vistara top 10 news sengol installed in new parliament to contaminated water problem in raichur and more newsವಿಸ್ತಾರ TOP 10 NEWS: ರಾಜದಂಡದೆದುರು ರಾಜ್ಯಭಾರ ಆರಂಭದಿಂದ, ರಾಯಚೂರಿನಲ್ಲಿ ವಿಷವಾದ ಜೀವಜಲವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS: ರಾಜದಂಡದೆದುರು ರಾಜ್ಯಭಾರ ಆರಂಭದಿಂದ, ರಾಯಚೂರಿನಲ್ಲಿ ವಿಷವಾದ ಜೀವಜಲವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Vistara Top 10 News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ವಿಸ್ತಾರ Explainer: ಹೊಸ ಸಂಸತ್​ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?
ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ಇಂದು ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದಾರೆ. ಹಾಗೇ, ಹೊಸದಾಗಿ ನಿರ್ಮಾಣವಾದ ಸಂಸತ್​ ಭವನದಲ್ಲಿ ತಮಿಳುನಾಡಿನ ’ರಾಜದಂಡ’ (ಸೆಂಗೋಲ್​) ವನ್ನು ಪ್ರತಿಷ್ಠಾಪಿಸಿದ್ದಾರೆ. ಸ್ಪೀಕರ್​ ಕುರ್ಚಿಯ ಪಕ್ಕವೇ ರಾಜದಂಡವೂ ನಿಂತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. New Parliament Building: ಸಂಸತ್‌ ಭವನದಲ್ಲಿ ಕನ್ನಡ ಕಂಪು; ಬಸವಣ್ಣನ ವಚನದ ಇಂಪು, ಇಲ್ಲಿದೆ ವಿಡಿಯೊ
ಪ್ರಜಾಪ್ರಭುತ್ವದ ದೇಗುಲದ ರೀತಿ ತಲೆಯೆತ್ತಿರುವ ನೂತನ ಸಂಸತ್‌ ಭವನಕ್ಕೆ (New Parliament Building) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಬಳಕೆ, ಉತ್ತಮ ಆಸನ ವ್ಯವಸ್ಥೆ ಸೇರಿ ಸಕಲ ಸೌಕರ್ಯಗಳಿರುವ ನೂತನ ಸಂಸತ್‌ ಭವನದ ನಿರ್ಮಾಣಕ್ಕೆ ದೇಶದ ಹತ್ತಾರು ಭಾಗಗಳಿಂದ ಕಲ್ಲು, ಮಾರ್ಬಲ್‌ ಸೇರಿ ಹಲವು ವಸ್ತುಗಳನ್ನು ಬಳಸಲಾಗಿದೆ. ಆಯಾ ಪ್ರಾದೇಶಿಕ ಗಣ್ಯರ ಫೋಟೊಗಳು, ಸಂದೇಶಗಳನ್ನೂ ಸಂಸತ್‌ ಭವನದಲ್ಲಿ ಕೆತ್ತಲಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಸಂಸತ್‌ ಭವನದಲ್ಲಿ ಬಸವಣ್ಣನವರ ಫೋಟೊ, ಅವರ ವಚನವನ್ನು ಕನ್ನಡದಲ್ಲಿ ಕೆತ್ತಲಾಗಿದೆ. ಆ ಮೂಲಕ ಪ್ರಾದೇಶಿಕ ವೈವಿಧ್ಯತೆಗೂ ಆದ್ಯತೆ ನೀಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಹೊಸ ಸಂಸತ್‌ ಭವನ ಉದ್ಘಾಟನೆಯ ಎಲ್ಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

3. congress guarantee: ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಸೆದಂತೆ ಗ್ಯಾರಂಟಿ ಜಾರಿ ಅಸಾಧ್ಯ: ಸತೀಶ್‌ ಜಾರಕಿಹೊಳಿ
ಕಾಂಗ್ರೆಸ್‌ ಸಚಿವರಿಬ್ಬರಾದ ಸತೀಶ್‌ ಜಾರಕಿಹೊಳಿ ಹಾಗೂ ಕೆ.ಎನ್.‌ ರಾಜಣ್ಣ, ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಮಾತನಾಡಿದ್ದು, ಚುನಾವಣೆ ಸಂದರ್ಭದಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್ (congress guarantee card) ಎಸೆದ ಹಾಗೆ ನಾವು ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: congress guarantee: ಗ್ಯಾರಂಟಿಗಳ ಅನುಷ್ಠಾನವು ಸಿದ್ದರಾಮಯ್ಯ ಚೆಕ್‌ಗೆ ಸಹಿ ಹಾಕುವಷ್ಟು ಸುಲಭ ಅಲ್ಲ: ಸಚಿವ ಡಾ. ಸುಧಾಕರ್

