Hanuman Flag: ಹನುಮಧ್ವಜ ಸಂಬಂಧ ನೋಟಿಸ್‌ ಕೊಡಲಿಲ್ಲವೇಕೆ? ನಿಯಮ ಮೀರಿ ರಾಷ್ಟ್ರಧ್ವಜ ಹಾರಿಸಿದ್ದು ಸರಿಯಾ?: ಅಶ್ವತ್ಥನಾರಾಯಣ - Vistara News

ಕರ್ನಾಟಕ

Hanuman Flag: ಹನುಮಧ್ವಜ ಸಂಬಂಧ ನೋಟಿಸ್‌ ಕೊಡಲಿಲ್ಲವೇಕೆ? ನಿಯಮ ಮೀರಿ ರಾಷ್ಟ್ರಧ್ವಜ ಹಾರಿಸಿದ್ದು ಸರಿಯಾ?: ಅಶ್ವತ್ಥನಾರಾಯಣ

Hanuman Flag: ಕಾನೂನು ಪ್ರಕಾರ ತಪ್ಪಾಗಿದ್ದರೆ ನೋಟಿಸ್ ಕೊಡಬೇಕಿತ್ತು ತಾನೇ? ಈಗಲಾದರೂ ಸರ್ಕಾರ ಗ್ರಾಮಸ್ಥರ ಭಾವನೆಗೆ ಗೌರವ ಕೊಡುವ ಕೆಲಸವನ್ನು ಮಾಡಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

VISTARANEWS.COM


on

Dr CN Ashwathnarayan Pressmeet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‌ಈ ಸರ್ಕಾರದವರು ಸಂವಿಧಾನ ಜಾಗೃತಿ ಸಪ್ತಾಹ (Constitution Awareness Week) ಮಾಡುತ್ತಾರೆ. ಆದರೆ, ಇವರು ಸಂವಿಧಾನ (Indian Constitution) ಗೌರವಿಸುತ್ತಾರಾ? ಇವರಿಗೇ ಮೊದಲು ಜಾಗೃತಿ ಮೂಡಿಸಬೇಕಿದೆ. ಕೆರಗೋಡಿನಲ್ಲಿ ಕಾನೂನು ಪ್ರಕಾರ ಅನುಮತಿ ಪಡೆದುಕೊಂಡೇ ಹನುಮ ಧ್ವಜವನ್ನು (Hanuman Flag) ಹಾರಿಸಿದ್ದಾರೆ. ಕಾನೂನು ಪ್ರಕಾರ ತಪ್ಪಾಗಿದ್ದರೆ ನೋಟಿಸ್ ಕೊಡಬೇಕಿತ್ತು ತಾನೇ? ಈಗಲಾದರೂ ಸರ್ಕಾರ ಗ್ರಾಮಸ್ಥರ ಭಾವನೆಗೆ ಗೌರವ ಕೊಡುವ ಕೆಲಸವನ್ನು ಮಾಡಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಇವರಿಗೆ ಸಂವಿಧಾನ ಕುರಿತ ಪರಿಜ್ಞಾನ ಇಲ್ಲ. ಇವರು ಜನರ ಭಾವನೆ ಅರ್ಥ ಮಾಡಿಕೊಂಡಿಲ್ಲ. ಅಗೌರವದಿಂದ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು.

ನಿಯಮ ಮೀರಿ ರಾಷ್ಟ್ರಧ್ವಜವನ್ನು ಹಾರಿಸಿದ್ದು ಸರಿಯೇ?

ಕೆರಗೋಡಿನಲ್ಲಿ ಏಕಾಏಕಿ ಮುಂಜಾನೆ ಹೋಗಿ ಭಗವಾಧ್ವಜ ಇಳಿಸಿದ್ದು ಸರಿಯೇ? ನಿಯಮ ಮೀರಿ ರಾಷ್ಟ್ರಧ್ವಜವನ್ನು ಹಾರಿಸಿದ್ದು ಸರಿಯೇ? ಸ್ಥಳೀಯರು ಕೆರಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇನ್ನೂ ಯಾಕೆ ಎಫ್‍ಐಆರ್ ಮಾಡಿಲ್ಲ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ಪ್ರಶ್ನೆ ಮಾಡಿದರು.

