ಕರ್ನಾಟಕ
Watch gift to CM: ಸಿಎಂ ಆದ ಖುಷಿಗೆ ಹೆಂಡ್ತಿಯಿಂದ ವಾಚ್ ಗಿಫ್ಟ್; ಸಿದ್ದರಾಮಯ್ಯ ಫುಲ್ ಖುಷ್
Siddaramaiah Wife : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ಪತ್ನಿ ಹೊಸ ವಾಚ್ ಗಿಫ್ಟ್ ಕೊಟ್ಟಿದ್ದಾರಂತೆ. ಇದನ್ನು ಖುಷಿಯಿಂದ ತೋರಿಸಿದ್ದಾರೆ ಸಿದ್ದರಾಮಯ್ಯ.
ಬೆಂಗಳೂರು: ಸಿದ್ದರಾಮಯ್ಯ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ (Karnataka CM) ಪ್ರಮಾಣವಚನ ಸ್ವೀಕರಿಸಿದ್ದನ್ನು ರಾಜ್ಯಾದ್ಯಂತ ಅವರ ಅಭಿಮಾನಿಗಳು ಬಗೆಬಗೆಯಲ್ಲಿ ಸಂಭ್ರಮಿಸಿದ್ದಾರೆ. ಈ ಸಂಭ್ರಮ ಸಿದ್ದರಾಮಯ್ಯ (Siddaramaiah) ಅವರ ಮನೆಯಲ್ಲೂ ಮನೆ ಮಾಡಿತ್ತು. ಅದರಲ್ಲೂ ವಿಶೇಷವೆಂದರೆ, ಮುಖ್ಯಮಂತ್ರಿಯಾದ ಖುಷಿಗೆ ಅವರ ಪತ್ನಿ (Siddaramaiah wife) ರೇಡೋ ವಾಚ್ ಗಿಫ್ಟ್ (Watch gift to CM) ಕೊಟ್ಟಿದ್ದಾರಂತೆ!
ಬೆಂಗಳೂರಿನ ಕೆಪಿಸಿಸಿ ಕಚೇರಿ ಪಕ್ಕದ ಇಂದಿರಾ ಗಾಂಧಿ ಸಭಾಂಗಣದಲ್ಲಿ ಭಾನುವಾರ ನಡೆದ ರಾಜೀವ್ ಗಾಂಧಿ (Rajiv Gandhi) ಪುಣ್ಯ ಸ್ಮರಣೆ ಕಾರ್ಯಕ್ರಮದ ವೇಳೆ ಈ ವಿಚಾರ ಬೆಳಕಿಗೆ ಬಂತು. ಸಿದ್ದರಾಮಯ್ಯ ಅವರು ತಾನು ಕಟ್ಟಿರುವ ಹೊಸ ವಾಚನ್ನು ಪಕ್ಕದಲ್ಲಿ ಕುಳಿತಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರಿಗೆ ತೋರಿಸಿ ಖುಷಿಪಟ್ಟರು.
ಸಿದ್ದರಾಮಯ್ಯ ಅವರು ಹೊಸ ವಾಚ್ ಕಟ್ಟಿಕೊಂಡು ಬಂದಿದ್ದರು. ಅದನ್ನು ಅವರು ಪಕ್ಕದಲ್ಲಿದ್ದ ಎಂ.ಬಿ. ಪಾಟೀಲ್ ಅವರಿಗೆ ತೋರಿಸಿದರು. ಏನು ಹೊಸದಾ ಎಂದು ಎಂ.ಬಿ. ಪಾಟೀಲ್ ಕೇಳಿದರು. ಆಗ ಸಿದ್ದರಾಮಯ್ಯ ಅವರು ಹೌದು ಇದು ಮನೆಯವರು ಗಿಫ್ಟ್ ಕೊಟ್ಟಿದ್ದು ಎಂದು ಖುಷಿಯಿಂದ ಹೇಳಿಕೊಂಡರು. ಆಗ ಎಂ.ಬಿ. ಪಾಟೀಲ್ ಮತ್ತು ಡಿ.ಕೆ ಶಿವಕುಮಾರ್ ಅವರಿಬ್ಬರೂ ಕೈ ಹಿಡಿದುಕೊಂಡು ಹೊಸ ವಾಚನ್ನು ನೋಡಿದರು.
