Weather report: ನಾಳೆ ಈ 20 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡ ಜಿಲ್ಲೆಗೆ ಹೈ ಅಲರ್ಟ್‌ - Vistara News

ಉಡುಪಿ

Weather report: ನಾಳೆ ಈ 20 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡ ಜಿಲ್ಲೆಗೆ ಹೈ ಅಲರ್ಟ್‌

Rain News: ಜೂ. 24ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ (Weather Update) ಹೈ ಅಲರ್ಟ್‌ ನೀಡಿದೆ. ಜತೆಗೆ 20 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

Heavy rain in bagalkote
ಶುಕ್ರವಾರ ಸುರಿದ ಭಾರಿ ಮಳೆಗೆ ಕೊಡೆ ಹಿಡಿದು ಮನೆಗೆ ಹೋಗುತ್ತಿರುವ ವಿದ್ಯಾರ್ಥಿಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಲೆನಾಡು, ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಅಬ್ಬರ (Weather report) ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ವರುಣ ಅಬ್ಬರಿಸಲಿದ್ದಾನೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಧಾರವಾಡ, ಬೆಳಗಾವಿ, ರಾಯಚೂರು, ಹಾವೇರಿ ಹಾಗೂ ಗದಗ, ವಿಜಯಪುರದಲ್ಲೂ ಭರ್ಜರಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಗುರುವಾರದಂದು (ಜೂ.22) ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಉತ್ತರ ಕನ್ನಡದ ಮಂಕಿಯಲ್ಲಿ 13 ಸೆಂ.ಮೀ ಮಳೆಯಾಗಿರುವ ವರದಿಯಾಗಿದೆ. ಗರಿಷ್ಠ ಉಷ್ಣಾಂಶ 39.1 ಡಿಗ್ರಿ ಸೆಲ್ಸಿಯಸ್‌ ಕಲಬುರಗಿಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Monsoon Makeup Care: ಮಳೆಗಾಲಕ್ಕೆ ವಾಟರ್‌ಪ್ರೂಫ್‌ ಕಾಸ್ಮೆಟಿಕ್ಸ್‌ ಬಳಸುತ್ತೀರಾ! ಹಾಗಾದಲ್ಲಿ ಎಚ್ಚರ ವಹಿಸಿ!

ತಾಪಮಾನ ಏರಿಕೆ

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಒಣಹವೆ ಇರಲಿದೆ. ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್‌ , ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Rain In Tumakuru
ತುಮಕೂರಲ್ಲಿ ಸುರಿಯುತ್ತಿರುವ ಮಳೆ

ತುಮಕೂರು, ಬಾಗಲಕೋಟೆಯಲ್ಲಿ ವರ್ಷಧಾರೆ

ತುಮಕೂರಿನಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ತುಮಕೂರು ನಗರ ಕೂಲ್ ಆಗಿದೆ. ಇತ್ತ ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಬಾಗಲಕೋಟೆ ಜನತೆಗೆ ವರುಣ ದರ್ಶನ ಕೋರಿದ್ದಾನೆ. ಗಾಳಿ ಸಹಿತ ಮಳೆಯಾಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ರೈತರು ಬಿತ್ತನೆಗೆ ಭೂಮಿಯನ್ನು ಹದ ಮಾಡಿಟ್ಟುಕೊಂಡು ಮಳೆಗಾಗಿ ಕಾಯುತ್ತಿದ್ದರು. ಹವಾಮಾನ ಇಲಾಖೆ ಸೂಚನೆಯಂತೆ ಮಳೆ ಆಗುತ್ತಿದೆ. ಹೆಸರು, ತೊಗರಿ, ಅಲಸಂದಿ, ಮುಂಗಾರಿ ಜೋಳ ಬಿತ್ತನೆ ಮಾಡಲು ತಯಾರಿ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

Karnataka Rain : ಭಾರಿ ಮಳೆಗೆ ಮರ ಬಿದ್ದು ಯುವಕರ್ನೊವ ದಾರುಣವಾಗಿ ಮೃತಪಟ್ಟಿದ್ದಾನೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿದ್ದು, ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮರ ಬಿದ್ದು (Tree fall) ಯುವಕನೊರ್ವ ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್ (21) ಮೃತ ದುರ್ದೈವಿ.

ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಗಾಯಾಳುಗಳು. ಈ ಮೂವರು ಬೈಕ್‌ನಲ್ಲಿ ಬೆಳಗಾವಿಗೆ ಬರುತ್ತಿದ್ದರು. ಇದೇ ವೇಳೆ ಭಾರಿ ಮಳೆ ಬರುತ್ತಿತ್ತು. ಮಳೆಯಲ್ಲೇ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೃಹತ್‌ ಗಾತ್ರದ ಮರವೊಂದು ಧರೆಗುರುಳಿ ಬೈಕ್‌ ಮೇಲೆ ಬಿದ್ದಿದೆ.

