ವಿಸ್ತಾರ TOP 10 NEWS | 67 ಗಣ್ಯರಿಗೆ ರಾಜ್ಯೋತ್ಸವ ಗರಿಯಿಂದ ಗುಜರಾತ್‌ ಅವಘಡದಲ್ಲಿ 60ಕ್ಕೂ ಹೆಚ್ಚು ಸಾವಿನವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | 67 ಗಣ್ಯರಿಗೆ ರಾಜ್ಯೋತ್ಸವ ಗರಿಯಿಂದ ಗುಜರಾತ್‌ ಅವಘಡದಲ್ಲಿ 60ಕ್ಕೂ ಹೆಚ್ಚು ಸಾವಿನವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

TOP 10 NEWS 30102022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಜ್ಯ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಗೌರವಕ್ಕೆ 67 ಗಣ್ಯರನ್ನು ಘೋಷಣೆ ಮಾಡಲಾಗಿದೆ. ಗುಜರಾತ್‌ನಲ್ಲಿ ತೂಗು ಸೇತುವೆ ಕುಸಿತದ ದುರ್ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ನೀರುಪಾಲಾಗಿದ್ದಾರೆ. ಪತ್ರಕರ್ತರಿಗೆ ಲಂಚ ವಿವಾದ ಇದೀಗ ರಾಜಕೀಯ ತಿರುವು ಪಡೆದಿದೆ, ಭಗತ್‌ ಸಿಂಗ್‌ ಪಾತ್ರದ ರಿಹರ್ಸಲ್‌ ಮಾಡಲು ಹೋಗಿ ಬಾಲಕನೊಬ್ಬ ನೇಣುಬಿಗಿದುಕೊಂಡಿದ್ದಾನೆ, ದಕ್ಷಿಣ ಕೊರಿಯಾ ಕಾಲ್ತುಳಿತದಲ್ಲಿ 150ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ, ದಕ್ಷಿಣ ಕೊರಿಯಾ ವಿರುದ್ಧ ಭಾರತ ಪುರುಷರ ಕ್ರಿಕೆಟ್‌ ತಂಡ ಸೋಲನುಭವಿಸಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ರಾಜ್ಯೋತ್ಸವ ಪ್ರಶಸ್ತಿ | ಕೆ. ಶಿವನ್‌, ದತ್ತಣ್ಣ, ಅವಿನಾಶ್‌ ಸೇರಿ 67 ಸಾಧಕರಿಗೆ ರಾಜ್ಯೋತ್ಸವ; 10 ಸಂಸ್ಥೆಗಳಿಗೆ ʼಅಮೃತʼ ಗೌರವ
ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲಿಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್‌, ಸೇರಿ ಒಟ್ಟು 67 ಸಾಧಕರಿಗೆ ರಾಜ್ಯ ಸರ್ಕಾರವು 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಘೊಷಣೆ ಮಾಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನೂ ಘೋಷಣೆ ಮಾಡಲಾಗಿದೆ.
ಪ್ರಶಸ್ತಿಯು ತಲಾ 5 ಲಕ್ಷ ರೂ. ನಗದು ಹಾಗೂ 25 ಗ್ರಾಂ ಚಿನ್ನದ ನಾಣ್ಯವನ್ನು ಒಳಗೊಂಡಿರಲಿದೆ. ನವೆಂಬರ್‌ 1ರಂದು ರಾಜ್ಯೋತ್ಸವ ದಿನದ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Morbi Bridge Collapse | ಸೇತುವೆ ಕುಸಿತದಲ್ಲಿ ಮೃತರ ಸಂಖ್ಯೆ 60ಕ್ಕೆ, 143 ವರ್ಷದ ಸೇತುವೆ ಕುಸಿಯಲು ಕಾರಣವೇನು?
ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು (Machchu) ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗುಸೇತುವೆ ಕುಸಿತದಲ್ಲಿ (Morbi Bridge Collapse) ಮೃತಪಟ್ಟವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಮೊರ್ಬಿಗೆ ತೆರಳಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ದುರಂತದಲ್ಲಿ 70ಕ್ಕೂ ಅಧಿಕ ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರವು ಮೃತರ ಕುಟುಂಬಸ್ಥರಿಗೆ ಪರಿಹಾರವನ್ನೂ ಘೋಷಿಸಿದ್ದಾರೆ. ಸಾವಿನ ಸಂಖ್ಯೆ ಜಾಸ್ತಿಯಾಗಲಿದೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. BJP OBC Convention | ಹಿಂದುಳಿದವರ ಮತ ಪಡೆದು ರಾಜ್ಯವೇ ಹಿಂದುಳಿಯುವಂತೆ ಮಾಡಿದ ಕಾಂಗ್ರೆಸ್: ಸಿಎಂ ಬೊಮ್ಮಾಯಿ
ಹಲವು ವರ್ಷಗಳಿಂದರಾಜ್ಯದಲ್ಲಿಹಿಂದುಳಿದ ವರ್ಗದವರನ್ನು ಕತ್ತಲಲ್ಲಿಡುವ ಕಾರ್ಯ ನಡೆದಿತ್ತು. ಹಿಂದುಳಿದವರ ಮತ ಪಡೆದು ರಾಜ್ಯವೇ ಹಿಂದುಳಿಯುವ ಹಾಗೆ ಕಾಂಗ್ರೆಸ್ ಮಾಡಿದೆ. ಆದರೆ, ರಾಜ್ಯದಲ್ಲಿ ಬದಲಾವಣೆ ಕಾಲ ಬಂದಿದೆ. ಹಿಂದುಳಿದ ವರ್ಗಗಳ ಏಳಿಗೆಗೆ ಬಿಜೆಪಿ(BJP OBC convention) ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಕೆಸರಟಗಿ ರದ್ದೇವಾಡಗಿ ಲೇಔಟ್‌ನಲ್ಲಿ ಭಾನುವಾರ ಆಯೋಜಿಸಿದ್ದ ಹಿಂದುಳಿದ ವರ್ಗಗಳ ವಿರಾಟ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರೋದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿ.ಎಸ್‌.ಯಡಿಯೂರಪ್ಪ

