ಕೊಡಗು ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬಿಜೆಪಿ ಭದ್ರಕೋಟೆ ಭೇದಿಸುವುದೇ ಕಾಂಗ್ರೆಸ್‌? - Vistara News

ಕರ್ನಾಟಕ

ಕೊಡಗು ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬಿಜೆಪಿ ಭದ್ರಕೋಟೆ ಭೇದಿಸುವುದೇ ಕಾಂಗ್ರೆಸ್‌?

ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಕೊಡಗಿನಲ್ಲಿ ಈ ಬಾರಿ ಬದಲಾವಣೆಯನ್ನು ನಿರೀಕ್ಷಿಸಲಾಗುತ್ತಿದೆ. ಕೊಡಗಿನ ಎರಡೂ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಾಬಲ್ಯವಿದ್ದರೂ, ಕಾಂಗ್ರೆಸ್‌ ತೀವ್ರ ಪೈಪೋಟಿ ನೀಡುತ್ತಿರುವ ಕಾರಣ ಕದನ ಕುತೂಹಲ ಮೂಡಿದೆ.

VISTARANEWS.COM


on

Will Congress Defeat BJP in Kodagu In Assembly Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಲೋಹಿತ್ ಎಂ.ಆರ್., ವಿಸ್ತಾರ ನ್ಯೂಸ್, ಕೊಡಗು

ಕೊಡವರು ಹಾಗೂ ಗೌಡರ ಮತಗಳು ಹೆಚ್ಚಿರುವ, ಹಿಂದುತ್ವದ ರಾಜಕಾರಣಕ್ಕೆ ಹೆಸರಾಗಿರುವ, ಬಿಜೆಪಿ ಭದ್ರಕೋಟೆಯೇ ಆಗಿರುವ ಕೊಡಗಿನಲ್ಲಿ ಈ ಬಾರಿಯ ಚುನಾವಣೆ ಕುತೂಹಲ ಕೆರಳಿಸಿದೆ. ಹಿಂದುತ್ವ ರಾಜಕಾರಣದ ಜತೆಗೆ ಜಾತಿ ರಾಜಕಾರಣವೂ ಈ ಬಾರಿ ಮುನ್ನೆಲೆಗೆ ಬಂದಿರುವ ಕಾರಣ ಕದನ ಕುತೂಹಲ ಹೆಚ್ಚಾಗಿದೆ. ಕೊಡಗಿನಲ್ಲಿ ಹಿಂದುತ್ವದ ಆಧಾರದ ಮೇಲೆ ರಾಜಕಾರಣ ಮಾಡುವ ಬಿಜೆಪಿ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಜಾತಿ ಲೆಕ್ಕಾಚಾರದ ಪ್ರತಿತಂತ್ರ ಹೂಡಿವೆ. ಹಾಗಾಗಿ, ಈ ಬಾರಿ ಬಿಜೆಪಿಗೆ ಕೊಡಗಿನಲ್ಲಿ ಹೆಚ್ಚಿನ ಸವಾಲುಗಳಿವೆ. ಇವುಗಳನ್ನು ಮೆಟ್ಟಿ ಬಿಜೆಪಿ ಗೆಲುವು ಸಾಧಿಸುತ್ತದೆಯೇ ಅಥವಾ ಕಾಂಗ್ರೆಸ್‌ ಸೆಡ್ಡು ಹೊಡೆದು ಜಯದ ಮಾಲೆ ಧರಿಸುತ್ತದೆಯೇ ಎಂಬ ನಿರೀಕ್ಷೆ ಹೆಚ್ಚಾಗಿವೆ. ಈ ನಡುವೆ, ಬಜರಂಗದಳ ನಿಷೇಧ ವಿವಾದ ಬಿಜೆಪಿಗೆ ಎಷ್ಟರಮಟ್ಟಿಗೆ ನೆರವು ನೀಡುತ್ತದೆ ಎನ್ನುವುದೂ ಕುತೂಹಲಕರವಾಗಿದೆ. ಹಾಗಾದರೆ, ಕೊಡಗಿನಲ್ಲಿ ರಾಜಕೀಯ ತಂತ್ರ-ಪ್ರತಿತಂತ್ರಗಳು ಹೇಗಿವೆ? ಯಾವ ಪಕ್ಷದ ಅಭ್ಯರ್ಥಿಗಳ ಲೆಕ್ಕಾಚಾರ ಹೇಗಿದೆ? ಯಾರ ಕೈ ಮೇಲಾಗಲಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಮಡಿಕೇರಿ: ದ್ವಿಕೋನ ಕದನದಲ್ಲಿ ಯಾರಿಗೆ ಗೆಲುವು?

ಕೊಡಗಿನ ಎರಡು ವಿಧಾನಸಭೆ ಕ್ಷೇತ್ರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಕೂಡ ಒಂದು. ಕಳೆದ 25 ವರ್ಷದಿಂದಲೂ ಕೂಡ ಈ ಭಾಗದಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್ ಅವರೇ ಗೆಲುವಿನ ನಗೆ ಬೀರುತ್ತಿದ್ದಾರೆ. 6 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಅಪ್ಪಚ್ಚು ರಂಜನ್, 5 ಬಾರಿ ಗೆದ್ದಿದ್ದಾರೆ. ಹಾಗೆಯೇ, ಒಂದು ಬಾರಿ ಜಾತ್ಯಾತೀತ ಜನತಾದಳದ ಜೀವಿಜಯ ಅವರ ವಿರುದ್ಧ ಸೋಲು ಅನುಭವಿಸಿದ್ದಾರೆ. ಇನ್ನೂ ಈ ಬಾರಿಯೂ ಕೂಡ ಅಖಾಡಕ್ಕೆ ಇಳಿದ ಅಪ್ಪಚ್ಚು ರಂಜನ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಳೆದ ಹಲವು ಚುನಾವಣೆಯಲ್ಲಿ ಕೊಡಗಿನಲ್ಲಿ ಬಿಜೆಪಿಗೆ ಯಾವುದೇ ಪ್ರಬಲ ಪೈಪೋಟಿ ಇರಲಿಲ್ಲ. ಯಾರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೂ ಗೆಲುವು ಬಿಜೆಪಿಯದ್ದೇ ಆಗಿತ್ತು. ಆದರೆ ಇದೀಗ ಕಾಲ ಬದಲಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್‌ನಿಂದ  ಎ.ಮಂಜು (ವಾಲೆ ಮಂಜು) ಪುತ್ರ ಡಾ.ಮಂತರ್ ಗೌಡ ಹಾಗೂ ಜೆಡಿಎಸ್‌ನಿಂದ ನಾಪಂಡ ಮುತ್ತಪ್ಪ ಚುನಾವಣಾ ಅಖಾಡದಲ್ಲಿ ಇಳಿದಿದ್ದಾರೆ.

