ವಕ್ಫ್‌ ಮಂಡಳಿ ಉಪಾಧ್ಯಕ್ಷತೆ| ಪರೇಶ್‌ ಮೇಸ್ತಾ ಪ್ರಕರಣದ ಪ್ರಧಾನ ಆರೋಪಿ ನೇಮಕಕ್ಕೆ ಸರಕಾರ ತಡೆ - Vistara News

ಉತ್ತರ ಕನ್ನಡ

ವಕ್ಫ್‌ ಮಂಡಳಿ ಉಪಾಧ್ಯಕ್ಷತೆ| ಪರೇಶ್‌ ಮೇಸ್ತಾ ಪ್ರಕರಣದ ಪ್ರಧಾನ ಆರೋಪಿ ನೇಮಕಕ್ಕೆ ಸರಕಾರ ತಡೆ

ಪರೇಶ್‌ ಮೇಸ್ತಾ ಕೊಲೆ ಪ್ರಕರಣದ ಪ್ರಧಾನ ಆರೋಪಿಗೆ ವಕ್ಫ್‌ ಮಂಡಳಿ ಉಪಾಧ್ಯಕ್ಷತೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ರಾಜ್ಯ ಸರಕಾರ ಇದೀಗ ತನ್ನ ಆದೇಶಕ್ಕೇ ತಡೆ ನೀಡಿದೆ.

VISTARANEWS.COM


on

Paresh mesta- annigeri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಕ್ಷದೊಳಗೆ ಕಾಣಿಸಿಕೊಂಡ ಆಕ್ರೋಶ, ಸಾರ್ವಜನಿಕವಾಗಿ ಕೇಳಿಬಂದ ಗೇಲಿಯನ್ನು ಗಮನಿಸಿದ ಸರಕಾರ ಉತ್ತರ ಕನ್ನಡ ಜಿಲ್ಲಾ ವಕ್ಫ್‌ ಮಂಡಳಿ ಉಪಾಧ್ಯಕ್ಷ ಸ್ಥಾನದ ನೇಮಕಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ. ಜಿಲ್ಲಾ ವಕ್ಫ್‌ ಮಂಡಳಿ ಉಪಾಧ್ಯಕ್ಷರನ್ನಾಗಿ ಜಮಾಲ್ ಅಜಾದ್ ಅಣ್ಣಿಗೇರಿ ಅವರನ್ನು ನೇಮಿಸಿ ಸರಕಾರ ಗುರುವಾರ ಆದೇಶ ಹೊರಡಿಸಿತ್ತು. ಅಜಾದ್‌ ಅಣ್ಣಿಗೇರಿ ೨೦೧೭ರ ಡಿಸೆಂಬರ್‌ನಲ್ಲಿ ಹೊನ್ನಾವರದಲ್ಲಿ ನಡೆದ ಪರೇಶ್‌ ಮೇಸ್ತಾ ಎಂಬ ಹಿಂದು ಯುವಕನ ಕೊಲೆ ಪ್ರಕರಣದಲ್ಲಿ ಪ್ರಧಾನ ಆರೋಪಿಯಾಗಿದ್ದಾರೆ. ಅವರಿಗೆ ಅಧಿಕಾರ ನೀಡಿದ್ದು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿತ್ತು. ಈ ಆಕ್ರೋಶದ ಬಿಸಿಗೆ ಕರಗಿದ ಸರಕಾರ ನೇಮಕಾತಿ ಆದೇಶಕ್ಕೆ ತಡೆ ನೀಡಿದೆ.

ವಕ್ಫ್‌ ಮಂಡಳಿಯ ತಡೆ ಆದೇಶ

ರಾಜ್ಯ ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಅವರು ನೇಮಕಾತಿಗೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಸರಕಾರ ದೊಡ್ಡದೊಂದು ಮುಖಭಂಗದ ಬಳಿಕವೂ ಸಣ್ಣ ಮಟ್ಟಿಗೆ ಮುಖ ಉಳಿಸಿಕೊಂಡಂತಾಗಿದೆ.

