Voter data | ಚಿಲುಮೆ ಮಾದರಿಯಲ್ಲೇ ವಿಜಯಪುರದಲ್ಲೂ ಗೋಲ್‌ಮಾಲ್‌: ಸಿಕ್ಕಿಬಿದ್ದವನ ಹಿಂದಿದ್ದಾರಾ ಬಿಜೆಪಿ ನಾಯಕ ಯತ್ನಾಳ್‌? - Vistara News

ಕರ್ನಾಟಕ

Voter data | ಚಿಲುಮೆ ಮಾದರಿಯಲ್ಲೇ ವಿಜಯಪುರದಲ್ಲೂ ಗೋಲ್‌ಮಾಲ್‌: ಸಿಕ್ಕಿಬಿದ್ದವನ ಹಿಂದಿದ್ದಾರಾ ಬಿಜೆಪಿ ನಾಯಕ ಯತ್ನಾಳ್‌?

ಬೆಂಗಳೂರಿನ ಚಿಲುಮೆ ಮಾದರಿಯಲ್ಲೇ ವಿಜಯಪುರದಲ್ಲೂ ಮತದಾರರ ಮಾಹಿತಿ ಕಳವು, ಹೆಸರು ಡಿಲೀಟ್‌ ನಡೆಯುತ್ತಿದೆ (voter data)
ಎಂದು ಕಾಂಗ್ರೆಸ್‌ ಆರೋಪಿಸಿದೆ. ಒಬ್ಬ ವ್ಯಕ್ತಿಯನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದೆ.

VISTARANEWS.COM


on

Vijayapura voter scam
ಹಗರಣದ ಬಗ್ಗೆ ದೂರು ನೀಡಿರುವ ಕಾಂಗ್ರೆಸ್‌ ನಾಯಕ ಅಬ್ದುಲ್‌ ಹಮೀದ್‌ ಮುಷರಫ್‌ ಮತ್ತು ಸಿಕ್ಕಿಬಿದ್ದ ಮಹಾಂತೇಶ ಪೂಜಾರಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ರಾಷ್ಟ್ರಾದ್ಯಂತ ಸುದ್ದಿ ಮಾಡಿದ ಬೆಂಗಳೂರಿನ ಮತದಾರರ ಮಾಹಿತಿ ಕಳವು (voter data) ಪ್ರಕರಣದ ಮಾದರಿಯಲ್ಲೇ ವಿಜಯಪುರದಲ್ಲೂ ದೊಡ್ಡ ಮಟ್ಟದ ಗೋಲ್‌ಮಾಲ್‌ ನಡೆದಿದೆ ಎಂಬ ಆರೋಪ ಗಂಭೀರವಾಗಿ ಕೇಳಿಬಂದಿದೆ. ವಿಜಯಪುರ ನಗರದಲ್ಲಿ ಮನೆ ಮನೆಗೆ ಹೋಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ಹೆಸರಿನಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಹೀಗೆ ಸಿಕ್ಕಿಬಿದ್ದವನನ್ನು ಮಹಾಂತೇಶ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಕಡೆಯವನು ಎಂಬ ಮಾತು ಕೇಳಿಬರುತ್ತಿದೆ.

ವಿಜಯಪುರ ನಗರದ ಖಾದಿ ಗ್ರಾಮೋದ್ಯೋಗ ಪ್ರದೇಶದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಮನೆ ಮನೆಗೆ ಭೇಟಿ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಷರಫ್‌ ಮತ್ತಿತರರು ಸೇರಿ ಹಿಡಿದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ವೋಟರ್‌ ಸ್ಕ್ಯಾಮ್‌ನ ಮಾದರಿಯಲ್ಲೇ ಇಲ್ಲೂ ನಡೆಯುತ್ತಿದೆಯೇ ಎಂಬ ಸಂಶಯದಲ್ಲೇ ಇವರೂ ಕಾರ್ಯಾಚರಣೆ ನಡೆಸಿದ್ದರು.

ಮಹಾಂತೇಶ ಪೂಜಾರಿ ಎನ್ನುವ ವ್ಯಕ್ತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಯತ್ನ ನಡೆಸಿದವನು ಈತನನ್ನು ವಿಚಾರಣೆ ನಡೆಸಿದಾಗ, ತಾನು ಜಿಲ್ಲಾಧಿಕಾರಿಗಳ ಹಾಗೂ ತಹಸೀಲ್ದಾರ್ ಕಚೇರಿಯಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾನೆ. ಮತದಾರರ ಪಟ್ಟಿಯಿಂದ ಯಾರ ಹೆಸರು ಡಿಲೀಟ್‌ ಆಗಿದೆಯೋ ಅವರ ಹೆಸರನ್ನು ಸೇರಿಸಲು ಸಹಾಯ ಮಾಡುವುದಾಗಿ ಆತ ಹೇಳುತ್ತಿದ್ದಾನೆ.

