vistara top 10 news nation ahead in tiger conservation to save nandini campain and more newsವಿಸ್ತಾರ TOP 10 NEWS: ಹುಲಿ ಸಂರಕ್ಷಣೆಯಲ್ಲಿ ದಾಪುಗಾಲಿನಿಂದ, ನಂದಿನಿ-ಅಮುಲ್‌ ಹಗ್ಗಜಗ್ಗಾಟವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS: ಹುಲಿ ಸಂರಕ್ಷಣೆಯಲ್ಲಿ ದಾಪುಗಾಲಿನಿಂದ, ನಂದಿನಿ-ಅಮುಲ್‌ ಹಗ್ಗಜಗ್ಗಾಟವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news nation ahead in tiger conservation to save nandini campaign and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Modi in Karnataka: ದೇಶದಲ್ಲೀಗ 3,167 ಹುಲಿ; ಹತ್ತು ವರ್ಷದಲ್ಲಿ ಡಬಲ್‌: IBCAಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
ಭಾರತದಲ್ಲಿ 50 ವರ್ಷದ ಹಿಂದೆ ಆರಂಭಿಸಿದ ಹುಲಿ ಸಂರಕ್ಷಣೆ ಕಾರ್ಯಕ್ರಮ ಫಲಪ್ರದವಾಗಿದ್ದು, ಕಳೆದ ಹತ್ತು ವರ್ಷದಲ್ಲೇ ಹುಲಿಗಳ ಸಂಖ್ಯೆ ಡಬಲ್‌ ಆಗಿದೆ. ಈ ವರ್ಷದ ಹುಲಿ ಅಂಕಿ ಅಂಶವನ್ನು ಪ್ರಧಾನಿ ಘೋಷಣೆ ಮಾಡಿದರು. 2006ರಲ್ಲಿ 1,411 ಹುಲಿಗಳಿದ್ದವು. ಈ ಸಂಖ್ಯೆ 2010ರಲ್ಲಿ 1,706, 2014ರಲ್ಲಿ 2,967 ಆಗಿತ್ತು. 2022ರ ಸಮೀಕ್ಷೆಯಂತೆ ಇದೀಗ ಭಾರತದಲ್ಲಿ 3,167 ಹುಲಿಗಳಿವೆ ಎಂದು ತಿಳಿಸಿದರು. 2010ರಲ್ಲಿ ರಷ್ಯಾದ ಸೈಂಟ್‌ ಪೀಟರ್ಸ್‌ಬರ್ಗ್‌ನಲ್ಲಿ ನಡೆದಿದ್ದ ಟೈಗರ್‌ ಫೋರಂನಲ್ಲಿ, ಮುಂದಿನ 10 ವರ್ಷದಲ್ಲಿ ಹುಲಿಗಳ ಸಂಖ್ಯೆಯನ್ನು ದುಪ್ಪಟ್ಟು ಮಾಡುವ ಸಂಕಲ್ಪವನ್ನು ರಾಷ್ಟ್ರಗಳು ಮಾಡಿದ್ದವು. ಸಮಯಕ್ಕೂ ಮೊದಲೇ ಭಾರತ ಗುರಿ ಸಾಧಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Narendra Modi: ದಿ ಎಲಿಫೆಂಟ್‌ ವಿಸ್ಪರರ್ಸ್‌ ಖ್ಯಾತಿಯ ಬೊಮ್ಮ-ಬೆಳ್ಳಿ ದಂಪತಿ ಜತೆ ಮೋದಿ ಮಾತು, ಆನೆ ಸಂರಕ್ಷಣೆಗೆ ಮೆಚ್ಚುಗೆ

2. Karnataka Politics: ಆರ್‌ಎಸ್‌ಎಸ್‌ ಮತ್ತು ಹಿಂದು ಮಹಾಸಭಾ ನಿಯಂತ್ರಣದಲ್ಲಿ ಬಿಜೆಪಿ: ಸಿದ್ದರಾಮಯ್ಯ ಹೇಳಿಕೆ
ಸಮಸಮಾಜ ನಿಯಂತ್ರಣವಾದರೆ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದು ಬಿಜೆಪಿಯವರು ಚಿಂತನೆ ನಡೆಸಿದ್ದು, ಬಿಜೆಪಿಯನ್ನು ಆರ್‌ಎಸ್‌ಎಸ್‌ ಮತ್ತು ಹಿಂದು ಮಹಾಸಭಾ ನಿಯಂತ್ರಿಸುತ್ತವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Save Nandini:‌ ಕನ್ನಡ ಬಳಸುತ್ತಿರುವುದಕ್ಕೇ ನಂದಿನಿಯನ್ನು ನಾಶಪಡಿಸಲು ಬಿಜೆಪಿ ಮುಂದಾಗಿದೆ: ಎಐಸಿಸಿ ವಕ್ತಾರ ಗೌರವ್‌ ವಲ್ಲಭ್‌
ನಂದಿನಿ ಉತ್ಪನ್ನದಲ್ಲಾಗಲಿ, ಸರಬರಾಜಿನಲ್ಲಾಗಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಬರೆಯಲಾಗಿದೆ ಎನ್ನುವುದೇ ಅಮಿತ್‌ ಶಾ ಹಾಗೂ ನರೇಂದ್ರ ಮೋದಿ ಇದನ್ನು ನಾಶಪಡಿಸಲು ಮುಂದಾಗಿರುವುದಕ್ಕೆ ಪ್ರಮುಖ ಕಾರಣ ಎಂದು ಎಐಸಿಸಿ ವಲ್ತಾರ ಗೌರವ್‌ ವಲ್ಲಭ್‌ ಆರೋಪಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Nandini vs Amul: ಅಮುಲ್ ಜತೆ ನಂದಿನಿ ವಿಲೀನ ಪ್ರಸ್ತಾಪವೇ ಇಲ್ಲ: ಸಚಿವ ಎಸ್.ಟಿ. ಸೋಮಶೇಖರ್

