weather report Heavy rains likely to occur at several places including BengaluruWeather Report: ಬೆಂಗಳೂರಲ್ಲಿ ಬಿರುಗಾಳಿ ಮಳೆ; ಅಂಡರ್‌ಪಾಸ್‌ನಡಿ ಸಿಲುಕಿ ಮಹಿಳೆ ಸಾವು, ಐವರು ಪಾರು - Vistara News

ಕರ್ನಾಟಕ

Weather Report: ಬೆಂಗಳೂರಲ್ಲಿ ಬಿರುಗಾಳಿ ಮಳೆ; ಅಂಡರ್‌ಪಾಸ್‌ನಡಿ ಸಿಲುಕಿ ಮಹಿಳೆ ಸಾವು, ಐವರು ಪಾರು

Weather Report: ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು (Karnataka Rains) ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರು ಮಧ್ಯಾಹ್ನದ ಹೊತ್ತಿಗೆ ಸಂಪೂರ್ಣವಾಗಿ ಕಗ್ಗತ್ತಲಾಗಿತ್ತು. ಜಸ್ಟ್‌ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿರುವ ಮಳೆಯು (Rain News) ನಾನಾ ಅವಾಂತರವನ್ನೇ ಸೃಷ್ಟಿಸುತ್ತಿದೆ. ಈ ವೇಳೆ ಕೆ.ಆರ್.‌ ಸರ್ಕಲ್‌ ಬಳಿಯ ಅಂಡರ್‌ಪಾಸ್‌ನಲ್ಲಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

weather report
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾನುವಾರ ರಾಜ್ಯದ ವಿವಿಧೆಡೆ ವರುಣನ (Karnataka Rain) ಅಬ್ಬರ ಜೋರಾಗಿತ್ತು. ಬೆಂಗಳೂರಲ್ಲಿ ಮಧ್ಯಾಹ್ನದ ಹೊತ್ತಿಗೆ ಕತ್ತಲು ಕವಿದು, ಆಲಿಕಲ್ಲು, ಬಿರುಗಾಳಿ ಸಹಿತ (Rain Update) ಮಳೆಯಾಗಿದೆ. ಧಾರಾಕಾರ ಮಳೆಯು ಹಲವು ಅನಾಹುತಗಳನ್ನೇ ಸೃಷ್ಟಿ ಮಾಡಿದೆ. ಕೆಲವೆಡೆ ಮರಗಳು ಧರೆಗುರುಳಿದರೆ, ಹಲವು ಕಡೆ ರಸ್ತೆಗಳೆಲ್ಲವೂ ಜಲಾವೃತವಾಗಿತ್ತು. ಇನ್ನು ಕೆಆರ್‌ ಸರ್ಕಲ್ ಬಳಿ ಇರುವ ಅಂಡರ್ ಪಾಸ್‌ ಅಡಿ ಕಾರಿನೊಳಗೆ ಆರು ಜನ ಸಿಲುಕಿಕೊಂಡಿದ್ದರು. ಇವರಲ್ಲಿ ಐವರು ಅಪಾಯದಿಂದ ಪಾರಾಗಿದ್ದರೆ, ಒಬ್ಬ ಮಹಿಳೆ ಮೃತಪಟ್ಟಿದ್ದಾಳೆ.

ನಗರದ ಕೆಆರ್‌ ಸರ್ಕಲ್ ಬಳಿ ಇರುವ ಅಂಡರ್ ಪಾಸ್ ಜಲಾವೃತಗೊಂಡಿತ್ತು. ಹೈದರಾಬಾದ್‌ನಿಂದ ಬೆಂಗಳೂರಿಗೆ ಕಾರಿನಲ್ಲಿ ಬಂದಿದ್ದ ಆರು ಮಂದಿ ಅಂಡರ್‌ಪಾಸ್‌ ನಡಿ ಸಿಲುಕಿದ್ದರು. ಸ್ಥಳೀಯರು ಹಾಗೂ ಪೊಲೀಸರು ಸೇರಿ ಸಿಲುಕಿದವರನ್ನು ರಕ್ಷಣೆ ಮಾಡಿದರು. ಇದರಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Rain Effect
ಕುಮಾರಕೃಪಾ ರಸ್ತೆಯಲ್ಲಿ ಕಾರು, ಬೈಕ್‌ ಮೇಲೆ ಬಿದ್ದ ಬೃಹತ್‌ ಮರ

