Site icon Vistara News

Water Crisis: ಗಂಡಸುತನ ಇಲ್ಲದ, ನಪುಂಸಕ ಕಾಂಗ್ರೆಸ್ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ವಾಗ್ದಾಳಿ

MLA MT Krishnappa

ತುಮಕೂರು: ತಮಿಳುನಾಡಿಗೆ ನೀರು ಕೊಡುವುದಕ್ಕೆ ಆಗುತ್ತೆ, ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಾರೆ. ಆದರೆ, ನಮಗೆ ಕುಡಿಯಲು ನೀರು (Water Crisis) ಕೊಡುತ್ತಿಲ್ಲ, ಗಂಡಸುತನ ಇಲ್ಲದ ಸರ್ಕಾರ ಇದು, ಕಾಂಗ್ರೆಸ್ಸಿಗರು ನಿಜವಾದ ನಪುಂಸಕರು ಎಂದು ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆಕ್ರೋಶ ಹೊರಹಾಕಿದ್ದಾರೆ.

ಜಿಲ್ಲಾ ಜೆಡಿಎಸ್ ಕಚೇರಿ ಆವರಣದಲ್ಲಿ ನಡೆದ ಮೈತ್ರಿ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಟವೆಲನ್ನು ಗದೆ ಮಾಡಿಕೊಂಡಿದ್ದಾರೆ. ಗದೆಯಂತೆ ಟವೆಲನ್ನು ಎತ್ತಿ ಎತ್ತಿ ಹೆಗಲ ಮೇಲೆ ಇಡುತ್ತಾರೆ. ಬರ ಪರಿಹಾರ ಕೇಳಲು ಕೇಂದ್ರಕ್ಕೆ ಹೋದಾಗ ಸಿದ್ದರಾಮಯ್ಯ ಗದೆ ಹಿಡಿದುಕೊಂಡು ಹೋಗುತ್ತಾರೆ. ಇವರ ಗದೆಗೆ ಯಾರೂ ಹೆದರೋದಿಲ್ಲ. ತಮಿಳುನಾಡಿನಲ್ಲಿ ಯಾವತ್ತೂ ವಿರೋಧ ಪಕ್ಷ ಅಧಿಕಾರದಲ್ಲಿ ಇದೆ. ಅಲ್ಲಿಯ ಸರ್ಕಾರ ಕೇಂದ್ರದಿಂದ ಅನುದಾನ, ಪರಿಹಾರ ಪಡೆಯುವಲ್ಲಿ ಯಶಸ್ವಿಯಾಗುತ್ತದೆ. ಆದರೆ ಸಿದ್ದರಾಮಯ್ಯ ಸರ್ಕಾರಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ | Lok Sabha Election 2024: ಡಿ.ಕೆ. ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು (Congress Karnataka Leaders) ಸಂಸ್ಕಾರವಿಲ್ಲದೆ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತವಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಬ್ರ್ಯಾಂಡ್‌ ಬೆಂಗಳೂರು (Brand Bengaluru) ಮಾಡಲು ಈ ಸರ್ಕಾರ ಹೊರಟಿದ್ದರೆ, ಜನರು ಬೈ ಬೈ ಬೆಂಗಳೂರು (Bye Bye Bengaluru) ಎಂದು ಊರುಗಳಿಗೆ ಹೋಗುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.‌ ಅಶೋಕ್, ಕಾಂಗ್ರೆಸ್‌ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ ರೀತಿಯ ಮಾತುಗಳು ಬರುತ್ತಿವೆ. ರಾಹುಲ್‌ ಗಾಂಧಿ ಈಗಾಗಲೇ ಮೋದಿ ಸಮುದಾಯದ ಬಗ್ಗೆ ಮಾತನಾಡಿ ಜೈಲಿಗೆ ಹೋಗುವ ಸ್ಥಿತಿಗೆ ಬಂದಿದ್ದಾರೆ. ಹಿರಿಯಕ್ಕನ ಚಾಳಿ ಮನೆಮಂದಿಗೆ ಎನ್ನುವಂತೆ ಆ ಚಾಳಿ ಎಲ್ಲ ಕಾಂಗ್ರೆಸ್‌ ನಾಯಕರಿಗೆ ಬಂದಿದೆ. ಚಾಯ್‌ವಾಲ, ಚೌಕಿದಾರ್‌ ಚೋರ್‌, ಮೋದಿಗೆ ಪರಿವಾರ ಇಲ್ಲ ಹೀಗೆ ಅನೇಕ ಟೀಕೆಗಳನ್ನು ಮಾಡಿದಾಗ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಸಚಿವ ಶಿವರಾಜ ತಂಗಡಗಿ ಹಾಗೂ ಇತರೆ ಮುಖಂಡರು ಸೋಲಿನ ಹತಾಶೆಯಿಂದ ಈ ರೀತಿ ಮಾತಾಡುತ್ತಿದ್ದಾರೆ ಎಂದರು.‌