4. Sachin Pilot: ಭ್ರಷ್ಟಾಚಾರ ವಿರುದ್ಧ ಸತ್ಯಾಗ್ರಹಕ್ಕೆ ಪೈಲಟ್ ಸಿದ್ಧತೆ; ರಾಜಸ್ಥಾನದಲ್ಲಿ ಮತ್ತೆ ಗೆಹ್ಲೋಟ್-ಸಚಿನ್ ಜಟಾಪಟಿ
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಮತ್ತು ಕಾಂಗ್ರೆಸ್‌ನ ಯುವ ನಾಯಕ ಸಚಿನ್ ಪೈಲಟ್ (Sachin Pilot) ನಡುವಿನ ಮುಸುಕಿನ ಗುದ್ದಾಟ ನಿಲ್ಲುವಂತಿಲ್ಲ ಕಾಣುತ್ತಿಲ್ಲ. ಈ ಇಬ್ಬರೂ ನಾಯಕರು ಪರಸ್ಪರ ಆಗಾಗ ವಾಗ್ವಾದಲ್ಲಿ ತೊಡಗಿಕೊಳ್ಳುತ್ತಾರೆ. ಈಗ ಸಚಿನ್ ಪೈಲಟ್ ಅವರು, ಭ್ರಷ್ಟಾಚಾರದ ವಿರುದ್ದ ಸತ್ಯಾಗ್ರಹ ನಡೆಸುವುದಾಗಿ ಹೇಳುವ ಮೂಲಕ ಸಿಎಂ ಗೆಹ್ಲೋಟ್ ವಿರುದ್ಧ ತೊಡೆ ತೊಟ್ಟಿದ್ದಾರೆ. ಮಂಗಳವಾರ ಅವರು ಒಂದು ದಿನ ಸತ್ಯಾಗ್ರಹ ನಡೆಸಲಿದ್ದಾರೆ. ಈ ಹಿಂದಿನ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರ ನಡೆಸಿರುವ ಭ್ರಷ್ಟಾಚಾರ ಪ್ರಕರಣಗಳ ತನಿಖೆಯನ್ನು ಗೆಹ್ಲೋಟ್ ಸರ್ಕಾರ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. IPL 2023 : ಮಿಂಚಿದ ರಿಂಕು ಸಿಂಗ್​; ಚಾಂಪಿಯನ್​ ಗುಜರಾತ್ ವಿರುದ್ಧ ಕೆಕೆಆರ್​ ಬಳಗಕ್ಕೆ ರೋಚಕ ಗೆಲುವು
ಚಾಂಪಿಯನ್​ ಗುಜರಾತ್​ ತಂಡದ ವಿರುದ್ಧದ ಗೆಲುವಿಗೆ ಕೊನೇ ಓವರ್​ನಲ್ಲಿ ಕೋಲ್ಕೊತಾ ನೈಟ್​ ರೈಡರ್ಸ್​ ತಂಡಕ್ಕೆ 29 ರನ್​ ಬೇಕಾಗಿತ್ತು. ಕೆಕೆಆರ್​ ಬ್ಯಾಟರ್​ ರಿಂಕು ಸಿಂಗ್​ (ಅಜೇಯ 48 ರನ್​, 21 ಎಸೆತ, 6 ಸಿಕ್ಸರ್, 1 ಫೋರ್​) ಕೊನೇ ಐದು ಎಸೆತಗಳಲ್ಲಿ ಸಿಕ್ಸರ್​ ಸಿಡಿಸುವ ಮೂಲಕ 30 ರನ್​ ತಂದುಕೊಟ್ಟರು. ಅಲ್ಲದೆ, ಇನಿಂಗ್ಸ್​ನ ಕೊನೇ ಓವರ್​ನಲ್ಲಿ ಒಟ್ಟು 31 ರನ್​ ಬಾರಿಸಿದ ಕೆಕೆಆರ್​ ತಂಡ ಮೂರು ವಿಕೆಟ್​ ರೋಚಕ ವಿಜಯ ದಾಖಲಿಸಿತು.  ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. ಗ್ಯಾಂಗ್​ಸ್ಟರ್​ಗಳ ಪ್ಯಾಂಟ್​ ಒದ್ದೆಯಾಗುತ್ತಿದೆ, ಜೀವ ಉಳಿಸಿಕೊಳ್ಳಲು ಓಡುತ್ತಿದ್ದಾರೆ: ಸಿಎಂ ಯೋಗಿ ಆದಿತ್ಯನಾಥ್​
ಉತ್ತರ ಪ್ರದೇಶದಲ್ಲಿ ಗ್ಯಾಂಗ್​ಸ್ಟರ್​​ಗಳು ಕೋರ್ಟ್​ನಿಂದ ಶಿಕ್ಷೆ ಪಡೆದ ಬೆನ್ನಲ್ಲೇ ತಮ್ಮ ಪ್ಯಾಂಟ್ ಒದ್ದೆ ಮಾಡಿಕೊಳ್ಳುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಕಾನೂನಿನ ಹೆದರಿಕೆ ಇಲ್ಲದೆ ಜನರನ್ನು ಸುಲಿಗೆ ಮಾಡುತ್ತಿದ್ದವರು, ಬೆದರಿಕೆಯೊಡ್ಡಿ ಅವರನ್ನ ಅಪಹರಣ ಮಾಡುತ್ತಿದ್ದವರೆಲ್ಲ ಈಗ ಶಿಕ್ಷೆಗೆ ಗುರಿಯಾಗುತ್ತಿದ್ದಾರೆ ಮತ್ತು ಅವರ ಪ್ಯಾಂಟ್​ ಒದ್ದೆಯಾಗುತ್ತಿರುವುದು ಕಾಣುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Weather Report: ರಾಜ್ಯದ ಹಲವೆಡೆ ತಗ್ಗಿದ ಮಳೆ; ಮುಂದಿನ 48 ಗಂಟೆಯಲ್ಲಿ ಈ ಜಿಲ್ಲೆಯಲ್ಲಷ್ಟೇ ಆರ್ಭಟ
ರಾಜ್ಯಾದ್ಯಂತ ಹಲವೆಡೆ ಮಳೆಯ (Rain updates) ಅಬ್ಬರ ತಗ್ಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿವ ವರದಿ ಆಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆಯಿಂದ (Weather Report) ಕೂಡಿತ್ತು. ಧಾರವಾಡ 2 ಹಾಗೂ ಬೆಳಗಾವಿಯ ಲೋಂಡಾದಲ್ಲಿ 1 ಸೆಂ.ಮೀ ಮಳೆಯಾಗಿದ್ದು, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Triple Talaq: ಆನ್‌ಲೈನ್‌ನಲ್ಲಿ 1.5 ಲಕ್ಷ ರೂ. ಕಳೆದುಕೊಂಡ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ ಪತಿ
