Site icon Vistara News

ವಿಸ್ತಾರ TOP 10 NEWS: ಕರ್ನಾಟಕದ ರಾಜಕೀಯ ಪಲ್ಸ್‌ನಿಂದ, ಸಿದ್ದುಗೆ ವರುಣ ಟೆನ್ಶನ್‌ವರೆಗಿನ ಪ್ರಮುಖ ಸುದ್ದಿಗಳಿವು

top 10 News

#image_title

1. Pulse of Karnataka 2: ಹಳೆ ಮೈಸೂರು, ಕರಾವಳಿ, ಮಲೆನಾಡು, ಮಧ್ಯಕರ್ನಾಟಕದ ಜನರ ನಾಡಿ ಮಿಡಿತ
ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಮಾರ್ಚ್‌ ಮೊದಲ ವಾರದಲ್ಲಿ ಪ್ರಕಟವಾಗಿದ್ದ ಮೊದಲ ಆವೃತ್ತಿ ನಂತರ ಇದೀಗ ಪಲ್ಸ್ ಆಫ್ ಕರ್ನಾಟಕ ಎರಡನೇ ಆವೃತ್ತಿ ಪ್ರಸಾರ ಆರಂಭವಾಗಿದೆ. ಮೊದಲ ದಿನದಂದು ಹಳೆ ಮೈಸೂರು, ಕರಾವಳಿ, ಮಲೆನಾಡು, ಮಧ್ಯಕರ್ನಾಟಕದ ಜನರ ನಾಡಿ ಮಿಡಿತವನ್ನು ಪ್ರಕಟಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಎಲ್ಲ ಪ್ರದೇಶದ ಚಿತ್ರಣವನ್ನು ನೀಡಲಾಗುತ್ತದೆ.
Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?‌
Pulse of Karnataka 2: ಮಧ್ಯ ಕರ್ನಾಟಕ: ಸೀರೆ, ಮಿಕ್ಸಿ, ಕುಕ್ಕರ್‌ ನೀಡಿದರೆ ಮತಗಳು ಸಿಗುತ್ತವೆಯೇ?
Pulse of Karnataka 2: ಕರಾವಳಿ-ಮಲೆನಾಡು: ಬಿಜೆಪಿಗೆ ಮತ ಸೆಳೆಯಲು ಬಿ.ಎಸ್‌. ಯಡಿಯೂರಪ್ಪ ಎಷ್ಟು ಅನಿವಾರ್ಯ?

2. ಕೋಲಾರ ಬಳಿಕ ವರುಣದಲ್ಲೂ ಸಿದ್ದುಗೆ ಟೆನ್ಶನ್; ವಿಜಯೇಂದ್ರ ಕಣಕ್ಕಿಳಿಸಲು ಬಿಜೆಪಿ ಮಾಸ್ಟರ್​ ಪ್ಲ್ಯಾನ್?
ಬೆಂಗಳೂರು:
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರಿಗೆ ಕೋಲಾರ ಬಳಿಕ ಇದೀಗ ಸುರಕ್ಷಿತ ಎಂದು ಹೇಳಲಾದ ವರುಣದಲ್ಲೂ ಟೆನ್ಶನ್‌ ಶುರುವಾಗಿದೆ. ಇದಕ್ಕೆ ಕಾರಣ ಬಿಜೆಪಿ ಮಾಡಿಕೊಂಡಿದೆ ಎನ್ನಲಾದ ಮಾಸ್ಟರ್‌ ಪ್ಲ್ಯಾನ್‌. ಇಲ್ಲಿ ಬಿಜೆಪಿಯು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ತಂತ್ರ ಹೂಡಿದೆ ಎನ್ನಲಾಗಿದೆ. ಇದೇ ಸಂಕೇತವನ್ನು ಬಿಎಸ್‌ವೈ ಕೂಡಾ ನೀಡಿದ್ದಾರೆ.ವಿಜಯೇಂದ್ರ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ್ದು, ಈ ಬೆಳವಣಿಗೆಗೆ ಪುಷ್ಟಿ ನೀಡಿದೆ. ಪೂರ್ಣ ವರದಿಗೆ ಕ್ಲಿಕ್‌ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ವರದಿ : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್‌.ವೈ

