weather report Rain likely to occur in coastal areas including BengaluruWeather report: ಸೋಮವಾರ ಇರಲಿದೆ ಬಿರುಗಾಳಿ ಸಹಿತ ಮಳೆಯ ಅಬ್ಬರ; ವಾಹನ ಚಾಲನೆಯಲ್ಲಿರಲಿ ಎಚ್ಚರ - Vistara News

ಉಡುಪಿ

Weather report: ಸೋಮವಾರ ಇರಲಿದೆ ಬಿರುಗಾಳಿ ಸಹಿತ ಮಳೆಯ ಅಬ್ಬರ; ವಾಹನ ಚಾಲನೆಯಲ್ಲಿರಲಿ ಎಚ್ಚರ

Bangalore Rain: ಬೆಂಗಳೂರಿಗರೇ ನೀವೇನಾದರೂ ಸೋಮವಾರ (ಮೇ 29) ಹೊರಗೆ ಹೋಗುವ ಪ್ಲ್ಯಾನ್ ಹಾಕಿಕೊಂಡಿದ್ದರೆ ಬೇಗ ಮುಗಿಸಿಕೊಳ್ಳಿ. ಇಲ್ಲವಾದರೆ ನಿಮಗೆ ವರುಣ ಅಡ್ಡಿಯಾಗುವುದಂತೂ ಖಂಡಿತ. ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

VISTARANEWS.COM


on

Belagavi Rain Effect
ಬೆಳಗಾವಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಅದ್ಧೂರಿ ರೋಡ್ ಶೋಗೆ ಮಳೆ ಅಡ್ಡಿ, ಟೀ ಸ್ಟಾಲ್ ಕೆಳಗೆ ಕುಳಿತ ಕಾರ್ಯಕರ್ತರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರು (Bangalore Rain) ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ (Weather update) ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದೆ.

ಇತ್ತ ಬೆಂಗಳೂರಲ್ಲಿ ಮುಂಜಾನೆ ಹೊತ್ತು ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಗುಡುಗು, ಮಿಂಚಿನೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ ಹಾಗೂ ಚಾಮರಾಜನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬೀದರ್ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಇರಲಿದೆ.

ಈ ಜಿಲ್ಲೆಗಳಲ್ಲಿ ಭಾನುವಾರ ಮಳೆ ಎಚ್ಚರಿಕೆ

ಭಾನುವಾರ (ಮೇ 28) ಸಂಜೆ ಅಥವಾ ರಾತ್ರಿಯ ಸಮಯ ಹಾಸನ, ಯಾದಗಿರಿ, ರಾಮನಗರ ಚಿತ್ರದುರ್ಗ, ವಿಜಯನಗರ, ದಾವಣಗೆರೆ, ಬೀದರ್ ಮತ್ತು ಕಲಬುರಗಿಯಲ್ಲಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ವೇಳೆ ಗಾಳಿಯ ವೇಗವು ಗಂಟೆಗೆ 30- 40 ಕಿ.ಮೀ ವ್ಯಾಪ್ತಿಯಲ್ಲಿ ಇರುತ್ತದೆ. ಹೀಗಾಗಿ ಈ ಸಮಯದಲ್ಲಿ ವಾಹನ ಸವಾರರು ಜಾಗ್ರತೆ ವಹಿಸುವಂತೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ: Drowned: ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿ ಯುವಕ ನೀರುಪಾಲು; ಕಾಡಾನೆ ದಾಳಿಗೆ ಮಹಿಳೆ ಬಲಿ

ಜತೆಗೆ ಚಾಮರಾಜನಗರ, ಮೈಸೂರು, ಗದಗ, ಧಾರವಾಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Rain Effect
ದಿಢೀರ್‌ ಮಳೆಯಿಂದ ತಪ್ಪಿಸಿಕೊಳ್ಳಲು ಕುರ್ಚಿಗಳ ಆಸರೆ ಪಡೆದ ಕಾಂಗ್ರೆಸ್‌ ಕಾರ್ಯಕರ್ತರು

ಬೆಳಗಾವಿಯಲ್ಲಿ ಕೈ ಕಾರ್ಯಕರ್ತರ ಸಂಭ್ರಮಕ್ಕೆ ಮಳೆ ಅಡ್ಡಿ

ಭಾನುವಾರ ಬೆಳಗಾವಿಯಲ್ಲಿ ಸಚಿವರ ತೆರೆದ ವಾಹನ ಮೆರವಣಿಗೆಗೆ ಮಳೆರಾಯನ ಅಡ್ಡಿಯಾಗಿದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್‌‌ಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಲು ಮುಂದಾಗಿದ್ದರು. ಜಿಲ್ಲಾ ಕಾಂಗ್ರೆಸ್ ಭವನದಿಂದ ಮೆರವಣಿಗೆ ನಡೆಸಲು ನಿರ್ಧರಿಸಲಾಗಿತ್ತು. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು ಜಮಾಯಿಸಿದ್ದರು. ಆದರೆ ಏಕಾಏಕಿ ಧಾರಾಕಾರ ಮಳೆ ಹಿನ್ನೆಲೆ ಕಾಂಗ್ರೆಸ್ ಭವನ, ಟೀ ಸ್ಟಾಲ್ ಕೆಳಗೆ ಆಸರೆ ಪಡೆದರು. ಮಾತ್ರವಲ್ಲದೇ ಕೂರಲು ಹಾಕಿದ್ದ ಕುರ್ಚಿಗಳನ್ನು ಹಿಡಿದು ನಿಂತಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