ಕಾಂಗ್ರೆಸ್ ಮುಖಂಡ ಹೇಳುವುದೇನು?
ವಿಜಯಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಗ ಮತದಾರರ ಹೆಸರನ್ನು ಡಿಲಿಟ್ ಮಾಡುತ್ತಿದ್ದಾರೆ. ಅಧಿಕಾರಿಗಳೂ ಇದರಲ್ಲಿ ಶಾಮೀಲಾಗಿದ್ದಾರೆ. ಹೊಸ ಮತದಾರರನ್ನು ಸೇರಿಸುವ ನೆಪದಲ್ಲಿ ಇದ್ದ ಹೆಸರನ್ನೂ ಕಿತ್ತು ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಬ್ದುಲ್ ಹಮೀದ್ ಮುಷರಫ್‌ ವಿಸ್ತಾರ ನ್ಯೂಸ್ ಗೆ ತಿಳಿಸಿದ್ದಾರೆ. ಇವರು ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಬಿಜೆಪಿ ಶಾಸಕರ ಕಡೆಯವರು ಈ ಕೆಲಸ ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದೇವೆ. ಇನ್ನೂ 30 ಜನ ಈ ಕೃತ್ಯದಲ್ಲಿ ತೊಡಗಿರುವ ಮಾಹಿತಿ ಇದೆ. ಬಿಇಒಗಳೂ ಇದರಲ್ಲಿ ಶಾಮೀಲಾಗಿದ್ದಾರೆ ಎಂದವರು ಆಪಾದಿಸಿದರು.

ಡಿಸಿ, ತಹಸೀಲ್ದಾರ್ ಹೆಸರು ಹೇಳಿಕೊಂಡು ಬಂದು ಮತದಾರರ ಹೆಸರನ್ನು ಡಿಲಿಟ್ ಮಾಡುತ್ತಿದ್ದಾರೆ. ಕಾರ್ಪೋರೇಷನ್ ಎಲೆಕ್ಷನ್ ನಲ್ಲೂ ಹೀಗೇ ಮಾಡಿ ನಮ್ಮ ಅಭ್ಯರ್ಥಿಗಳು ಸೋಲುವ ಹಾಗೆ ಮಾಡಿದರು. ಇದನ್ನು ಚುನಾವಣೆ ಆಯೋಗದ ಗಮನಕ್ಕೆ ತರುತ್ತೇವೆ ಎಂದವರು ಹೇಳಿದರು.

ಯತ್ನಾಳ್‌ ಪಿಎ ಜತೆಗೂ ಮಾತುಕತೆ
ಈ ನಡುವೆ ಮುಷರಫ್‌ ಅವರು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಆಪ್ತ ಸಹಾಯಕನ ಜತೆಗೂ ಮಾತನಾಡಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ ಎಂದು ವಾದಿಸಿದ್ದಾರೆ.

ಸಿಕ್ಕಿಬಿದ್ದಿರುವ ಮಹಾಂತೇಶ್‌ ಪೂಜಾರಿ ಯಾರು?
ಮಹಾಂತೇಶ ಪೂಜಾರಿ ತಾನೊಬ್ಬ ಖಾಸಗಿ ವ್ಯಕ್ತಿ. ಬಿಎಲ್‌ಒ ಅವರಿಂದ ನೇಮಕವಾಗಿರುವ ವ್ಯಕ್ತಿ. ಯಾವ ಪಕ್ಷಕ್ಕೂ ಸೇರಿದವನಲ್ಲ ಎನ್ನುತ್ತಾನೆ. ಆದರೆ, ಮಹಾಂತೇಶ್‌ ಪೂಜಾರಿ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಆಪ್ತ ಎನ್ನುತ್ತಾರೆ ಕಾಂಗ್ರೆಸ್‌ ನಾಯಕರು. ಮಹಾಂತೇಶ ಪೂಜಾರಿ ಬಸನಗೌಡ ಪಾಟೀಲ್‌ ಯತ್ನಾಳರಿಗೆ ಸೇರಿದ ಸಿದ್ದಶ್ರೀ ಎಂಬ ಬ್ಯಾಂಕ್‌ನ ಸಿಬ್ಬಂದಿ ಎನ್ನುತ್ತಾರೆ ಮುಷರಫ್‌.

ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎನ್ನುವುದು ಕಾಂಗ್ರೆಸ್‌ ನಾಯಕರ ಆಗ್ರಹ.

ಇದನ್ನೂ ಓದಿ | Voter Data | ʼಚಿಲುಮೆʼ ಕೇಸ್‌ನಲ್ಲಿ ಮತ್ತೊಬ್ಬ ಬಂಧನ; ನಿರೀಕ್ಷಣಾ ಜಾಮೀನಿಗೆ ಮುಂದಾದ 200 BBMP ಅಧಿಕಾರಿಗಳು !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ಅಶೋಕ್ ಉಲ್ಟಾ ಹೊಡೆದಿದ್ದೇಕೆ?

‌Prajwal Revanna Case: ಈ ಹಿಂದೆ ನೀವು ಮೈತ್ರಿ ಮಾಡಿಕೊಂಡು ಪ್ರಜ್ವಲ್‌ ರೇವಣ್ಣ ಅವರನ್ನು ಗೆಲ್ಲಿಸಿ ಆರಿಸಿ ಕಳಿಸಿದ್ದೀರಿ. ಜೋಡೆತ್ತು ಅಂತ ಹೇಳಿಕೊಂಡು ಓಡಾಡಿದ್ದು ಮರೆತುಹೋಯಿತಾ? ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕೈ ಇಳಿಸೋಕೆ, ಡಿ.ಕೆ. ಶಿವಕುಮಾರ್‌ ಅವರು ಕೈ ಎತ್ತೋಕೆ! ಅವರು ಇನ್ನೂ ನಮ್ಮ‌ ಅಭ್ಯರ್ಥಿ. ನಮ್ಮ ಬೆಂಬಲಿತ ಸಂಸದ ಆಗೋಕೆ ಒಂದು ತಿಂಗಳು, 13 ದಿನ ಬೇಕು. ಆಮೇಲೆ ನಾವು ಏನು ಮಾಡುತ್ತೇವೆ ಎಂಬುದನ್ನು ನೀವು ಕೇಳಿ ಎಂದು ಆರ್.‌ ಅಶೋಕ್‌ ಹೇಳಿದರು.

VISTARANEWS.COM


on

Prajwal Revanna Case Prajwal Congress supported MP Says Ashok
Koo

ಬೆಂಗಳೂರು: ಲೈಂಗಿಕ ಹಗರಣ ಕೇಸ್‌ನಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ (‌Prajwal Revanna Case) ಅವರು ಕಾಂಗ್ರೆಸ್‌ ಬೆಂಬಲಿತ ಸಂಸದ. ಈಗ ಅವರು ನಮ್ಮ ಎನ್‌ಡಿಎ ಅಭ್ಯರ್ಥಿ ಆಗಿರಬಹುದು. ಆದರೆ, ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. ಆ ವೇಳೆ ಪ್ರಜ್ವಲ್‌ ಗೆಲುವು ಸಾಧಿಸಿದ್ದು ಕಾಂಗ್ರೆಸ್‌ ಬೆಂಬಲದಿಂದ ಎಂಬುದನ್ನು ಮರೆಯಬೇಡಿ. ಅವರ ಕೇಸ್‌ ಬಗ್ಗೆ ಗೊತ್ತಿದ್ದೂ ವಿದೇಶಕ್ಕೆ ಹಾರಲು ಹೇಗೆ ಬಿಟ್ಟಿರಿ? ನಿಮಗೆ ಅವರನ್ನು ಅರೆಸ್ಟ್‌ ಮಾಡಲು ಆಗದಿದ್ದರೆ ನಮಗೆ ಅಧಿಕಾರವನ್ನು ಕೊಡಿ. ನಾವು 24 ಗಂಟೆಯೊಳಗೆ ಹಿಡಿದುಹಾಕುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಆರ್.‌ ಅಶೋಕ್‌, ಈ ಹಿಂದೆ ನೀವು ಮೈತ್ರಿ ಮಾಡಿಕೊಂಡು ಗೆಲ್ಲಿಸಿ ಆರಿಸಿ ಕಳಿಸಿದ್ದೀರಿ. ಜೋಡೆತ್ತು ಅಂತ ಹೇಳಿಕೊಂಡು ಓಡಾಡಿದ್ದು ಮರೆತುಹೋಯಿತಾ? ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕೈ ಇಳಿಸೋಕೆ, ಡಿ.ಕೆ. ಶಿವಕುಮಾರ್‌ ಅವರು ಕೈ ಎತ್ತೋಕೆ! ಅವರು ಇನ್ನೂ ನಮ್ಮ‌ ಅಭ್ಯರ್ಥಿ. ನಮ್ಮ ಬೆಂಬಲಿತ ಸಂಸದ ಆಗೋಕೆ ಒಂದು ತಿಂಗಳು, 13 ದಿನ ಬೇಕು. ಆಮೇಲೆ ನಾವು ಏನು ಮಾಡುತ್ತೇವೆ ಎಂಬುದನ್ನು ನೀವು ಕೇಳಿ ಎಂದು ಹೇಳಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್‌ ತೀರ್ಮಾನಿಸುತ್ತದೆ. ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್‌ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದು ಆರ್.‌ ಅಶೋಕ್‌ ಸವಾಲು ಹಾಕಿದರು.

ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗೆ ಪಕ್ಷ ಬೆಂಬಲ ನೀಡುವುದಿಲ್ಲ. ಬಿಜೆಪಿಯಿಂದ ಕಠಿಣ ಕ್ರಮ ವಹಿಸಲಾಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಥವಾ ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಇಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಒಪ್ಪಿಕೊಳ್ಳಲಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಏಕೆ ಪ್ರಶ್ನೆ ಮಾಡಬೇಕು, ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ ಎಂದು ಪ್ರಶ್ನಿಸಿದರು.

ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ

ಕಳೆದ ಎಂಟು ತಿಂಗಳಿಂದ ರೈತರಿಗೆ ಸರ್ಕಾರ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಂಟು ತಿಂಗಳಿಂದ ಹಾಲಿನ 5 ರೂ. ಪ್ರೋತ್ಸಾಹಧನ ನೀಡಿಲ್ಲ. ಸುಮಾರು 700 ಕೋಟಿ ರೂಪಾಯಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಜನರಿಗೆ ತೆರಿಗೆ ಹಾಕಿ ಅವರಿಂದ ವಸೂಲಿ ಮಾಡಿ ನಂತರ ಮಹಿಳೆಯರಿಗೆ ಹಣ ನೀಡುತ್ತೇವೆ ಎಂದು ನಾಟಕವಾಡಿದ್ದಾರೆ. ಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ ಎಂದು ಆರ್.‌ ಅಶೋಕ್‌ ಗುಡುಗಿದರು.

ಇದನ್ನೂ ಓದಿ: Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಖಜಾನೆ ಖಾಲಿ ಮಾಡಿಕೊಂಡ ಬಳಿಕ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಕಳೆದ 50 ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ತಿಳಿಸಲು ಸವಾಲು ಹಾಕುತ್ತೇನೆ. ಕಾಂಗ್ರೆಸ್‌ನ ಯೋಗ್ಯತೆಗೆ ಕರ್ನಾಟಕಕ್ಕೆ ಒಂದು ಕೋಟಿ ರೂ. ಕೂಡ ಬರ ಪರಿಹಾರ ನೀಡಿಲ್ಲ ಎಂದು ಆರ್.‌ ಅಶೋಕ್‌ ದೂರಿದರು.

ಚೊಂಬು ಬಳಸದಂತೆ ಮಾಡಿದ್ದು ಮೋದಿ

ರಾಹುಲ್‌ ಗಾಂಧಿ ಎಲ್ಲೇ ಹೋದರೂ ಪಂಗನಾಮ ಸಿಗುತ್ತಿದೆ. ಅವರ ನಾಯಕತ್ವದ ಮೇಲೆ ವಿಶ್ವಾಸ ಇಲ್ಲವೆಂದೇ ಸಿಎಂ ಸಿದ್ದರಾಮಯ್ಯ ಕೇವಲ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದಾರೆ. ಇವರಿಗೆ ನೈತಿಕತೆ ಇದ್ದರೆ ಹಿಂದಿನ ಯುಪಿಎ ಸರ್ಕಾರ ಏನು ಮಾಡಿದೆ ಎಂದು ಜಾಹೀರಾತು ನೀಡಬೇಕಿತ್ತು. ಇದೇ ಕಾಂಗ್ರೆಸ್‌ ದೇಶಕ್ಕೆ ಚೊಂಬು ನೀಡಿತ್ತು. ನಂತರ ಬಂದ ಪ್ರಧಾನಿ ನರೇಂದ್ರ ಮೋದಿ ಶೌಚಾಲಯಗಳನ್ನು ಕಟ್ಟಿಸಿ ಚೊಂಬು ಬಳಸದಂತೆ ಮಾಡಿದರು ಎಂದು ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದರು.

