ಕರ್ನಾಟಕ
ವಿಸ್ತಾರ TOP 10 NEWS : ಮಕ್ಕಳಿಗೆ ಮೋದಿ ಮಾಸ್ಟರ್ ಪಾಠದಿಂದ, ಅದಾನಿ ಷೇರು ಆಘಾತದವರೆಗಿನ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. Pariksha pe charcha 2023: ಹಾರ್ಡ್ ವರ್ಕ್ ಮುಖ್ಯವೋ? ಸ್ಮಾರ್ಟ್ ವರ್ಕ್ ಮುಖ್ಯವೋ?; ಪ್ರಧಾನಿ ಮೋದಿ ಕೊಟ್ಟ ಉತ್ತರ ಹೀಗಿದೆ
ಮಕ್ಕಳ ಮೇಲೆ ಯಾವುದೇ ಕಾರಣಕ್ಕೂ ಒತ್ತಡ ಹೇರಬೇಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಲಕರಿಗೆ ಹೇಳಿದರು. ಅವರು ಇಂದು ನವದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ‘ಪರೀಕ್ಷಾ ಪೆ ಚರ್ಚಾ’ (Pariksha pe charcha 2023) ಸಂವಾದದಲ್ಲಿ ಮಾತನಾಡಿದರು. ಬೋರ್ಡ್ ಪರೀಕ್ಷೆ ಎದುರಿಸಲಿರುವ, ಆಯ್ದ ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರೊಂದಿಗೆ ಚರ್ಚೆ ನಡೆಸಿದ ಅವರು, ಮುಂಬರುವ ಪರೀಕ್ಷೆ ದೃಷ್ಟಿಯಿಂದ ಮಕ್ಕಳು, ಪಾಲಕರು, ಶಿಕ್ಷಕರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Pariksha Pe charcha 2023: ವಿದ್ಯಾರ್ಥಿಯೊಬ್ಬ ಕೇಳಿದ ಪ್ರಶ್ನೆಗೆ ‘ಇದು ಔಟ್ ಆಫ್ ಸಿಲೇಬಸ್’ ಎಂದ ಪ್ರಧಾನಿ ಮೋದಿ
2. Karnataka Election: ಯಡಿಯೂರಪ್ಪ ಎಲ್ಲರೂ ಒಪ್ಪಿರುವ ಧೀಮಂತ ನಾಯಕ; ಅವರಿಗೆ ಕಲ್ಲು ಹೊಡೆದರೆ ಬಿಜೆಪಿಗೆ ನಷ್ಟ: ವಿಜಯೇಂದ್ರ
ಬಿ.ಎಸ್. ಯಡಿಯೂರಪ್ಪನವರು ನಾಲ್ಕು ಬಾರಿ ಸಿಎಂ ಆಗಿ ಎಲ್ಲ ವರ್ಗದ ಜನರು ಒಪ್ಪಿಕೊಂಡ ಒಬ್ಬ ಧೀಮಂತ ನಾಯಕ, ರೈತ ನಾಯಕ, ಒಬ್ಬ ಹೋರಾಟಗಾರ. ಯಡಿಯೂರಪ್ಪನವರಿಗೆ ಕಲ್ಲು ಎಸೆದರೆ ಅದು ಪಕ್ಷಕ್ಕೆ ಹೊಡೆತ ಬೀಳುತ್ತದೆ. ಇದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಇಂಡಿ ತಾಲೂಕಿನ ಹೊರ್ತಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: Karnataka Election: ಬಿಜೆಪಿಗೆ ಬಿಎಸ್ವೈ ಅನಿವಾರ್ಯ; ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳಿ: ವರಿಷ್ಠರಿಗೆ 35ಕ್ಕೂ ಹೆಚ್ಚು ಶಾಸಕರ ಪತ್ರ
