Site icon Vistara News

Weather Report: ಬಿಸಿಲೇ ಇರಲಿ ಮಳೆಯೇ ಬರಲಿ.. ನೀವು ಈ ಮುನ್ನೆಚ್ಚರಿಕೆ ವಹಿಸಿ!

weather report

weather report

ಬೆಂಗಳೂರು: ರಾಜ್ಯದಲ್ಲಿ ಮೇ 19ರಂದು (ಶುಕ್ರವಾರ) ಹಲವು ಜಿಲ್ಲೆಗಳಲ್ಲಿ ಮಳೆಯಾಗುವ (Karnataka Rains) ಸಾಧ್ಯತೆ ಇದೆ. ಜತೆಗೆ ಹಲವು ಕಡೆ ಬಿಸಿ ಗಾಳಿಯೊಂದಿಗೆ ಧಗೆ ಹೆಚ್ಚಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಉಳಿದಂತೆ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಮುಂಜಾನೆ ಬಿಸಿಲು ಇದ್ದರೆ ಮಧ್ಯಾಹ್ನದ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಮಳೆ ನಡುವೆಯೂ ರಾಜ್ಯಾದ್ಯಂತ ತಾಪಮಾನ ಏರಿಕೆ ಆಗಲಿದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು 40 ಡಿ.ಸೆ ಹೆಚ್ಚಿದ್ದು, ಮುಂದಿನ ಎರಡು ದಿನಗಳು ಇದು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳುವಂತೆ ತಜ್ಞರು ಮನವಿ ಮಾಡಿದ್ದಾರೆ.

ತಾಪಮಾನ ಏರಿಕೆ ಆದಾಗ ಏನು ಮಾಡಬೇಕು?

ಇದನ್ನೂ ಓದಿ: Karnataka CM: ಸಿದ್ದರಾಮಯ್ಯ ಸಿಎಂ ಆಗಲೆಂದು ಯುವಕನಿಂದ 280 ಕಿ.ಮೀ ಪಾದಯಾತ್ರೆ

ಏನು ಮಾಡಬಾರದು?

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version