weather report Mocha weakened in the karnataka rainfall is limited to these districts onlyWeather Report : ರಾಜ್ಯದಲ್ಲಿ ದುರ್ಬಲಗೊಂಡ ಮೋಚಾ; ಈ ಜಿಲ್ಲೆಗಳಿಗಷ್ಟೆ ಮಳೆ ಸೀಮಿತ - Vistara News

ಉಡುಪಿ

Weather Report : ರಾಜ್ಯದಲ್ಲಿ ದುರ್ಬಲಗೊಂಡ ಮೋಚಾ; ಈ ಜಿಲ್ಲೆಗಳಿಗಷ್ಟೆ ಮಳೆ ಸೀಮಿತ

Weather Report: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿದ್ದ ಮೋಚಾ ಚಂಡಮಾರುತ (Mocha cyclone) ರಾಜ್ಯದಲ್ಲಿ ದುರ್ಬಲಗೊಂಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸೋಮವಾರ (ಮೇ 15) ಗುಡುಗು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ.

VISTARANEWS.COM


on

Thunderstorm squall likely to occur in several districts including Bengaluru till April 3
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ಅಬ್ಬರ‌ (Weather Report) ಮುಂದುವರಿಯಲಿದೆ. ಕಳೆದೊಂದು ವಾರದಿಂದ ಮೋಚಾ ಚಂಡಮಾರುತದ (Mocha) ಪರಿಣಾಮದಿಂದಾಗಿ ರಾಜ್ಯದ ವಿವಿಧೆಡೆ ವರುಣ (Karnataka rain) ಅಬ್ಬರಿಸಿದ್ದ. ಆದರೆ ಈಗ ಮೋಚಾ ಉತ್ತರ ಈಶಾನ್ಯದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ಆಗ್ನೇಯ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ ಕರಾವಳಿಯನ್ನು ಕಾಕ್ಸ್ ಬಜಾರ್ (ಬಾಂಗ್ಲಾದೇಶ) ಮತ್ತು ಕ್ಯಾಕ್ಪ್ಯು (ಮ್ಯಾನ್ಮಾರ್) ನಡುವೆ ದಾಟಲಿದೆ.

ಹೀಗಾಗಿ ರಾಜ್ಯದಲ್ಲಿ ಮೋಚಾ ದುರ್ಬಲಗೊಂಡಿರುವ ಕಾರಣದಿಂದಾಗಿ ಮಳೆಯ ಅಬ್ಬರ ತಗ್ಗಿದೆ. ಸೋಮವಾರದಂದು ಬೆಳಗಾವಿ, ಹಾವೇರಿ, ಬಳ್ಳಾರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉಳಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ.

ಮಲೆನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮನೆ ಬಳಿ ಜಮಾಯಿಸುತ್ತಿರುವ ಬೆಂಬಲಿಗರು; ಪೊಲೀಸ್​ ಭದ್ರತೆ

ತಾಪಮಾನ ಏರಿಕೆ ಸಾಧ್ಯತೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಂಭವ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಮಳೆಯ ಜತೆಗೆ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 -3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather :ಮಳೆಯ ಕಣ್ಣಾ ಮುಚ್ಚಾಲೆ ಆಟ; ವರುಣ ದೇವನ ತಲೆ ಮೇಲೆ ಹೊತ್ತು ತಿರುಗಿದ ಗ್ರಾ.ಪಂ ಪಿಡಿಒ

Karnataka Weather Forecast : ರಾಜ್ಯದಲ್ಲಿ ಆಗಾಗ ಮಳೆಯು (Rain News) ದರ್ಶನ ಕೊಡುತ್ತಿದ್ದರೂ, ಸೂರ್ಯನ ಶಾಖಕ್ಕೆ ಭೂಮಿ ಕಾದ ಕೆಂಡವಾಗುತ್ತಿದೆ. ಬಿಸಿಲ ಧಗೆಯು ಹೆಚ್ಚಾಗುತ್ತಲೇ ಇದ್ದು, ಮಳೆಗಾಗಿ ತಾವರೆಕೆರೆ ಗ್ರಾ.ಪಂ ಪಿಡಿಓ ವರುಣ ದೇವನನ್ನು ಪ್ರತಿಷ್ಠಾಪಿಸಿ ತಲೆ ಮೇಲೆ ಹೊತ್ತು ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