Udupi Sri Krishna Temple: ಉಡುಪಿ ಕೃಷ್ಣ ದೇವಸ್ಥಾನದಲ್ಲಿ ಬೆಳ್ಳಿಯ ಕಮಲ ಪುಷ್ಪದಲ್ಲಿ ಕುಳಿತು ಕೈಯಲ್ಲಿ ಕಮಲದ ಹೂ ಹಿಡಿದ ಕೃಷ್ಣದೇವರನ್ನು ಸಾವಿರಾರು ಭಕ್ತರು ದರ್ಶನ ಮಾಡಿದರು.

VISTARANEWS.COM


on

Udupi Sri Krishna Temple
Koo

ಉಡುಪಿ: ಲೋಕಸಭಾ ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಉಡುಪಿ ಶ್ರೀ ಕೃಷ್ಣನಿಗೆ ಶುಕ್ರವಾರ ವಿಶೇಷ ಅಲಂಕಾರ ಮಾಡಲಾಗಿತ್ತು. ಕಮಲಾರೂಢನಾಗಿ ಶ್ರೀ ಕೃಷ್ಣ, ಭಕ್ತರಿಗೆ ದರ್ಶನ ನೀಡಿದ. ಪುತ್ತಿಗೆ ಶ್ರೀಗಳು ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಿದರು. ಬೆಳ್ಳಿಯ ಕಮಲ ಪುಷ್ಪದಲ್ಲಿ ಕುಳಿತು ಕೈಯಲ್ಲಿ ಕಮಲದ ಹೂ ಹಿಡಿದ ಕೃಷ್ಣದೇವರನ್ನು ಸಾವಿರಾರು ಭಕ್ತರು ದರ್ಶನ ಮಾಡಿದರು.

ಇದನ್ನೂ ಓದಿ | Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

Continue Reading

ಮಳೆ

Karnataka Weather : ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

Karnataka Weather Forecast : ಬೆಂಗಳೂರು ನಗರವು ಬಿಸಿಲ ನಗರೀಯಾಗಿ ಮಾರ್ಪಾಟ ಆಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ. ಎಲ್ಲ ಕಾಲದಲ್ಲೂ ಕೂಲ್‌ ಆಗಿದ್ದ ಬೆಂಗಳೂರು ಇದೀಗ ಹಾಟ್‌ ಸಿಟಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಹಗುರ ಮಳೆ ನಡುವೆಯೂ (rain News) ಮತ್ತೆ ತಾಪಮಾನ ಏರಿಕೆ ಹಾಗೂ ಶಾಖದ ಅಲೆಗಳ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡುತ್ತಿದೆ. ಏ.26ರಿಂದ 30ರವರೆಗೆ ಹಲವು ಜಿಲ್ಲೆಗಳಿಗೆ ಹೀಟ್‌ ವೇವ್‌ (Heat Wave) ಅಲರ್ಟ್‌ ನೀಡಲಾಗಿದೆ. ಮುಂದಿನ 5 ದಿನಗಳು ತಾಪಮಾನದಲ್ಲಿ ಏರಿಳಿತ ಉಂಟಾಗಲಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ತಾಪಮಾನ ಏರಿಕೆ ಆಗಲಿದೆ.

ಉತ್ತರ ಕರ್ನಾಟಕಕ್ಕೂ ಸೆಡ್ಡು ಹೊಡೆಯುತ್ತಿರುವ ಬೆಂಗಳೂರು

ರಾಜಧಾನಿ ಬೆಂಗಳೂರಲ್ಲಿ ಬಿಸಿಲಿನ ವಾತಾವರಣವೇ ಮುಂದುವರಿಯಲಿದೆ. ಬೆಳಗಿನ ಸಮಯ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೆ ಮಧ್ಯಾಹ್ನದ ನಂತರ ಆಕಾಶವು ನಿರ್ಮಲವಾಗಿರದೆ. ಗರಿಷ್ಠ ಹಾಗೂ ಕನಿಷ್ಟ ಉಷ್ಣಾಂಶವು ಕ್ರಮವಾಗಿ 38 ಹಾಗೂ 23 ಡಿ.ಸೆ ಇರಲಿದೆ. ಕೂಲ್‌ ಆಗಿದ್ದ ಬೆಂಗಳೂರು ನಗರವು ಇದೀಗ ಹಾಟ್‌ ಸಿಟಿಯಾಗಿ ಮಾರ್ಪಾಟ್ಟಿದ್ದು, ಹಳೇಯ ದಾಖಲೆಯನ್ನು ಉಡೀಸ್‌ ಆಗಿದೆ. ಕಳೆದ 12 ವರ್ಷಗಳಲ್ಲೇ ಅತ್ಯಾಧಿಕ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಗುರುವಾರ ಹಾಗೂ ಶುಕ್ರವಾರ ಗರಿಷ್ಠ ಉಷ್ಣಾಂಶವು 38ಕ್ಕೆ ಹೋಗಿತ್ತು, ಶನಿವಾರ ಇದೇ ಪರಿಸ್ಥಿತಿ ಮುಂದುವರಿಯಲಿದೆ.