ಚಲಿಸುತ್ತಿದ್ದ ಬಸ್‌ ಮೇಲೆ ಬಿದ್ದ ಮರ

ಪ್ರಯಾಣಿಕರುನ್ನು ಹೊತ್ತೊಯ್ಯುತ್ತಿದ್ದ ಬಿಎಂಟಿಸಿ ಬಸ್‌ ಮೇಲೆ ಮರವೊಂದು ಬಿದ್ದಿದೆ. ಈ ಘಟನೆ ವಿಜಯನಗರ ಬಳಿ ನಡೆದಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಬಸ್‌ ಮುಂಭಾಗವೇ ಮರ ಬಿದ್ದ ಕಾರಣದಿಂದ ಚಾಲಕ ಸೇರಿ ಪ್ರಯಾಣಿಕರೆಲ್ಲವೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಮಾರಕೃಪಾ ರಸ್ತೆಯಲ್ಲಿ ಕಾರು ಮತ್ತು ಬೈಕ್ ಮೇಲೆ ಬೃಹದಾಕಾರದ ಮರ ಬಿದ್ದು, ಜಖಂಗೊಂಡಿದೆ. ಮಂಜುನಾಥ ನಗರದಲ್ಲಿ ಮನೆಯೊಂದರ ಮೇಲೆ ಬಿದ್ದಿದೆ.

Rain Effect
ಮಳೆಗೆ ಧರೆಗುರುಳಿದ ಬೃಹತ್‌ ಮರ

ಇತ್ತ ಶೇಷಾದ್ರಿಪುರ ಬಳಿಯ ಶಿವಾನಂದ ವೃತ್ತ ಸಂಪೂರ್ಣ ಜಲಾವೃತಗೊಂಡಿತ್ತು. ಅಂಡರ್‌ಪಾಸ್ ಕೆಳಗೆ ವಾಹನಗಳು ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿ, ಕಾರುಗಳು ಕೂಡ ಒನ್ ವೇನಲ್ಲಿ ವಾಪಸ್ ಆಗಿವೆ. ವಾಹನಗಳು ಮುಳುಗಡೆಯಾಗುವ ಮುಟ್ಟಕ್ಕೆ 3-4 ಅಡಿಗೂ ಹೆಚ್ಚು ನೀರು ನಿಂತಿದೆ.

Rain Effect
ಮಳೆಯಿಂದ ಜಲಾವೃತಗೊಂಡ ಮನೆಗಳು

ಅಂಡರ್‌ಪಾಸ್‌ನಲ್ಲಿ ಸಿಲುಕಿ ಮಹಿಳೆಯರ ಗೋಳಾಟ; ವಿಡಿಯೊ ಇಲ್ಲಿದೆ

ಹಸಿರು ರಸ್ತೆಯಂತಾದ ಪ್ಯಾಲೇಸ್‌ ಗುಟ್ಟಳ್ಳಿ

ಪ್ಯಾಲೇಸ್ ಗುಟ್ಟಳ್ಳಿಯಲ್ಲಿ ಕಾಂಕ್ರಿಟ್‌ ರಸ್ತೆಯು ಮುಚ್ಚಿ ಹೋಗಿ ಹಸಿರು ರಸ್ತೆಯಂತೆ ನಿರ್ಮಾಣವಾಗಿತ್ತು. ಭಾರಿ ಮಳೆಗೆ ಮರದ ಎಲೆಗಳೆವೂ ಉದುರಿ, ರಸ್ತೆ ತುಂಬಾ ಹರಡಿದ್ದವು.

ಬೆಂಗಳೂರಿನಲ್ಲಿ ಭೀಕರ ಮಳೆ; ವಿಡಿಯೊ ಇಲ್ಲಿದೆ

ಇದನ್ನೂ ಓದಿ: IPL 2023 : ಮಹೇಂದ್ರ ಸಿಂಗ್​ ಧೋನಿಗೆ ವಿಶೇಷ ಕೊಡುಗೆ ನೀಡಿದ ಅಭಿಮಾನಿ, ಏನದು?

