Will not sit with folded hands if chakravarthy sulibele is arrested says Kota Srinivas PoojaryKarnataka Politics: ಸೂಲಿಬೆಲೆಯನ್ನು ಬಂಧಿಸಿದರೆ ಕೈಕಟ್ಟಿ ಕೂರಲ್ಲ: ಕೋಟ ಶ್ರೀನಿವಾಸ ಪೂಜಾರಿ - Vistara News

ಉಡುಪಿ

Karnataka Politics: ಸೂಲಿಬೆಲೆಯನ್ನು ಬಂಧಿಸಿದರೆ ಕೈಕಟ್ಟಿ ಕೂರಲ್ಲ: ಕೋಟ ಶ್ರೀನಿವಾಸ ಪೂಜಾರಿ

Karnataka Politics: ಚಕ್ರವರ್ತಿ ಸೂಲಿಬೆಲೆ ಅವರೇನೂ ಭಯೋತ್ಪಾದಕರಲ್ಲ. ಅವರನ್ನು ಬಂಧಿಸಿದರೆ ಬಿಜೆಪಿ ಕೈಕಟ್ಟಿ ಕೂರಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

VISTARANEWS.COM


on

Kota Srinivas Poojary
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಬಗ್ಗೆ ಎಂ.ಬಿ. ಪಾಟೀಲ್ ಅವರು ಆಡಿದ ಮಾತುಗಳು ನನಗೆ ಆಶ್ಚರ್ಯ ಮೂಡಿಸಿದೆ (Karnataka Politics). ಜೈಲಿಗಟ್ಟಲು ಅವರೇನೂ ಭಯೋತ್ಪಾದಕರಲ್ಲ. ರಾಷ್ಟ್ರೀಯವಾದಿಯೊಬ್ಬರನ್ನು ಬಂಧಿಸಿದರೆ ಬಿಜೆಪಿ ಕೈಕಟ್ಟಿ ಕೂರಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಚಕ್ರವರ್ತಿ ಸೂಲಿಬೆಲೆಗೆ ಜೈಲು ಗ್ಯಾರಂಟಿ ಎಂಬ ಸಚಿವ ಎಂ.ಬಿ.ಪಾಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಸುಮ್ಮನೆ ಇದ್ದರೆ ಆಯ್ತು, ಇಲ್ಲವಾದರೆ ಜೈಲಿಗಟ್ಟುತ್ತೇನೆ ಏಂಬ ಸಚಿವರ ಮಾತು ಕೇಳಿ ನನಗೆ ದಿಗ್ಭ್ರಮೆಯಾಗಿದೆ. ಚಕ್ರವರ್ತಿ ಸೂಲಿಬೆಲೆ ಭಯೋತ್ಪಾದಕ ಅಲ್ಲ, ಒಬ್ಬ ರಾಷ್ಟ್ರಭಕ್ತ, ರಾಷ್ಟ್ರೀಯವಾದಿ ವಿಚಾರಗಳನ್ನು ಜನಮಾನಸದಲ್ಲಿ ಬಿತ್ತುವ ಭಾಷಣಕಾರ, ಉತ್ತಮ ಸಂಘಟಕ. ಅಪರಾಧವಲ್ಲದಂತಹ ರಾಷ್ಟ್ರೀಯವಾದಿ ನಿಲುವುಗಳನ್ನು ಜನರ ಮುಂದಿಡುವವರು. ಹೀಗಾಗಿ ಮಂತ್ರಿಗಳು ತಮ್ಮ ಇತಿಮತಿಯೊಳಗೆ ಮಾತನಾಡಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | Karnataka Politics: ಹಿಟ್ಲರ್‌ ಗಿಟ್ಲರ್‌ ಅಂದ್ರೆ ಜೈಲು ಗ್ಯಾರಂಟಿ: ಇದು ಚಕ್ರವರ್ತಿ ಸೂಲಿಬೆಲೆಗೆ ಎಂ.ಬಿ. ಪಾಟೀಲ್‌ ಎಚ್ಚರಿಕೆ ಧಾಟಿ!