3. Adani Stocks : ವಂಚನೆಯ ಆರೋಪ, ಅದಾನಿ ಗ್ರೂಪ್ ಷೇರುಗಳಿಗೆ 46,000 ಕೋಟಿ ರೂ. ನಷ್ಟ, ಸಮೂಹ ಹೇಳಿದ್ದೇನು?
ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ಬುಧವಾರ ನಷ್ಟಕ್ಕೀಡಾಗಿದೆ. ಅಮೆರಿಕ ಮೂಲದ ಹಿಂಡೆನ್ಬರ್ಗ್ ರಿಸರ್ಚ್ ಸಂಸ್ಥೆಯು ಅದಾನಿ ಸಮೂಹವು (Gautam Adani) ಷೇರು ವ್ಯವಹಾರದಲ್ಲಿ ಅಕ್ರಮ ನಡೆಸಿದೆ ಎಂದು ಆರೋಪಿಸಿದೆ. ಇದರ ಬೆನ್ನಲ್ಲೇ ಗ್ರೂಪ್ನ ಷೇರುಗಳ ಮೌಲ್ಯದಲ್ಲಿ ಕುಸಿತ ಕಂಡುಬಂದಿದೆ. ( Adani Stocks) ಕಳೆದ ಎರಡು ವರ್ಷಗಳಿಂದ ಹಿಂಡೆನ್ಬರ್ಗ್ನ ವಿಧಿವಿಜ್ಞಾನ ಆರ್ಥಿಕ ಸಂಶೋಧನಾ ತಂಡ ತನ್ನ ತನಿಖೆಯನ್ನು ನಡೆಸುತ್ತಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. BBC Documentary On Modi: ದೆಹಲಿ ವಿವಿಯಲ್ಲಿ ಸಾಕ್ಷ್ಯಚಿತ್ರ ವೀಕ್ಷಣೆ, ಸೆಕ್ಷನ್ 144 ಜಾರಿ, 24 ವಿದ್ಯಾರ್ಥಿಗಳ ಬಂಧನ
ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿಯಾಗಿ ಚಿತ್ರಿಸಿರುವ ಇಂಡಿಯಾ: ದಿ ಮೋದಿ ಕ್ವಶ್ಚನ್ (India The Modi Question) ಬಿಬಿಸಿ ಡಾಕ್ಯುಮೆಂಟರಿಯ (BBC Documentary On Modi) ವೀಕ್ಷಣೆಗೆ ದೆಹಲಿ ವಿಶ್ವವಿದ್ಯಾಲಯದಲ್ಲೂ ವ್ಯವಸ್ಥೆ ಮಾಡಲಾಗಿದ್ದು, ವಿವಿ ಆವರಣದಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಾಗೆಯೇ, ಕಾನೂನು ಸುವ್ಯವಸ್ಥೆ ಪಾಲನೆ ದೃಷ್ಟಿಯಿಂದ ಪೊಲೀಸರು 24 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. ಕೊಟ್ಟ ಕುದುರೆ ಏರಲಾಗದ HDK; ಸಿದ್ಧೌಷಧ ಅರೆದಿದ್ದು ಸಿದ್ದು: ಸಮ್ಮಿಶ್ರ ಸರ್ಕಾರದ ಪತನ ಕುರಿತು ಮಾಜಿ ಸಿಎಮ್ಗಳ ಜಟಾಪಟಿ
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನದ ವಿಚಾರದಲ್ಲಿ ಇಬ್ಬರು ಮಾಜಿ ಸಿಎಂಗಳ ನಡುವೆ ಜಟಾಪಟಿ ನಡೆದಿದೆ. ಕುಮಾರಸ್ವಾಮಿ ಕೊಟ್ಟ ಕುದುರೆಯನ್ನು ಏರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರೆ, ಧರ್ಮಸ್ಥಳದ ಸಿದ್ಧವನದಲ್ಲಿ ಕುಳಿತು ಸರ್ಕಾವನ್ನು ಬೀಳಿಸಿದ್ದು ಸಿದ್ದರಾಮಯ್ಯ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Fake Marks Card: ದೇಶದ ವಿವಿಗಳ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ; 30 ಸಾವಿರಕ್ಕೆ ಸಿಗುತ್ತಿತ್ತು ವಿವಿ ಪದವಿ!
ದೇಶದ ಪ್ರತಿಷ್ಠಿತ ವಿವಿಗಳ ನಕಲಿ ಮಾರ್ಕ್ಸ್ ಕಾರ್ಡ್ಗಳ (Fake Marks Card) ಮಾರಾಟ ಜಾಲದ ಮೇಲೆ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇಶದ ೧೨ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ಸುಮಾರು 6,800ಕ್ಕೂ ಅಧಿಕ ಮಾರ್ಕ್ಸ್ ಕಾರ್ಡ್ಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, 25ರಿಂದ 30 ಸಾವಿರಕ್ಕೆ ಈ ಜಾಲದವರು ಪದವಿ ಪ್ರಮಾಣ ಪತ್ರವನ್ನು ನೀಡುತ್ತಿದ್ದರು ಎಂಬ ಸಂಗತಿಯೂ ಬಯಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. JDS Karnataka : ಎಲ್ಲ ಸೈಲೆಂಟಾಗಿರಿ; ನಾನೇ ಸರಿಮಾಡುವೆ: ಹಾಸನ ಸಮಸ್ಯೆ ಬಗೆಹರಿಸಲು ಸ್ವತಃ ಮೈದಾನಕ್ಕಿಳಿದ ಎಚ್.ಡಿ. ದೇವೇಗೌಡ
