vistara top 10 news siddaramaiah again in lingayat controversy to amit shah tour to karnataka and more newsವಿಸ್ತಾರ TOP 10 NEWS: ಸಿದ್ದರಾಮಯ್ಯಗೆ ʼಲಿಂಗಾಯತʼ ಸಂಕಷ್ಟದಿಂದ, ರಾಜ್ಯಕ್ಕೆ ಅಮಿತ್‌ ಶಾ ಆಗಮನದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS: ಸಿದ್ದರಾಮಯ್ಯಗೆ ʼಲಿಂಗಾಯತʼ ಸಂಕಷ್ಟದಿಂದ, ರಾಜ್ಯಕ್ಕೆ ಅಮಿತ್‌ ಶಾ ಆಗಮನದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news siddaramaiah again in lingayat controversy to amit shah tour to karnataka and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Karnataka Election: ನನ್ನನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ; ಅದು ಸಾಧ್ಯವಿಲ್ಲ ಗೊತ್ತಾಯ್ತಾ?: ಸಿದ್ದರಾಮಯ್ಯ ಗರಂ
ನನ್ನನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ. ಅದು ಸಾಧ್ಯ ಇಲ್ಲ ಗೊತ್ತಾಯ್ತಾ? ನಾನು ಲಿಂಗಾಯತರ ಬಗ್ಗೆ ಅಪಾರ ಗೌರವವನ್ನು ಇಟ್ಟುಕೊಂಡಿದ್ದೇನೆ. ಲಿಂಗಾಯತ ಸಮಾಜ, ಧರ್ಮದ ಬಗ್ಗೆ ನನಗೆ ಅಪಾರ ಗೌರವ ಇದೆ ಎಂದು ಚುನಾವಣಾ (Karnataka Election) ಪ್ರಚಾರಕ್ಕಾಗಿ ಕೂಡಲಸಂಗಮಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Election: ನನ್ನನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ; ಅದು ಸಾಧ್ಯವಿಲ್ಲ ಗೊತ್ತಾಯ್ತಾ?: ಸಿದ್ದರಾಮಯ್ಯ ಗರಂ
ಹೆಚ್ಚಿನ ಓದಿಗಾಗಿ: ಕುಲಗಳ ನಡುವೆ ಬಡಿದಾಟ ಉಂಟುಮಾಡುವವರಿಗೆ ದೇವರು ಸದ್ಬುದ್ಧಿ ಕೊಡಲಿ: ಸಿದ್ದರಾಮಯ್ಯರನ್ನು ಟೀಕಿಸಿದ ಸಿಎಂ ಬೊಮ್ಮಾಯಿ

2. Basava Jayanti: ಸಮಾಜದ ಎದುರು ಸತ್ಯ ಹೇಳಲು ಅನೇಕರು ಹೆದರುತ್ತಿದ್ದಾರೆ: ಕೂಡಲಸಂಗಮದಲ್ಲಿ ರಾಹುಲ್‌ ಗಾಂಧಿ ಮಾತು
ತಮ್ಮನ್ನು ತಾವು ಪ್ರಶ್ನೆ ಮಾಡಿಕೊಂಡು ಸತ್ಯವನ್ನು ತಿಳಿದ ನಂತರವೂ ಅನೇಕರು ಭಯದ ಕಾರಣಕ್ಕೆ ಆ ಸತ್ಯವನ್ನು ಸಮಾಜದ ಮುಂದೆ ಹೇಳುತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ. ಕೂಡಲಸಂಗಮದಲ್ಲಿ ಆಯೋಜನೆ ಮಾಡಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Amit Shah: ಇಂದು ರಾಜ್ಯಕ್ಕೆ ಮತ್ತೆ ಅಮಿತ್‌ ಶಾ; ಮೈಸೂರು, ಚಾಮರಾಜನಗರದಲ್ಲಿ ರಣತಂತ್ರ
ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಬಿಜೆಪಿ ಭಾರಿ ಪ್ರಚಾರ ತಂತ್ರದಲ್ಲಿ ನಿರತವಾಗಿದೆ. ಈಗಾಗಲೇ ಕೇಂದ್ರ ನಾಯಕರು ಅನೇಕ ಬಾರಿ ರಾಜ್ಯಕ್ಕೆ ಭೇಟಿ ನೀಡಿ ಸಭೆ, ಸಮಾರಂಭಗಳನ್ನು ನಡೆಸಿದ್ದಾರೆ. ಶುಕ್ರವಾರವಷ್ಟೇ (ಏಪ್ರಿಲ್‌ 21) ರಾಜ್ಯಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಭಾನುವಾರ (ಏಪ್ರಿಲ್‌ 23) ಮತ್ತೆ ಆಗಮಿಸುತ್ತಿದ್ದು, ರಾತ್ರಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Karnataka Election 2023: ಡಿಕೆಶಿ ಭದ್ರಕೋಟೆ ಕನಕಪುರದಲ್ಲಿ ಆರ್‌.ಅಶೋಕ್‌ ಭಾಷಣಕ್ಕೆ ವಿರೋಧ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ವರುಣ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದಷ್ಟೇ ಸಂಸದ ಪ್ರತಾಪ್‌ ಸಿಂಹ ಅವರನ್ನು ಸಿದ್ದರಾಮಯ್ಯ ಬೆಂಬಲಿಗರು ತರಾಟೆಗೆ ತೆಗೆದುಕೊಂಡಿದ್ದರು. ಅಷ್ಟೇ ಏಕೆ, ವರುಣದಲ್ಲಿಯೇ ಸಚಿವ ವಿ.ಸೋಮಣ್ಣ ಅವರ ಕಾರಿಗೂ ಜನ ಮುತ್ತಿಗೆ ಹಾಕಿದ್ದರು. ಇದರ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಕ್ಷೇತ್ರವಾದ ಕನಕಪುರದಲ್ಲಿ (Karnataka Election 2023) ಬಿಜೆಪಿ ಅಭ್ಯರ್ಥಿ, ಸಚಿವ ಆರ್‌. ಅಶೋಕ್‌ ಅವರ ಭಾಷಣಕ್ಕೆ ವಿರೋಧ ವ್ಯಕ್ತವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Election 2023: ವರುಣದಲ್ಲಿ ಸೋಮಣ್ಣಗೆ ಕಾಂಗ್ರೆಸ್‌ ಕಾರ್ಯಕರ್ತರ ಮುತ್ತಿಗೆ; ಸಿದ್ದರಾಮಯ್ಯ ಪರ ಘೋಷಣೆ

