Site icon Vistara News

Weather Report: ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಬೆಂಗಳೂರು ಸೇರಿ ಇಲ್ಲೆಲ್ಲ ವರ್ಷಧಾರೆ

Rain News

Rain News

ಬೆಂಗಳೂರು: ರಾಜ್ಯದ ಹಲವೆಡೆ ಗುರುವಾರ ಮಳೆಯಾಗುವ ಸಾಧ್ಯತೆ ಇದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಸೇರಿ ಚಾಮರಾಜನಗರ, ರಾಮನಗರ ಮತ್ತು ಕೊಡಗು, ಚಿಕ್ಕಮಗಳೂರು, ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚಿನ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಮುಂಜಾನೆ ಬಿಸಿಲು ಝಳಪಿಸಿದ್ದರೆ, ಸಂಜೆ ಹೊತ್ತಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka CM: ಸಿದ್ದರಾಮಯ್ಯಗೆ ಸಿಎಂ ಪಟ್ಟ, ಡಿಕೆಶಿ ಡಿಸಿಎಂ ; ಇಂದು ಸಂಜೆ ಅಧಿಕೃತ ಪ್ರಕಟಣೆ, ಮೇ 20ರಂದು ಪ್ರಮಾಣವಚನ

ಮಳೆ ನಡುವೆಯೂ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ. ಬುಧವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)

ಬೆಂಗಳೂರು ನಗರ – 34.0 ಡಿ.ಸೆ- 23 ಡಿ.ಸೆ
ಮಂಗಳೂರು – 36.0 ಡಿ.ಸೆ- 25 ಡಿ.ಸೆ
ಹೊನ್ನಾವರ- 33.0 ಡಿ.ಸೆ- 25.0 ಡಿ.ಸೆ
ಬೆಳಗಾವಿ- 35.0 ಡಿ.ಸೆ- 21.0 ಡಿ.ಸೆ
ಕಲಬುರಗಿ- 41.0 ಡಿ.ಸೆ- 27.0 ಡಿ.ಸೆ
ಕಾರವಾರ- 37.0 ಡಿ.ಸೆ- 27.0 ಡಿ.ಸೆ
ಗದಗ- 39.0 ಡಿ.ಸೆ- 23.0 ಡಿ.ಸೆ
ಚಿತ್ರದುರ್ಗ- 38.0 ಡಿ.ಸೆ- 22.0 ಡಿ.ಸೆ

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version