Weather report : ಕರಾವಳಿಯಲ್ಲಿ Non Stop ಮಳೆ; ಬೆಂಗಳೂರಲ್ಲಿ ಹೇಗೆ? - Vistara News

ಉಡುಪಿ

Weather report : ಕರಾವಳಿಯಲ್ಲಿ Non Stop ಮಳೆ; ಬೆಂಗಳೂರಲ್ಲಿ ಹೇಗೆ?

weather report : ರಾಜ್ಯಾದ್ಯಂತ ಭಾರಿ ಮಳೆಯಾಗುವ (Heavy Rain Alert) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ. ಕರಾವಳಿಯಲ್ಲಿ ಭಾರಿ ಮಳೆಯಾದರೆ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

VISTARANEWS.COM


on

blue umbrella under heavy rain
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾರಾಂತ್ಯದಲ್ಲಿ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather report) ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಯಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಚದುರಿದ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

ಭಾರೀ ಮಳೆ ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಇನ್ನು ಮೀನುಗಾರರಿಗೆ ಎಚ್ಚರಿಕೆ ಇಲ್ಲ.

ಬೆಂಗಳೂರಲ್ಲಿ ಸಂಜೆ ವೇಳೆಗೆ ಮಳೆ ಕಾಟ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ

ಧರೆಗೆ ತಂಪರೆದ ವರುಣ

ಶನಿವಾರ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದ ವರುಣ ಧರೆಯನ್ನು ತಂಪಾಗಿಸಿದ್ದಾನೆ. ಕೋಟೆನಾಡು ಚಿತ್ರದುರ್ಗದಲ್ಲಿ ಬಿಸಿಲಿನಿಂದ ಹೈರಾಣಾಗಿದ್ದರು. ಮಧ್ಯಾಹ್ನದ ಬಳಿಕ ಮಳೆಯಾಗಿದೆ. ಮಳೆಗಾಗಿ ಮುಗಿಲತ್ತ ಮುಖಮಾಡಿದ್ದ ಅನ್ನದಾತರ ಮೊಗದಲ್ಲಿ ಸಂತಸ ಮೂಡಿತ್ತು. ಮಳೆಯಿಲ್ಲದೆ ಶೇಂಗಾ, ಮೆಕ್ಕೆಜೋಳ ಬೆಳೆಗಳು ಒಣಗುತ್ತಿದ್ದವು. ಇಂದು ಒಂದು ಗಂಟೆ ಸುರಿದ ಮಳೆಗೆ ಇಳೆ ತಂಪಾಗಿದೆ.

ಇತ್ತ ಕಾಫಿನಾಡು ಚಿಕ್ಕಮಗಳೂರಲ್ಲಿ ಭರ್ಜರಿ ಮಳೆಯಾಗಿದೆ. ಬೆಳಗ್ಗೆ ಎಲ್ಲ ಮೋಡ ಕವಿದ ವಾತಾವರಣ ಇತ್ತು. ಮಲೆ‌ನಾಡ ಘಟ್ಟಪ್ರದೇಶದ ಕೆಲ ಭಾಗದಲ್ಲಿ ಜೋರು ಮಳೆ ಆಗಿದೆ. ಚಿಕ್ಕಮಗಳೂರು, ಬಾಳೆಹೊನ್ನೂರು, ಮೂಡಿಗೆರೆ, ಎನ್.ಆರ್.ಪುರದಲ್ಲಿ ಮಳೆ ಆಗಿದೆ. ಬರದಿಂದ ಬಳಲಿದ್ದ ಮೈಸೂರಿನಲ್ಲೂ ಮಳೆಯ ಸಿಂಚನವಾಗಿದೆ. ಅರ್ಧ ಗಂಟೆಗೂ ಹೆಚ್ಚು ಸಮಯ ತುಂತುರು ಮಳೆ ಆಗಿದೆ. ಆ ತುಂತುರು ಮಳೆಯಲ್ಲೆ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುತ್ತಿದ್ದ ದೃಶ್ಯ ಕಂಡು ಬಂತು. ವಿಜಯನಗರದಲ್ಲೂ ಬ್ರೇಕ್‌ ಕೊಟ್ಟಿದ್ದ ವರುಣ ಕೆಲಹೊತ್ತು ತನ್ನ ಪ್ರದರ್ಶನವನ್ನು ತೋರಿದ್ದ. ಗಾಳಿ ಮಿಶ್ರಿತ ಮಳೆಗೆ ವಾಹನ ಸವಾರರು ಪರದಾಡಿದ್ದರು.