ಹಾಸನ ಜೆಡಿಎಸ್ನಲ್ಲಿ ಉದ್ಭವಿಸಿರುವ ಸಂಘರ್ಷವನ್ನು ಸರಿಪಡಿಸಲು (JDS Karnataka) ಸ್ವತಃ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರೇ ಮೈದಾನಕ್ಕಿಳಿದಿದ್ದಾರೆ. ತಾನೇ ಸಮಸ್ಯೆಯನ್ನು ಬಗೆಹರಿಸುತ್ತೇನೆ, ಎಲ್ಲರೂ ಮಾತನಾಡುವ ಬದಲು ಸುಮ್ಮನಿರಿ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. Ayush Doctors Demands: ಆಯುಷ್ ವೈದ್ಯರ ಕೆಲಸಕ್ಕೆ ಸಿಗದ ಸಮಾನ ವೇತನ; ಶ್ರೀನಿವಾಸಾಚಾರಿ ವರದಿ ಅನುಷ್ಠಾನಕ್ಕೆ ಪಟ್ಟು
ಓದಿದ್ದು ಒಂದೇ ಮಾದರಿಯ ಪಠ್ಯ, ನಿರ್ವಹಿಸುತ್ತಿರುವುದು ಒಂದೇ ಮಾದರಿಯ ಕೆಲಸವಾದರೂ ವೇತನದಲ್ಲಿ ಅಜಾಗಜಾಂತರ ವ್ಯತ್ಯಾಸ ಇದೆ. ಕಳೆದ ಹಲವಾರು ವರ್ಷಗಳಿಂದ ಹೋರಾಟ ನಡೆಸಿದರೂ ಆಯುಷ್ ವೈದ್ಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗದೆ (Ayush Doctors Demands) ಪರದಾಡುವಂತಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. BRO Road At LAC: ಚೀನಾಗೆ ತಿರುಗೇಟು ನೀಡಲು ಲಡಾಕ್ ಗಡಿಯಲ್ಲಿ ಭಾರತ 135 ಕಿ.ಮೀ ಹೆದ್ದಾರಿ ನಿರ್ಮಾಣ
ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಬಳಿ ಸೈನಿಕರನ್ನು ನಿಯೋಜಿಸಿ ಉಪಟಳ ಮಾಡುವ ಕುತಂತ್ರಿ ಚೀನಾ, ಗಡಿ ಬಳಿ ರಸ್ತೆ, ಗ್ರಾಮಗಳನ್ನು ನಿರ್ಮಿಸುವ ಮೂಲಕವೂ ಉದ್ಧಟತನ ಮಾಡುತ್ತದೆ. ಇದಕ್ಕೆ ಭಾರತ ತಿರುಗೇಟು ನೀಡುತ್ತಿದ್ದು, ಎಲ್ಎಸಿ ಬಳಿ 135 ಕಿ.ಮೀ ಹೆದ್ದಾರಿ (BRO Road At LAC) ನಿರ್ಮಿಸುವ ಕಾರ್ಯ ಆರಂಭಿಸಿದೆ. ಆ ಮೂಲಕ ವ್ಯೂಹಾತ್ಮಕವಾಗಿಯೂ ಚೀನಾಗೆ ಸೆಡ್ಡು ಹೊಡೆಯಲು ಮುಂದಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Bal Puarskar: ಬೆಂಗಳೂರಿನ 8 ವರ್ಷದ ಬಾಲಕ ರಿಷಿಗೆ ರಾಷ್ಟ್ರೀಯ ಬಾಲ ಪುರಸ್ಕಾರ, ಈತನ ಐಕ್ಯು ಐನ್ಸ್ಟೀನ್ಗಿಂತ ಹೆಚ್ಚು
ಆಟವಾಡುವ ವಯಸ್ಸಿನಲ್ಲಿ ಆ್ಯಪ್ ಡೆವಲಪ್ ಮಾಡಿದ ಬೆಂಗಳೂರು ಮೂಲದ, ಎಂಟು ವರ್ಷದ ಪೋರ ರಿಷಿ ಶಿವಪ್ರಸನ್ನಗೆ 2023ನೇ ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (Bal Puarskar) ದೊರೆತಿದೆ. ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಿ ಪ್ರಸನ್ನ ಸೇರಿ 11 ಬಾಲಕರಿಗೆ ಬಾಲ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ಹಾಗೆಯೇ, ಈತನಿಗೆ ಪ್ರಧಾನಿ ನರೇಂದ್ರ ಮೋದಿ ಅವರೂ ಶುಭ ಹಾರೈಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
Elephant trapped : ಮೂರು ತಿಂಗಳಿನಿಂದ ಸತಾಯಿಸುತ್ತಿರುವ 10 ವರ್ಷದ ಗಂಡಾನೆ ಕೊನೆಗೂ ಹನಿ ಟ್ರ್ಯಾಪ್ಗೆ ಬಿತ್ತು!
ತೀರ್ಥಹಳ್ಳಿ ತಾಲೂಕಿನ ಹಲವು ಕಡೆ ಬೆಳೆ ಹಾನಿ ಮಾಡುತ್ತಾ, ರಾಜಾರೋಷವಾಗಿ ಓಡಾಡುತ್ತಾ ಆತಂಕ ಹುಟ್ಟಿಸಿದ್ದ ಗಂಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಹನಿ ಟ್ರ್ಯಾಪ್ (Elephant trapped) ಬಳಸಿ ಹಿಡಿದಿದ್ದಾರೆ.
ತೀರ್ಥಹಳ್ಳಿ: ಪಟ್ಟಣದ ಕುರುವಳ್ಳಿ ರಾಮೇಶ್ವರ ದೇವಸ್ಥಾನದ ಬಳಿ ಡಿಸೆಂಬರ್ 31ರ ಮುಂಜಾನೆ ಕಾಣಿಸಿಕೊಂಡು ಕಳೆದ ಮೂರು ತಿಂಗಳಿನಿಂದ ಸತಾಯಿಸುತ್ತಿದ್ದ 10 ವರ್ಷ ಪ್ರಾಯದ ಗಂಡು ಕಾಡಾನೆಯನ್ನು ಅರಣ್ಯ ಇಲಾಖೆ ಕೊನೆಗೂ ಸೆರೆ (Elephant trapped) ಹಿಡಿದಿದೆ.