ಕಳೆದ ವಿಧಾನ‌ ಪರಿಷತ್ ಚುನಾವಣೆಯಲ್ಲಿ ಮಂತರ್ ಗೌಡ ಮಿಂಚಿನ ಸಂಚಲನ‌ ನಡೆಸಿ ಬಿಜೆಪಿಯ ಸುಜಾ ಕುಶಾಲಪ್ಪ ವಿರುದ್ಧ ಕಡಿಮೆ ಮತಗಳ ಅಂತರದಿಂದ  ಸೋಲು ಕಂಡಿದ್ದರು. ಇದೀಗ ಮತ್ತೆ ವಿಧಾನಸಭಾ ಚುನಾವಣೆಗೂ ಸ್ಪರ್ಧೆ ಮಾಡಿದ್ದು, ಜನರ ಬೆಂಬಲ ಪಡೆಯುತ್ತಿದ್ದಾರೆ. ಮಂತರ್ ಗೌಡ ಪರ ಹೆಚ್ಚಿನ ಯುವ ಸಮೂಹವೇ ಇದ್ದು ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಮಂತರ್‌ಗೆ ಅವರ ಪತ್ನಿ ಕೂಡ ಸಾಥ್ ನೀಡುತ್ತಿದ್ದಾರೆ. ಮಡಿಕೇರಿಯಲ್ಲಿ ಮಂತರ್ ಪ್ರಚಾರ ನಡೆಸಿದರೆ, ಸೋಮವಾರಪೇಟೆ ಭಾಗದಲ್ಲಿ ದಿವ್ಯಾ ಮಂತರ್ ಗೌಡ ಪ್ರಚಾರ ನಡೆಸುತ್ತಿದ್ದಾರೆ.

ಇನ್ನು, ಜೆಡಿಎಸ್‌ನ ನಾಪಂಡ ಮುತ್ತಪ್ಪ ಕೂಡ ಅಖಾಡಕ್ಕೆ ಇಳಿದು ಪ್ರಚಾರದಲ್ಲಿ ತೊಡಗಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ನಲ್ಲಿದ್ದ ಮುತ್ತಪ್ಪ ಟಿಕೆಟ್ ಆಕಾಂಕ್ಷಿಯಾಗಿದ್ರು. ಆದರೆ, ಕಾಂಗ್ರೆಸ್ ಅವರಿಗೆ ಮಣೆಹಾಕದ ಹಿನ್ನಲೆಯಲ್ಲಿ ಜಾತ್ಯತೀತ ಜನತಾದಳಕ್ಕೆ ಬಂದ ನಾಪಂಡ ಕೊಡ್ಲಿಪೇಟೆ, ಶನಿವಾರಸಂತೆ ಭಾಗದಲ್ಲಿ ಹೆಚ್ಚು ಮತದಾರನ್ನು ಹೊಂದಿದ್ದಾರೆ ಇವರು ಕೂಡ ಹೆಚ್ಚು ಯುವ ಪಡೆಯನ್ನು ಹೊಂದಿದ್ದು ಮಡಿಕೇರಿ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಇನ್ನು, ಮಡಿಕೇರಿ ಭಾಗದಲ್ಲಿ ಎಸ್‌ಡಿಪಿಐ ಕೂಡ ಅಭ್ಯರ್ಥಿಯನ್ನು ಕಣಕಿಳಿಸಿದ್ದು ಪ್ರಚಾರದಲ್ಲಿ ತೊಡಗಿದೆ.

ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಲ್ಲಿ ಬದಲಾವಣೆಯ ನಿರೀಕ್ಷೆ ಇತ್ತು. ಅಭ್ಯರ್ಥಿಯ ಬದಲಾವಣೆಗೆ ಬಿಜೆಪಿಯ ಪ್ರಮುಖರು ಪಟ್ಟುಹಿಡಿದಿದ್ದರು. ಆದರೂ ಅಪ್ಪಚ್ಚು ರಂಜನ್‌ ಅವರಿಗೇ ಟಿಕೆಟ್‌ ನೀಡಿರುವುದು ಕೆಲವು ಬಿಜೆಪಿಗರಿಗೆ ಅಸಮಾಧಾನ ತಂದಿದೆ. ಆದರೂ, ಅಪ್ಪಚ್ಚು ರಂಜನ್‌ ಅವರ ವರ್ಚಸ್ಸು ಇದೆಲ್ಲವನ್ನೂ ಮರೆಮಾಚುವ ಸಾಧ್ಯತೆ ಇದೆ. ಆದರೆ, ಈ ಭಾಗದಲ್ಲಿ ಗೌಡ ಮತದಾರರೇ ಜಾಸ್ತಿ ಇದ್ದು, ಮಂತರ್‌ ಗೌಡ ಪರ ಬೆಂಬಲ ವಾಲುವ ಸಾಧ್ಯತೆ ಇದೆ. ಹಾಗಾಗಿ, ಚುನಾವಣೆಯು ಹೆಚ್ಚಿನ ಕುತೂಹಲ ಮೂಡಿಸಿದೆ.

ಕಣದಲ್ಲಿರುವ ಅಭ್ಯರ್ಥಿಗಳು
1. ಅಪ್ಪಚ್ಚು ರಂಜನ್-‌ ಬಿಜೆಪಿ
2. ಮಂತರ್‌ ಗೌಡ- ಕಾಂಗ್ರೆಸ್‌
3. ನಾಪಂಡ ಮುತ್ತಪ್ಪ- ಜೆಡಿಎಸ್‌

2018ರ ಚುನಾವಣೆ ಫಲಿತಾಂಶ
– ಅಪ್ಪಚ್ಚು ರಂಜನ್ – ಬಿಜೆಪಿ-70,631
– ಬಿ.ಎ. ಜೀವಿಜಯ- ಜೆಡಿಎಸ್- 54,616
– ಗೆಲುವಿನ ಅಂತರ- 16,015

ವಿರಾಜಪೇಟೆ: ಕೆ.ಜಿ.ಬೋಪಯ್ಯಗೆ ಪೊನ್ನಣ್ಣ ತೀವ್ರ ಸ್ಪರ್ಧೆ

ಕೊಡಗಿನ ಜಿದ್ದಾ ಜಿದ್ದಿನ ಮತ್ತೊಂದು ಕ್ಷೇತ್ರ ಅಂದರೆ, ಅದು ವಿರಾಜಪೇಟೆ ವಿಧಾನಸಭಾ ಕ್ಷೇತ್ರ. ಈ ಒಂದು ಕ್ಷೇತ್ರದಲ್ಲಿ ಕಳೆದ 20 ವರ್ಷಗಳಲ್ಲಿ ಸೋಲಿಲ್ಲದ ಸರದಾರ ಅಂದರೆ, ಅದು ಬಿಜೆಪಿಯ ಕೆ.ಜಿ. ಬೋಪಯ್ಯ ಅವರು. ಕಳೆದ ನಾಲ್ಕು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಿನ‌ ರುಚಿ ತೋರಿಸಿದವರಲ್ಲಿ ಕೆ‌.ಜಿ ಬೋಪಯ್ಯ ಕೂಡ ಒಬ್ಬರು. ಸ್ಪೀಕರ್ ಆಗಿ ಕೆಲಸ ಮಾಡಿದ ಅನುಭವ ಕೂಡ ಕೆ.ಜಿ ಬೋಪಯ್ಯರಿಗೆ ಇದೆ‌. ಈ ಬಾರಿ ಕೂಡ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿರುವ ಬೋಪಯ್ಯರಿಗೆ ಕಾಂಗ್ರೆಸ್‌ನ ಎ.ಕೆ.ಸುಬ್ಬಯ್ಯ ಅವರ ಪುತ್ರ ಎ.ಎಸ್.ಪೊನ್ನಣ್ಣ ಪ್ರಬಲ ಸ್ಪರ್ಧೆ ಒಡ್ಡುತ್ತಿದ್ದಾರೆ. ಹೈಕೋರ್ಟ್ ವಕೀಲರಾಗಿರುವ ಪೊನ್ನಣ್ಣ ಕಳೆದ ಹಲವು ವರ್ಷದಿಂದ ವಿರಾಜಪೇಟೆ ಭಾಗದಲ್ಲಿ  ಕಾಣಿಸಿಕೊಂಡಿದ್ದಾರೆ. ಈ ಭಾಗದಲ್ಲಿ ಹೆಚ್ಚಿನ ಮತದಾರರು ಅಂದರೆ ಅದು ಕೊಡವರು. ಈ ಭಾರಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜಾತಿ- ಧರ್ಮ ಹೆಚ್ಚು ಚರ್ಚೆಗೆ ಕಾರಣವಾಗಿದೆ. ಕೊಡವರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ವಿರಾಜಪೇಟೆ ಕ್ಷೇತ್ರದಲ್ಲಿ ಕೊಡವರು ಏನು ಮಾಡುತ್ತಾರೆಂಬ ಕುತೂಹಲವಿದೆ.