ನಿಮಗೆ ರಾಜ್ಯದ ಹೊಣೆಗಾರಿಕೆ ಇದೆ, ಇಂತಹ ವಿಚಾರಗಳಲ್ಲಿ ಮಾತನಾಡುವುದು ಸರಿಯಲ್ಲ. ನೀವು ನಿಮ್ಮ ಹೇಳಿಕೆ ಹಿಂಪಡೆಯುವುದು ಉತ್ತಮ. ಚಕ್ರವರ್ತಿ ಸೂಲಿಬೆಲೆಯವರಿಗೆ ವಿನಾಕಾರಣ ತೊಂದರೆ ಕೊಟ್ಟಲ್ಲಿ ಬಿಜೆಪಿ ಸುಮ್ಮನಿರಲ್ಲ. ನಮಗೂ ನ್ಯಾಯ ಕೇಳುವ ಹಕ್ಕಿದೆ. ಯಾವ ರೀತಿ ಪ್ರತಿಕ್ರಿಯಿಸಬೇಕೋ, ಅದೇ ರೀತಿ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

Rain News : ಹಲವೆಡೆ ಸುರಿಯುತ್ತಿರುವ ಬಿರುಗಾಳಿ ಮಳೆಯು ನಾನಾ ಅನಾಹುತಗಳನ್ನು ಸೃಷ್ಟಿ ಮಾಡಿದೆ. ಗಾಳಿ ಮಳೆಗೆ ಮನೆಯ ಚಾವಣಿ ಹಾರಿ ಹೋಗಿದೆ. ಮತ್ತೊಂದು ಕಡೆಗೆ ಸಿಡಿಲಿಗೆ ಜಾನುವಾರು ಹಾಗೂ ತೆಂಗಿನ ಮರ ಸುಟ್ಟು ಕರಕಲಾಗಿದೆ. ಮುಂದಿನ 3 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ಮಳೆ (Rain News) ಅಬ್ಬರ ಜೋರಾಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹಾಗೂ ಯಲಹಂಕದಲ್ಲಿ ವರ್ಷದ ಮೊದಲ ಮಳೆಯಾಗಿದೆ. ಕಾದ ಕೆಂಡದಂತಾಗಿದ್ದ ಧರೆಗೆ ಶುಕ್ರವಾರ ಮಧ್ಯಾಹ್ನ ಕೆಲಕಾಲ ಸುರಿದ ಮಳೆಯು ಜನರಲ್ಲಿ ಸಂತಸ (Karnataka weather Forecast) ಮೂಡಿಸಿತ್ತು.

ಶುಕ್ರವಾರ ಸಂಜೆ ನಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಬೀದರ್‌, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಇನ್ನೂ ತುಮಕೂರಿನ ಕುಣಿಗಲ್ ತಾಲೂಕು ಡಿ.ಹೊಸಹಳ್ಳಿ, ರಾಜೇಂದ್ರಪುರ ಭಾಗದಲ್ಲಿ ಗಾಳಿ- ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿಗಳು ಹಾರಿಹೋಗಿದ್ದವು. ಜತೆಗೆ ಮರಗಳೆಲ್ಲವೂ ಧರೆಗುರುಳಿದ್ದವು. ಕುಣಿಗಲ್ ತಾಲೂಕಿನ ಹಲವೆಡೆ ನಿನ್ನೆ ತುಂತುರು ಮಳೆಯೊಂದಿಗೆ ಬಿರುಗಾಳಿ ಬೀಸಿದೆ. ಬಿರುಗಾಳಿಯ ರಭಸಕ್ಕೆ 30ಕ್ಕೂ ಹೆಚ್ಚು ಮರಗಳು ನೆಲಸಮವಾಗಿತ್ತು. ಡಿ.ಹೊಸಹಳ್ಳಿಯಲ್ಲಿ ಶಾಲಾ ಕಟ್ಟಡದ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿತ್ತು. ಇನ್ನು ರಾಜೇಂದ್ರಪುರ ಗ್ರಾಮದಲ್ಲಿ ಕಲ್ಲೂರಯ್ಯ, ಬರಿಯಯ್ಯ, ಚಿಕ್ಕಕೂರಲಯ್ಯ ಎಂಬುವವರ ಮನೆಗಳ ಮೇಲ್ಛಾವಣಿಯೇ ಹಾರಿಹೋಗಿತ್ತು. ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

ಸಿಡಿಲು ಬಿಡಿದು ಹೊತ್ತಿ ಉರಿದ ತೆಂಗಿನ ಮರ

ಚಿಕ್ಕಮಗಳೂರಿನ ಬಾಳೆಹೊನ್ನುರು-ಕೊಪ್ಪ ರಸ್ತೆಯಲ್ಲಿ ಮಧ್ಯರಾತ್ರಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿತ್ತು. ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರ ಹೊತ್ತಿ ಉರಿದಿತ್ತು. ಸಿಡಿಲು ಬಡಿದು ಸಂಪೂರ್ಣ ಸುಟ್ಟುಹೋಗಿತ್ತು. ಕಳೆದ ರಾತ್ರಿ ಬಾಳೆಹೊನ್ನೂರು ಸುತ್ತಮುತ್ತ ಗಾಳಿ-ಮಳೆ ಸುರಿದಿತ್ತು.

