Site icon Vistara News

ವಿಸ್ತಾರ TOP 10 NEWS | ಮೋದಿ ಸ್ವಾಗತಕ್ಕೆ ಬೆಂಗಳೂರು ರೆಡಿಯಿಂದ T20 ವಿಶ್ವಕಪ್‌ನಿಂದ ಭಾರತ ನಿರ್ಗಮನದವರೆಗೆ ಪ್ರಮುಖ ಸುದ್ದಿಗಳು

top 10 news

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಬಂದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರಿಗಾಗಿ ರಸ್ತೆ ರಿಪೇರಿಯಿಂದ ಹಿಡಿದು ಬಿಗಿಭದ್ರತೆವರೆಗೆ ಹಲವು ರೀತಿಯಲ್ಲಿ ಸಿದ್ಧತೆಗಳು ನಡೆದಿದೆ. ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಸಾಂಗವಾಗಿ ನೆರವೇರಿದ ನಡುವೆಯೇ ಸರಕಾರ ಮುಜರಾಯಿ ದೇವಾಲಯಗಳಲ್ಲಿ ಮುದ್ರಾಧಾರಣೆ ಸೇರಿ ಕೆಲವೊಂದು ಆಚರಣೆಗೆ ಕಡಿವಾಣ ಹಾಕಿದೆ. ಮುರುಘಾಶ್ರೀಗಳ ಲೈಂಗಿಕ ಹಗರಣದ ನಡುವೆಯೇ ಮಠದ ಆಡಳಿತಾಧಿಕಾರಿಯಾಗಿದ್ದ ಬಸವರಾಜನ್‌ ಬಂಧನವಾಗಿದೆ. ಇತ್ತ ಇಂಗ್ಲೆಂಡ್‌ ವಿರುದ್ಧ ಟಿ೨೦ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಸೋತು ವಿಶ್ವಕಪ್‌ನಿಂದ ಹೊರನಡೆದದ್ದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ಪ್ರಧಾನಿ ಮೋದಿ ಸ್ವಾಗತಕ್ಕೆ ರೆಡಿಯಾಗಿದೆ ಬೆಂಗಳೂರು, ಅನಾವರಣಗೊಳ್ಳಲಿದೆ ಕೆಂಪೇಗೌಡ ಪ್ರತಿಮೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ೨ನೇ ಟರ್ಮಿನಲ್‌ ಉದ್ಘಾಟನೆ ಮತ್ತು ಕೆಂಪೇಗೌಡರ ೧೦೮ ಅಡಿ ಎತ್ತರದ ಬೃಹತ್‌ ಪ್ರತಿಮೆಯ ಅನಾವರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಆಗಮಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮೈಸೂರು-ಚೆನ್ನೈ ನಡುವೆ ಓಡಾಡುವ ವಂದೇ ಭಾರತ್‌ ರೈಲಿಗೆ ಹಸಿರುನಿಶಾನೆ ತೋರಿಸಲಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಬೃಹತ್‌ ಸಮಾವೇಶವೂ ನಡೆಯಲಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ
ಇನ್ನೊಂದು ವರದಿ | ಬೆಂಗಳೂರಿಗೆ ಬರಲಿರುವ ಮೋದಿಗೆ ಸಿದ್ದರಾಮಯ್ಯರ 10 ಪ್ರಶ್ನೆಗಳು ಮತ್ತು ಕೆಲವು ಸಲಹೆಗಳು!