ಮರ ಬಿದ್ದ ರಭಸಕ್ಕೆ ಮುಚ್ಚಂಡಿಕರ್‌ನ ಕರುಳು ಹೊರಗೆ ಬಂದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತಿಬ್ಬರ ತಲೆಗೂ ಗಂಭೀರ ಗಾಯವಾಗಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಸಹಾಯದೊಂದಿಗೆ ರಸ್ತೆ ಮೇಲೆ ಬಿದ್ದಿದ್ದ ಮರ ತೆರವು ಮಾಡಿದರು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಭಾರಿ ಗಾಳಿ-ಮಳೆಗೆ ಮರ ಬಿದ್ದು ಕಾರುಗಳು ಜಖಂ

ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಕೆ.ಸಿ.ವೃತ್ತದಲ್ಲಿ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಬಿದ್ದ ಪರಿಣಾಮ ಎರಡು ಕಾರುಗಳಿಗೆ ಹಾನಿಯಾಗಿದೆ. ರಸ್ತೆ ಪಕ್ಕದಲ್ಲಿ‌‌ ನಿಲ್ಲಿಸಿದ್ದ ಕಾರುಗಳ ಮೇಲೆ ಮರ ಬಿದ್ದು ಜಖಂಗೊಂಡಿದೆ. ಕಳೆದೆರಡು ದಿನಗಳಿಂದ ದಾಂಡೇಲಿ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದೆ.

ಇದನ್ನೂ ಓದಿ: Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರ

ಭಾನುವಾರ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಅಡ್ಡಿಯಾಗಿತ್ತು. ಶಿವಾಜಿನಗರ, ಮೆಜೆಸ್ಟಿಕ್‌, ರಾಜಾಜಿನಗರ, ವಿಧಾನಸೌಧ, ಕೆಆರ್‌ ಸರ್ಕಲ್‌ ಹಾಗೂ ಟೌನ್ ಹಾಲ್ ಹಾಗೂ ಜೆ.ಸಿ ರಸ್ತೆ ಸುತ್ತಮುತ್ತ ಮಳೆಯಾಗಿತ್ತು. ವೀಕೆಂಡ್ ಕಳೆಯಲು ಕಬ್ಬನ ಪಾರ್ಕ್‌ಗೆ ಬಂದವರಿಗೆ ದಿಢೀರ್‌ ಮಳೆಯಿಂದಾಗಿ ತೊಂದರೆ ಆಯಿತು. ಮಳೆಯಿಂದ ಆಶ್ರಯ ಪಡೆಯಲು ಓಡುತ್ತಿದ್ದ ದೃಶ್ಯ ಕಂಡು ಬಂತು. ಜೋರಾಗಿ ಸುರಿದ ಒಂದೂವರೆ ಗಂಟೆ ಮಳೆಗೆ ಕೆಆರ್‌ ಸರ್ಕಲ್‌ ರಸ್ತೆಯು ಕೆರೆಯಂತಾಗಿತ್ತು. ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಅಂಡರ್‌ ಪಾಸ್‌ ಕ್ಲೋಸ್‌ ಮಾಡಲಾಗಿತ್ತು.

ಉತ್ತರ ಕನ್ನಡದಲ್ಲಿ ಮುಂದುವರಿದ ವರುಣಾರ್ಭಟ

ಕರಾವಳಿ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮೂರನೇ ದಿನವೂ ಧಾರಾಕಾರ ಮಳೆಯಾಗಿದೆ. ಮಳೆ ಅಬ್ಬರಕ್ಕೆ ತಗ್ಗು ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿದಿತ್ತು. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ಹೆಚ್ಚಿನ ಮಳೆಯಾಗಿದೆ. ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳದಲ್ಲೂ ಮಳೆಯಾಗಿದೆ.

ಮಳೆಗೆ ತಿಪ್ಪೆಯಂತಾದ ರಸ್ತೆಯಲ್ಲಿ ಓಡಾಟ

ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮದ ಜನರ ಗೋಳು ಕೇಳುವವರು ಇಲ್ಲ. ಮಳೆ ಬಂದರೆ ರಸ್ತೆಗಳು ಎಲ್ಲವೂ ಕೆಸರು ಗದ್ದೆಯಂತಾಗುತ್ತದೆ. ಅತಿಯಾದ ಮಳೆ ಬಂದರೆ ಮನೆಯೊಳಗೆ ನೀರು ನುಗ್ಗುತ್ತದೆ. ಮಾರ್ಕಬ್ಬಿನಹಳ್ಳಿ ಗ್ರಾಮದ ದಲಿತರ ಕೆರಿಯಲ್ಲಿನ ರಸ್ತೆಗಳು ಸಂಪೂರ್ಣ ಕೆಸರುಮಯವಾಗಿದೆ.

ಬಾಗಲಕೋಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಬಾಗಲಕೋಟೆ ಜಿಲ್ಲೆಯಲ್ಲಿ ಶನಿವಾರ ಅಬ್ಬರಿಸಿದ ಮಳೆಗಳಿಗೆ ನೀರು ನುಗ್ಗಿ, ತಗ್ಗು ಪ್ರದೇಶದ ನಿವಾಸಿಗಳು ಹೈರಾಣಾದರು. ರಬಕವಿ ನಗರದ ಬಾಬು ಗಂಗಾವತಿ ಅವರ ಮನೆ ಸಂಪೂರ್ಣ ಜಲಮಯವಾಗಿತ್ತು. ಸೂಕ್ತ ಒಳಚರಂಡಿ ವ್ಯವಸ್ಥೆ ಮಾಡದ ನಗರ ಸಭೆ ವಿರುದ್ಧ ನಿವಾಸಿಗಳು ಆಕ್ರೋಶ ಹೊರಹಾಕಿದರು. ಕುಟುಂಬದ ಸದಸ್ಯರು ಬಕೆಟ್‌ನಿಂದ ಮಳೆ ನೀರು ಹೊರ ಹಾಕಿದರು.

ಕೋಲಾರದಲ್ಲಿ ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ಬಿನ್ಸ್ ಬೆಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಮೂರು ಎಕರೆಯಲ್ಲಿ ಪಾಲಿ ಹೌಸ್ ನಿರ್ಮಾಣ ಮಾಡಿ ಬೆಳೆದಿದ್ದ ಬಿನ್ಸ್ ಬೆಳೆ ಹಾಳಾಗಿತ್ತು. ಎರಡು ದಿನದ ಹಿಂದೆ ಸುರಿದ ಬಿರುಗಾಳಿ ಸಹಿತ ಮಳೆ ಪಾಲಿ ಹೌಸ್‌ ಧ್ವಂಸವಾಗಿತ್ತು. ಕೋಲಾರ ತಾಲ್ಲೂಕಿನ ಚೆಲ್ಲಹಳ್ಳಿ ಗ್ರಾಮದ ರೈತ ಅದಿ ಮೂರ್ತಿ ಎಂಬುವರು ಬೆಳೆದಿದ್ದ ಬಿನ್ಸ್ ಬೆಳೆಗೆ ಹಾನಿಯಾಗಿತ್ತು. ಉಷ್ಣಾಂಶದಿಂದ ಬೆಳೆ ಹಾನಿ ತಪ್ಪಿಸಲು ಪಾಲಿ ಹೌಸ್ ನಿರ್ಮಾಣಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗಿತ್ತು. ಸುಮಾರು ನಲವತ್ತು ಲಕ್ಷ ಖರ್ಚು ಮಾಡಿ ಮೂರು ಎಕರೆಯಲ್ಲಿ ಬೆಳೆದಿದ್ದ ಬೆಳೆಯು ನೆಲಕಚ್ಚಿದೆ.

ಮಳೆ ಅನಾಹುತ; ಉಕ್ಕಿ ಹರಿವ ನೀರಲ್ಲೆ ಜೆಸಿಬಿ ಮೂಲಕ ರಸ್ತೆ ದಾಟಿದ ಗ್ರಾಮಸ್ಥರು

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹತ್ತರಕಿಹಾಳ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದೆ. ಹೀಗಾಗಿ ವಾಹನ ಸಂಚಾರ ಬಂದ್ ಆಗಿದ್ದರಿಂದ ಗ್ರಾಮಸ್ಥರು ಜೆಸಿಬಿ ಮೂಲಕ ಸೇತುವೆ ದಾಟಿದರು. ಹತ್ತರಕಿಹಾಳ ಗ್ರಾಮದಿಂದ ಬಸವನ ಬಾಗೇವಾಡಿ ರಸ್ತೆ ಸಂಚಾರ ಬಂದ್ ಆಗಿದೆ. ಬಸ್ಸಿನಲ್ಲಿ ಬಂದ ಗ್ರಾಮಸ್ಥರನ್ನು ಜೆಸಿಬಿ ಮೂಲಕ ಸೇತುವೆ ದಾಟಿಸಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi 3.0 Cabinet: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಪೇಜಾವರ ಶ್ರೀ

