Wife Missing : ಗಂಡ ಬಾತ್‌ರೂಂನಲ್ಲಿ, ಹೆಂಡತಿ ಪ್ರಿಯತಮನ ಜತೆಯಲ್ಲಿ ಪರಾರಿ! - Vistara News

ಕರ್ನಾಟಕ

Wife Missing : ಗಂಡ ಬಾತ್‌ರೂಂನಲ್ಲಿ, ಹೆಂಡತಿ ಪ್ರಿಯತಮನ ಜತೆಯಲ್ಲಿ ಪರಾರಿ!

Wife Missing : ಕಾಣೆಯಾಗಿರುವ ಪತ್ನಿಯನ್ನು ಹುಡುಕಿಕೊಡಿ ಎಂದು ಪತಿಯೊಬ್ಬ ಠಾಣೆ ಮೆಟ್ಟಿಲೇರಿದ್ದಾನೆ.

VISTARANEWS.COM


on

Husband in bathroom wife escaped with boy friend
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪತಿ ಬಾತ್‌ರೂಂನಲ್ಲಿದ್ದಾಗ ಪತ್ನಿ ಬಾಗಿಲಿಗೆ ಬೀಗ ಹಾಕಿ ಪ್ರಿಯತಮನ ಜತೆಗೆ ಪರಾರಿ (Escaped) ಆಗಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ (Rajarajeshwari nagar) ನಡೆದಿದೆ. ಕಾಣೆಯಾದ ಪತ್ನಿಗಾಗಿ ಠಾಣೆ ಮೆಟ್ಟಿಲೇರಿರುವ ಪತಿ ನನ್ನ ಹೆಂಡತಿಯನ್ನು ಹುಡುಕಿಕೊಡಿ (Wife missing) ಎಂದು ದೂರು ಕೊಟ್ಟಿದ್ದಾನೆ.

ರಮೇಶ್‌ (31) ಎಂಬಾತ ಅರ್ಪಿತಾ (25) ಎಂಬುವವರನ್ನು ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅರ್ಪಿತಾ ಕೆಲಸ ಮಾಡುತ್ತಿದ್ದಳು. ಈ ದಂಪತಿ ರಾಜರಾಜೇಶ್ವರಿ ನಗರದಲ್ಲಿ ವಾಸವಾಗಿದ್ದರು. ಹೀಗಿರುವಾಗ ಕಳೆದ ಆಗಸ್ಟ್‌ 12ರಂದು ಬೆಳಗ್ಗೆ ಸುಮಾರು 6.30ರ ಸುಮಾರಿಗೆ ರಮೇಶ್‌ ಬಾತ್‌ರೂಂಗೆ ಹೋಗಿದ್ದಾರೆ. ಇತ್ತ ಅರ್ಪಿತಾ ಮನೆಯ ಬಾಗಿಲಿಗೆ ಬೀಗ ಹಾಕಿಕೊಂಡು ಹೋಗಿದ್ದಾಳೆ.

ಇದನ್ನೂ ಓದಿ: Commission Politics : ರಾಜ್ಯಪಾಲರಿಗೆ ದಯಾಮರಣ ಪತ್ರ; ಕಾಮಗಾರಿಯನ್ನೇ ಮಾಡದ ಗುತ್ತಿಗೆದಾರರಿಗೆ ಕಾನೂನು ಸಂಕಷ್ಟ!

ಬಾತ್‌ರೂಂನಿಂದ ಹೊರ ಬಂದಾಗ ರಮೇಶ್‌ ಪತ್ನಿ ಅರ್ಪಿತ ಕಾಣದೆ ಇದ್ದಾಗ ಮನೆ ಪೂರ್ತಿ ಹುಡುಕಾಡಿದ್ದಾರೆ. ಮನೆ ಬಾಗಿಲು ತೆರಯಲು ನೋಡಿದಾಗ ಬೀಗ ಹಾಕಿರುವುದು ಗೊತ್ತಾಗಿದೆ. ಬಳಿಕ ಸ್ಥಳೀಯರ ಸಹಾಯದಿಂದ ಬಾಗಿಲು ಓಪನ್‌ ಮಾಡಿಸಿದ್ದಾರೆ. ಇತ್ತ ಕಾಣೆಯಾದ ಪತ್ನಿಗಾಗಿ ರಮೇಶ್‌ ಹುಡುಕಾಡಿ ಸುಸ್ತಾಗಿದ್ದಾರೆ.