ದೇಶದಲ್ಲಿ ಎಂತಹದ್ದೇ ಕಾನೂನು ಬರಲಿ, ಆ ಕಾನೂನು ಎಷ್ಟೇ ವೈಜ್ಞಾನಿಕವಾಗಿರಲಿ, ನ್ಯಾಯಪರವಾಗಿರಲಿ, ಕೆಲವು ಕುತ್ಸಿತ ಮನಸ್ಸುಗಳು ಮಾತ್ರ ಕಾನೂನಿಗೆ ಬೆಲೆ ಕೊಡುವುದಿಲ್ಲ. ಕಾನೂನಿಗೆ ಬೆಲೆ ಕೊಡುವುದು ಬಿಡಿ ಕನಿಷ್ಠ ಮಾನವೀಯತೆಯನ್ನೂ ತೋರುವುದಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಒಡಿಶಾದಲ್ಲಿ ಮಹಿಳೆಯೊಬ್ಬರು ಆನ್‌ಲೈನ್‌ ವಂಚನೆ ಜಾಲಕ್ಕೆ ಸಿಲುಕಿ 1.5 ಲಕ್ಷ ರೂ. ಕಳೆದುಕೊಂಡರು ಎಂದು ಪತಿಯು ತ್ರಿವಳಿ ತಲಾಕ್‌ (Triple Talaq) ನೀಡಿದ್ದಾನೆ. ಆ ಮೂಲಕ ಮಹಿಳೆಯೊಬ್ಬರ ವಿರುದ್ಧ ವಿಕೃತಿ ಮೆರೆದಿದ್ದಾನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. CNG PNG Price: ದೇಶಾದ್ಯಂತ ಸಿಎನ್‌ಜಿ, ಪಿಎನ್‌ಜಿ ಬೆಲೆ 7 ರೂ.ವರೆಗೆ ಇಳಿಕೆ, ಕರ್ನಾಟಕದಲ್ಲಿ ಎಷ್ಟು ಕಡಿಮೆ?
ದೇಶೀಯವಾಗಿ ಉತ್ಪಾದಿಸುವ ನೈಸರ್ಗಿಕ ಅನಿಲದ ಬಹುಪಾಲು ಹೊಸ ಬೆಲೆ ಕಾರ್ಯವಿಧಾನ(APM)ವನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ (CNG PNG Price) ದೇಶಾದ್ಯಂತ ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಮತ್ತು ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (CNG) ಬೆಲೆಯು ಒಂದು ಕೆ.ಜಿಗೆ ಏಳು ರೂಪಾಯಿವರೆಗೆ ಇಳಿಕೆಯಾಗಿದೆ. ಭಾನುವಾರ ಗೇಲ್‌ ಗ್ಯಾಸ್‌ ಲಿಮಿಟೆಡ್‌ ಕಂಪನಿಯು ಸಿಎನ್‌ಜಿ ಹಾಗೂ ಪಿಎನ್‌ಜಿ ಬೆಲೆಯನ್ನು ಇಳಿಕೆ ಮಾಡಿದೆ. ಇದರಿಂದಾಗಿ ಸಿಎನ್‌ಜಿ ವಾಹನಗಳು ಹಾಗೂ ಪಿಎನ್‌ಜಿ ಸೌಲಭ್ಯ ಇರುವ ಗ್ರಾಹಕರಿಗೆ ಭಾರಿ ಅನುಕೂಲವಾಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Govt Doctors Shortage: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ; ನೇಮಕಾತಿಗೆ ಬೇಕಿದೆ ಭರ್ತಿ 2 ತಿಂಗಳು
ಇಡೀ ರಾಜ್ಯದಲ್ಲಿ ಜೆನರಲ್ ಆಸ್ಪತ್ರೆ, ಪಿಎಚ್‌ಸಿ, ಟ್ರಯಾಜ್ ಸೆಂಟರ್, ನಮ್ಮ ಕ್ಲಿನಿಕ್‌, ಮೆಟರ್ನಿಟಿ ಹೋಂ ಎಂದು ಸಾವಿರಕ್ಕೂ ಅಧಿಕ ಸರ್ಕಾರಿ ಆಸ್ಪತ್ರೆಗಳಿವೆ. ಆದರೆ ಅಲ್ಲಿ ಸಿಗಬೇಕಾದ ಮೂಲ ಸೌಕರ್ಯಗಳೇ ಇತ್ತೀಚೆಗೆ ಸಿಗದಂತಾಗಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ (Govt Doctors Shortage) ಎದುರಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. Kiccha Sudeep: ಸುದೀಪ್‌ಗೆ ಬೆದರಿಕೆ ಪತ್ರ; ಸ್ವಿಫ್ಟ್​ ಕಾರಲ್ಲಿ ಬಂದು ಲೆಟರ್​ ಪೋಸ್ಟ್, ಇದೆಲ್ಲವೂ ಪ್ರಿ ಪ್ಲಾನ್ಡ್?​
  2. D ಕೋಡ್‌ ಅಂಕಣ: ರಾಜಕೀಯ ಹವಾಮಾನ ವರದಿ: ಕಾಂಗ್ರೆಸ್ ಕಡೆಗೆ ಬೀಸುವಂತಿದೆ ತಂಗಾಳಿ; ಪಕ್ಷಾಂತರಿಗಳಿಗೆ ತಿಳಿದಿದೆಯೇ ಒಳಸುಳಿ?
  3. ಬಿಸಿಯೂಟಕ್ಕಾಗಿ ಶಾಲೆಗೆ ಬಂದಿದ್ದ 100 ಕೆಜಿ ಗೋಧಿ, ಬೇಳೆಯನ್ನು ಮನೆಗೆ ಸಾಗಿಸುತ್ತಿದ್ದ ಇಬ್ಬರು ಶಿಕ್ಷಕರು; ಚೆಕ್‌ಪೋಸ್ಟ್‌ ತಪಾಸಣೆಯಲ್ಲಿ ಸಿಕ್ಕಿಬಿದ್ದರು!
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