By

Karnataka Weather Forecast
ದೇವರ ಮೊರೆ ಹೋದ ತಾವರೆಕೆರೆ ಗ್ರಾ.ಪಂ ಪಿಡಿಒ
Koo

ತುಮಕೂರು/ಬೆಂಗಳೂರು: ಬಿಸಿಲ ಬೇಗೆಗೆ ಬೇಸತ್ತ ಜನರು ಮಳೆಗಾಗಿ (Rain News) ದೇವರ ಮೊರೆ ಹೋಗುತ್ತಿದ್ದಾರೆ. ಮಳೆರಾಯನ (Karnataka Weather Forecast) ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಮಳೆಗಾಗಿ ಪೂಜೆ ನಡೆದಿದೆ.

ತಾವರೆಕೆರೆ ಗ್ರಾ.ಪಂ ಪಿಡಿಒ ನಾಗರಾಜ್ ಅವರು ಸ್ವತಃ ಮಳೆರಾಯನ ಹೊತ್ತು ಜಲಾಭಿಷೇಕ ಮಾಡಿ ಪ್ರಾರ್ಥನೆ ಸಲ್ಲಿಸಿದರು. ವರುಣ ದೇವನನ್ನು ಪ್ರತಿಷ್ಠಾಪಿಸಿ ನಂತರ ತಲೆ ಮೇಲೆ ಹೊತ್ತು ಮನೆ ಮನೆಗೆ ಹೋಗಿ ಪ್ರಾರ್ಥನೆ ಸಲ್ಲಿಸಿದರು. ಭೀಕರ ಬರಗಾಲ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿದರು.

ಇನ್ನೂ‌ ಶನಿವಾರದಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಚಾಮರಾಜನಗರದ ಎಂ.ಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 44.7 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

ಮತ್ತಷ್ಟು ದಿನ ಬಿಸಿಲ ತಾಪ

ರಣಬಿಸಿಲು, ಉಷ್ಣಗಾಳಿ ಹೊಡೆತಕ್ಕೆ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಮತ್ತಷ್ಟು ದಿನ ಬಿಸಿಲ ತಾಪ ಹೆಚ್ಚಾಗಲಿದ್ದು, ಆರೋಗ್ಯದ ಕಾಳಜಿ ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಉಷ್ಣತೆಯು ಇದ್ದಕ್ಕಿದ್ದಂತೆ ತೀಕ್ಷ್ಣವಾಗಿ ಮೇಲೇರಿ, ತನ್ನ ಸಾಮಾನ್ಯ ಮಟ್ಟವನ್ನು ಮೀರುವುದನ್ನು ಶಾಖದ ಅಲೆಗಳು ಅಥವಾ ಹೀಟ್‌ವೇವ್‌ ಎನ್ನಲಾಗುತ್ತದೆ. ಸದ್ಯ ಸಾಮಾನ್ಯ ಮಟ್ಟವನ್ನು ಮೀರಿ, ಉಷ್ಣತೆ ಮೇಲೇರುವುದರಿಂದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು. ಸುಸ್ತು, ಆಯಾಸ, ಎಚ್ಚರ ತಪ್ಪುವುದು ಆಗಲಿದೆ. ಹೀಗಾಗಿ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ.

ಮೇ.8ರವೆರೆಗೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಲಿದೆ.

ಮಳೆ ಸೂಚನೆ ಇದ್ಯಾ?

ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇದರ ಹೊರತಾಗಿಯೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಲ್ಲಿ ಮತ್ತೆ ತಾಪಮಾನ ಏರಿಕೆ

ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ನಿರ್ಮಲ ಆಕಾಶ ಇರಲಿದ್ದು, ಗರಿಷ್ಠ ಉಷ್ಣಾಂಶವು 39ರ ಗಡಿ ದಾಟಲಿದೆ.‌ ಜತೆಗೆ ಆಗಾಗ ಗಾಳಿ ವೇಗವು ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Karnataka Weather Forecast : ಗಂಟೆಗಳ ಕಾಲ ಮಳೆ ಸುರಿದರೂ ವಾತಾವರಣ ಮಾತ್ರ ಕಾದ ಕೆಂಡವಾಗಿಯೇ ಇದೆ. ರಾಜ್ಯಾದ್ಯಂತ ಕೆಲವೆಡೆ ಮಳೆ ಸೂಚನೆ (Rain News) ಇದ್ದರೂ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದ್ದು, ಹವಾಮಾನ ಇಲಾಖೆ (Karnataka Weather Forecast) ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