ಎಚ್‌ಎಎಲ್‌ ಮುಚ್ಚುತ್ತಾರೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು. ಅದೇ ಎಚ್‌ಎಎಲ್‌ ಈಗ 84 ಸಾವಿರ ಕೋಟಿ ರೂ. ವಹಿವಾಟು ನಡೆಸುತ್ತಿದೆ. ಇಂದು ಎಲ್ಲ ಸಾರ್ವಜನಿಕ ಉದ್ದಿಮೆಗಳು ಲಾಭ ಮಾಡುತ್ತಿವೆ. 2022 ರ ವೇಳೆಗೆ 6 ಕೋಟಿ ಹೊಸ ಎಂಎಸ್‌ಎಂಇ ಉದ್ಯಮಗಳು ಸೃಷ್ಟಿಯಾಗಿವೆ. ರೋಜ್‌ಗಾರ್‌ ಯೋಜನೆಯಡಿ 7.5 ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಎಷ್ಟು ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಲಿ ಎಂದು ಆರ್.‌ ಅಶೋಕ್‌ ಸವಾಲೆಸೆದರು.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಡಾ.ಬಿ.ಆರ್‌.ಅಂಬೇಡ್ಕರ್‌ ರಚಿತ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲು ಇಲ್ಲ. ಕಾಂಗ್ರೆಸ್‌ಗೆ ಮೊದಲೇ ಅಂಬೇಡ್ಕರ್‌ ಬಗ್ಗೆ ಗೌರವವಿಲ್ಲ. ಆದ್ದರಿಂದ ಸಂವಿಧಾನವನ್ನೇ ತಿರುಚಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ. ಪಿತೃಗಳಿಗೆ ತಿಥಿಯಲ್ಲಿ ವಡೆ ಇಡುತ್ತಾರೆ. ಅಂತಹ ಹೆಸರಿನ ಸ್ಯಾಮ್‌ ಪಿತ್ರೋಡಾ ಅವರು, ಜನರ ಪಿತ್ರಾರ್ಜಿತ ಆಸ್ತಿಗಳಿಗೆ ತರ್ಪಣ ಬಿಡಲು ಸಲಹೆ ನೀಡಿದ್ದಾರೆ. ಈ ಹೇಳಿಕೆಯನ್ನು ಕಾಂಗ್ರೆಸ್‌ ನಮ್ಮದಲ್ಲ ಎಂದಿದೆ, ಆದರೆ ಹೇಳಿಕೆ ಬದಲಿಸಲು ಕಾಂಗ್ರೆಸ್‌ ಹಿರಿಯರೇ ಸೂಚನೆ ನೀಡಿದ್ದಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಟಾಸ್ಕ್‌ ಫೋರ್ಸ್‌ ರಚಿಸಿ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕೂಡಲೇ ಟಾಸ್ಕ್‌ ಫೋರ್ಸ್‌ ರಚಿಸಿ ಪ್ರತಿ ತಾಲೂಕಿಗೆ 5 ಕೋಟಿ ರೂ. ಮೀಸಲಿಡಬೇಕು ಎಂದು ಆರ್‌.ಅಶೋಕ ಆಗ್ರಹಿಸಿದರು.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ಗಂಡಾಂತರ; ಜ್ಯೋತಿಷಿ ಮೊರೆ ಹೋದ ದೇವೇಗೌಡ, ರೇವಣ್ಣ!

Prajwal Revanna Case: ಬೆಂಗಳೂರಿನ ನಿವಾಸಕ್ಕೆ ಬುಧವಾರ ಜ್ಯೋತಿಷಿಯನ್ನು ಕರೆಸಿಕೊಂಡಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ರೇವಣ್ಣ ಅವರು, ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವುದರಿಂದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ (Prajwal Revanna Case) ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈಗಾಗಲೇ ವಿಚಾರಣೆಗೆ ಹಾಜರಾಗಲು ಎಸ್‌ಐಟಿಯಿಂದ ನೋಟಿಸ್‌ ಕೂಡ ನೀಡಲಾಗಿದೆ. ಹೀಗಾಗಿ ಕುಟುಂಬದಲ್ಲಿನ ಸಮಸ್ಯೆ ಪರಿಹಾರಕ್ಕಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇದೀಗ ಜ್ಯೋತಿಷ್ಯದ ಮೊರೆ ಹೋಗಿದ್ದು, ಇದಕ್ಕಾಗಿ ಜ್ಯೋತಿಷಿ ಜತೆ ಚರ್ಚೆ ನಡೆಸಿದ್ದಾರೆ.