ಇದನ್ನೂ ಓದಿ: Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

ರಾಜ್ಯದಲ್ಲಿದೆ ಸಂಸ್ಕಾರ ಇಲ್ಲದ ಸರ್ಕಾರ

ಸಚಿವ ಶಿವರಾಜ ತಂಗಡಗಿ ಬಿಜೆಪಿ ಸಚಿವರಾಗಿದ್ದಾಗ ಸೋನಿಯಾ ಗಾಂಧಿಗೆ ಹೊಡೆಯಿರಿ ಎನ್ನುತ್ತಿದ್ದು, ಈಗ ಮೋದಿಗೆ ಹೇಳುತ್ತಿದ್ದಾರೆ. ಮುಂದೆ ಜನರೇ ಅವರಿಗೆ ಹೊಡೆಯಲಿದ್ದಾರೆ. ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯಬೇಕಾದ ಇವರು ಬಾಯಲ್ಲಿ ಸಂಸ್ಕೃತಿ ತೋರಿಸುತ್ತಿದ್ದಾರೆ. ಇವರನ್ನು ಸಮರ್ಥಿಸುವವರು ಹಳ್ಳಿ ಭಾಷೆ ಬಳಕೆ ಎಂದು ಹೇಳುತ್ತಿದ್ದಾರೆ. ಇವರ ಗುರು ಸಿಎಂ ಸಿದ್ದರಾಮಯ್ಯ ಪ್ರಧಾನಿಯನ್ನು ಅವನು, ಇವನು ಎಂದಿದ್ದಾರೆ. ರಾಷ್ಟ್ರಪತಿಯವರನ್ನು, ಆರ್ಥಿಕ ಸಚಿವರನ್ನು ಏಕವಚನದಲ್ಲಿ ಕರೆಯುತ್ತಾರೆ. ರಾಜ್ಯದಲ್ಲಿ ಸಂಸ್ಕಾರ ಇಲ್ಲದ ಸರ್ಕಾರವಿದೆ ಎಂದು ಆರ್.‌ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಎಷ್ಟು ನಿರುದ್ಯೋಗಿಗಳಿಗೆ ಈವರೆಗೆ ಯುವನಿಧಿ ನೀಡಿದೆ?

ಸಚಿವ ತಂಗಡಗಿ ನಿರುದ್ಯೋಗದ ಬಗ್ಗೆ ಮಾತಾಡುತ್ತಾರೆ. 50 ವರ್ಷದ ಆಡಳಿತ ನಡೆಸಿದ ಕಾಂಗ್ರೆಸ್‌ ಈ ಸಮಸ್ಯೆ ಬಗೆಹರಿಸಲಿಲ್ಲ. ಕೇಂದ್ರ ಸರ್ಕಾರದ ರೋಜ್‌ಗಾರ್‌ ಮೇಳ ಯೋಜನೆಯಡಿ 2024 ರ ಫೆಬ್ರವರಿ 13 ರಂದು ಒಂದೇ ದಿನ 1 ಲಕ್ಷ ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. ಈವರೆಗೆ 10 ರೋಜ್‌ಗಾರ್‌ ಮೇಳ ನಡೆಸಿದ್ದು, 6.5 ಲಕ್ಷ ಯುವಜನರಿಗೆ ಉದ್ಯೋಗ ದೊರೆತಿದೆ. ಕಾಂಗ್ರೆಸ್‌ ಸರ್ಕಾರ ಎಷ್ಟು ನಿರುದ್ಯೋಗಿಗಳಿಗೆ ಈವರೆಗೆ ಯುವನಿಧಿ ನೀಡಿದೆ ಎಂದು ತಿಳಿಸಲಿ ಎಂದು ಆರ್.‌ ಅಶೋಕ್ ಸವಾಲು ಹಾಕಿದರು.