ಇದನ್ನೂ ಓದಿ: Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Bomb Threat: ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಲಾಗಿದೆ. “ಏರ್‌ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿದ್ದೇವೆ. ಇನ್ನು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ” ಎಂದು ಬೆದರಿಕೆ ಒಡ್ಡಲಾಗಿತ್ತು. “ಟೆರರೈಸರ್ಸ್ 111” ಸಂಘಟನೆ ಈ ಕೃತ್ಯದ ಹಿಂದೆ ಇದೆ ಎಂದು ಬೆದರಿಕೆ ಇಮೇಲ್ ತಿಳಿಸಿತ್ತು.

VISTARANEWS.COM


on

mangaluru airport bomb threat
Koo

ಮಂಗಳೂರು: ಮಂಗಳೂರು ಏರ್‌ಪೋರ್ಟ್ (Mangaluru Airport) ಕಚೇರಿಗೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಏರ್‌ಪೋರ್ಟ್‌ ಆವರಣದಲ್ಲಿ ಹಾಗೂ ಮೂರು ವಿಮಾನಗಳಲ್ಲಿಯೂ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಇಮೇಲ್‌ (threat Email) ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅನುಮಾನ ಬಂದ ಕಡೆಗಳಲ್ಲಿ ತಪಾಸಣೆ ಕೂಡ ನಡೆಸಲಾಗಿದೆ.

ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಲಾಗಿದೆ. “ಏರ್‌ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿದ್ದೇವೆ. ಇನ್ನು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ” ಎಂದು ಬೆದರಿಕೆ ಒಡ್ಡಲಾಗಿತ್ತು. “ಟೆರರೈಸರ್ಸ್ 111” ಸಂಘಟನೆ ಈ ಕೃತ್ಯದ ಹಿಂದೆ ಇದೆ ಎಂದು ಬೆದರಿಕೆ ಇಮೇಲ್ ತಿಳಿಸಿತ್ತು.

ಎಪ್ರಿಲ್ 29ರಂದೇ ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಅಂದೇ ತಪಾಸಣೆ ನಡೆದು ಇದೊಂದು ಹುಸಿ ಬೆದರಿಕೆ ಎಂಬುದು ರುಜುವಾತಾಗಿದೆ. ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಂಬ್ ಬೆದರಿಕೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಬಾಂಬ್ ಬೆದರಿಕೆ ವಿಷಯವನ್ನು ಗೌಪ್ಯವಾಗಿಟ್ಟು ಪೊಲೀಸರು ಭದ್ರತೆ ಹೆಚ್ಚಿಸಿದ್ದರು.

ಎರಡು ದಿನಗಳ ಹಿಂದೆ ದಿಲ್ಲಿಯ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಸ್ಫೋಟದ ಇಮೇಲ್‌ ಬೆದರಿಕೆ ಬಂದಿತ್ತು. ನೂರಾರು ಶಾಲೆಗಳಿಗೆ ಈ ಇಮೇಲ್‌ ಬಂದಿದ್ದು, ಇದರ ಮೂಲವನ್ನು ಪೊಲೀಸರು ಟ್ರೇಸ್‌ ಮಾಡಿದ್ದಾರೆ. ಬೆಂಗಳೂರಿನಲ್ಲಿಯೂ ಹಲವು ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್‌ ಬಂದಿದ್ದುದನ್ನು ನೆನಪಿಸಿಕೊಳ್ಳಬಹುದು. ಇದುವರೆಗೂ ಇಂಥ ಬೆದರಿಕೆ ಮೇಲ್‌ಗಳು ನಿಜವಾದ ಉದಾಹರಣೆ ಇಲ್ಲ.