2017ರ ಡಿಸೆಂಬರ್ ತಿಂಗಳಿನಲ್ಲಿ ಹೊನ್ನಾವರದಲ್ಲಿ ನಡೆದ ಒಂದು ಗಲಾಟೆಯ ವೇಳೆ ಪರೇಶ್‌ ಮೇಸ್ತಾ ಎಂಬ ಯುವಕ ನಾಪತ್ತೆಯಾಗಿ, ಎರಡು ದಿನಗಳ ನಂತರ ಶವವಾಗಿ ಪಟ್ಟಣದ ಕೆರೆಯೊಂದರಲ್ಲಿ ಪತ್ತೆಯಾಗಿದ್ದ. ಮೇಸ್ತಾನನ್ನು ಕೋಮು ಗಲಭೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಆಪಾದಿಸಿ ಬಿಜೆಪಿಯು ರಾಜ್ಯಾದ್ಯಂತ ಯುವಕನ ಸಾವಿಗೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಸಿತ್ತು. ಆಗ ಬಿಜೆಪಿ ಅಧ್ಯಕ್ಷರಾಗಿದ್ದ ಅಮಿತ್‌ ಶಾ ಅವರೇ ಹೊನ್ನಾವರಕ್ಕೆ ಬಂದು ಪರೇಶ್‌ ಮೇಸ್ತಾ ಮನೆಗೆ ಭೇಟಿ ನೀಡಿದ್ದರು. ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಈಗ ಪರೇಶ್‌ ಕೊಲೆ ಆರೋಪಿಗೆ ಬಿಜೆಪಿ ಸರ್ಕಾರದಿಂದಲೇ ವಕ್ಫ್‌ ಮಂಡಳಿಯಲ್ಲಿ ಸ್ಥಾನಮಾನ ನೀಡಿ ಗೌರವಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು.

ಬದಲಾವಣೆಗೆ ಎಲ್ಲ ಕಡೆಯಿಂದ ಒತ್ತಡ
ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯರ ಪಟ್ಟಿಯಲ್ಲಿ ಬೇರೆ ಪಕ್ಷದ ಅಜಾದ್‌ ಅಣ್ಣಿಗೇರಿ ಹಾಗೂ ಕೆ.ಎಚ್‌.ಕರೀಂ ಹಾಜಿ ಅವರನ್ನು ನೇಮಕ ಮಾಡಿದ್ದನ್ನು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮಹಮ್ಮದ್ ಅನೀಷ್ ತಹಸೀಲ್ದಾರ್ ಅವರೇ ಆಕ್ಷೇಪಿಸಿದ್ದರು. ಜತೆಗೆ ಬಿಜೆಪಿಯಲ್ಲಿ ಆಂತರಿಕವಾಗಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಕಳವಳಗೊಂಡ ಸರಕಾರ ಇದೀಗ ನೇಮಕಾತಿಯನ್ನು ತಡೆ ಹಿಡಿದಿದೆ.

ಇದನ್ನೂ ಓದಿ ಪರೇಶ್‌ ಮೇಸ್ತಾ ಕೊಲೆ ಪ್ರಧಾನ ಆರೋಪಿಗೆ ವಕ್ಫ್‌ ಬೋರ್ಡ್‌ ಉಪಾಧ್ಯಕ್ಷ ಸ್ಥಾನ: ಬಿಜೆಪಿ ಎಡವಟ್ಟಿಗೆ ಎಲ್ಲೆಡೆ ತರಾಟೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Karnataka Rain: ಸೋಮವಾರ ರಾತ್ರಿ ಸುರಿದ ಮಳೆಗೆ (Heavy Rain) ಜನರು ಕಂಗಲಾಗಿದ್ದಾರೆ. ಹಲವೆಡೆ ಭಾರಿ ಮಳೆಗೆ (Karnataka Weather) ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿದ್ದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಜಾಗರಣೆ ಮಾಡುವಂತಾಯಿತು.