3. ಕ್ರೈಸ್ತ, ಜೈನರಿಗೆ ಮೀಸಲಾತಿ ಮುಂದುವರಿಕೆ; ಮುಸ್ಲಿಮರು ಮಾತ್ರ ಹೊರಕ್ಕೆ: ವರ್ಗೀಕರಣದ ಕುರಿತು ಚರ್ಚೆ
ಎಸ್‌ಸಿಎಸ್‌ಟಿ ಸಮುದಾಯಕ್ಕೆ ಒಳಮೀಸಲಾತಿ ಹಂಚಿಕೆ ನಂತರ ಒಕ್ಕಲಿಗೆ ಹಾಗೂ ವೀರಶೈವ ಲಿಂಗಾಯತರ ಮೀಸಲಾತಿ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದರ ಕುರಿತು ಕೆಲವು ಜಿಜ್ಞಾಸೆಗಳು ಮೂಡಿವೆ. ಸಂವಿಧಾನಬಾಹಿರ ಎಂದು ಮುಸ್ಲಿಮರನ್ನು ಮೀಸಲಿನಿಂದ ಹೊರಗಿಟ್ಟ ಸರ್ಕಾರ, ಜೈನ್‌ ಹಾಗೂ ಕ್ರಿಶ್ಚಿಯನ್ನರನ್ನು ಹಾಗೆಯೇ ಉಳಿಸಿಕೊಂಡಿದೆ. ಸರ್ಕಾರದ ಈ ಸರ್ಕಸ್‌ ಭಾರಿ ಚರ್ಚೆಗೆ ಕಾರಣವಾಗಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ
ಪೂರಕ ವರದಿ : ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಯಡಿಯೂರಪ್ಪ

4.ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ಆಂತರಿಕ ಚುನಾವಣೆ
ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಇತಿಹಾಸದಲ್ಲೆ ಮೊಟ್ಟ ಮೊದಲ ಬಾರಿಗೆ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾರ್ಯಕರ್ತರ ಆಂತರಿಕ ಚುನಾವಣೆಯನ್ನು ಶುಕ್ರವಾರ ರಾಜ್ಯಾದ್ಯಂತ ನಡೆಸಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಚುನಾವಣಾ ಅಕ್ರಮ: ತುಮಕೂರು ಗ್ರಾಮಾಂತರ ಜೆಡಿಸ್‌ ಶಾಸಕ ಗೌರಿಶಂಕರ್‌ ಶಾಸಕತ್ವದಿಂದ ಅನರ್ಹ
ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಜಾತ್ಯತೀತ ಜನತಾದಳಕ್ಕೆ ತೀವ್ರ ಹಿನ್ನಡೆಯಾಗಿದೆ. ತುಮಕೂರು ಗ್ರಾಮಾಂತರದ ಜೆಡಿಎಸ್‌ ಶಾಸಕ ಗೌರಿಶಂಕರ್‌ ಅವರನ್ನು ರಾಜ್ಯ ಹೈಕೋರ್ಟ್‌ ಶಾಸಕತ್ವದಿಂದ ಅನರ್ಹಗೊಳಿಸಿದೆ. ಆದರೆ, ಈ ಆದೇಶ ಈ ಅವಧಿಗೆ ಮಾತ್ರ ಸೀಮಿತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಹಿಂದಿ ಹೇರಿಕೆ ವಿರೋಧಕ್ಕೆ ಮಣಿದ ಕೇಂದ್ರ, ಮೊಸರು ಪ್ಯಾಕೆಟ್‌ನಲ್ಲಿ ‘ದಹಿ’ ಎಂಬ ಮುದ್ರಣ ಆದೇಶ ವಾಪಸ್
ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಯತ್ನಕ್ಕೆ ಕರ್ನಾಟಕ ಹಾಗೂ ತಮಿಳುನಾಡು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೊಸರಿನ ಮೇಲೆ ಹಿಂದಿಯ ದಹಿ (Dahi Row) ಎಂಬುದಾಗಿ ಮುದ್ರಿಸಬೇಕು ಎಂಬ ಆದೇಶವನ್ನು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ(FSSAI)ವು ಹಿಂಪಡೆದಿದೆ. ಆ ಮೂಲಕ ಕರ್ನಾಟಕ ಹಾಗೂ ತಮಿಳುನಾಡು ಸೇರಿ ಹಲವೆಡೆ ವ್ಯಕ್ತವಾದ ವಿರೋಧಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಮೋದಿ ಓಡಿಸಿ, ದೇಶ ಉಳಿಸಿ ಬಳಿಕ ದೇಶಾದ್ಯಂತ ಆಪ್‌ನಿಂದ ಪೋಸ್ಟರ್ ಕ್ಯಾಂಪೇನ್ ಶುರು!
ನವದೆಹಲಿ: ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಅಭಿಯಾನದ ಬಳಿಕ ಆಮ್ ಆದ್ಮಿ ಪಾರ್ಟಿ, ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಪೋಸ್ಟರ್ ಕ್ಯಾಂಪೇನ್ ಗುರುವಾರ ಆರಂಭಿಸಿದೆ. ಒಟ್ಟು 11 ಭಾಷೆಗಳಲ್ಲಿ ದೇಶಾದ್ಯಂತ ಮೋದಿ ವಿರೋಧಿ ಪೋಸ್ಟರ್‌ಗಳನ್ನು ಪ್ರದರ್ಶಿಸಿದೆ. ಈ ಹಿಂದೆ, ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಪೋಸ್ಟರ್‌ಗಳನ್ನು ದಿಲ್ಲಿಯ ಬೀದಿಗಳಲ್ಲಿ ಅಂಟಿಸಲಾಗಿತ್ತು. ಈ ಸಂಬಂಧ ದಿಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ನೂರು ಎಫ್ಐಆರ್‌ಗಳನ್ನು ದಾಖಲಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. IPL 2023: ಆರ್​ಸಿಬಿಗೆ ಆಘಾತ; ಮೊದಲ ಪಂದ್ಯಕ್ಕೆ ಸ್ಟಾರ್​ ಆಟಗಾರರು ಅಲಭ್ಯ
ಕಳೆದ 15 ಆವೃತ್ತಿಯ ಐಪಿಎಲ್​ನಲ್ಲಿ ಈ ಸಲ ಕಪ್ ನಮ್ದೇ ಎಂದು ಹೇಳುತ್ತಲೇ ಬಂದಿರುವ ಆರ್​ಸಿಬಿ ಒಂದು ಬಾರಿಯೂ ಕಪ್​ ಗೆಲ್ಲುವಲ್ಲಿ ಯಶಸ್ಸು ಕಂಡಿಲ್ಲ. ಈ ಬಾರಿಯಾದರೂ ಕಪ್​ ಗೆಲ್ಲಬೇಕೆಂದಿದ್ದ ಆರ್​ಸಿಬಿಗೆ ಗಾಯದ ಸಮಸ್ಯೆಯೊಂದು ಅಡ್ಡಿಯಾದಂತೆ ತೋರುತ್ತಿದೆ. ಆರ್​ಸಿಬಿ ತನ್ನ ಐಪಿಎಲ್​ ಅಭಿಯಾನವನ್ನು ಏಪ್ರಿಲ್​ 2 ರಂದು ಮುಂಬೈ ಇಂಡಿಯನ್ಸ್​ ವಿರುದ್ಧ ಕಣಕ್ಕಿಳಿಯುವ ಮೂಲಕ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಸ್ಟಾರ್​ ಆಟಗಾರರಿಬ್ಬರು ಅಲಭ್ಯರಾಗಲಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿವೆ. ಪೂರ್ಣ ವರದಿಗೆ ಲಿಂಕ್‌ ಕ್ಲಿಕ್‌ ಮಾಡಿ