4. ಪತ್ರಕರ್ತರಿಗೆ ಲಂಚ ವಿವಾದ: ಕಾಂಗ್ರೆಸ್‌ ಜಂಟಿ ಆರೋಪಕ್ಕೆ BJP ಜಂಟಿ ಪ್ರತ್ಯುತ್ತರ
ರಾಜ್ಯದಲ್ಲಿ ಕೆಲ ಮಾಧ್ಯಮ ಪ್ರತಿನಿಧಿಗಳಿಗೆ ದೀಪಾವಳಿ ಸ್ವೀಟ್‌ ಬಾಕ್ಸ್‌ನಲ್ಲಿ ಸಿಎಂ ಕಚೇರಿಯಿಂದ ಹಣ ನೀಡಲಾಗಿದೆ ಎಂಬ ಆರೋಪದ ಕುರಿತು ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್‌ ನಡುವೆ ಜಟಾಪಟಿ ನಡೆದಿದೆ. ಮೊದಲಿಗೆ ಕಾಂಗ್ರೆಸ್‌ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಆರೋಪಗಳ ಸುರಿಮಳೆ ಮಾಡಿದರು. ಇದಕ್ಕೆ ಪ್ರತಿಯಾಗಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಂದಾಯ ಸಚಿವ ಆರ್‌. ಅಶೊಕ್‌ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಸುದ್ದಿಗೋಷ್ಠಿ ನಡೆಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: ಪತ್ರಕರ್ತರಿಗೆ ಲಂಚ ಎನ್ನುವುದು ಕಾಂಗ್ರೆಸ್‌ ಟೂಲ್‌ಕಿಟ್‌ನ ಸುಳ್ಳು ಎಂದ ಸಿಎಂ ಬೊಮ್ಮಾಯಿ: ಕಾಂಗ್ರೆಸ್‌ಗೆ ನೋಟಿಸ್‌