4. Karnataka Cabinet: ಬಸ್‌ ಓಡಿಸೋದಿಲ್ಲ ಎಂದಿದ್ದ ರಾಮಲಿಂಗಾರೆಡ್ಡಿ: ಡಿ.ಕೆ. ಬ್ರದರ್ಸ್‌ ʼಗ್ಯಾರಂಟಿಗೆʼ ಸಮ್ಮತಿ
ಸಚಿವ ಸಂಪುಟ ವಿಸ್ತರಣೆ ನಂತರದಲ್ಲಿ ಎದ್ದಿರುವ ಅಸಮಾಧಾನವನ್ನು ಒಂದೊಂದಾಗಿ ನಿವಾರಣೆ ಮಾಡಿಕೊಂಡು ಬರಲು ಮುಂದಾಗಿರುವ ಕಾಂಗ್ರೆಸ್‌, ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಮನವೊಲಿಸುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ಯಶಸ್ವಿಯಾಗಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Contaminated Water: ರೇಖಲಮರಡಿ ಬಳಿಕ ಗೊರೆಬಾಳದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಬಿಸಿಲ ನಾಡು ರಾಯಚೂರಲ್ಲಿ ಜೀವಜಲವೇ ವಿಷಪೂರಿತವಾಗಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕಲುಷಿತ ನೀರು ಪೂರೈಕೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ರೇಖಲಮರಡಿ ಗ್ರಾಮ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರಿನಿಂದ ಜನರಿಗೆ ಕಿಡ್ನಿ ವೈಫಲ್ಯವಾಗಿದೆ. ಮೂರು ಜನರ ಸ್ಥಿತಿ ಚಿಂತಾಜನಕವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. All in One Insurance Policy : ಬರಲಿದೆ ಅಗ್ಗದ ದರದಲ್ಲೇ ಗೇಮ್‌ ಚೇಂಜರ್‌ ವಿಮೆ ಪಾಲಿಸಿ, ಪ್ರಯೋಜನವೇನು?
ವಿಮೆ ಮಾರುಕಟ್ಟೆ ನಿಯಂತ್ರಕ ಐಆರ್‌ಡಿಎಐ, ಕೈಗೆಟಕುವ ದರದಲ್ಲಿ ಆರೋಗ್ಯ, ಜೀವ, ಪ್ರಾಪರ್ಟಿ ಮತ್ತು ಅಪಘಾತ ಪರಿಹಾರವನ್ನು ಒಳಗೊಂಡಿರುವ ಸಮಗ್ರ ವಿಮೆಯನ್ನು ( All in One Insurance Policy) ಬಿಡುಗಡೆಗೊಳಿಸಲಿದೆ. ಇದರ ವಿವರಗಳನ್ನು ನೋಡೋಣ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. IPL 2023: ಐಪಿಎಲ್​ ಟ್ರೋಫಿಯಲ್ಲಿ ಬರೆಯಲಾದ ಸಂಸ್ಕೃತ ಶ್ಲೋಕದ ಅರ್ಥವೇನು?
16ನೇ ಆವೃತ್ತಿಯ ಐಪಿಎಲ್​ನ ಫೈನಲ್‌ನಲ್ಲಿ ಚೆನ್ನೈ ಮತ್ತು ಗುಜರಾತ್​ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಈ ಬಾರಿ ಯಾರು ಕಪ್ ಗೆಲ್ಲಲಿದ್ದಾರೆ ಎಂಬ ಕುತೂಹಲದ ಮಧ್ಯೆ ಟ್ರೋಫಿಯಲ್ಲಿ ಬರೆದಿರುವ ಸಂಸ್ಕೃತ ಶ್ಲೋಕದ ಅರ್ಥವೇನು ಎಂಬ ಮತ್ತೊಂದು ಕುತೂಹಲ ಮೂಡಿದೆ. ಇಲ್ಲಿದೆ ಮಾಹಿತಿ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Mann Ki Baat : 101ನೇ ಮನ್‌ ಕಿ ಬಾತ್‌ನಲ್ಲಿ ವೀರ ಸಾವರ್ಕರ್‌ ವಿಚಾರಗಳ ಬಗ್ಗೆ ಮೋದಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿಯವರು 101ನೇ ಮನ್‌ ಕಿ ಬಾತ್‌ (Mann Ki Baat) ಬಾನುಲಿ ಕಾರ್ಯಕ್ರಮದಲ್ಲಿ ಭಾನುವಾರ, ವೀರ ಸಾವರ್ಕರ್‌ ಜನ್ಮದಿನದ ಪ್ರಯುಕ್ತ ಅವರ ಬದುಕು-ಸಾಧನೆಯನ್ನು ಸ್ಮರಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Savarkar Jayanti: ಭಾರತೀಯರನ್ನು ಸ್ವಸ್ವರೂಪದ ಅರಿವಿನೆಡೆಗೆ ನಡೆಸಿದ ವೀರ ಸಾವರ್ಕರ್‌