ಏ. 27, 28ರಂದು ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ತುಮಕೂರು, ಮಂಡ್ಯ, ಗದಗ, ದಾವಣಗೆರೆ ಮತ್ತು ಚಿತ್ರದುರ್ಗಕ್ಕೆ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

ರಾಯಚೂರಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಬುಧವಾರದಂದು ಕೋಲಾರದಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 20.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 43.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಉಳಿದಂತೆ ಹಾಸನ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರದಲ್ಲಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ನಿಂದ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಯಚೂರು, ಕಲಬುರಗಿ, ಬೀದರ್, ಕೊಪ್ಪಳ, ಬಾಗಲಕೋಟೆ, ಯಾದಗಿರಿ ಮತ್ತು ಬಳ್ಳಾರಿ, ವಿಜಯಪುರದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ನಿಂದ 44 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ.

ಇದನ್ನೂ ಓದಿ: Lok Sabha Election 2024 : ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು; ಲಂಡನ್‌ನಿಂದ ಮಂಡ್ಯಕ್ಕೆ ಬಂದ ಮಹಿಳೆ

ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ಬಿಸಿಲಿನ ಝಳ (ORS) ನೆತ್ತಿ ಸುಡುವಂತಿದೆ. ತಾಪಮಾನ 40 ಡಿಗ್ರಿ ಸೆ. ಆಚೀಚೆ ಬರುತ್ತಿದ್ದಂತೆ ನಿರ್ಜಲೀಕರಣಕ್ಕೆ ತುತ್ತಾಗದಂತೆ ಕಾಪಾಡಿಕೊಳ್ಳಲು ಹಲವು ಪ್ರಯತ್ನಗಳಲ್ಲಿ ಜನ ನಿರತರಾಗಿರುವುದು ಕಂಡುಬರುತ್ತದೆ. ಅವುಗಳಲ್ಲಿ ಪ್ರಮುಖ ಪೇಯವೆಂದರೆ ಒಆರ್‌ಎಸ್‌ ಅಥವಾ ಓರಲ್‌ ರಿಹೈಡ್ರೇಶನ್‌ ಸೊಲ್ಯೂಶನ್‌.

ದೇಹಕ್ಕೆ ಅಗತ್ಯವಾದ ನೀರು, ಸಕ್ಕರೆ ಮತ್ತು ಲವಣಗಳನ್ನು ಹೊಂದಿರುವ ಈ ದ್ರಾವಣದ ಸೇವನೆಯಿಂದ ನಿರ್ಜಲೀಕರಣಕ್ಕೆ ತುತ್ತಾಗಿ ಪ್ರಾಣಾಪಾಯ ಆಗುವುದರಿಂದ ಪಾರಾಗಬಹುದು. ಆದರೆ ಇದನ್ನು ಯಾರು, ಎಷ್ಟು ಕುಡಿಯಬಹುದು? ಸೆಕೆಗೆ ತತ್ತರಿಸುತ್ತಿರುವ ಈ ದಿನಗಳಲ್ಲಿ ಒಆರ್‌ಎಸ್‌ನಂಥವು ಎಷ್ಟು ಬೇಕಿದ್ದರೂ ಹೊಟ್ಟೆ ಸೇರುತ್ತವೆ. ಆದರೆ ಇದನ್ನು ಎಷ್ಟು ಕುಡಿದರೆ ಸಾಕು ಮತ್ತು ಬೇಕು? ನಿರ್ಜಲೀಕರಣದಿಂದ ಕಳೆದುಕೊಂಡ ಖನಿಜಾಂಶಗಳನ್ನು ಮತ್ತು ನೀರನ್ನು ದೇಹಕ್ಕೆ ಮರಳಿ ಒದಗಿಸಿಕೊಡುವ ವ್ಯವಸ್ಥಿತವಾದ ಮಾರ್ಗವಿದು.

ಬೇಸಿಗೆಯ ತೀವ್ರತೆ ವಿಪರೀತವಾದ ಮೇಲೆ ರಾಜಧಾನಿಯೊಂದರಲ್ಲೇ ಒಆರೆಸ್‌ ಮಾರಾಟ ಶೇ. ೬೦ರಷ್ಟು ಹೆಚ್ಚಿದೆ. ಅದರಲ್ಲೂ ವಾಂತಿ, ಡಯರಿಯಾ, ಸುಸ್ತು ಮತ್ತು ನಿರ್ಜಲೀಕರಣದ ಲಕ್ಷಣಗಳು ಕಾಣುತ್ತಿದ್ದಂತೆ ಒಂದು ಸ್ಯಾಶೆ ಒಆರೆಸ್‌ ನೀರಿಗೆ ಬೆರೆಸಿ ಕುಡಿದರೆ, ಜೀವಕ್ಕೆ ತಂಪಾಗುತ್ತದೆ ಎಂಬುದು ಬಹುತೇಕ ಮಂದಿಗೆ ಅನುಭವಕ್ಕೆ ಬಂದಿದೆ. ಆದರೆ ನಮಗೆ ನಿಜಕ್ಕೂ ಓಆರೆಸ್‌ ಅಗತ್ಯ ಬೀಳುವುದು ಯಾವಾಗ? ಮಧುಮೇಹ ಇದ್ದವರೂ ಇದನ್ನು ಕುಡಿಯಬಹುದೇ? ಮಕ್ಕಳಿಗೂ ಸೂಕ್ತವೇ? ಒಆರೆಸ್‌ ಪುಡಿ ಒಳ್ಳೆಯದೋ ಅಥವಾ ಜ್ಯೂಸ್‌ ರೀತಿಯಲ್ಲಿರುವ ಒಆರೆಸ್ಸೆಲ್‌ ಒಳ್ಳೆಯದೋ?