ಕೊಡವರು ಬಿಜೆಪಿಯ ಸಾಂಪ್ರದಾಯಿಕ ಮತದಾರರಾಗಿದ್ದಾರೆ. ಹಿಂದುತ್ವ, ಮೋದಿ ನಾಯಕತ್ವ ಹಾಗೂ ಕಾಂಗ್ರೆಸ್ ವಿರುದ್ಧವಾಗಿ ಬಿಜೆಪಿಯಲ್ಲಿ ಕೊಡವರು ಗುರುತಿಸಿಕೊಂಡಿದ್ದಾರೆ‌. ಅಭ್ಯರ್ಥಿ ಯಾರೆಂದು ನೋಡದೆ ಬಿಜೆಪಿಗೆ ಮತ ಹಾಕುತ್ತ ಬಂದಿದ್ದಾರೆ. ಇದೇ ಬಿಜೆಪಿಗೆ ವರದಾನವಾಗಿದೆ. ಈ ಬಾರಿ ಕೊಡವ ಮತದಾರರ ನಿಲುವು ಕುತೂಹಲಕ್ಕೆ ಕಾರಣವಾಗಿದೆ. ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಕೊಡವರ ನಿರ್ಧಾರದ ಬಗ್ಗೆ ಗಮನಿಸುವಂತೆ ಮಾಡಿದೆ. ಹಲವು ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕೊಡವ ಸಮುದಾಯದ ಶಾಂತೆಯಂಡ ವೀಣಾ ಅಚ್ಚಯ್ಯ, ಬಿದ್ದಾಟಂಡ ಟಿ. ಪ್ರದೀಪ್, ಚೆಪ್ಪುಡೀರ ಅರುಣ್ ಮಾಚಯ್ಯ, ಮೇರಿಯಂಡ ಸಂಕೇತ್ ಪೂವಯ್ಯ ಸೋಲು ಅನುಭವಿಸಿದ್ದಾರೆ. ಪ್ರಸ್ತುತ ಸ್ಪರ್ಧಾ ಕಣದಲ್ಲಿ ಪೊನ್ನಣ್ಣ ಅವರೊಂದಿಗೆ ಕರ್ನಾಟಕ ಸರ್ವೋದಯ ಪಕ್ಷದ ಕಾಡ್ಯಮಾಡ ಮನು ಸೋಮಯ್ಯ, ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಗಳಾಗಿ ರವೀಂದ್ರ ಕಣದಲ್ಲಿ ಇದ್ದಾರೆ.

ಪೊನ್ನಣ್ಣ ಕೊಡವ ಸಮುದಾಯಕ್ಕೆ ಸೇರಿದ್ದಾರೆಂಬ ಕಾರಣಕ್ಕಾಗಿ ಕೊಡವರು ಬೆಂಬಲ ನೀಡಬೇಕೆಂಬ ಪ್ರಬಲ ಬೇಡಿಕೆ ವ್ಯಕ್ತವಾಗುತ್ತಿದೆ. ಜಾತಿ ಆಧಾರದಲ್ಲಿ ಅಥವಾ ಪಕ್ಷದ ಆಧಾರದಲ್ಲಿ ಮತ ನೀಡಬೇಕಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಪಕ್ಷದ ನೆಲೆಗಟ್ಟಿನಲ್ಲಿ ಅರೆಭಾಷೆ ಗೌಡ ಸಮುದಾಯಕ್ಕೆ ಸೇರಿದ ಬಿಜೆಪಿ ಅಭ್ಯರ್ಥಿಗೆ ಕೊಡವರು ಬೆಂಬಲ ನೀಡುತ್ತ ಬಂದಿದ್ದಾರೆ. ಸತತ‌ ನಾಲ್ಕು ಬಾರಿಗೆ ಗೆಲುವು ಸಾಧಿಸಿರುವ ಕೆ.ಜಿ. ಬೋಪಯ್ಯ ಐದನೇ ಬಾರಿಗೆ ಗೆಲ್ಲುವ ಉತ್ಸಾಹದಲ್ಲಿ ಇದ್ದಾರೆ. ಕೊಡವರು ಬಿಜೆಪಿ‌  ಕೈ ಹಿಡಿದರೆ ಕೆ‌.ಜಿ ಬೋಪಯ್ಯ ಗೆಲುವು ಖಂಡಿತ. ಕೊಡವರು ಬಿಜೆಪಿಗೆ ಕೈ‌ ಕೊಟ್ಟರೆ ಪೊನ್ನಣ್ಣ ಗೆಲುವು ಖಚಿತ‌. ವಿರಾಜಪೇಟೆ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಮುಸ್ಲಿಂ ಮತ ಕೂಡ ನಿರ್ಣಾಯಕವಾಗಿದೆ. ಮುಸ್ಲಿಂ ಮತ ವಿಭಜನೆ ಮಾಡುವ ಮೂಲಕ ಬಿಜೆಪಿ ಗೆಲುವು ಸಾಧಿಸುವಂತೆ ಮಾಡುವ ಕಾರ್ಯತಂತ್ರ ಬಿಜೆಪಿ ಪಾಳಯದಲ್ಲಿ ನಡೆದಿದೆ.

ಇದನ್ನೂ ಓದಿ: ಹಾಸನ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಏಳು ಸುತ್ತಿನ ಕೋಟೆ ಭೇದಿಸುವವರು ಯಾರು?