5. Seer Suicide | ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ; ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿಗೆ 14 ದಿನ ನ್ಯಾಯಾಂಗ ಬಂಧನ
ಕಂಚುಗಲ್ ಬಂಡೇಮಠ ಬಸವಲಿಂಗ ಸ್ವಾಮೀಜಿ (Seer Suicide) ಆತ್ಮಹತ್ಯೆ ಪ್ರಕರಣ ಸಂಬಂಧ ಬಂಧಿತರಾಗಿರುವ ಮೂವರು ಆರೋಪಿಗಳಲ್ಲಿ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಬಂಡೇಮಠದ ಬಸವಲಿಂಗ ಸ್ವಾಮೀಜಿ ಹಾಗೂ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಇಬ್ಬರು ದೊಡ್ಡಪ್ಪ, ಚಿಕ್ಕಪ್ಪನ ಮಕ್ಕಳಾಗಿದ್ದು, ಮೊದಲಿನಿಂದಲೂ ಜಮೀನು ವಿಚಾರವಾಗಿ ಇಬ್ಬರ ನಡುವೆ ತಕರಾರು ನಡೆಯುತ್ತಿತ್ತು ಎನ್ನಲಾಗಿದೆ. ಜಾಗದ ವಿಚಾರವು ಕೋರ್ಟ್‌ನಲ್ಲಿತ್ತು, ಇದೇ ವಿಚಾರವಾಗಿ ಇಬ್ಬರ ನಡುವೆ ಸಾಕಷ್ಟು ಬಾರಿ ಜಗಳವೂ ಆಗಿತ್ತೆಂದು ತಿಳಿದು ಬಂದಿದೆ. ಮೊದಲಿನಿಂದಲೂ ಮನಸ್ತಾಪ ಇದ್ದ ಕಾರಣದಿಂದ ಹನಿಟ್ರ್ಯಾಪ್‌ ಮಾಡಿಸಿರುವ ಶಂಕೆ ವ್ಯಕ್ತವಾಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. ಭಗತ್‌ ಸಿಂಗ್‌ ಪಾತ್ರದ ರಿಹರ್ಸಲ್‌ ಮಾಡಲು ಹೋಗಿ ನೇಣು ಬಿಗಿದುಕೊಂಡ ಬಾಲಕ
ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಶಾಲೆಯಲ್ಲಿ ಭಗತ್‌ ಸಿಂಗ್‌ ಪಾತ್ರವನ್ನು ನಿರ್ವಹಣೆ ಮಾಡಲು ರಿಹರ್ಸಲ್‌ ಮಾಡಲು ಹೋಗಿ ಏಳನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಎಸ್‌ಎಲ್‌ವಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸಂಜಯ್‌ ಗೌಡ( 12) ಮೃತ ದುರ್ದೈವಿ. ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಶಾಲೆಯಲ್ಲಿ ವಿವಿಧ ಪಾತ್ರಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಚಿತ್ರದುರ್ಗದ ನಗರದ ಕೆಳಗೋಟೆ ಬಡಾವಣೆಯ ನಿವಾಸಿಯಾಗಿದ್ದ ಸಂಜಯ್‌ ಭಗತ್‌ ಸಿಂಗ್‌ ಪಾತ್ರ ಮಾಡುವುದಿತ್ತು. ಶಾಲೆಯಲ್ಲಿ ರಿಹರ್ಸಲ್‌ ಮಾಡಿದ್ದರ ಜತೆಗೆ ಮನೆಯಲ್ಲೂ ರಿಹರ್ಸಲ್‌ ಮಾಡಲು ಮುಂದಾಗಿದ್ದ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Suicide attempt | ಶಾಸಕರ ಹೆಸರಲ್ಲಿ ಡೆತ್‌ನೋಟ್‌ ಬರೆದು ಮಹಿಳೆ ಆತ್ಮಹತ್ಯೆಗೆ ಯತ್ನ
ಶಾಸಕರ ಹೆಸರಲ್ಲಿ ಡೆತ್‌ನೋಟ್ ಬರೆದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಕುಂತಲಾ ಮನಸೂರ ಎಂಬುವವರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ (Suicide attempt) ಯತ್ನಿಸಿದವರು. ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕಿರಿಯ ಸಹಾಯಕಿ ಆಗಿ ಕೆಲಸ ಮಾಡುತ್ತಿದ್ದ ಶಕುಂತಲಾ ಅವರನ್ನು ಲಂಚ ತೆಗೆದುಕೊಂಡ ಆರೋಪದ ಮೇಲೆ ಕಳೆದ ನಾಲ್ಕು ತಿಂಗಳ ಹಿಂದೆ ಕೆಲಸದಿಂದ ತೆಗೆದುಹಾಕಲಾಗಿತ್ತು.