9. Kannada New Movie: ʻಡೇರ್‌ಡೆವಿಲ್‌ ಮುಸ್ತಾಫಾ‌ʼ ಅಮೋಘ ಪ್ರದರ್ಶನ; ಹೊರದೇಶದಲ್ಲಿ ತೆರೆಕಾಣಲಿದೆ ಸಿನಿಮಾ
ಕಳೆದ ಆರೇಳು ತಿಂಗಳಿನಿಂದ ಥಿಯೇಟರ್‌ನಲ್ಲಿ ಯಾವ ಸಿನಿಮಾಗೂ‌ ಸಿಗದ ಮೆಚ್ಚುಗೆ ಡೇರ್‌ ಡೆವಿಲ್‌ ಮುಸ್ತಾಫಾನ ಪಾಲಾಗಿದೆ. ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು ಸೇರಿದಂತೆ 40 ಸೆಂಟರ್‌ಗಳಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಚಿತ್ರಕ್ಕೆ ಈ ಮಟ್ಟಿಗಿನ ವಿಮರ್ಶೆ ಹಾಗೂ ಬೇಡಿಕೆ ಸಿಗುತ್ತಿರುವ ಬೆನ್ನಲ್ಲೆ ವಿದೇಶದಲ್ಲಿ ಡೇರ್‌ಡೆವಿಲ್‌ ಮುಸ್ತಾಫಾ‌ ದರ್ಶನಕ್ಕೆ ಚಿತ್ರತಂಡ ಸಜ್ಜಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Viral Post: ಸಾಮಾಜಿಕ ಜಾಲತಾಣದಲ್ಲಿ ಕೋಟಿಗಟ್ಟಲೆ ದುಡಿಯುವ ನಾಯಿಯಿದು!
ಸಾಮಾಜಿಕ ಜಾಲತಾಣಗಳು ಬಂದ ಮೇಲೆ, ಇನ್‌ಫ್ಲುಯೆಂಜರ್‌ಗಳ ಜೀವನದ ಬಗೆಗೆ ಸಾಕಷ್ಟು ಚರ್ಚೆಗಳಾಗಿವೆ. ಇನ್ಸ್‌ಟಾಗ್ರಾಂನಂತಹ ಜಾಲತಾಣದಲ್ಲಿ ಇನ್ಫ್ಲುಯೆಂಜರ್‌ಗಳು ಎಷ್ಟು ದುಡ್ಡು ಸಂಪಾದಿಸಬಹುದು ಎಂಬ ಬಗ್ಗೆ ಸದಾ ಎಲ್ಲರಿಗೂ ಕುತೂಹಲ. ʻಇದರಲ್ಲಿ ಸಾಕಷ್ಟು ದುಡ್ಡು ಮಾಡಬಹುದು, ಕೋಟಿಗಟ್ಟಲೆ ದುಡ್ಡು ಸಂಪಾದಿಸಬಹುದುʼ ಎಂಬ ನಂಬಿಕೆಯೇ ಲಕ್ಷಾಂತರ ಯುವಮಂದಿಯನ್ನು ಇದು ತನ್ನತ್ತ ಸೆಳೆದಿದೆ. ಅಷ್ಟೇ ಅಲ್ಲ, ಈ ಮೂಲಕ ಹಣವನ್ನೂ ಜನಪ್ರಿಯತೆಯನ್ನೂ ಪಡೆದುಕೊಂಡಿದ್ದಾರೆ ಕೂಡಾ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Teachers Transfer 2024: ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು ಪ್ರಕಟ ಸಾಧ್ಯತೆ

Teachers Transfer 2024: ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು ಜೂನ್‌ 15ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ವೇಳಾಪಟ್ಟಿ ಪ್ರಕಟವಾದ ಬಳಿಕ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆ ಕೋರಿ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Teachers Transfer 2024
Koo

ಬೆಂಗಳೂರು: ರಾಜ್ಯಾದ್ಯಂತ (Teachers Transfer 2024) ಸಾವಿರಾರು ಸರ್ಕಾರಿ ಶಿಕ್ಷಕರು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ವರ್ಗಾವಣೆ ವೇಳಾಪಟ್ಟಿ ಇಂದು (ಜೂನ್‌ 15) ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವೇಳಾಪಟ್ಟಿ ಪ್ರಕಟವಾಗಲಿದೆ. ವೇಳಾಪಟ್ಟಿ ಪ್ರಕಟವಾದ ಬಳಿಕ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಇತ್ಯಾದಿ ಪ್ರಕ್ರಿಯೆ ಮಾರ್ಚ್‌ 18ರಿಂದ ಪ್ರಾರಂಭವಾಗಿತ್ತು. ಲೋಕಸಭೆ ಚುನಾವಣೆ (Lok Sabha Election 2024) ಘೋಷಣೆ ಮತ್ತು ನೀತಿ ಸಂಹಿತೆ ಜಾರಿಯು ಈ ಪ್ರಕ್ರಿಯೆಗೆ ತೊಡಕಾಗಿತ್ತು.

ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹಂಚಿಕೆ ಮತ್ತು ಕಡ್ಡಾಯ ವಲಯ ವರ್ಗಾವಣೆಗಳನ್ನು ಒಂದರ ನಂತರ ಒಂದನ್ನು ಪರ್ಯಾಯ ವರ್ಷಗಳಲ್ಲಿ ಹಮ್ಮಿಕೊಳ್ಳಬೇಕಾಗುತ್ತದೆ. ಅಂತೆಯೇ ಈ ಬಾರಿಯ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗಿತ್ತು. ವರ್ಗಾವಣೆಗೆ ಪೂರಕವಾದ ಇ.ಇ.ಡಿ.ಎಸ್ ದತ್ತಾಂಶ, ಖಾಲಿ ಹುದ್ದೆಗಳ ಮಾಹಿತಿ, ಶಾಲಾ ವಲಯಗಳ ಮಾಹಿತಿಯನ್ನು ಪರಿಷ್ಕರಿಸಲಾಗಿತ್ತು.