ಜೆಡಿಎಸ್‌ನಿಂದ ಎಂ.ಎ. ಮನ್ಸೂರ್ ಆಲಿ, ಪಕ್ಷೇತರ ಅಭ್ಯರ್ಥಿ ಮಕ್ಕಿ ನಾಸಿರ್ ಹೆಚ್ಚು ಮತ ಪಡೆದಲ್ಲಿ ಕಾಂಗ್ರೆಸ್‌ಗೆ ಹೊಡೆತ ನೀಡಲಿದೆ‌, ಬಿಜೆಪಿಗೆ ಗೆಲುವಿನ ಹಾದಿ ಸುಲಭವಾಗಲಿದೆ. ಒಟ್ಟಿನಲ್ಲಿ ಕೊಡಗಿನಲ್ಲಿ ಇಷ್ಟು ವರ್ಷ ಹಿಂದುತ್ವ ವರ್ಕೌಟ್ ಆಗುತ್ತಿತ್ತು. ಆದರೆ, ಇದೇ ಮೊದಲ ಬಾರಿಗೆ ಜಾತಿ‌ ರಾಜಕಾರಣ ನಡೆಯುತ್ತಿದ್ದು, ಕೊಡವರು ಹಾಗೂ ಗೌಡ ಮತದಾರರೇ ಇಲ್ಲಿ ನಿರ್ಣಾಯಕ ಎಂಬುದರಲ್ಲಿ ಎರಡು ಮಾತಿಲ್ಲ.

ಕಣದಲ್ಲಿರುವ ಅಭ್ಯರ್ಥಿಗಳು
1. ಕೆ.ಜಿ. ಬೋಪಯ್ಯ- ಬಿಜೆಪಿ
2. ಎ.ಎಸ್.‌ ಪೊನ್ನಣ್ಣ- ಕಾಂಗ್ರೆಸ್
3. ಎಂ.ಎ. ಮನ್ಸೂರ್‌ ಆಲಿ- ಜೆಡಿಎಸ್

ಇದನ್ನೂ ಓದಿ: ಕೋಲಾರ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಕಾಂಗ್ರೆಸ್‌ನ ಭದ್ರಕೋಟೆಯಲ್ಲಿ ಜೆಡಿಎಸ್‌ನ ಸವಾಲು

2018ರ ಚುನಾವಣೆ ಫಲಿತಾಂಶ
-ಕೆ.ಜಿ. ಬೋಪಯ್ಯ- ಬಿಜೆಪಿ- 77,944
-ಅರುಣ್ ಮಾಚ್ಚಯ್ಯ- ಕಾಂಗ್ರೆಸ್‌- 64,591
-ಗೆಲುವಿನ ಅಂತರ- 13,353

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Jai Shree Ram slogan: ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರ ಬಂಧನ

Jai Shree Ram slogan: ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

VISTARANEWS.COM


on

Jai Shree Ram slogan
Koo

ಬೆಂಗಳೂರು: ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣಕ್ಕೆ (Jai Shree Ram slogan) ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ ಮೇಲೆ ಬುಧವಾರ ಸಂಜೆ ಹಲ್ಲೆ ಮಾಡಿದ್ದವರ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಎ1 ಫರ್ಮಾನ್, ಎ2 ಸಮೀರ್ ಹಾಗೂ ಅಪ್ರಾಪ್ತನನ್ನು ಬಂಧಿಸಲಾಗಿದೆ. ಒಟ್ಟು ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಉಳಿದ ಆರೋಪಿಗಾಗಿ(ಅಪ್ರಾಪ್ತ) ವಿದ್ಯಾರಣ್ಯಪುರ ಪೊಲೀಸರಿಂದ ಹುಡುಕಾಟ ಮುಂದುವರಿದಿದ್ದು, ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು?

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

ಗುರುವಾರ ಬೆಳಗ್ಗೆ ವಿದ್ಯಾರಣ್ಯಪುರ ಠಾಣೆ ಎದುರು ಪ್ರತಿಭಟನೆ

ವಿದ್ಯಾರಣ್ಯಪುರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ, ಹಲ್ಲೆಗೊಳಗಾದ ಯುವಕರ ಯೋಗಕ್ಷೇಮ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಈ ವೇಳೆ ಘಟನೆ ಖಂಡಿಸಿ ಗುರುವಾರ (ಏ.18) ಬೆಳಗ್ಗೆ 10 ಗಂಟೆಗೆ ವಿದ್ಯಾರಣ್ಯಪುರ ಪೋಲಿಸ್ ಠಾಣೆ ಮುಂಭಾಗ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಸಂಸದೆ ಹೇಳಿದ್ದಾರೆ.

ಯಾರೇ ಆಗಲಿ ಚುನಾವಣೆ ಸಂದರ್ಭದಲ್ಲಿ ಈ ರೀತಿ ಗಲಭೆ ಹೆಚ್ಚಿಸುವ ಪ್ರಯತ್ನ ಮಾಡಬಾರದು. ಅದೂ ನಮ್ಮ ಕ್ಷೇತ್ರದಲ್ಲಿ‌ ಕೆಲವರ ಕುಮ್ಮಕ್ಕಿನಿಂದ ಗಲಭೆ ಮಾಡಿರಬಹುದು. ಇದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಸಹ ಇರಬಹುದು. ಪೊಲೀಸರು ಈ ಪ್ರಕರಣದಲ್ಲಿ ಬೇಜವಾಬ್ದಾರಿಯಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಕಮೀಷನರ್‌ಗೆ ಮನವಿ ಮಾಡ್ತೀನಿ. ಕೂಡಲೇ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಏನಿದು ಪ್ರಕರಣ?

ಬುಧವಾರ ಸಂಜೆ ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ (Jai Shri Ram Slogan) ಕಾರಿನಲ್ಲಿ ಹೋಗುತ್ತಿದ್ದ ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದರು. ವಿದ್ಯಾರಣ್ಯಪುರದ ಚಿಕ್ಕ ಬೆಟ್ಟಳ್ಳಿ ಮಸೀದಿ ಬಳಿ ಘಟನೆ ನಡೆದಿತ್ತು. ರಾಮನವಮಿ (Ram Navami) ಹಿನ್ನೆಲೆ ಜೈ ಶ್ರೀರಾಮ್ ಎಂದು ಹೇಳುತ್ತಾ ಹಿಂದು ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ, ಅವರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಲಾಗಿತ್ತು.

ಶ್ರೀ ರಾಮನವಮಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಹಿಂದು ಯುವಕರು ತೆರಳುತ್ತಿದ್ದಾಗ, ಜೈ ಶ್ರೀರಾಮ್ ಎಂದು ಕೂಗಿದ್ದರು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮುಸ್ಲಿಂ ಯುವಕರು, “ಜೈ ಶ್ರೀರಾಮ್‌ ಹೇಳಬಾರದು, ಅಲ್ಲಾಹ್ ಅಂತ ಹೇಳಬೇಕು” ಎಂದು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ | Road Accident: ವಾಟರ್‌ ಟ್ಯಾಂಕರ್‌ಗೆ ಡಿಕ್ಕಿಯಾಗಿ ಬೈಕ್‌ ಹಿಂಬದಿ ಸವಾರ ಸಾವು; ಬೆಚ್ಚಿ ಬೀಳಿಸುವ ಅಪಘಾತದ ದೃಶ್ಯ!