ಆದರೆ, ಭದ್ರತಾ ಪಡೆಗಳು ರಿಸ್ಕ್‌ ತೆಗೆದುಕೊಳ್ಳಲು ಇಚ್ಛಿಸದೆ ತೀವ್ರ ತಪಾಸಣೆ ನಡೆಸುತ್ತವೆ ಹಾಗೂ ಸೈಬರ್‌ ಪೊಲೀಸರು ಇಂಥ ಇಮೇಲ್‌ಗಳ ಮೂಲದ ಬೆನ್ನು ಬೀಳುತ್ತಾರೆ. ಆದರೆ ಹೆಚ್ಚಾಗಿ ಇಂಥ ಇಮೇಲ್‌ಗಳ ಮೂಲ ಪತ್ತೆಯಾಗದಂತೆ ವಿಪಿಎನ್‌ ಮೂಲಕ ಕಾರ್ಯಾಚರಿಸಿ, ಯಾವುದೋ ವಿದೇಶದ ಸರ್ವರ್‌ನಿಂದ ಬಂದದ್ದು ಎಂದು ಕಾಣಿಸುವಂತೆ ಮಾಡಲಾಗುತ್ತಿದೆ.

ಇದನ್ನೂ ಓದಿ: Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Continue Reading

ಮಳೆ

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ಬೆಂಗಳೂರು (Bengaluru Rains) ಸೇರಿದಂತೆ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗಬಹುದು. ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಅಲ್ಲಲ್ಲಿ ಮಳೆಯಾಗಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯು ಅಬ್ಬರಿಸಲಿದ್ದರೆ, ಇತ್ತ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಪ್ರಮುಖವಾಗಿ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು ಸೇರಿ ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

ನಟ ಹಾಗೂ ಬಿಗ್‌ಬಾಸ್‌ ಕಂಟೆಸ್ಟಂಟ್‌ ಶೈನ್‌ ಶೆಟ್ಟಿ ಈ ಸಮ್ಮರ್‌ನಲ್ಲಿ (Summer Fashion) ಸಖತ್‌ ಕೂಲ್‌ ಆಗಿ ಕಾಣಿಸಿಕೊಂಡಿದ್ದಾರೆ.ಹೌದು, ಶೈನ್‌ ಶೆಟ್ಟಿಯವರ ಈ ಸೀಸನ್‌ನ ಸ್ಟೈಲ್‌ ಸ್ಟೇಟ್‌ಮೆಂಟ್ಸ್‌ ಯಾವ ಮಟ್ಟಿಗೆ ಪುರುಷರಿಗೆ ಇಷ್ಟವಾಗಿದೆ ಎಂದರೇ, ಇವರ ಫ್ಯಾನ್‌ ಫಾಲೋವಿಂಗ್‌ ಹುಡುಗರು ಮಾತ್ರವಲ್ಲ, ಕಾರ್ಪೋರೇಟ್‌ ಕ್ಷೇತ್ರದ ಹುಡುಗರು ಕೂಡ ಇವರ ಫ್ಯಾಷನ್‌ ಸ್ಟೇಟ್‌ಮೆಂಟ್‌ಗೆ ಮಾರು ಹೋಗಿದ್ದಾರೆ.