ಆನ್‌ಲೈನ್‌ ಪ್ರಕ್ರಿಯೆ

ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆಗಳು ಆನ್​ಲೈನ್ ಮೂಲಕವೇ ನಡೆಯಲಿದೆ. ಶಿಕ್ಷಕರ (Weighted score) ಅಂಕಗಳ ಪ್ರಕಟ, ಆಕ್ಷೇಪಣೆ ಸಲ್ಲಿಕೆ, ವರ್ಗಾವಣಾ ಅರ್ಜಿ ಸಲ್ಲಿಸುವುದು, ಅರ್ಜಿಗಳ ಪರಿಶೀಲನೆ, ಅರ್ಜಿಗಳ ಅನುಮೋದನೆ/ ತಿರಸ್ಕಾರ, ಕರಡು ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸಲ್ಲಿಕೆ, ಅಂತಿಮ ಆದ್ಯತಾ ಪಟ್ಟಿ ಪ್ರಕಟಣೆ, ಆದ್ಯತಾ ಪಟ್ಟಿ ಅನುಸಾರ ವರ್ಗಾವಣಾ ಕೌನ್ಸೆಲಿಂಗ್ ಪ್ರಕ್ರಿಯೆಗಳು ಇಲಾಖೆಯ ನಿಗದಿತ ತಂತ್ರಾಂಶದಲ್ಲಿಯೇ ನಿರ್ವಹಣೆಯಾಗಿದೆ.

ವರ್ಗಾವಣೆಗೆ ಕಾಯುತ್ತಿರುವ ಶಿಕ್ಷಕರು

ಕೌಟುಂಬಿಕ, ಶೈಕ್ಷಣಿಕ ಇತ್ಯಾದಿ ಕಾರಣಗಳಿಂದ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ವರ್ಗಾವಣೆಯನ್ನು ಎದುರು ನೋಡುತ್ತಿದ್ದಾರೆ. ಪ್ರತಿ ಬಾರಿಯೂ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಹೇಳುತ್ತದೆ. ಆದರೆ ನಾನಾ ಕಾರಣಗಳಿಂದ ಇದು ವಿಳಂಬವಾಗುತ್ತಲೇ ಇರುತ್ತದೆ. ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಇನ್ನೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದಿಲ್ಲ. ಈ ತಿಂಗಳಲ್ಲಿ ಕೌನ್ಸೆಲಿಂಗ್‌ ಆರಂಭವಾದರೂ ಈ ಪ್ರಕ್ರಿಯೆ ಅಂತಿಮವಾಗಿ ಮುಗಿಯಲು ಕನಿಷ್ಠ ಇನ್ನೆರಡು ತಿಂಗಳು ಬೇಕಾಗಬಹುದು.

ಹಲವರು ಬದಲಾವಣೆ

ಶಿಕ್ಷಕರ ಸಂಘಗಳ ಕೋರಿಕೆ ಮೇರೆಗೆ ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ. ವಲಯ ವರ್ಗಾವಣೆಯನ್ನು ಕೈಬಿಡುವ ಸಾಧ್ಯತೆ ಇದೆ. ಅಭಿಮತ ವರ್ಗಾವಣೆ ಸೇರಿದಂತೆ ಪರಸ್ಪರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಂತೆ ಶಿಕ್ಷಣ ಸಚಿವರಿಂದ ಕಡತ ಅನುಮೋದನೆಗೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Continue Reading

ದೇಶ

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ ಘೋಷಿಸಿದೆ.

VISTARANEWS.COM


on

Toyota Technical Education Programme started at Bareilly Government Polytechnic by TKM
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ (Toyota Kirloskar Motor) ಘೋಷಿಸಿದೆ.

ಸ್ಥಳೀಯ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಸಮುದಾಯಗಳನ್ನು ಸಬಲೀಕರಣಗೊಳಿಸಲು, ಟಿಕೆಎಂ ತನ್ನ ಪ್ರಮುಖ ಕಾರ್ಯಕ್ರಮಗಳಾದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಮತ್ತು ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಯೊಂದಿಗೆ ಮುಂಚೂಣಿಯಲ್ಲಿದೆ. ಒಂದು ದಶಕಕ್ಕೂ ಹೆಚ್ಚು ಕಾಲದಿಂದ, ಈ ಕಾರ್ಯಕ್ರಮಗಳು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ತರಬೇತಿಯನ್ನು ಒದಗಿಸುವತ್ತ ಗಮನ ಹರಿಸಿವೆ. ‘ಸ್ಕಿಲ್ ಇಂಡಿಯಾ’ ಅಭಿಯಾನಕ್ಕೆ ಗಮನಾರ್ಹ ಕೊಡುಗೆ ನೀಡಿವೆ.

ಇದನ್ನೂ ಓದಿ: Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು 2023 ರ ಜುಲೈ 29 ಮತ್ತು 30 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದ 3 ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸಂವಹನ ನಡೆಸುವ ಗೌರವವನ್ನು ಪಡೆದ ಟಿಟಿಟಿಐ ಹಳೆಯ ವಿದ್ಯಾರ್ಥಿ ಮತ್ತು 2022 ರ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಮೆಕಾಟ್ರಾನಿಕ್ಸ್ ಕಂಚಿನ ಪದಕ ವಿಜೇತ ಅಖಿಲೇಶ್ ನರಸಿಂಹ ಮೂರ್ತಿ ಒಂದು ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ.