ಸಚಿವ ಶ್ರೀರಾಮುಲು ಶನಿವಾರ ಧಾರವಾಡಕ್ಕೆ ಬಂದಾಗ, ಅಮಾನತು ತೆರವುಗೊಳಿಸುವಂತೆ ಮನವಿ ಕೊಡಲು ಮಹಿಳೆ ಬಂದಿದ್ದರು. ಶ್ರೀರಾಮುಲು ಸಿಗದೇ ಇದ್ದಾಗ ಧಾರವಾಡದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರಿಗೆ ಮನವಿ ಕೊಡಲು ಹೋಗಿದ್ದರು. ಈ ವೇಳೆ ಶಾಸಕರು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. IND vs SA | ನೀರಸ ಬ್ಯಾಟಿಂಗ್‌, ಕಳಪೆ ಫೀಲ್ಡಿಂಗ್‌; ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡಕ್ಕೆ 5 ವಿಕೆಟ್‌ ಸೋಲು
ಬ್ಯಾಟಿಂಗ್‌ ವಿಭಾಗದ ವೈಫಲ್ಯ ಹಾಗೂ ಪ್ರಮುಖ ಘಟ್ಟದಲ್ಲಿ ಕಳಪೆ ಫೀಲ್ಡಿಂಗ್‌ ಮಾಡಿದ ಭಾರತ ತಂಡ ಟಿ೨೦ ವಿಶ್ವ ಕಪ್‌ನ ಗುಂಪು ೨ರ ತನ್ನ ೩ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (IND vs SA) ವಿರುದ್ಧ 5 ವಿಕೆಟ್‌ಗಳ ಸೋಲಿಗೆ ಒಳಗಾಯಿತು. ಈ ಮೂಲಕ ಸೂರ್ಯಕುಮಾರ್‌ ಯಾದವ್‌ ಅವರ ಏಕಾಂಗಿ ಹೋರಾಟ ವ್ಯರ್ಥಗೊಂಡಿತು. ಈ ಹಣಾಹಣಿ ಗೆದ್ದ ದಕ್ಷಿಣ ಆಫ್ರಿಕಾ ತಂಡ ಗುಂಪು ಹಂತದ ಅಂಕಪಟ್ಟಿಯಲ್ಲಿ ೫ ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದರೆ, ಭಾರತ ೪ ಅಂಕಗಳೊಂದಿಗೆ ಅಗ್ರ ಸ್ಥಾನ ಕಳೆದುಕೊಂಡಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. South Korea stampede| ದಕ್ಷಿಣ ಕೊರಿಯಾದಲ್ಲಿ ಪಾರ್ಟಿ ವೇಳೆ ಕಾಲ್ತುಳಿತ, ಮೃತರ ಸಂಖ್ಯೆ151 ಕ್ಕೆ ಏರಿಕೆ
ದಕ್ಷಿಣ ಕೊರಿಯಾದಲ್ಲಿ ಹಾಲೊವೀನ್‌ ಪಾರ್ಟಿ (Halloween Party) (ಭೂತದ ವೇಷ ಧರಿಸಿ ಪಾರ್ಟಿ ಮಾಡುವುದು) ವೇಳೆ ಕಾಲ್ತುಳಿತ ಉಂಟಾಗಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 151 ಕ್ಕೆ ಏರಿಕೆಯಾಗಿದೆ. ಕನಿಷ್ಠ 270 ಮಂದಿ ಕಣ್ಮರೆಯಾಗಿದ್ದಾರೆ. ಗಾಯಾಳುಗಳನ್ನು ಹಾಗೂ ಹೃದಯಾಘಾತಕ್ಕೀಡಾದವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲು ಕೂಡ ಅಧಿಕಾರಿಗಳಿಗೆ ಕಷ್ಟವಾಗಿದೆ. ಘಟನೆಯಲ್ಲಿ 150ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.‌ ಈ ದುರ್ಘಟನೆಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಸೇರಿದಂತೆ ವಿಶ್ವ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. C-295 Planes | ಸೇನೆಗಾಗಿ ಸರಕು ಸಾಗಣೆ ವಿಮಾನ ಉತ್ಪಾದನೆ ಘಟಕಕ್ಕೆ ಮೋದಿ ಶಿಲಾನ್ಯಾಸ, ಆತ್ಮನಿರ್ಭರಕ್ಕೆ ಬಲ
ಗುಜರಾತ್‌ನ ವಡೋದರಾದಲ್ಲಿ ಭಾರತದ ವಾಯುಪಡೆಗಾಗಿ ಸರಕು ಸಾಗಣೆ ವಿಮಾನಗಳನ್ನು ಉತ್ಪಾದಿಸುವ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ದಾರೆ. ದೇಶದಲ್ಲಿಯೇ ಮೊದಲ ಬಾರಿಗೆ ಖಾಸಗಿ ಕಂಪನಿಯೊಂದು ವಾಯುಪಡೆಗಾಗಿ ವಿಮಾನಗಳನ್ನು ಉತ್ಪಾದಿಸಲಾಗುತ್ತಿದ್ದು, ಇದು ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿದೆ ಎಂದು ಮೋದಿ ಹೇಳಿದ್ದಾರೆ. ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್ (Tata Advanced Systems-TASL)‌ ಸಿ-295 ವಿಮಾನಗಳನ್ನು (C-295 Planes) ವಡೋದರಾದ ಘಟಕದಲ್ಲಿ ಉತ್ಪಾದಿಸಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