5. Karnataka Election 2023: ಕೇಸರಿ ಧ್ವಜ ಹಿಡಿದು ಬಂದವರಿಗೆ ನಮಸ್ತೆ, ನಾನೂ ಹಿಂದು; ಡಿಕೆಶಿ ಹಿಂದುತ್ವ ಮಂತ್ರ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಚುನಾವಣೆ (Karnataka Election 2023) ಪ್ರಚಾರದ ಮಧ್ಯೆಯೇ ಸಾಲು ಸಾಲು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರವಷ್ಟೇ ಅವರು ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಮಾಡಿದ್ದರು. ವಿಶೇಷ ಪೂಜೆಯನ್ನೂ ಮಾಡಿದ್ದರು. ಭಾನುವಾರ ಶೃಂಗೇರಿಯ ಶಾರದಾ ಪೀಠದಲ್ಲಿ ಚಂಡಿಕಾ ಯಾಗ ಮುಗಿಸಿ ಬೈಂದೂರಿಗೆ ತೆರಳಿದ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್‌ ಅಭ್ಯರ್ಥಿ ಗೋಪಾಲ ಪೂಜಾರಿ ಪರ ಪ್ರಚಾರ ಮಾಡುವ ಜತೆಗೆ ಹಿಂದುತ್ವ ಮಂತ್ರ ಪಠಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Amritpal Singh: ಇದು ಅಂತ್ಯವಲ್ಲ ಎನ್ನುತ್ತ ಪೊಲೀಸರ ಎದುರು ಬಂದ ಅಮೃತ್​ಪಾಲ್​ ಸಿಂಗ್​; ಆತ ಶರಣಾಗಿದ್ದು ಯಾರ ಹುಟ್ಟೂರಲ್ಲಿ?
ಖಲಿಸ್ತಾನಿ ನಾಯಕ, ವಾರಿಸ್ ಪಂಜಾಬ್​ ದೆ ಸಂಘಟನೆಯ ಮುಖ್ಯಸ್ಥ ಅಮೃತ್​ಪಾಲ್​ ಸಿಂಗ್ (Amritpal Singh) ಇಂದು ಪಂಜಾಬ್​​ನ ಮೊಗಾ ಜಿಲ್ಲೆಯ ರೊಡೆ ಎಂಬ ಗ್ರಾಮದಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್​ಐನ ಕೈಗೊಂಬೆಯಾಗಿದ್ದುಕೊಂಡು, ಭಾರತದಲ್ಲಿ ಅಶಾಂತಿ ಸೃಷ್ಟಿಸುತ್ತ, ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಅಮೃತ್​ಪಾಲ್​ ಸಿಂಗ್​​ ಮಾರ್ಚ್​ 18ರಂದು ಒಮ್ಮೆ ಪೊಲೀಸರಿಗೆ ಸಿಕ್ಕೇಬಿಟ್ಟ ಎಂದಾಗಿತ್ತು. ಆದರೆ ಅಂದು ಕ್ಷಣದಲ್ಲಿ ತಪ್ಪಿಸಿಕೊಂಡು ಪರಾರಿಯಾಗಿದ್ದವನ ಸುಳಿವೇ ಇರಲಿಲ್ಲ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Tumkur Siddaganga Mutt: ತುಮಕೂರಿನ ಸಿದ್ದಗಂಗಾ ಮಠ ಸೇರಿ ಶಾಖಾ ಮಠಗಳ ಉತ್ತರಾಧಿಕಾರಿಗಳಿಗೆ ಪಟ್ಟಾಭಿಷೇಕ
ತುಮಕೂರಿನ ಸಿದ್ದಗಂಗಾ ಮಠ (Tumkur Siddaganga Mutt), ರಾಮನಗರ ಜಿಲ್ಲೆ‌ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠ ಹಾಗೂ ವಿಜಯಪುರ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಅವರಿಗೆ ಭಾನುವಾರ (ಏಪ್ರಿಲ್‌ 23) ನಿರಾಭಾರಿ ನಿರಂಜನ ಜಂಗಮಪಟ್ಟಾಧಿಕಾರ ಮಹೋತ್ಸವವನ್ನು ಇಲ್ಲಿನ ಸಿದ್ದಗಂಗಾ ಮಠದಲ್ಲಿ ನೆರವೇರಿಸಿ, ಪಟ್ಟಾಭಿಷೇಕ ನೆರವೇರಿಸಲಾಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Weather Report: ಕರಾವಳಿಯಲ್ಲಿ ತಗ್ಗಿದ ಮಳೆ ಅಬ್ಬರ; ಬೆಂಗಳೂರು, ಮೈಸೂರು ಗುಡುಗು ಸಹಿತ ಮಳೆ ಸಾಧ್ಯತೆ
ರಾಜ್ಯದ ಹಲವೆಡೆ ಮಳೆ ಅಬ್ಬರ (Weather Report) ಮುಂದುವರಿದಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು ಸೇರಿ ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. IPL 2023: ಪಂದ್ಯ ಸೋತರು ನೂತನ ದಾಖಲೆ ಬರೆದ ರೋಹಿತ್​ ಶರ್ಮ
5 ಬಾರಿಯ ಐಪಿಎಲ್​ ಚಾಂಪಿಯನ್ ಮುಂಬೈ ಇಂಡಿಯನ್ಸ್​ ತಂಡ ಶನಿವಾರ ನಡೆದ ಐಪಿಎಲ್​ನಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ 13 ರನ್​ಗಳ ಸೋಲಿಗೆ ತುತ್ತಾಗಿದೆ. ಆದರೆ ಈ ಪಂದ್ಯ ಸೋತರೂ ಮುಂಬೈ ನಾಯಕ ರೋಹಿತ್​ ಶರ್ಮಾ ಅವರು ಐಪಿಎಲ್​ನಲ್ಲಿ ನೂತನ ಮೈಲುಗಲ್ಲೊಂದನ್ನು ತಲುಪಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Water Metro: ಏ.25ಕ್ಕೆ ಕೊಚ್ಚಿಯಲ್ಲಿ ದೇಶದ ಮೊದಲ ವಾಟರ್ ಮೆಟ್ರೋ ಲಾಂಚ್, ಫೋಟೊಗಳು ಇಲ್ಲಿವೆ
ದೇಶದ ಮೊದಲ ವಾಟರ್ ಮೆಟ್ರೋಗೆ (Water Metro) ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 25ರಂದು ಚಾಲನೆ ನೀಡಲಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಾಟರ್ ಮೆಟ್ರೋಗೆ ಸಂಬಂಧಿಸಿದ ಕೆಲವು ಫೋಟೋಗಳನ್ನು ಬಿಡುಗಡೆ ಮಾಡಿದ್ದು, ಟ್ವಿಟರ್‌ನಲ್ಲಿ ಸಖತ್ ವೈರಲ್ ಆಗಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Lok Sabha Election 2024: ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮತದಾನ

Lok Sabha Election 2024: ಸಂಡೂರಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮಂಗಳವಾರ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಕುಟುಂಬ ಸದಸ್ಯರ ಜತೆ ಆಗಮಿಸಿ, ಮತದಾನ ಮಾಡಿದರು.

VISTARANEWS.COM


on

Ballari Lok Sabha constituency Congress candidate e Tukaram voting in Sandur
Koo

ಸಂಡೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಅವರು ಮಂಗಳವಾರ ಸಂಡೂರಿನಲ್ಲಿ ಮತದಾನ (Lok Sabha Election 2024) ಮಾಡಿದರು.

ಸಂಡೂರಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಕುಟುಂಬ ಸದಸ್ಯರ ಜತೆ ಆಗಮಿಸಿ, ತಮ್ಮ ಹಕ್ಕು ಚಲಾಯಿಸಿದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮಾತನಾಡಿ, ಮತ ಚಲಾಯಿಸಿದ್ದು ಖುಷಿ ನೀಡಿದೆ. ಭವ್ಯ ಭಾರತದ ಭವಿಷ್ಯ ನಿರ್ಧಾರ ಮಾಡುವ ಈ ಚುನಾವಣೆ ಮಹತ್ವದಾಗಿದೆ. ಜನರು ಈ ಬಾರಿ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಮತ್ತೊಂದು ಹೊಸ ಇತಿಹಾಸ ಬರೆಯಲಿದೆ ಎಂದು ಅವರು ತಿಳಿಸಿದರು.

Continue Reading

Lok Sabha Election 2024

Lok Sabha Election 2024: ಮತ ಹಾಕಲು ವಿದೇಶದಿಂದ ಬಂದರು! ಒಂದೇ ಕುಟುಂಬದ 69 ಮಂದಿಯ ವೋಟ್‌ ಸೆಲ್ಫಿ!

ಲೋಕಸಭೆ ಚುನಾವಣೆ (Lok Sabha Election 2024) ರಾಜ್ಯದ ಎರಡನೇ ಹಂತದ (second phase voting) ಮತದಾನದಲ್ಲಿ ಹಲವು ವೈವಿಧ್ಯಮಯ ಚಿತ್ರಣಗಳು ಕಂಡುಬಂದವು. ಶತಾಯುಷಿಗಳು, ವೃದ್ಧರು, ದಿವ್ಯಾಂಗರು, ವಿದೇಶದಲ್ಲಿರುವವರು ಕೂ ಉತ್ಸಾಹದಿಂದ ಬಂದು ಮತ ಚಲಾಯಿಸಿದರು.