Prajwal Revanna Case: ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪೆನ್​ಡ್ರೈವ್ ಮೂಲಕ ಪ್ರಸರಣಗೊಂಡ ಅಶ್ಲೀಲ ವಿಡಿಯೊಗಳ ಪ್ರಕರಣದ (Prajwal Revanna Case) ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ವಾಪಸ್​ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಏರ್​ ಟಿಕೆಟ್​ ಬುಕ್ ಮಾಡಿದ ವಿವರ ‘ವಿಸ್ತಾರನ್ಯೂಸ್​’ಗೆ ಲಭ್ಯವಾಗಿದೆ. ಪ್ರಕರಣದ ತನಿಖೆ ನಡೆಸುವ ಎಸ್​ಐಟಿ ಪ್ರಜ್ವಲ್ ರೇವಣ್ಣಗಾಗಿ ಕಾಯುತ್ತಿದ್ದು ಭಾರತಕ್ಕೆ ಬಂದ ತಕ್ಷಣ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಟಿಕೆಟ್​ ಬುಕ್​ ಮಾಡಿಕೊಂಡಿದ್ದು ಅಲ್ಲಿಂದಲೇ ಅವರನ್ನು ಎಸ್​ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಿದ್ದಾರೆ.

ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ. ಎಸ್​ಐಟಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸುವುದಕ್ಕಿಂತ ಮೊದಲೇ ಅವರು ಭಾರತದಿಂದ ಹೊರಟ್ಟಿದ್ದರು. ಪ್ರಕರಣ ಕಾವು ಪಡೆದು ಪ್ರತಿಭಟನೆ ಹಾಗೂ ಧರಣಿಗಳು ನಡೆಯುವ ಸಂದರ್ಭದಲ್ಲಿ ದೇಶದಿಂದ ದೂರವಿದ್ದರು. ಎಸ್​ಐಟಿ ಪೊಲೀಸರು ಪ್ರಜ್ವಲ್​ ವಶಕ್ಕೆ ಪಡೆಯಲು ನಾನಾ ರಾಜತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕಾಯಬೇಕಾಯಿತು. ಅಂತಿಮವಾಗಿ ಕೇಂದ್ರ ಸರ್ಕಾರ ಸೇರಿದಂತೆ ಎಲ್ಲರ ಒತ್ತಾಯ ಹಾಗೂ ತಮಗೆ ಹಾಜರಾಗಲು ನೀಡಿದ ನೋಟಿಸ್​ನ ಗಡುವು ಮುಗಿದ ಕಾರಣ ಜರ್ಮನಿಯಿಂದ ಬರಲಿದ್ದಾರೆ.

ಪ್ರಜ್ವಲ್‌ ರೇವಣ್ಣ ಮೇ 31ರ ಮೊದಲು ಬರಲೇಬೇಕು! ಕಾರಣ ಇಲ್ಲಿದೆ

ಅಶ್ಲೀಲ ವಿಡಿಯೋ ವೈರಲ್ (pen drive case video viral) ಪ್ರಕರಣದಲ್ಲಿ ವಿಶೇಷ ತನಿಖಾ ತಂಡಕ್ಕೆ ಬೇಕಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal Revanna Case) ನಾಪತ್ತೆಯಾಗಿ ಒಂದು ತಿಂಗಳ ಬಳಿಕ ಹೊಸ ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದಾರೆ. ಆದರೆ ಅವರು ದೇಶದೊಳಗೇ ಇದ್ದುಕೊಂಡೇ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದರೇ ಎಂಬ ಸಂಶಯವೂ ವ್ಯಕ್ತವಾಗಿದೆ.

ಇದನ್ನೂ ಓದಿ: Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

ನಿನ್ನೆ ಹೊಸ ವಿಡಿಯೋ ಮಾಡಿ ಹರಿಬಿಟ್ಟಿರುವ ಪ್ರಜ್ವಲ್‌, ಶುಕ್ರವಾರ, ಮೇ 31ರಂದು ಎಸ್‌ಐಟಿ (SIT) ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಸದ್ಯ ವಿಡಿಯೋವನ್ನು ಎಸ್‌ಐಟಿ ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದೆ. ವಿಡಿಯೋದ ಮೂಲ ಯಾವುದು, ಯಾವ ಐಪಿ ಅಡ್ರೆಸ್‌ನಿಂದ ಆಪ್‌ಲೋಡ್ ಆಗಿದೆ ಎಂಬುದರ ಪತ್ತೆಗೆ‌ ಎಸ್‌ಐಟಿ ಮುಂದಾಗಿದೆ. ವಿಡಿಯೋ ಮೊದಲು ತಲುಪಿದ್ದು ಯಾರಿಗೆ, ಎಲ್ಲಿಂದ, ವಿಡಿಯೋ ಮಾಡಿರುವ ಮದರ್ ಡಿವೈಸ್ ಮಾಹಿತಿ ಪತ್ತೆಗೆ ಎಸ್‌ಐಟಿ ಯತ್ನಿಸುತ್ತಿದೆ. ಶುಕ್ರವಾರ ಪ್ರಜ್ವಲ್‌ ಎಸ್ಐಟಿ ಮುಂದೆ ಹಾಜರಾಗದಿದ್ದಲ್ಲಿ ಮದರ್ ಡಿವೈಸ್ ಲೋಕೆಷನ್ ಪತ್ತೆಗೆ ಯತ್ನಿಸುವ ಸಂಭವ ಇದೆ. ಸದ್ಯ ಪ್ರಜ್ವಲ್ ರೇವಣ್ಣ ಬರುವವರೆಗೂ ಕಾಯಲು ಇಷ್ಟವಿಲ್ಲದ ಎಸ್ಐಟಿ, ಅದಕ್ಕೂ ಮುನ್ನವೇ ಪತ್ತೆ ಮಾಡಿ ಬಂಧಿಸುವ ಚಿಂತನೆ ನಡೆಸಿದೆ.