ಟಿ-ಟಿಇಪಿ ಒಂದು ಸಮಗ್ರ ವರ್ಷ ವಿಡೀ ನಡೆಯುವ ಕಾರ್ಯಕ್ರಮವಾಗಿದೆ. ಇದು ಆನ್-ದಿ-ಜಾಬ್ ಟ್ರೈನಿಂಗ್ (ಒಜೆಟಿ) ಅನ್ನು ಒಳಗೊಂಡಿದೆ ಮತ್ತು ಅಂತಿಮ ವರ್ಷದ ಐಟಿಐ / ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅನುಗುಣವಾಗಿದೆ. ಈ ಕಾರ್ಯಕ್ರಮದ ಪ್ರಮುಖ ಲಕ್ಷಣಗಳಲ್ಲಿ ಟೊಯೊಟಾದಿಂದ ಟಿ-ಟಿಇಪಿಯ ಪ್ರಮುಖ ತರಬೇತುದಾರರಿಗೆ ವಿಶೇಷ ತರಬೇತಿ, ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಟೊಯೊಟಾ ಡೀಲರ್ ಶಿಪ್‌ಗಳಲ್ಲಿ ಪ್ರಾಯೋಗಿಕ ಕೌಶಲ್ಯ ಅಭಿವೃದ್ಧಿ ಮತ್ತು ಭಾರತೀಯ ವಾಹನ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ತಂತ್ರಜ್ಞಾನಗಳ ತಾಂತ್ರಿಕ ಜ್ಞಾನವನ್ನು ನೀಡಲು ವಿನ್ಯಾಸಗೊಳಿಸಲಾದ ಪಠ್ಯಕ್ರಮ ಸೇರಿವೆ. ಕಳೆದ ವರ್ಷ ಆರ್ಥಿಕವಾಗಿ ಸವಾಲಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಅಧ್ಯಯನವನ್ನು ಮುಂದುವರಿಸಲು ಸಹಾಯ ಮಾಡಲು ಟಿಕೆಎಂ ಸ್ಟಾರ್ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, 13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಟಿ-ಟಿಇಪಿ ಮೂಲಕ ತರಬೇತಿ ಪಡೆದಿದ್ದಾರೆ. 70% ಕ್ಕೂ ಹೆಚ್ಚು ಜನರು ದೇಶಾದ್ಯಂತ ವಿವಿಧ ಆಟೋಮೊಬೈಲ್ ಕಂಪನಿಗಳು ಮತ್ತು ಅವುಗಳ ಡೀಲರ್‌ಶಿಪ್‌ಗಳಲ್ಲಿ ಉದ್ಯೋಗವನ್ನು ಪಡೆದಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉತ್ತರ ಪ್ರದೇಶ ಸರ್ಕಾರದ ವಿಧಾನ ಪರಿಷತ್ ಸದಸ್ಯ ಡಿ.ಸಿ. ವರ್ಮಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಾದ ಕೌಶಲ್ಯಗಳೊಂದಿಗೆ ನಮ್ಮ ಯುವಕರನ್ನು ಸಬಲೀಕರಣಗೊಳಿಸುವ ಟಿಕೆಎಂನ ಬದ್ಧತೆಯನ್ನು ನಾವು ಶ್ಲಾಘಿಸುತ್ತೇವೆ. ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ನಂತಹ ಉಪಕ್ರಮಗಳು ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಮ್ಮ ಧ್ಯೇಯದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗಿವೆ. ವಿಶೇಷವಾಗಿ ಗ್ರಾಮೀಣ ಮತ್ತು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಟಿ-ಟಿಇಪಿ ಮತ್ತು ಸ್ಟಾರ್ ವಿದ್ಯಾರ್ಥಿವೇತನ ಬೆಂಬಲವು ವಿದ್ಯಾರ್ಥಿಗಳಿಗೆ ಟೊಯೊಟಾದ ಮೌಲ್ಯಗಳು, ಉತ್ತಮ ಅಭ್ಯಾಸಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ.