ಪದ್ಮನಾಭನಗರದ ನಿವಾಸಕ್ಕೆ ಬುಧವಾರ ಜ್ಯೋತಿಷಿಯನ್ನು ಕರೆಸಿಕೊಂಡಿರುವ ದೇವೇಗೌಡರು ಹಾಗೂ ರೇವಣ್ಣ ಅವರು, ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಕುಟುಂಬದಲ್ಲಿ ಏನಾದರೂ ಸಮಸ್ಯೆಗಳು ಬಂದಾಗ ದೇವೇಗೌಡರ ಕುಟುಂಬಸ್ಥರು ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ಹೋಮ-ಹವನ, ವಿಶೇಷ ಪೂಜೆ ಮಾಡುತ್ತಾರೆ. ಹೀಗಾಗಿ ಸದ್ಯ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

Hassan Pen Drive Case Prajwal seeks 7 days time to appear for questioning

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರು ತಮ್ಮ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ತಾವು ಬೆಂಗಳೂರಿನಲ್ಲಿ ಇಲ್ಲದ ಕಾರಣ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡಬೇಕು ಎಂದು ಸಿಐಡಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಂಸದ ಪ್ರಜ್ವಲ್‌ ರೇವಣ್ಣ, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” (As I am not in Bangalore to attend the enquiry, I have communicated to C.I.D Bangalore through my Advocate. Truth will prevail soon) ಎಂದು ಬರೆದುಕೊಂಡಿದ್ದಾರೆ.

ಪ್ರಜ್ವಲ್‌ ಪರವಾಗಿ ವಕೀಲರಿಂದ ಪತ್ರ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಚಾರವಾಗಿ ವಿಚಾರಣೆಗೆ ಹಾಜರಾಗಲು ಗಡುವು ವಿಸ್ತರಣೆ ಮಾಡುವಂತೆ ಪ್ರಜ್ವಲ್‌ ಪರ ವಕೀಲರಾದ ಅರುಣ್‌ ಜಿ. ಅವರು ಸಿಐಡಿಗೆ ಪತ್ರ ಬರೆದು ಕೋರಿದ್ದಾರೆ.

ಇದನ್ನೂ ಓದಿ | Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಪತ್ರದಲ್ಲೇನಿದೆ?

ಪ್ರಜ್ವಲ್‌ ರೇವಣ್ಣ ಅವರು ಖುದ್ದಾಗಿ ಎಸ್‌ಐಟಿ ಮುಂದೆ ಹಾಜರಾಗಲು ನೀಡಿರುವ ನೋಟಿಸ್‌ಗೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ಅವರ ಮನೆಯ ಮೇಲೆ ತಮ್ಮ ಕಚೇರಿಯಿಂದ ಕಳುಹಿಸಿರುವ ನೋಟಿಸ್‌ ಅಂಟಿಸಲಾಗಿದೆ. ಇದರ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಪ್ರಜ್ವಲ್ ಅವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆ‌ರ್.ಪಿ.ಸಿ. ದಿನಾಂಕ:30-04-2024ರ ತಮ್ಮ ನೋಟಿಸ್‌ನಲ್ಲಿ ತಾವು ದಿನಾಂಕ: 01-05-2024ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ. ಆದರೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು, ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಲಾಗಿದೆ. ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ವಕೀಲ ಅರುಣ್‌ ಅವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Continue Reading

ಕರ್ನಾಟಕ

Veena Kashappanavar: ರಾಜಕೀಯದಿಂದ ದೂರ ಸರಿದ್ರಾ ವೀಣಾ ಕಾಶಪ್ಪನವರ್‌? ಭಾವನಾತ್ಮಕ ಪೋಸ್ಟ್‌ ಹಾಕಿದ ಕೈ ನಾಯಕಿ!

Veena Kashappanavar: ಸಾಮಾಜಿಕ ಜಾಲತಾಣದಲ್ಲಿ ವೀಣಾ ಕಾಶಪ್ಪನವರ್‌ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಹೀಗಾಗಿ ಅವರು ರಾಜಕೀಯದಿಂದ ದೂರ ಸರಿದ್ರಾ ಎಂಬ ಚರ್ಚೆಗಳು ನಡೆಯುತ್ತಿವೆ.