🔴30-40% ಲಂಚಕ್ಕೆ ಬೇಡಿಕೆ: ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗುತ್ತಿಗೆದಾರ
🔴Textbook Controversy | ಸರ್ಕಾರದಿಂದ ಮತ್ತೊಂದು U-Turn: ತೆಗೆದಿದ್ದ ಪಠ್ಯ ಮತ್ತೆ ಬೋಧನೆಗೆ ಆದೇಶ
🔴 Pothole | ಬೆಂಗಳೂರು ರಸ್ತೆ ಗುಂಡಿಯಿಂದಾಗಿ ಬೈಕ್‌ ಸವಾರ ಸಾವು
🔴 Mann ki baat | ವೃಕ್ಷ ಸಂರಕ್ಷಕ, ಕನ್ನಡ ಹೋರಾಟಗಾರ ಸುರೇಶ್‌ ಕುಮಾರ್‌ಗೆ ಪ್ರಧಾನಿ ಮೋದಿ ಶ್ಲಾಘನೆ
🔴 General Consent To CBI | ಸಿಬಿಐಗೆ ನೀಡಿದ್ದ ಮುಕ್ತ ಸಮ್ಮತಿ ಹಿಂಪಡೆದ ತೆಲಂಗಾಣ ಸರ್ಕಾರ, ಕೇಂದ್ರಕ್ಕೆ ಸೆಡ್ಡು
🔴 ಶಬ್ದ ಸ್ವಪ್ನ ಅಂಕಣ | ಪಾಡು ಹಾಡು
🔴 Hori Habba 2022 | ಶಿವಮೊಗ್ಗದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯ ಅವಘಡ: ಇಬ್ಬರು ಯುವಕರ ಸಾವು
🔴 ಪ್ರಣಾಮ್‌ ಭಾರತ್‌ ಅಂಕಣ | ಒಂದು ಬೊಗಸೆ ಏಲಕ್ಕಿ
🔴 ಪೋಸ್ಟ್‌ ಬಾಕ್ಸ್‌ 143 | ಕಣ್ಣಲ್ಲೇ ಇದೆ ಎಲ್ಲಾ ಕಾಗದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