ಆ ಮೂಲಕ ಅವರ ಒಟ್ಟಾರೆ ಕೌಶಲ್ಯ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಹೆಚ್ಚುವರಿಯಾಗಿ ಟೊಯೊಟಾದಂತಹ ಉದ್ಯಮ ಪಾಲುದಾರರ ಸಹಯೋಗದ ಪ್ರಯತ್ನಗಳು ಉತ್ತರ ಪ್ರದೇಶದ ವಿದ್ಯಾರ್ಥಿಗಳಲ್ಲಿ ವಿಶ್ವದರ್ಜೆಯ ಕಾರ್ಯಪಡೆಯ ಲಭ್ಯತೆಯನ್ನು ಹೆಚ್ಚಿಸುತ್ತದೆ, ಅವರ ವೃತ್ತಿಜೀವನದ ಆಕಾಂಕ್ಷೆಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ವಾಹನ ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಈ ವೇಳೆ ಕಾರ್ಪೊರೇಟ್ ವ್ಯವಹಾರ ಮತ್ತು ಆಡಳಿತದ ಕಂಟ್ರಿ ಹೆಡ್ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ಮಾತನಾಡಿ, ಟಿಕೆಎಂನಲ್ಲಿ ಯುವ ಪ್ರತಿಭೆಗಳಿಗೆ ಸುಧಾರಿತ ತಾಂತ್ರಿಕ ಕೌಶಲ್ಯ ಮತ್ತು ಜ್ಞಾನವನ್ನು ಪಡೆಯಲು ಅವಕಾಶಗಳನ್ನು ಸೃಷ್ಟಿಸುವಲ್ಲಿ ತಾಂತ್ರಿಕ ತರಬೇತಿಯ ಪರಿವರ್ತಕ ಶಕ್ತಿಯನ್ನು ನಾವು ಗುರುತಿಸುತ್ತೇವೆ. ನಮ್ಮ ಟಿ-ಟಿಇಪಿ ಸೌಕರ್ಯ ಮತ್ತು ಸ್ಟಾರ್ ಕಾರ್ಯಕ್ರಮವು ಆಟೋಮೋಟಿವ್ ಉದ್ಯಮಕ್ಕೆ ನುರಿತ ಕಾರ್ಯಪಡೆಯನ್ನು ಬೆಳೆಸುವ ನಮ್ಮ ಬದ್ಧತೆಗೆ ಉದಾಹರಣೆಯಾಗಿದೆ. ಅದೇ ಸಮಯದಲ್ಲಿ ವಿಶಾಲವಾದ ‘ಸ್ಕಿಲ್ ಇಂಡಿಯಾ’ ಮಿಷನ್ ಅನ್ನು ಬೆಂಬಲಿಸುತ್ತದೆ, ಅಂತಿಮವಾಗಿ ನಮ್ಮ ಸಮುದಾಯಗಳಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುತ್ತದೆ.

ಟಿ-ಟಿಇಪಿ ಉಪಕ್ರಮದ ಭಾಗವಾಗಿರುವ ಸ್ಟಾರ್ ಕಾರ್ಯಕ್ರಮವು ಅರ್ಹ ವಿದ್ಯಾರ್ಥಿಗಳನ್ನು, ವಿಶೇಷವಾಗಿ ಆರ್ಥಿಕವಾಗಿ ಸವಾಲಿನ ಹಿನ್ನೆಲೆಯಿಂದ ಬಂದವರನ್ನು ವಿದ್ಯಾರ್ಥಿವೇತನವನ್ನು ಒದಗಿಸುವ ಮೂಲಕ ಮತ್ತು ಆಟೋಮೋಟಿವ್ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನಕ್ಕಾಗಿ ಅಗತ್ಯ ಕೌಶಲ್ಯಗಳು ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುವ ಮೂಲಕ ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಪ್ರತಿಭೆಗಳನ್ನು ಪೋಷಿಸಲು, ವಿದ್ಯಾರ್ಥಿಗಳು ತಮ್ಮ ಪೂರ್ಣ ಸಾಮರ್ಥ್ಯವನ್ನು ತಲುಪಲು ಮತ್ತು ವಾಹನ ಉದ್ಯಮ ಮತ್ತು ನಮ್ಮ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಲು ನಾವು ಸಮರ್ಪಿತರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

ಕಾರ್ಯಕ್ರಮದಲಲ್ಲಿ ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನರೇಂದ್ರ ಕುಮಾರ್, ವಾಣಿಜ್ಯ ಟೊಯೊಟಾದ ನಿರ್ದೇಶಕ ಶಿವಂ ಗುಪ್ತಾ ಮಾತನಾಡಿದರು.

Continue Reading

ಕರ್ನಾಟಕ

BBMP: ಬಿಬಿಎಂಪಿ ವಿಭಜನೆ ಬೇಡ; ಇದು ಕನ್ನಡಿಗರಿಗೆ ಮಾರಕ: ನಾರಾಯಣ ಗೌಡ

BBMP: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ವಿಭಜಿಸುವ ಯತ್ನವನ್ನು ಸರ್ಕಾರ ನಿಲ್ಲಿಸಿ, ವಲಯಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಿ, ಸುಗಮ ಆಡಳಿತಕ್ಕೆ ಒತ್ತು ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ.

