Site icon Vistara News

Weather report : ಕರಾವಳಿ ಸೇರಿ ಈ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಅಬ್ಬರ; ಇರಲಿ ಈ ಎಚ್ಚರ

Rain Image

ಬೆಂಗಳೂರು: ಮುಂಜಾನೆ ಬಿಸಿಲು, ಮಧ್ಯಾಹ್ನ ಮೋಡ ಕವಿದ ವಾತಾವರಣ ಸಂಜೆಯಾದರೆ ಸುರಿಯುವ ಮಳೆ (Rain News) ಸಂಬಂಧ ನೀವೂ ಜಾಗೃತರಾಗಿರಿ. ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain Alert) ಸಾಧ್ಯತೆ ಇದೆ. ಹೀಗಾಗಿ ಮುಂದಿನ 5 ದಿನಗಳ ಕಾಲ ಕರಾವಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜತೆಗೆ ಮಲೆನಾಡು ಜಿಲ್ಲೆಗಳಲ್ಲೂ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಆದರೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 55 ಕಿ.ಮೀ ವ್ಯಾಪ್ತಿಯ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆಗೆ ಇಳಿಯದಂತೆ ಸೂಚಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದರೆ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಅಬ್ಬರದ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಾದ ಬೀದರ್‌, ಕೊಪ್ಪಳ, ವಿಜಯನಗರ, ರಾಯಚೂರು ಸೇರಿದಂತೆ ಬಾಗಲಕೋಟೆಯಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ.

ಜಿಟಿ ಜಿಟಿ ಮಳೆಗೆ ಸೀಮಿತ

ದಕ್ಷಿಣ ಒಳನಾಡಿನಲ್ಲಿ ಸಂಪೂರ್ಣವಾಗಿ ಮುಂಗಾರು ಕೈ ಕೊಟ್ಟಿದೆ. ಮುಂದಿನ ಐದು ದಿನಗಳು ಬೆಂಗಳೂರು ಸೇರಿದಂತೆ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಏನು ಮಾಡಬೇಕು?

-ಹೊರಗೆ ಹೋಗುವಾಗ ಹವಾಮಾನ ಮುನ್ಸೂಚನೆ ಮೆಸೇಜ್‌ಗಳನ್ನು ಚೆಕ್‌ ಮಾಡಿ

-ಮಳೆ ಸಮಯದಲ್ಲಿ ವಿಶೇಷವಾಗಿ ಹೊಲ, ತೋಟದಲ್ಲಿ ಕೆಲಸ ಮಾಡಲು ಮನೆಯಿಂದ ಹೊರಗೆ ಹೋಗಬೇಡಿ.

-ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.

-ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಪ್ರವಾಹ ಇಳಿದು ಬರದಂತಹ ತಗ್ಗು ಪ್ರದೇಶದಲ್ಲಿ ಆಶ್ರಯ ಪಡೆಯಿರಿ.‌

-ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರಿ.

-ವಿದ್ಯುತ್ ಉಪಕರಣ, ವಿದ್ಯುತ್‌ ಲೈನ್‌ಗಳು, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಿ.

-ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.

-ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.

-ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು, ಇವು ಮಿಂಚನ್ನು ಆಕರ್ಷಿಸುತ್ತವೆ.

-ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ ಮರಗಳ ಕೆಳಗೆ ಆಶ್ರಯ ಪಡೆಯಿರಿ. ಲೋಹದ ವಸ್ತುಗಳನ್ನು ಬಳಸಬಾರದು.

-ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಿ.

-ಸಿಡಿಲಿನ ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಬೇಡಿ.

-ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.

-ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಸಂಪರ್ಕದಿಂದ ದೂರವಿರಿ.

-ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.

-ಸಿಡಿಲಿನ ಸಂದರ್ಭದಲ್ಲಿ, ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್‌ ಹರಿಯುವ ಸಾಧ್ಯತೆ ಇದೆ. ಹೀಗಾಗಿ ಆಗ ಸ್ನಾನ ಮಾಡಬಾರದು, ಪಾತ್ರೆ ತೊಳೆಯಬಾರದು, ಬಟ್ಟೆ ಒಗೆಯಬಾರದು.

-ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಿ.

-ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನ ಸಂಚಾರ ಬೇಡ.

-ಆಟದ ಮೈದಾನ, ಉದ್ಯಾನವನಗಳು, ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಿ. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.

ಇದನ್ನೂ ಓದಿ: Viral Video: ವೃದ್ಧೆಯನ್ನು ರೈಲು ಬೋಗಿವರೆಗೆ ಹೊತ್ತು ಸಾಗಿದ ಅಧಿಕಾರಿ; ಸದ್ದಿಲ್ಲದೆ ಮಾನವೀಯತೆ ಗದ್ದುಗೆ ಏರಿದೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 33 ಡಿ.ಸೆ – 24 ಡಿ.ಸೆ
ಗದಗ: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 25 ಡಿ.ಸೆ
ಮಂಗಳೂರು: 30 ಡಿ.ಸೆ – 25 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version