ಬೈಕ್‌ನಲ್ಲಿ ಬಂದಿದ್ದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿದ್ದರು. ಅಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಇದೇ ವೇಳೆ ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡುತ್ತೀವಾ ಎಂದು ಹಿಂದು ಯುವಕರು ಪ್ರಶ್ನೆ ಮಾಡಿದ್ದರು.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲು

ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹಿತರಾದ ವಿನಾಯಕ ಮತ್ತು ರಾಹುಲ್ ಜತೆ ಚಿಕ್ಕಬೆಟ್ಟಹಳ್ಳಿ ರಸ್ತೆಯಲ್ಲಿ ಮಧ್ಯಾಹ್ನ ಕಾರಿನಲ್ಲಿ ಹೋಗುತ್ತಿದ್ದೆ. ಕಾರಿನ ಮುಂದೆ ಶ್ರೀರಾಮನ ಧ್ವಜ ಕಟ್ಟಿದ್ದನ್ನು ನೋಡಿದ ಇಬ್ಬರು ಮುಸ್ಲಿಂ ಯುವಕರು, ನಮ್ಮ ಬಳಿ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಅಲ್ಲಾ ಹು ಅಕ್ಬರ್” ಎಂದು ಕೂಗಬೇಕು ಎಂದು ಒತ್ತಾಯಿಸಿದರು. ನಾವು ಹಾಗೆ ಕೂಗುವುದಿಲ್ಲವೆಂದು ಹೇಳಿದಾಗ, ನಮ್ಮ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ರಾಹುಲ್ ತಲೆಗೆ ಪೆಟ್ಟು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಹೇಗೋ ನಾವು ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

Continue Reading

ಹುಬ್ಬಳ್ಳಿ

Lok Sabha Election 2024: ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಸ್ವಚ್ಛ ಆಡಳಿತ: ಪ್ರಲ್ಹಾದ್‌ ಜೋಶಿ

Lok Sabha Election 2024: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸುರಕ್ಷತೆ, ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಅದನ್ನು ಮುಂದುವರೆಸಲು ಮತ್ತೊಮ್ಮೆ ಆಶೀರ್ವದಿಸಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮನವಿ ಮಾಡಿದ್ದಾರೆ.

VISTARANEWS.COM


on

Union Minister Pralhad Joshi election campaign in Hubli
Koo

ಹುಬ್ಬಳ್ಳಿ: ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಸರ್ಕಾರ ಸ್ವಚ್ಛ ಆಡಳಿತ ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Lok Sabha Election 2024) ತಿಳಿಸಿದರು.

ಹುಬ್ಬಳ್ಳಿಯ ಹೂಗಾರ ಓಣಿಯಲ್ಲಿ ಬುಧವಾರ ಬೆಳಗ್ಗೆ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಪ್ರಮುಖವಾಗಿ ಭ್ರಷ್ಟಾಚಾರ ತಡೆಗೆ ಬುನಾದಿ ಹಾಕಿದ್ದಾರೆ. ರಾಜಕೀಯದಲ್ಲಿನ ಭ್ರಷ್ಟಾಚಾರವನ್ನು ಸಂಪೂರ್ಣ ತೊಡೆದು ಹಾಕುವಲ್ಲಿ ದಿಟ್ಟ ನಿಲುವು ತಳೆದಿದ್ದಾರೆ ಎಂದು ಹೇಳಿದರು.

ಕೇಂದ್ರ ಸಚಿವ ಸಂಪುಟದ ಯಾವುದೇ ಸಚಿವರು ಭ್ರಷ್ಟಾಚಾರದಲ್ಲಿ ತೊಡಗದೆ ನಿಷ್ಕಲ್ಮಶ, ನಿಷ್ಕಳಂಕ ಆಡಳಿತ ನೀಡಿದ್ದೇವೆ. ನಮ್ಮ ಯಾರ ಮೇಲೂ ಭ್ರಷ್ಟಾಚಾರದ ಆರೋಪವಿಲ್ಲ. ಮುಂದೆಯೂ ಇದೇ ಮಾದರಿ ಸ್ವಚ್ಛ ಆಡಳಿತ ನೀಡುತ್ತದೆ ಬಿಜೆಪಿ ಸರ್ಕಾರ ಎಂದು ಸಚಿವ ಜೋಶಿ ಪ್ರತಿಪಾದಿಸಿದರು.

ಇದನ್ನೂ ಓದಿ: ಚಂದ್ರನ ಅಂಗಳದಲ್ಲಿ ಭಾರತೀಯನನ್ನು ಇಳಿಸುವ ತನಕ ಬಿಡಲ್ಲ; ಇಸ್ರೋ ಅಧ್ಯಕ್ಷ ಮಹತ್ವದ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸುರಕ್ಷತೆ, ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಅದನ್ನು ಮುಂದುವರೆಸಲು ಮತ್ತೊಮ್ಮೆ ಆಶೀರ್ವದಿಸಿ ಎಂದು ಜೋಶಿ ಮನವಿ ಮಾಡಿದರು.

ಹುಬ್ಬಳ್ಳಿಯಲ್ಲಿ ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಕಿಮ್ಸ್ ಕಟ್ಟಡ, ಹೆದ್ದಾರಿ ಹೀಗೆ ನಾನಾ ಅಭಿವೃದ್ಧಿ ಕಾರ್ಯಗಳು ಕಾರ್ಯಗತವಾಗಿವೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಪ್ರಚಾರಕ್ಕೆ ಹೋದಲ್ಲೆಲ್ಲ ಜನರಿಂದ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ನಾಮಪತ್ರ ಸಲ್ಲಿಕೆ ವೇಳೆ ಸಹ ಜನರು ಸ್ವಯಂ ಧಾವಿಸಿ ಉತ್ತಮ ಸ್ಪಂದನೆ ತೋರಿದ್ದಾರೆ ಎಂದು ಸಚಿವ ಜೋಶಿ ಸಂತಸ ಹಂಚಿಕೊಂಡರು.

ಇದನ್ನೂ ಓದಿ: Lok Sabha Election 2024: ಬೆಂಗಳೂರಿನಲ್ಲಿ ಪುಟ್ಟ ಬಾಲಕಿಯರಿಂದ ಮತದಾನ ಜಾಗೃತಿ

ಈ ವೇಳೆ ಮಾಜಿ ಶಾಸಕ ಅಶೋಕ ಕಾಟವೆ, ಮುಖಂಡರಾದ ಬಸವರಾಜ ಚಿಕ್ಕಮಠ, ಶಿವಾನಂದ ಹೊಸೂರ್, ಸಿದ್ರಾಮಪ್ಪ ಬಾಳಿಕಾಯಿ, ವೀರಭದ್ರಪ್ಪ ಬಾಳಿಕಾಯಿ, ಈರಣ್ಣ ಜಡಿ, ನೀಲಕ್ಕ ಎತ್ತಿನಮಠ, ರಂಗಾ ಬದ್ದಿ, ವಿಜಯಲಕ್ಷ್ಮಿ ಎಮ್ಮಿ, ಗುರುಸಿದ್ದಮ್ಮ ಸಾಲಿಮಠ, ಪೂಜಾ ರಾಯಕರ್ ಹಾಗೂ ಇತರರು ಇದ್ದರು.