ಮತ್ತೊಮ್ಮೆ ಮೋದಿ ಜನರ ನಿರ್ಧಾರ

ರಾಷ್ಟ್ರಧ್ವಜವನ್ನು ಪೂರ್ತಿ ಏರಿಸಿಲ್ಲ. ಇದೇನು ಸರ್ಕಾರವೇ? ಯಾವ ರೀತಿ ನಡವಳಿಕೆ ಇದು ಎಂದು ಕೇಳಿದರು. ಬಿಜೆಪಿ- ಜೆಡಿಎಸ್ ನಡುವೆ ವೈಮನಸ್ಸು ಏನಿಲ್ಲ. ಮತ್ತೊಮ್ಮೆ ಮೋದಿ, ಮತ್ತೊಮ್ಮೆ ಬಿಜೆಪಿ ಎಂಬುದೇ ನಮ್ಮೆಲ್ಲರ ಗುರಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಮಾಜಿ ಪ್ರಧಾನಿ‌ ಎಚ್.ಡಿ. ದೇವೇಗೌಡರು ಕೂಡ ಅಭಿಮಾನದಿಂದ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಲಿ ಎನ್ನುತ್ತಿದ್ದಾರೆ. ಮತ್ತೊಮ್ಮೆ ಬಿಜೆಪಿ, ಮತ್ತೊಮ್ಮೆ ಮೋದಿ ಬೇಕೆಂದು ಜನರು ಈಗಾಗಲೇ ನಿರ್ಧರಿಸಿದ್ದಾರೆ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.‌

ಇದನ್ನೂ ಓದಿ: CM Siddaramaiah: ರಾಮಭಕ್ತ ಗಾಂಧೀಜಿ ಕೊಂದ ಗೋಡ್ಸೆಯನ್ನು ಪೂಜಿಸುವವರಿದ್ದಾರೆ: ಸಿಎಂ ಸಿದ್ದರಾಮಯ್ಯ

ಇದೊಂದು ತುಘಲಕ್ ಸರ್ಕಾರ. ಕಾನೂನನ್ನು ಇವರು ಗೌರವಿಸುವುದಿಲ್ಲ ಎಂದು ಟೀಕಿಸಿದರು. ಅದು ಗ್ರಾಮಸ್ಥರೇ ಹಣ ಸೇರಿಸಿ ನಿಲ್ಲಿಸಿದ ಧ್ವಜಸ್ತಂಭ. ಪಂಚಾಯತ್ ಕೂಡ ರಾಷ್ಟ್ರಧ್ವಜ, ನಾಡಧ್ವಜ, ಭಗವಾಧ್ವಜ ಹಾರಿಸಲು ಅನುಮತಿ ಕೊಟ್ಟಿದೆ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ಗಮನ ಸೆಳೆದರು. ಮಾಜಿ ಸಚಿವ ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಅವರು ಇದ್ದರು.

ಏನಿದು ಮಂಡ್ಯದ ಹನುಮಧ್ವಜ ಕೇಸ್?‌

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನೆಪಾಗಿ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಲು ಗ್ರಾಮಸ್ಥರು ನಿರ್ಧರಿಸಿದ್ದರು. ಧ್ವಜ ಹಾರಿಸಲು ನಿಶ್ಚಯಿಸಿದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದರಿಂದ ಅನುಮತಿ ಕೋರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೆ, ಗ್ರಾಮ ಪಂಚಾಯಿತಿ “ರಾಷ್ಟ್ರ ಧ್ವಜ ಮತ್ತು ನಾಡಧ್ವಜ” ಹೊರತುಪಡಿಸಿ ಯಾವುದೇ ಧಾರ್ಮಿಕ/ ರಾಜಕೀಯ ಧ್ವಜವನ್ನು ಹಾರಿಸುವಂತಿಲ್ಲವೆಂದು ಅನುಮತಿಯನ್ನು ನಿರಾಕರಣೆ ಮಾಡಿತ್ತು.