VISTARANEWS.COM


on

lok sabha election 2024 one family
ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ಒಂದೇ ಕುಟುಂಬದ 69 ಸದಸ್ಯರು ಒಟ್ಟಾಗಿ ಬಂದು ಮತದಾನ ಮಾಡಿದರು.
Koo

ಬೆಂಗಳೂರು: ವಿದೇಶದಿಂದ ಮತ ಹಾಕುವುದಕ್ಕಾಗಿಯೇ ಬಂದವರು, ಒಟ್ಟಾಗಿ ಬಂದು ವೋಟ್‌ ಹಾಕಿ ಸೆಲ್ಫಿ ತೆಗೆದುಕೊಂಡ ಒಂದೇ ಕುಟುಂಬದ 69 ಮಂದಿ, ಮತ ಹಾಕಿದವರಿಗೆ ಫ್ರೀಯಾಗಿ ತಿಂಡಿ ಕಾಫಿ ಒದಗಿಸಿದವರು… ಹೀಗೆ ಲೋಕಸಭೆ ಚುನಾವಣೆ (Lok Sabha Election 2024) ರಾಜ್ಯದ ಎರಡನೇ ಹಂತದ (second phase voting) ಮತದಾನದಲ್ಲಿ ಹಲವು ವೈವಿಧ್ಯಮಯ ಚಿತ್ರಣಗಳು ಕಂಡುಬಂದವು. ಮೊಬೈಲ್‌ ನಿಷೇಧವಿದ್ದರೂ ಮತ ಹಾಕುವ ಫೋಟೋ ತೆಗೆದು ವೈರಲ್‌ ಮಾಡಿದವರು, ಮತದಾನಕ್ಕೆ ಬಹಿಷ್ಕಾರ, ಮತಗಟ್ಟೆಯಲ್ಲಿ ಚಕಮಕಿಯಂಥ ಘಟನೆಗಳೂ ನಡೆದವು.

ಒಂದೇ ಕುಟುಂಬದ 69 ಸದಸ್ಯರು ಒಟ್ಟಾಗಿ ವೋಟ್

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ 56, 57ರಲ್ಲಿ ಒಂದೇ ಕುಟುಂಬದ 69 ಸದಸ್ಯರು ಬಂದು ಮತದಾನ ಮಾಡಿ ಮಾದರಿಯಾದರು. ನೂಲ್ವಿ ಗ್ರಾಮದ ಕಂಟೆಪ್ಪ ತೋಟದ ಕುಟುಂಬದ ಸದಸ್ಯರಿಂದ ಮತದಾನ ನಡೆಯಿತು. ಮತ ಚಲಾಯಿಸಿದ ಬಳಿಕ ಎಲ್ಲರೂ ಸೇರಿ ಸೆಲ್ಫಿ ತೆಗೆದು ಸಂಭ್ರಮಿಸಿದರು. ಕುಟುಂಬದ ಮೂರು ತಲೆಮಾರಿನ ಸದಸ್ಯರು ಮತದಾನದಲ್ಲಿ ಭಾಗಿಯಾಗಿದ್ದರು. ಪ್ರತಿ ಚುನಾವಣೆಯಲ್ಲೂ ತಂಡವಾಗಿ ಬಂದು ಮತ ಚಲಾಯಿಸುತ್ತಾರೆ.

ಅಪೂರ್ವ ಸಹೋದರಿಯರು

ದಾವಣಗೆರೆ: ಹೊರ ರಾಜ್ಯ ಮತ್ತು ಹೊರ ದೇಶದಿಂದ ಬಂದು ಸಹೋದರಿಯರು ಮತದಾನ ಮಾಡಿದ್ದಾರೆ. ರೀತು ಮತ್ತು ರಕ್ಷಾ ಮತದಾನ ಮಾಡಿದ ಸಹೋದರಿಯರು. ರೀತು ಅಮೇರಿಕಾದ ಇಂಡಿಯಾನಾದಿಂದ ಹಾಗೂ ರಕ್ಷ ಮಹಾರಾಷ್ಟ್ರದ ಪುಣೆಯಿಂದ ಆಗಮಿಸಿ ದಾವಣಗೆರೆಯ MCC ಎ ಬ್ಲಾಕ್‌ನ ವಿಶ್ವಭಾರತಿ ಸ್ಕೂಲ್‌ನಲ್ಲಿ ಹಕ್ಕು ಚಲಾಯಿಸಿದರು. ರೀತು ಮತ್ತು ರಕ್ಷಾ ದಾವಣಗೆರೆಯ ವಾಗೇಶ್ ಬಾಬು ಜಿ.ಪಿ ಅವರ ಪುತ್ರಿಯರು.”ಒಳ್ಳೆ ಸರ್ಕಾರ, ನಾಯಕರು, ಆಡಳಿತಕ್ಕೆ ಪ್ರತಿಯೊಬ್ಬರೂ ಮತದಾನ ಮಾಡಬೇಕು” ಎಂದು ಮನವಿ ಮಾಡಿದರು.

3 ಲಕ್ಷ ರೂ. ವೆಚ್ಚ ಮಾಡಿ ಬಂದ ಅನಿವಾಸಿ ಭಾರತೀಯ!