Continue Reading

ಬೆಂಗಳೂರು ಗ್ರಾಮಾಂತರ

Lok Sabha Election 2024: ಚನ್ನಪಟ್ಟಣದ ವಿವಿಧೆಡೆ ಸಂಸದ ಡಿ.ಕೆ.ಸುರೇಶ್‌ ಮತಯಾಚನೆ

Lok Sabha Election 2024: ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ, ಸಿಂಗಾರಾಜಿಪುರದಲ್ಲಿ ಬುಧವಾರ ಸಂಸದ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್‌ ಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಿದರು.

VISTARANEWS.COM


on

MP DK Suresh election campaign in various places of Channapattana
Koo

ಚನ್ನಪಟ್ಟಣ: ತಾಲೂಕಿನ ಕೋಡಂಬಳ್ಳಿ, ಸಿಂಗಾರಾಜಿಪುರದಲ್ಲಿ ಬುಧವಾರ ಸಂಸದ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್‌, ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ (Lok Sabha Election 2024) ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಿ.ಕೆ.ಸುರೇಶ್‌ ರಾಜ್ಯ ಕಾಂಗ್ರೆಸ್‌ ಸರ್ಕಾರವು (State Congress Government) ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಎಲ್ಲರಿಗೂ ತಲುಪುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ, ಕಾಂಗ್ರೆಸ್‌ ಶಕ್ತಿ ಹೆಚ್ಚಿಸಿ ಎಂದು ಮನವಿ ಮಾಡಿದರು.

ಚನ್ನಪಟ್ಟಣ ತಾಲೂಕಿನ ವಿವಿಧೆಡೆ ಬುಧವಾರ ಸಂಸದ ಡಿ.ಕೆ. ಸುರೇಶ್‌ ಚುನಾವಣಾ ಪ್ರಚಾರ ನಡೆಸಿದರು.

ಇದನ್ನೂ ಓದಿ: ಚಂದ್ರನ ಅಂಗಳದಲ್ಲಿ ಭಾರತೀಯನನ್ನು ಇಳಿಸುವ ತನಕ ಬಿಡಲ್ಲ; ಇಸ್ರೋ ಅಧ್ಯಕ್ಷ ಮಹತ್ವದ ಘೋಷಣೆ

ಮಾಜಿ ಸಿಎಂ ಕುಮಾರಸ್ವಾಮಿ ಅವರು ರಾಮನಗರ ಒಂದು ಕಣ್ಣು, ಚನ್ನಪಟ್ಟಣ ಒಂದು ಕಣ್ಣು ಎನ್ನುತ್ತಿದ್ದರು. ಆದರೆ ಈಗ ಇವೆರಡು ಕಣ್ಣನ್ನು ಬಿಟ್ಟು ಮಂಡ್ಯಕ್ಕೆ ಹೋಗಿದ್ದಾರೆ ಎಂದು ದೂರಿದ ಅವರು, ನಿಮ್ಮ ಸಮಸ್ಯೆ ಏನೇ ಇದ್ದರೂ ನಿಮ್ಮ ಜತೆ ಇದ್ದು ಕೆಲಸ ಮಾಡುತ್ತೇನೆ. ನಾನು ಕೇವಲ ಚುನಾವಣೆ ಸಮಯದಲ್ಲಿ ಮಾತ್ರ ಬರುವುದಿಲ್ಲ. ಎಲ್ಲಾ ಸಂದರ್ಭದಲ್ಲೂ ನಿಮ್ಮ ಜತೆ ಇರುತ್ತೇನೆ. ಕೋವಿಡ್ ಸಂದರ್ಭದಲ್ಲೂ ನಿಮ್ಮ ಕಷ್ಟಕ್ಕೆ ಸ್ಪಂದಿಸಿದ್ದೇನೆ. ತಮಗೆ ಮತ ನೀಡಿ ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಇದನ್ನೂ ಓದಿ: T20 World Cup: ಟಿ20 ವಿಶ್ವಕಪ್​ನಲ್ಲಿ ರೋಹಿತ್​ ಜತೆ ವಿರಾಟ್​ ಕೊಹ್ಲಿ ಆರಂಭಿಕನಾಗಿ ಕಣಕ್ಕೆ

ಮುಂದಿನ ದಿನಗಳಲ್ಲಿ ಚನ್ನಪಟ್ಟಣದ ತಾಲೂಕಿನ ಪ್ರತಿ ಹಳ್ಳಿಯ ಮನೆ-ಮನೆಗೆ ಕುಡಿಯುವ ನೀರು ಪೂರೈಸುವುದಾಗಿ ಭರವಸೆ ನೀಡಿದ ಅವರು, ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ, ತಮಗೆ ಮತ ನೀಡುವಂತೆ ಅವರು ಇದೇ ವೇಳೆ ಮನವಿ ಮಾಡಿದರು.

Continue Reading

ಕರ್ನಾಟಕ

Lok Sabha Election 2024: ಇಂಡಿಯಾ ಕೂಟದಲ್ಲಿ ಯಾರಿಗಾದ್ರೂ ಪ್ರಧಾನಿ ಆಗೋ ಯೋಗ್ಯತೆ ಇದ್ಯಾ: ದೇವೇಗೌಡ ಪ್ರಶ್ನೆ

Lok Sabha Election 2024: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ತವರು ಕ್ಷೇತ್ರ ಕನಕಪುರದಲ್ಲಿ ಆಯೋಜಿಸಿದ್ದ ಮೈತ್ರಿ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮಾತನಾಡಿದ್ದಾರೆ. ಮೋದಿ ಪ್ರಧಾನಿ ಆಗಿ ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಆದರೆ, ಇಂಡಿಯಾ ಒಕ್ಕೂಟದಲ್ಲಿ ಯಾವುದೇ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Lok sabha Election 2024
Koo

ರಾಮನಗರ: ಇಂಡಿಯಾ ಒಕ್ಕೂಟದಲ್ಲಿ ಯಾರಿಗಾದರೂ ದೇಶದ ಪ್ರಧಾನಿ ಆಗುವ ಯೋಗ್ಯತೆ ಇದ್ಯಾ? ಮಮತಾ ಬ್ಯಾನರ್ಜಿ ಆಗ್ತಾರಾ? ರಾಹುಲ್ ಗಾಂಧಿ ಪ್ರಧಾನಿ ಆಗುವುದಾಗಿದ್ದರೆ ಚುನಾವಣೆಯಲ್ಲಿ (Lok Sabha Election 2024) ಕೇರಳಕ್ಕೆ ಯಾಕೆ ಹೋಗುತ್ತಿದ್ದರು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.

ಕನಕಪುರ ಮುನ್ಸಿಪಲ್ ಮೈದಾನದಲ್ಲಿ ಆಯೋಜಿಸಿದ್ದ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸಮಾವೇಶ ಕೂಡ ದೇಶದ ಭವಿಷ್ಯ ರೂಪುಗೊಳಿಸುವ ಸಭೆ. 2024ರ ಚುನಾವಣೆಯನ್ನು ಇಡೀ ಪ್ರಪಂಚ ನೋಡುತ್ತಿದೆ. ಇಲ್ಲಿ ಎರಡು ಬಣಗಳು ಇವೆ. ಎನ್‌ಡಿಎ ಮುಖ್ಯಸ್ಥರು ಮೋದಿ, ಆದ್ರೆ ಐಎನ್‌ಡಿಐಎ ಮುಖ್ಯಸ್ಥರು ಯಾರು? ಖರ್ಗೆನಾ ಅಥವಾ ಮತ್ಯಾರ? ಜನ ನೀವು ತೀರ್ಮಾನ ಮಾಡಬೇಕು ಎಂದು ಹೇಳಿದರು.