ors drink

ಏನಿದು ಒಆರ್‌ಎಸ್‌

ರಾಬರ್ಟ್‌ ಕ್ರೇನ್‌ ಎಂಬಾತ ಇದರ ಮಹತ್ವವನ್ನು ತಿಳಿಸಿಕೊಟ್ಟವ. 1960ರ ಸುಮಾರಿಗೆ ವಾಂತಿ, ಅತಿಸಾರದಿಂದ ಆಗುತ್ತಿದ್ದ ಪ್ರಾಣಾಪಾಯಗಳನ್ನು ತಡೆಯುವುದಕ್ಕೆ ಈ ದ್ರಾವಣದ ಸೇವನೆಯನ್ನು ಜಾರಿಗೆ ತರಲಾಗಿತ್ತು. ವಾಂತಿ-ಭೇದಿಯಿಂದ ಆಗುತ್ತಿದ್ದ ನಿರ್ಜಲೀಕರಣ ತಪ್ಪಿಸಲು ರಕ್ತನಾಳಕ್ಕೆ ಗ್ಲೂಕೋಸ್‌ ಕೊಡುವ ಪದ್ಧತಿ ಆಗ ಚಾಲ್ತಿಯಲ್ಲಿತ್ತು. ಆದರೆ ಎಲ್ಲ ಕಡೆಯೂ ಚಿಕಿತ್ಸೆಯನ್ನು ನೀಡಲಾಗುತ್ತಿರಲಿಲ್ಲ. ಆಗ ಒಆರೆಸ್‌ ಎಂಬ ಜೀವಜಲದ ಸೇವನೆ ವರದಾನವಾಗಿ ಪರಿಣಮಿಸಿತ್ತು. ಇದು ಗ್ಲೂಕೋಸ್‌, ಸೋಡಿಯಂ ಕ್ಲೋರೈಡ್‌, ಪೊಟಾಶಿಯಂ ಕ್ಲೋರೈಡ್‌ ಮತ್ತು ಸೋಡಿಯಂ ಸಿಟ್ರೇಟ್‌ಗಳ ಮಿಶ್ರಣವಾಗಿದೆ. ಜೊತೆಗೆ ಜಿಂಕ್‌ ಸಹ ಸೇರಿರುವುದರಿಂದ ವಾಂತಿ- ಅತಿಸಾರದ ಲಕ್ಷಣಗಳ ಉಪಶಮನಕ್ಕೆ ನೆರವಾಗುತ್ತದೆ.

ಯಾವಾಗ ಕುಡಿಯಬೇಕು?

ನಿರ್ಜಲೀಕರಣದ ಪ್ರಾರಂಭಿಕ ಲಕ್ಷಣಗಳು ಗೋಚರವಾಗುತ್ತಿದ್ದಂತೆ ಒಆರೆಸ್‌ ಸೇವನೆಯನ್ನು ಪ್ರಾರಂಭಿಸುವುದು ಸೂಕ್ತ. ಅಂದರೆ ತೀವ್ರ ಬಾಯಾರಿಕೆ. ತುಟಿಗಳೆಲ್ಲ ಒಣಗಿದಂತಾಗುವುದು, ಮೂತ್ರ ಕಡಿಮೆಯಾಗುವುದು, ಮೂತ್ರದ ಬಣ್ಣ ಗಾಢವಾಗುವುದು, ಸುಸ್ತು, ಆಯಾಸ, ತಲೆ ಸುತ್ತುವುದು, ತಲೆಯೊಳಗೆ ನೋವು… ಇಂಥ ಯಾವುದೇ ಅನುಭವಕ್ಕೆ ಬಂದರೂ ಒಆರೆಸ್‌ ಸೇವನೆಯನ್ನು ಆರಂಭಿಸಬಹುದು. ಬಿಸಿಲಿನ ತೀವ್ರತೆ ಸಿಕ್ಕಾಪಟ್ಟೆ ಇರುವ ದಿನಗಳಲ್ಲಿ, ಮನೆಯೊಳಗಿದ್ದರೂ ಸುಸ್ತು, ಆಯಾಸ, ಸಂಕಟ ಕಾಡುತ್ತಿರುವ ಹೊತ್ತಿನಲ್ಲಿ ಒಂದು ಲೋಟ ಒಆರೆಸ್‌ ನೀರು ಕುಡಿಯುವುದು ಜೀವವನ್ನು ತಂಪಾಗಿಸುತ್ತದೆ.

ಎಷ್ಟು ಕುಡಿಯಬೇಕು?