ಆದರೂ ಗ್ರಾಮಸ್ಥರು ಮತ್ತು ಹಿಂದು ಕಾರ್ಯಕರ್ತರು ಹನುಮ ಧ್ವಜ ಹಾರಿಸಿದ್ದರು. ಇದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೆ ಈ ವಿಚಾರ ಮತ್ತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಬಂದಿದೆ. ಅಲ್ಲಿ 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಗ್ರಾಮ ಪಂಚಾಯತ್​ ಸದಸ್ಯರು ನಡಾವಳಿ ರಚಿಸಿ, ವಿವಾದವನ್ನು ಇತ್ಯರ್ಥ ಪಡಿಸಿದ್ದರು. ಆದರೆ, ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಲಾಗಿದೆ ಇದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಮೌಖಿಕ ಆದೇಶವನ್ನು ಹೊರಡಿಸಿತ್ತು. ಹೀಗಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಅವರು ತೆರವುಗೊಳಿಸಲು ಮುಂದಾದರು. ಇದಕ್ಕೆ ಗ್ರಾಮಸ್ಥರು ಅಡ್ಡಿ ಪಡಿಸಿ ಪ್ರತಿಭಟಿಸಿದ್ದರು. ಹೀಗಾಗಿ ಅಲ್ಲಿಂದ ನಿರ್ಗಮಿಸಿದ್ದ ಅಧಿಕಾರಿಗಳು ಶನಿವಾರ (ಜ.27) ರಾತ್ರಿ ಪುನಃ ಬಂದು ಹನುಮ ತೆರವಿಗೆ ಮುಂದಾದರು. ಮುಂಜಾನೆ 3 ಗಂಟೆ ಹೊತ್ತಿಗೆ ಮಂಡ್ಯ ಎಸಿ ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಬಿರಾದರ್ ನೇತೃತ್ವದಲ್ಲಿ ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರಿಗೆ ವಿಷಯ ತಿಳಿದು ಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಸಹ ಸ್ಥಳದಲ್ಲಿದ್ದರು. ಪ್ರತಿಭಟನೆಯನ್ನೂ ಮಾಡಲಾಯಿತು. ಹೀಗಾಗಿ ಪುನಃ ವಾಪಸ್‌ ತೆರಳಲಾಯಿತು.

ಇದನ್ನೂ ಓದಿ: Congress Karnataka: ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತೆ-ಫೋಟೋಗ್ರಾಫರ್‌ ಮಧ್ಯೆ ಕುರ್ಚಿ ಗಲಾಟೆ!

ಕೊನೆಗೆ ಈಗ ಭಾನುವಾರ ಎಷ್ಟೇ ವಿರೋಧ ಹಾಗೂ ಪ್ರತಿಭಟನೆ ಇದ್ದರೂ ಅದರ ನಡುವೆ ಹನುಮಾನ್‌ ಧ್ವಜವನ್ನು ಇಳಿಸಿ, ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್​ ಅನ್ನು ಸಹ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