ಯಾಕೆ ಮೇ 31 ?

ಮೇ 31ರಂದು ಪ್ರಜ್ವಲ್‌ ರೇವಣ್ಣ ಅವರ ಕಳೆದ ಬಾರಿಯ ಸಂಸದ ಸ್ಥಾನ ಅವಲಂಬಿಸಿ ನೀಡಲಾದ ರಾಜತಾಂತ್ರಿಕ ಪಾಸ್‌ಪೋರ್ಟ್‌ನ (Diplomatic passport) ಅವಧಿ ಅಂತ್ಯವಾಗಲಿದೆ. ಈ ಸಲ ಚುನಾಯಿತರಾದರೆ ಅವರು ಹೊಸದಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮಾಡಿಸಿಕೊಳ್ಳಬೇಕಿದೆ. ಹೀಗಾಗಿ ಹಳೆಯ ಪಾಸ್‌ಪೋರ್ಟ್‌ನಲ್ಲಿ ಓಡಾಡಲು ಸಾಧ್ಯವಿಲ್ಲ. ಇದೇ ಕಾರಣಕ್ಕಾಗಿ ಪ್ರಜ್ವಲ್‌ ಮೇ 31ನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಪ್ರಜ್ವಲ್ ರೇವಣ್ಣ ವಿರುದ್ಧದ ಎಸ್ಐಟಿ ತನಿಖೆ ಮಹತ್ವದ ಹಂತ ತಲುಪಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಲಾಗಿದೆ. ಪ್ರಜ್ವಲ್ ರೇವಣ್ಣ ಬಂದ ಬಳಿಕ ತನಿಖೆ ಮಾಡಬೇಕಿದೆ. ಅಶ್ಲೀಲ ವಿಡಿಯೋಗಳನ್ನು ಮಾಡಲಾದ ಡಿವೈಜ್ ಅನ್ನು ಪತ್ತೆಹಚ್ಚಬೇಕಿದೆ. ಅಶ್ಲೀಲ ವಿಡಿಯೋಗಳ ಕುರಿತು ಫಾರೆನ್ಸಿಕ್ ರಿಪೋರ್ಟ್‌ಗಾಗಿ ಎಸ್ಐಟಿ ಕಾಯುತ್ತಿದೆ. FSL ರಿಪೋರ್ಟ್ ಎಸ್ಐಟಿ ಕೈ ಸೇರಿದ ಕೂಡಲೇ ಚಾರ್ಜ್‌ಶೀಟ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್ ರೇವಣ್ಣ ಹೇಳಿಕೆ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ.

ಜೂನ್ ಮೊದಲ ವಾರದಲ್ಲಿ ಪ್ರಜ್ವಲ್ ಬಂದಿದ್ದೇ ಆದಲ್ಲಿ ತನಿಖೆ ನಡೆಸಿ ಸ್ಟೇಟ್ಮೆಂಟ್ ದಾಖಲಿಸಲಿದ್ದಾರೆ. ಒಂದು ವೇಳೆ ಪ್ರಜ್ವಲ್ ಜೂನ್‌ನಲ್ಲಿ ವಾಪಸ್ ಬರದೇ ಇದ್ದಲ್ಲಿ, ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ನ್ಯಾಯಾಲಯಕ್ಕೆ ಅಬ್‌ಸ್ಕಾಂಡ್‌ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ.

ಗೃಹ ಸಚಿವರು ಏನೆಂದರು?

ಪ್ರಜ್ವಲ್ ವಿಡಿಯೋ ರಿಲೀಸ್ ವಿಚಾರದಲ್ಲಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ (home minister G Parameshwara) ಹೇಳಿಕೆ ನೀಡಿದ್ದಾರೆ. “ಮೇ 31ರಂದು ಪ್ರಜ್ವಲ್‌ ಸಂಸದ ಸ್ಥಾನ ಅಂತ್ಯವಾಗಲಿದೆ. ಆಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಸೀಜ್ ಆಗುತ್ತದೆ. ಇದೆಲ್ಲವನ್ನು ತಿಳಿದುಕೊಂಡು ಬರಲು ಯೋಚನೆ ಮಾಡಿದ್ದಾರೆ ಅನ್ಸುತ್ತೆ” ಎಂದಿದ್ದಾರೆ.

“ದೇಶದೊಳಗೆ ಏನು ಪ್ರಯತ್ನ ‌ಮಾಡಬೇಕು ನಾವು ಮಾಡಿದ್ದೇವೆ. ಕೇಂದ್ರ ಸರ್ಕಾರಕ್ಕೆ ಬರೆದಿದ್ದೇವೆ, ಕೇಂದ್ರ ಗೃಹ ಇಲಾಖೆಗೆ ವಾರೆಂಟ್ ಬಗ್ಗೆ ತಿಳಿಸಿದ್ದೇವೆ. ಬ್ಲೂ ಕಾರ್ನರ್ ನೋಟೀಸ್ (blue corner notice) ಇಶ್ಯೂ ಆಗಿದೆ. ಪ್ರಜ್ವಲ್‌ ಬರದೇ ಹೋದರೆ ಇಂಟರ್‌ಪೋಲ್‌ನವರು (Interpol) ಲೊಕೇಶನ್‌ ತಿಳಿದುಕೊಂಡು ನಮಗೆ ಮಾಹಿತಿ ನೀಡುವುದು ಎಂದಿತ್ತು. ಇಂತಹ ಸಂದರ್ಭದಲ್ಲಿ ನಾನು ಬರ್ತೇನೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ. ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ” ಎಂದಿದ್ದಾರೆ.