Shine Shetty Summer Fashion

ಶೈನ್‌ ಶೆಟ್ಟಿ ನ್ಯಾಚುರಲ್‌ ಲುಕ್‌

“ಶೈನ್‌ ಶೆಟ್ಟಿ ಮೊದಲಿನಿಂದಲೂ ನ್ಯಾಚುರಲ್‌ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇವರು ಮೂಲತಃ ಮಂಗಳೂರಿನವರಾಗಿರುವುದರಿಂದಲೋ ಏನೋ ಬಿಸಿಲಲ್ಲೂ ಆರಾಮಾಗಿ ಕಾಣಿಸಿಕೊಳ್ಳುತ್ತಾರೆ. ಅಲ್ಲದೇ, ತಮ್ಮ ಸಿಂಪಲ್‌ ಸ್ಟೈಲ್‌ ಸ್ಟೇಟ್‌ಮೆಂಟ್‌ನಿಂದಲೇ ಎಲ್ಲರನ್ನು ಸೆಳೆಯುತ್ತಾರೆ. ಹುಡುಗಿಯರು ಮಾತ್ರವಲ್ಲ, ಹುಡುಗರು ಕೂಡ ಇವರ ಲುಕ್‌ಗೆ ಫಿದಾ ಆಗುತ್ತಾರಂತೆ. ತೀರಾ ಫ್ಯಾಷನ್‌ ಕಾನ್ಶಿಯಸ್‌ ಕೂಡ ಅಲ್ಲದ ಇವರ ಪ್ರತಿಯೊಂದು ಫ್ಯಾಷನ್‌ ಸ್ಟೇಟ್‌ಮೆಂಟ್‌ಗಳು ಕೂಡ ಇವರನ್ನು ಸದಾ ನ್ಯಾಚುರಲ್‌ ಲುಕ್‌ನಲ್ಲಿ ಬಿಂಬಿಸುತ್ತವಂತೆ. ಇನ್ನು, ಇವರ ತಿಳಿ ವರ್ಣದ ಸ್ಕಿನ್‌ ಟೋನ್‌ನಿಂದಾಗಿ ಅವರು ಧರಿಸುವ ಎಲ್ಲಾ ಬಗೆಯ ಔಟ್‌ಫಿಟ್ಸ್‌ ಕೂಡ ಇವರಿಗೆ ಮ್ಯಾಚ್‌ ಆಗುತ್ತವಂತೆ. ಎಲ್ಲದಕ್ಕಿಂತ ಹೆಚ್ಚಾಗಿ ಇವರ ಯೂನಿಕ್‌ ಫ್ಯಾಷನ್‌ನಲ್ಲಿ ಸೇರಿರುವ ಸಿಂಪಲ್‌ ಸ್ಮೈಲ್‌ ಇಡೀ ಲುಕ್‌ಗೆ ಸಾಥ್‌ ನೀಡುವುದನ್ನು ಗಮನಿಸಬಹುದು” ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರಾದ ಅಮಿತ್‌ ಪಾಂಡ್ಯಾ ಅವರ ಪ್ರಕಾರ, ಕೆಲವು ನಟರು ತಮ್ಮ ನ್ಯಾಚುರಲ್‌ ಲುಕ್‌ನಿಂದಾಗಿಯೇ ಆಕರ್ಷಕವಾಗಿ ಕಾಣಿಸುತ್ತಾರೆ. ಇದು ಅವರ ಪ್ಲಸ್‌ ಪಾಯಿಂಟ್‌ ಎನ್ನುತ್ತಾರೆ.

Shine Shetty Summer Fashion

ಶೈನ್‌ ಶೆಟ್ಟಿ ಸಮ್ಮರ್‌ ಲುಕ್‌ನಲ್ಲಿ ಏನಿದೆ?

ಮನಸ್ಸಿಗೆ ಮುದ ನೀಡುವಂತಹ ಶೇಡ್‌ನ ಔಟ್‌ಫಿಟ್‌! ವೈಟ್‌ ಪ್ಯಾಂಟ್‌ ಕಾಟನ್‌ ಪ್ರಿಂಟೆಡ್‌ ಶರ್ಟ್.‌ ಜೊತೆಗೆ ಅದಕ್ಕೆ ಹೊಂದುವ ಹೇರ್‌ಸ್ಟೈಲ್‌, ಸಿಂಪಲ್‌ ಚಪ್ಪಲಿ ಎಲ್ಲವೂ ಶೈನ್‌ ಸಮ್ಮರ್‌ ಲುಕ್‌ನಲ್ಲಿ ಸೇರಿದೆ. ಸನ್‌ ಗ್ಲಾಸ್‌ ಇವರನ್ನು ಮತ್ತಷ್ಟು ಹ್ಯಾಂಡ್‌ಸಮ್‌ ಆಗಿ ಕಾಣುವಂತೆ ಬಿಂಬಿಸಿದೆ. ಇವರ ಒಟ್ಟಾರೆ ಲುಕ್ಗೆ ಫ್ಯಾಷನ್‌ ಸ್ಟೈಲಿಸ್ಟ್‌ಗಳಾದ ತೇಜಸ್ವಿನಿ ಹಾಗೂ ಖುಷಿಯವರ ಸ್ಟೈಲಿಂಗ್‌ ಸಪೋರ್ಟ್‌ ಇದೆ.