VISTARANEWS.COM


on

Veena kashappanavar
Koo

ಬಾಗಲಕೋಟೆ: ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದ ಬಳಿಕ ಕಾಂಗ್ರೆಸ್‌ ನಾಯಕಿ ವೀಣಾ ಕಾಶಪ್ಪನವರ್‌ (Veena Kashappanavar) ಅವರು ಪಕ್ಷೇತರವಾಗಿ ಸ್ಪರ್ಧಿಸಬೇಕು ಎಂದು ಬೆಂಬಲಿಗರು ಒತ್ತಾಯ ಮಾಡಿದ್ದರು. ಹೀಗಾಗಿ ಅವರ ಮನವೊಲಿಸಲು ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸಂಧಾನ ಸಭೆ ನಡೆದಿತ್ತು. ಬಳಿಕ ಮೇಲೆ ಪಕ್ಷದ ಚಟುವಟಿಕೆಗಳಿಂದ ದೂರು ಉಳಿದಿದ್ದ ವೀಣಾ ಕಾಶಪ್ಪನವರ್‌, ಇದೀಗ ರಾಜಕೀಯದಿಂದ ದೂರ ಸರಿದ್ರಾ ಎಂಬ ಪ್ರಶ್ನೆ ಅವರ ಬೆಂಬಲಿಗರಲ್ಲಿ ಮೂಡಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವೀಣಾ ಕಾಶಪ್ಪನವರ್‌ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿರುವುದು ಈ ಚರ್ಚೆಗೆ ಇಂಬು ನೀಡುವಂತಿದೆ.

ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಏನಿದೆ?

ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಪೋಸ್ಟ್‌ ಹಾಕಿರುವ ವೀಣಾ ಕಾಶಪ್ಪನವರ್‌, ಕಣ್ಣು ನಕ್ಕರೂ ಒದ್ದೆಯಾಗುತ್ತದೆ, ಅತ್ತರೂ ಒದ್ದೆಯಾಗುತ್ತದೆ. ಆದರೆ ನಗಿಸಿದವರು ನಾಲ್ಕು ದಿನ ನೆನಪಿನಲ್ಲಿದ್ದರೆ, ನೋಯಿಸಿದವರು ಜೀವನವಿಡಿ ನೆನಪಿನಲ್ಲಿರುತ್ತಾರೆ. ನಮಸ್ಕಾರಗಳು ಶುಭದಿನ ಎಂದು ಹೇಳಿದ್ದಾರೆ.

ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್‌ ನಾಮಪತ್ರ ಸಲ್ಲಿಕೆ ವೇಳೆ ಮಾತ್ರ ಇತ್ತೀಚೆಗೆ ವೀಣಾ ಕಾಶಪ್ಪನವರ್‌ ಭಾಗಿಯಾಗಿದ್ದರು. ಈ ವೇಳೆಯೂ ಕಾಂಗ್ರೆಸ್‌ನಲ್ಲಿ ಇನ್ನು ಅಸಮಾಧಾನ ತಣ್ಣಗಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿತ್ತು. ಇನ್ನು ನಾಮಪತ್ರ ಸಲ್ಲಿಕೆ ವೇಳೆ ಶಾಸಕ ವಿಜಯಾನಂದ ಕಾಶಪ್ಪನವರ್ ಗರಂ ಆಗಿದ್ದರು, ನಾಮಪತ್ರ ಸಲ್ಲಿಕೆಗೆ ನಮ್ಮನ್ನು ಕರೆದಿಲ್ಲ. ಯಾರಿಗೆ ಹೇಳಿದ್ದೀರಿ ನೀವು, ಯಾರನ್ನು ಕರೆಯುತ್ತೀರಿ. ಒಂದು ಫೋನ್ ಮಾಡೋಕೆ ಆಗಲ್ಲವೇ? ಹೇಳುವ ಸೌಜನ್ಯ ಇದೆ ಏನ್ರೀ ನಿಮಗೆ ಎಂದು ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿ | Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಬಾಗಲಕೋಟೆ ಕ್ಷೇತ್ರದಲ್ಲಿ ವೀಣಾ ಉಳಿದೆಲ್ಲ ಸ್ಥಳೀಯ ನಾಯಕರಿಗಿಂತ ಹೆಚ್ಚು ಪ್ರಭಾವಿ ಮತ್ತು ಜನಪ್ರಿಯರು. ಈ ಹಿಂದೆ ಟಿಕೆಟ್‌ ಕೈತ್ಪಪ್ಪಿದ್ದಕ್ಕೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದ ವೀಣಾ ಕಾಶಪ್ಪನವರ್‌, ಬಾಗಲಕೋಟೆಯಿಂದ ಬೇರೆಯವರಿಗೆ ಟಿಕೆಟ್ ಸಿಕ್ಕಿರುವುದು ಕೇವಲ ನಮ್ಮ ಸಮುದಾಯ ಮಾತ್ರವಲ್ಲ ಬೇರೆ ಸಮುದಾಯದ ಜನರಿಗೂ ಆಘಾತವನ್ನುಂಟು ಮಾಡಿದೆ, ಕಳೆದ 5 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ತನಗೆ ಹೇಗೆ ಟಿಕೆಟ್ ತಪ್ಪುವುದು ಸಾಧ್ಯ ಅಂತ ಬೇರೆ ಬೇರೆ ಜಿಲ್ಲೆಗಳ ಜನ ಸಹ ಫೋನ್ ಮಾಡಿ ಕೇಳುತ್ತಿದ್ದಾರೆ ಎಂದು ಭೇಸರ ಹೊರಹಾಕಿದ್ದರು.