ಅಂಡರ್‌ಪಾಸ್‌ನಲ್ಲಿ ಈಜಿದ ಪೊಲೀಸ್‌; ವಿಡಿಯೊ ಇಲ್ಲಿದೆ

ಕೋಲಾರದಲ್ಲೂ ಅಬ್ಬರಿಸಿದ ವರುಣ

ಕೋಲಾರದಲ್ಲಿ ಸತತ ಒಂದು ಗಂಟೆ ಕಾಲ ಬಿರುಗಾಳಿ ಸಹಿತ ಮಳೆಯಾಗಿದೆ. ಗಾಳಿ, ಮಳೆಗೆ ಬೃಹತ್ ಮರ ಉರುಳಿದವು. ಕೋಲಾರ ಚಿಕ್ಕಬಳ್ಳಾಪುರ ಮಾರ್ಗದ ಧನ್ಮಟ್ನಹಳ್ಳಿ ಗ್ರಾಮದ ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದಿದೆ. ಪರಿಣಾಮ ಒಂದು ಗಂಟೆ ಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಮಳೆ ತೀವ್ರತೆ ಕಡಿಮೆ ಆದ ಬಳಿಕ ಗ್ರಾಮಸ್ಥರು ಮರವನ್ನು ತೆರವುಗೊಳಿಸಿದರು. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ 15 ನಿಮಿಷಕ್ಕೂ ಹೆಚ್ಚು ಕಾಲ ಆಲಿಕಲ್ಲು ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Lok Sabha Election 2024: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ: ಆರ್.ವಿ.ದೇಶಪಾಂಡೆ

Lok Sabha Election 2024: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಪ್ರಚಾರಕ್ಕೆ‌ ಇಳಿದಿದ್ದಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ‌ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

VISTARANEWS.COM


on

State Administrative Reforms Commission Chairman R V Deshpande statement
Koo

ಕಾರವಾರ: ಗ್ಯಾರಂಟಿ (Guarantee) ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಪ್ರಚಾರಕ್ಕೆ‌ ಇಳಿದಿದ್ದಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ‌ಆರ್.ವಿ. ದೇಶಪಾಂಡೆ (Lok Sabha Election 2024) ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುತ್ತದೆ ಎಂದು ಬಿಜೆಪಿಗರು ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರದ ಸಾಧನೆ ನೋಡಿ, ಗೆಲ್ಲುವುದು ಸುಲಭವಿಲ್ಲ ಎಂದು ತಿಳಿದು ತಾವೂ ಗ್ಯಾರಂಟಿ ಕೊಡುತ್ತೇವೆಂದು ಜನರ ಮುಂದೆ ಹೋಗುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

ಸದ್ಯ ರಾಜ್ಯದಲ್ಲಿ ಬರಗಾಲ ಇದೆ. ಕೇಂದ್ರದಿಂದ ಒಂದು ರೂಪಾಯಿ ಹಣವನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ವಿದ್ಯಾಭ್ಯಾಸ ಮಾಡಿದ ನಂತರ ಯುವಕರು ಕೆಲಸ ಸಿಗದೇ ಮನೆಯಲ್ಲಿ ಕೂರುವ ಪರಿಸ್ಥಿತಿ ಇದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಇಂತಹ ಸಮಸ್ಯೆಯನ್ನು ಮನಗಂಡ ಕಾಂಗ್ರೆಸ್ ರಾಜ್ಯದಲ್ಲಿ ಯುವನಿಧಿ ನೀಡುವ ಮೂಲಕ ಯುವಕರ ಏಳಿಗೆಗೆ ಸಹಕಾರಿಯಾಗುವ ಕಾರ್ಯಕ್ರಮ ಚಾಲನೆ ತಂದಿದೆ.

ರೈತರ, ಮಹಿಳೆಯರ, ಯುವಕರ, ಶ್ರಮಿಕರ ಪರ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಈಡೇರಿಸುತ್ತೇವೆ. ರಾಜ್ಯದಲ್ಲಿ ಮಾತು ಕೊಟ್ಟಂತೆ ಗ್ಯಾರಂಟಿ ಜಾರಿಗೆ ತಂದಿದ್ದು ಹಾಗೇ ಕೇಂದ್ರದಲ್ಲೂ ತರಲಿದ್ದೇವೆ ಎಂದರು.

ಇದನ್ನೂ ಓದಿ: Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

ಈ ಬಾರಿ ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಬಿಸಿಲನ್ನು ಲೆಕ್ಕಿಸದೇ ಜನರು ಬಂದಿರುವುದನ್ನು ನೋಡಿದರೆ ಕಾಂಗ್ರೆಸ್ ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದರು.

Continue Reading

ಕರ್ನಾಟಕ

Chitradurga News: ಚಿತ್ರದುರ್ಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ

Chitradurga News: ಚಿತ್ರದುರ್ಗದ ಕೆಳಗೋಟೆಯ ತಿಪ್ಪೇರುದ್ರಸ್ವಾಮಿ ಮಠದಲ್ಲಿ ಅನುಮಾನಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆಯಾಗಿವೆ.

VISTARANEWS.COM


on

Murder Case
Koo

ಚಿತ್ರದುರ್ಗ: ನೀರಿನ‌ ತೊಟ್ಟಿ ಪಕ್ಕ ಅನುಮಾನಸ್ಪದವಾಗಿ ತಾಯಿ-ಮಗಳ ಶವ ಪತ್ತೆಯಾಗಿರುವ ಘಟನೆ ಚಿತ್ರದುರ್ಗದ (Chitradurga News) ಕೆಳಗೋಟೆಯ ತಿಪ್ಪೇರುದ್ರಸ್ವಾಮಿ ಮಠದಲ್ಲಿ ನಡೆದಿದ್ದು, ಶವಗಳನ್ನು ಕಂಡು ತಂದೆ-ಮಗ ಗಾಬರಿಯಾಗಿದ್ದಾರೆ. ನೀರಿನಲ್ಲಿ ಮುಳುಗಿ ತಾಯಿ, ಮಗಳು ಪ್ರಾಣಬಿಟ್ಟರಾ ಅಥವಾ ಕೊಲೆ ಮಾಡಲಾಗಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಕೆಳಗೋಟೆ ನಿವಾಸಿ ಸುರೇಶ್ ಎಂಬುವವರ ಪತ್ನಿ ಗೀತಾ(42), ಮಗಳು ಪ್ರಿಯಾಂಕಾ(20) ಮೃತರು, ನಗರದ ಕೆಳಗೋಟೆ ತಿಪ್ಪೇರುದ್ರಸ್ವಾಮಿ ಮಠದ ತೊಟ್ಟಿ ಪಕ್ಕ ಮೃತರ ಶವಗಳು ಪತ್ತೆಯಾಗಿವೆ. ನೀರಿನಲ್ಲಿ ಮುಳುಗಿ ತಾಯಿ-ಮಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ಕೂಡ ವ್ಯಕ್ತವಾಗಿವೆ. ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಇದನ್ನೂ ಓದಿ | Physical Abuse : ಇವನೆಂಥ ಗಂಡ! ಕಾಲ್‌ ಗರ್ಲ್‌ ಕರೆಸಿ ಪತ್ನಿ ಮುಂದೆಯೇ ಅಸಭ್ಯ ವರ್ತನೆ

ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

Theft Case in Bengaluru

ಬೆಂಗಳೂರು: ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು (Theft Case) ಬಂಧಿಸಿದ್ದಾರೆ. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ (Swiggy Boy) ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ.

23 ವರ್ಷದ ದೀಪಕ್ ತನ್ನ 18ನೇ ವಯಸ್ಸಿನಲ್ಲೇ ಹತ್ತಕ್ಕೂ ಹೆಚ್ಚು ಗಾಡಿಗಳನ್ನು ಕದ್ದು ರಿಮ್ಯಾಂಡ್ ಹೋಮ್‌ ಸೇರಿದ್ದ. ಇಲ್ಲಿಂದ ಹೊರಬಂದ ದೀಪಕ್‌ ಹೊಸ ಜೀವನ ಕಟ್ಟಿಲಿಲ್ಲ, ಬದಲಿಗೆ ಈ ದಾರಿಯಲ್ಲಿ ಮತ್ತಷ್ಟು ಪಳಗಿ ನಟೋರಿಯಸ್‌ ಆಗಿದ್ದ. ದುಡಿಮೆ ಈತನಿಗೆ ಪಾರ್ಟ್ ಟೈಂ ಕೆಲಸವಾದರೆ, ಕದಿಯುವುದನ್ನೂ ಪ್ರವೃತ್ತಿ ಮಾಡಿಕೊಂಡಿದ್ದ.

ಬೆಂಗಳೂರಿನ ಬನಶಂಕರಿ ನಿವಾಸಿಯಾದ ದೀಪಕ್‌ಗೆ ತಂದೆ ಇಲ್ಲ. ತಾಯಿ ಇದ್ದರೂ ಅವರನ್ನು ಈತ ನೋಡಿಕೊಳ್ಳುತ್ತಿರಲಿಲ್ಲ. ದೀಪಕ್‌ ಹೆಚ್ಚು ಮಾವನ ಆಸರೆಯಲ್ಲೆ ಬೆಳೆದಿದ್ದ. ದೀಪಕ್ ಮಾವ ಮಂಜುನಾಥ್ ಅವರು ಬಿಜಿಎಸ್ ಮಠದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ನಂತರ ಅಮೇರಿಕಾದಲ್ಲಿರುವ ಬಿಜಿಎಸ್‌ನ ಬ್ರಾಂಚ್‌ಗೆ ಶಿಫ್ಟಾಗಿದ್ದರು. ಇದಾದ ಬಳಿಕವೇ ದೀಪಕ್ ದಾರಿ ತಪ್ಪಿದ್ದ. ಮೊದಲ ಬಾರಿ ಜೆಪಿ ನಗರದಲ್ಲಿ ರಾಬರಿ ಮಾಡಿ ರಿಮ್ಯಾಂಡ್ ಹೋಂ ಸೇರಿದ್ದ. ಒಮ್ಮೆ ಕಳ್ಳತನದ ರುಚಿ ಸವಿದ ನಂತರ ಇದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದ. ಸುಮಾರು 73ಕ್ಕೂ ಹೆಚ್ಚು ಬೈಕ್ ಹಾಗೂ ಟಾಟಾ ಏಸ್ ಗಾಡಿ ಕದ್ದಿರುವುದು ಬೆಳಕಿಗೆ ಬಂದಿದೆ.