Lok Sabha Election : ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Lok Sabha Election
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಿಗದಿಯಾಗಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಈ ಹಂತದಲ್ಲಿ ಚುನಾವಣೆ ನಡೆಯಲಿದೆ. ಮತದಾನದ ದಿನ ಹತ್ತಿರ ಬಂದ ಬಳಿಕವೂ ಇನ್ನೂ ಮತದಾರರಲ್ಲಿ (voters) ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಇರುತ್ತವೆ . ಇದರಲ್ಲಿ ನಮ್ಮ ಮತವನ್ನು (vote) ಬೇರೆಯವರು ಚಲಾವಣೆ ಮಾಡಿದರೆ ಏನಾಗುತ್ತದೆ ಎಂಬ ಪ್ರಶ್ನೆ ಖಂಡಿತಾ ಇರುತ್ತದೆ. ಹಾಗಾದರೆ ಈ ಸಂದರ್ಭದಲ್ಲಿ ನೀವು ಏನು ಮಾಡಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ದೇಶದ ಬಹುದೊಡ್ಡ ಚುನಾವಣೆಗಾಗಿ ಚುನಾವಣಾ ಅಧಿಕಾರಿಗಳು (election officers), ವಿವಿಧ ಪಕ್ಷಗಳ ಅಭ್ಯರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಈಗಾಗಲೇ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದರಲ್ಲಿ ಬಹುದೊಡ್ಡ ಪಾಲುದಾರ ಪ್ರತಿಯೊಬ್ಬ ಮತದಾರ. ಅವರ ಅಧಿಕಾರ, ಹಕ್ಕನ್ನು ಬೇರೆಯವರು ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಬೇರೆಯವರು ನಮ್ಮ ಮತ ಚಲಾಯಿಸಬಹುದೇ?

ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ನಿಮ್ಮ ಮತವನ್ನು ಟೆಂಡರ್ಡ್ ಬ್ಯಾಲೆಟ್ ಪೇಪರ್ ಎಂದು ಗುರುತಿಸಲಾಗುತ್ತದೆ ಮತ್ತು ಪ್ರತ್ಯೇಕವಾಗಿ ಇರಿಸಲಾಗುತ್ತದೆ.

ತಕ್ಷಣ ದೂರು ನೀಡಿ

ಮತಗಟ್ಟೆ ಅಧಿಕಾರಿಯು ಮತಗಟ್ಟೆಯೊಳಗೆ ಬರುವಾಗ ನಿಮ್ಮ ಮತವು ಈಗಾಗಲೇ ಚಲಾವಣೆಯಾಗಿದೆ ಎಂದು ತಿಳಿಸಿದರೆ ಭಾರತೀಯ ಚುನಾವಣಾ ಕಾಯಿದೆ 1961ರ ಅಡಿಯಲ್ಲಿ ಯಾರಾದರೂ ನಿಮ್ಮ ಹೆಸರಿನಲ್ಲಿ ಮತ ಚಲಾಯಿಸಿದರೆ ತಕ್ಷಣ ಸ್ಥಳದಲ್ಲಿರುವ ಪ್ರಿಸೈಡಿಂಗ್ ಅಧಿಕಾರಿಗೆ ದೂರು ನೀಡಿ. ಆಗ ಟೆಂಡರ್ಡ್ ಮತವನ್ನು ಚಲಾಯಿಸಲು ಕಾನೂನು ನಿಮಗೆ ಅವಕಾಶ ನೀಡುತ್ತದೆ.

ಇದನ್ನೂ ಓದಿ: Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಚುನಾವಣಾ ನಿಯಮಗಳ ನಿಯಮ 49ಪಿ ಪ್ರಕಾರ ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ನಿಮಗೆ ನೀಡಲಾಗುತ್ತದೆ ಮತ್ತು ಟೆಂಡರ್ ಮಾಡಿದ ಮತಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸಹಿ ಮಾಡಬೇಕಾಗುತ್ತದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಇದನ್ನು ಮಾಡಲು ಸಾಧ್ಯವಿಲ್ಲ. ಟೆಂಡರ್ ಮಾಡಿದ ಮತಪತ್ರವು ಬ್ಯಾಲೆಟ್ ಯೂನಿಟ್‌ನಲ್ಲಿ ಪ್ರದರ್ಶಿಸಲಾದ ಬ್ಯಾಲೆಟ್ ಪೇಪರ್‌ನಂತೆಯೇ ಇರುತ್ತದೆ. ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ಪ್ರಿಸೈಡಿಂಗ್ ಅಧಿಕಾರಿಗೆ ಮರಳಿ ನೀಡಬೇಕು.

