Site icon Vistara News

Weather Report: ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

rain in karnataka

ಬೆಂಗಳೂರು: ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿದಂತೆ ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ವಿಜಯಪುರ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Road Accident: ಕಾರು-ಬೈಕ್‌ ನಡುವೆ ಭೀಕರ ಅಪಘಾತ: ಮದುವೆಗೆಂದು ಹೋಗುತ್ತಿದ್ದ ಸಹೋದರರಿಬ್ಬರ ದುರ್ಮರಣ

ರಾಜ್ಯಾದ್ಯಂತ ಬುಧವಾರ (ಮೇ 3) ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನ ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್ 5 ಸೆಂ.ಮೀ, ಮಾಲೂರು, ಜಿಕೆವಿಕೆ ತಲಾ 4 ಸೆಂ.ಮೀ ಮಳೆಯಾಗಿದೆ. ಸೈದಾಪುರ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ ತಲಾ 3, ಮುಧೋಳೆ, ಹುಲಸೂರು, ಬೆಂಗಳೂರು ನಗರ, ಗೋಪಾಲನಗರ ಎಆರ್‌ಜಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್ ಕಾರವಾರದಲ್ಲಿ ದಾಖಲಾಗಿದೆ.

Exit mobile version