ಅಷ್ಟೆ ಅಲ್ಲದೆ ವಿದ್ಯಾರಣ್ಯಪುರದಲ್ಲಿ ಮನೆ ಕಳ್ಳತನ ಮಾಡಿ ಜೈಲು ಸೇರಿದವನು 15 ದಿನಗಳ ಹಿಂದಷ್ಟೇ ಹೊರ ಬಂದಿದ್ದ. ಜೈಲಿನಲ್ಲಿದ್ದಾಗ ರಘು ಅಲಿಯಾಸ್‌ ಪೆಪ್ಸಿ ಎಂಬಾತ ಪರಿಚಯವಾಗಿದ್ದ. ಕಳ್ಳತನಕ್ಕೆ ಒಂದಷ್ಟು ಮನೆಗಳನ್ನು ಹುಡುಕು ಎಂದಿದ್ದ ಎನ್ನಲಾಗಿದೆ. ಅದರಂತೆ ಈತ ಬನಶಂಕರಿಯಲ್ಲಿ ಮೂರ್ನಾಲ್ಕು ಮನೆಗಳನ್ನೂ ಹುಡುಕಿಕೊಟ್ಟಿದ್ದನಂತೆ. ಇನ್ನು ಈತ ಫುಲ್ ಟೈಂ ಕಳ್ಳನಾಗಿದ್ದು, ಸ್ವಿಗ್ಗಿ ಡೆಲಿವರಿ ಬಾಯ್‌ ಆಗಿ ಆಗಾಗ ಕೆಲಸ ಮಾಡುತ್ತಿದ್ದ. ಸ್ವಿಗ್ಗಿ ಡೆಲಿವರಿ ಮಾಡುತ್ತಾ ಮನೆಗಳನ್ನು ಹಾಗು ಬೈಕ್‌ಗಳನ್ನು ಗುರುತಿಸಿ, ರಾತ್ರಿ ವೇಳೆ ಕದಿಯುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ .‌

ಇದನ್ನೂ ಓದಿ | Robbery case : ಎಎಸ್‌ಐ ಬೈಕ್‌ ಎಗರಿಸಿ ಹೆದ್ದಾರಿಯಲ್ಲಿ ರಾಬರಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

ಸದ್ಯ ಬೈಯ್ಯಪ್ಪನಹಳ್ಳಿ ಪೊಲೀಸರು ಈ ಖತರ್ನಾಕ್‌ ಕಳ್ಳನಿಂದ ಮೂರು ಲಕ್ಷ ಮೌಲ್ಯದ ಐದು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

ಕರ್ನಾಟಕ

UPSC Results 2023: ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದ ಶಾಂತಪ್ಪ ಕುರುಬರ; ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡ ಸಾಧಕ!

UPSC Results 2023: ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗೆಣಿಕೆ ಹಾಳ್‌ ಗ್ರಾಮದ ಶಾಂತಪ್ಪ ಕುರುಬರ ಅವರು ಯುಪಿಎಸ್‌ ಪರೀಕ್ಷೆಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

VISTARANEWS.COM


on

UPSC Results 2023
Koo

ಬಳ್ಳಾರಿ: ಸೋಲೇ ಗೆಲುವಿನ‌ ಸೋಪಾನ ಎಂಬ ಗಾದೆ ಮಾತು‌ ಅಕ್ಷರಶಃ ಸತ್ಯ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ ಜಿಲ್ಲೆಯ ಯುಪಿಎಸ್‌ಸಿ ಅಭ್ಯರ್ಥಿ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗೆಣಿಕೆ ಹಾಳ್‌ ಗ್ರಾಮದ ಕಡೇಮನೆ ಶಿವಕುಮಾರಪ್ಪ ಹಾಗೂ ಜಡಿಯಮ್ಮ ಅವರ ಪುತ್ರ ಶಾಂತಪ್ಪ ಕುರುಬರ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ (UPSC Results 2023) 644 ರ‍್ಯಾಂಕ್‌ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇನ್ನು ಇವರು ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆಗಿರುವುದು ವಿಶೇಷವಾಗಿದೆ.

ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ನಾಲ್ಕು ವಿಷಯದಲ್ಲಿ ಫೇಲ್, ಬಿಎಸ್ಸಿಯಲ್ಲಿ ಫೇಲ್, ಕೆಎಎಸ್ ಪರೀಕ್ಷೆಯಲ್ಲಿ ಪ್ರಯತ್ನ ವಿಫಲ, ಯುಪಿಎಸ್ ಪರೀಕ್ಷೆಯಲ್ಲಿ ಆರಂಭದಲ್ಲಿ ವಿಫಲ. ಆದರೆ ನಿಶ್ಚಿಯಿಸಿದ ಗುರಿ ತಲುಪಲು ದೃಢ ನಿರ್ಧಾರ ಮತ್ತು ಪರಿಶ್ರಮದಿಂದ ಸಾಧ್ಯ ಎಂಬ ಸತ್ಯ ಅರಿತು, ಸೋಲನ್ನು ಸಾಧನೆಯ ಮೆಟ್ಟಿಲು ಮಾಡಿಕೊಂಡು ಶಾಂತಪ್ಪ ಕುರುಬರ ಸಕ್ಸಸ್ ಆಗಿದ್ದಾರೆ.

ಪಿಯುಸಿಯಲ್ಲಿ ಅನುತ್ತೀರ್ಣಗೊಂಡಿದ್ದ ಇವರು ಬಳಿಕ ಉತ್ತೀರ್ಣರಾಗಿ, ಬಳ್ಳಾರಿಯ ವೀರಶೈವ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆದಿದ್ದಾರೆ. 2017ರಲ್ಲಿ ಪಿಎಸ್‌ಐ ಆಗಿ ನೇಮಕವಾಗುವ ಮೂಲಕ ಬೆಂಗಳೂರಿನಲ್ಲಿ ಸೇವೆ ಆರಂಭಿಸಿದ್ದು, ಪ್ರಸ್ತುತ ಬೆಂಗಳೂರಿನ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾಮಾಜಿಕ ಕಳಕಳಿಯನ್ನು ಮೈಗೂಡಿಸಿಕೊಂಡಿರುವ ಇವರು ವಿದ್ಯಾಭ್ಯಾಸ ಮಾಡುವ ಬಡ ಮಕ್ಕಳಿಗೆ ವೈಯಕ್ತಿಕವಾಗಿ ನೆರವಾಗುವುದು, ಎಸ್ಸೆಸ್ಸೆಲ್ಸಿಯಲ್ಲಿ ರ‍್ಯಾಂಕ್‌ ಪಡೆದವರನ್ನು ಸನ್ಮಾನಿಸಿ ಪ್ರೋತ್ಸಾಹಿಸುವುದು, ಕೋವಿಡ್‌ ವೇಳೆ ಶಾಲೆಗಳಿಗೆ ತೆರಳಿ ಪಾಠ ಮಾಡುವುದು ಸೇರಿದಂತೆ ಇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸೈ ಎನಿಸಿಕೊಂಡಿದ್ದರು.

ಇದನ್ನೂ ಓದಿ | UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

ಯುಪಿಎಸ್‌ಸಿ ಮಾಡಬೇಕೆಂಬ ಗುರಿಯನ್ನು ಬೆನ್ನತ್ತಿದ್ದ ಇವರು ಸತತ 7ನೇ ಬಾರಿ ಪರೀಕ್ಷೆ ಬರೆದಿದ್ದು, ಎರಡು ಬಾರಿ ಸಂದರ್ಶನ ಹಂತಕ್ಕೂ ತೆರಳಿದ್ದರೂ ಆಯ್ಕೆಯಾಗಿರಲಿಲ್ಲ. ನಂತರ ಪ್ರಯತ್ನವನ್ನು ಮುಂದುವರಿಸಿದ ಇವರು 8ನೇ ಬಾರಿಗೆ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್ ಪಡೆಯುವಲ್ಲಿ ಸಫಲರಾಗಿದ್ದಾರೆ. ಇವರು ದೆಹಲಿಯ ವಾಜಿರಾಮ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ನಲ್ಲಿ ತರಬೇತಿ ಪಡೆದಿದ್ದಾರೆ.