ಇದನ್ನೂ ಓದಿ: Cheating case : ಯರ‍್ರಾಬಿರ‍್ರಿ ಚಿತ್ರನಟನಿಗೆ ಮೋಸ ಮಾಡಿದ ಪಾಲಿಕೆ ವಲಯ ಆಯುಕ್ತ!

ರಾಜ್ಯದಲ್ಲಿ ಶುಕ್ರವಾರ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆ ಪ್ರಮಾಣ ಕೋಟ (ಉಡುಪಿ ಜಿಲ್ಲೆ) 7 ಸೆಂ.ಮೀ ವರದಿ ಆಗಿದೆ. ಉಳಿದಂತೆ ಹೊನ್ನಾವರ 6 ಹಾಗೂ ಕುಂದಾಪುರ, ಮಂಗಳೂರು ವಿಮಾನ ನಿಲ್ದಾಣ , ಮಂಕಿ ಸೇರಿ ಉಡುಪಿಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ.

ಮಾಣಿ, ಪಣಂಬೂರು, ಕ್ಯಾಸಲ್ ರಾಕ್, ಗೆರೆಸೊಪ್ಪ, ವಿರಾಜಪೇಟೆಯಲ್ಲಿ ತಲಾ 4 ಸೆಂ.ಮೀ ಹಾಗೂ ಗೋಕರ್ಣ, ಕದ್ರಾ, ಶಿರಾಲಿ, ಕುಮಟಾ, ಕಾರ್ಕಳ, ಸಿದ್ದಾಪುರ , ಪುತ್ತೂರು ಎಚ್‌ಎಂಎಸ್, ಉಪ್ಪಿನಂಗಡಿ , ಮಂಗಳೂರು, ಭಾಗಮಂಡಲ, ಸೋಮವಾರಪೇಟೆ, ಕೊಟ್ಟಿಗೆಹಾರ, ಲಿಂಗನಮಕ್ಕಿ ಎಚ್‌ಎಂಎಸ್ ತಲಾ 3 ಸೆಂ.ಮೀ ಮಳೆಯಾಗಿದೆ.

ಕೊಲ್ಲೂರು, ಕಾರವಾರ, ಅಣ್ಣಿಗೆರೆ Ars , ಸಾಂತಾಪುರ , ಹಿಡಕಲ್ ಅಣೆಕಟ್ಟು ಜಯಪುರ, ಕೊಪ್ಪ, ಶೃಂಗೇರಿ Hms , ಉಚ್ಚಂಗಿದುರ್ಗ, ಮೂರ್ನಾಡು, ನಾಪೋಕ್ಲು ತಾಳಗುಪ್ಪದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಮೂಲ್ಕಿ , ಬೆಳ್ತಂಗಡಿ , ಯಲ್ಲಾಪುರ, ಅಂಕೋಲಾ, ಜೋಯಿಡಾ , ಔರಾದ್ , ಬಿ. ಬಾಗೇವಾಡಿ , ರಾಣೆಬೆನ್ನೂರು , ಶಾಹಪುರ ಸೈದಾಪುರ , ಬಾಳೆಹೊನ್ನೂರು, ಎನ್ ಆರ್ ಪುರ, ಕಮ್ಮರಡಿ, ಕಳಸ , ಅರಕಲಗೂಡು , ಪೊನ್ನಂಪೇಟೆ, ಹಾರಂಗಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Karnataka Weather Forecast: ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆ ಭರ್ಜರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ, ಹಾಸನದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಬೀದರ್‌, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳುರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಮುಂದುವರಿದ ಮಳೆ ಅವಾಂತರ

ಕೋಲಾರದಲ್ಲಿ ಗುರುವಾರ ಸುರಿದ ದಿಢೀರ್‌ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತಗೊಂಡಿತ್ತು. ಸುಮಾರು 2-3 ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ದೊಡ್ಡ ದೊಡ್ಡ ವಾಹನಗಳು ಜಲಾವೃತಗೊಂಡ ರಸ್ತೆಯಲ್ಲೇ ಬಂದರೆ, ಬೈಕ್‌ ಸವಾರರು ತಳ್ಳಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

karnataka weather Forecast

ಇತ್ತ ಶಾಲಾ ‌ಮಕ್ಕಳು ಮನೆಗೆ ತೆರಳಲು ಹರಸಾಹಸ ಪಡೆಬೇಕಾಯಿತು. ಅಪಾಯವನ್ನು ಲೆಕ್ಕಿಸದೆ ಸೈಕಲ್‌ನಲ್ಲಿ ಹೋದ ಶಾಲಾ ವಿದ್ಯಾರ್ಥಿಯೊಬ್ಬ ನೀರಿನ ರಭಸಕ್ಕೆ ವಾಪಸ್‌ ಹಿಂದಕ್ಕೆ ಬಂದಿದ್ದ. ಅಂಡರ್‌ಪಾಸ್‌ನಲ್ಲಿ ನೀರು ಸರಿಯಾಗಿ ಹರಿದು ಹೋಗಲು ಆಗದ ಕಾರಣಕ್ಕೆ ಈ ಸಮಸ್ಯೆ ಆಗಿದೆ ಎಂದು ಸಾರ್ವಜನಿಕರು ಕಿಡಿಕಾರಿದರು.