Modi 3.0 Cabinet: ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ ಇಂದು (ಜೂನ್‌ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರೂ ಭಾಗವಹಿಸಲಿದ್ದು, ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಶನಿವಾರ ಕಿರಿಯ ಪೇಜಾವರ ಶ್ರೀಗಳಿಗೆ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಆಹ್ವಾನ ಲಭಿಸಿತ್ತು. ತಡರಾತ್ರಿ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಆಹ್ವಾನಿಸಲಾಗಿತ್ತು. ಹೀಗಾಗಿ ಇಂದು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ.

VISTARANEWS.COM


on

Modi 3.0 Cabinet
Koo

ಉಡುಪಿ: ಲೋಕಸಭೆ ಚುನಾವಣೆ(Lok Sabha Election 2024)ಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ (Modi 3.0 Cabinet). ಈ ಕಾರ್ಯಕ್ರಮದಲ್ಲಿ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwa Prasanna Swamiji) ಅವರೂ ಭಾಗವಹಿಸಲಿದ್ದು, ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಶನಿವಾರ ಕಿರಿಯ ಪೇಜಾವರ ಶ್ರೀಗಳಿಗೆ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಆಹ್ವಾನ ಲಭಿಸಿತ್ತು. ತಡರಾತ್ರಿ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಆಹ್ವಾನಿಸಲಾಗಿತ್ತು. ಹೀಗಾಗಿ ಇಂದು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 11.30ಕ್ಕೆ ಹೊರಡಲಿರುವ ವಿಮಾನದಲ್ಲಿ ಶ್ರೀಗಳು ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೇಜಾವರ ಶ್ರೀಗಳು ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್​ನ ಸದಸ್ಯರಾಗಿದ್ದಾರೆ. ದೇಗುಲ ನಿರ್ಮಾಣ ಕಾರ್ಯ ಹಾಗೂ ಯೋಜನೆಯಲ್ಲಿ ಅವರು ಪ್ರಧಾನ ಪಾತ್ರ ವಹಿಸಿದ್ದಾರೆ. ಅವರು ಜನವರಿಯಲ್ಲಿ ನಡೆದ ಪ್ರಾಣ ಪ್ರತಿಷ್ಠೆ ಹಾಗೂ ದೇಗುಲದ ಧಾರ್ಮಿಕ ವಿಧಿ, ವಿಧಾನಗಳಲ್ಲೂ ಮಾರ್ಗದರ್ಶನ ನೀಡಿದ್ದರು.

ಸಿದ್ಧತೆ ಪೂರ್ಣ

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. ಏಳು ವಿದೇಶಿ ನಾಯಕರು ಸೇರಿದಂತೆ ಒಟ್ಟು 8,000 ಗಣ್ಯರು ಉಪಸ್ಥಿತರಿರಲಿದ್ದಾರೆ. ಇನ್ನು ಗಣ್ಯರಲ್ಲಿ ವಿವಿಧ ವೃತ್ತಿಪರರು, ಸಾಂಸ್ಕೃತಿಕ ಕಲಾವಿದರು ಸೇರಿದ್ದಾರೆ. ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಮೊದಲು ಮಹಾತ್ಮ ಗಾಂಧೀಜಿ ಅವರ ಸಮಾಧಿಸ್ಥಳವಾದ ರಾಜ್‌ಘಾಟ್‌ಗೆ ತೆರಳಿ ನಮನ ಸಲ್ಲಿಸಲಿದ್ದಾರೆ. ಇದಾದ ನಂತರ ತಮ್ಮ ರಾಜಕೀಯ ಗುರುವಾದ ಅಟಲ್‌ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳವಾದ ಸದೈವ ಅಟಲ್‌ಗೆ ಭೇಟಿ ನೀಡಿ, ಅವರಿಗೆ ಪುಷ್ಪನಮನ ಸಲ್ಲಿಸಲಿದ್ದಾರೆ.

