Site icon Vistara News

Karnataka Politics: ಪ್ರತಾಪ್‌ ಸಿಂಹ- ಪ್ರದೀಪ್‌ ಈಶ್ವರ್‌ ನಡುವೆ ಕೊಚ್ಚೆ-ಹಂದಿ ಗಲಾಟೆ!

Pratap Simha And Pradeep Eshwar

ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಮತ್ತು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ (Karnataka Politics) ನಡುವೆ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುವ ಪ್ರತಾಪ್‌ ಸಿಂಹ ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಪ್ರದೀಪ್‌ ಈಶ್ವರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಪ್ರತಾಪ್‌ ಸಿಂಹ, ಕೊಚ್ಚೆಗೆ ಕಲ್ಲು ಹಾಕುವ ಕೆಲಸ ಮಾಡಲ್ಲ ಎಂದಿದ್ದರು. ಇದೀಗ ಸಂಸದರಿಗೆ ತಿರುಗೇಟು ನೀಡಿರುವ ಪ್ರದೀಪ್‌ ಈಶ್ವರ್‌, ಕೊಚ್ಚೆಗೆ ಕೈ ಹಾಕೋದು ಹಂದಿಗಳ ಕೆಲಸ ಅಲ್ವಾ? ನೀವ್ಯಾಕೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧ ಇತ್ತೀಚೆಗೆ ಕಿಡಿಕಾರಿದ್ದ ಶಾಸಕ ಪ್ರದೀಪ್ ಈಶ್ಚರ್, ಆತನಷ್ಟು ಅಯೋಗ್ಯ, ಮುಠ್ಠಾಳ ಇನ್ನೊಬ್ಬರಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ ಸಿದ್ಧರಾಮಯ್ಯರ ಬಗ್ಗೆ ಮಾತನಾಡುತ್ತಾರೆ. ಪ್ರತಾಪ್ ಸಿಂಹ ಅವರೇ ಬಾಯ್ ಮುಚ್ಚಿಕೊಂಡು ಇರಬೇಕು, ಬಾಯಿ ತೆವಲು ಕಡಿಮೆ ಮಾಡಬೇಕು ಎಂದಿದ್ದರು.

ಲೋಕಸಭೆ ಪ್ರವೇಶಕ್ಕೆ ಪಾಸ್ ಕೊಟ್ಟ ಪ್ರತಾಪ್ ಸಿಂಹ ದೇಶದ್ರೋಹಿ ಅಲ್ವಾ ಎಂದು ಪ್ರಶ್ನಿಸಿದ್ದ ಶಾಸಕ ಪ್ರದೀಪ್ ಈಶ್ವರ್, ಒಂದು ವೇಳೆ ನಾವು ಪಾಸ್ ಕೊಟ್ಟಿದ್ದಿದ್ದರೆ ಏನು ಪಟ್ಟ ಕಟ್ಟುತ್ತಿದ್ದಿರಿ? ಪ್ರತಾಪ್ ಸಿಂಹ ಕಲ್ಲು ಹಾಕಿದರೆ, ನಾವು ನಾಲ್ಕು ಕಲ್ಲು ಹಾಕ್ತೇವೆ. ಸಿಎಂ ಸಿದ್ಧರಾಮಯ್ಯನವರ ಬಗ್ಗೆ ಮಾತನಾಡಬೇಕಾದರೆ ನಾಲಿಗೆ ಬಿಗಿ‌ಹಿಡಿದು ಮಾತಾಡಬೇಕು. ಶ್ರೀರಾಮಚಂದ್ರ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ. ನಾವೂ ಹಿಂದುಗಳೇ, ನಮಗೂ ಶ್ರೀರಾಮಚಂದ್ರ ಆರಾಧ್ಯ ದೇವರೇ, ಇಲ್ಲೂ ರಾಮನ ಭಕ್ತರಿದ್ದಾರೆ ಎಂದಿದ್ದರು.

ಪ್ರದೀಪ್‌ ಈಶ್ವರ್‌ ಮಾತುಗಳಿಗೆ ಶನಿವಾರ ಪ್ರತಿಕ್ರಿಯಿಸಿದ್ದ ಸಂಸದ ಪ್ರತಾಪ್‌ ಸಿಹ ಅವರು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ. ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ. ನಾನು ತಿಳಿಗೇಡಿಯಲ್ಲ. ನಾನು ಆ ಕೊಚ್ಚೆಗೆ ಕಲ್ಲು ಹಾಕಲ್ಲ ಎಂದು ಟಾಂಗ್‌ ನೀಡಿದ್ದರು.

ಇದೀಗ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಪ್ರದೀಪ್‌ ಈಶ್ವರ್‌, ಪ್ರತಾಪ್ ಸಿಂಹ ಅವರೇ, ಕೊಚ್ಚೆಗೆ ಕೈ ಹಾಕೋದು ಹಂದಿಗಳ ಕೆಲಸ ಅಲ್ವಾ? ಕೊಚ್ಚೆಗೆ ಕೈ ಹಾಕೋ ಕೆಲಸವನ್ನು ನೀವ್ಯಾಕೆ ಮಾಡುತ್ತಿದ್ದೀರಿ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ | Anantkumar Hegde: ಅನಂತ ಕುಮಾರ್ ಹೆಗಡೆ ಮೈಂಡ್ ಯುವರ್ ಟಂಗ್; ಗುಡುಗಿದ ಪ್ರದೀಪ್‌ ಈಶ್ವರ್!

ನಮ್ಮ ಸರ್ಕಾರದಲ್ಲಿ ಮಾಡಿದ ಕೆಲಸಕ್ಕೆ ಇವರು ಹೆಸರು ಪಡೆದುಕೊಳ್ಳುತ್ತಾರೆ. ಪ್ರತಾಪ್ ಸಿಂಹಗೆ ನಾನು ಚಾಲೆಂಜ್ ಮಾಡುವೆ. ಈ ಸಲ ಚುನಾವಣೆಯಲ್ಲಿ ಅವರನ್ನು ಸೋಲಿಸುತ್ತಾರೆ. ಆಗ ಹೋಗಿ ಕಾವೇರಿ ನೀರಲ್ಲಿ ಪಾಪ ತೊಳೆದುಕೊಳ್ಳಲಿ. ಸಿದ್ದರಾಮಯ್ಯ ನಮ್ಮ ಭವಿಷ್ಯ, ನಮ್ಮಂತ ಅಹಿಂದ ಹುಡುಗರಿಗೆ ನೋವಾದರೆ, ನಾವು ಸುಮ್ಮನೆ ಇರಲ್ಲ. ಪ್ರತಾಪ್ ಸಿಂಹ ಅವರೇ ಮೈಂಡ್ ಯುವರ್ ಟಂಗ್, ಹೀಗೆಯೇ ಮಾತು ಮುಂದುವರಿದರೆ ನಾವಂತೂ ಸುಮ್ನೆ ಇರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Exit mobile version