karnataka weather Forecast

ಮಾವಿನ ಮಾರುಕಟ್ಟೆಗೆ ತೆರಳಲು ಇರುವ ಏಕೈಕ ಮಾರ್ಗವಿದು. ಪ್ರತಿ ಬಾರಿ ಮಳೆಯಾದರೂ ಇದೇ ಪರಿಸ್ಥಿತಿ ಎದುರಾಗುತ್ತದೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Karnataka weather Forecast

ಇನ್ನೂ ರಾಜಧಾನಿ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ಆದರೆ ಕೆಲವೆಡೆ ಮರಗಳ ತೆರವು ಕಾರ್ಯಾಚರಣೆ ನಡೆದಿಲ್ಲ. ರಸ್ತೆ ಹಾಗೂ ಫುಟ್‌ಪಾತ್‌ ಮಧ್ಯೆ ಮರದ ರೆಂಬೆ, ಕೊಂಬೆಗಳು ಬಿದ್ದಿವೆ. ಹೀಗಾಗಿ ಜನರ ಓಡಾಟ ಸೇರಿ ವ್ಯಾಪಾರಸ್ಥರು ಪರದಾಡಬೇಕಾಗಿದೆ. ಇನ್ನೂ ಜಯನಗರದಲ್ಲಿ ಮರಗಳು ಬಿದ್ದ ಕಾರಣ ವ್ಯಾಪಾರಸ್ಥರಿಗೆ ಅನಾನುಕೂಲವಾಗಿದೆ. ಬಿಬಿಎಂಪಿ‌ಯವರು ಮರ ಕತ್ತರಿಸಿ ಪಕ್ಕಕ್ಕೆ ಹಾಕಿ ಹೋಗಿದ್ದಾರೆ. ಆದರೆ ಅದನ್ನು ತೆರವು ಮಾಡದೆ ಇರುವುದರಿಂದ ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ ಎಂದು ವೃದ್ಧೆಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಬೈಕ್‌ಗಳಿಗೆ ಗುದ್ದಿ ಸವಾರರನ್ನು ಕೊಂದು ಪರಾರಿಯಾಗಲು ಯತ್ನಿಸಿದ ಕಾರು ಚಾಲಕ

Road Accident : ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರರಿಬ್ಬರು ಪ್ರಾಣವನ್ನು ಕಳೆದುಕೊಂಡರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಮಾಡಿ ಪರಾರಿ ಆಗಲು ಯತ್ನಿಸಿದ ಕಾರಣಕ್ಕೆ, ಸ್ಥಳೀಯರು ಕಲ್ಲುತೂರಾಟ ಮಾಡಿದ್ದಾರೆ. ಚಾಲಕ ಕುಡಿದು ವಾಹನ ಚಲಾಯಿಸಿದ್ದಾರೆ ಎಂದು ಆರೋಪಿಸಿದರು.

VISTARANEWS.COM


on

By

Road Accident
Koo

ಬೆಂಗಳೂರು ಗ್ರಾಮಾಂತರ: ಅಪಘಾತ ಮಾಡಿ (Road Accident) ಪರಾರಿ ಆಗುವ ಭರದಲ್ಲಿ ಕಾರು ಚಾಲಕನೊಬ್ಬ ಮತ್ತೆರಡು ಬೈಕ್‌ಗಳಿಗೆ ಗುದ್ದಿದ್ದಾನೆ. ಕಾರು ಗುದ್ದಿದ ರಭಸಕ್ಕೆ ಇಬ್ಬರ ದುರ್ಮರಣ ಹೊಂದಿದ್ದರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ- ಚಿಂತಾಮಣಿ ರಾಜ್ಯ ಹೆದ್ದಾರಿಯ ಮದೀನ ಹೋಟೆಲ್ ಬಳಿ ಘಟ‌ನೆ ನಡೆದಿದೆ.