ಆಕೆ ಕೆಲಸ ಮಾಡುತ್ತಿದ್ದ ಆಸ್ಪತ್ರೆಗೆ ತೆರಳಿ ವಿಚಾರಿಸಿದಾಗ ಕಾರ್ತಿಕ್‌ ಎಂಬಾತನೊಂದಿಗೆ ಸ್ನೇಹ ಹೊಂದಿದ್ದಳು ಎಂದು ತಿಳಿದುಬಂದಿದೆ. ಕಡೆಗೆ ಆತನನ್ನು ವಿಚಾರಿಸಿದಾಗ ನಿಮ್ಮ ಹೆಂಡತಿ ಬಿಟಿಎಂ ಲೇಔಟ್‌ನಲ್ಲಿದ್ದಾರೆ, ಕರೆದುಕೊಂಡು ಬರುತ್ತೇನೆ ಎಂದು ಹೇಳಿ ಹೋಗಿದ್ದಾನೆ. ಆ ಬಳಿಕ ಆತನ ಮೊಬೈಲ್‌ ಫೋನ್‌ ಸ್ವಿಚ್ಡ್‌ ಆಫ್‌ ಆಗಿದೆ.

ಸದ್ಯ ಕಾರ್ತಿಕ್‌ ವಿರುದ್ಧ ರಮೇಶ್‌ ದೂರು ದಾಖಲಿಸಿದ್ದಾರೆ. ನನ್ನ ಹೆಂಡತಿಯನ್ನು ಕಾರ್ತಿಕ್‌ ಕರೆದುಕೊಂಡು ಹೋಗಿರುವ ಅನುಮಾನ ಇದೆ. ಕಾಣೆಯಾಗಿರುವ ನನ್ನ ಪತ್ನಿಯನ್ನು ಪತ್ತೆ ಮಾಡಿ ಎಂದು ರಮೇಶ್‌ ರಾಜರಾಜೇಶ್ವರಿ ನಗರದಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Liquor Price Karnataka: ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆ (Beer Price) ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ (Liquor Price Karnataka) ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್‌ ಇಳಿಯವಂತಾಗಿದೆ.

ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ. ಬಿಯರ್ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಇತರ ದುಬಾರಿ ಹಾಟ್‌ ಮದ್ಯಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಮದ್ಯಪ್ರಿಯರು ಬಿಯರ್‌ಗೆ ತೃಪ್ತಿಪಟ್ಟುಕೊಳ್ಳೋಣ ಎಂದು ಭಾವಿಸಿದರೆ ಈಗ ಅದೂ ಸಾಧ್ಯವಿಲ್ಲದಾಗಿದೆ.

ಕಾಂಗ್ರೆಸ್ ಸರ್ಕಾರ ಬಂದಮೇಲೆ ಬಿಯರ್ ದರ ಸುಮಾರು 60 ರೂಪಾಯಿಯಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರಕಾರ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಅದರಿಂದ ದರ ಏರಿಕೆಯಾಗಿತ್ತು. ಆ ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ದವು.

ನಂತರ ಮತ್ತೆ ಸರ್ಕಾರದಿಂದ ಬಿಯರ್ ಮೇಲಿನ ಸುಂಕ‌ ಹೆಚ್ಚಳ ಮಾಡಿದ್ದ ಕಾರಣ ಕಳೆದ ಫೆಬ್ರವರಿಯಲ್ಲಿ ಬಿಯರ್ ದರ ಏರಿದೆ. ಇದೀಗ ಮತ್ತೆ ಬಿಯರ್ ದರ ಏರಿಕೆಗೆ ಕಂಪನಿಗಳು ತೀರ್ಮಾನಿಸಿವೆ. ಹೀಗಾಗಿ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 60 ರೂ. ವರೆಗೆ ಹೆಚ್ಚಳವಾದಂತಾಗಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಖಜಾನೆ ತುಂಬಿಸಿಕೊಳ್ಳಲು ಅಬಕಾರಿ ಸುಂಕವನ್ನು ಅನಿಯಮಿತವಾಗಿ ಹೆಚ್ಚಿಸುವ ದಾರಿಯನ್ನು ಸರಕಾರ ಹಿಡಿದಿದೆ ಎಂದು ಲಿಕ್ಕರ್‌ಪ್ರಿಯರು ಆರೋಪಿಸಿದ್ದಾರೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ದೇಶ

Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

Jio Games: ದೇಶದ ಮುಂಚೂಣಿ ಗೇಮಿಂಗ್‌ ಫ್ಲಾಟ್‌ಫಾರಂ ಆಗಿರುವ ʼಜಿಯೋಗೇಮ್ಸ್ʼ, ಜಿಯೋಗೇಮ್ಸ್‌ ಆಪ್‌ ಮತ್ತು ಜಿಯೋ ಸೆಟ್‌ಆಫ್‌ ಬಾಕ್ಸ್‌ನಲ್ಲಿ ಗೂಗಲ್‌ ಗೇಮ್‌ಸ್ನ್ಯಾಕ್ಸ್‌ ಅನ್ನು ಸಂಯೋಜಿಸುವ ಮೂಲಕ ತನ್ನ ಗೇಮಿಂಗ್‌ ಪೋರ್ಟ್‌ಫೋಲಿಯೊವನ್ನು ವಿಸ್ತರಿಸಿಕೊಂಡಿದೆ. ಇದರಿಂದಾಗಿ ಜಿಯೋಗೇಮ್ಸ್ ಬಳಕೆದಾರರು‌ Daily Sudoku, Om Nom Run, and Traffic Tom ಸೇರಿದಂತೆ ಜನಪ್ರಿಯವಾದ 8 ಗೇಮ್‌ಗಳನ್ನು ಆಡಬಹುದಾಗಿದೆ.

VISTARANEWS.COM


on

Koo

ನವದೆಹಲಿ: ದೇಶದ ಮುಂಚೂಣಿ ಗೇಮಿಂಗ್‌ ಫ್ಲಾಟ್‌ಫಾರಂ ಆಗಿರುವ ʼಜಿಯೋಗೇಮ್ಸ್ʼ, ಜಿಯೋಗೇಮ್ಸ್‌ ಆಪ್‌ ಮತ್ತು ಜಿಯೋ ಸೆಟ್‌ಆಫ್‌ ಬಾಕ್ಸ್‌ನಲ್ಲಿ ಗೂಗಲ್‌ ಗೇಮ್‌ಸ್ನ್ಯಾಕ್ಸ್‌ ಅನ್ನು ಸಂಯೋಜಿಸುವ ಮೂಲಕ ತನ್ನ ಗೇಮಿಂಗ್‌ ಪೋರ್ಟ್‌ಫೋಲಿಯೊವನ್ನು (Jio Games) ವಿಸ್ತರಿಸಿಕೊಂಡಿದೆ. ಇದರಿಂದಾಗಿ ಜಿಯೋಗೇಮ್ಸ್ ಬಳಕೆದಾರರು‌ Daily Sudoku, Om Nom Run and Traffic Tom ಸೇರಿದಂತೆ ಜನಪ್ರಿಯವಾದ 8 ಗೇಮ್‌ಗಳನ್ನು ಆಡಬಹುದಾಗಿದೆ.

Om Nom Run

ʼಗೇಮ್‌ಸ್ನ್ಯಾಕ್ಸ್‌ʼನ ಎಲ್ಲ ಗೇಮ್‌ಗಳೂ ಜಿಯೋಗೇಮ್ಸ್‌ ಬಳಕೆದಾರರಿಗೆ ಉಚಿತವಾಗಿರಲಿವೆ. ಆಂಡ್ರಾಯ್ಡ್‌ ಫೋನ್‌ ಬಳಕೆದಾರರು ಜಿಯೋಗೇಮ್ಸ್‌ ಆಪ್‌ನ ಹೋಮ್‌ಪೇಜ್‌ನಲ್ಲಿ ಈ ಗೇಮ್‌ಗಳನ್ನು ಸುಲಭವಾಗಿ ಪಡೆಯಬಹುದು. ಜಿಯೋಗೇಮ್ಸ್‌ನ ಮಿನಿ ಆಪ್‌ಗಳಾದ ಮೈಜಿಯೋ ಮತ್ತು ಜಿಯೋಟಿವಿಯಲ್ಲಿಯೂ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್‌ಗಳು ಲಭ್ಯವಿವೆ.