2. ಒಂದೇ ಸರ್ಕಾರಿ ಭೇಟಿಯಲ್ಲಿ 3 ಪ್ರಬಲ ಸಮುದಾಯಗಳನ್ನು ಸೆಳೆಯಲು ಮಾಸ್ಟರ್‌ ಪ್ಲ್ಯಾನ್‌
ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ಬರುತ್ತಿದ್ದಾರೆ. ಅವರು ಆಗಮಿಸುವ ಶುಕ್ರವಾರ (ನವೆಂಬರ್‌ ೧೧) ಕನಕದಾಸರ ಜಯಂತಿ ಸಹ ಇರುವುದರಿಂದ ಕುರುಬ ಸಮುದಾಯವನ್ನು ಖುಷಿ ಪಡಿಸಲು ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿಸಲಾಗುತ್ತಿದೆ. ಕನಕದಾಸರ ಪ್ರತಿಮೆ ಎದುರು ವಾಲ್ಮೀಕಿ ಪ್ರತಿಮೆಯೂ ಇರುವುದರಿಂದ ಆ ಪ್ರತಿಮೆಗೂ ಸಹ ಮಾಲಾರ್ಪಣೆ ಮಾಡಲಾಗುತ್ತಿದೆ. ಹೀಗಾಗಿ ಒಂದು ಕಾರ್ಯಕ್ರಮದಲ್ಲಿ ಮೂರು ಪ್ರಬಲ ಸಮುದಾಯಗಳನ್ನು ಸೆಳೆಯುವ ಪ್ಲ್ಯಾನ್‌ ಮಾಡಲಾಗಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

3. ಇನ್ನು ಮುಜರಾಯಿ ದೇವಾಲಯಗಳಲ್ಲಿಲ್ಲ ಮುದ್ರಾಧಾರಣೆ, ಜಯಂತಿ; ಸರ್ಕಾರದ ಆದೇಶಕ್ಕೆ ವ್ಯಾಪಕ ಆಕ್ರೋಶ
ಇನ್ನು ಮುಂದೆ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾಧಾರಣೆ, ಜಯಂತಿ ಆಚರಣೆ ಸೇರಿದಂತೆ ಚಾಲ್ತಿಯಲ್ಲಿರುವ ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧ ಆಚರಣೆ ನಡೆಸುವಂತಿಲ್ಲ. ಇಂಥದ್ದೊಂದು ಆದೇಶವನ್ನು ಈಗ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಹೊರಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಗೊಳಪಟ್ಟ ದೇವಾಲಯಗಳಲ್ಲಿ ಹಲವು ಆಚರಣೆಗೆ ತಡೆ ಬೀಳಲಿದೆ. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಯಶಸ್ವಿ, ನಾಳೆ ಕನಕ ಜಯಂತಿಗೆ ಶ್ರೀರಾಮ ಸೇನೆ ರೆಡಿ!
ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕೊನೆಗೂ ಟಿಪ್ಪು ಜಯಂತಿ ಆಚರಣೆ ಮಾಡಲಾಗಿದೆ. ಶ್ರೀ ರಾಮ ಸೇನೆಯ ತೀವ್ರ ವಿರೋಧದ ನಡುವೆಯೂ ಎಐಎಂಐಎಂ ಪಕ್ಷದ ಮುಖಂಡರು ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿದ್ದಾರೆ. ಬಿಜೆಪಿ ಆಡಳಿತವಿರುವ ಪಾಲಿಕೆಯಿಂದ ಟಿಪ್ಪು ಜಯಂತಿಗೆ ಅಧಿಕೃತ ಅನುಮತಿ ದೊರೆತಿದ್ದು ಶ್ರೀ ರಾಮ ಸೇನೆಯನ್ನು ಕೆರಳಿಸಿದೆ. ಇದರ ಜತೆಗೆ ಶ್ರೀರಾಮ ಸೇನೆ ವತಿಯಿಂದ ಶುಕ್ರವಾರ ಕನಕ ಜಯಂತಿ ಆಚರಣೆಗೆ ಸಿದ್ಧತೆ ನಡೆದಿದೆ. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಮುರುಘಾ ಶ್ರೀ ಕೇಸ್‌: ಮಾಜಿ ಶಾಸಕ ಎಸ್.ಕೆ. ಬಸವರಾಜನ್‌ ಬಂಧನ; 4 ದಿನ ಕಸ್ಟಡಿಗೆ
ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಪಿತೂರಿ ನಡೆಸಿದ ಹಾಗೂ ಮಠದ ರಾಜಾಂಗಣದ ಗೋಡೆ ಮೇಲಿನ ಫೋಟೊ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ ಬಸವರಾಜನ್ ಅವರನ್ನು ಬಂಧನವಾಗಿದ್ದು, ೪ ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ

6. Gujarat Election | ಹಾರ್ದಿಕ್ ಪಟೇಲ್, ಕ್ರಿಕೆಟರ್ ಜಡೇಜಾ ಪತ್ನಿಗೆ ಟಿಕೆಟ್, ಬಿಜೆಪಿ ಅಭ್ಯರ್ಥಿಗಳ ಫಸ್ಟ್ ಲಿಸ್ಟ್!
ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕ್ರಿಕೆಟರ್ ರವೀಂದ್ರ ಜಡೇಜಾ ಅವರ ಪತ್ನಿಗೂ ಬಿಜೆಪಿ ಟಿಕೆಟ್ ನೀಡಿದ್ದು ಅವರು ಜಾಮ್ ನಗರ ಉತ್ತರ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಇದೇ ವೇಳೆ, ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಹಾರ್ದಿಕ್ ಪಟೇಲ್ ಅವರಿಗೂ ಟಿಕೆಟ್ ನೀಡಲಾಗಿದೆ. ವೀರಾಮಗಂ ಕ್ಷೇತ್ರದಿಂದ ಅವರು ಸ್ಪರ್ಧಿಸಲಿದ್ದಾರೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

7.WhatsApp Self Chat | ವಾಟ್ಸ್ಆ್ಯಪ್ ಸೆಲ್ಫ್ ಚಾಟ್ ಫೀಚರ್ ಶುರು, ಶೀಘ್ರ ಎಲ್ಲರಿಗೂ ಲಭ್ಯ
ಜನಪ್ರಿಯ ಆ್ಯಪ್ ವಾಟ್ಸ್ಆ್ಯಪ್ ಬಳಕೆದಾರರಿಗೆ ಅನುಕೂಲವಾಗುವ ಫೀಚರ್‌ಗಳನ್ನು ಜಾರಿಗೊಳಿಸುತ್ತಿದೆ. ಈ ಹಿಂದೆ ಘೋಷಣೆ ಮಾಡಿದಂತೆ ವಾಟ್ಸ್ಆ್ಯಪ್ ಸೆಲ್ಫ್ ಚಾಟ್ (WhatsApp Self Chat) ಫೀಚರ್ ಪರಿಚಯಿಸಿದ್ದು, ಸದ್ಯಕ್ಕೆ ಬೀಟಾ ವರ್ಷನ್‌ನಲ್ಲಿ ಮಾತ್ರ ದೊರೆಯುತ್ತಿದೆ. ಪರೀಕ್ಷೆ ಮುಗಿದ ಬಳಿಕ ಸೆಲ್ಫ್ ಚಾಟ್ ಫೀಚರ್ ಎಲ್ಲ ಬಳಕೆದಾರರಿಗೂ ಶೀಘ್ರವೇ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ನಾಲ್ಕೈದು ಫೀಚರ್‌ಗಳನ್ನು ಆ್ಯಡ್ ಮಾಡಿತ್ತು. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

8. PSI Scam | ಬಂಧಿತ ಎಡಿಜಿಪಿ ಅಮೃತ್ ಪಾಲ್, ಡಿವೈಎಸ್‌ಪಿ ಶಾಂತಕುಮಾರ್ ಮನೆ ಮೇಲೆ ಇ.ಡಿ ದಾಳಿ
ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ (PSI Scam) ಪ್ರಮುಖ ಬಂಧಿತ ಆರೋಪಿಗಳಾದ ಎಡಿಜಿಪಿ ಅಮೃತ್ ಪಾಲ್ ಮತ್ತು ಡಿವೈಎಸ್‌ಪಿ ಶಾಂತಕುಮಾರ್ ಮನೆಗಳ ಮೇಲೆ ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಆರೋಪಿಗಳ ವಿರುದ್ಧ ಆಗಸ್ಟ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ಸಂಬಂಧಪಟ್ಟ 11 ಸ್ಥಳಗಳಲ್ಲಿ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.‌ ಪೂರ್ಣ ವರದಿಗೆ ಕ್ಲಿಕ್‌ ಮಾಡಿ