VISTARANEWS.COM


on

Do not split BBMP says Karave State President TA Narayana Gowda
Koo

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ವಿಭಜಿಸುವ ಯತ್ನವನ್ನು ರಾಜ್ಯ ಸರ್ಕಾರ ನಿಲ್ಲಿಸಿ, ವಲಯಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಿ, ಸುಗಮ ಆಡಳಿತಕ್ಕೆ ಒತ್ತು ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಾಲಿಕೆ ವಿಭಜನೆಯು ನಿಶ್ಚಿತವಾಗಿ ಕನ್ನಡಿಗರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಈ ಹಿಂದೆಯೂ ಸಹ ಪಾಲಿಕೆ ವಿಭಜನೆಯ ಮಾತುಗಳು ಕೇಳಿಬಂದಾಗ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತ್ತು. ಆಡಳಿತ ಸುಧಾರಣೆಯ ನಿಟ್ಟಿನಲ್ಲಿ ಸರ್ಕಾರದ ಕಾಳಜಿಯನ್ನು ನಾವು ಪ್ರಶ್ನಿಸುತ್ತಿಲ್ಲ. ಆದರೆ ಇದು ಕನ್ನಡಿಗರ ಪಾಲಿಗೆ ಸಮಸ್ಯಾತ್ಮಕವಾಗುವ ಹಿನ್ನೆಲೆಯಲ್ಲಿ ನಮ್ಮ ತಾತ್ವಿಕ ವಿರೋಧವಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ವಿಭಜಿಸುವ ಯತ್ನವನ್ನು ಸರ್ಕಾರ ನಿಲ್ಲಿಸಿ, ವಲಯಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಿ ಸುಗಮ ಆಡಳಿತಕ್ಕೆ ಒತ್ತು ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ಬೆಂಗಳೂರು ಮಹಾನಗರ ಇತ್ತೀಚಿನ ದಿನಗಳಲ್ಲಿ ವಲಸಿಗರ ಸಂತೆಯಾಗಿ ಹೋಗಿದೆ. ಪ್ರತಿನಿತ್ಯ ಬೇರೆ ಬೇರೆ ರಾಜ್ಯಗಳಿಂದ ಜನರು ಗಂಟುಮೂಟೆ ಕಟ್ಟಿಕೊಂಡು ಬಂದು ಬೆಂಗಳೂರಿನಲ್ಲಿ ನೆಲೆಸುತ್ತಿದ್ದಾರೆ. ಬೆಂಗಳೂರಿನ ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ ಚಹರೆಯನ್ನೇ ಈ ವಲಸಿಗರು ಬದಲಾಯಿಸುತ್ತಿದ್ದಾರೆ. ಬೆಂಗಳೂರಿನ ಮೂಲನಿವಾಸಿಗಳಾದ ಕನ್ನಡಿಗರೇ ಅತಂತ್ರ ಸ್ಥಿತಿಯಲ್ಲಿ ಬದುಕುವಂತ ಸಂದರ್ಭವನ್ನು ಈ ವಲಸಿಗರು ಸೃಷ್ಟಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ನಗರದ ಸ್ವಾಸ್ಥ್ಯ, ಸಾಮರಸ್ಯಕ್ಕೆ ಧಕ್ಕೆ ತಂದು ಸಂಘರ್ಷವನ್ನು ನಿರ್ಮಿಸಿದರೆ ಆಶ್ಚರ್ಯ ಪಡಬೇಕಾಗಿಲ್ಲ. ಇಂಥ ಸಂದರ್ಭದಲ್ಲಿ ಬೆಂಗಳೂರನ್ನು ವಿಭಜಿಸಿ ಐದು ಪಾಲಿಕೆಗಳನ್ನಾಗಿ ಮಾಡಿದರೆ ವಲಸಿಗರು ಹೆಚ್ಚು ಇರುವ ಪಾಲಿಕೆಗಳನ್ನು ಇದೇ ಜನರು ನಿಯಂತ್ರಣಕ್ಕೆ ತಂದುಕೊಂಡರೆ ಕನ್ನಡಿಗರು ಎಲ್ಲಿಗೆ ಹೋಗಬೇಕು? ಬೆಳಗಾವಿ ಮಹಾನಗರಪಾಲಿಕೆಯ ಇತಿಹಾಸ ಸರ್ಕಾರಕ್ಕೆ ಗೊತ್ತಿಲ್ಲದೇ ಏನಿಲ್ಲ. ಬೆಂಗಳೂರಿನಲ್ಲೂ ಇಂಥ ಪಾಲಿಕೆಗಳು ಬೇಕೇ? ಎಂದು ಅವರು ಪ್ರಶ್ನಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಎಂಟು ವಲಯಗಳನ್ನು ರಚಿಸಿ, ವಿಕೇಂದ್ರೀಕರಣದ ಹೆಜ್ಜೆ ಇಟ್ಟಿದೆ. ಎಂಟೂ ವಲಯಗಳಿಗೆ ಐಎಎಸ್ ಅಧಿಕಾರಿಗಳನ್ನೇ ವಲಯ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅಲ್ಲದೆ ಜಂಟಿ ಆಯುಕ್ತರನ್ನೂ ನೇಮಿಸಲಾಗಿದೆ. ಸರ್ಕಾರ ಮೊದಲು ಮಾಡಬೇಕಿರುವ ಕೆಲಸ ಈ ವಲಯಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ತುಂಬಿ, ಮೂಲಸೌಕರ್ಯಗಳನ್ನು ಹೆಚ್ಚಿಸಿ, ಹೆಚ್ಚಿನ ಸ್ವಾಯತ್ತತೆಯನ್ನು ಒದಗಿಸುವುದು. ಹೀಗಾದಾಗ ಮಾತ್ರ ವಿಕೇಂದ್ರೀಕರಣದ ಉದ್ದೇಶ ಈಡೇರುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ವಿಭಜಿಸುವ ಯತ್ನವನ್ನು ಸರ್ಕಾರ ನಿಲ್ಲಿಸಿ, ವಲಯಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಿ ಸುಗಮ ಆಡಳಿತಕ್ಕೆ ಒತ್ತು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Continue Reading

ಕರ್ನಾಟಕ

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Congress Guarantee: ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Koo

ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ (Congress Guarantee) ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿಗಳನ್ನು ಮರು ಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ

ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ. ಆದರೆ, ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು.