VISTARANEWS.COM


on

By

karnataka Rain Effected
Koo

ಬೆಂಗಗಳೂರು/ಬೆಳಗಾವಿ: ತಡರಾತ್ರಿ ಸುರಿದ ಮಳೆಯು (Karnataka Rain) ಅವಾಂತರವನ್ನೇ ಸೃಷ್ಟಿಸಿ ಮಾಡಿದೆ. ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಅಬ್ಬರಿಸಿದ ಮಳೆಗೆ (Rain News) ಮರಗಳು ಧರೆಗುರುಳಿದ್ದವು. ನೃಪತುಂಗದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎದುರಿಗೆ ಮರದ ಕೊಂಬೆ ನೆಲಕ್ಕೆ ಉರುಳಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇತ್ತ ಬುಕ್‌ಫೀಲ್ಡ್‌ನಲ್ಲಿ ಮರ ಬಿದ್ದು ಕಾರೊಂದು ಜಖಂಗೊಂಡಿತ್ತು. ಚಾಮರಾಜಪೇಟೆಯ ಗುಡ್ಡದಹಳ್ಳಿಯಲ್ಲಿ ಮನೆಗಳಿಗೆ ಕೆಸರುಮಯ ನೀರು ನುಗ್ಗಿದ್ದರಿಂದ ಹೊರಹಾಕಲು ಜನರು ತೊಂದರೆ ಅನುಭವಿಸಿದರು.

ಮೈಸೂರಿನಲ್ಲಿ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಬಾರಿ ಬಿರುಗಾಳಿ ಸಹಿತ ಮಳೆಗೆ ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಮನೆ ಕುಸಿದು ಬಿದ್ದಿದ್ದು, ವಾಸ ಮಾಡಲು ಮನೆ ಇಲ್ಲದೆ ಭಾಗ್ಯಮ್ಮ ಕಣ್ಣೀರು ಹಾಕಿದರು. ಮನೆಯಲ್ಲಿ ಸುಮಾರು 6 ತಿಂಗಳು ಸಣ್ಣ ಮಗುವಿದ್ದು ಮಧ್ಯರಾತ್ರಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಬಿದ್ದು ಕುಟುಂಬವು ಕಂಗಲಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನಾಶವಾಗಿವೆ. ನಮಗೆ ಆದಷ್ಟು ಬೇಗ ಸರ್ಕಾರ ಪರಿಹಾರ ಮಾಡಿಕೊಡಬೇಕು ಎಂದು ಭಾಗ್ಯಮ್ಮ ಮನವಿ ಮಾಡಿದರು.

ವಿಜಯನಗರದಲ್ಲಿ ಮಳೆಗೆ ಬೆಳೆ ಹಾನಿ

ಕಳೆದ ರಾತ್ರಿ ಮಳೆ ಜೆತಗೆ ಬಿರುಗಾಳಿ ಬೀಸಿದ ಹಿನ್ನೆಲೆಯಲ್ಲಿ ಬಾಳೆ, ಭತ್ತ, ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ವಿಜಯನಗರದ ಹುರುಳಿಹಾಳ ಗ್ರಾಮದಲ್ಲಿ ಗಾಳಿ ಪ್ರಮಾಣ ಹೆಚ್ಚಿದರಿಂದ ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ಕಾನಾಹೊಸಹಳ್ಳಿ ಹೋಬಳಿಯ ಎಕ್ಕೆಗೊಂದಿ ಗ್ರಾಮದಲ್ಲಿ ರೇಷ್ಮೆ ಸಾಗಾಣೆ ಮನೆಗೆ ಹಾನಿಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಗುಡುಗು, ಮಿಂಚು ಸಿಡಿಲಿನ ಆರ್ಭಟ ಮಧ್ಯೆ ಸಾಧಾರಣ ಮಳೆ ವರದಿಯಾಗಿದೆ.