ರಾಯಚೂರು: ಅನಿವಾಸಿ ಭಾರತೀಯರೊಬ್ಬರು 3 ಲಕ್ಷ ರೂ. ವೆಚ್ಚ ಮಾಡಿ ಮತದಾನ ಮಾಡುವುದಕ್ಕಾಗಿಯೇ ಭಾರತಕ್ಕೆ ಬಂದು ಹಕ್ಕು ಚಲಾಯಿಸಿದರು. ಆ ಮೂಲಕ ಮತದಾನದ ಮಹತ್ವ ಸಾರಿದರು. ಒಮಾನ್ ದೇಶದ ಮಸ್ಕತ್‌ನಲ್ಲಿರುವ ಅನಿವಾಸಿ ಭಾರತೀಯ, ಮಸ್ಕಿ ತಾಲ್ಲೂಕಿನ ವಟಗಲ್ ಗ್ರಾಮದ ನಿವಾಸಿ ಅಮರೇಶ ಈ ವ್ಯಕ್ತಿ. ಕಳೆದ 25 ವರ್ಷಗಳಿಂದ ಮಸ್ಕತ್‌ನಲ್ಲಿ ವಾಸಿಸುತ್ತಿರುವ ಅಮರೇಶ, ವಟಗಲ್ ಗ್ರಾಮದಲ್ಲಿ ಮತದಾನ ಮಾಡಿ, “ಪ್ರತಿಯೊಬ್ಬರೂ ಮತದಾನ ಮಾಡಿ” ಎಂದು ಸಂದೇಶ ನೀಡಿದರು.

ಅಬುಧಾಬಿಯಿಂದ ಬಂದು ಮತ ಹಾಕಿದ

ಚಿಕ್ಕೋಡಿ: ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಸುರಜ ಉಪಾಶೆ ಎಂಬ ಯುವಕ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮತ ಹಕ್ಕು ಚಲಾಯಿಸಿದ್ದಾನೆ. ಕಳೆದ 10 ವರ್ಷದಿಂದ ಅಬುಧಾಬಿಯಲ್ಲಿರುವ ಯುವಕ, ಮತದಾನಕ್ಕಾಗಿಯೇ ಆಗಮಿಸಿದ್ದಾನೆ. ಹುಕ್ಕೇರಿ ಪಟ್ಟಣದ ಗಾಂಧಿ ನಗರ ಶಾಲೆಯಲ್ಲಿ ಮತದಾನ ಮಾಡಿದ್ದು, ಎಲ್ಲರೂ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾನೆ.

ಉಚಿತ ತಿಂಡಿ, ಕಾಫಿ- ಟೀ

ಶಿವಮೊಗ್ಗ: ಶಿವಮೊಗ್ಗದ ಶುಭಂ ಹೋಟೆಲ್‌ನಲ್ಲಿ, ಮತದಾನದ ಪ್ರಮಾಣ ಹೆಚ್ಚಿಸಿ, ಜಾಗೃತಿ ಮೂಡಿಸಲು ಸ್ಪೆಷಲ್ ಆಫರ್ ನೀಡಲಾಯಿತು. ಬೆಳಗ್ಗೆ 7ರಿಂದ‌ ಮಧ್ಯಾಹ್ನ 12 ಗಂಟೆವರೆಗೆ ಫ್ರೀ ಟಿಫನ್ ನೀಡಲಾಯಿತು. ಬೆಳಗ್ಗೆಯಿಂದ 5 ಸಾವಿರಕ್ಕೂ ಹೆಚ್ಚು ಮತದಾರರು ಫ್ರೀ ಟಿಫನ್ ಸವಿದರು. ಪಲಾವ್, ದೋಸೆ, ಬಿಸಿಬೇಳೆಬಾತ್, ಕಾಫಿ ತಿಂಡಿ ಫ್ರೀ ನೀಡಲಾಗಿದೆ. ಸುಮಾರು 10 ಸಾವಿರ ಮಂದಿಗೆ ಆಗುವಷ್ಟು ಹೋಟೆಲ್‌ ಮಾಲಿಕರು ಉಚಿತ ತಿಂಡಿಯ ವ್ಯವಸ್ಥೆ ಮಾಡಿದ್ದರು.

ವೋಟ್ ಮಾಡಿದರೆ ಉಚಿತ ಐಸ್‌ಕ್ರೀಂ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಡೈರೀಸ್ ಐಸ್‌ಕ್ರೀಮ್ ಮಾಲಿಕರು ವೋಟ್ ಮಾಡಿದವರಿಗೆ ಉಚಿತವಾಗಿ ಎಲೆಕ್ಷನ್ ಸ್ಪೆಷಲ್ ಐಸ್‌ಕ್ರೀಮ್ ವಿತರಿಸಿದರು. ಉಜ್ವಲ ಭಾರತದ ಭವಿಷ್ಯಕ್ಕಾಗಿ ಮತದಾನ ಪ್ರೋತ್ಸಾಹಿಸಲು ಡೈರಿಸ್ ಐಸ್ಕ್ರೀಮ್‌ ವಿತರಣೆ ನಡೆಯಿತು.