ಬೈ ಬೈ ಬೆಂಗಳೂರು

ಬ್ರ್ಯಾಂಡ್‌ ಬೆಂಗಳೂರು ಬಾಂಬ್‌ ಬೆಂಗಳೂರು ಆಗಿದೆ. ಈಗ ಎಲ್ಲರೂ ನೀರಿಲ್ಲದೆ ವಲಸೆ ಹೋಗಿ ಬೈ ಬೈ ಬೆಂಗಳೂರು ಆಗುತ್ತಿದೆ. ಜಲಮಂಡಳಿ ಎಲ್ಲಿಂದ ನೀರು ನೀಡುತ್ತೇವೆ ಎನ್ನುವುದನ್ನು ಬಿಟ್ಟು ಮುಂದಿನ ಐದು ವರ್ಷದಲ್ಲಿ ಕೆರೆ ತುಂಬಿಸುತ್ತೇವೆ ಎನ್ನುತ್ತಿದ್ದಾರೆ. ನಗರದಲ್ಲಿ ಟ್ಯಾಂಕರ್‌ ಲಾಬಿ ನಡೆಯುತ್ತಿದ್ದು, ಕಲುಷಿತ ನೀರಿನಿಂದ ಜನರಿಗೆ ರೋಗ ಬರುತ್ತಿದೆ ಎಂದು ಆರ್.‌ ಅಶೋಕ್ ಹೇಳಿದರು.

ಇದನ್ನೂ ಓದಿ: Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

ಉಚಿತ ಇಲ್ಲ, ಕಾಂಗ್ರೆಸ್‌ ಸೋಲು ಖಚಿತ

ಲೋಕಸಭೆ ಚುನಾವಣೆಯ ಬಳಿಕ ಗ್ಯಾರಂಟಿ ಯೋಜನೆಗಳು ಇರುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಉಚಿತ ಇರುವುದೋ ಇಲ್ಲವೋ ಗೊತ್ತಿಲ್ಲ. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತು ಮನೆ ಸೇರುವುದು ಖಚಿತ, ನರೇಂದ್ರ ಮೋದಿ ಹ್ಯಾಟ್ರಿಕ್‌ ಗೆಲುವು ನಿಶ್ಚಿತ. ಈ ಬಾರಿ ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣವಾಗಲಿದೆ. ನಮ್ಮ ಒಬ್ಬ ಮತದಾರ ಒಂದು ಬೆರಳಿನ ಮೂಲಕ ಮತ ಚಲಾಯಿಸಿ ಇಡೀ ಭ್ರಷ್ಟಾಚಾರದ ಕಾಂಗ್ರೆಸ್‌ ಹಸ್ತವನ್ನು ನುಂಗಿ ಹಾಕಲಿದ್ದಾರೆ ಎಂದು ಆರ್.‌ ಅಶೋಕ್ ಕಿಡಿಕಾರಿದರು.

ಹೇಮಂತ್‌ ನಿಂಬಾಳ್ಕರ್‌ ವರ್ಗಾವಣೆ ಮಾಡುವಂತೆ ಆಯೋಗಕ್ಕೆ ದೂರು

ವಾರ್ತಾ ಇಲಾಖೆಯಲ್ಲಿ ಹೇಮಂತ್‌ ನಿಂಬಾಳ್ಕರ್‌ ಕೆಲಸ ಮಾಡುತ್ತಿದ್ದು, ಅವರ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಹೀಗಾಗಿ ಅವರು ಆ ಜಾಗದಲ್ಲಿ ಮುಂದುವರಿಯುವುದು ಸೂಕ್ತವಲ್ಲ. ಕೂಡಲೇ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಬೇಕಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಆರ್.‌ ಅಶೋಕ್ ತಿಳಿಸಿದರು.

Exit mobile version