ಇದು ಆ ವ್ಯಕ್ತಿಯ ದೇಹಸ್ಥಿತಿಯನ್ನು ಅವಲಂಬಿಸಿದೆ. ನಿರ್ಜಲೀಕರಣದ ಲಕ್ಷಣಗಳು ಸ್ವಲ್ಪ ಅಥವಾ ಮಧ್ಯಮ ಪ್ರಮಾಣದಲ್ಲಿದ್ದರೆ, ಸುಮಾರು 20-25 ಎಂ.ಎಲ್‌ನಷ್ಟು ಒಆರೆಸ್‌ ದ್ರಾವಣವನ್ನು ಒಮ್ಮೆ ಗುಟುಕರಿಸುವುದು. ಪ್ರತಿ 10-15 ನಿಮಿಷಗಳಿಗೆ ಇದನ್ನೇ ನಿಯಮಿತವಾಗಿ ಮುಂದುವರಿಸುವುದು. ದಾಹ ಕಡಿಮೆಯಾಗಿ, ಬಾಯಿ ಒಣಗುವುದು ನಿಂತು, ಮೂತ್ರ ಹೆಚ್ಚಾಗಿ, ಮೂತ್ರದ ಬಣ್ನ ತಿಳಿಯಾಗಿ, ಸುಸ್ತು ಕಡಿಮೆಯಾಗುವವರೆಗೂ ಇದನ್ನೇ ಮುಂದುವರಿಸಬೇಕು. ಅಗತ್ಯವಿದ್ದರೆ ಇದನ್ನು ದಿನವಿಡೀ ಮಾಡಬಹುದು. ಆದರೆ ನಿರ್ಜಲೀಕರಣ ತೀವ್ರವಾಗಿದ್ದರೆ ಒಆರೆಸ್‌ ಪ್ರಮಾಣ ಹೆಚ್ಚು ಬೇಕಾಗುತ್ತದೆ. ಇದಕ್ಕೆ ವೈದ್ಯರಲ್ಲಿ ಸಲಹೆ ಕೇಳುವುದು ಒಳಿತು.

ಯಾರೆಲ್ಲ ಕುಡಿಯಬಹುದು?

ಬೇಸಿಗೆಯ ಹೊಡೆತ ತೀವ್ರವಾಗಿರುವ ಈ ದಿನಗಳಲ್ಲಿ ಬಹುತೇಕ ಎಲ್ಲರೂ ಇದನ್ನು ಸೇವಿಸಬಹುದು. ಆದರೆ ಹೃದ್ರೋಗಿಗಳು, ಕಿಡ್ನಿ ಸಮಸ್ಯೆ ಇರುವವರು ವೈದ್ಯರ ಸಲಹೆಯನ್ನು ತೆಗೆದುಕೊಳ್ಳಬೇಕು. ಅಗತ್ಯವಿದ್ದಾಗ ಮಧುಮೇಹಿಗಳು ಸಹ ಇದನ್ನು ಸೇವಿಸಬಹುದು. ಆದರೆ ನಿಯಮಿತವಾಗಿ ಸೇವಿಸುವ ಅಗತ್ಯವಿದ್ದರೆ ಸಕ್ಕರೆಯಂಶದ ಮೇಲೆ ಕಣ್ಣಿಡಬೇಕಾಗುತ್ತದೆ. ಹಾಗಾಗಿ ಅವರೂ ವೈದ್ಯರಲ್ಲಿ ಸಮಾಲೋಚನೆ ಮಾಡುವುದು ಕ್ಷೇಮ. ಇದರಿಂದ ಯಾವಾಗ, ಎಷ್ಟು ಕುಡಿಯಬಹುದು ಎಂಬುದು ಸ್ಪಷ್ಟವಾಗುತ್ತದೆ.

Boy Drinking Water from Glass

ಮಕ್ಕಳಿಗೆ ನೀಡಬಹುದೇ?

ಖಂಡಿತ. ಆರು ತಿಂಗಳ ನಂತರದ ಶಿಶುಗಳಿಗೂ ಒಆರೆಸ್‌ನಿಂದ ಅನುಕೂಲವಾಗುತ್ತದೆ. ಬಿಸಿಲ ದಿನಗಳಲ್ಲಿ, 6-24 ತಿಂಗಳ ಮಕ್ಕಳಿಗೆ, ದಿನಕ್ಕೆ 20 ಚಮಚ ಒಆರೆಸ್‌ ನೀಡಬಹುದು. 2-5 ವರ್ಷದ ಮಕ್ಕಳಿಗೆ 40 ಚಮಚ ಒಆರೆಸ್‌ ನೀಡಬಹುದು. 5 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಅವು ಕುಡಿದು ತಡೆಯುವಷ್ಟು ನೀಡಬಹುದು. ವಯಸ್ಕರಿಗಿಂತ ಮಕ್ಕಳೇ ಹೆಚ್ಚು ನಿರ್ಜಲೀಕರಣಕ್ಕೆ ತುತ್ತಾಗುವುದರಿಂದ ಒಆರೆಸ್‌ ದ್ರಾವಣ ಎಳೆಯರ ಪಾಲಿನ ಜೀವಜಲ.

ಯಾವುದು ಒಳ್ಳೆಯದು?