ಹಾರೋಗೊಳಿಗೆ, ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂದಗೆರೆ, ಅಮ್ತಿ, ಮಳೂರು, ಬಳಗಟ್ಟೆ, ಕೆರೆಕೊಪ್ಪ ಸುತ್ತಮುತ್ತಲಿನ ಸುಮಾರು 320 ಹೆಕ್ಟೇರ್ ಕಿರು ಅರಣ್ಯ ಪ್ರದೇಶದಲ್ಲಿ ಆನೆ ಮೂರು ತಿಂಗಳಿನಿಂದ ಬೀಡುಬಿಟ್ಟಿತ್ತು.
ಸುತ್ತಲಿನ ರೈತರ ತೋಟಗಳ ಬೆಳೆ ಹಾನಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆನೆ ಹಿಡಿಯುವಂತೆ ಅಗ್ರಹಿಸಿದ್ದರು. ಇಲ್ಲಿಯವರೆಗೆ ಈ ಆನೆ ಯಾವುದೇ ಜೀವ ಹಾನಿ ಮಾಡಿರಲಿಲ್ಲವಾದರೂ ಬೆಳೆ ಹಾನಿ ಮಾಡಿತ್ತು. ವಿಶೇಷ ಎಂದರೆ ಈ ಆನೆ ಹೆಚ್ಚಾಗಿ ಜನನಿಬಿಡ ಪ್ರದೇಶದಲ್ಲಿಯೇ ಹಾಜರು ಹಾಕುತ್ತಿತ್ತು.
ಹಾಗಾಗಿ ಹಿಡಿಯುವುದು ಅನಿವಾರ್ಯ ಆಗಿತ್ತು.
ಈ ಹಿನ್ನೆಲೆಯಲ್ಲಿ ಮಾರ್ಚ್ 24ರಂದು ಆನೆ ಹಿಡಿಯುವ ಕಾರ್ಯಾಚರಣೆ ಆರಂಭಗೊಂಡಿತ್ತು. ಆನೆ ಹಿಡಿಯಲು ಸೆಣಬು, ಚೈನ್, ಅರಿವಳಿಕೆ ಮದ್ದು, ಕ್ರೇನ್, ಸಾಕಾನೆ, ಮಚಾನ್ ಮುಂತಾದ ಅಗತ್ಯತೆಗಳನ್ನು ಸಿದ್ಧಪಡಿಸಿದ್ದರು. ಆನೆ ಹೆಜ್ಜೆ ಗುರುತು ಇರುವ ಪ್ರದೇಶದ ಯಾವುದು ಎಂದು ಗುರುತಿಸಲು ಸಿಬ್ಬಂದಿ ಮೊದಲು ಕೂಂಬಿಂಗ್ ಮಾಡಿಕೊಂಡಿದ್ದರು. ನಂತರ ಸಾಕಾನೆಗಳ ಸಹಾಯದಿಂದ ಆನೆಗೆ ಡಾಟ್ (ಶೂಟ್ ಮೂಲಕ ಅರಿವಳಿಕೆ ನೀಡುವುದು) ಮಾಡುವ ಪ್ರಯತ್ನ ನಡೆಸಿದ್ದರು.
ಆದರೆ ಈ ಗಂಡಾನೆ ವೇಗವಾಗಿ ನಾಪತ್ತೆಯಾಗುತ್ತಿದ್ದ ಕಾರಣ ತಕ್ಷಣಕ್ಕೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಗುರುವಾರ ಸಂಜೆ ಸುಮಾರು 6.30ರಿಂದ 7 ಗಂಟೆ ಸುಮಾರಿಗೆ ಆನೆಗೆ ಮೊದಲ ಡಾಟ್ ನೀಡಲಾಗಿತ್ತು. ಕೆಲವು ನಿಮಿಷಗಳ ನಂತರ ಮತ್ತೊಂದು ಬೂಸ್ಟರ್ ಡಾಟ್ ನೀಡಿ ಆನೆಯ ಕಾಲುಗಳನ್ನು ಕಟ್ಟಲಾಗಿತ್ತು. ಶುಕ್ರವಾರ ಬೆಳಿಗ್ಗೆ ಕ್ರೇನ್ ಸಹಾಯದಿಂದ ಆನೆಯನ್ನು ಲಾರಿಗೆ ಹತ್ತಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಪಶು ವೈದ್ಯರಾದ ಚಾಮರಾಜನಗರದ ಡಾ. ಮುಜೀಬ್ ರೆಹಮಾನ್, ಬಂಡೀಪುರದ ಡಾ. ವಸೀಮ್, ಶಿವಮೊಗ್ಗದ ಡಾ. ವಿನಯ್, ಮೃಗಾಲಯದ ವೈದ್ಯ ಡಾ. ಮುರುಳಿ, ಶಾರ್ಪ್ ಶೂಟರ್ ಡಾ. ಅಕ್ರಮ್ ಕಾಡಾನೆಯನ್ನು ಸೆರೆ ಹಿಡಿಯಲು ವೈದ್ಯಕೀಯ ತಂಡವಾಗಿ ಕಾರ್ಯ ನಿರ್ವಹಿಸಿದ್ದರು.