ಕಣ್ಣೂರಹಳ್ಳಿ ನಿವಾಸಿ ಜಗದೀಶ್ (30) ಮತ್ತು ಶಿವಾಜಿನಗರ ನಿವಾಸಿ ಮೊಹಮದ್ ಪೈಜ್ (18) ಮೃತ ದುರ್ದೈವಿಗಳು. ಅಬ್ಬಾಸ್, ಹಬ್ಬಾಸ್ ಪಾಷ ಮತ್ತು ಅಬುಜರ್ ಗಾಯಾಳುಗಳು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಐ20 ಕಾರಿನಲ್ಲಿ ಬಂದ ಚಾಲಕ ಪ್ರಗತೀಶ್ ರಾವ್‌ ಎಂಬಾತ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಅಪಘಾತ ಮಾಡಿದ್ದಾನೆ. ಜನರು ಸೇರುತ್ತಿದ್ದಂತೆ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಪರಾರಿ ಆಗುವ ಭರದಲ್ಲಿ ರಸ್ತೆ ಬದಿಯಲ್ಲಿದ್ದ ಬೈಕ್‌ಗಳಿಗೆ ಗುದ್ದಿದ್ದಾನೆ. ಪರಿಣಾಮ ಸವಾರು ಚೆಲ್ಲಾ ಪಿಲ್ಲಿಯಾಗಿ ಬಿದ್ದರು. ಕಾರು ಚಾಲಕ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕುಡಿದ ಅಮಲಿನಲ್ಲಿ ಕಾರು ಅಡ್ಡಾದಿಡ್ಡಿ ಚಲಾಯಿಸಿ ಅಪಘಾತ ಮಾಡಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪರಾರಿಯಾಗಲು ಯತ್ನಿಸಿದ್ದಕ್ಕೆ ಸಿಟ್ಟಿನಲ್ಲಿ ಕಾರಿಗೆ ಕಲ್ಲು ತೂರಾಟ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುವಂತೆ ಸ್ಥಳೀಯರು ಒತ್ತಾಯಿಸಿದರು. ಹೊಸಕೋಟೆ ಶವಾಗಾರದ ಬಳಿ ಮೃತ ಜಗದೀಶ್ ಕುಟುಂಬಸ್ಥರು ಪ್ರತಿಭಟಿಸಿದರು. ಹೊಸಕೋಟೆ ಸಂಚಾರಿ ಪೊಲೀಸರು ಮನವೊಲಿಸಿದ ಬಳಿಕ ಮೃತದೇಹವನ್ನು ಕೊಂಡೊಯ್ದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಮಾಜಿ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

ಚಲಿಸುತ್ತಿದ್ದ ಕ್ರೇನ್‌ ಮೇಲೆ ಬಿದ್ದ ಮರ

ಉಡುಪಿಯ ಬ್ರಹ್ಮಾವರ ತಾಲೂಕು ಬೆಣ್ಣೆಕುದ್ರು ಬಾರ್ಕೂರು ಪಾಂಡೇಶ್ವರ ರಸ್ತೆಯಲ್ಲಿ ಚಲಿಸುತ್ತಿದ್ದ ಕ್ರೇನ್ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕ್ರೇನ್ ಹಾಗೂ ವಿದ್ಯುತ್ ಕಂಬ ಜಖಂಗೊಂಡಿತ್ತು. ಬೆಣ್ಣೆ ಕುದ್ರುವಿನಲ್ಲಿ ನಡೆಯುತ್ತಿರುವ ಕಾಮಗಾರಿ ಮುಗಿಸಿ ಬರುತ್ತಿದ್ದಾಗ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಸುಮಾರು 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮೆಸ್ಕಾಂ ಸಿಬ್ಬಂದಿ ಮತ್ತು ಸಾರ್ವಜನಿಕರ ನೆರವಿನಿಂದ ಮರ ತೆರವು ಕಾರ್ಯ ನಡೆಯಿತು.