Shine Shetty Summer Fashion

ಶೈನ್‌ ಶೆಟ್ಟಿ ಫ್ಯಾಷನ್‌ ಮಂತ್ರ

ಇನ್ನು, ಕಳೆದ ಬಾರಿ ವಿಸ್ತಾರ ನ್ಯೂಸ್‌ನೊಂದಿಗೆ ತಮ್ಮ ಫ್ಯಾಷನ್‌ ಹಾಗೂ ಸ್ಟೈಲ್‌ಸ್ಟೇಟ್‌ಮೆಂಟ್‌ ಬಗ್ಗೆ ಮಾತನಾಡಿದ್ದ ಶೈನ್‌ ಶೆಟ್ಟಿ, ನಾನಂತೂ ಇದುವೆರಗೂ ಇಂತಹದ್ದೇ ಫ್ಯಾಷನ್‌ ಹಾಗೂ ಸ್ಟೈಲ್‌ ಫಾಲೋಮಾಡಬೇಕೆಂಬ ರೂಲ್ಸ್‌ ಹಾಕಿಕೊಂಡಿಲ್ಲ! ಯಾವುದಾದರೂ ಸರಿಯೇ ನೋಡುಗರಿಗೆ ಪ್ಲೆಸೆಂಟ್‌ ಆಗಿ ಕಾಣಿಸಬೇಕು. ಧರಿಸಿದ ಮನಕ್ಕೂ ಮುದ ನೀಡಬೇಕು. ಸೀಸನ್‌ಗೆ ತಕ್ಕಂತೆ ಉಡುಪುಗಳನ್ನು ಆಯ್ಕೆ ಮಾಡಿ ಧರಿಸಬೇಕು. ಇನ್ನು ಕಲರ್‌ಗಳ ವಿಷಯಕ್ಕೆ ಬಂದಲ್ಲಿ, ನಮ್ಮ ಮುಖಕ್ಕೆ ಹಾಗೂ ಸಿನ್‌ ಟೋನ್‌ಗೆ ಹೊಂದುವಂತಹ ಬಣ್ಣದ ಉಡುಗೆಗಳನ್ನು ಸೆಲೆಕ್ಟ್‌ ಮಾಡುವುದು ಉತ್ತಮ ಎಂದಿದ್ದರು. ಇನ್ನು, ತಾರೆಯರ ಫ್ಯಾಷನ್‌ ಫಾಲೋ ಮಾಡಲು ಬಯಸುವ ಹುಡುಗರು, ಮೊದಲಿಗೆ ತಾವು ಕಾಪಿ ಮಾಡುತ್ತಿರುವ ಸ್ಟೈಲಿಂಗ್‌ ಮ್ಯಾಚ್‌ ಆಗುತ್ತವೆಯೇ! ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಅದನ್ನು ಬಿಟ್ಟು, ಸುಖಸುಮ್ಮನೇ, ಕಂಡ ಕಂಡ ಫ್ಯಾಷನ್‌ ಫಾಲೋ ಮಾಡುವುದಲ್ಲ. ಇಮಿಟೇಟ್‌ ಮಾಡುವಾಗಲು ಅದು ತಮಗೆ ಹೊಂದುತ್ತದೆಯೇ ಎಂಬುದನ್ನು ಅರಿಯಬೇಕು ಎಂದು ಹುಡುಗರಿಗೆ ಸಲಹೆ ನೀಡಿದ್ದರು.

ಹುಡುಗರಿಗೆ ಫ್ಯಾಷನ್‌ ವಿಮರ್ಶಕರ ಟಿಪ್ಸ್‌

ಶೈನ್‌ ಶೆಟ್ಟಿಯಂತೆ ಸಮ್ಮರ್‌ ಫ್ಯಾಷನ್‌ ಫಾಲೋ ಮಾಡುವವರು ಕೆಲವು ವಿಷಯಗಳನ್ನು ಮನದಲ್ಲಿಟ್ಟುಕೊಳ್ಳಬೇಕು.

  • 1. ಲೈಟ್‌ ಶೇಡ್‌ ಆಯ್ಕೆ ಮಾಡಬೇಕು.
  • 2. ಕಾಟನ್‌ ಶರ್ಟ್‌ ಆಯ್ಕೆ ಉತ್ತಮ.
  • 3. ಗಾಳಿಯಾಡುವಂತಹ ಪಾದರಕ್ಷೆಗಳು ಕೂಲ್‌ ಆಗಿರಿಸುತ್ತವೆ.
  • 4. ಸನ್‌ಗ್ಲಾಸ್‌ ಬಿಸಿಲಿನಿಂದ ಕಣ್ಣುಗಳನ್ನು ಸಂರಕ್ಷಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Drought Relief
ಕರ್ನಾಟಕ22 mins ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ29 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ48 mins ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ48 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ1 hour ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ1 hour ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್2 hours ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 20242 hours ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest2 hours ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ2 hours ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case No evidence against me its a conspiracy says HD Revanna
ಕರ್ನಾಟಕ29 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ48 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