Traffic Tom
Traffic Tom

ಗೂಗಲ್‌ನ ʼಗೇಮ್‌ಸ್ನ್ಯಾಕ್ಸ್‌ ಗೇಮ್‌ʼ ಗಳು ಕಡಿಮೆ ಗಾತ್ರದ್ದಾಗಿರುವ ಜತೆಗೆ ಬೇಗನೆ ತೆರೆದುಕೊಳ್ಳುತ್ತವೆ. ಕಡಿಮೆ ಮೆಮೊರಿ ಇರುವ ಸಾಧನಗಳಲ್ಲಿ, ವಿವಿಧ ನೆಟ್‌ವರ್ಕ್‌ ಸ್ಥಿತಿಯಲ್ಲಿಯೂ HTML5 ನ ಈ ಗೇಮ್‌ಗಳನ್ನು ಆಡಬಹುದಾಗಿದೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

ಭಾರತದಲ್ಲಿ ಲಕ್ಷಗಟ್ಟಲೆ ಬಳಕೆದಾರರ ಗೇಮಿಂಗ್‌ ಅನುಭವವನ್ನು ಸುಧಾರಿಸುವುದು ಈ ಸಹಭಾಗಿತ್ವದ ಉದ್ದೇಶವಾಗಿದೆ ಎಂದು ಕಂಪನಿಯು ತಿಳಿಸಿದೆ. ಇದರಿಂದಾಗಿ ಸಾಮಾನ್ಯವಾದ ಗೇಮ್‌ಗಳನ್ನು ಗ್ರಾಹಕರು ಸುಲಭವಾಗಿ ಆಡಬಹುದು ಎಂದು ತಿಳಿಸಿದೆ.

Continue Reading

ದೇಶ

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

The RajaSaab Movie: ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿನಯದ ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. . ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ. ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Rebel star Prabhas starrer The Rajasaab short glimpse released
Koo

ಬೆಂಗಳೂರು: ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌, ಇದೀಗ ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್‌ ಮೂಲಕ ಮತ್ತೆ ಫ್ಯಾನ್ಸ್‌ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” (The RajaSaab Movie) ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ.

ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಬರೀ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್‌ ಸಿನಿಮಾ ಬಿಡುಗಡೆ ಆಗಲಿದೆ. ಹಾಗಾದರೆ, ಇದ್ಯಾವ ರೀತಿಯ ಸಿನಿಮಾ? ರೋಮ್ಯಾಂಟಿಕ್ ಹಾರರ್ ಕಾಮಿಡಿಯಲ್ಲಿ ಪ್ರಭಾಸ್‌ ಎಲ್ಲರನ್ನು ಮೋಡಿ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ಮಾರುತಿ ಈ ಸಿನಿಮಾ ಮೂಲಕ ಪ್ರಭಾಸ್‌ ಅವರನ್ನು ಇನ್ನಷ್ಟು ಸ್ಟೈಲಿಶ್ ಲುಕ್‌ನಲ್ಲಿ ತೋರಿಸಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್‌ಎಸ್ ಥಮನ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ರಾಮ್ ಲಕ್ಷ್ಮಣ್ ಮಾಸ್ಟರ್ಸ್ ಮತ್ತು ಕಿಂಗ್ ಸೊಲೊಮನ್ ಫೈಟ್ ಕೊರಿಯೋಗ್ರಫಿಯನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ಭರ್ಜರಿ ಆಕ್ಷನ್‌ ನಿರೀಕ್ಷಿಸಬಹುದಾಗಿದೆ. ಬಾಹುಬಲಿ ಖ್ಯಾತಿಯ ಕಮಲಾ ಕಣ್ಣನ್ ಆರ್.ಸಿ. ವಿಎಫ್‌ಎಕ್ಸ್‌ನ ಉಸ್ತುವಾರಿ ವಹಿಸಿಕೊಂಡಿದ್ದು, ದೊಡ್ಡ ಪರದೆಯ ಮೇಲೆ ದೃಶ್ಯ ಚಮತ್ಕಾರ ನೀಡಲಿದೆ.