ಸಕ್ರೇಬೈಲು ಆನೆ ಬಿಡಾರದ 4 ಆನೆಗಳಾದ ಭಾನುಮತಿ, ಸಾಗರ್, ಬಾಲಣ್ಣ, ಬಹದ್ದೂರ್, ನಾಲ್ವರು ಮಾವುತರು, ಎಂಟು ಮಂದಿ ಕಾವಾಡಿಗಳು, ತೀರ್ಥಹಳ್ಳಿ, ಮೇಗರವಳ್ಳಿ, ಮಂಡಗದ್ದೆ ವಲಯಾರಣ್ಯದ ಸಿಬ್ಬಂದಿ, ಎಸಿಎಫ್ ಪ್ರಕಾಶ್ ಹಾಗೂ ವನ್ಯಜೀವಿ ವಿಭಾಗದ ಸಹಕಾರದಲ್ಲಿ ಆನೆಯನ್ನು ಸೆರೆಹಿಡಿಯಲಾಗಿದೆ ಎಂದು ಡಿಎಫ್ಒ ಶಿವಶಂಕರ್ ತಿಳಿಸಿದ್ದಾರೆ.
ಸಾಕು ಹೆಣ್ಣಾನೆ ಭಾನುಮತಿ ಬಳಸಿ ಕಾಡಲ್ಲಿರುವ ಆನೆಯನ್ನು ಸೆಳೆಯುವ ತಂತ್ರವನ್ನು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯೋಗ ಮಾಡಿದ್ದಾರೆ. ಹನಿ ಟ್ರ್ಯಾಪ್ಗಾಗಿ ಹೆಣ್ಣಾನೆಯನ್ನು ಕಾಡಾನೆ ಓಡಾಡುವ ಸ್ಥಳಗಳಲ್ಲಿ ಕಟ್ಟಲಾಗುತ್ತದೆ. ವಾಸನೆ ಗ್ರಹಿಸಿ ಸುತ್ತಲ ಪ್ರದೇಶಲ್ಲಿ ಹೆಣ್ಣಾನೆ ಇರುವುದನ್ನು ಗಂಡಾನೆಗಳು ಗ್ರಹಿಸುತ್ತವೆ.
ಇದೇ ರೀತಿ ಮಧ್ಯ ಕಾಡಿನಿಂದ ಡಾಟ್ಗೆ ಅನುಕೂಲವಾಗುವ ಕಡೆಗೆ ಹೆಣ್ಣಾನೆಯನ್ನು ಓಡಾಡಿಸಿ ಒಂದು ಪ್ರದೇಶದಲ್ಲಿ ಕಟ್ಟುತ್ತಾರೆ. ಆನೆ ಬರುವ ಸಾಧ್ಯತೆ ಇದ್ದರೆ ವೈದ್ಯರ ತಂಡ ಮಚಾನ್ ನಿರ್ಮಿಸಿ ರಾತ್ರಿ ಕಾವಲು ಕಾಯುತ್ತಾರೆ. ಕಾಡಾನೆ ಕಂಡು ಬಂದ ತಕ್ಷಣ ಅರವಳಿಕೆ ನೀಡಿ ಸೆರೆ ಹಿಡಿಯಲಾಗುತ್ತದೆ. ಈಗ ಇಲ್ಲಿ ಸೆರೆ ಹಿಡಿದ ಕಾಡಾನೆಯನ್ನು ನಾಗರಹೊಳೆ ಅಭಯಾರಣ್ಯದಲ್ಲಿ ಬಿಡಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ.
ಇದನ್ನೂ ಓದಿ : Elephant calf rescued : ತಾಯಿಯಿಂದ ಬೇರ್ಪಟ್ಟು ಡ್ಯಾಂ ಬಳಿ ಬಂದಿದ್ದ ಮರಿಯಾನೆ, ಮತ್ತೆ ಹಿಂಡಿಗೆ ಸೇರಿಸಿದ ಜನ
ಕರ್ನಾಟಕ
Karnataka Election 2023: ಚುನಾವಣೆ ಹಿನ್ನೆಲೆ ಹಣದ ಹೊಳೆ, ದಾಖಲೆ ಇಲ್ಲದ 6 ಕೋಟಿ ರೂ., 17 ಕೆಜಿ ಚಿನ್ನ, ಬೆಳ್ಳಿ ವಶ
Karnataka Election 2023: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಅಧಿಕಾರಿಗಳು ನಿತ್ಯ ಕೋಟ್ಯಂತರ ರೂಪಾಯಿಯನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಮಾರ್ಚ್ 31ರಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋಟ್ಯಂತರ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ (Karnataka Election 2023) ಮುಹೂರ್ತ ನಿಗದಿಯಾಗುತ್ತಲೇ ರಾಜ್ಯಾದ್ಯಂತ ಹಣದ ಹೊಳೆಯೇ ಹರಿಯುತ್ತಿದೆ. ಚುನಾವಣೆ ಪ್ರಚಾರಕ್ಕಾಗಿ ಅಭ್ಯರ್ಥಿಗಳು ಕೋಟಿ ಕೋಟಿ ರೂಪಾಯಿಯನ್ನು ಸಾಗಣೆ ಮಾಡುತ್ತಿದ್ದಾರೆ. ಆದರೂ, ಅಧಿಕಾರಿಗಳ ಹದ್ದಿನ ಕಣ್ಣಿನಿಂದ ಕೋಟ್ಯಂತರ ರೂಪಾಯಿಯನ್ನು ಸಾಗಣೆ ಮಾಡುವುದು ಕಷ್ಟವಾಗುತ್ತಿದೆ. ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಕೋಟಿ ಕೋಟಿ ರೂಪಾಯಿಯನ್ನು ಜಪ್ತಿ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲೆ ಇಲ್ಲದ 6.44 ಕೋಟಿ ರೂಪಾಯಿ ಹಾಗೂ 17 ಕೆಜಿ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ಹಣ ಹಾಗೂ ಚಿನ್ನ ಜಪ್ತಿ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್ಪೋಸ್ಟ್ನಲ್ಲಿ ಅಧಿಕಾರಿಗಳು ಟಾಟಾ ಏಸ್ ವಾಹನವನ್ನು ತಪಾಸಣೆ ಮಾಡಿದ್ದಾರೆ. ಇದೇ ವೇಳೆ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ, ಚಿನ್ನ ಹಾಗೂ ಬೆಳ್ಳಿ ದೊರೆತಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಬೆಂಗಳೂರಿನಲ್ಲಿ 30 ಲಕ್ಷ ರೂ. ಪತ್ತೆ