ಹೇಗೆ ಮತ ಹಾಕುವುದು?

ಬಾಣದ ಕ್ರಾಸ್ ಮಾರ್ಕ್ ರಬ್ಬರ್ ಸ್ಟಾಂಪ್ ಸಹಾಯದಿಂದ ನಿಮ್ಮ ಅಭ್ಯರ್ಥಿಯ ಆಯ್ಕೆಯನ್ನು ಗುರುತಿಸಿದ ಅನಂತರ ನೀವು ಟೆಂಡರ್ ಮಾಡಿದ ಮತಪತ್ರವನ್ನು ಪ್ರಿಸೈಡಿಂಗ್ ಅಧಿಕಾರಿಗೆ ಹಸ್ತಾಂತರಿಸಬೇಕು. ಅವರು ಅದನ್ನು ಪ್ರತ್ಯೇಕ ಕವರ್‌ನಲ್ಲಿ ಇಡುತ್ತಾರೆ.

ಚಾಲೆಂಜ್ಡ್ ವೋಟ್

ಟೆಂಡರ್ ಮಾಡಿದ ಬ್ಯಾಲೆಟ್ ಪೇಪರ್ ಅನ್ನು ಚಾಲೆಂಜ್ಡ್ ವೋಟ್ ಎಂದೂ ಕರೆಯುತ್ತಾರೆ. ಬಳಿಕ ನಿಮ್ಮ ಜಾಗದಲ್ಲಿ ಯಾರು ಮತ ಹಾಕಿದ್ದಾರೆ ಎಂಬುದನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ಅದನ್ನು ತೆಗೆದು ನಿಮ್ಮ ಮತವನ್ನು ಎಣಿಕೆಗೆ ಹಾಕಲಾಗುತ್ತದೆ.

ಗುರುತಿನ ಪುರಾವೆ ನೀಡಬೇಕು

ಮತದಾರರಾಗಿ ನಿಮ್ಮ ಗುರುತಿನ ಬಗ್ಗೆ ಯಾವುದೇ ಅಭ್ಯರ್ಥಿಯ ಪೋಲಿಂಗ್ ಏಜೆಂಟ್‌ ಪ್ರಶ್ನಿಸಿದರೆ ಚುನಾವಣಾ ಅಧಿಕಾರಿಗಳು ನಿಮ್ಮ ಗುರುತಿನ ಪುರಾವೆಯನ್ನು ಕೇಳುತ್ತಾರೆ. ಇದಕ್ಕಾಗಿ ನೀವು ಎಪಿಕ್ ಅಥವಾ ಪಾಸ್‌ಪೋರ್ಟ್, ರೇಷನ್ ಕಾರ್ಡ್‌ನಂತಹ ಯಾವುದೇ ದಾಖಲೆಯನ್ನು ಹೊಂದಿರಬೇಕು. ಆದರೂ ಅವರು ಸವಾಲು ಮಾಡಿ ಮತದಾನಕ್ಕೆ ಅನುಮತಿ ನೀಡದೇ ಇದ್ದರೆ ಪ್ರಿಸೈಡಿಂಗ್ ಅಧಿಕಾರಿಯಿಂದ ಲಿಖಿತ ದೂರನ್ನು ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ.

ಎಷ್ಟು ಮತದಾರರು?