ಯುಪಿಎಸ್‌ಸಿ ಫಲಿತಾಂಶದ ಬಗ್ಗೆ ಪಿಎಸ್‌ಐ ಶಾಂತಪ್ಪ ಕುರುಬರ್ ಪ್ರತಿಕ್ರಿಯಿಸಿ, ಕನ್ನಡದಲ್ಲಿ ಪರೀಕ್ಷೆ ಬರೆಯುವುದು ತುಂಬಾ ಕಷ್ಟ. ಪಿಯುಸಿ ಅನುತ್ತೀರ್ಣವಾಗಿದ್ದೆ, ಆಗ ಊರಿನಲ್ಲಿ ಜನ ಅಡಿಕೊಂಡಿದ್ದರು. ಅಗ ತೀರ್ಮಾನ ಮಾಡಿ ಓದಲು ಮುಂದೆ ಬಂದೆ. ನಂತರ ಸಬ್ ಇನ್ ಸ್ಪೆಕ್ಟರ್ ಆದೆ. ಕೆಲಸ ಮಾಡಿಕೊಂಡು ಅಧ್ಯಯನ ಮಾಡಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಶಾಂತಪ್ಪ ಕುರುಬರ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಹೋಗಿ ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಕರ್ತವ್ಯದ ಜತೆಗೆ ಸಮಾಜಮುಖಿ ಕಾರ್ಯ

ಶಾಂತಪ್ಪ ಕುರುಬರ ಅವರು ಪೊಲೀಸ್‌ ಆಗಿ ಕೆಲಸ ನಿರ್ವಹಿಸುತ್ತಲೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಬೆಂಗಳೂರಿನ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕರಿಗಾಗಿ 10 ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಿದ್ದಾರೆ. ಇವರು ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಲು ಕಾರಣ ಅವರ ತಾಯಿ. ಈ ಮಾರ್ಗದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ತಾಯಿ ಶೌಚಾಲಯಕ್ಕೆ ಹೋಗಬೇಕು ಎಂದಿದ್ದರು. ಆಗ ಹತ್ತಿರದಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಶೌಚಕ್ಕೆ ಹೋಗಲು ತೊಂದರೆಯಾಗಿತ್ತು. ಇದರಿಂದ ತಮ್ಮ ತಾಯಿಗಾದ ಕಷ್ಟ ಯಾರಿಗೂ ಆಗಬಾರದು ಎಂದು ಸಾರ್ವಜನಿಕರಿಗೆ ನೆರವಾಗಲು ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಿದ್ದಾರೆ.

Continue Reading

ಬೆಂಗಳೂರು

UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

UPSC Results 2023: ಬೆಂಗಳೂರಿನ ವಿಜಯನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್‌ನ 18 ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

VISTARANEWS.COM


on

Universal Coaching Centre
Koo

ಬೆಂಗಳೂರು: ಮತ್ತೊಮ್ಮೆ ಮಗದೊಮ್ಮೆ ಯುನಿವರ್ಸಲ್ ಕೋಚಿಂಗ್ ಸೆಂಟರ್, ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ (UPSC Results 2023) ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ. ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗೆ ನಂಬರ್ 1 ತರಬೇತು ಕೇಂದ್ರ ಎಂಬ ಹೆಗ್ಗಳಿಕೆ ಹೊಂದಿರುವ ನಗರದ ವಿಜಯನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್‌ನ (Universal Coaching Centre) 18 ಅಭ್ಯರ್ಥಿಗಳು ಈ ಬಾರಿ ತೇರ್ಗಡೆ ಹೊಂದಿದ್ದಾರೆ.

ಅಯಾನ್ ಜೈನ್ 16ನೇ ರ‍್ಯಾಂಕ್‌, ಅಭಿಮನ್ಯು ಮಲಿಕ್ 60ನೇ ರ‍್ಯಾಂಕ್‌, ಡಾ. ಪ್ರಶಾಂತ್. ಎಸ್ 78ನೇ ರ‍್ಯಾಂಕ್‌, ಶಾಶ್ವತ್ ಅಗರವಾಲ್ 121ನೇ ರ‍್ಯಾಂಕ್‌, ಪೌರವಿ ಗುಪ್ತ 213ನೇ ರ‍್ಯಾಂಕ್‌, ಸಮೀರ್ ಗೋಯೆಲ್-222 ರ‍್ಯಾಂಕ್‌, ಅಂಕುರ್ ಕುಮಾರ್ – 344ನೇ ರ‍್ಯಾಂಕ್‌, ಶಿವಶಕ್ತಿವೇಲ್.ಸಿ 340ನೇ ರ‍್ಯಾಂಕ್‌, ಶುಭಮ್ ರಘುವಂಶಿ 556ನೇ ರ‍್ಯಾಂಕ್‌, ಅಜಿತ್ ಸಿಂಗ್ ಖಡ್ಡ 563 ನೇ ರ‍್ಯಾಂಕ್‌, ಕಾರ್ತಿಕೇಯನ್ ಎ.ಕೆ 579ನೇ ರ‍್ಯಾಂಕ್‌, ಲಕ್ಷ್ಮಣ ಪ್ರತಾಪ್ ಚೌಧರಿ 597 ರ‍್ಯಾಂಕ್‌,
ದಿವ್ಯಾಂಶು ಪಾಲ್ ನಗರ 618 ರ‍್ಯಾಂಕ್‌, ಯಶವಂತ್ ನಾಯಕ್ 627ನೇ ರ‍್ಯಾಂಕ್‌, ಕಮಲೇಶ್ ಕುಮಾವತ್ 653ನೇ ರ‍್ಯಾಂಕ್‌, ಸಿದ್ದಾಂತ್ ಬೇಸ್ರ 800ನೇ ರ‍್ಯಾಂಕ್‌, ಸಂಪ್ರೀತ್ ಸಂತೋಷ್ – 868ನೇ ರ‍್ಯಾಂಕ್‌ ಹಾಗೂ ಕರ್ಮವೀರ್ ನಾರ್ವಾಡಿಯ 954ನೇ ರ‍್ಯಾಂಕ್‌ ಪಡೆದಿದ್ದಾರೆ.