ಬೆಂಗಳೂರು: ನಗರದ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದ 30 ಲಕ್ಷ ರೂಪಾಯಿ ಪತ್ತೆಯಾಗಿದೆ. ಲಾಲ್ ಬಾಗ್ ದಕ್ಷಿಣ ಗೇಟ್ ಬಳಿ ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದಾಗ ಪೊಲೀಸರು ಇಬ್ಬರನ್ನು ಬಂಧಿಸಿ, ಹಣ ಜಪ್ತಿ ಮಾಡಿದ್ದಾರೆ. ಬಂಧಿತರನ್ನು ಗುಜರ್ ಹಾಗೂ ರತನ್ ಗುಪ್ತಾ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗದಲ್ಲಿ 1.39 ಕೋಟಿ ರೂ. ವಶಕ್ಕೆ
ಶಿವಮೊಗ್ಗ: ಜಿಲ್ಲೆಯ ಹರಕೆರೆ ಚೆಕ್ ಪೋಸ್ಟ್ನಲ್ಲಿ 1.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ವಾಹನ ತಪಾಸಣೆ ನಡೆಸುತ್ತಿರುವ ವೇಳೆ ನಗದು ಪತ್ತೆಯಾಗಿದೆ. ಯಾವುದೇ ದಾಖಲೆಯಿಲ್ಲದೆ ಬೊಲೆರೋ ವಾಹನದಲ್ಲಿ ಹಣ ಸಾಗಿಸಲಾಗುತ್ತಿತ್ತು. ಹಾಗಾಗಿ, ಪೊಲೀಸರು ಹಣ ಮತ್ತು ಚಾಲಕ ರವಿ ಮುಡಬೂಳ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿಯಲ್ಲಿ 1 ಕೋಟಿ ರೂಪಾಯಿ ಜಪ್ತಿ
ಕಲಬುರಗಿ: ತಾಲೂಕಿನ ಅಫಜಲಪುರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪರತಾಬಾದ್ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ 1 ಕೋಟಿ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದ ನಿವಾಸಿ ರವಿ ಮುಡಬೂಳ ಎಂಬುವವರು ಯಾವುದೇ ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಕೊಂಡ್ಯೊಯುತ್ತಿದ್ದರು. ಸದ್ಯ ಒಂದು ಕೋಟಿ ರೂಪಾಯಿ ಜತೆಗೆ ರವಿ ಅವರನ್ನೂ ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಇಷ್ಟು ಮೊತ್ತದ ಹಣವನ್ನು ಎಲ್ಲಿಂದ, ಎಲ್ಲಿಗೆ ಸಾಗಾಟ ಮಾಡಲಾಗುತ್ತಿದೆ. ಯಾವ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಪರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಕರ್ನಾಟಕ
Communal Harmony : ಉರೂಸ್ ಸಂಭ್ರಮದಲ್ಲಿ ಹಿಂದೂ ಶ್ರೀಗಳನ್ನು ಗೌರವಿಸಿ ಭಾವೈಕ್ಯತೆ ಮೆರೆದ ಮುಸ್ಲಿಮರು
ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮ ಸೌಹಾರ್ದ (Communal harmony) ಪರಂಪರೆಯ ಕೊಂಡಿಯಾಗಿ ಸಮಾಜಕ್ಕೆ ದೊಡ್ಡ ಸಂದೇಶವನ್ನು ನೀಡಿತು. ಉರೂಸ್ ಸಂದರ್ಭದಲ್ಲಿ ಹಿಂದು ಸ್ವಾಮೀಜಿಗಳನ್ನು ಇಲ್ಲಿ ಗೌರವಿಸಲಾಯಿತು, ಆಶೀರ್ವಾದ ಪಡೆಯಲಾಯಿತು.
ವಿಜಯನಗರ: ಧರ್ಮ ಧರ್ಮಗಳ ನಡುವೆ ಸಂಘರ್ಷ, ಒಂದು ಧರ್ಮದ ಜಾತ್ರೆಗೆ ಇನ್ನೊಬ್ಬರು ಹೋಗಬಾರದು, ವ್ಯಾಪಾರ ಮಾಡಬಾರದು ಎನ್ನುವ ಧರ್ಮ ದಂಗಲ್ಗಳ ನಡುವೆ ಹೂವಿನಹಡಗಲಿ ಸೌಹಾರ್ದದ (Communal Harmony) ಸಂಭ್ರಮಕ್ಕೆ ಸಾಕ್ಷಿಯಾಯಿತು.