ಈ ಸಲ ಸುಮ್ಮನಿರೋಲ್ಲ ಎಸ್‌ಐಟಿ

ಪ್ರಜ್ವಲ್ ರೇವಣ್ಣ ವಿಡಿಯೋ ಬಿಟ್ಟ ಬೆನ್ನಲ್ಲೇ ಎಸ್ಐಟಿ ಅಲರ್ಟ್ ಆಗಿದೆ. ವಿಡಿಯೋ ಬಿಟ್ಟಿದ್ದು ಎಲ್ಲಿಂದ, ಯಾವ ದೇಶದಿಂದ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಕಳೆದ ಬಾರಿ ಕೂಡ ಪ್ರಜ್ವಲ್ ರೇವಣ್ಣ ಇದೇ ರೀತಿ ಕಾಲಾವಕಾಶ ಕೋರಿದ್ದರು. ಹೇಳಿದಂತೆ ವಿಚಾರಣೆಗೆ ಹಾಜರಾಗದೆ ದೂರ ಉಳಿದಿದ್ದರು. ಈ ಬಾರಿಯೂ ಹಾಗೆಯೇ ಮಾಡುವ ಸಾಧ್ಯತೆ ಕೂಡ ಇದೆ. ಹೀಗಾಗಿ ಈಗಲೇ ಪ್ರಜ್ವಲ್ ರೇವಣ್ಣ ಕಾಂಟ್ಯಾಕ್ಟ್‌ಗೆ ಎಸ್‌ಐಟಿ ಮುಂದಾಗಿದೆ.

ಕೇಂದ್ರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಇಂಟರ್‌ಪೋಲ್‌ಗೂ ಎಸ್‌ಐಟಿ ಮಾಹಿತಿ ಕೋರಲಿದೆ. ಈಗಾಗಲೇ ಪ್ರಜ್ವಲ್‌ ವಿರುದ್ಧ ಲುಕ್‌ಔಟ್‌ ನೋಟೀಸ್‌ (lookout notice) ಹಾಗೂ ಬ್ಲೂ ಕಾರ್ನರ್‌ ನೋಟೀಸ್‌ ಜಾರಿ ಮಾಡಲಾಗಿದೆ. ಆತನ ವಿರುದ್ಧ ಆರೆಸ್ಟ್ ವಾರಂಟ್ ಕೂಡ ಇದೆ. ಹೀಗಾಗಿ ಎಸ್‌ಐಟಿ ಒಂದು ತಿಂಗಳಿಂದ ಏರ್‌ಪೋರ್ಟ್‌ನಲ್ಲೇ ಠಿಕಾಣಿ ಹೂಡಿದೆ. ಏರ್‌ಪೋರ್ಟ್‌ನಿಂದ ಹೊರಕ್ಕೆ ಕಾಲಿಡುವ ಮೊದಲೇ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣನನ್ನು ವಶಕ್ಕೆ ಪಡೆದು ಎಸ್‌ಐಟಿಗೆ ಒಪ್ಪಿಸಲಿದ್ದಾರೆ.

Continue Reading

ಕರ್ನಾಟಕ

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Chakravarthy Sulibele: ಭಾರತ ಬಡತನದ ರಾಷ್ಟ್ರ, ಇಲ್ಲಿ ಧಾರ್ಮಿಕ ಸ್ವಾತಂತ್ರ್ಯವಿಲ್ಲ, ಮೋದಿ ನೇತೃತ್ವದ ಬಿಜೆಪಿ ಈ ಬಾರಿ ಸೋಲುತ್ತದೆ ಎಂದು ಸುಳ್ಳನ್ನು ಸತ್ಯವೆಂದು ಎಲ್ಲ ಕಡೆಗಳಲ್ಲೂ ಹಬ್ಬಿಸುವ ಕೆಲಸ ನಡೆಯುತ್ತಿದೆ ಎಂದು ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು. ಪ್ರಶಸ್ತಿಯು 1 ಲಕ್ಷ ರೂ. ನಗದನ್ನು ಒಳಗೊಂಡಿದೆ. ಆದರೆ ಪ್ರಶಸ್ತಿ ರೂಪದಲ್ಲಿ ನೀಡಲಾದ 1 ಲಕ್ಷ ರೂ. ಹಣವನ್ನು ಗೋಶಾಲೆ ಅಭಿವೃದ್ಧಿಗೆ ನೀಡುವುದಾಗಿ ಚಕ್ರವರ್ತಿ ಸೂಲಿಬೆಲೆ ಘೋಷಿಸಿದರು.

VISTARANEWS.COM


on

chakravarthy sulibele
Koo

ಮೈಸೂರು: ಮೈಸೂರಿನ ವೀರ ಸಾವರ್ಕರ್ ಪ್ರತಿಷ್ಠಾನವು ಮಂಗಳವಾರ ಸಂಜೆ ವಾಗ್ಮಿ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರಿಗೆ ‘ವೀರ ಸಾವರ್ಕರ್ ಸಮ್ಮಾನ್-2024’ ಪ್ರಶಸ್ತಿ ಪ್ರದಾನ ಮಾಡಿತು. ಕಲಾಮಂದಿರದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಕೊಡವವರು ನಿಲ್ಲುವುದು, ಸ್ವೀಕರಿಸುವುದು ಕೂರುವುದು ವಾಡಿಕೆ. ಆದರೆ ಚಕ್ರವರ್ತಿ ಸೂಲಿಬೆಲೆ ಅವರು ಭೈರಪ್ಪ ಅವರನ್ನು ಕೂರಿಸಿ ತಾವು ಮಂಡಿಯೂರಿ ಪ್ರಶಸ್ತಿ ಸ್ವೀಕರಿಸಿದರು.

ಸಮಾರಂಭದಲ್ಲಿ ಮಾತನಾಡಿದ ಎಸ್​ ಎಲ್ ಭೈರಪ್ಪ ಅವರು, ತ್ರಿವಿಧ ದಾಸೋಹಿಯಾಗಿ ತುಮಕೂರಿನ ಸಿದ್ಧಗಂಗಾ ಶ್ರೀಗಳು ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದ್ದರೂ, ಅವರಿಗೆ ಮರಣೋತ್ತರ ಭಾರತ ರತ್ನ ನೀಡದಿರುವುದು ಇಂದಿಗೂ ನನ್ನನ್ನು ಕಾಡುತ್ತಿದೆ ಎಂದು ಹೇಳಿದರು.