ಬಿಯರ್ ತುಂಬಿದ ಲಾರಿ ಪಲ್ಟಿ; ಎಣ್ಣೆಗಾಗಿ ಮುಗಿಬಿದ್ದ ಜನ

ರಾಯಚೂರು ತಾಲೂಕಿನ ಹೆಗ್ಗಸನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿಯರ್‌ ತುಂಬಿದ್ದ ಲಾರಿಯು ಪಲ್ಟಿಯಾಗಿದೆ. ವಾಹನ ಪಲ್ಟಿಯಾಗುತ್ತಿದ್ದಂತೆ ಬಿಯರ್ ಬಾಟಲ್ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದನ್ನು ಕಂಡ ಬಿಯರ್ ಪ್ರಿಯರು ಬಾಟಟ್‌ಗಾಗಿ ಮುಗಿ ಬಿದ್ದರು. ಬಿಯರ್ ಡಬ್ಬಿಗೆ ಒಮ್ಮೆಲೆ ಜನ ಮುಗಿ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು. ಟ್ರಾಫಿಕ್ ಜಾಂನಿಂದ ವಾಹನ ಸವಾರರು ಹೈರಾಣಾದರು. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

ಯುವಕನ ಕಾಲರ್ ಪಟ್ಟಿ ಹಿಡಿದು ಜಾಡಿಸಿ ಒದ್ದ ಯುವತಿ; ಎರಡು ಕೈ ಮೇಲೆತ್ತಿ ಬೈಕ್‌ ಸವಾರಿ, ಸವಾರನ ಹುಚ್ಚಾಟಕ್ಕೆ ಕಿಡಿ

Assault Case : ವಿಜಯಪುರದಲ್ಲಿ ಬೈಕ್‌ ಸವಾರನ ಹುಚ್ಚಾಟಕ್ಕೆ ಸ್ಥಳೀಯರು ದಂಗಾಗಿದ್ದರು. ಬೆಂಗಳೂರಲ್ಲಿ ಆಟೋ ಚಾಲಕನೊಬ್ಬ ಕಿರಿಕ್‌ ತೆಗೆದು ಬೈಕ್‌ ಟ್ಯಾಕ್ಸಿ ಚಾಲಕನಿಗೆ ಥಳಿಸಿರುವ ಘಟನೆ ನಡೆದಿದೆ. ರಾಯಚೂರಿನಲ್ಲಿ ಯುವತಿಯೊಬ್ಬಳು ಯುವಕನ ಕಾಲರ್‌ ಪಟ್ಟಿ ಹಿಡಿದು ಜಾಡಿಸಿ ಒದ್ದಿದ್ದಾಳೆ.

VISTARANEWS.COM


on

By

A rider standing on a bike and Young man and woman fight in road
Koo

ವಿಜಯಪುರ/ರಾಯಚೂರು/ಬೆಂಗಳೂರು: ವಿಜಯಪುರದಲ್ಲಿ ಸವಾರನೊಬ್ಬನ ಹುಚ್ಚಾಟಕ್ಕೆ ಸಹ ಸವಾರರು ಆತಂಕ ಪಡುವಂತಾಗಿತ್ತು. ಬೈಕ್‌ ಮೇಲೆಯೇ ನಿಂತು, ಎರಡು ಕೈ ಮೇಲೆತ್ತಿ ನಡುರಸ್ತೆಯಲ್ಲಿ ವಾಹನ ಚಲಾಯಿಸಿ ಹುಚ್ಚಾಟ (Bike Rider) ಮೆರೆದಿದ್ದಾನೆ. ವಿಜಯಪುರ ನಗರದ ಬಸ್ ನಿಲ್ದಾಣದಿಂದ ಕೋರ್ಟ್ ಮಾರ್ಗದಲ್ಲಿ ನಿನ್ನೆ ಬುಧವಾರ ರಾತ್ರಿ ಘಟನೆ ನಡೆದಿದೆ. ಬೈಕ್ ಸವಾರನ ಹುಚ್ಚಾಟ ಕಂಡು ಸ್ಥಳೀಯರು ದಂಗಾದರು. ಕುಡಿದ ಮತ್ತಿನಲ್ಲಿ ಈ ರೀತಿ ಮಾಡಿರಬಹುದೆಂದು ಶಂಕಿಸಲಾಗಿದೆ. ವಿಜಯಪುರ (Vijayapura News) ನಗರದ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋ ಚಾಲಕನಿಂದ ಬೈಕ್‌ ಟ್ಯಾಕ್ಸಿ ಚಾಲಕನಿಗೆ ಹಲ್ಲೆ

ಬೆಂಗಳೂರಲ್ಲಿ ಆಟೋ ಚಾಲಕನಿಂದ ಬೈಕ್ ಟ್ಯಾಕ್ಸಿ ಚಾಲಕ ನಂದಕಿಶೋರ್ ಎಂಬಾತನ ಮೇಲೆ ಹಲ್ಲೆ (Assault Case) ನಡೆದಿದೆ. ಬೆಂಗಳೂರಿನ 80 ಫೀಟ್ ರೋಡ್ ಕೋರಮಂಗಲ ಬಳಿ ಘಟನೆ ನಡೆದಿದೆ. ಬೈಕ್ ಚಾಲಕನಿಗೆ ತಿಳಿಯದ ರೀತಿಯಲ್ಲಿ ಆಟೋ ಚಾಲಕ ಗಾಡಿಯ ಕೀ ಕದ್ದಿದ್ದ. ಈ ಸಂಬಂಧ ಮಾತಿಗೆ ಮಾತು ಬೆಳೆದಿದೆ.