ಪಾರ್ವತಿ ಮೇಡಂ ಪಕ್ಕಾ ಫ್ಯಾಮಿಲಿ ವುಮನ್
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಪಕ್ಕಾ ಫ್ಯಾಮಿಲಿ ವುಮನ್. ತಾವಾಯಿತು, ತಮ್ಮ ಕುಟುಂಬವಾಯಿತು ಎಂದು ಮನೆಯಲ್ಲೇ ಇದ್ದು ಖುಷಿಪಡುವವರು. ಅವರು ಗಂಡನ ರಾಜಕೀಯ ವಿಚಾರದಲ್ಲಿ ಯಾವತ್ತೂ ತಲೆ ಹಾಕಿದವರೇ ಅಲ್ಲ. ನಿಜವೆಂದರೆ, ಅವರು ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದಾಗಲೂ ಅವರು ಬಂದಿರಲಿಲ್ಲ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿರಲಿಲ್ಲ.
ರಾಜಕೀಯದಿಂದ ಮಾರು ದೂರ ಇರುವ ಅವರು ಎಲ್ಲೂ ಗಂಡನ ಹೆಸರನ್ನು ಬಳಸಿಕೊಂಡು ಪ್ರಭಾವ ಬೀರಿದ್ದೂ ಇಲ್ಲ. ಚಾಮುಂಡೇಶ್ವರಿ ಸೇರಿದಂತೆ ಯಾವ ದೇವಸ್ಥಾನಕ್ಕೆ ಹೋದರೂ ಯಾವುದೇ ಪ್ರಭಾವ ಬಳಸುತ್ತಿರಲಿಲ್ಲ. ಅವರು ಮೊದಲ ಬಾರಿಗೆ ಗಂಡನ ರಾಜಕೀಯ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ್ದು ಯಾವಾಗ ಎಂದರೆ, ಈ ಬಾರಿ ಸಿದ್ದರಾಮಯ್ಯ ಅವರು ತಾನು ಕೋಲಾರದಲ್ಲೇ ಕಣಕ್ಕಿಳಿಯುವುದಾಗಿಯೂ ಮತ್ತು ಕೋಲಾರದಲ್ಲಿ ಮಾತ್ರವೇ ಸ್ಪರ್ಧೆ ಮಾಡುವುದಾಗಿ ಹೇಳಿದಾಗ.
ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡಲು ಮುಂದಾದಾಗ ಹೈಕಮಾಂಡ್ ಅವರನ್ನು ಕರೆದು ಕೋಲಾರ ಸುರಕ್ಷಿತವಲ್ಲ, ಬೇರೆ ಕ್ಷೇತ್ರ ಆಯ್ಕೆ ಮಾಡಿ ಎಂದಿತ್ತು. ಆಗ ಮೊದಲ ಬಾರಿಗೆ ಪಾರ್ವತಿ ಅವರು ವರುಣದಿಂದಲೂ ಕಣಕ್ಕಿಳಿಯುವಂತೆ ಸಲಹೆ ಮಾಡಿದ್ದರು. ಇದನ್ನು ಸ್ವತಃ ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದರು.
ಇದೀಗ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಅವರ ಮನೆಯಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. ಇದೇ ಖುಷಿಯಲ್ಲಿ ಒಂದು ರೇಡೋ ವಾಚ್ ಕೂಡಾ ಕೊಟ್ಟಿದ್ದಾರೆ.
ಮೊಮ್ಮಗನ ಕಾಲೇಜಿನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ
ಈ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಮ್ಮ ಮೊಮ್ಮಗ ಧವನ್ ರಾಕೇಶ್ ಕಲಿಯುತ್ತಿರುವ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೆನಿಡಿಯನ್ ಕಾಲೇಜಿನಲ್ಲಿ ಧವನ್ ಓದುತ್ತಿದ್ದು, ಇದರ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: DK Shivakumar: ನನ್ನ, ಸಿದ್ದರಾಮಯ್ಯ ಮನೆ ಸುತ್ತೋದು, ಚಾಡಿ ಹೇಳೋದು ಬಿಡಿ; ಡಿಕೆಶಿ ಖಡಕ್ ವಾರ್ನಿಂಗ್
ಕರ್ನಾಟಕ
Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ
Ramalinga Reddy: ರಾಜ್ಯ ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ಡಬ್ಲ್ಯುಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ನೇಮಿಸಲಾಗಿದೆ.