ಡಿಕೆಶಿ ಪ್ರಧಾನಿ ಆಗ್ತಾರಾ, ಖರ್ಗೆ ಪ್ರಧಾನಿ ಆಗ್ತಾರಾ, ನಮ್ಮ ರಾಜ್ಯದ ಸಿಎಂ ಕೂಡ ಖರ್ಗೆ ಪ್ರಧಾನಿ ಆಗಲ್ಲ, ರಾಹುಲ್ ಗಾಂಧಿ ಆಗುತ್ತಾರೆ ಅಂತ ಹೇಳುತ್ತಾರೆ. ರಾಹುಲ್ ಗಾಂಧಿ ಪ್ರಧಾನಿ ಆಗ್ತಾರಾ ಎಂದು ಪ್ರಶ್ನಿಸಿದ ಅವರು,
ಅವರ ಅಜ್ಜಿ 17 ವರ್ಷ ಆಳಿದರು. ಬಳಿಕ ದೇಶವನ್ನು ರಾಜೀವ್ ಗಾಂಧಿ ಆಳಿದರು. ದಶಕಗಳ ಕಾಲ ದೇಶ ಆಳಿದ ಕಾಂಗ್ರೆಸ್ ಇಂದು ಯಾವ ಸ್ಥಾನ ತಲುಪಿದೆ. ಕೇವಲ ಮೂರು ರಾಜ್ಯದಲ್ಲಿ ಮಾತ್ರ ಇದೆ. ಸೋನಿಯಾ ಗಾಂಧಿ ರಾಜಸ್ಥಾನಕ್ಕೆ ಹೋಗಿ ರಾಜ್ಯಸಭಾ ಸದಸ್ಯೆ ಆಗಿದ್ದಾರೆ. ಇಂದಿರಾಗಾಂಧಿ, ರಾಜೀವ್ ಗಾಂಧಿ ಆಳಿದ ಕಾಂಗ್ರೆಸ್ ಇಂದು ಈ ಸ್ಥಿತಿ ತಲುಪಿದೆ ಎಂದು ಹೇಳಿದರು.

ಇದನ್ನೂ ಓದಿ | ‌Lok Sabha Election 2024: ಬಿಜೆಪಿ ಕೊಟ್ಟ ರೈತ ಪರ ಯೋಜನೆಗಳನ್ನು ಕಿತ್ತುಕೊಂಡ ಕಾಂಗ್ರೆಸ್‌ ಸರ್ಕಾರ: ‌ವಿಜಯೇಂದ್ರ ಕಿಡಿ

ಕರ್ನಾಟಕದಲ್ಲಿ ಐದು ಗ್ಯಾರಂಟಿ ಬಂದಿದೆ. ಕುಮಾರಸ್ವಾಮಿ ಪಂಚರತ್ನ ಕಾರ್ಯಕ್ರಮದ ಆಲೋಚನೆ ಮಾಡಿದ್ದರು. ನೀರಾವರಿ ಅಭಿವೃದ್ಧಿ, ಶಿಕ್ಷಣ, ರೈತರ ಅಭಿವೃದ್ಧಿಗಾಗಿ 10 ತಿಂಗಳು ಪ್ರವಾಸ ಮಾಡಿದ್ದರು. 25 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದರು. ಅದನ್ನು ಯಾವ ಸಿಎಂ ಕೂಡ ಮಾಡಲಿಲ್ಲ. 18 ರಾಜ್ಯಗಳಲ್ಲಿ ಬಿಜೆಪಿ ಆಡಳಿತ ಮಾಡುತ್ತಿದೆ. ಮೋದಿ ಪ್ರಧಾನಿ ಆಗಿ ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಮೋದಿ ಬಿಟ್ಟರೆ ಮತ್ಯಾರಾದ್ರೂ ಪ್ರಧಾನಿ ಅಭ್ಯರ್ಥಿಗಳಿದ್ದಾರಾ?
ಐಎನ್‌ಡಿಐಎನಲ್ಲಿ ಯಾವುದೇ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ತಿಳಿಸಿದರು.

ಡಾ.ಮಂಜುನಾಥ್‌ರನ್ನು ಜಯದೇವ ನಿರ್ದೇಶಕ ಸ್ಥಾನದಿಂದ ತೆಗೆಸಲು ಡಿಕೆಶಿ ಪ್ರಯತ್ನ ಮಾಡಿದರು. ಎಸ್.ಎಂ.ಕೃಷ್ಣಗೆ ಚೀಟಿ‌ ಕೊಟ್ಟಿದ್ದರು, ನನಗೆ ಎಲ್ಲವೂ ಗೊತ್ತಿದೆ. ಇಡೀ ವಿಶ್ವದಲ್ಲಿ 2000 ಬೆಡ್‌ ಹೊಂದಿರುವ ಹೃದಯ ಸಂಭಂದಿ ಆಸ್ಪತ್ರೆ ಇಲ್ಲ. ಆ ರೀತಿ ಆಸ್ಪತ್ರೆ ಅಭಿವೃದ್ಧಿ ಮಾಡಿದ್ದು ಡಾ.ಮಂಜುನಾಥ್. ಇದನ್ನು ಮನಗಂಡ ಮೋದಿ, ಅಮಿತ್ ಶಾ ಡಾ.ಮಂಜುನಾಥ್ ಸ್ಪರ್ಧೆಗೆ ಒತ್ತಾಯ ಮಾಡಿದರು. ಅವರನ್ನು ನಮಗೆ ಕೊಡಿ, ಅವರ ಸೇವೆ ದೇಶಕ್ಕೆ ಬೇಕು ಎಂದು ಹೇಳಿದ್ದಾರೆ. ಎಂಟೂವರೆ ಲಕ್ಷ ಜನರಿಗೆ ಡಾ.ಮಂಜುನಾಥ್ ಉಚಿತ ಚಿಕಿತ್ಸೆ ಕೊಟ್ಟಿದ್ದಾರೆ. ಕಾಂಗ್ರೆಸ್‌ನಲ್ಲಿ ಮಹಾನ್ ನಾಯಕರು ಮೂರು ಜನ ಡಾ.ಮಂಜುನಾಥ್ ಎಂಬುವವರನ್ನು ನಿಲ್ಲಿಸಿದ್ದಾರೆ ಎಂದು ಕಿಡಿಕಾರಿದರು.