9. Import duty exemption : ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧಗಳ ದರ ಇಳಿಕೆ
ಕೇಂದ್ರ ಸರ್ಕಾರವು ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧ ಹಾಗೂ ಆಹಾರಗಳ ದರ ಇಳಿಕೆಗೆ ಪೂರಕವಾಗಿ, ಅವುಗಳಿಗೆ ಆಮದು ಸುಂಕದಿಂದ ವಿನಾಯಿತಿ (Import duty exemption) ನೀಡಿದೆ. ಏಪ್ರಿಲ್‌ 1ರಿಂದ ಈ ಆಮದು ಸುಂಕ ವಿನಾಯಿತಿ ಅನ್ವಯವಾಗಲಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

10. ‘ಲೋಕವನ್ನೇ ಗೆದ್ದವನೆ’; ಮೋದಿ ಭಾವಚಿತ್ರಕ್ಕೆ ಮುತ್ತು ಕೊಟ್ಟ ಕರ್ನಾಟಕದ ರೈತ, ವಿಡಿಯೊ ವೈರಲ್
‌ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದರೂ, ಬೆಲೆಯೇರಿಕೆ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದರೂ, ಪ್ರಧಾನಿ ಮೋದಿ ಅವರ ಮೇಲೆ ಜನರಿಗಿರುವ ಪ್ರೀತಿ, ಬೆಂಬಲದಲ್ಲಿ ಮಾತ್ರ ಕಡಿಮೆಯಾಗಿಲ್ಲ. ದೇಶದ ಯಾವುದೇ ಮೂಲೆಗೆ ಹೋದರೂ ನರೇಂದ್ರ ಮೋದಿ ಅವರಿಗೆ ಜನ ಭಾರಿ ಬೆಂಬಲ ವ್ಯಕ್ತಪಡಿಸುತ್ತಾರೆ. ಗಂಟೆಗಟ್ಟಲೆ ನಿಂತು, ಜನರ ಗದ್ದಲದ ಮಧ್ಯೆಯೂ ಮೋದಿ ಅವರನ್ನು ಕಣ್ತುಂಬಿಕೊಳ್ಳುತ್ತಾರೆ. ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ ಕರ್ನಾಟಕದ ರೈತರೊಬ್ಬರು ಬಸ್‌ ಮೇಲಿರುವ ಮೋದಿ ಅವರ ಭಾವಚಿತ್ರಕ್ಕೆ ಮುತ್ತು ಕೊಟ್ಟಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇನ್ನಷ್ಟು ಪ್ರಮುಖ ಸುದ್ದಿಗಳು

  1. Indore Temple Tragedy: ಇಂದೋರ್‌ ದೇಗುಲದಲ್ಲಿ ಮೆಟ್ಟಿಲುಬಾವಿ ಕುಸಿದು 13 ಜನ ಸಾವು; ಮೋದಿ ಸಂತಾಪ
  2. World Master Athletics: 95ನೇ ವಯಸ್ಸಿನಲ್ಲಿ ಮೂರು ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಗವಾನಿ ದೇವಿ
  3. ವಿಧಾನಸಭೆಯಲ್ಲಿ ಕುಳಿತು ಬ್ಲ್ಯೂ ಫಿಲಂ ವೀಕ್ಷಿಸಿದ ತ್ರಿಪುರಾ ಬಿಜೆಪಿ ಶಾಸಕ, ಉಗಿದು ಉಪ್ಪಿನಕಾಯಿ ಹಾಕಿದ ಜನ
  4. ಧವಳ ಧಾರಿಣಿ ಅಂಕಣ: ರಾಮನೆನ್ನುವ ನಿತ್ಯ ಆದರ್ಶ
  5. ರಾಜ ಮಾರ್ಗ ಅಂಕಣ : ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ ಭಾಗ-6, ನಿಮ್ಮದೂ ಒಂದು ಯಶೋಗಾಥೆ ಯಾಕಾಗಬಾರದು?
Exit mobile version