ಬೈಕ್ ಟ್ಯಾಕ್ಸಿ ಎಂಬ ನೆಪದಲ್ಲಿ ಆಟೋಚಾಲಕ ಮೊಬೈಲ್ ಕಿತ್ತು ಹಲ್ಲೆ ನಡೆಸಿದ್ದಾನೆ. ಈಗಾಗಲೆ ಹೈಕೋರ್ಟ್ ಕೂಡ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ ನಡೆಸದಂತೆ ನಿರ್ದೇಶನ ನೀಡಿದೆ. ಆದರೂ ಆಟೋ ಹಾಗು ಬೈಕ್ ಟ್ಯಾಕ್ಸಿ ಚಾಲಕರ ನಡುವೆ ಜಟಾಪಟಿ ಮುಂದುವರಿದೆ. ಘಟನೆ ಬಗ್ಗೆ ಮೊಬೈಲ್ ರೆಕಾರ್ಡ್ ಮಾಡಿ ಬೈಕ್ ಟ್ಯಾಕ್ಸಿ ಚಾಲಕ ದೂರು ನೀಡಿದ್ದಾರೆ.

ಕಾಲರ್ ಪಟ್ಟಿ ಹಿಡಿದು ಜಾಡಿಸಿ ಒದ್ದ ಯುವತಿ

ರಾಯಚೂರು ನಗರದ ಲೋಕಾಯುಕ್ತ ಪೊಲೀಸ್ ಠಾಣೆ ಎದುರಿಗೆ ಯುವಕ ಯುವತಿ ಹೊಡೆದಾಡಿಕೊಂಡಿದ್ದಾರೆ. ಯುವಕನ ಕಾಲರ್ ಪಟ್ಟಿ ಹಿಡಿದ ಯುವತಿ ಜಾಡಿಸಿ ಒದ್ದಿದ್ದಾಳೆ. ಬಳಿಕ ಜಗಳವಾಡುತ್ತಾ ಲೋಕಾಯುಕ್ತ ಪೊಲೀಸ್ ಠಾಣೆಗೆ ತೆರಳಿ‌ದ್ದಾರೆ. ಈ ವೇಳೆ ಪೊಲೀಸರು ಇಬ್ಬರನ್ನು ಬೈದು ಠಾಣೆಯಿಂದ ಕಳುಹಿಸಿದ್ದಾರೆ. ಇತ್ತ ಇವರಿಬ್ಬರ ಪರಸ್ಪರ ಹೊಡೆದಾಟ ದೃಶ್ಯವನ್ನು ಸಾರ್ವಜನಿಕರು ನೋಡುತ್ತಾ ನಿಂತಿದ್ದರು. ಸದ್ಯ ಇವರಿಬ್ಬರ ಗಲಾಟೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Food Poisoning : ಇಲಿ ಬಿದ್ದ ಪಲ್ಯ ಸೇವಿಸಿದ ಎಸ್‌ ವ್ಯಾಸ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ

ಚಲಿಸುತ್ತಿದ್ದ ಕ್ರೇನ್‌ ಮೇಲೆ ಬಿದ್ದ ಮರ

ಉಡುಪಿಯ ಬ್ರಹ್ಮಾವರ ತಾಲೂಕು ಬೆಣ್ಣೆಕುದ್ರು ಬಾರ್ಕೂರು ಪಾಂಡೇಶ್ವರ ರಸ್ತೆಯಲ್ಲಿ ಚಲಿಸುತ್ತಿದ್ದ ಕ್ರೇನ್ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕ್ರೇನ್ ಹಾಗೂ ವಿದ್ಯುತ್ ಕಂಬ ಜಖಂಗೊಂಡಿತ್ತು. ಬೆಣ್ಣೆ ಕುದ್ರುವಿನಲ್ಲಿ ನಡೆಯುತ್ತಿರುವ ಕಾಮಗಾರಿ ಮುಗಿಸಿ ಬರುತ್ತಿದ್ದಾಗ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಸುಮಾರು 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮೆಸ್ಕಾಂ ಸಿಬ್ಬಂದಿ ಮತ್ತು ಸಾರ್ವಜನಿಕರ ನೆರವಿನಿಂದ ಮರ ತೆರವು ಕಾರ್ಯ ನಡೆಯಿತು.