ಮಾರುತಿ ನಿರ್ದೇಶನದ ರಾಜಾ ಸಾಬ್‌ ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ಸಾಬ್ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ‘ಪ್ರತಿ ರೋಜು ಪಂಡಗʼ, ತೆಲುಗಿನ ಹಾರರ್ ಕಾಮಿಡಿ ‘ಪ್ರೇಮ ಕಥಾ ಚಿತ್ರಂʼ ಮತ್ತು ರೊಮ್ಯಾಂಟಿಕ್ ಕಾಮಿಡಿ ‘ಮಹಾನುಭಾವುಡು’ ಸೇರಿ ಹಲವು ಸೂಪರ್‌ಹಿಟ್‌ಗಳಿಗೆ ಸಿನಿಮಾ ನಿರ್ದೇಶನ ಮಾಡಿದ ಮಾರುತಿ, ಇದೀಗ ರಾಜಾಸಾಬ್‌ ಮೂಲಕ ರೊಮ್ಯಾಂಟಿಕ್ ಹಾರರ್ ಎಂಟರ್ಟೈನರ್ ಜತೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

‘ಕಾರ್ತಿಕೇಯ 2’ ಮತ್ತು ‘ಧಮಾಕಾ’ ಸೇರಿ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌ ತೆಲುಗು ಚಿತ್ರೋದ್ಯಮದಲ್ಲಿ ಪ್ರಮುಖ ಹೆಸರು. ಇದೀಗ ಬಹುಕೋಟಿ ವೆಚ್ಚದಲ್ಲಿ ರಾಜಾ ಸಾಬ್ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಅದ್ಧೂರಿಯಾಗಿ, ಎಲ್ಲಿಯೂ ರಾಜಿ ಮಾಡಿಕೊಳ್ಳದೆ ಅದ್ಧೂರಿಯಾಗಿ ನಿರ್ಮಿಸುತ್ತಿದೆ. ಕೋಟಗಿರಿ ವೆಂಕಟೇಶ್ವರ ರಾವ್ ಈ ಚಿತ್ರಕ್ಕೆ ಸಂಕಲನ ಮಾಡಿದರೆ, ಕಾರ್ತಿಕ್ ಪಳನಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಂಗೀತವನ್ನು ಎಸ್‌ಎಸ್‌ ಥಮನ್ ಮಾಡಿದರೆ, ರಾಮ್ ಲಕ್ಷ್ಮಣ್ ಮತ್ತು ಕಿಂಗ್ ಸೊಲೊಮನ್ ಸವರ ಸಾಹಸ ಈ ಚಿತ್ರಕ್ಕಿರಲಿದೆ.

Continue Reading

ಪ್ರಮುಖ ಸುದ್ದಿ

Uttara Kannada Landslide: ನೀರಿನಡಿ ಇನ್ನೂ 9 ದೇಹಗಳಿವೆ ಎಂದ ಸ್ವಾಮೀಜಿ! ಬರಲಿದೆ ಕೇರಳದಿಂದ ಬಾರ್ಜ್‌ ಮೌಂಟೆಡ್‌ ಹಿಟಾಚಿ

Uttara Kannada Landslide: ಶಿರೂರು ಗುಡ್ಡ ಕುಸಿದಲ್ಲಿ ನಾಪತ್ತೆಯಾದವರಿಗಾಗಿ ಇಂದೂ ಶೋಧ ಮುಂದುವರಿದಿದ್ದು, ಕಾರ್ಯಾಚರಣೆ 15ನೇ ದಿನಕ್ಕೆ ಕಾಲಿಟ್ಟಿದೆ. ಬೋಟ್‌ಗಳ ಮೂಲಕ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಬ್ರಿಡ್ಜ್ ಮೌಂಟೆಡ್ ಡ್ರೆಜ್ಜಿಂಗ್ ಮೂಲಕ ಕಾರ್ಯಾಚರಣೆ ವಿಚಾರದಲ್ಲಿ ತ್ರಿಶೂರ್‌ನ ತಾಂತ್ರಿಕ ತಜ್ಞರಿಂದ ಜಿಲ್ಲಾಡಳಿತ ಲಿಖಿತ ವರದಿ ಕೋರಿದೆ.

