುವುದು ಪಕ್ಕಾ ಆಗಿದೆ. ಏಕೆಂದರೆ, ಜರ್ಮನಿಯಿಂದ ಬೆಂಗಳೂರು ತಲುಪಬೇಕಾದರೆ ಕನಿಷ್ಠ 9ರಿಂದ 10 ಗಂಟೆ ಪ್ರಯಾಣ ಮಾಡಬೇಕು. 10 ಗಂಟೆ ಪ್ರಯಾಣ ಮಾಡಿದರೂ ನೋಟಿಸ್ ನೀಡಿದ 24 ಗಂಟೆಗಳ‌ ಒಳಗೆ ತಲುಪಲು ಅಸಾಧ್ಯ. ಮೊದಲ ನೋಟಿಸ್‌ಗೆ ಗೈರಾದರೆ ಎರಡನೇ ನೋಟಿಸ್ ನೀಡುವ ಸಾಧ್ಯತೆ ಇದೆ. ಹೀಗೆ ಮೂರು ಬಾರಿ ಆರೋಪಿ ಸ್ಥಾನದಲ್ಲಿರುವವರಿಗೆ ನೋಟಿಸ್‌ ನೀಡಲಾಗುವುದು.

ಮೂರು ನೋಟಿಸ್‌ಗೂ ಸ್ಪಂದಿಸದೇ ಇದ್ದರೆ?

ಎಸ್‌ಐಟಿ ಮೂರು ಬಾರಿ ನೋಟಿಸ್‌ ನೀಡಿದರೂ ಆರೋಪಿಗಳು ಸ್ಪಂದಿಸದೇ ಇದ್ದಿದ್ದರೆ ಕೋರ್ಟ್‌ ಮುಖಾಂತರ ವಾರೆಂಟ್‌ ತಂದು ಬಂಧಿಸುವ ಅವಕಾಶವೂ ಇದೆ. ಇನ್ನು ಎರಡನೇ ನೋಟಿಸ್‌ಗೆ ಸ್ಪಂದಿಸಿ ವಿಚಾರಣೆಗೆ ಹಾಜರಾದರೆ, ತನಿಖಾಧಿಕಾರಿಗಳ ಮುಂದೆ ಸೂಕ್ತ ಕಾರಣ ನೀಡಬೇಕಾಗುತ್ತದೆ. ಈ ಪ್ರಕರಣದಲ್ಲಿ ದಾಖಲಾಗಿರುವ ಸೆಕ್ಷನ್‌ನಲ್ಲಿ ಜಾಮೀನು ಮಂಜೂರು ಆಗುವ ಸಾಧ್ಯತೆ ಇದೆ. ಇಂದು (ಬುಧವಾರ) ರಜೆಯಾಗಿರುವುದರಿಂದ ಗುರುವಾರ (ಮೇ 2) ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಗಾಗಿಯೇ ವಿಚಾರಣೆಗೆ ಹಾಜರಾಗದೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆ ಹೆಚ್ಚಿದೆ.

ಈ ಸಂಬಂಧ ಮಕ್ಕಳ ಹಕ್ಕು ಆಯೋಗದಿಂದ ಪತ್ರ ಬರೆಯಲಾಗಿದೆ. ದೂರುದಾರೆಯ ಮಗಳ ಹೇಳಿಕೆಯನ್ನು ಪಡೆಯಲು ತಯಾರಿ ನಡೆಸಲಾಗುತ್ತಿದೆ. ಮಕ್ಕಳ ಹಕ್ಕು ಆಯೋಗದ ಕೌನ್ಸಿಲರ್‌ಗಳ ಸಮ್ಮುಖದಲ್ಲಿ ಹೇಳಿಕೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ ಅಥವಾ ನಾಳೆ (ಮೇ 1 – 2) ಸಂತ್ರಸ್ತೆಯ ಮಗಳ ಹೇಳಿಕೆ ಪಡೆಯಲು ಮುಂದಾಗಲಾಗುತ್ತಿದೆ ಎನ್ನಲಾಗಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ವೇಳೆ ಏನಾದರೂ ಸಂತ್ರಸ್ತೆಯ ಮಗಳು ವ್ಯತಿರಿಕ್ತ ಹೇಳಿಕೆ ನೀಡಿದಲ್ಲಿ ಇಡಿ ಪ್ರಕರಣವೇ ಉಲ್ಟಾ ಆಗಲಿದೆ.

SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. “ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್!

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ.

ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟಿಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೋಟಿಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತಿಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

Continue Reading

ಕ್ರೈಂ

Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

Drowned In water : ರಾಯಚೂರಿನಲ್ಲಿ ಬಟ್ಟೆ ತೊಳೆಯಲು ಕಾಲುವೆಗೆ ಇಳಿದ ಯುವಕರಿಬ್ಬರು ನೀರುಪಾಲಾದರೆ, ಕಾರವಾರದಲ್ಲಿ ಕಪ್ಪೆಚಿಪ್ಪು ತೆಗೆಯುವ ವೇಳೆ ತಾಯಿ-ಮಗಳು ನೀರಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ.

VISTARANEWS.COM


on

By

Drowned in water in raichur and karwar
Koo

ರಾಯಚೂರು/ ಕಾರವಾರ: ಪ್ರತ್ಯೇಕ ಕಡೆಗಳಲ್ಲಿ ನೀರಲ್ಲಿ ಮುಳುಗಿ ನಾಲ್ವರು ಮೃತಪಟ್ಟಿರುವ (Drowned In water) ದಾರುಣ ಘಟನೆ ನಡೆದಿದೆ. ಜಾತ್ರೆ ನಿಮಿತ್ತ ಪಾಲಕರೊಂದಿಗೆ ಬಟ್ಟೆ ತೊಳೆಯಲು ಹೋಗಿ ಯುವಕರಿಬ್ಬರು ನೀರುಪಾಲಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬಸವಸಾಗರ ಜಲಾಶಯದ ಕಾಲುವೆಯಲ್ಲಿ ಘಟನೆ ನಡೆದಿದೆ.

ಲಕ್ಕಣ್ಣ (22), ಬಸವಂತ (25) ಮೃತ ದುರ್ದೈವಿಗಳು. ಲಿಂಗಸ್ಗೂರು ತಾ. ಬೆಂಡೋಣಿ ಗ್ರಾಮದ ನಿವಾಸಿಗಳಾದ ಇವರಿಬ್ಬರು, ಬಟ್ಟೆ ತೊಳೆಯಲು ಹೋಗಿದ್ದಾರೆ. ಮೊದಲು ಓರ್ವ ಯುವಕ ಕಾಲು ಜಾರಿ ನೀರಿಗೆ ಬಿದ್ದಿದ್ದ. ಈ ವೇಳೆ ಆತನ ಕಾಪಾಡಲು ಮತ್ತೋರ್ವ ಯುವಕ ನೀರಿಗೆ ಧುಮುಕಿದ್ದಾನೆ. ಆದರೆ ಈಜು ಬಾರದೆ ಕಾಲುವೆಯಲ್ಲೇ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ.

Drowned in water in Raichur and Karwar
ಮೃತ ದುರ್ದೈವಿ ಯುವಕರು

ಇನ್ನು ಅಲ್ಲೆ ಇದ್ದ ಸ್ಥಳೀಯರು ರಕ್ಷಣೆಗೆ ಮುಂದಾದರೂ ಆದರೆ ಅಷ್ಟರಲ್ಲಿ ಯುವಕರು ನೀರಲ್ಲಿ ಮುಳುಗಿ ಮೃತಪಟ್ಟಿದ್ದರು. ಕಾಲುವೆಯಲ್ಲಿದ್ದ ಯುವಕರಿಬ್ಬರ ಮೃತದೇಹಗಳನ್ನು ಸ್ಥಳೀಯರೇ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಲಿಂಗಸ್ಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

ನದಿಯಲ್ಲಿ ಮುಳುಗಿ ತಾಯಿ-ಮಗಳು ಸಾವು

ನದಿಯಲ್ಲಿ ಮುಳುಗಿ ತಾಯಿ‌- ಮಗಳು ಇಬ್ಬರೂ ಮೃತಪಟ್ಟಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಬೈತಖೋಲ್‌ನಲ್ಲಿ ಘಟನೆ ನಡೆದಿದೆ. ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಾಗ ನೀರಿನಲ್ಲಿ ಮುಳುಗಿ ರೇಣುಕಾ ಹಾಗೂ ಸುಜಾತ ಎಂಬುವವರು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕರಾವಳಿ ಕಾವಲು ಪಡೆ ಸಿಬ್ಬಂದಿ ಮೃತದೇಹಗಳನ್ನು ದಡಕ್ಕೆ ತಂದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕಾರವಾರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಾವಣಗೆರೆ

Lok Sabha Election 2024: ಮಾಯಕೊಂಡ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Lok Sabha Election 2024: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಸವಪಟ್ಟಣ ಮತ್ತು ತ್ಯಾವಣಗಿ ಗ್ರಾ.ಪಂ. ವ್ಯಾಪ್ತಿಯ ಕಾರಿಗನೂರು, ಕತ್ತಲಗೆರೆ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚಿಸಿದರು.

VISTARANEWS.COM


on

Davanagere lok sabha constituency bjp candidate gayatri siddeshwar election campaign in mayakonda
Koo

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಮಾಯಕೊಂಡ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಮತ್ತು ತ್ಯಾವಣಗಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಬಿರುಸಿನ ಚುನಾವಣಾ (Lok Sabha Election 2024) ಪ್ರಚಾರ ಕೈಗೊಂಡು, ಮತಯಾಚನೆ ನಡೆಸಿದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಸವಪಟ್ಟಣ ಮತ್ತು ತ್ಯಾವಣಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಿಗನೂರು, ಕತ್ತಲಗೆರೆ ಗ್ರಾಮಗಳಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಅವರು ಮನವಿ ಮಾಡಿದರು.

ಇದೇ ವೇಳೆ ಕಾರಿಗನೂರು ಗ್ರಾಮದಲ್ಲಿರುವ ಮಾಜಿ ಮುಖ್ಯಮಂತ್ರಿ ದಿ. ಜೆ.ಎಚ್. ಪಟೇಲ್ ಅವರ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ಇದನ್ನೂ ಓದಿ: LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಸವರಾಜ ನಾಯ್ಕ್, ಲಿಂಗಣ್ಣ, ಜೆಡಿಎಸ್ ನಾಯಕ ತೇಜಸ್ವಿ ಪಟೇಲ್, ಮುಖಂಡರಾದ ಸಂಗಮೇಶ್ ದ್ರಾಕ್ಷಾಯಿಣಿ ನಿರಾಣಿ, ಪ್ರೇಮ, ಮಾಗನೂರು ಪ್ರಭಣ್ಣ, ಅಣಬೇರು ಜೀವನಮೂರ್ತಿ, ಜಿ.ಎಸ್. ಶ್ಯಾಮ್, ದೇವೇಂದ್ರಪ್ಪ, ಹನುಮಂತನಾಯ್ಕ, ಮಂಜನಾಯ್ಕ್, ಹನುಮಂತಪ್ಪ ಸೇರಿದಂತೆ ಅನೇಕ ಮುಖಂಡರು. ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕ್ರೈಂ

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Hassan Pen Drive Case: ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ. ಸದ್ಯ ಆರೋಪಿಗಳು ವಿಚಾರಣೆಗೆ ಬರುವ ನಿರೀಕ್ಷೆಯಲ್ಲಿ ಎಸ್ಐಟಿ ಇದೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನೋಟಿಸ್‌ನಲ್ಲಿ ಸಮಯ ನಿಗದಿ ಮಾಡಲಾಗಿಲ್ಲ.

VISTARANEWS.COM


on

Hassan Pen Drive case Prajwal and Revanna arrested if they fail to appear before SIT
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ 24 ಗಂಟೆಯೊಳಗೆ ವಿಚಾರಣೆಗೆ ಹಾಜಾರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಒಂದು ವೇಳೆ ಗಡುವಿನೊಳಗೆ ವಿಚಾರಣೆಗೆ ಹಾಜರಾಗದೇ ಇದ್ದರೆ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇದೆ. ಇಲ್ಲವೇ ಇನ್ನೂ ಎರಡು ಬಾರಿ ನೋಟಿಸ್‌ ನೀಡಿ ಕಾಯಬಹುದಾಗಿದೆ. ಈ ಎಲ್ಲವೂ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟ ವಿಷಯವಾಗಿದೆ.

ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ.

ಸದ್ಯ ಆರೋಪಿಗಳು ವಿಚಾರಣೆಗೆ ಬರುವ ನಿರೀಕ್ಷೆಯಲ್ಲಿ ಎಸ್ಐಟಿ ಇದೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನೋಟಿಸ್‌ನಲ್ಲಿ ಸಮಯ ನಿಗದಿ ಮಾಡಲಾಗಿಲ್ಲ.

ಹೊಳೆನರಸೀಪುರದ ಮನೆಯಲ್ಲಿ ಹೋಮ ಮಾಡಿಸಿದ ರೇವಣ್ಣ

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಹೊಳೆನರಸೀಪುರದ ನಿವಾಸಲ್ಲಿ ಹೋಮ ಮಾಡಿಸಿದ್ದಾರೆ ಎನ್ನಲಾಗಿದೆ. ಯಾವ ಹೋಮವನ್ನು ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಬುಧವಾರ ಹೋಮ ಪೂರ್ಣಗೊಂಡ ಬಳಿಕ ಅಲ್ಲಿಂದ ಬೆಂಗಳೂರಿನತ್ತ ವಾಪಸ್‌ ಆಗಿದ್ದಾರೆ.

ಮೊದಲ ನೋಟಿಸ್‌ಗೆ ಪ್ರಜ್ವಲ್‌ ಗೈರು ಪಕ್ಕಾ

ಎಸ್‌ಐಟಿ ನೀಡಿರುವ ಮೊದಲ ನೋಟಿಸ್‌ಗೆ ಪ್ರಜ್ವಲ್‌ ರೇವಣ್ಣ ಗೈರಾಗುವುದು ಪಕ್ಕಾ ಆಗಿದೆ. ಏಕೆಂದರೆ, ಜರ್ಮನಿಯಿಂದ ಬೆಂಗಳೂರು ತಲುಪಬೇಕಾದರೆ ಕನಿಷ್ಠ 9ರಿಂದ 10 ಗಂಟೆ ಪ್ರಯಾಣ ಮಾಡಬೇಕು. 10 ಗಂಟೆ ಪ್ರಯಾಣ ಮಾಡಿದರೂ ನೋಟಿಸ್ ನೀಡಿದ 24 ಗಂಟೆಗಳ‌ ಒಳಗೆ ತಲುಪಲು ಅಸಾಧ್ಯ. ಮೊದಲ ನೋಟಿಸ್‌ಗೆ ಗೈರಾದರೆ ಎರಡನೇ ನೋಟಿಸ್ ನೀಡುವ ಸಾಧ್ಯತೆ ಇದೆ. ಹೀಗೆ ಮೂರು ಬಾರಿ ಆರೋಪಿ ಸ್ಥಾನದಲ್ಲಿರುವವರಿಗೆ ನೋಟಿಸ್‌ ನೀಡಲಾಗುವುದು.

ಮೂರು ನೋಟಿಸ್‌ಗೂ ಸ್ಪಂದಿಸದೇ ಇದ್ದರೆ?

ಎಸ್‌ಐಟಿ ಮೂರು ಬಾರಿ ನೋಟಿಸ್‌ ನೀಡಿದರೂ ಆರೋಪಿಗಳು ಸ್ಪಂದಿಸದೇ ಇದ್ದಿದ್ದರೆ ಕೋರ್ಟ್‌ ಮುಖಾಂತರ ವಾರೆಂಟ್‌ ತಂದು ಬಂಧಿಸುವ ಅವಕಾಶವೂ ಇದೆ. ಇನ್ನು ಎರಡನೇ ನೋಟಿಸ್‌ಗೆ ಸ್ಪಂದಿಸಿ ವಿಚಾರಣೆಗೆ ಹಾಜರಾದರೆ, ತನಿಖಾಧಿಕಾರಿಗಳ ಮುಂದೆ ಸೂಕ್ತ ಕಾರಣ ನೀಡಬೇಕಾಗುತ್ತದೆ. ಈ ಪ್ರಕರಣದಲ್ಲಿ ದಾಖಲಾಗಿರುವ ಸೆಕ್ಷನ್‌ನಲ್ಲಿ ಜಾಮೀನು ಮಂಜೂರು ಆಗುವ ಸಾಧ್ಯತೆ ಇದೆ. ಇಂದು (ಬುಧವಾರ) ರಜೆಯಾಗಿರುವುದರಿಂದ ಗುರುವಾರ (ಮೇ 2) ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಗಾಗಿಯೇ ವಿಚಾರಣೆಗೆ ಹಾಜರಾಗದೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆ ಹೆಚ್ಚಿದೆ.