7 ವಿದೇಶಿ ನಾಯಕರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Modi 3.0 Cabinet: ಮೋದಿ 3ನೇ ಅವಧಿಯಲ್ಲಿ ಯಾರಿಗೆಲ್ಲ ಮಂತ್ರಿ ಭಾಗ್ಯ? ರೇಸ್‌ನಲ್ಲಿ ಯಾರಿದ್ದಾರೆ? ಇಲ್ಲಿದೆ ಪಟ್ಟಿ

ಸದ್ಯ ಯಾರಿಗೆಲ್ಲ ಮೋದಿ ಅವರ ಕ್ಯಾಬಿನೆಟ್‌ನಲ್ಲಿ ಸಚಿವ ಸ್ಥಾನ ದೊರೆಯಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಜತೆಗೆ ಟಿಡಿಪಿಯ ರಾಮ್‌ ಮೋಹನ್‌ ನಾಯ್ಡು, ಲಾಲನ್‌ ಸಿಂಗ್‌, ಸಂಜಯ್‌ ಝಾ, ಜೆಡಿಯುನ ರಾಮನಾಥ್‌ ಠಾಕೂರ್‌, ಲೋಕ ಜನ ಶಕ್ತಿ ಪಕ್ಷದ ಚಿರಾಗ್‌ ಪಾಸ್ವಾನ್‌, ಕರ್ನಾಟಕದ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಮಳೆ

Karnataka Weather : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಅಬ್ಬರ?

Rain News : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯು ಮುಂದುವರಿಯಲಿದೆ. ಜೂ.9 ರಿಂದ 14ರವೆರೆಗೆ‌ ವ್ಯಾಪಕ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಮಳೆ ಅಲರ್ಟ್‌ ಇದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯದಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ (Karnataka Weather Forecast) ಸುರಿಯಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Rain News) ನೀಡಿದೆ. ಕೆಲವೊಮ್ಮೆ ಗಾಳಿಯು ಗಂಟೆಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು, ಸಿಡಿಲಿನ ಆರ್ಭಟ ಇರಲಿದೆ.

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡಕ್ಕೂ ಎಚ್ಚರಿಕೆ ನೀಡಲಾಗಿದೆ. ಕೆಲವೊಮ್ಮೆ ಭಾರೀ ಗಾಳಿಯೊಂದಿಗೆ (40-50 kmph) ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವೊಮ್ಮೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಜತೆಗೆ ಮೇಲ್ಮೈ ಮಾರುತಗಳು ಕೆಲವೊಮ್ಮೆ ಬಲವಾದ ಮತ್ತು ಬಿರುಗಾಳಿಯ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ವಿಜಯಪುರದ ದೋಣಿ ನದಿ ಸೇತುವೆ ಜಲಾವೃತ

ವಿಜಯಪುರದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಸಂಪೂರ್ಣ ದೋಣಿ ನದಿ ಸೇತುವೆ ಜಲಾವೃತದಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಜಲಾವೃತದಿಂದ ಹೊಲಗಳಿಗೆ ತೆರಳುವ ರೈತರಿಗೂ ಸಂಕಷ್ಟ ಎದುರಾಗಿದೆ. ಡೋಣಿ ನದಿಗೆ ಕಟ್ಟಿರುವ ಹಳೆಯ ನೆಲ ಸೇತುವೆ ಜಲಾವೃತಗೊಂಡಿದೆ. ಹೊಸ ಸೇತುವೆ ಕಳಪೆ‌ ಕಾಮಗಾರಿಯಿಂದ ಶಿಥಿಲಗೊಂಡಿದೆ. ಹೀಗಾಗಿ ಜಲಾವೃತವಾದ ಹಳೆಯ ಸೇತುವೆಯ‌ ಮೇಲೆಯೇ ವಾಹನಗಳು ಸಂಚಾರಿಸುತ್ತಿದೆ. ಹೊಸ ಸೇತುವೆ ಅಲ್ಲಲ್ಲಿ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಹೀಗಾಗಿ ಹೊಸ ಸೇತುವೆ ಮೇಲೆ ಕಳೆದ ಎರಡು ವರ್ಷಗಳಿಂದ ಸಂಚಾರ‌ ನಿಷೇಧಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ನೆಲ ಮಟ್ಟದ ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯ ಮಹದೇವಪುರ ಗ್ರಾಮದಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಮದ ಬೀದಿಗಳಲ್ಲಿ ರಭಸವಾಗಿ ಹರಿದು ಮನೆ ಒಳಗೆ ನುಗ್ಗಿದೆ. ಮಹದೇವಪುರ ಗ್ರಾಮದ ಮಾರಿಗುಡ್ಡ ಏರಿಯಾದಿಂದ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಮಹದೇವಪುರ ಗ್ರಾಮದಲ್ಲಿ ದಲಿತ ಕೇರಿ ತಗ್ಗು ಪ್ರದೇಶದಲ್ಲಿ ಇದೆ.

ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆ ರಭಸಕ್ಕೆ ರಸ್ತೆ ಕಾಣದೆ ಇರುವುದರಿಂದ ಸವಾರರು ಕೊಟ್ಟಿಗೆಹಾರದಲ್ಲೇ ವಾಹನ ನಿಲ್ಲಿಸಿಕೊಂಡಿರುವುದು ಕಂಡು ಬಂತು.

ಗದಗದಲ್ಲಿ ಕೊಚ್ಚಿ ಹೋದ ಕಿರುಸೇತುವೆ

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಧರ್ಮಾಪುರ ಗ್ರಾಮದ ಗಣಪತಿ ಕೆರೆಯ ಕಿರುಸೇತುವೆ ಕೊಚ್ಚಿ ಹೋದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಿದ್ದ ಕಿರುಸೇತುವೆ ನೀರುಪಾಲಾಗಿದೆ. ಕಳೆದ ವರ್ಷವಷ್ಟೇ ರೈತರು ತಮ್ಮ ಜಮೀನುಗಳಿಗೆ ತೆರಳಲು ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಕಿರುಸೇತುವೆ ರಸ್ತೆ ಕೊಚ್ಚಿ ಹೋಗಿದ್ದು, ರೈತರು ಪರದಾಡುತ್ತಿದ್ದಾರೆ. ರಸ್ತೆ ಇಲ್ಲದ ಹಿನ್ನೆಲೆ ಇದೀಗ ರೈತರು ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗಿದೆ.

ಬೆಳಗಾವಿಯಲ್ಲಿ ಕೆರೆಯಂತಾದ ರಸ್ತೆಗಳು

ಮಳೆರಾಯನ ಅರ್ಭಟಕ್ಕೆ ಬೆಳಗಾವಿ ಕ್ಯಾಂಪ್‌ ಪ್ರದೇಶದ ಹತ್ತಿರ ರಸ್ತೆಗಳು ಕೆರೆಯಂತೆ ಮಾರ್ಪಾಟ್ಟಿವೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಎರಡು ‌ಅಡಿ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ಬೆಳಗಾವಿಯ ಗ್ಲೋಬ್ ಥೀಯೇಟರ್‌ ಅಂಗಳಕ್ಕೆ ನೀರು ನುಗ್ಗಿತ್ತು. ಟಿಕೆಟ್ ಕೌಂಟರ್ ಸಂಪೂರ್ಣ ಜಲಾವೃತಗೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

Karnataka Weather Forecast : ರಾಜ್ಯಾದ್ಯಂತ ಮಳೆಯ (Rain News) ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಉಡುಪಿಯ ಶಾಲೆಗೆ ನೀರು ನುಗ್ಗಿದ್ದರಿಂದ ಮಕ್ಕಳಿಗೆ ರಜೆ ನೀಡಲಾಗಿತ್ತು. ಕೆಲವೆಡೆ ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿತ್ತು. ಎಲ್ಲೆಲ್ಲಿ ಏನೆಲ್ಲ ಅವಾಂತರಗಳು ಆಗಿವೆ. ಇನ್ನೂ ಎಷ್ಟು ದಿನ ಮಳೆಯಾಟ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka weather Forecast
Koo

ಉಡುಪಿ: ಉತ್ತರ ಒಳನಾಡು, ಕರಾವಳಿ ಸೇರಿ ಮಲೆನಾಡು ಭಾಗದ ವಿವಿಧೆಡೆ ಭಾರಿ ವರ್ಷಧಾರೆಗೆ ಜನರು ತತ್ತರಿಸಿಹೋಗಿದ್ದಾರೆ. ನಾಲ್ಕೈದು ದಿನಗಳು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ (Rain News) ಉಡುಪಿಯ ಬೈಂದೂರು ತಾಲೂಕಿನ ಯಡ್ತರೆ ಸಮೀಪ ರಾಹುತನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ತರಗತಿ ಕೋಣೆಗಳು ಜಲಾವೃತಗೊಂಡ ಪರಿಣಾಮ ಶಾಲಾ ಮಕ್ಕಳಿಗೆ ಶನಿವಾರ ರಜೆ ನೀಡಲಾಗಿತ್ತು. ಶಾಲೆ ಸಮೀಪ ಸಮರ್ಪಕವಾದ ಚರಂಡಿ ವ್ಯವಸ್ಥೆಯಿಲ್ಲದೇ ರಾಷ್ಟ್ರೀಯ ಹೆದ್ದಾರಿಯಿಂದ ಹರಿದ ನೀರು ನೇರ ಶಾಲೆಗೆ ನುಗ್ಗುತ್ತಿದೆ. ಕಳೆದ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಇದೇ ಸಮಸ್ಯೆ ಆಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ದಾವಣಗೆರೆಯಲ್ಲಿ ಕೆರೆಯಂತಾದ ಜಮೀನುಗಳು