ಧರೆಗುರುಳಿದ ಮರಗಳು

ಚಿಕ್ಕೋಡಿ ಗಡಿ ತಾಲೂಕು ನಿಪ್ಪಾಣಿಯಲ್ಲಿ ರಣ ಗಾಳಿ-ಮಳೆಗೆ ಸಿಕ್ಕಿ ನಲುಗಿದೆ. ನಿಪ್ಪಾಣಿ ನಗರದ ವಿವಿಧೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನಿಪ್ಪಾಣಿಯ ಭೀಮನಗರ,ವಿದ್ಯಾನಗರ,ಅಂಬೇಡ್ಕರ್ ನಗರದ ಹತ್ತಿರ ಮರಗಳು ಬಿದ್ದಿವೆ. ಮುನ್ಸಿಪಲ್ ಹೈಸ್ಕೂಲ್,ಅಬಕಾರಿ ಫೀಸ್ ಸೇರಿದಂತೆ ವಿವಿಧೆಡೆ ಹಾನಿಯಾಗಿದೆ. ಭಾರಿ ಗಾಳಿಗೆ ವಿದ್ಯುತ್ ಕಂಬಗಳು ವಾಲಿದರೆ, ಮನೆಯ ಚಾವಣೆ ಹಾರಿ ಹೋಗಿವೆ. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ವಾಹನ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಹಾನಿಯಾದ ಪ್ರದೇಶಗಳಿಗೆ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಿಪ್ಪಾಣಿ ನಗರ ತತ್ತರಿಸಿದೆ. ಭಾರಿ ಮಳೆಗೆ 20 ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದೆ. ಪತ್ರಾಸ್ ಶೇಡ್ ಹಾಗೂ ಹಂಚಿನ ಮನೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಭಾರಿ ಮಳೆ ಗಾಳಿಗೆ 30 ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಮರಗಳ ಜತೆಗೆ ನಗರದಲ್ಲಿ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿವೆ. ಮರಗಳು ಬಿದ್ದು 10 ಕ್ಕೂ ಹೆಚ್ಚು ವಾಹನಗಳು ಸಹ ಜಖಂಗೊಂಡಿವೆ. ಕಳೆದ ರಾತ್ರಿಯಿಂದ ನಿಪ್ಪಾಣಿ ನಗರದಲ್ಲಿ ವಿದ್ಯುತ್ ಕಟ್ ಆಗಿದೆ. ನಿಪ್ಪಾಣಿ ನಗರಸಭೆಯಿಂದ ಮರಗಳ ತೆರುವು ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿಪ್ಪಾಣಿ ನಗರಸಭೆ ಅಧಿಕಾರಿಗಳು ಹಾನಿಯಾದ ಮನೆಗಳ ಸರ್ವೆಗೆ ಮುಂದಾಗಿದ್ದಾರೆ. ನಿಪ್ಪಾಣಿ ಪಟ್ಟಣದ ಅಂಬೇಡ್ಕರ್ ಗಲ್ಲಿಗೆ ಭೀಮ ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಹಾನಿಯಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

ಆನೇಕಲ್‌ನಲ್ಲಿ ಮನೆಗೆ ನುಗ್ಗಿದ ಚರಂಡಿ ನೀರು

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಮನೆಗಳಿಗೆ ಹಾಗೂ ಬಡಾವಣೆಗಳಿಗೆ ಕೊಳಚೆ ನೀರು ನುಗ್ಗಿದೆ. ಚರಂಡಿ-ರಾಜಕಾಲುವೆ ವ್ಯವಸ್ಥೆ ಸರಿ ಇಲ್ಲದೆ ಮನೆಗಳಿಗೆ ನೀರು ನುಗ್ಗಿದೆ. ಇಡೀ ರಾತ್ರಿ ನೀರಿನಲ್ಲಿ ನಿವಾಸಿಗಳು ಕಾಲ ಕಳೆದಿದ್ದಾರೆ. ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಮನೆಯೊಳಗೆ ನುಗ್ಗಿದ ಕೊಳಚೆ ನೀರನ್ನು ಸ್ವಚ್ಛ ಮಾಡುವುದರಲ್ಲಿ ದಿನದೂಡುತ್ತಿದ್ದಾರೆ.