ಬಿಯರ್ ತುಂಬಿದ ಲಾರಿ ಪಲ್ಟಿ; ಎಣ್ಣೆಗಾಗಿ ಮುಗಿಬಿದ್ದ ಜನ

ರಾಯಚೂರು ತಾಲೂಕಿನ ಹೆಗ್ಗಸನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿಯರ್‌ ತುಂಬಿದ್ದ ಲಾರಿಯು ಪಲ್ಟಿಯಾಗಿದೆ. ವಾಹನ ಪಲ್ಟಿಯಾಗುತ್ತಿದ್ದಂತೆ ಬಿಯರ್ ಬಾಟಲ್ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದನ್ನು ಕಂಡ ಬಿಯರ್ ಪ್ರಿಯರು ಬಾಟಟ್‌ಗಾಗಿ ಮುಗಿ ಬಿದ್ದರು. ಬಿಯರ್ ಡಬ್ಬಿಗೆ ಒಮ್ಮೆಲೆ ಜನ ಮುಗಿ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು. ಟ್ರಾಫಿಕ್ ಜಾಂನಿಂದ ವಾಹನ ಸವಾರರು ಹೈರಾಣಾದರು. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Karnataka Rain : ತಡರಾತ್ರಿ ಸುರಿದ ಭಾರಿ ಮಳೆಯು ಸಾವು-ನೋವಿಗೆ ಕಾರಣವಾಗಿದೆ. ತುಮಕೂರಲ್ಲಿ ಮಳೆಗೆ (Rain Effected) ಮರ ಬಿದ್ದು ಮೇಕೆಗಳು ಮೃತಪಟ್ಟರೆ, ಮನೆಗಳು, ವಾಹನಗಳು ಜಖಂಗೊಂಡಿವೆ. ಶಿವಮೊಗ್ಗದಲ್ಲಿ ಸಿಡಿಲಿಗೆ ಎಲೆಕ್ಟ್ರಾನಿಕ್‌ ಅಂಗಡಿ ಸುಟ್ಟು ಭಸ್ಮವಾಗಿದೆ.

VISTARANEWS.COM


on

By

Karnataka Rain
Koo

ತುಮಕೂರು: ತುಮಕೂರು ಜಿಲ್ಲೆಯಲ್ಲಿ ರಾತ್ರಿ ಗಾಳಿ ಸಹಿತ ಸುರಿದ ಭಾರಿ ಮಳೆಗೆ (Karnataka Rain) ಹಳೆಯ ಬೇವಿನ ಮರವೊಂದು ಕುಸಿದು ಬಿದ್ದಿದೆ. ಪರಿಣಾಮ ಮೂರು ಮನೆಗಳು ಹಾಗೂ ಒಂದು ಇಟಿಯೋಸ್ ಕಾರು ಜಖಂಗೊಂಡಿದೆ. ಸುಮಾರು 120 ವರ್ಷದ ಹಳೆಯ ಬೃಹತ್ ಮರ ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹುಸೇನ್ ಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬುವರಿಗೆ ಸೇರಿದ ಕಾರು ಹಾಗೂ ನಾಗರಾಜ್, ಮಾಧವರಾಜ್, ಅಕಲಪ್ಪ ಎಂಬುವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದೆ. ಒಂದು ಬೈಕ್ ಕೂಡ ಜಖಂ ಆಗಿದ್ದು, ಮರದಡಿ ಕಟ್ಟಿದ್ದ ಎರಡು ಮೇಕೆಗಳು ಮೃತಪಟ್ಟಿವೆ. ಸುಮಾರು ನಾಲ್ಕೈದು ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸಿಡಿಲು ಬಡಿದು ಹೊತ್ತಿ ಉರಿದ ಅಂಗಡಿ

ಶಿವಮೊಗ್ಗ ಹೊರವಲಯದ ಜಾವಳ್ಳಿ ಗ್ರಾಮದಲ್ಲಿ ಸಿಡಿಲು ಸಹಿತ ಧಾರಾಕಾರವಾಗಿ ಸುರಿದ ಮಳೆಗೆ ಅಂಗಡಿಯೊಂದು ಹೊತ್ತಿ ಉರಿದಿದೆ. ಸಿಡಿಲು ಬಡಿದ ಕಾರಣಕ್ಕೆ ಎಲೆಕ್ಟ್ರಿಕ್‌ ಅಂಗಡಿ ಧಗೆ ಧಗೆನೇ ಹೊತ್ತಿ ಉರಿದಿದೆ. ಮಳೆಯಲ್ಲೇ ಬೆಂಕಿ ಜ್ವಾಲೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. 10 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ವೀರಭದ್ರಪ್ಪ ಎಂಬುವರಿಗೆ ಅಂಗಡಿ ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: Dead Body Found : ಸೇತುವೆ ಸಮೀಪದಲ್ಲಿತ್ತು ಕೊಳೆತ ಮಹಿಳೆಯ ಶವ; ಹಂತಕರು ಯಾರು?