. ವಿಸ್ತಾರ Money Guide | ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ 7.6% ಬಡ್ಡಿ: ಏನು? ಎತ್ತ?
ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS) ನಿವೃತ್ತರಿಗೆ ಅಚ್ಚುಮೆಚ್ಚಿನ ಹೂಡಿಕೆಯ ಆಯ್ಕೆಯಾಗಿದೆ. ಸರ್ಕಾರದ ಈ ಯೋಜನೆ ಹೇಗೆ ಕಾರ್ಯ ನಿರ್ವಹಿಸುತ್ತದೆ? ಇದರ ಪ್ರಯೋಜನ ಪಡೆಯುವುದು ಹೇಗೆ? ಇಲ್ಲಿದೆ ವಿವರ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೧೦. ‌ಟಿ೨೦ ವಿಶ್ವಕಪ್‌: ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ ಸೋಲು, ಟೀಮ್‌ ಇಂಡಿಯಾ ಅಭಿಯಾನ ಅಂತ್ಯ
ಟೀಮ್‌ ಇಂಡಿಯಾದ ದುರ್ಬಲ ಬೌಲಿಂಗ್‌ ವಿಭಾಗವನ್ನು ಚಿಂದಿ ಉಡಾಯಿಸಿದ ಇಂಗ್ಲೆಂಡ್‌ ತಂಡ, ಟಿ೨೦ ವಿಶ್ವ ಕಪ್‌ನ ಸೆಮಿ ಫೈನಲ್‌ ಪಂದ್ಯದಲ್ಲಿ 10 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಇದರೊಂದಿಗೆ ಭಾರತ ತಂಡದ ವಿಶ್ವ ಕಪ್‌ ಅಭಿಯಾನ ಉಪಾಂತ್ಯಕ್ಕೆ ಕೊನೆಗೊಂಡಿತು. ಭಾನುವಾರ ನಡೆಯುವ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಪಾಕಿಸ್ತಾನವನ್ನು ಎದುರಿಸಲಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

ಮತ್ತಷ್ಟು ಆಸಕ್ತಿಕರ ಸುದ್ದಿಗಳು

🔴 5G and Cancer | 5G ಮೊಬೈಲ್‌ಗಳಿಂದ ಕ್ಯಾನ್ಸರ್‌ ಬರುತ್ತಾ?, ಅಧ್ಯಯನ ವರದಿಗಳು ಹೇಳುವುದೇನು?
🔴‌ ಒಂದು ಟಗರು, ಹತ್ತು ಹೋರಿ ಕತೆ; ಕ್ಷಮೆಕೋರಿದ ಮುಕುಡಪ್ಪ, ನಾನು ಹೇಳಿರ್ಲಿಲ್ವಾ ಅಂದ್ರು ಸಿ.ಟಿ. ರವಿ
🔴‌ Aadhaar Rules | 10 ವರ್ಷಕ್ಕೊಮ್ಮೆ ಆಧಾರ್‌ ಕಾರ್ಡ್‌ ಪರಿಷ್ಕರಣೆ ಕಡ್ಡಾಯ: ಸರ್ಕಾರದಿಂದ ಅಧಿಸೂಚನೆ
🔴‌ Jio 5G | ಬೆಂಗಳೂರು, ಹೈದರಾಬಾದ್‌ನಲ್ಲಿ ಜಿಯೊ ಟ್ರೂ 5G ಸೇವೆ ಆರಂಭ
🔴‌ ವೀರ್‌ ದಾಸ್‌ ಕಾಮಿಡಿ ಶೋ ನಿಷೇಧಕ್ಕೆ ಆಗ್ರಹಿಸಿ ಹಿಂದು ಸಂಘಟನೆಗಳ ಪ್ರತಿಭಟನೆ, ಲಾಠಿ ಚಾರ್ಜ್‌

Exit mobile version