ದಾವಣಗೆರೆಯ ಜಗಳೂರು ತಾಲೂಕಿನಲ್ಲಿ ಶನಿವಾರ ಭರ್ಜರಿ ಮಳೆಯಾಗಿದೆ. ಹನುಮಂತಪುರ, ದಿದ್ದಗಿ , ಹುಚ್ಚವನಹಳ್ಳಿ ಪಲ್ಲಾಗಟ್ಟೆ, ಮೇದಕೇರನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ಜಮೀನುಗಳು ಕೆರೆಯಂತಾಗಿದೆ.

ಧಾರವಾಡದ ಆಯಟ್ಟಿ ಬ್ರಿಡ್ಜ್ ಬಂದ್‌

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಬ್ರಿಡ್ಜ್ ಮಳೆಗೆ ಮುಳುಗಡೆಯಾಗಿದ್ದು, ಸಂಚಾರ ಬಂದ್‌ ಮಾಡಲಾಗಿದೆ. ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯು ಮಳೆ ಬಂದರೆ ಸಾಕು ನೀರಿನಲ್ಲಿ ಮುಳುಗಡೆಯಾಗುತ್ತದೆ. ಹೀಗಾಗಿ ಸೇತುವೆ ಮೇಲೆ ನೀರು ತಗ್ಗುವವರೆಗೂ ಜನರ ಓಡಾಟ ಸಂಪೂರ್ಣ ಬಂದ್ ಮಾಡಲಾಗಿದೆ. ಇನ್ನೂ ಸೇತುವೆ ಎತ್ತರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತಿಲ್ಲ. ಇತ್ತ ಹೊಸ ಬ್ರಿಡ್ಜ್ ನಿರ್ಮಾಣ ಮಾಡುವವರೆಗೂ ಜನರ ಸಮಸ್ಯೆ ತಪ್ಪಿದ್ದಲ್ಲ. ಬ್ರಿಡ್ಜ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದರೂ ಸಹ ಕೆಲಸ ಮಾತ್ರ ಶುರುವಾಗಿಲ್ಲ.

karnataka weather Forecast

ಇದನ್ನೂ ಓದಿ: Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

ವಿಜಯಪುರದ ದೋಣಿ ನದಿ ಸೇತುವೆ ಜಲಾವೃತ

ವಿಜಯಪುರದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಸಂಪೂರ್ಣ ದೋಣಿ ನದಿ ಸೇತುವೆ ಜಲಾವೃತದಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಜಲಾವೃತದಿಂದ ಹೊಲಗಳಿಗೆ ತೆರಳುವ ರೈತರಿಗೂ ಸಂಕಷ್ಟ ಎದುರಾಗಿದೆ. ಡೋಣಿ ನದಿಗೆ ಕಟ್ಟಿರುವ ಹಳೆಯ ನೆಲ ಸೇತುವೆ ಜಲಾವೃತಗೊಂಡಿದೆ. ಹೊಸ ಸೇತುವೆ ಕಳಪೆ‌ ಕಾಮಗಾರಿಯಿಂದ ಶಿಥಿಲಗೊಂಡಿದೆ. ಹೀಗಾಗಿ ಜಲಾವೃತವಾದ ಹಳೆಯ ಸೇತುವೆಯ‌ ಮೇಲೆಯೇ ವಾಹನಗಳು ಸಂಚಾರಿಸುತ್ತಿದೆ. ಹೊಸ ಸೇತುವೆ ಅಲ್ಲಲ್ಲಿ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಹೀಗಾಗಿ ಹೊಸ ಸೇತುವೆ ಮೇಲೆ ಕಳೆದ ಎರಡು ವರ್ಷಗಳಿಂದ ಸಂಚಾರ‌ ನಿಷೇಧಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ನೆಲ ಮಟ್ಟದ ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯ ಮಹದೇವಪುರ ಗ್ರಾಮದಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಮದ ಬೀದಿಗಳಲ್ಲಿ ರಭಸವಾಗಿ ಹರಿದು ಮನೆ ಒಳಗೆ ನುಗ್ಗಿದೆ. ಮಹದೇವಪುರ ಗ್ರಾಮದ ಮಾರಿಗುಡ್ಡ ಏರಿಯಾದಿಂದ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಮಹದೇವಪುರ ಗ್ರಾಮದಲ್ಲಿ ದಲಿತ ಕೇರಿ ತಗ್ಗು ಪ್ರದೇಶದಲ್ಲಿ ಇದೆ.

ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆ ರಭಸಕ್ಕೆ ರಸ್ತೆ ಕಾಣದೆ ಇರುವುದರಿಂದ ಸವಾರರು ಕೊಟ್ಟಿಗೆಹಾರದಲ್ಲೇ ವಾಹನ ನಿಲ್ಲಿಸಿಕೊಂಡಿರುವುದು ಕಂಡು ಬಂತು.

ಗದಗದಲ್ಲಿ ಕೊಚ್ಚಿ ಹೋದ ಕಿರುಸೇತುವೆ

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಧರ್ಮಾಪುರ ಗ್ರಾಮದ ಗಣಪತಿ ಕೆರೆಯ ಕಿರುಸೇತುವೆ ಕೊಚ್ಚಿ ಹೋದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಿದ್ದ ಕಿರುಸೇತುವೆ ನೀರುಪಾಲಾಗಿದೆ. ಕಳೆದ ವರ್ಷವಷ್ಟೇ ರೈತರು ತಮ್ಮ ಜಮೀನುಗಳಿಗೆ ತೆರಳಲು ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಕಿರುಸೇತುವೆ ರಸ್ತೆ ಕೊಚ್ಚಿ ಹೋಗಿದ್ದು, ರೈತರು ಪರದಾಡುತ್ತಿದ್ದಾರೆ. ರಸ್ತೆ ಇಲ್ಲದ ಹಿನ್ನೆಲೆ ಇದೀಗ ರೈತರು ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗಿದೆ.

ಬೆಳಗಾವಿಯಲ್ಲಿ ಕೆರೆಯಂತಾದ ರಸ್ತೆಗಳು

ಮಳೆರಾಯನ ಅರ್ಭಟಕ್ಕೆ ಬೆಳಗಾವಿ ಕ್ಯಾಂಪ್‌ ಪ್ರದೇಶದ ಹತ್ತಿರ ರಸ್ತೆಗಳು ಕೆರೆಯಂತೆ ಮಾರ್ಪಾಟ್ಟಿವೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಎರಡು ‌ಅಡಿ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ಬೆಳಗಾವಿಯ ಗ್ಲೋಬ್ ಥೀಯೇಟರ್‌ ಅಂಗಳಕ್ಕೆ ನೀರು ನುಗ್ಗಿತ್ತು. ಟಿಕೆಟ್ ಕೌಂಟರ್ ಸಂಪೂರ್ಣ ಜಲಾವೃತಗೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ind vs pak
ಪ್ರಮುಖ ಸುದ್ದಿ22 mins ago

IND VS PAK : ಭಾರತ- ಪಾಕಿಸ್ತಾನ ಪಂದ್ಯ ಅರ್ಧ ಗಂಟೆ ತಡ; ಟಾಸ್ ಗೆದ್ದ ಪಾಕ್​ನಿಂದ ಫೀಲ್ಡಿಂಗ್ ಆಯ್ಕೆ

Narendra Modi
ದೇಶ45 mins ago

Narendra Modi: ರಾಜಕೀಯದಾಚೆ ಕವಿ, ಗಾಳಿಪಟ ಪ್ರೇಮಿ; ಮೋದಿ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿ ಇಲ್ಲಿವೆ

Bus Accident
ಕ್ರೈಂ47 mins ago

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

HD Kumaraswamy
ಕರ್ನಾಟಕ51 mins ago

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

Narendra Modi
ದೇಶ1 hour ago

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Narendra Modi 3.0
ಪ್ರಮುಖ ಸುದ್ದಿ1 hour ago

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Farmer Death
ದಾವಣಗೆರೆ2 hours ago

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Modi 3.0 Cabinet BS Yediyurappa congratulates Pralhad Joshi
Lok Sabha Election 20242 hours ago

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Rishabh Pant
ಪ್ರಮುಖ ಸುದ್ದಿ2 hours ago

Rishbha Pant : ನನ್ನ ಕಾಲನ್ನು ತುಂಡರಿಬೇಕಿತ್ತು; ಅಪಘಾತದ ಭಯಾನಕ ಸಂಗತಿಗಳನ್ನು ಹೇಳಿದ ರಿಷಭ್ ಪಂತ್​

Health Tips
ಆರೋಗ್ಯ3 hours ago

Health Tips: ಆರೋಗ್ಯಕರ ಆಗಿರಬೇಕಿದ್ದರೆ ನಾವು ಪ್ರತಿದಿನ ಎಷ್ಟು ಪ್ರಮಾಣದಲ್ಲಿ ಆಹಾರ ಸೇವಿಸಬೇಕು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