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ದೊಡ್ಡಬಳ್ಳಾಪುರ: ರಾಜ್ಯದ ಹಲವೆಡೆ ಬುಧವಾರ ಸಂಜೆ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಪಕ್ಕದ ಅಂಗಡಿಗಳು ಹಾಗೂ ಮೆಡಿಕಲ್ ಸ್ಟೋರ್‌ಗೂ ನೀರು ನುಗ್ಗಿ ಹಾನಿಯಾಗಿದೆ.

ಕೆಆರ್‌ಡಿಸಿಎಲ್‌ನವರು ರಸ್ತೆ ಕಾಮಗಾರಿ ವೇಳೆ ಚರಂಡಿ ವ್ಯವಸ್ಥೆ ಮಾಡದಿರುವುದೇ ಮಳೆ ನೀರು ನುಗ್ಗಲು ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಎತ್ತರದ ಪ್ರದೇಶದಲ್ಲಿನ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ. ರಾತ್ರಿಯೆಲ್ಲ ಮನೆಗಳಲ್ಲಿ ವಿದ್ಯುತ್ ಇಲ್ಲದೆ ಜನರು ಪರದಾಡಿದ್ದಾರೆ. ಮಳೆ ನೀರನ್ನು ಮನೆಯಿಂದ ಹೊರಗೆ ಎತ್ತೋಯ್ಯೊಲು ಹರಸಾಹಸ ಪಟ್ಟಿದ್ದಾರೆ. ಮನೆಯಲ್ಲಿದ್ದ ದಿನಸಿ, ಅಂಗಡಿಗಳಲ್ಲಿನ ತರಕಾರಿ ಎಲ್ಲವೂ ನೀರು ಪಾಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kangana Ranaut
ಪ್ರಮುಖ ಸುದ್ದಿ27 mins ago

Kangana Ranaut : ನಟಿ ಕಂಗನಾಗೆ ಏರ್​ಪೋರ್ಟ್​ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಯಾವುದು?

Lok Sabha Election 2024
ದೇಶ34 mins ago

Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

Viral Video
ವೈರಲ್ ನ್ಯೂಸ್47 mins ago

Viral Video: ಏಕಾಏಕಿ ಕುಸಿದು ಸಾವನ್ನಪ್ಪಿದ ಮೆಡಿಕಲ್ ಸಿಬ್ಬಂದಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕರ್ನಾಟಕ57 mins ago

MLC Election Results: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಜಯಭೇರಿ

ಬೆಂಗಳೂರು1 hour ago

Bangalore News : ಕೇಳಚಂದ್ರ ಕಾಫಿಗೆ ಎಚ್​ಆರ್​ಡಿ ಮುಖ್ಯಸ್ಥರಾಗಿ ಡಾ.ಪಿ.ಕುರಿಯನ್ ರಾಫೆಲ್ ನೇಮಕ

MLC Election Results
ಪ್ರಮುಖ ಸುದ್ದಿ2 hours ago

MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

TA Sharavana congratulated former CM hd Kumaraswamy who was elected to Lok Sabha from Mandya
ಬೆಂಗಳೂರು2 hours ago

TA Sharavana: ಮಂಡ್ಯದಿಂದ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆ; ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದ ಟಿ.ಎ.ಶರವಣ

Stock market Crash
ಪ್ರಮುಖ ಸುದ್ದಿ2 hours ago

Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

Lok Sabha Election 2024
ರಾಜಕೀಯ2 hours ago

Lok Sabha Election 2024: ಈ ಬಾರಿ ಲೋಕಸಭೆ ಪ್ರವೇಶಿಸಲಿದ್ದಾರೆ 41 ಪಕ್ಷಗಳ ಸಂಸದರು!

Fancy Handbags Fashion
ಫ್ಯಾಷನ್2 hours ago

Fancy Handbags Fashion: ಸ್ಟೈಲಿಶ್‌ ಲುಕ್‌ಗೆ ಫ್ಯಾನ್ಸಿ ಹ್ಯಾಂಡ್‌ ಬ್ಯಾಗ್‌ಗಳ ಸಾಥ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