VISTARANEWS.COM


on

Koo

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ (Uattara Kannada Landslide, Ankola Landslide) ಸ್ಥಳಕ್ಕೆ ಉಡುಪಿಯ ದ್ವಾರಕಾಮಯಿ ಮಠದ ಸಾಯಿ ಈಶ್ವರ ಗುರೂಜಿ ಭೇಟಿ ನೀಡಿದ್ದು, ಸ್ಥಳದ ಪರಿಶೀಲನೆ ನಡೆಸಿದ ಬಳಿಕ ʼನೀರಿನಡಿಯಲ್ಲಿ ಇನ್ನೂ 9 ದೇಹಗಳಿರಬಹುದುʼ ಎಂದಿದ್ದಾರೆ.

ಈ ನಡುವೆ, ಗುಡ್ಡ ಕುಸಿತ ಜಾಗದಲ್ಲಿ ಕಾರ್ಯಾಚರಣೆ 15ನೇ ದಿನವೂ ಮುಂದುವರಿದಿದೆ. ಲಾರಿ ಮುಳುಗಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಕೇರಳದಿಂದ ಬಾರ್ಜ್ ಮೌಂಟೆಡ್ ಹಿಟಾಚಿ (Barge Mounted Hitachi) ತರಿಸಲು ಚಿಂತಿಸಲಾಗಿದೆ.

ದ್ವಾರಕಾಮಯಿ ಮಠದ ಸಾಯಿ ಈಶ್ವರ ಗುರೂಜಿ ನಿನ್ನೆ ಸ್ಥಳಕ್ಕೆ ಆಗಮಿಸಿ, ತಮ್ಮ ಪೆಂಡುಲಮ್ ಮೂಲಕ ಮತ್ತು ಎಲೆಕ್ಟ್ರಾನಿಕ್ ಸ್ಕ್ಯಾನಿಂಗ್ ಮೂಲಕ ಪರಿಶೀಲಿಸಿದರು. ಈ ಗುಡ್ಡಕುಸಿತದಲ್ಲಿ 17 ದೇಹಗಳು ಕಾಣಬರುತ್ತಿವೆ. ಸದ್ಯ 8 ಮೃತದೇಹಗಳು ಪತ್ತೆಯಾಗಿದೆ, ಇನ್ನೂ 9 ದೇಹಗಳಿವೆ ಎಂದು ಸ್ವಾಮೀಜಿ ಹೇಳಿದ್ದಾರೆ. ಕೇರಳದ ಟ್ರಕ್ ಗಂಗಾವಳಿ ನದಿಯ 24 ಅಡಿ ಆಳದಲ್ಲಿದೆ. ಟ್ರಕ್ ಇರೋ ಜಾಗದ ಬಳಿ ಒಂದು ದೇಹ ಇದೆ. ಉಳಿದವರ ದೇಹಗಳು ಗಂಗಾವಳಿ ನದಿಯಲ್ಲಿ ಹೋಗಿದೆ ಎಂದಿದ್ದಾರೆ.

ಕೇರಳದಿಂದ ಬಾರ್ಜ್‌

ಶಿರೂರು ಗುಡ್ಡ ಕುಸಿದಲ್ಲಿ ನಾಪತ್ತೆಯಾದವರಿಗಾಗಿ ಇಂದೂ ಶೋಧ ಮುಂದುವರಿದಿದ್ದು, ಕಾರ್ಯಾಚರಣೆ 15ನೇ ದಿನಕ್ಕೆ ಕಾಲಿಟ್ಟಿದೆ. ಬೋಟ್‌ಗಳ ಮೂಲಕ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಬ್ರಿಡ್ಜ್ ಮೌಂಟೆಡ್ ಡ್ರೆಜ್ಜಿಂಗ್ ಮೂಲಕ ಕಾರ್ಯಾಚರಣೆ ವಿಚಾರದಲ್ಲಿ ತ್ರಿಶೂರ್‌ನ ತಾಂತ್ರಿಕ ತಜ್ಞರಿಂದ ಜಿಲ್ಲಾಡಳಿತ ಲಿಖಿತ ವರದಿ ಕೋರಿದೆ. ವರದಿ ಆಧರಿಸಿ ನೌಕಾಪಡೆ, ಕೋಸ್ಟ್‌ಗಾರ್ಡ್, NDRF, SDRF, ಅಗ್ನಿಶಾಮಕ ದಳ ವತಿಯಿಂದ ಕಾರ್ಯಾಚರಣೆ ನಡೆಸಲು ಚಿಂತಿಸಲಾಗಿದೆ.