ವಿಜಯನಗರದಲ್ಲಿ ವರುಣನ ಕೃಪೆಗಾಗಿ ಜಪ – ತಪ

ಜಪ – ತಪ ಮಾಡಿದ ಕೇವಲ ಎಂಟು ದಿನದಲ್ಲಿ ವರುಣನ ಆಗಮನವಾಗಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ವಿಜಯನಗರದ ಹೊಸಪೇಟೆ ತಾಲೂಕಿನಲ್ಲಿ ಮಳೆ ಸುರಿದಿದೆ. ಭೀಕರ ಬರಗಾಲ, ಬಿಸಿಲಿನ ಧಗೆಯಿಂದ ಜನರು ಆಂಜನೇಯನ ಮೊರೆ ಹೋಗಿದ್ದರು. ಮಳೆಗಾಗಿ ನೂರಾರು ವರ್ಷ ಹಳೆಯದಾದ ಐತಿಹಾಸಿಕ ಹಿನ್ನೆಲೆವೊಳ್ಳ ಆಂಜನೇಯನಿಗೆ ಮಳೆಗಾಗಿ ನಿತ್ಯ ಪೂಜೆ, ಭಜನೆ ಮಾಡುತ್ತಿದ್ದರು. ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿರೋ ಐತಿಹಾಸಿಕ ಆಂಜನೇಯ ದೇಗುಲವನ್ನು ವಿಜಯನಗರ ಅರಸರ ಕಾಲದಿಂದಲೂ ವಿಶೇಷ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತ ನೀರು

ಧಾರಾಕಾರ ಮಳೆಗೆ ಹಳೇ ಮೈ-ಬೆಂ ಹೆದ್ದಾರಿಯಲ್ಲಿ ಜಲಾವೃತಗೊಂಡಿತ್ತು. ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಹೆದ್ದಾರಿಯಲ್ಲಿ ತೆರಳಲಾಗದೆ ಬೈಕ್ ಸವಾರರು ಬದಲಿ ರಸ್ತೆಯಲ್ಲಿ ಸಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather Forecast: ರಾಜ್ಯದ ವಿವಿಧೆಡೆ ಮಳೆ ಅಬ್ಬರ (Heavy Rain)ಮುಂದುವರಿದಿದೆ. ಮೇ 14ರಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಹವಾಮಾನ ಇಲಾಖೆಯು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Road Accident: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಸೋಮವಾರ ರಾತ್ರಿ ಜರುಗಿದೆ. ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಇಬ್ಬರು‌ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Road Accident Head on collision between bikes One person died on the spot
ಮೃತ ಯುವಕ ಅರವಿಂದ ಬೆಲ್ದಾರ.
Koo

ಮುಂಡಗೋಡ: ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ (Road Accident) ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಸೋಮವಾರ ರಾತ್ರಿ ಜರುಗಿದೆ.

ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅರವಿಂದ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು‌ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

ಗಾಯಗೊಂಡವರನ್ನು ತಾಲೂಕಿನ ಕೊಪ್ಪ ಗ್ರಾಮದವರು ಎಂದು ತಿಳಿದುಬಂದಿದೆ. ತಕ್ಷಣವೇ ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಂಡಗೋಡ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮುಂಡಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Road Accident: ಬೊಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದ ಮಡ್ಡಿ ಬಳಿ ಬೊಲೇರೋ ಹಾಗೂ ದ್ವಿ ಚಕ್ರ ವಾಹನ‌ಗಳ ನಡುವೆ ರಸ್ತೆ ಅಪಘಾತ (Road Accident) ಸಂಭವಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುರುಸಿದ್ದ (42), ಮಧುಮತಿ (34) ಮೃತ ದುರ್ದೈವಿಗಳು. ಇವರು ಮಾದನಹಿಪ್ಪರಗಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದಿಂದ ಮಹಾರಾಷ್ಟ್ರದ ಮೈಂದರಿಗಿಗೆ ದಂಪತಿ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬುಲೇರೋ ನಿಯಂತ್ರಣಕ್ಕೆ ಸಿಗದೆ ಪಕ್ಕದ ಚರಂಡಿಗೆ ಹೋಗಿ ಬಿದ್ದಿದೆ. ಸ್ಥಳಕ್ಕೆ ಮಾದನಹಿಪ್ಪರಗಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Uttara Kannada News: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ (ಕೆ.ಡಿ.ಸಿ.ಸಿ. ಬ್ಯಾಂಕ್‌) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 41 ಕೋಟಿ ರೂಪಾಯಿ ಜಮಾವಾಗಿದೆ. ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ ಒಟ್ಟು 35 ಕೋಟಿ ರೂಪಾಯಿ ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