ಹೂವಿನಹಡಗಲಿ ತಾಲೂಕು ಹೊಳಲು ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಭಾಂದವರ ಭಾವೈಕ್ಯ ಸಂಗಮವಾದ ಗುರು ಹಜರತ್ ಮೆಹಬೂಬ ಸುಭಾನಿಗಳವರ ಉರೂಸು ಕಾರ್ಯಕ್ರಮ ವೈಭವದಿಂದ ಜರುಗಿತು. ಸೌಹಾರ್ದತೆಗೆ ಸಾಕ್ಷಿಯಾಗಿ ಗಮನ ಸೆಳೆದಿರುವ ಉರೂಸು ಆಚರಣೆಗೆ ಮುಸ್ಲಿಂ ಬಾಂದವರು ಗ್ರಾಮದ ವಿರಕ್ತ ಮಠದ ಶ್ರೀ ಚನ್ನಬಸವ ಶ್ರೀಗಳನ್ನು ಶ್ರದ್ಧಾ ಭಕ್ತಿಯಿಂದ ದರ್ಗಾಕ್ಕೆ ಬರಮಾಡಿಕೊಂಡು ದರ್ಶನಾಶೀರ್ವಾದ ಪಡೆದರಲ್ಲದೆ ಶ್ರೀಗಳ ಜೊತೆ ಹಿಂದೂ ಮುಖಂಡರನ್ನು ಗೌರವಿಸಿ ಸನ್ಮಾನಿಸಿದರು.
ಈವೇಳೆ ಹಿರಿಯರಾದ ಮುಜಾವರ್ ಇಮಾಮ್ ಸಾಬ್ ಮಾತನಾಡಿ, ʻನಮ್ಮ ಗ್ರಾಮದ ನೂತನ ಮಠಕ್ಕೆ ಚನ್ನಬಸವ ಶ್ರೀಗಳ ಆಗಮನ ಹೊಸ ಚೈತನ್ಯವನ್ನುಂಟು ಮಾಡಿದೆ. ಕೆಲ ವರ್ಷದಿಂದ ಸ್ವಲ್ಪ ಮರೀಚಿಕೆಯಾಗಿದ್ದ ಭಾವೈಕ್ಯತೆಗೆ ಮತ್ತೆ ಹೊಸ ಚಿಗುರು ಬಂದಂತಾಗಿದೆ. ಹಿಂದೂ ಮತ್ತು ಮುಸ್ಲಿಂ ಬಾಂದವರಿಗೆ ಶ್ರೀಗಳು ಕೊಂಡಿಯಾಗಿ ಸಮಾಜದ ಎಲ್ಲಾ ಮತ ಬಾಂಧವರಿಗೆ ಸದಾ ನೆರಳಾಗಿರಲಿʼ ಎಂದು ಆಶಯ ವ್ಯಕ್ತಪಡಿಸಿದರು.
ಉರೂಸು ಅಂಗವಾಗಿ ಹರಕೆ ಹೊತ್ತ ಭಕ್ತರು ದೀಡ ನಮಸ್ಕಾರ ಹಾಕಿದರು. ಸಂತಾನ ಫಲ ಬೇಡಿದ ಭಕ್ತರು ತಮಗೆ ಸಂತಾನವಾದ ಮಗುವಿನ ತೂಕದ ಸಕ್ಕರೆಯನ್ನು ಸ್ವಾಮಿಗೆ ಅರ್ಪಿಸಿ ಕೃಪೆಯನ್ನು ಪಡೆದರು.
ರೈತ ಬಾಂಧವರು ತಮ್ಮ ಎತ್ತುಗಳನ್ನು ಶೃಂಗರಿಸಿ ಚಕ್ಕಡಿ ಹೂಡಿ ದರ್ಗಾಕ್ಕೆ ಬರುವ ಭಕ್ತರಿಗೆ ಬೆಲ್ಲದ ಸಿಹಿ ನೀರು ಹಂಚುವುದರ ಮೂಲಕ ಸೇವೆ ಸಲ್ಲಿಸಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮದಲ್ಲಿ ಹೊಳಲು ಹಾಗೂ ಸುತ್ತ ಮುತ್ತಗ್ರಾಮದ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮಾಜ ಬಾಂಧವರು ಇದ್ದರು.
ಇದನ್ನೂ ಓದಿ :Communal harmony : ಹಿಂದೂ ಮಹಿಳೆಯ ಶವಕ್ಕೆ ಹೆಗಲು ಕೊಟ್ಟ ಮುಸ್ಲಿಂ ಯುವಕರು, ಅನಾಥೆಗೆ ಗೌರವದ ಅಂತ್ಯ ಸಂಸ್ಕಾರ
ಕರ್ನಾಟಕ
Suicide case : ಮೊಬೈಲ್ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ, ಆ ಮನೆಯಲ್ಲಿ ಇದು ಮೂರನೇ ಸುಸೈಡ್!