ವಾಂತಿ, ಅತಿಸಾರದಂಥ ತೊಂದರೆ ಇರುವಾಗ ಒಆರ್‌ಎಸ್‌ ಪುಡಿಯೇ ಸೂಕ್ತವಾದದ್ದು. ಅದರ ಮೇಲೆ ನಮೂದಿಸಿರುವ ಪ್ರಮಾಣವನ್ನು ತಪ್ಪದೆ ಪಾಲಿಸಬೇಕು. ಒಆರೆಸೆಲ್‌ನಲ್ಲಿ ಬಣ್ಣ ಮತ್ತು ಸುವಾಸನೆಯನ್ನು ಸೇರಿಸಿರುವ ಸಾಧ್ಯತೆ ಹೆಚ್ಚಿರುವುದರಿಂದ, ಚಿಕಿತ್ಸೆಗೆ ಪುಡಿಯೇ ಸೂಕ್ತ. ಹಾಗಲ್ಲದೆ ಬೇಸಿಗೆಯ ಹೊಡೆತ ತಡೆಯುವಾಗ, ಸಾಮಾನ್ಯ ಸುಸ್ತು, ಆಯಾಸಗಳ ಪರಿಹಾರಕ್ಕಾದರೆ ಯಾವುದನ್ನಾದರೂ ಬಳಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

Lok Sabha Election 2024: ಅದಮಾರು ಶ್ರೀಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಬಾರಿ ಮತದಾನ ಮಾಡುವಂತಾಗಿದೆ. ಶುಕ್ರವಾರ ಬೆಳಗ್ಗೆಯೇ ಮತಗಟ್ಟೆ ಮುಂದೆ ಇದ್ದ ಅದಮಾರು ಶ್ರೀಗಳು ಮೊದಲಿಗರಾಗಿ ಮತದಾನ ಮಾಡಿದರು. ನೋಂದಣಿ ಮಾಡಿ, ಕೈಗೆ ಇಂಕ್ ಹಾಕಿಸಿಕೊಂಡು, ಬಟನ್ ಪ್ರೆಸ್ ಮಾಡಿದ್ದರು. ಆದರೆ, ಬೀಪ್‌ ಸೌಂಡ್‌ ಕೇಳಲೇ ಇಲ್ಲ. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದಕ್ಕೆ ಅಧಿಕಾರಿಗಳು ಮತದಾನವಾಗಿದೆ ಎಂದು ಉತ್ತರ ಹೇಳಿದ್ದಾರೆ. ಹೀಗಾಗಿ ಅದಮಾರು ಶ್ರೀ ಮತಗಟ್ಟೆಯಿಂದ ವಾಪಾಸ್ ಆಗಿದ್ದರು. ಪುನಃ ಪರಿಶೀಲನೆ ಮಾಡಿದ್ದರಿಂದ ಅವರಿಗೆ ಮತ್ತೊಂದು ಸುತ್ತು ಮತದಾನ ಮಾಡಲು ಅವಕಾಶವನ್ನು ಕಲ್ಪಿಸಲಾಯಿತು.

VISTARANEWS.COM


on

Lok Sabha Election 2024 Sri Vishwapriya Theertha Swamiji of Adamaru Mutt casts his vote for second time
Koo

ಉಡುಪಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ (Udupi Chikkamagaluru Lok Sabha constituency) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಉಡುಪಿಯಲ್ಲಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು (Adamaru Mutt Sri Vishwapriya Theertha Swamiji) ಎರಡೆರಡು ಬಾರಿ ಮತ ಚಲಾವಣೆ ಮಾಡಿದ ಪ್ರಸಂಗ ನಡೆದಿದೆ.

ಅದಮಾರು ಶ್ರೀಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಬಾರಿ ಮತದಾನ ಮಾಡುವಂತಾಗಿದೆ. ಶುಕ್ರವಾರ ಬೆಳಗ್ಗೆಯೇ ಮತಗಟ್ಟೆ ಮುಂದೆ ಇದ್ದ ಅದಮಾರು ಶ್ರೀಗಳು ಮೊದಲಿಗರಾಗಿ ಮತದಾನ ಮಾಡಿದರು. ನೋಂದಣಿ ಮಾಡಿ, ಕೈಗೆ ಇಂಕ್ ಹಾಕಿಸಿಕೊಂಡು, ಬಟನ್ ಪ್ರೆಸ್ ಮಾಡಿದ್ದರು. ಆದರೆ, ಬೀಪ್‌ ಸೌಂಡ್‌ ಕೇಳಲೇ ಇಲ್ಲ. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದಕ್ಕೆ ಅಧಿಕಾರಿಗಳು ಮತದಾನವಾಗಿದೆ ಎಂದು ಉತ್ತರ ಹೇಳಿದ್ದಾರೆ. ಹೀಗಾಗಿ ಅದಮಾರು ಶ್ರೀ ಮತಗಟ್ಟೆಯಿಂದ ವಾಪಾಸ್ ಆಗಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ಶ್ರೀಗಳ ಶಿಷ್ಯರ ಬೇಸರ

ಬಳಿಕ ಮಾಧ್ಯಮಗಳ ಬಳಿ ಈ ಬಗ್ಗೆ ಅದಮಾರು ಶ್ರೀಗಳು ಮಾಹಿತಿ ನೀಡುತ್ತಿದ್ದಾಗ ಮತಗಟ್ಟೆ ಅಧಿಕಾರಿಗಳು ಸ್ಥಳಕ್ಕೆ ಬಂದು ಶ್ರೀಗಳನ್ನು ಮತ್ತೆ ಒಳಗೆ ಕರೆದು ಮತದಾನ ಮಾಡುವಂತೆ ಹೇಳಿದರು. ಹೀಗಾಗಿ ಅಧಿಕಾರಿಗಳ ಸೂಚನೆ ಬಳಿಕ ಎರಡನೇ ಬಾರಿ ಬಂದು ಶ್ರೀಗಳು ಮತದಾನ ಮಾಡಿದ್ದಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಶ್ರೀಗಳ ಶಿಷ್ಯರು ಬೇಸರ ಹೊರಹಾಕಿದ್ದಾರೆ.