ಮತದಾನ ಬಹಿಷ್ಕಾರ

ವಿಜಯನಗರ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಚಿಲಕನಹಟ್ಟಿ ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ವಿಂಗಡಣೆ ಮಾಡಿದ್ದಕ್ಕೆ ಮತದಾನ ಬಹಿಷ್ಕಾರ ಹಾಕಲಾಯಿತು. ಹಾರುವನಹಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 78ರಲ್ಲಿ, ಚಿಲಕನಹಟ್ಟಿಯ ಮಾರುತಿ ನಗರದಲ್ಲಿ ಪ್ರತ್ಯೇಕ ಮತದಾನ ಕೇಂದ್ರ ಮಾಡುವಂತೆ ಮತದಾರರು ಪಟ್ಟು ಹಿಡಿದರು. ಕಳೆದ ಹಲವು ವರ್ಷದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯವಿತ್ತು. ಚಿಲಕನಹಟ್ಟಿಯಿಂದ ಹಾರುವನಹಳ್ಳಿ ಗ್ರಾಮಕ್ಕೆ 3 ಕಿ.ಮೀ ಅಂತರವಿದೆ. ಅದಕ್ಕೆ ರಾಷ್ಟ್ರೀಯ ಹೆದ್ದಾರಿ 50 ದಾಟಬೇಕಿದ್ದು, ಅಪಘಾತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ಗ್ರಾಮಸ್ಥರದ್ದು.

ಗೌಪ್ಯ ಮತದಾನ ವೈರಲ್‌

ದಾವಣಗೆರೆ: ಎಷ್ಟೇ ಕಟ್ಟುನಿಟ್ಟಾಗಿ ಗೌಪ್ಯ ಮತದಾನ ಮಾಡಿದರೂ ಫೋಟೋ ತೆಗೆದುಕೊಂಡು ಪಬ್ಲಿಕ್‌ ಮಾಡುತ್ತಿರುವವರು ಕಂಡುಬಂದಿದ್ದಾರೆ. ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ಗೆ ಮತ ಹಾಕಿದ್ದನ್ನು ಬಿಜೆಪಿ ಕಾರ್ಯಕರ್ತನೊಬ್ಬ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಅದನ್ನು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಮತಗಟ್ಟೆಗೆ ಮೊಬೈಲ್ ನಿಷೇಧ ಮಾಡಿದರೂ ಮೊಬೈಲ್ ತೆಗೆದುಕೊಂಡು ಹೋಗಲಾಗಿದೆ.

ಬಿಜೆಪಿ- ಕಾಂಗ್ರೆಸ್‌ ಕಾರ್ಯಕರ್ತ ವಾಗ್ವಾದ

ಬೆಳಗಾವಿ: ಕೆಲವೆಡೆ ಬಿಜಪಿ- ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬೆಳಗಾವಿಯ ಹನುಮಾನ್ ನಗರದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತಗಟ್ಟೆಯಲ್ಲೇ ನಿಂತು ಮತದಾರರು ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರಭಾವ ಬೀರುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು. ಈ ವೇಳೆ ಕಾಂಗ್ರೆಸ್ ‌ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಇದನ್ನೂ ಓದಿ: Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Continue Reading

ರಾಜಕೀಯ

Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

Prajwal Revanna Case: ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

VISTARANEWS.COM


on

Prajwal Revanna Case Who is behind pen drive mastermind Karthik HD Kumaraswamy Question
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ದಿಢೀರ್‌ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಆಗ್ರಹಿಸಿದರು.

ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ

ನಾನು ಪ್ರಜ್ವಲ್ ರೇವಣ್ಣ ಅವರನ್ನು ವಹಿಸಿಕೊಂಡು ಮಾತನಾಡುವುದಿಲ್ಲ. ಎಫ್ಐಆರ್ ದಾಖಲು ಮಾಡಿದಾಗ ಜಾಮೀನು ಸಹಿತ ಪ್ರಕರಣವನ್ನು ದಾಖಲು ಮಾಡಿದೆವು. ಎರಡನೇ ದಿನ ಮತ್ತೆ ಇನ್ನೊಂದು ಪ್ರಕರಣವನ್ನು ದಾಖಲು ಮಾಡಿದೆವು. ಗನ್ ಪಾಯಿಂಟ್‌ ಅಡಿ ಬೆದರಿಕೆಯೊಡ್ಡಿ ಅತ್ಯಾಚಾರ ಆಗಿದೆ ಅಂತ ದೂರು ಕೊಟ್ಟರು. ಮಾಧ್ಯಮಗಳ ಮುಂದೆ ಕಥೆ ಕಟ್ಟಿದವರು ಯಾರು? ಸುಪ್ರೀಂ ಕೋರ್ಟ್ ಏನು ಹೇಳಿದೆ? ಇಂಥ ಪ್ರಕರಣದಲ್ಲಿ ಗೌಪ್ಯತೆಯನ್ನು ಉಳಿಸಿಕೊಂಡಿರಾ? ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ. ಇದು ಆಘಾತಕಾರಿ ಪ್ರಕರಣವಾಗಿದೆ. 2022ರಲ್ಲಿ ಈ ಘಟನೆ ಆಗಿದೆ ಎಂದು ಹೇಳಿದ್ದೀರಿ. ಮತ್ಯಾಕೆ ಸುಮ್ಮನಿದ್ದಿರಿ? ಎಂದು ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಆಕೆಯ ಹಿಂದೆ ಯಾರಿದ್ದಾರೆ?