ಬಾರ್ಜ್ ಮೌಂಟೆಡ್ ಹಿಟಾಚಿ ತರಿಸಲು ಶಾಸಕ ಸತೀಶ್ ಸೈಲ್ ಚಿಂತಿಸಿದ್ದಾರೆ. ಇದು ನದಿಯಲ್ಲೇ ನಿಂತು ಆಳದಲ್ಲಿನ ಮಣ್ಣು, ಕಲ್ಲು ತೆಗೆಯುತ್ತದೆ. ಕೇರಳದ ಕೃಷಿ ಇಲಾಖೆಯ ಬಳಿ ಬಾರ್ಜ್ ಮೌಂಟೆಡ್ ಬೂಮ್ ಕ್ರಾಲಿಂಗ್ ಎಕ್ಸಕ್ಯಾವೇಟರ್ ಇದ್ದು, ಈ ಬಗ್ಗೆ ಕೇರಳ ಸರ್ಕಾರದೊಂದಿಗೆ ಸೈಲ್‌ ಮಾತುಕತೆ ನಡೆಸಿದ್ದಾರೆ. ಬಾರ್ಜ್ ಮೌಂಟೆಡ್ ಹಿಟಾಚಿಯ ಆಪರೇಟರ್, ಎಂಜಿನಿಯರ್‌ರಿಂದ ಇಂದು ಸ್ಥಳ ಪರಿಶೀಲನೆ‌ ಸಾಧ್ಯತೆ ಇದೆ.

ನೀರಿನ ಪ್ರವಾಹ ಅಡ್ಡಿ

ಜುಲೈ 16 ರಂದು ಶಿರೂರು ಬಳಿ ನಡೆದ ಗುಡ್ಡಕುಸಿತ ದುರಂತದಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ 8 ಮಂದಿ ಶವವಾಗಿ ಸಿಕ್ಕಿದ್ದರು. ನಾಪತ್ತೆಯಾಗಿದ್ದ ಜಗನ್ನಾಥ ನಾಯ್ಕ, ಲೋಕೇಶ, ಅರ್ಜುನ್‌‌ ಸೇರಿ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಹಲವರು ಮಣ್ಣಿನಡಿ ಸಿಲುಕಿದ್ದರು, ಇನ್ನೂ ಕೆಲವರು ಗಂಗಾವಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ನದಿಯಲ್ಲೂ ಹುಡುಕಾಟ ನಡೆಸಲಾಗುತ್ತಿದೆ. ನೀರಿನ ವೇಗ ಹೆಚ್ಚಿರುವುದು ಹಾಗೂ ನದಿಯಲ್ಲಿರುವ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿಗಳಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಅಲ್ಲದೇ ಕಾರ್ಯಾಚರಣೆಯಲ್ಲಿ ಲಾರಿಯನ್ನು ಮೇಲಕ್ಕೆ ಎತ್ತಲೂ ಸಾಧ್ಯವಾಗಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಒಂದು ಕಡೆ ಮಣ್ಣಿನಡಿ ಲಾರಿ ಇದೆ ಎಂದಿದ್ದರು, ಒಂದು ವಾರದಲ್ಲಿ ಕಾರ್ಯಾಚರಣೆ ನಡೆಸಿ ಮಣ್ಣು ತೆಗೆದೆವು. ಈಗ ನೀರಿನಲ್ಲಿ ಇದೆ ಎಂದಾಗ ನದಿಯಲ್ಲಿ ಕಾರ್ಯಾಚರಣೆ ಮಾಡಿದ್ದೇವೆ. ಎಲ್ಲಾ ಪ್ರಯತ್ನ ಮಾಡಿದರೂ ಮೂವರ ಮೃತ ದೇಹ ಸಿಗದಿರುವುದು ಬೇಸರ ತಂದಿದೆ. ದೇಹ ಸಿಗದೇ ಇದ್ದವರಿಗೂ ಅವರ ಅವಲಂಬಿತರ ಬಳಿ ಅಗ್ರಿಮೆಂಟ್ ಮಾಡಿಕೊಂಡು ಪರಿಹಾರ ನೀಡುತ್ತೇವೆ. ಮೃತರ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾದರೆ ಅವರ ಜೊತೆ ನಾವು ಇರುತ್ತೇವೆ. ಕಾರ್ಯಾಚರಣೆ ಸ್ಥಗಿತ ಆಗಿಲ್ಲ, ಆದರೆ ಮಾಡಲು ಸಾಧ್ಯವಾಗುತ್ತಿಲ್ಲ. ನೀರಿನ ಪ್ರಮಾಣ ಕಡಿಮೆಯಾದ ನಂತರ ಕಾರ್ಯಾಚರಣೆ ಮಾಡುತ್ತೇವೆ. ಮುಳುಗಿರುವ ಟ್ರಕ್ ಮೇಲಕ್ಕೆ ಎತ್ತುವ ಪ್ರಯತ್ನ ಮಾಡುತ್ತೇವೆ. ಗುಡ್ಡ ಕುಸಿತದ ಬಗ್ಗೆ ಮಾಹಿತಿ ಪಡೆದು ಸಂಚಾರಕ್ಕೆ ಅನುವು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