ಬೆಂಗಳೂರು: ಸಾರಿಗೆ ಇಲಾಖೆಯ 4 ಸಾರಿಗೆ ನಿಗಮಗಳಿಗೆ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕವಾಗಿದ್ದಾರೆ. ಸಾರಿಗೆ ಇಲಾಖೆ ಅಧೀನದಲ್ಲಿರುವ ಬಿಎಂಟಿಸಿ, ಕೆಎಸ್ಆರ್ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ಅವರನ್ನು ನೇಮಿಸಿ ಸಾರಿಗೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು
ಸಾಮಾನ್ಯವಾಗಿ ನಾಲ್ಕು ನಿಗಮಗಳಿಗೆ ಪ್ರತ್ಯೇಕವಾಗಿ ಅಧ್ಯಕ್ಷರ ನೇಮಕವಾಗುತ್ತಿತ್ತು. ಆದರೆ, ಈ ಬಾರಿ ಪ್ರತ್ಯೇಕವಾಗಿ ಅಧ್ಯಕ್ಷರನ್ನು ನೇಮಿಸದೆ ಸಚಿವ ರಾಮಲಿಂಗಾರೆಡ್ಡಿ ಅವರಿಗೇ ನಾಲ್ಕೂ ನಿಗಮಗಳ ಜವಾಬ್ದಾರಿ ನೀಡಲಾಗಿದೆ.
ಕರ್ನಾಟಕ
Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು
Hosakerehalli Lake: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಹೊಸಕೆರೆಹಳ್ಳಿ ಕೆರೆಯ (Hosakerehalli Lake) ಮಧ್ಯೆ ರಸ್ತೆ ನಿರ್ಮಾಣಕ್ಕೆ ಅನುಮತಿ ನೀಡಿದ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ರಮ ಕೈಗೊಳ್ಳಲು ಸೂಚಿಸಿದ ಬೆನ್ನಲ್ಲೇ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಕೆ.ಲಕ್ಷ್ಮೀಸಾಗರ್ ಆದೇಶ ಹೊರಡಿಸಿದ್ದಾರೆ.
ಘನತ್ಯಾಜ್ಯ ವಿಭಾಗದ ಇಇ ಎಚ್.ಎಸ್.ಮೇಘ ಹಾಗೂ ಎಇ ಶಿಲ್ಪ ಅಮಾನತುಗೊಂಡ ಅಧಿಕಾರಿಗಳು. ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣಕ್ಕೆ ಕಾರಣಕರ್ತರಾದ ಅಧಿಕಾರಿಗಳು, ಎಂಜಿನಿಯರ್ಗಳನ್ನು ಸೋಮವಾರ (ಜೂನ್ 5) ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದರು. ಹೀಗಾಗಿ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.
ಇದನ್ನೂ ಓದಿ | ಗ್ಲೋಬಲ್ ಬೆಂಗಳೂರು ಮಾಡಲು ಸಲಹಾ ಸಮಿತಿ; ಇದು ಡಿಕೆಶಿ ಮಾಸ್ಟರ್ ಪ್ಲ್ಯಾನ್!
ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸೋಮವಾರ ಮಧ್ಯಾಹ್ನ ಸಭೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಪ್ರಶ್ನಿಸಿದ್ದರು. ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪ ಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದರು.
ಕರ್ನಾಟಕ
Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Koppal News: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಕೊಪ್ಪಳ: ರಾಯಚೂರು ಜಿಲ್ಲೆಯ ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಒಬ್ಬ ಬಾಲಕ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಪ್ರಕರಣ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಜಿಲ್ಲೆಯಲ್ಲಿ (Koppal News) ನಡೆದಿದೆ. ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಹೊನ್ನಮ್ಮ ಶಿವಪ್ಪ (65) ಮೃತ ಮಹಿಳೆ. ಬಸರಿಹಾಳ ಗ್ರಾಮದಲ್ಲಿ ಸುಮಾರು ಮೂರು ದಿನಗಳಿಂದ ವಾಂತಿ- ಭೇದಿಯಿಂದ ಹಲವು ಜನರು ಬಳಲುತ್ತಿದ್ದರು. ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆಯಾಗಿದೆ ಸ್ಥಳೀಯರು ಆರೋಪಿಸಿದ್ದಾರೆ. ವೃದ್ಧೆ ಸಾವು ಬಳಿಕ ದಿನದಿಂದ ದಿನಕ್ಕೆ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಿದ ಆರೋಪ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ.