22ನೇ ತಾರೀಖು ಪ್ರಜ್ವಲ್ ಪಕ್ಕಾ ಕೂತಿದ್ದ ಹೆಣ್ಣು ಮಗಳು ಯಾರು? ಮೊದಲ ವಿಡಿಯೊದಲ್ಲಿ ಬಂದ ಹೆಣ್ಣು ಮಗಳು 22ನೇ ತಾರೀಖು ಪ್ರಜ್ವಲ್ ಜತೆ ವೇದಿಕೆ ಹಂಚಿಕೆ ಮಾಡಿಕೊಂಡಿದ್ದಾರೆ. ಆಕೆಯ ಹಿಂದೆ ಯಾರಿದ್ದಾರೆ? ಸಿಎಂ ಸಿದ್ದರಾಮಯ್ಯ ಅವರೇ, ಡಿ.ಕೆ. ಶಿವಕುಮಾರ್ ಅವರೇ ಏನಿದು? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಮಹಿಳೆಯ ಕಿಡ್ನ್ಯಾಪ್‌ ಕೇಸ್‌ ಕತೆ ಏನು?

ರೇವಣ್ಣ ವಿರುದ್ಧ ಇಂದಿಗೂ ಸಹ ಯಾರೂ ದೂರು ಕೊಟ್ಟಿಲ್ಲ. ಬಳಿಕ ಕಿಡ್ನ್ಯಾಪ್ ಕೇಸ್ ದಾಖಲು ಮಾಡಿಕೊಂಡಿರಿ. ಆ ಹೆಣ್ಣು ಮಗಳು ಬದುಕಿದ್ದಾಳೋ, ಮೃತಪಟ್ಟಿದ್ದಾಳೋ ಗೊತ್ತಿಲ್ಲ ಎಂದು ನಿಮ್ಮ ವಕೀಲರು ನ್ಯಾಯಾಧೀಶರ ಮುಂದೆ ಹೇಳುತ್ತಾರೆ. ಆ ಮೇಲೆ ಆಕೆಯನ್ನು ಕರೆದುಕೊಂಡು ಬಂದಿರಿ. ಎಲ್ಲಿಂದ ಕರೆದುಕೊಂಡು ಬಂದಿರಿ? ಏನು ಮಹಜರು ಮಾಡಿದಿರಿ? ಈ ದಿನದವರೆಗೂ ಜಡ್ಜ್ ಮುಂದೆ ಆ ಹೆಣ್ಣು ಮಗಳನ್ನು ಏಕೆ ಹಾಜರುಪಡಿಸಲಿಲ್ಲ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಎಚ್.ಡಿ. ರೇವಣ್ಣ ಅವರು ತನಿಖೆಗೆ ಸಹಕಾರ ಕೊಡುತ್ತಿಲ್ಲ ಎಂದು ಹೇಳಿದ್ದೀರಿ. ನೀವು ಹೇಳಿದಂತೆ ಮಾಜಿ‌ ಮಂತ್ರಿ ಹೇಳಿಕೆ ಕೊಡಬೇಕಾ? ಇದು ಯಾವ ಇನ್ವೆಸ್ಟಿಗೇಷನ್ ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Continue Reading

ರಾಜಕೀಯ

Prajwal Revanna Case: ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

Prajwal Revanna Case: ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

VISTARANEWS.COM


on

Prajwal Revanna Case Kumaraswamy demands DK Shivakumar dismissal behind pen drive conspiracy
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇಲೆ ವಿನಾಕರಣ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರನ್ನು ಸಿಲುಕಿಸಲಾಗಿದೆ. ಇನ್ನು ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ದಿಢೀರ್‌ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಆಗ್ರಹಿಸಿದರು.

ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ

ನಾನು ಪ್ರಜ್ವಲ್ ರೇವಣ್ಣ ಅವರನ್ನು ವಹಿಸಿಕೊಂಡು ಮಾತನಾಡುವುದಿಲ್ಲ. ಎಫ್ಐಆರ್ ದಾಖಲು ಮಾಡಿದಾಗ ಜಾಮೀನು ಸಹಿತ ಪ್ರಕರಣವನ್ನು ದಾಖಲು ಮಾಡಿದೆವು. ಎರಡನೇ ದಿನ ಮತ್ತೆ ಇನ್ನೊಂದು ಪ್ರಕರಣವನ್ನು ದಾಖಲು ಮಾಡಿದೆವು. ಗನ್ ಪಾಯಿಂಟ್‌ ಅಡಿ ಬೆದರಿಕೆಯೊಡ್ಡಿ ಅತ್ಯಾಚಾರ ಆಗಿದೆ ಅಂತ ದೂರು ಕೊಟ್ಟರು. ಮಾಧ್ಯಮಗಳ ಮುಂದೆ ಕಥೆ ಕಟ್ಟಿದವರು ಯಾರು? ಸುಪ್ರೀಂ ಕೋರ್ಟ್ ಏನು ಹೇಳಿದೆ? ಇಂಥ ಪ್ರಕರಣದಲ್ಲಿ ಗೌಪ್ಯತೆಯನ್ನು ಉಳಿಸಿಕೊಂಡಿರಾ? ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ. ಇದು ಆಘಾತಕಾರಿ ಪ್ರಕರಣವಾಗಿದೆ. 2022ರಲ್ಲಿ ಈ ಘಟನೆ ಆಗಿದೆ ಎಂದು ಹೇಳಿದ್ದೀರಿ. ಮತ್ಯಾಕೆ ಸುಮ್ಮನಿದ್ದಿರಿ? ಎಂದು ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಆಕೆಯ ಹಿಂದೆ ಯಾರಿದ್ದಾರೆ?