ಕೆಲವು ಸ್ವಾಮೀಜಿಗಳು ತಮಗೆ ಡಾಕ್ಟರೇಟ್‌ ಕೊಡಲಿ ಎಂದು ಹಪಹಪಿಸುತ್ತಾರೆ. ಆದರೆ ತುಮಕೂರಿನ  ಸಿದ್ದಗಂಗಾ ಶ್ರೀಗಳು ಯಾವುದೇ ಅಪೇಕ್ಷೆ ಇಲ್ಲದೆ, ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಮಕ್ಕಳ ಜಾತಿ ಯಾವುದೆಂದು ಕೇಳದ ಸಿದ್ಧಗಂಗಾ ಸ್ವಾಮೀಜಿ ಅವರು, ಶಿಕ್ಷಣ ದಾಸೋಹ, ಅನ್ನ ದಾಸೋಹ ಮಾಡಿದ್ದಾರೆ. ಆ ಮೂಲಕ ಸಿದ್ದಗಂಗಾ ಸ್ವಾಮೀಜಿ ಅವರು ಸಮಾಜದ ಸೇವೆಗೆ ತಮ್ಮನ್ನು ಮುಡಿಪಾಗಿ ಇಟ್ಟಿದ್ದರು. ನಾನು ಸಹ ಅವರ ಕಾಲು ಮುಟ್ಟಿ ನಮಸ್ಕರಿಸಿದ್ದೆ. ಆದರೆ ದುರಂತದ ಸಂಗತಿಯೆಂದರೆ ಸಾವರ್ಕರ್‌ ಅವರನ್ನು ಮೈಲಿಗೆಯಲ್ಲಿ ಇಟ್ಟಂತೆ ಸಿದ್ದಗಂಗಾ ಶ್ರೀಗಳನ್ನು ಇಡಲಾಗಿದೆ ಅನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಪ್ರಾಪಗಾಂಡ ವಾರ್​

ಸಮಾರಂಭದಲ್ಲಿ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಇಂದು ಯಾವ ದೇಶವು ಭಾರತದ ಮೇಲೆ ಪ್ರತ್ಯಕ್ಷ ಯುದ್ಧ ಮಾಡಲು ಸಾಧ್ಯವಾಗದ ಪರಿಣಾಮ ಸುಳ್ಳನ್ನು ಪದೇ ಪದೇ ಹೇಳಿ ಸತ್ಯ ಎಂದು ಪ್ರಚುರಪಡಿಸುವ ಪ್ರಾಪಗಾಂಡ ವಾರ್‌ ನಡೆಸಲಾಗುತ್ತಿದೆ. ಭಾರತದ ಬಡತನದ ರಾಷ್ಟ್ರ, ಇಲ್ಲಿ ಧಾರ್ಮಿಕ ಸ್ವಾತಂತ್ರ್ಯವಿಲ್ಲ. ಮೋದಿ ಮತ್ತು ಬಿಜೆಪಿ ಈ ಬಾರಿ ಸೋಲುತ್ತಾರೆ ಎಂದು ಸುಳ್ಳನ್ನು ಸತ್ಯವೆಂದು ಎಲ್ಲ ಕಡೆಗಳಲ್ಲೂ ಹಬ್ಬಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

ಪ್ರಶಸ್ತಿಯು 1 ಲಕ್ಷ ರೂ. ನಗದನ್ನು ಒಳಗೊಂಡಿದೆ. ಆದರೆ ಪ್ರಶಸ್ತಿ ರೂಪದಲ್ಲಿ ನೀಡಲಾದ 1 ಲಕ್ಷ ರೂ. ಹಣವನ್ನು ಗೋಶಾಲೆ ಅಭಿವೃದ್ಧಿಗೆ ನೀಡುವುದಾಗಿ ಚಕ್ರವರ್ತಿ ಸೂಲಿಬೆಲೆ ಘೋಷಿಸಿದರು.

ಸಮಾರಂಭದಲ್ಲಿ ಶಾಸಕ ಟಿ.ಎಸ್‌. ಶ್ರೀವತ್ಸ, ಮಾಜಿ ಮೇಯರ್‌ ಶಿವಕುಮಾರ್‌, ವೀರ ಸಾವರ್ಕರ್‌ ಪ್ರತಿಷ್ಠಾನದ ಅಧ್ಯಕ್ಷೆ ಯಶಸ್ವಿನಿ ಎಸ್‌., ಆದಿತ್ಯ ಅಧಿಕಾರಿ ಆಸ್ಪತ್ರೆ ಮುಖ್ಯಸ್ಥ ಡಾ. ಚಂದ್ರಶೇಖರ್‌ ಮತ್ತಿತರರು ಇದ್ದರು.

Continue Reading

ಪ್ರಮುಖ ಸುದ್ದಿ

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Cyber Crime: ಆತ ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿ ಹರಿಯಬಿಟ್ಟಿದ್ದ.. ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತನಿಂದ ಮೂರು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Cyber Crime
Koo

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಫೋಟೊಗಳನ್ನು ಮಾರ್ಫ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್​ ಮಾಡಿದ್ದ (Cyber Crime) ಆರೋಪಿಯನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂದಿಸಿದ್ದಾರೆ. ಈತ ಅಪ್ರಾಪ್ತ ಬಾಲಕಿಯರ ಫೋಟೋಗಳನ್ನು ಬಿಟ್ಟ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಪ್ರಕಾರ ಜೈಲು ಸೇರಿದ್ದಾನೆ.

ಆರೋಪಿ ಫೋಟೋಗಳನ್ನು ಮಾರ್ಫ್ ಮಾಡಿ ಇನ್ಸ್ ಸ್ಟಾಗ್ರಾಮ್ ಮೂಲಕ ಶೇರ್ ಮಾಡ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿ ಹರಿಯಬಿಟ್ಟಿದ್ದ.. ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತನಿಂದ ಮೂರು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ.