ಇದನ್ನೂ ಓದಿ | UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

ಸಂಸ್ಥೆಯ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ ತಮ್ಮ ಅಭ್ಯರ್ಥಿಗಳ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. “ಇಂದು ಯುನಿವರ್ಸಲ್ ಸಂಸ್ಥೆ ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿ ಬೆಳೆದು ನಿಲ್ಲಲು, ಈ ಪ್ರತಿಭಾನ್ವಿತ ವಿದ್ಯಾರ್ಥಿಗಳೇ ಕಾರಣ. ನಮ್ಮ ಸಂಸ್ಥೆಯ ತರಬೇತಿಯ ಶ್ರೇಷ್ಠತೆಗೆ ಇದು ಒಂದು ಉದಾಹರಣೆ ಎಂದು ತಿಳಿಸಿದ್ದಾರೆ.

Continue Reading
Advertisement
State Administrative Reforms Commission Chairman R V Deshpande statement
ಉತ್ತರ ಕನ್ನಡ3 mins ago

Lok Sabha Election 2024: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ: ಆರ್.ವಿ.ದೇಶಪಾಂಡೆ

IPL 2024
ಪ್ರಮುಖ ಸುದ್ದಿ7 mins ago

IPL 2024 : ಬಟ್ಲರ್ ಮುಂದೆ ಮಂಕಾದ ನರೈನ್​; ಕೆಕೆಆರ್ ವಿರುದ್ಧ ಆರ್​​ಆರ್​ಗೆ 2 ವಿಕೆಟ್ ಜಯ

Murder Case
ಕರ್ನಾಟಕ20 mins ago

Chitradurga News: ಚಿತ್ರದುರ್ಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ

amith shah
ದೇಶ51 mins ago

Amit Shah: ಶೀಘ್ರದಲ್ಲೇ ಭಾರತ ನಕ್ಸಲ್‌ ಮುಕ್ತವಾಗಲಿದೆ; ಅಮಿತ್ ಶಾ

Nitin Gadkari
ದೇಶ58 mins ago

Nitin Gadkari : ನಾಗ್ಪುರ ಕ್ಷೇತ್ರಕ್ಕೆ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ

UPSC Results 2023
ಕರ್ನಾಟಕ1 hour ago

UPSC Results 2023: ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದ ಶಾಂತಪ್ಪ ಕುರುಬರ; ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡ ಸಾಧಕ!

Dalip Singh Majithia
ಪ್ರಮುಖ ಸುದ್ದಿ1 hour ago

Dalip Singh Majithia : 2ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಐಎಎಫ್ ಯೋಧ 103 ನೇ ವಯಸ್ಸಿನಲ್ಲಿ ನಿಧನ

Ayodhya Ram Mandir
ದೇಶ1 hour ago

Ayodhya Ram Mandir: ನಾಳೆ ಅಯೋಧ್ಯೆ ಶ್ರೀರಾಮನಿಗೆ ಸೂರ್ಯ ತಿಲಕ; ಮನೆಯಲ್ಲೇ ಕೂತು ಹೀಗೆ ಕಣ್ತುಂಬಿಕೊಳ್ಳಿ

Universal Coaching Centre
ಬೆಂಗಳೂರು3 hours ago

UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

Sanju Samson
ಪ್ರಮುಖ ಸುದ್ದಿ3 hours ago

Sanju Samson : ಸಂಜು ಸ್ಯಾಮ್ಸನ್​ಗೆ ರಾಯಲ್ಸ್​ ತಂಡದಲ್ಲಿ ದಶಕದ ಸಾಧನೆ; ಬೆಸ್ಟ್​ ಕ್ಯಾಪ್ಟನ್ ಎಂದ ಅಭಿಮಾನಿಗಳು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ19 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