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸುಮಾರು 97 ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಭಾರತದಲ್ಲಿ 96.88 ಕೋಟಿ ಜನರು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ, ಇದು ವಿಶ್ವದ ಅತಿದೊಡ್ಡ ಮತದಾರರ ಪೂಲ್ ಆಗಿದೆ. ಆಯೋಗದ ಪ್ರಕಾರ, 2019 ರ ಲೋಕಸಭಾ ಚುನಾವಣೆ ಬಳಿಕ ನೋಂದಾಯಿತ ಮತದಾರರ ಸಂಖ್ಯೆ ಶೇ. 6ರಷ್ಟು ಹೆಚ್ಚಾಗಿದೆ

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Lok Sabha Election 2024: ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ; ಅದೃಷ್ಟ ಪರೀಕ್ಷೆಗಿಳಿದ 227 ಅಭ್ಯರ್ಥಿಗಳು

Lok Sabha Election 2024: ರಾಜ್ಯದ 14 ಕ್ಷೇತ್ರಗಳಲ್ಲಿ ಮೇ 7ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಲಾಗಿದೆ.

VISTARANEWS.COM


on

Lok Sabha Election
ಹಾವೇರಿ ನಗರದ ಶ್ರೀ ಶಿವಲಿಂಗೇಶ್ವರ ಮಹಿಳಾ ಪದವಿ ಕಾಲೇಜ್ ಮಸ್ಟರಿಂಗ್ ಕೇಂದ್ರದಿಂದ ವಿದ್ಯುನ್ಮಾನ ಮತಯಂತ್ರಗಳೊಂದಿಗೆ ಮತಗಟ್ಟೆಗೆ ಸಿಬ್ಬಂದಿ ಸೋಮವಾರ ತೆರಳಿದರು.
Koo

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ (Lok Sabha Election 2024) ಮತದಾನ ಮಂಗಳವಾರ ನಡೆಯಲಿದೆ. ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.

14 ಕ್ಷೇತ್ರಗಳಲ್ಲಿ ಮತದಾನ

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಿದ್ದು, ಶಾಂತಿಯುತ ಚುನಾವಣೆ ನಡೆಸಲು ಸುಮಾರು 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಘಟಾನುಘಟಿಗಳು ಸ್ಪರ್ಧಿಸಿರುವ‌ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಒಟ್ಟು 2.59 ಕೋಟಿ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.

227 ಅಭ್ಯರ್ಥಿಗಳು ಕಣದಲ್ಲಿ

ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ
ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206
ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತಿ ಹೆಚ್ಚು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ.

ಮತದಾರರಿಗೆ ಮೂಲಸೌಕರ್ಯ

ತಾಪಮಾನ ಹೆಚ್ಚಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಆಯೋಗ ಮತದಾನದ ದಿನದಂದು ಮತಗಟ್ಟೆಯಲ್ಲಿ ಮತದಾರರಿಗಾಗಿ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಒಆರ್‌ಎಸ್ ಜ್ಯೂಸ್, ಕುಳಿತುಕೊಳ್ಳಲು ಕಾಯ್ದಿರಿಸಿದ ಕೊಠಡಿಗಳು, ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಆಂಬ್ಯುಲೆನ್ಸ್ ವಾಹನಗಳು ಮುಂತಾದ ಹಲವು ಮೂಲ ಸೌಲಭ್ಯಗಳನ್ನು ಒದಗಿಸಿದೆ. ಇನ್ನು ದೃಷ್ಟಿಹೀನ ಮತದಾರರ ಸಹಾಯಕ್ಕಾಗಿ ಬ್ರೈಲ್ ಸೌಲಭ್ಯವುಳ್ಳ ಇವಿಎಂ ಗಳನ್ನು ಮತಗಟ್ಟೆಗಳಲ್ಲಿ ಅಳವಡಿಸಲಾಗಿದೆ.

ಇದನ್ನೂ ಓದಿ | Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

ಮತದಾರರ ಗುರುತಿನ ಚೀಟಿ ಕಡ್ಡಾಯ

ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್‌ ಸ್ಲಿಪ್‌ ಜತೆಗೆ ಮತದಾರರ ಗುರುತಿನ ಚೀಟಿ,
ಆಧಾರ್‌ಕಾರ್ಡ್, ನರೇಗಾ ಜಾಬ್‌ ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್‌ಬುಕ್, ಕಾರ್ಮಿಕ ಸಚಿವರು ನೀಡುವ
ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೆಸೆನ್ಸ್, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಪಿಂಚಣಿಯ ದಾಖಲೆ,
ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ
ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದು.