ಮನೆಯಲ್ಲಿ ಒಂಟಿಯಾಗಿದ್ದು, ವಿದ್ಯುತ್ ಲೈನ್ ಕೆಲಸಕ್ಕೆ ಹೋಗುತ್ತಿದ್ದ 27ರ ಯುವಕ ಮೊಬೈಲ್ನಲ್ಲಿ ಸ್ಟೇಟಸ್ (Whatsapp status) ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಟೇಟಸ್ ನೋಡಿದವರು ಅಲ್ಲಿಗೆ ತಲುಪುವಾಗ ಪ್ರಾಣಪಕ್ಷಿ ಹಾರಿ ಹೋಗಿತ್ತು.
ನೆಲ್ಯಾಡಿ: ಯುವಕನೊಬ್ಬ ಮೊಬೈಲ್ನಲ್ಲಿ ಸ್ಟೇಟಸ್ (Whatsapp status)ಹಾಕಿ ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಚ್ಲಂಪಾಡಿ ಗ್ರಾಮದಲ್ಲಿ ಮಾರ್ಚ್ 30ರ ಮಧ್ಯರಾತ್ರಿ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಮೊಂಟೆತ್ತಡ್ಕ ನಿವಾಸಿ ರೆನೀಶ್ (27) ಮೃತ ಯುವಕ. ಈತನ ತಂದೆ ಕೆಲವು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈತನ ಸಹೋದರ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ಕೆಲಸಕ್ಕೆ ಹೋಗುತ್ತಿದ್ದ. ಮಾ.30ರಂದು ರಾತ್ರಿ ಪಕ್ಕದ ಉಣ್ಣಿಕೃಷ್ಣನ್ ನಾಯರ್ ಎಂಬವರ ಮನೆಯಲ್ಲಿ ಊಟ ಮಾಡಿ, ಕೇರಂ ಆಡಿ ಮನೆಗೆ ಹೋಗಿದ್ದ.
ಮಧ್ಯರಾತ್ರಿ 12 ಗಂಟೆ ವೇಳೆಗೆ ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್ನಲ್ಲಿ ಸ್ಟೇಟಸ್ ಬರೆದುಕೊಂಡು ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದ. ಈತನ ಸ್ಟೇಟಸ್ ನೋಡಿದ್ದ ಬೆಂಗಳೂರಿನಲ್ಲಿರುವ ಗೆಳೆಯರು ಉಣ್ಣಿಕೃಷ್ಣನ್ರವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು.
ಅವರೂ ರೆನೀಶ್ ಮನೆಗೆ ತಲುಪುವುದರೊಳಗೆ ಆತ ಮರಕ್ಕೆ ನೇಣುಬಿಗಿದುಕೊಂಡಿದ್ದ. ತಕ್ಷಣ ಹಗ್ಗ ಬಿಚ್ಚಿ ಪುತ್ತೂರಿನ ಆಸ್ಪತ್ರೆಗೆ ಕರೆ ತರಲಾಯಿತಾದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 21ರ ಮಹಿಳೆ; ಕೌಟುಂಬಿಕ ಕಲಹ ಶಂಕೆ
ಶಿವಮೊಗ್ಗ: ಇಲ್ಲಿನ ಮಿಳಘಟ್ಟದ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide Case) ಶರಣಾಗಿದ್ದಾರೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ. ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ :Bangalore horror : 19ರ ಯುವತಿಯನ್ನು ಎಳೆದೊಯ್ದು ಚಲಿಸುವ ಕಾರಿನಲ್ಲೇ ನಾಲ್ಕು ಗಂಟೆ ಕಾಲ ನಿರಂತರ ಅತ್ಯಾಚಾರ
-
ದೇಶ21 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ21 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಗ್ಯಾಜೆಟ್ಸ್11 hours ago
Aadhaar Update: ಆನ್ಲೈನ್ನಲ್ಲಿ ಆಧಾರ್ ಅಪ್ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ
-
ಅಂಕಣ22 hours ago
ಗೋ ಸಂಪತ್ತು: ಆಹಾರವಾಗಿ ಮಾತ್ರವಲ್ಲ, ಔಷಧವಾಗಿಯೂ ಮಜ್ಜಿಗೆಗೆ ಮಹತ್ವವಿದೆ!
-
ಅಂಕಣ22 hours ago
Brand story : ಚೀನಾದ ಇ-ಕಾಮರ್ಸ್ ದಿಗ್ಗಜ ಅಲಿಬಾಬಾ, 6 ಕಂಪನಿಗಳಾಗಿ ವಿಭಜನೆಯಾಗುತ್ತಿರುವುದೇಕೆ?
-
ಕರ್ನಾಟಕ12 hours ago
B.Y. Vijayendra: ಯಾವುದೇ ಕಾರಣಕ್ಕೆ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ: ಗೊಂದಲಕ್ಕೆ ತೆರೆಯೆಳೆದ ಯಡಿಯೂರಪ್ಪ
-
ದೇಶ13 hours ago
Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್ಗೆ 25 ಸಾವಿರ ರೂ. ದಂಡ!
-
ಕರ್ನಾಟಕ15 hours ago
SSLC Exam 2023: ಕಲಬುರಗಿಯಲ್ಲಿ ಎಸ್ಎಸ್ಎಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ವಾಟ್ಸಾಪ್ನಲ್ಲಿ ಹರಿದಾಡಿದ ಕನ್ನಡ ಪೇಪರ್