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯಿಂದ ಮತದಾನ

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಶುಕ್ರವಾರ ಬೆಳಗ್ಗೆ ಮತಗಟ್ಟೆ ಸಂಖ್ಯೆ 185ರಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ತಮಗೆ ಬೇಕಾಗಿರುವ ಸರ್ಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಎಲ್ಲ ಪ್ರಜೆಗಳು ಅವಶ್ಯವಾಗಿ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು. ಮತದಾನ ಮಾಡಲು ತುಂಬಾ ಹೆಮ್ಮೆ ಅನಿಸುತ್ತಿದೆ. ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಾಗ ಅನುಭವಿಸಿದ ಧನ್ಯತಾಭಾವವನ್ನು ಈಗಲೂ ಅನುಭವಿಸಿದ್ದೇವೆ. ದೇಶದಲ್ಲಿ ಎಲ್ಲ ಬಗೆಯ ಜನ ಎಲ್ಲ ಕಾಲಕ್ಕೂ ಇರುತ್ತಾರೆ. ನೆಲದ ಸಂಸ್ಕೃತಿಯನ್ನು ಗೌರವಿಸುವ ಸರ್ಕಾರವನ್ನು ರೂಪಿಸುವ ಅವಕಾಶ ನಮಗೆ ಇದೆ.‌ ಸಮಾಜದ ಪ್ರಸಕ್ತ ವಾತಾವರಣವನ್ನು ಅರ್ಥ ಮಾಡಿಕೊಂಡು ಮತದಾನ ಮಾಡಬೇಕು. ನಮಗೆ ಬೇಕಾಗಿರುವ ಸರ್ಕಾರವನ್ನು ರೂಪಿಸಬೇಕು. ರಾಜನಾದವ ಸರಿಯಾಗಿದ್ದರೆ ಕಾಲ ಯಾವತ್ತೂ ಹಾಳಾಗುವುದಿಲ್ಲ. ಈಗ ಪ್ರಜೆಗಳೇ ರಾಜರು ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿರುವ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪೇಜಾವರ ಶ್ರೀಗಳು, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಧಾನಿ ಇದ್ದಾರೆ ಎಂದಾದರೆ ಅವರು ಸರ್ವಾಧಿಕಾರಿ ಆಗುವುದು ಹೇಗೆ? ಪ್ರಜೆಗಳು ತಮಗೆ ಬೇಕಾದ ಸರ್ಕಾರವನ್ನು ರೂಪಿಸುತ್ತಿದ್ದಾರೆ. ಅದನ್ನು ಆಕ್ಷೇಪಿಸಿದರೆ ಸಾರ್ವಕಾಲಿಕ ಆಕ್ಷೇಪವಾಗುತ್ತದೆ. ಮತದಾನ ಪ್ರಮಾಣ ಕಡಿಮೆ ಆಗಬಾರದು. ವ್ಯವಸ್ಥೆ ನಮಗೆ ಅನುಕೂಲವಾಗಿಲ್ಲ ಅಂತ ದೂರುತ್ತೇವೆ. ಹಾಗಾದರೆ ವ್ಯವಸ್ಥೆಯನ್ನು ಸರಿ ಮಾಡುವುದು ಯಾರು? ಮತದಾನದಿಂದ ದೂರ ಉಳಿದವರು ಈ ದೇಶದ ನಾಗರಿಕರೇ ಅಲ್ಲ. ಅವರಿಗೆ ಸಿಟಿಜನ್‌ಶಿಪ್ ಕೊಡಬಾರದು. ಅದು ಕಠೋರ ನಿಲುವು ಆಗುತ್ತದೆ. ಆದರೆ, ಅವಶ್ಯವಾಗಿ ಬೇಕು. ಸರ್ಕಾರ ನೀಡುವ ಸವಲತ್ತುಗಳನ್ನು ಬಂದ್ ಮಾಡಬೇಕು. ಅವರನ್ನು ದ್ವಿತೀಯ, ತೃತೀಯ ದರ್ಜೆಯ ನಾಗರಿಕರನ್ನಾಗಿ ಪರಿಗಣಿಸಬೇಕು. ಆಗ ಪರಿಸ್ಥಿತಿ ಸುಧಾರಿಸಬಹುದು ಎಂದು ಹೇಳಿದರು.

Continue Reading

Lok Sabha Election 2024

Lok Sabha Election 2024: ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

Lok Sabha Election 2024 : ಶಿಕ್ಷಣ ಹಾಗೂ ಬ್ಯುಸಿನೆಸ್‌ ಕಾರಣಕ್ಕೆ ದೂರದೂರಿನಲ್ಲಿ ನೆಲೆಸಿದ್ದ ಕರ್ನಾಟಕದ ಮತದಾರರು ವಿಮಾನದಿಂದ ಹಾರಿ ಬಂದು ಶುಕ್ರವಾರ ತಮ್ಮ ಹಕ್ಕು ಚಲಾಯಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದುಬೈ, ಫಿಲಿಫೈನ್‌ನಿಂದ ಬಂದು ಮತದಾನ ಮಾಡಿದ್ದಾರೆ.