ಇನ್ನು ಸಂಯುಕ್ತ ಪಾಟೀಲ್‌ ಪರ ಪ್ರಚಾರ ಮಾಡಲು ಹೋಗುವುದಿಲ್ಲ ಅಂತ ಹಠ ಹಿಡಿದು ಕೆಲದಿನಗಳ ಕಾಲ ಬೆಂಗಳೂರಲ್ಲೇ ವೀಣಾ ಕಾಶಪ್ಪನವರ್ ಉಳಿದುಬಿಟ್ಟಿದ್ದರು. ನಂತರ ಮುನಿಸು ಮರೆತು ಸಂಯಕ್ತ ನಾಮಪತ್ರ ಸಲ್ಲಿಸುವ ಮೊದಲು ನಡೆದ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಂಡು ಕಾರ್ಯಕರ್ತರಲ್ಲಿ ಹರ್ಷ ಮೂಡಿಸಿದ್ದರು. ಆದರೆ, ಇದೀಗ ಭಾವನಾತ್ಮಕ ಪೋಸ್ಟ್‌ನಿಂದ ಅವರ ಮುಂದಿನ ನಡೆ ಏನು ಎಂಬುವುದು ಕುತೂಹಲ ಮೂಡಿಸಿದೆ.

Continue Reading

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case Prajwal Congress supported MP Says Ashok
ಕ್ರೈಂ11 mins ago

‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ಅಶೋಕ್ ಉಲ್ಟಾ ಹೊಡೆದಿದ್ದೇಕೆ?

shyam rangeela
ದೇಶ13 mins ago

Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Prajwal Revanna Case
ಪ್ರಮುಖ ಸುದ್ದಿ13 mins ago

Prajwal Revanna Case: ಪ್ರಜ್ವಲ್ ಗಂಡಾಂತರ; ಜ್ಯೋತಿಷಿ ಮೊರೆ ಹೋದ ದೇವೇಗೌಡ, ರೇವಣ್ಣ!

Chaitra Achar
ಫ್ಯಾಷನ್40 mins ago

Chaitra Achar: ನೋಡುಗರ ಹುಬ್ಬೇರಿಸಿದ ನಟಿ ಚೈತ್ರಾ ಆಚಾರ್‌ ಪಾರದರ್ಶಕ ನಿಟ್‌ವೇರ್

Veena kashappanavar
ಕರ್ನಾಟಕ1 hour ago

Veena Kashappanavar: ರಾಜಕೀಯದಿಂದ ದೂರ ಸರಿದ್ರಾ ವೀಣಾ ಕಾಶಪ್ಪನವರ್‌? ಭಾವನಾತ್ಮಕ ಪೋಸ್ಟ್‌ ಹಾಕಿದ ಕೈ ನಾಯಕಿ!

Mayank Yadav
ಕ್ರೀಡೆ1 hour ago

Mayank Yadav: ಗಾಯಾಳು ಮಾಯಾಂಕ್‌ ಯಾದವ್‌ ಐಪಿಎಲ್​ನಿಂದ ಔಟ್​?

Bomb threat
ದೇಶ2 hours ago

Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Saree Fashion
ಫ್ಯಾಷನ್2 hours ago

Saree Fashion: ಸೀರೆಯ ಹೊಸ ಟ್ರೆಂಡ್‌ ಬಗ್ಗೆ ರ‍್ಯಾಪರ್‌ ಇಶಾನಿಯ ವ್ಯಾಖ್ಯಾನ ಇದು!

karnataka weather Forecast
ಮಳೆ2 hours ago

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Lottery
ವೈರಲ್ ನ್ಯೂಸ್2 hours ago

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