ಬೆಳ್ಳೂರು ಹಿಂದು ಯುವಕನ ಮೇಲೆ ಹಲ್ಲೆ; 11ಕ್ಕೂ ಹೆಚ್ಚು ಮಂದಿ ಮೇಲೆ ಕೇಸ್‌

ಮಂಡ್ಯ: ಜಿಲ್ಲೆಯ ಬೆಳ್ಳೂರು ಪಟ್ಟಣದಲ್ಲಿ (Mandya News) ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಬೆಳ್ಳೂರಿನ ಅಭಿಲಾಷ್ ಎಂಬಾತನ ಮೇಲೆ ಹಲ್ಲೆ ಅನ್ಯಕೋಮಿನ ಯುವಕರು ಚೇರ್, ಮಾರಕಾಸ್ತ್ರಗಳಿಂದ ಹಲ್ಲೆ (Assault case) ಮಾಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ: Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11 ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Acid attack: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ಘಟನೆ ನಡೆದಿದೆ. ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ವಿವಾಹಿತ ಪ್ರಿಯತಮೆಗೆ ಪ್ರಿಯಕರ ಆ್ಯಸಿಡ್ ಎರಚಿದ್ದಾನೆ.

VISTARANEWS.COM


on

Acid attack
Koo

ಬಾಗಲಕೋಟೆ: ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ವಿವಾಹಿತ ಪ್ರಿಯತಮೆಗೆ ಪ್ರಿಯಕರ ಆ್ಯಸಿಡ್ ಎರಚಿದ ಘಟನೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ನಡೆದಿದೆ. ಆ್ಯಸಿಡ್ ದಾಳಿಯಿಂದ (Acid attack) ಮಹಿಳೆಗೆ ಎಡಗಣ್ಣು, ಮುಖದ ಭಾಗ ಹಾಗೂ ದೇಹದ ವಿವಿಧ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ.

ಲಕ್ಷ್ಮಿ ಬಡಿಗೇರ (33) ಆ್ಯಸಿಡ್ ದಾಳಿಗೊಳಗಾದ ಮಹಿಳೆ. ಮೌನೇಶ್ ಪತ್ತಾರ ಆ್ಯಸಿಡ್ ಎರಚಿದ ಆರೋಪಿ. ಮೂರ್ತಿ ತಯಾರಿಕೆ ಕೆಲಸ‌ ಮಾಡುವ ಮೌನೇಶ್ ಹಾಗೂ ಲಕ್ಷ್ಮಿ ವಿಜಯಪುರ ನಗರದ ಮೂರನಕೇರಿ ಮೂಲದವರು. ಇಬ್ಬರೂ ಬೇರೆ ಬೇರೆಯವರನ್ನು ಮದುವೆಯಾಗಿದ್ದರು. ಆದರೆ, ಯಾವುದೇ ಡಿವೋರ್ಸ್ ಪಡೆಯದೇ ಸಹಜೀವನ ನಡೆಸುತ್ತಿದ್ದರು. ಹೀಗಿದ್ದರೂ ಲಕ್ಷ್ಮಿ ಬಡಿಗೇರ‌‌ ಮೇಲೆ ಪದೇಪದೆ ಮೌನೇಶ್ ಸಂಶಯಪಡುತ್ತಿದ್ದ. ಇದರಿಂದ‌‌ ಮೇಲಿಂದ ಮೇಲೆ‌ ಜಗಳವಾಗುತ್ತಿತ್ತು.

ಒಂದು ವಾರದ ಹಿಂದೆ ಮನೆ ಬಿಟ್ಟು ಹೋಗಿದ್ದ ಮೌನೇಶ್ ಸೋಮವಾರ ರಾತ್ರಿ‌ ಮನೆಗೆ ವಾಪಸ್ ಬಂದಿದ್ದ. ಈ ವೇಳೆ ಲಕ್ಷ್ಮಿ ಬಾಗಿಲು ತೆರೆದಿರಲಿಲ್ಲ. ಇದರಿಂದ‌ ಸಿಟ್ಟಿಗೆದ್ದ ಮೌನೇಶ್ ಕಿಟಕಿ ತೆಗೆದು ಆ್ಯಸಿಡ್ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿ ಬಡಿಗೇರ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯ ಎಂಟು ವರ್ಷದ ಮಗಳ ಮುಖಕ್ಕೂ ಅಲ್ಪ ಪ್ರಮಾಣದಲ್ಲಿ ಆ್ಯಸಿಡ್ ಸಿಡಿದಿದೆ. ಈ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಅಪಾಯದಿಂದ ಮಹಿಳೆ ಪಾರಾಗಿದ್ದಾರೆ.

ಯುವತಿಯರ ಫೋಟೊ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನ ಬಂಧನ

ಬೆಂಗಳೂರು: ಯುವತಿಯರ ಫೋಟೋ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನನ್ನು ನಗರದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಯರ ಫೋಟೊಗಳನ್ನು ಆರೋಪಿ ಮಾರ್ಫ್‌ ಮಾಡುತ್ತಿದ್ದ. ಎಡಿಟ್‌ ಮಾಡಿದ ಫೋಟೊಗಳನ್ನು ಇನ್ಸ್ ಸ್ಟಾಗ್ರಾಮ್ ಮೂಲಕ ಶೇರ್ ಮಾಡುತ್ತಿದ್ದ.

ಇದನ್ನೂ ಓದಿ | Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೊವನ್ನು ಆರೋಪಿ ಮಾರ್ಫ್ ಮಾಡಿದ್ದ. ಈ ಬಗ್ಗೆ ಪೋಷಕರಿಂದ ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿರುವ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ. ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಯಿಂದ ಮೂರು ಮೊಬೈಲ್‌ ವಶಕ್ಕೆ ಪಡೆಯಲಾಗಿದೆ.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ4 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ4 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ4 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ5 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ5 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ5 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ5 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ5 hours ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ5 hours ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು15 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