VISTARANEWS.COM


on

35 crore crop damage insurance deposit for farmers of Yallapur constituency says MLA Shivaram Hebbar
Koo

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ (Uttara Kannada News) ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ (ಕೆ.ಡಿ.ಸಿ.ಸಿ. ಬ್ಯಾಂಕ್‌) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 35 ಕೋಟಿ ರೂಪಾಯಿ ಜಮೆಯಾಗಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಭತ್ತ, ಗೋವಿನ ಜೋಳದ ಬೆಳೆಗೆ ಹಾನಿಯಾಗಿ ರೈತ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈಗ ಬೆಳೆ ವಿಮೆಯ ಬಿಡುಗಡೆಯಿಂದಾಗಿ ಭತ್ತ, ಗೋವಿನ ಜೋಳ ಬೆಳೆದು ಜೀವನ ಜೀವನ ಸಾಗಿಸುತ್ತಿದ್ದ ಹಲವಾರು ರೈತರಿಗೆ ಆರ್ಥಿಕ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ. ಹೀಗೆ ಒಟ್ಟು 35 ಕೋಟಿ ರೂಪಾಯಿ ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ವಿಮೆ ಪರಿಹಾರವನ್ನು ನೀಡಲು ಸಹಕರಿಸಿದ ಕೃಷಿ ಇಲಾಖೆಯ ಅಧಿಕಾರಿಗೆ, ವಿಮೆ ಕಂಪನಿಯ ಸಿಬ್ಬಂದಿಗಳಿಗೆ ಹಾಗೂ ಸರ್ಕಾರಕ್ಕೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ: Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

ಸರ್ಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನವನ್ನು ನಡೆಸಿ ಈ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಹಾರವನ್ನು ಒದಗಿಲಾಗಿದೆ. ವಿಮೆ ಕಂಪನಿಯ ಮಾನದಂಡದ ಅನ್ವಯವಾಗಿ ಉತ್ತರ ಕನ್ನಡ ಜಿಲ್ಲೆಯ ಭತ್ತ ಹಾಗೂ ಗೋವಿನ ಜೋಳವನ್ನು ಬೆಳೆದ ರೈತರಿಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ (ಕೆ.ಡಿ.ಸಿ.ಸಿ ಬ್ಯಾಂಕ್‌) ನ ಮೂಲಕವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Image-Fantastic Dragon Jewellery!
ಫ್ಯಾಷನ್8 mins ago

Fashion Trend: ಜೆನ್‌ ಜಿ ಹುಡುಗ-ಹುಡುಗಿಯರ ಆವರಿಸಿದ ಚಿತ್ರ-ವಿಚಿತ್ರ ಡ್ರಾಗನ್‌ ಜ್ಯುವೆಲರಿಗಳು!

Silicon City Hospital doctors successful surgery on girl suffering from Arterio Venus malpermation
ಬೆಂಗಳೂರು12 mins ago

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

CM Siddaramaiah says Our government is stable for 5 years BJP will disintegrate
Lok Sabha Election 202418 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

Team India New Head Coach
ಕ್ರೀಡೆ21 mins ago

Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

Money Guide
ಮನಿ-ಗೈಡ್32 mins ago

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Hebbal Flyover
ಪ್ರಮುಖ ಸುದ್ದಿ42 mins ago

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

DK Shivakumar hits back at HD Kumaraswamy
ರಾಜಕೀಯ1 hour ago

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

theft case
ಬೆಂಗಳೂರು1 hour ago

Theft Case : ಪಕ್ಕದ ಮನೆಗೆ ಕನ್ನ ಹಾಕಿದ ಚೋರ್‌ ದಂಪತಿ; ಕೆಲಸ ಕೊಟ್ಟ ಮಾಲೀಕನನ್ನೇ ದೋಚಿದ

America
ವಿದೇಶ1 hour ago

America: ಶ್ವೇತಭವನದಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ..ವಿಡಿಯೋ ನೋಡಿ

KL Rahul
ಕ್ರೀಡೆ1 hour ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 202419 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20244 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ4 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು5 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ12 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ22 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ22 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ23 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ23 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ24 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