Drowned In water : ಹೆತ್ತವರ ಕಣ್ಣೇದುರಿಗೆ ಇಬ್ಬರು ಪುತ್ರಿಯರು ನೀರುಪಾಲಾದ ದುರಂತ ನಡೆದಿದೆ. ನೇತ್ರಾವತಿ ನದಿ ತೀರಕ್ಕೆ ತೆರಳಿದವರು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Drowned in water
ಸಾಂದರ್ಭಿಕ ಚಿತ್ರ
Koo

ಪುತ್ತೂರು: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ (Drowned In water) ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ.

ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಏಕಾಏಕಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ. ಪೋಷಕರ ಮುಂದೆಯೇ ಬಾಲಕಿಯರು ನೀರುಪಾಲಾಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಪೋಷಕರು ಅಸಹಾಯಕರಾಗಿದ್ದರು.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಈಗಾಗಲೇ ರೇವಣ್ಣ ಎಸ್‌ಐಟಿ ವಶದದಲ್ಲಿದ್ದಾರೆ. ಪ್ರಜ್ವಲ್‌ ಬಂಧನಕ್ಕೆ ಅಧಿಕಾರಿಗಳು ಹೊಂಚು ಹಾಕಿದ್ದಾರೆ. ಇತ್ತ ರೇವಣ್ಣ ಅವರ ಪತ್ನಿ ಭವಾನಿ ಅವರಿಗೂ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ(Hassan Pen Drive Case)ದಲ್ಲಿ ದಿನಕ್ಕೊಂಡು ಬೆಳವಣಿಗೆ ನಡೆಯುತ್ತದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆಯನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ.

ಎರಡು ಕೇಸ್‌ನಲ್ಲಿ ಸಂತ್ರಸ್ತೆಯರು ಭವಾನಿ ರೇವಣ್ಣ ಅವರ ಹೆಸರು ಉಲ್ಲೇಖಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಮತ್ತು ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿದೆ. ಅದರಲ್ಲಿಯೂ ಅಪಹರಣ ಕೇಸ್‌ನಲ್ಲಿ ನೇರವಾಗಿ ಭವಾನಿ ರೇವಣ್ಣ ಅವರ ವಿರುದ್ಧ ಆರೋಪ ಮಾಡಲಾಗಿದೆ. ಭವಾನಿ ರೇವಣ್ಣ ಕರೆದರು ಎಂದು ಹೇಳಿಯೇ ಅಪಹರಣ ಮಾಡಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಕಿಡ್ನಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣ ಅವರಿಗೆ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ.

ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸುತ್ತಿರುವ ಎಸ್‌ಐಟಿ ಈಗಾಗಲೇ ಭವಾನಿ ರೇವಣ್ಣ ಅವರಿಗೆ ನೋಟಿಸ್‌ ನೀಡಿ ಮಾಹಿತಿ ಪಡೆದಿದೆ. ತನಿಖೆ ವೇಳೆ ಅವರ ವಿರುದ್ಧ ಸಾಕ್ಷಿ ಕಂಡು ಬಂದರೆ ಅವರೂ ಕಾನೂನಿನ ಕೈಗೆ ಸಿಲುಕಿಕೊಳ್ಳಲಿದ್ದಾರೆ. ಸದ್ಯ ಭವಾನಿ ರೇವಣ್ಣ ಅವರ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್ ರೇವಣ್ಣಗಾಗಿ ತೀವ್ರ ಹುಡುಕಾಟ