22ನೇ ತಾರೀಖು ಪ್ರಜ್ವಲ್ ಪಕ್ಕಾ ಕೂತಿದ್ದ ಹೆಣ್ಣು ಮಗಳು ಯಾರು? ಮೊದಲ ವಿಡಿಯೊದಲ್ಲಿ ಬಂದ ಹೆಣ್ಣು ಮಗಳು 22ನೇ ತಾರೀಖು ಪ್ರಜ್ವಲ್ ಜತೆ ವೇದಿಕೆ ಹಂಚಿಕೆ ಮಾಡಿಕೊಂಡಿದ್ದಾರೆ. ಆಕೆಯ ಹಿಂದೆ ಯಾರಿದ್ದಾರೆ? ಸಿಎಂ ಸಿದ್ದರಾಮಯ್ಯ ಅವರೇ, ಡಿ.ಕೆ. ಶಿವಕುಮಾರ್ ಅವರೇ ಏನಿದು? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಮಹಿಳೆಯ ಕಿಡ್ನ್ಯಾಪ್‌ ಕೇಸ್‌ ಕತೆ ಏನು?

ರೇವಣ್ಣ ವಿರುದ್ಧ ಇಂದಿಗೂ ಸಹ ಯಾರೂ ದೂರು ಕೊಟ್ಟಿಲ್ಲ. ಬಳಿಕ ಕಿಡ್ನ್ಯಾಪ್ ಕೇಸ್ ದಾಖಲು ಮಾಡಿಕೊಂಡಿರಿ. ಆ ಹೆಣ್ಣು ಮಗಳು ಬದುಕಿದ್ದಾಳೋ, ಮೃತಪಟ್ಟಿದ್ದಾಳೋ ಗೊತ್ತಿಲ್ಲ ಎಂದು ನಿಮ್ಮ ವಕೀಲರು ನ್ಯಾಯಾಧೀಶರ ಮುಂದೆ ಹೇಳುತ್ತಾರೆ. ಆ ಮೇಲೆ ಆಕೆಯನ್ನು ಕರೆದುಕೊಂಡು ಬಂದಿರಿ. ಎಲ್ಲಿಂದ ಕರೆದುಕೊಂಡು ಬಂದಿರಿ? ಏನು ಮಹಜರು ಮಾಡಿದಿರಿ? ಈ ದಿನದವರೆಗೂ ಜಡ್ಜ್ ಮುಂದೆ ಆ ಹೆಣ್ಣು ಮಗಳನ್ನು ಏಕೆ ಹಾಜರುಪಡಿಸಲಿಲ್ಲ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಎಚ್.ಡಿ. ರೇವಣ್ಣ ಅವರು ತನಿಖೆಗೆ ಸಹಕಾರ ಕೊಡುತ್ತಿಲ್ಲ ಎಂದು ಹೇಳಿದ್ದೀರಿ. ನೀವು ಹೇಳಿದಂತೆ ಮಾಜಿ‌ ಮಂತ್ರಿ ಹೇಳಿಕೆ ಕೊಡಬೇಕಾ? ಇದು ಯಾವ ಇನ್ವೆಸ್ಟಿಗೇಷನ್ ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Continue Reading
Advertisement
Ballari Lok Sabha constituency Congress candidate e Tukaram voting in Sandur
ಬಳ್ಳಾರಿ15 mins ago

Lok Sabha Election 2024: ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮತದಾನ

MS Dhoni
ಕ್ರೀಡೆ17 mins ago

MS Dhoni: ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಲು ಇದುವೇ ಪ್ರಮುಖ ಕಾರಣ

Crime News
ಕ್ರೈಂ17 mins ago

ಮಾದಕ ವಸ್ತು ನೀಡಿ ಕುಟುಂಬಸ್ಥರೊಂದಿಗೆ ಮಲಗಲು ಹಿಂಸೆ ನೀಡುವ ಪತಿ; ಮಹಿಳೆಯೊಬ್ಬರ ಕಣ್ಣೀರಿನ ಕಥೆ ಇದು

lok sabha election 2024 one family
Lok Sabha Election 202418 mins ago

Lok Sabha Election 2024: ಮತ ಹಾಕಲು ವಿದೇಶದಿಂದ ಬಂದರು! ಒಂದೇ ಕುಟುಂಬದ 69 ಮಂದಿಯ ವೋಟ್‌ ಸೆಲ್ಫಿ!

Prajwal Revanna Case Who is behind pen drive mastermind Karthik HD Kumaraswamy Question
ರಾಜಕೀಯ1 hour ago

Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

Lok Sabha election 2024
ದೇಶ1 hour ago

Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

Prajwal Revanna Case Kumaraswamy demands DK Shivakumar dismissal behind pen drive conspiracy
ರಾಜಕೀಯ1 hour ago

Prajwal Revanna Case: ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

Theft Case In Bengaluru
ಬೆಂಗಳೂರು2 hours ago

Theft Case : ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Sunita Williams
ತಂತ್ರಜ್ಞಾನ2 hours ago

Sunita Williams: ಸುನೀತಾ ವಿಲಿಯಮ್ಸ್‌ ಮೂರನೇ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ; ಹೊಸ ದಿನಾಂಕ ಶೀಘ್ರ ಘೋಷಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ20 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ21 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ21 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