Continue Reading
Advertisement
Liquor Price Karnataka
ಪ್ರಮುಖ ಸುದ್ದಿ4 mins ago

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Parliament Session
ರಾಜಕೀಯ8 mins ago

Parliament Session: ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜು; Live ಇಲ್ಲಿ ವೀಕ್ಷಿಸಿ

Kerala Landslide
ದೇಶ14 mins ago

Kerala Landslide: ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ದೇಶ18 mins ago

Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

Rebel star Prabhas starrer The Rajasaab short glimpse released
ದೇಶ31 mins ago

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

IPL 2025
ಕ್ರೀಡೆ42 mins ago

IPL 2025: ಆರ್​ಸಿಬಿ ಇನ್​ಸ್ಟಾಗ್ರಾಮ್​ ಖಾತೆ ಅನ್​ಫಾಲೋ ಮಾಡಿದ ಮ್ಯಾಕ್ಸ್​ವೆಲ್; ಕಾರಣವೇನು?

ಪ್ರಮುಖ ಸುದ್ದಿ44 mins ago

Uttara Kannada Landslide: ನೀರಿನಡಿ ಇನ್ನೂ 9 ದೇಹಗಳಿವೆ ಎಂದ ಸ್ವಾಮೀಜಿ! ಬರಲಿದೆ ಕೇರಳದಿಂದ ಬಾರ್ಜ್‌ ಮೌಂಟೆಡ್‌ ಹಿಟಾಚಿ

Mahila Samman Savings Certificate
ಮನಿ-ಗೈಡ್47 mins ago

Mahila Samman Savings Certificate: ಮಹಿಳಾ ಸಮ್ಮಾನ್‌‌ನಲ್ಲಿ ಹೂಡಿಕೆಯಿಂದ ಏನು ಲಾಭ?

Kerala Landslide
ದೇಶ55 mins ago

Kerala Landslide: ಕೇರಳದಲ್ಲಿ ವರುಣನ ರೌದ್ರ ನರ್ತನ ಶುರು; ಭಾರೀ ಭೂಕುಸಿತಕ್ಕೆ ಐವರು ಬಲಿ

Yogi Adithyanath
ದೇಶ58 mins ago

Yogi Adityanath: ಲವ್‌ ಜಿಹಾದ್‌ ಮಟ್ಟ ಹಾಕಲು ಯೋಗಿ ಆದಿತ್ಯನಾಥ್‌ ಪಣ; ಅಪರಾಧ ಸಾಬೀತಾದರೆ ಜೀವಾವಧಿ ಶಿಕ್ಷೆಯ ಪ್ರಸ್ತಾವ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ16 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ17 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ20 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