VISTARANEWS.COM


on

By

Lok sabha Election 2024
Koo

ಕೋಲಾರ/ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಬಿರುಸಿನ ಮತದಾನ ನಡೆಯುತ್ತಿದ್ದು, ದುಬೈನಿಂದ ಬಂದು ಕೋಲಾರದ ನಿವಾಸಿಯೊಬ್ಬರು ಮತದಾನ ಮಾಡಿದ್ದಾರೆ. ಕೋಲಾರ ನಿವಾಸಿ ಅಬ್ದುಲ್ ಸುಬಾನ್ ಎಂಬುವವರು ಬ್ಯುಸಿನೆಸ್‌ಗೆಂದು ದುಬೈಗೆ ತೆರಳಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಚಲಾಯಿಸಲೆಂದು ದುಬೈನಿಂದ ಬಂದಿದ್ದರು. ಕೋಲಾರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 117ರಲ್ಲಿ ಮತದಾನ ಮಾಡಿದರು.

ಇತ್ತ ಮಂಗಳೂರಿನ ಉಳಾಯಿಬೆಟ್ಟುವಿನ ಜೀವಿತ ಎಂಬುವವರು ದುಬೈನಿಂದ ಬಂದು ಮತದಾನ ಮಾಡಿದ್ದರು. ನಮ್ಮ ಮತ ನಮ್ಮ ಹಕ್ಕು ಎನ್ನುವ ದೃಷ್ಟಿಯಿಂದ ಮತದಾನ ಮಾಡಲು ಬಂದಿದ್ದಾಗಿ ಜೀವಿತ ತಿಳಿಸಿದರು.

ಚಿತ್ರದುರ್ಗದ ಶಿಕ್ಷಕರ ಕಾಲೋನಿ ನಗರದ ನಿವಾಸಿಯಾಗಿರುವ ಲಿಖಿತ ಅವರು ಫಿಲಿಫೈನ್ಸ್‌ನಿಂದ ಬಂದು ಮತದಾನ ಮಾಡಿದರು. ಫಿಲಿಫೈನ್ಸ್‌ನಲ್ಲಿ ಎಂಬಿಬಿಎಸ್‌ (MBBS) ಓದುತ್ತಿರುವ ಲಿಖಿತ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಬಂದಿದ್ದರು. ಚಿತ್ರದುರ್ಗದ ಜೋಗಿ ಮಟ್ಟಿ ರಸ್ತೆಯಲ್ಲಿರುವ ಮತಗಟ್ಟೆ ಸಂಖ್ಯೆ 230ರಲ್ಲಿ ಮತದಾನ ಮಾಡಿದರು. ಪ್ರತಿ ಬಾರಿ ತಪ್ಪದೆ ಬಂದು ಮತದಾನ ಮಾಡುತ್ತಿರುವುದಾಗಿ ಲಿಖಿತ ತಿಳಿಸಿದರು.

ಇದನ್ನೂ ಓದಿ: Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದ ನ್ಯಾಯಾಧೀಶ

ನ್ಯಾಯಾಧೀಶ ಜೀತು ಆರ್.ಎಸ್ ಅವರು ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದರು. ತುಮಕೂರು ಗ್ರಾಮಾಂತರದ ಕೆ.ಪಾಲಸಂದ್ರದಲ್ಲಿರುವ ಮತಗಟ್ಟೆ ಸಂಖ್ಯೆ 114ರಲ್ಲಿ ಹಕ್ಕು ಚಲಾಯಿಸಿದರು. ನಂತರ ಮಾತನಾಡಿದ ಅವರು ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಸಾಕಷ್ಟು ಜನ ಮಹಾನ್ ಪುರುಷರು ಹೋರಾಡಿದ್ದಾರೆ. ಮತದಾನ ಮಾಡುವ ಮೂಲಕ ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನ ಸಂಭ್ರಮಿಸಬೇಕು. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಇಂತಹ ಪ್ರಾತಃಸ್ಮರಣೀಯರನ್ನು ಗೌರವಿಸಬೇಕು ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mohammad Shami
ಪ್ರಮುಖ ಸುದ್ದಿ8 mins ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ35 mins ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Udupi Sri Krishna Temple
ಕರ್ನಾಟಕ53 mins ago

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

IPL 2024
ಕ್ರೀಡೆ1 hour ago

IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

Lok Sabha Election 2024 2 villagers who boycotted voting cast their votes in evening
ಕರ್ನಾಟಕ1 hour ago

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Modi in Karnataka stay in Belagavi tomorrow and Huge gatherings at five places
Lok Sabha Election 20242 hours ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ2 hours ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

deepfake
ತಂತ್ರಜ್ಞಾನ2 hours ago

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Lok Sabha Election 2024 Bjp workers clash in Chikmagalur
Lok Sabha Election 20242 hours ago

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

lok sabha election
ಪ್ರಮುಖ ಸುದ್ದಿ3 hours ago

Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ9 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202410 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202410 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ16 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