ಡಾ. ಮಂಜುನಾಥ್ ಒಬ್ಬ ಪ್ರಾಮಾಣಿಕ ವೈದ್ಯ. ಈ ಹಿಂದೆ ಡಿಕೆಶಿ ನನ್ನ ಅಳಿಯನನ್ನು ಜಯದೇವ ಡೈರೆಕ್ಟರ್ ಆಗೋದನ್ನು ತಪ್ಪಿಸಿದರು. ನಾನು ನನ್ನ ಮಗಳ ಮನೆಯಲ್ಲಿ ಇದ್ದಾಗ, ನನ್ನ ಅಳಿಯ ಅಮೆರಿಕಕ್ಕೆ ಹೋಗುತ್ತೀನಿ ಎಂದರು. ಆಗ ನಾನೇ ಅವರನ್ನು ತಡೆದೆ. ಈ ಸರ್ಕಾರ ಹೆಚ್ಚು ದಿನ ಇರಲ್ಲ ಯೋಚನೆ ಮಾಡಿ ಅಂದಿದ್ದೆ. ನಿಮ್ಮ ಸೇವೆ ಈ ದೇಶದ ಜನತೆಗೆ ಬೇಕು ಅಂತ ಹೇಳಿದ್ದೆ. ನಂತರ ನನ್ನ ಅಳಿಯ ನಾನು ಇಲ್ಲೇ ಇರ್ತೇನೆ ಎಂದರು. ಈಗ ಡಾ.ಮಂಜುನಾಥ್ ಅವರ ಸೇವೆಯನ್ನು ಮೋದಿ, ಅಮಿತ್ ಶಾ ಗುರುತಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ | Modi Letter: ಸಾಮಾನ್ಯ ಎಲೆಕ್ಷನ್‌ ಅಲ್ಲ; ರಾಮನವಮಿ ದಿನವೇ ಎನ್‌ಡಿಎ ಅಭ್ಯರ್ಥಿಗಳಿಗೆ ಮೋದಿ ಪತ್ರ!

ಪಕ್ಕದಲ್ಲಿ ತಮಿಳುನಾಡು ಸಿಎಂ ಸ್ಟ್ಯಾಲಿನ್, ಕರ್ನಾಟಕದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಲ್ಲ ಅಂತಾನೆ. ನಿಮ್ಮ ಮಹಾನುಭಾವ ಏನು ಮಾಡ್ತಿದ್ದಾರೆ. ಮಿಸ್ಟರ್ ಡಿ.ಕೆ.ಶಿವಕುಮಾರ್, ಉತ್ತರ ಪ್ರದೇಶ, ಛತ್ತೀಸ್‌ಗಢಕ್ಕೆ ಹೋಗಿ ಎಷ್ಟು ಬೇಕೋ ಅಷ್ಟೋ ಬಾಚಿದ್ದಾರೆ. ಇಲ್ಲಿನ ಕಂಟ್ರಾಕ್ಟರ್‌ಗಳನ್ನು ತೆಲಂಗಾಣಕ್ಕೆ ಕಳುಹಿಸ್ತಾರೆ. ಅಲ್ಲಿಯೂ ಕಾಂಗ್ರೆಸ್ ಗೆಲ್ಲುತ್ತೆ. ಚನ್ನಪಟ್ಟಣದಲ್ಲಿ 9 ಜನ ಕೌನ್ಸಿಲರ್‌ಗೆ 50 ಲಕ್ಷ, ಗುತ್ತಿಗೆ ಕೆಲಸ ಹಂಚಿದ್ದಾರೆ. ರಾಮನಗರದ ನಮ್ಮ ಪಕ್ಷದ ತಾಲೂಕು ಅಧ್ಯಕ್ಷನನ್ನ ಕೊಂಡುಕೊಳ್ತಾರೆ. ಆದರೆ ಈ ಕ್ಷೇತ್ರದ 27 ಲಕ್ಷ ಮತದಾರರನ್ನು ಕೊಂಡುಕೊಳ್ಳಲು ಸಾಧ್ಯವೇ.
ಡಾ.ಮಂಜುನಾಥ್ ಪರ ಜನ ಇದ್ದಾರೆ. ಅವರ ಕ್ರಮ ಸಂಖ್ಯೆ 1ಕ್ಕೆ ಎಲ್ಲರೂ ಮತನೀಡಿ ಎಂದು ಮನವಿ ಮಾಡಿದರು.

Continue Reading
Advertisement
daily horoscope predictions for April 18 2024
ಭವಿಷ್ಯ54 mins ago

Dina Bhavishya : ಈ ರಾಶಿಯವರು ಇಂದು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ!

DD News Logo
ದೇಶ6 hours ago

DD News Logo: ರಾಮನವಮಿ ದಿನವೇ ಡಿಡಿ ನ್ಯೂಸ್‌ ಲೋಗೊ ಕೇಸರಿಮಯ; ತೀವ್ರವಾಯ್ತು ಚರ್ಚೆ!

Jai Shree Ram slogan
ಪ್ರಮುಖ ಸುದ್ದಿ6 hours ago

Jai Shree Ram slogan: ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರ ಬಂಧನ

Union Minister Pralhad Joshi election campaign in Hubli
ಹುಬ್ಬಳ್ಳಿ7 hours ago

Lok Sabha Election 2024: ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಸ್ವಚ್ಛ ಆಡಳಿತ: ಪ್ರಲ್ಹಾದ್‌ ಜೋಶಿ

Times Influential list 2024
ಕ್ರೀಡೆ7 hours ago

Times Influential list 2024: ಟೈಮ್ಸ್‌ ಪ್ರಭಾವಿ ಪಟ್ಟಿಯಲ್ಲಿ ಸ್ಥಾನ ಪಡೆದ ಸಾಕ್ಷಿ ಮಲಿಕ್,ಆಲಿಯಾ ಭಟ್

Terrorist Attack
ದೇಶ7 hours ago

Terrorist Attack: ಕಾಶ್ಮೀರದಲ್ಲಿ ಬಿಹಾರದ ಕಾರ್ಮಿಕನನ್ನು ಹತ್ಯೆಗೈದ ಉಗ್ರರು; ತಿಂಗಳಲ್ಲಿ 2ನೇ ದಾಳಿ

MP DK Suresh election campaign in various places of Channapattana
ಬೆಂಗಳೂರು ಗ್ರಾಮಾಂತರ7 hours ago

Lok Sabha Election 2024: ಚನ್ನಪಟ್ಟಣದ ವಿವಿಧೆಡೆ ಸಂಸದ ಡಿ.ಕೆ.ಸುರೇಶ್‌ ಮತಯಾಚನೆ

DC vs GT
ಕ್ರೀಡೆ8 hours ago

DC vs GT: ಡೆಲ್ಲಿ ದಾಳಿಗೆ ಚೆಲ್ಲಾಪಿಲ್ಲಿಯಾದ ಗುಜರಾತ್​; 6 ವಿಕೆಟ್​ ಹೀನಾಯ ಸೋಲು

Lok sabha Election 2024
ಕರ್ನಾಟಕ8 hours ago

Lok Sabha Election 2024: ಇಂಡಿಯಾ ಕೂಟದಲ್ಲಿ ಯಾರಿಗಾದ್ರೂ ಪ್ರಧಾನಿ ಆಗೋ ಯೋಗ್ಯತೆ ಇದ್ಯಾ: ದೇವೇಗೌಡ ಪ್ರಶ್ನೆ

Modi Letter
ದೇಶ8 hours ago

Modi Letter: ಸಾಮಾನ್ಯ ಎಲೆಕ್ಷನ್‌ ಅಲ್ಲ; ರಾಮನವಮಿ ದಿನವೇ ಎನ್‌ಡಿಎ ಅಭ್ಯರ್ಥಿಗಳಿಗೆ ಮೋದಿ ಪತ್ರ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20243 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