ಈ ಸಂಬಂಧ ಮಕ್ಕಳ ಹಕ್ಕು ಆಯೋಗದಿಂದ ಪತ್ರ ಬರೆಯಲಾಗಿದೆ. ದೂರುದಾರೆಯ ಮಗಳ ಹೇಳಿಕೆಯನ್ನು ಪಡೆಯಲು ತಯಾರಿ ನಡೆಸಲಾಗುತ್ತಿದೆ. ಮಕ್ಕಳ ಹಕ್ಕು ಆಯೋಗದ ಕೌನ್ಸಿಲರ್‌ಗಳ ಸಮ್ಮುಖದಲ್ಲಿ ಹೇಳಿಕೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ ಅಥವಾ ನಾಳೆ (ಮೇ 1 – 2) ಸಂತ್ರಸ್ತೆಯ ಮಗಳ ಹೇಳಿಕೆ ಪಡೆಯಲು ಮುಂದಾಗಲಾಗುತ್ತಿದೆ ಎನ್ನಲಾಗಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ವೇಳೆ ಏನಾದರೂ ಸಂತ್ರಸ್ತೆಯ ಮಗಳು ವ್ಯತಿರಿಕ್ತ ಹೇಳಿಕೆ ನೀಡಿದಲ್ಲಿ ಇಡಿ ಪ್ರಕರಣವೇ ಉಲ್ಟಾ ಆಗಲಿದೆ.

SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. “ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್!

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ.

ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟಿಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೋಟಿಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತಿಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

Continue Reading
Advertisement
Salman Khan
ಸಿನಿಮಾ6 mins ago

Salman Khan: ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

Hassan Pen Drive Case HDK behind Prajwal Pen Drive release DK Brothers allegations
ಹಾಸನ8 mins ago

Hassan Pen Drive Case: ಪ್ರಜ್ವಲ್‌ ಪೆನ್‌ಡ್ರೈವ್‌ ರಿಲೀಸ್‌ ಹಿಂದೆ ಎಚ್‌ಡಿಕೆ? ಡಿಕೆ ಬ್ರದರ್ಸ್‌ ಹೇಳಿದ ಸ್ಫೋಟಕ ಮಾಹಿತಿ ಏನು?

SMART Missile
ಪ್ರಮುಖ ಸುದ್ದಿ11 mins ago

SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Covishield vaccine supreme court
ಪ್ರಮುಖ ಸುದ್ದಿ21 mins ago

Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Kantara Movie Massive Set Constructed In Kundapura
ಸ್ಯಾಂಡಲ್ ವುಡ್24 mins ago

Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Drowned in water in raichur and karwar
ಕ್ರೈಂ31 mins ago

Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

Viral News
ವೈರಲ್ ನ್ಯೂಸ್33 mins ago

Viral News: ಕೊಲೆಯಾಗಿದ್ದಾರೆ ಎನ್ನಲಾದ ಸಹೋದರಿಯರು ವರ್ಷದ ಬಳಿಕ ಪತ್ತೆ; ಯಾವ ಸಿನಿಮಾಕ್ಕೂ ಕಡಿಮೆ ಇಲ್ಲ ಈ ಘಟನೆ

IPL 2024 Points Table
ಕ್ರೀಡೆ35 mins ago

IPL 2024 Points Table: 3ನೇ ಸ್ಥಾನಕ್ಕೇರಿದ ಲಕ್ನೋ; ಕುಸಿತ ಕಂಡ ಹಾಲಿ ಚಾಂಪಿಯನ್​ ಚೆನ್ನೈ

Hassan Pen Drive Case
ದೇಶ56 mins ago

Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

australia t20 world cup
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