Site icon Vistara News

Weather report : ಉತ್ತರ ಕರ್ನಾಟಕದಲ್ಲಿ ಬಿರು ಮಳೆ; ಕರಾವಳಿ, ಮಲೆನಾಡಲ್ಲೂ ಅಬ್ಬರ!

Girl in Rain news

ಬೆಂಗಳೂರು: ನೈಋತ್ಯ ಮುಂಗಾರು (Southwest monsoon) ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ (coastal karnataka) ಹಾಗೂ ದಕ್ಷಿಣ ಒಳನಾಡಿನಲ್ಲಿ (South Inland) ಚುರುಕುಗೊಂಡಿದೆ. ರಾಜ್ಯಾದ್ಯಂತ ಬಹುತೇಕ ಕಡೆ ಮಳೆಯಾಗುವ (rain news) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ತಿಳಿಸಿದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ರಾಯಚೂರು ಸೇರಿದಂತೆ ವಿಜಯಪುರ, ಯಾದಗಿರಿಯಲ್ಲಿ ಸಹ ವರುಣ ಅಬ್ಬರಿಸಲಿದ್ದಾನೆ. ಹೀಗಾಗಿ ಈ ಭಾಗದಲ್ಲಿ ತುಸು ಎಚ್ಚರ ವಹಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: School Teachers : ಸರ್ಕಾರಿ ಶಿಕ್ಷಕರಿಗೆ Good News; ಗಣತಿ, ಚುನಾವಣಾ ಕೆಲಸಕ್ಕೆ ಬಳಸದಂತೆ ಆಯೋಗಕ್ಕೆ ಸೂಚನೆ

ಉಳಿದಂತೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಬರಿ ಮೋಡ!

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ (rainfall in Bangalore) ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಗಾಳಿಯೂ ಬೀಸಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಹೆಚ್ಚಲಿದೆ ಗಾಳಿಯ ವೇಗ

ರಾಜ್ಯದ ಕೆಲವೆಡೆ ಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗವೂ ತುಸು ಹೆಚ್ಚಿರಲಿದೆ. ಒಂದೆರಡು ಕಡೆಗಳಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಾಳಿಯ ವೇಗವು ಗಂಟೆಗೆ 40-45 ಕಿ.ಮೀ.ನಿಂದ 55 ಕಿ.ಮೀ ವರೆಗೆ ಬೀಸಲಿದೆ. ಈ ಕಾರಣದಿಂದಾಗಿ ಮುಂದಿನ ಸೂಚನೆವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು (Alert to fishermen) ಎಂದು ಸೂಚಿಸಲಾಗಿದೆ.

ನದಿ ತೀರದಲ್ಲಿ ನಿಲ್ಲುವಂತಿಲ್ಲ

ಯಾದಗಿರಿಯ ನಾರಾಯಣಪುರದ ಬಸವಸಾಗರ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದೆ. ಜತೆಗೆ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿ ತೀರದ ಗ್ರಾಮಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Moral Policing : ಬುರ್ಕಾ ಇಲ್ಲದೆ ಬಸ್‌ ಹತ್ತುವಂತಿಲ್ಲ; ಮುಸ್ಲಿಂ ಬಾಲಕಿಯರಿಗೆ KSRTC ಚಾಲಕನ ದಾರ್ಷ್ಟ್ಯ

ಕೃಷ್ಣಾ ನದಿಗೆ ಹೆಚ್ಚು ನೀರು ಬಿಡುಗಡೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಪೊಲೀಸ್‌ ಸಿಬ್ಬಂದಿ ಮೈಕ್‌ ಮೂಲಕ ತಿಂಥಣಿ ಗ್ರಾಮದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ನದಿ ತೀರದಲ್ಲಿ ಯುವಕರ ಹುಚ್ಚು ಸಾಹಸ ಮಾಡಬಾರದು. ಯಾರೂ ಸಹ ನದಿ ತೀರಕ್ಕೆ ತೆರಳಿ ಸೆಲ್ಫಿ ತೆಗೆದುಕೊಳ್ಳುವ ಸಾಹಸ ಮಾಡಬೇಡಿ. ಸುರಕ್ಷಿತ ಸ್ಥಳದಲ್ಲಿ ಇರಿ ಎಂದು ಸೂಚಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್‌ ಮಾಡಿ

Exit mobile version