Continue Reading

ಕರ್ನಾಟಕ

ಇಂದು 2ನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಕರ್ನಾಟಕ ಸೇರಿ ದೇಶದ ಹಲವೆಡೆ ಮಂಗಳವಾರ ಮತದಾನ ನಡೆಯಲಿದ್ದು, ಮತದಾರರಾರೂ ತಮ್ಮ ಹಕ್ಕು ಚಲಾವಣೆಗೆ ಉತ್ಸಾಹಿತರಾಗಿದ್ದಾರೆ. ಯಾವುದಕ್ಕೂ ಮತಗಟ್ಟೆಗೆ ಹೊರಡುವ ಮುನ್ನ ಮತದಾನ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಒಮ್ಮೆ ಚೆಕ್ ಮಾಡುವುದು ಉತ್ತಮ. ಮನೆಯಲ್ಲೇ ಕುಳಿತು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ.

VISTARANEWS.COM


on

Lok Sabha Election-2024
Koo

ಬೆಂಗಳೂರು: ಲೋಕಸಭಾ ಚುನಾವಣೆಯ (lok sabha election) ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ ಮಂಗಳವಾರವೇ ನಡೆಯಲಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲೊಮ್ಮೆ (voter list) ನಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಉತ್ತಮ. ಇದಕ್ಕಾಗಿ ಮತಗಟ್ಟೆಗೆ (election booth) ಹೋಗಬೇಕಾದ ಅವಶ್ಯಕತೆ ಈಗಿಲ್ಲ. ಸ್ಮಾರ್ಟ್ ಫೋನ್ (smart phone) ಕೈಯಲ್ಲಿ ಇದ್ದರೆ ಸಾಕು ಮನೆಯಲ್ಲೇ ಕುಳಿತು ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ನಲ್ಲಿರುವ ಆನ್ ಲೈನ್ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ ನಡೆಸಿ ಮತಗಟ್ಟೆಯ ಕುರಿತಾದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈಗ ಅವಕಾಶವಿದೆ.

ಹೇಗೆ ನೋಡುವುದು?

ಸ್ಮಾರ್ಟ್ ಫೋನ್ ನಲ್ಲಿ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ಅನ್ನು ತೆರೆಯಿರಿ. ಬಳಿಕ ಅಲ್ಲಿ ಕೇಳಿರುವ ಅಗತ್ಯ ಮಾಹಿತಿಗಳನ್ನು ನಮೂದಿಸಿ. ಮುಖ್ಯವಾಗಿ ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿದ ಬಳಿಕ ಮತದಾರರ ಪಟ್ಟಿಯಲ್ಲಿ ದಾಖಲಾಗಿರುವಂತೆ ನಿಮ್ಮ ಪೂರ್ಣ ಹೆಸರು ಮತ್ತು ತಂದೆಯ ಹೆಸರನ್ನು ನಮೂದಿಸಬೇಕು. ಬಳಿಕ ಹುಟ್ಟಿದ ದಿನಾಂಕವನ್ನು ಹಾಕಿ ಎಪಿಕ್ (ಎಪಿಐಸಿ) ಸಂಖ್ಯೆಯನ್ನು ಹಾಕಿದ ಬಳಿಕ ಸರ್ಚ್ ಬಟನ್ ಒತ್ತಿದರೆ ಫಲಿತಾಂಶ ಪುಟ ತೆರೆದುಕೊಳ್ಳುತ್ತದೆ.

Lok Sabha Election-2024

ಏನು ಮಾಹಿತಿ ?