ಇದನ್ನೂ ಓದಿ | Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ

ದೇವೇಗೌಡರ ಕುಟುಂಬವನ್ನು ನಾಶ ಮಾಡುವುದರಲ್ಲಿ ಯಶಸ್ಸು ಕಂಡಿರುವ ಕಾಂಗ್ರೆಸ್ ಈಗ ಯಡಿಯೂರಪ್ಪ ಅವರನ್ನು ನಾಶ ಮಾಡಲು ಹೊರಟಿದೆ ಎಂಬ ಎಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವೆ ಹಾಗೂ ಕಾನೂನನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ದರ್ಶನ್ ಪ್ರಕರಣ: ಪ್ರಭಾವಿಗಳು ನನ್ನನ್ನು ಭೇಟಿಯಾಗಿಲ್ಲ

ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅದು ಕೇವಲ ಸುದ್ದಿ. ನನ್ನನ್ನು ಭೇಟಿಯಾಗಲು ಯಾರೂ ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದರು.

ಚಿತ್ರ ನಟ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುವ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರೆಯೆ ನೀಡಿ, ಪೊಲೀಸ್‌ನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ. ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗಿದೆ ಎಂಬ ಪ್ರಶ್ನೆಗೆ, ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.

ಲೋಕಸಭಾ ಚುನಾವಣೆಯ ಫಲಿತಾಂಶ ನಿರೀಕ್ಷೆಯಂತೆ ಬಂದಿಲ್ಲ

ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯ ರೀತಿ ಫಲಿತಾಂಶ ಬಂದಿಲ್ಲ. ಮೈಸೂರು ಸೋತಿರುವುದು ಚಾಮರಾಜನಗರ ಲೊಕಸಭಾ ಕ್ಷೇತದಲ್ಲಿ ಗೆದ್ದಿರುವುದು ಸತ್ಯ. ಒಂದರಿಂದ 9 ಸ್ಥಾನಕ್ಕೇರಿದ್ದು, ಶೇ. 13% ರಷ್ಟು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ. ಆದರೆ ನಿರೀಕ್ಷೆಯಂತೆ ಆಗಿಲ್ಲ ಎಂದರು.

ಇದನ್ನೂ ಓದಿ | Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

ಮುಂಗಾರು ವಿಫಲವಾಗುತ್ತಿದೆ ಎಂಬ ಬಗ್ಗೆ ಮಾತನಾಡಿ, ಇನ್ನೂ 10 ದಿನಗಳಿವೆ. ಕಾದು ನೋಡೋಣ ಮೋಡ ಬಿತ್ತನೆ ಬಗ್ಗೆ ನಾನು ತಜ್ಞರ ಬಳಿ ಚರ್ಚಿಸುತ್ತೇನೆ ಎಂದು ತಿಳಿಸಿದರು.

Continue Reading
Advertisement
Teachers Transfer 2024
ಕರ್ನಾಟಕ28 mins ago

Teachers Transfer 2024: ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು ಪ್ರಕಟ ಸಾಧ್ಯತೆ

Aamras
ದೇಶ59 mins ago

India’s Aamras : ಮಾವಿನಹಣ್ಣಿನ ಖಾದ್ಯಗಳ ಟಾಪ್‌ ಟೆನ್‌ ಪಟ್ಟಿಯಲ್ಲಿ ಭಾರತದ ಆಮ್‌ರಸ್‌ ವಿಶ್ವದಲ್ಲೇ ನಂಬರ್‌ ಒನ್!

International Yoga Day 2024
ಆರೋಗ್ಯ59 mins ago

International Yoga Day 2024: ಧ್ಯಾನ ಎಂದರೇನು? ಇದರಿಂದ ಏನೇನು ಪ್ರಯೋಜನ?

Dina Bhavishya
ಭವಿಷ್ಯ59 mins ago

Dina Bhavishya : ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ; ಈ ರಾಶಿಯವರು ಮೌನವಾಗಿರಿ

T20 World Cup 2024
ಕ್ರಿಕೆಟ್6 hours ago

T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

Toyota Technical Education Programme started at Bareilly Government Polytechnic by TKM
ದೇಶ7 hours ago

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Truck Driver
ದೇಶ8 hours ago

ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಂದ ಟ್ರಕ್‌ ಡ್ರೈವರ್;‌ ಭೀಕರ ವಿಡಿಯೊ ಇಲ್ಲಿದೆ

Do not split BBMP says Karave State President TA Narayana Gowda
ಕರ್ನಾಟಕ9 hours ago

BBMP: ಬಿಬಿಎಂಪಿ ವಿಭಜನೆ ಬೇಡ; ಇದು ಕನ್ನಡಿಗರಿಗೆ ಮಾರಕ: ನಾರಾಯಣ ಗೌಡ

ಕರ್ನಾಟಕ9 hours ago

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Arundhati Roy
ದೇಶ9 hours ago

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು13 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು13 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ14 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