ಇತ್ತ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ ಅವರಿಗಾಗಿ ಎಸ್‌ಐಟಿ ತೀವ್ರ ಹುಡುಕಾಟ ನಡೆಸುತ್ತಿದೆ. ಬ್ಲೂ ಕಾರ್ನರ್ ನೋಟಿಸ್ ಜತೆಗೆ ರೆಡ್ ಕಾರ್ನರ್ ನೋಟಿಸ್‌ ಹೊರಡಿಸಲು ಸಿಬಿಐಗೆ ಎಸ್‌ಐಟಿ ಮನವಿ ಸಲ್ಲಿಸಿದೆ. ಪ್ರಜ್ವಲ್ ರೇವಣ್ಣ ಬಳಿ ಇರುವ ರಾಜತಾಂತ್ರಿಕ ಪಾಸ್‌ಪೋರ್ಟ್ ಸಹ ವಜಾಗೊಳಿಸಲು ಆಗ್ರಹಿಸಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ನಿಂದ ಕೊನೆಯ ಬಾರಿ ಯಾವ ದೇಶಕ್ಕೆ ಟಿಕೇಟ್ ಬುಕ್ ಅಗಿದೆ ಎಂಬ ಮಾಹಿತಿಯನ್ನೂ ಎಸ್‌ಐಟಿ ಕಲೆ ಹಾಕುತ್ತಿದೆ. ಕೊನೆಯ ಬಾರಿ ಯಾವ ಏರ್‌ಪೋರ್ಟ್‌ ತಲುಪಿದ್ದಾರೆ ಎನ್ನುವ ಮಾಹಿತಿ ನೀಡಲು ರೆಡ್ ಕಾರ್ನರ್ ನೊಟೀಸ್ ನೀಡಿ ಮನವಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿಲು ಎಲ್ಲ ರೀತಿಯಿಂದಲೂ ಎಸ್‌ಐಟಿ ಪ್ರಯತ್ನ ಪಡುತ್ತಿದೆ. ಪ್ರಜ್ವಲ್ ರೇವಣ್ಣ ಅವರು ಆಪ್ತರ ಜತೆ ಸಂಪರ್ಕದಲ್ಲಿರುವ ಹಿನ್ನೆಲೆಯಲ್ಲಿ ಆಪ್ತರು ಹಾಗೂ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ. ರಾಜ್ಯದಲ್ಲಿ ಎರಡನೇ ಹಂತ ಮುಗಿದ ನಂತರ ಪ್ರಜ್ವಲ್‌ ಎಸ್‌ಐಟಿ ಮುಂದೆ ಶರಣಾಗುತ್ತಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ. ಅದಾಗ್ಯೂ ದೇಶದ ಪ್ರಮುಖ ಏರ್‌ಪೋರ್ಟ್‌ಗಳಲ್ಲಿ ಎಸ್‌ಐಟಿ ಅಧಿಕಾರಿಗಳು ಮೇಲೆ ನಿಗಾ ವಹಿಸಿದ್ದಾರೆ. ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ.

Continue Reading

ಕರ್ನಾಟಕ

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ಎಸ್‌ಐಟಿ ತೀವ್ರಗೊಳಿಸಿದೆ. ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಆದರೆ ಬೇಲ್‌ ಸಿಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ಎಸ್‌ಐಟಿ ತೀವ್ರಗೊಳಿಸಿದೆ. ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯು ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನೆಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Continue Reading

ಕರ್ನಾಟಕ

Dr.Nagareddy Patil: ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು.

VISTARANEWS.COM


on

Dr.Nagareddy Patil
Koo

ಕಲಬುರಗಿ: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ (Dr.Nagareddy Patil) ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು.

ನಾಗರೆಡ್ಡಿ ಅವರ ಪುತ್ರ ಶಿವಶರಣರೆಡ್ಡಿ ಪಾಟೀಲ್‌ ಸದ್ಯ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ನಾಗರೆಡ್ಡಿ ಅವರು ಸಹೋದರ ಮತ್ತು ಸಹೋದರಿಯರು, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಇಂದು (ಮೇ 6) ಅಪರಾಹ್ನ 3.30ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

1983-85ರ ಅವಧಿಯಲ್ಲಿ ಬಿಜೆಪಿ ಶಾಸಕರಾಗಿದ್ದ ಡಾ.ನಾಗರೆಡ್ಡಿ ಬಳಿಕ ಜನತಾದಳ ಸೇಪರ್ಡೆಯಾಗಿದ್ದರು. ಬಳಿಕ ಕಾಂಗ್ರೆಸ್‌ ಸೇರಿದ್ದ ಅವರು ಸುಮಾರು ಎರಡು ದಶಕಗಳಿಂದ ಕಾಂಗ್ರೆಸನಲ್ಲೇ ಇದ್ದರು.

ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ವಾರದ ಹಿಂದೆ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದರು.

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು. 

ಇದನ್ನೂ ಓದಿ: A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

Continue Reading
Advertisement
Drowned in water
ದಕ್ಷಿಣ ಕನ್ನಡ16 mins ago

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ED Raid
ದೇಶ29 mins ago

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

Mahanati Show Gagana Comedy About Rishi actor
ಕಿರುತೆರೆ39 mins ago

Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

amethi unrest
ದೇಶ54 mins ago

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Paris Olympics
ಕ್ರೀಡೆ2 hours ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ2 hours ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್2 hours ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

Megha Dhade bigg boss marathi winner crptic post about rahul gandhi
ಸಿನಿಮಾ2 hours ago

Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರುದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

Prajwal Revanna Case
ಕರ್ನಾಟಕ2 hours ago

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ16 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ17 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ18 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