ಇದನ್ನೂ ಓದಿ | ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಟಯರ್ ಸಿಡಿದು ಪಲ್ಟಿ ಹೊಡೆದ ಕಾರು; ಐವರಿಗೆ ಗಾಯ
ಮಂಡ್ಯ: ಟಯರ್ ಸಿಡಿದು ಕಾರು ಪಲ್ಟಿಯಾಗಿದ್ದರಿಂದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಚಿಕ್ಕಮಂಡ್ಯ ಬಳಿ ಸೋಮವಾರ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಮೂಲದ ಅರ್ಜುನ್, ಮಂಜುನಾಥ್ ಜಿ.ಅಡಿಗ, ಶ್ರೀಕಾಂತ್, ಕೃಷ್ಣ, ಮೂರ್ತಿ ಗಾಯಗೊಂಡವರು.
ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದಾಗ ಚಿಕ್ಕಮಂಡ್ಯ ಸಮೀಪಿಸುತ್ತಿದ್ದಂತೆ ಕಾರಿನ ಟಯರ್ ಸ್ಫೋಟಗೊಂಡಿದೆ. ಹೀಗಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಕರ್ನಾಟಕ
World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ
World Environment Day: ಶಿವಮೊಗ್ಗದ ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಶಿವಮೊಗ್ಗ: ಪರಿಸರ ದಿನಾಚರಣೆ ನಿಮಿತ್ತ ವಿಸ್ತಾರ ನ್ಯೂಸ್ ಹಮ್ಮಿಕೊಂಡಿದ್ದ ಅಭಿಯಾನಕ್ಕೆ (World Environment Day) ಶಿವಮೊಗ್ಗದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರಕಿದೆ. ನಗರ ವ್ಯಾಪ್ತಿಯ 11 ಕಿ.ಮೀ. ಉದ್ದದ ಕಾಲುವೆಯ ಎರಡೂ ಬದಿಗಳಲ್ಲಿ ಸಾವಿರ ಗಿಡಗಳನ್ನು ನೆಡುವ ಬೃಹತ್ ಅಭಿಯಾನಕ್ಕೆ ಆರ್ಎಸ್ಎಸ್ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಚಾಲನೆ ನೀಡಿದರು.
ನಿರ್ಮಲ ತುಂಗಾ ಅಭಿಯಾನ ತಂಡ, ಪರ್ಯಾವರಣ ಸಂರಕ್ಷಣೆ, ಸರ್ಜಿ ಫೌಂಡೇಶನ್, ವಿಸ್ತಾರ ನ್ಯೂಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾಡಳಿತ, ತುಂಗಾ ಮೇಲ್ದಂಡೆ ಯೋಜನೆ, ಅರಣ್ಯ ಇಲಾಖೆ ಸಹಯೋಗ ನೀಡಿದ್ದು, ನಗರದ ಪರಿಸರ ಪ್ರೇಮಿಗಳು ಪರಿಸರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.
ಆರ್ಎಸ್ಎಸ್ ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್, ಜಿಲ್ಲಾ ಸಂಘಚಾಲಕ ರಂಗನಾಥ, ಸರ್ಜಿ ಫೌಂಡೇಶನ್ ಮುಖ್ಯಸ್ಥ ಡಾ. ಧನಂಜಯ ಸರ್ಜಿ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ದಿನೇಶ್ ಶೇಟ್, ತ್ಯಾಗರಾಜ ಮಿತ್ಯಾಂತ, ಬಾಲಕೃಷ್ಣ ನಾಯ್ಡು, ಗೊ.ಕೃ. ಭಾಗವತ್, ರಂಗಭೂಮಿ ಮಂಜು, ನಾಗಭೂಷಣ್ ಸ್ವಾಮಿ, ಕುಮಾರಿಪ್ರಣಮ್ಯ, ಪ್ರಣೀತಾ, ಮುಂತಾದವರು ಇದ್ದರು.
-
ಕರ್ನಾಟಕ20 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ17 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ15 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ11 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ15 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ಕರ್ನಾಟಕ8 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
-
ದೇಶ19 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಕರ್ನಾಟಕ9 hours ago
Free Bus: ಉಚಿತ ಬಸ್ ಪ್ರಯಾಣಕ್ಕೆ ಸಿಕ್ಕಿತು ಅನುಮೋದನೆ; ಏಳು ಕಂಡೀಷನ್ನೊಂದಿಗೆ ಚಾಲನೆ!