ನಿಮ್ಮ ಹೆಸರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಇದ್ದರೆ ಎಪಿಕ್ ಸಂಖ್ಯೆ, ವಿಳಾಸ ಮತ್ತು ಮತಗಟ್ಟೆಯ ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯವಾಗುತ್ತದೆ. ಮತಗಟ್ಟೆಯ ಸ್ಥಳವನ್ನು ಮ್ಯಾಪ್ ಮೂಲಕ ಕ್ಲಿಕ್ ಮಾಡಿ ನೋಡಲು ಅವಕಾಶವೂ ಇಲ್ಲಿ ಇದೆ.

ಎಸ್ ಎಂಎಸ್ ಮೂಲಕ ಪರಿಶೀಲಿಸಿ

ವೆಬ್ ಪೋರ್ಟಲ್ ಮಾತ್ರವಲ್ಲ ಈ ಎಲ್ಲ ಮಾಹಿತಿಯನ್ನು ಎಸ್ ಎಂಎಸ್ ಮೂಲಕವೂ ಪರಿಶೀಲನೆ ನಡೆಸಬಹುದು.
ಇದಕ್ಕಾಗಿ ಮೊಬೈಲ್ ಫೋನ್ ನಿಂದ 59191 ಕ್ಕೆ ಎಪಿಕ್ ಸಂಖ್ಯೆಯನ್ನು ಹೊಂದಿರುವ ಎಸ್ ಎಂಎಸ್ ಕಳುಹಿಸಿ ಅಥವಾ ಮತದಾರರ ಸಹಾಯವಾಣಿ 1800-111-950ಕ್ಕೆ ಕರೆ ಮಾಡಿ ಕೂಡ ಮಾಹಿತಿ ತಿಳಿದುಕೊಳ್ಳಬಹುದು.

ಯಾವಾಗ ಕೊನೆ ದಿನ?

ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆಗೆ ಮತದಾನದ ಹಿಂದಿನ ದಿನ ಕೊನೆಯ ದಿನವಾಗಿದೆ. ಒಂದು ವೇಳೆ ಹೆಸರು ಇಲ್ಲದೇ ಇದ್ದರೆ ಹೊಸ ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚುನಾವಣಾ ಆಯೋಗದ ವೆಬ್ ಸೈಟ್ ಅಥವಾ ಮತದಾರರ ಸೇವಾ ಪೋರ್ಟಲ್ ಗೆ ಭೇಟಿ ನೀಡಬಹುದು.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

Continue Reading
Advertisement
Lok Sabha Election
ಪ್ರಮುಖ ಸುದ್ದಿ10 mins ago

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

karnataka weather Forecast
ಮಳೆ10 mins ago

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Lok Sabha Election
ಪ್ರಮುಖ ಸುದ್ದಿ20 mins ago

Lok Sabha Election 2024: ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ; ಅದೃಷ್ಟ ಪರೀಕ್ಷೆಗಿಳಿದ 227 ಅಭ್ಯರ್ಥಿಗಳು

Lok Sabha Election-2024
ಕರ್ನಾಟಕ40 mins ago

ಇಂದು 2ನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

SSLC exam results to be announced soon
ಕರ್ನಾಟಕ40 mins ago

SSLC Exam Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶೀಘ್ರ; ಇಲ್ಲಿದೆ ಮಹತ್ವದ ಮಾಹಿತಿ

Lemon picking⁠
ಲೈಫ್‌ಸ್ಟೈಲ್40 mins ago

Tips To Find The Juiciest Lemon: ಜ್ಯೂಸಿಯಾದ ನಿಂಬೆಹಣ್ಣನ್ನು ಮಾರುಕಟ್ಟೆಯಿಂದ ಆರಿಸಿ ತರುವುದೂ ಒಂದು ಕಲೆ! ಇಲ್ಲಿವೆ ಟಿಪ್ಸ್

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಕಂಟಕ; ಕುಟುಂಬದಲ್ಲಿ ಕಲಹ

Bengaluru Rain
ಕರ್ನಾಟಕ6 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ7 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ7 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ12 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ12 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ12 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