karnataka weather Forecast

ಸಿಡಿಲಿಗೆ ಮುರಿದು ಬಿದ್ದ ದೇವಾಲಯದ ಗರುಡುಗಂಬ

ಸಿಡಿಲು ಬಡಿದು ದೇವಾಲಯದ ಗರುಡುಗಂಬ ಮುರಿದು ಬಿದ್ದಿತ್ತು. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಹಗರನೂರಿನಲ್ಲಿ ಘಟನೆ ನಡೆದಿತ್ತು. ನಿನ್ನೆ ತಡರಾತ್ರಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿತ್ತು. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಗರಡುಗಂಬಕ್ಕೆ ಸಿಡಿಲು ಬಡಿದ ಪರಿಣಾಮ ಮುರಿದು ಬಿದ್ದಿತ್ತು. ಅಲ್ಲದೆ ಹಿರೇಹಡಗಲಿಯಲ್ಲಿ ರೈತ ಬಂದ್ರಕಳ್ಳಿ ಲಂಕೆಪ್ಪ ಎಂಬವರ ಹಸುವು ಸಿಡಿಲಿಗೆ ಬಲಿಯಾಗಿತ್ತು. ಹಿರೇಕೊಳಚಿ, ಚಿಕ್ಕಕೊಳಚಿ, ನಾಗತಿಬಸಾಪುರ ಹಿರೇಹಡಗಲಿ ಸೇರಿ ಹತ್ತಾರು ಗ್ರಾಮಗಳಲ್ಲಿ ಮಳೆಯಾಗಿದೆ. ಹಗರನೂರು ಗ್ರಾಮದ ರಸ್ತೆ ಮೇಲೆ ಮರಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾಸದ ಮನೆ, ದನದ ಕೊಟ್ಟಿಗೆ ಮೇಲೆ ಹಾಕಲಾಗಿದ್ದ ತಗಡುಗಳು ಬಿರುಗಾಳಿಗೆ ಹಾರಿಹೋಗಿದ್ದವು.

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ

ಗುರುವಾರದಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಅಥಣಿ ಹಾಗೂ ನಿಪ್ಪಾಣಿಯಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ. ಮಹಾಲಿಂಗಪುರ 4, ಹೊನ್ನಾವರ, ಲೋಕಾಪುರ, ಗದಗ, ಚಿಕ್ಕೋಡಿ, ಸೇಡಬಾಳ, ಟಿಕ್ಕೋಟ, ಹುಂಚದಕಟ್ಟೆ, ಬೇಲೂರು, ತ್ಯಾಗರ್ತಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮುಂಡಗೋಡು, ಹಾವೇರಿ, ಹಾವೇರಿ ಎಪಿಎಂಸಿ , ರಬಕವಿ , ಕುಂದಗೋಳ , ಸಂಕೇಶ್ವರ, ಕಲಘಟಗಿ , ಯಡವಾಡ, ಪೊನ್ನಂಪೇಟೆ, ಕೊಡಗು, ಹರಪನಹಳ್ಳಿಯಲ್ಲಿ ತಲಾ 2 ಸೆಂ.ಮೀ ಹಾಗೂ ಹಳಿಯಾಳ, ಸಿದ್ದಾಪುರ, ಗೋಕಾಕ್‌ , ರಾಣೆಬೆನ್ನೂರು, ಧಾರವಾಡ, ಮಂಡ್ಯದಲ್ಲಿ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿ.ಸೆ ಕಲಬುರಗಿ ಮತ್ತು ರಾಯಚೂರಿನಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Rain News: ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಶುಕ್ರವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಜತೆಗೆ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

ತಾಪಮಾನದ ಮುನ್ಸೂಚನೆ

ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಹೆಚ್ಚಿನ ಬಡಲಾವಣೆ ಇರುವುದಿಲ್ಲ. ನಂತರದ 3 ದಿನಗಳವರೆಗೆ ಕ್ರಮೇಣ 2-3 ಡಿ.ಸೆ ಏರಿಕೆಯಾಗುತ್ತದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಸಂಜೆ/ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Karnataka Weather : ಹಲವೆಡೆ ಗುಡುಗು ಸಿಡಿಲು ಸಹಿತ (Rain News) ಭಾರಿ ಮಳೆಯಾಗಿದ್ದು, ಸಾವು-ನೋವಿಗೆ ಕಾರಣವಾಗಿದೆ. ಸಿಡಿಲು ಬಡಿದು ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟರೆ, ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

VISTARANEWS.COM


on

By

Karnataka Weather
Koo

ಕೊಪ್ಪಳ: ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು (Rain News) ಬಲಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ಘಟನೆ (Karnataka Weather Forecast) ನಡೆದಿದೆ. ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ.

ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು. ಗುರುವಾರ ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗನಲ್ಲೂ ಬಿರುಗಾಳಿ ಸಹಿತ ಮಳೆ

ಮುಂಗಾರಿಗೂ ಮುನ್ನ ಗದಗ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ ಜೋರಾಗಿದೆ. ಬಿರುಗಾಳಿ ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿ‌‌ನ ಪರಸಾಪೂರ ಬಳಿ ಘಟನೆ ನಡೆದಿದೆ. ರಸ್ತೆ ಮೇಲೆ ಮರ ಹಾಗೂ ವಿದ್ಯುತ್‌ ಕಂಬ ಧರೆಗುರುಳಿದ ಕಾರಣದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಸ್ಥಳೀಯರ ಸಹಾಯದಿಂದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರಕ್ಕೆ‌ ಅನುಕೂಲ ಮಾಡಿಕೊಡಲಾಯಿತು.

ಇದನ್ನೂ ಓದಿ: Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಧಾರವಾಡದ ಕಲಘಟಗಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಕಲಘಟಗಿಯ ದೇವರಕೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರಗೌಡ ಶಿವನಗೌಡರ ಎಂಬುವರ ಮನೆಯ ಮುಂದಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಸಮಯದಲ್ಲಿ ಮನೆ ಮುಂದೆ ಅಕ್ಕ-ಪಕ್ಕ ಯಾರು ಇರಲಿಲ್ಲ. ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.

ಮತ್ತೊಂದೆಡೆ ಧಾರವಾಡದ ಅಣ್ಣಿಗೇರಿಯ ರಾಜರಾಜೇಶ್ವರಿ ನಗರದಲ್ಲೂ ಮನೆಯ ಪಕ್ಕದಲ್ಲಿಯೇ ಇದ್ದ ಮರಕ್ಕೆ ಸಿಡಿಲು ಬಡಿದ ಪರಿಣಾಮ ಹೊತ್ತಿ ಉರಿದಿತ್ತು. ಮರಕ್ಕೆ ಬೆಂಕಿ ಆವರಿಸುತ್ತಿದಂತೆಯೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದರು.

ಧಾರವಾಡದಲ್ಲಿ ಆಲಿಕಲ್ಲು ಮಳೆ

ಧಾರವಾಡ ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆಯಾಗಿದೆ. ನಗರದಲ್ಲಿ ಮಧ್ಯಾಹ್ನದವರೆಗೆ ಉರಿ ಬಿಸಿಲು ಇತ್ತು, ನಂತರ ಸಂಪೂರ್ಣ ಮೋಡ ಕವಿದ ವಾತಾವರಣದೊಂದಿಗೆ ಮಳೆಯು ಅಬ್ಬರಿಸಿತ್ತು. ವಿಜಯನಗರದ ನಾನಾ ಕಡೆ ಮಳೆರಾಯ ಕೃಪೆ ತೋರಿದ್ದಾನೆ. ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಹೊಸಪೇಟೆಯ ಮರಿಯಮ್ಮನಹಳ್ಳಿ, ದೇವಲಾಪುರ ಸೇರಿದಂತೆ ನಾನಾ ಕಡೆ ಉತ್ತಮ ಮಳೆಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಸಿಡಿಲು ಗುಡುಗು ಗಾಳಿ ಸಹಿತ ಭಾರೀ ಮಳೆಗೆ ಮರಗಳು ಉರುಳಿದವು. ಬಿರುಗಾಳಿಗೆ ಹಾಲಸ್ವಾಮಿ ಮಠದ ಬಳಿ, ಯಲ್ಲಾಪುರ ರಸ್ತೆ ಮೇಲೆ ಮರ ನೆಲಕ್ಕೆ ಉರುಳಿ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ತಾಲೂಕು ಪಂ. ಆವರಣದಲ್ಲಿ ಎರಡು ಮರಗಳು ಕಳಚಿ ಬಿದ್ದಿತ್ತು. ಮಂಡ್ಯದ ಮಳವಳ್ಳಿಯ ಕೆಆರ್ ಪೇಟೆಯಲ್ಲಿ ಮೊದಲ ಮಳೆಯಾಗಿದೆ. ಸಿಡಿಲು ಬಡಿದ ಪರಿಣಾಮ ಬೃಹತ್ ಕಲ್ಲೊಂದು ಕಾರಿನ ಮೇಲೆ ಬಿದ್ದು, ಜಖಂಗೊಂಡಿರುವ ಘಟನೆ ವಿಜಯಪುರ ನಗರದ ಜೆಎಂ ರಸ್ತೆಯಲ್ಲಿ ನಡೆದಿದೆ.‌ ಮಹತ್ತರ ಮಹಲ್‌ನ ಗೋಡೆಯ ಬೃಹತ್ ಕಲ್ಲು ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಭಾರಿ ಮಳೆ, ಗಾಳಿಯ ವೇಳೆ ಸಿಡಿಲು ಬಡಿದು ಈ ಅವಘಡ ಆಗಿದೆ. ಗೋಳಗುಮ್ಮಟ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಭಾರಿ ಮಳೆ ಮುನ್ಸೂಚನೆ

ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಗುಲ್ಬರ್ಗ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Lok Sabha Election 2024: ಮನೆಯಲ್ಲೇ ಮತ ಹಾಕಿದ ಬಳಿಕ ಬಂತು ಮೃತ್ಯು! ಎದೆನೋವು ಇದ್ದರೂ ವೋಟಿಂಗ್‌ಗೆ ಕಾದ ಮಹಿಳೆ!

Lok Sabha Election 2024: ಮತದಾನದ ದಿನ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ತೆರಳಲು ಅವರು ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ತೆರಳಿ ಅಲ್ಲಿ ದಾಖಲಾಗಿದ್ದರು.

VISTARANEWS.COM


on

lok sabha election 2024 senior citizen death after voting
Koo

ಉಡುಪಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮನೆಯಲ್ಲಿ ಮತದಾನ (Voting) ಮಾಡಿದ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಸಾವಿನ ಮುನ್ನದ ಕ್ಷಣಗಳಲ್ಲೂ ಹಕ್ಕು ಚಲಾಯಿಸಿದ ನಿರ್ವಹಿಸಿದ ಹಿರಿಯ ನಾಗರಿಕರ (Senior Citizen) ಈ ಕರ್ತವ್ಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ.

ಪಿ.ಯಶೋದಾ ನಾರಾಯಣ ಉಪಾಧ್ಯ (83) ಮೃತಪಟ್ಟ ಹಿರಿಯ ಜೀವ. ಇವರು ಬ್ರಹ್ಮಾವರ ತಾಲೂಕು ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿದ್ದಾರೆ. ಹಿರಿಯ ನಾಗರಿಕರಿಗಾಗಿ ರೂಪಿಸಲಾಗಿರುವ ʼಮನೆಯಿಂದ ಮತʼ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು.

ಮತದಾನದ ದಿನ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ತೆರಳಲು ಅವರು ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ತೆರಳಿ ಅಲ್ಲಿ ದಾಖಲಾಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಯಶೋದಮ್ಮ ಮೃತಪಟ್ಟಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಇನ್ನೊಂದೇ ದಿನ ಅವಕಾಶ

ಲೋಕಸಭೆ ಚುನಾವಣೆಯ (Lok Sabha Election 2024) ʼಅಂಚೆ ಮತದಾನʼ (Postal ballet) ಕಾರ್ಯಕ್ರಮ ಏಪ್ರಿಲ್‌ 13ರಿಂದ ಆರಂಭವಾಗಿದ್ದು, ಏಪ್ರಿಲ್ 18ರವರೆಗೆ ನಡೆಯುತ್ತಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು (Senior citizen) ಹಾಗೂ ಹಾಗೂ ವಿಶೇಷ ಚೇತನರಿಗೆ (Specially abled) ಮನೆಯಿಂದಲೇ ಅಂಚೆ ಮತದಾನ ಮಾಡುವ ಸೌಲಭ್ಯವನ್ನು ಇದರಲ್ಲಿ ನೀಡಲಾಗಿದೆ.

ನೋಂದಣಿ ಮಾಡಿಕೊಂಡ ಮತದಾರರ ಮನೆಗೆ ಮತಗಟ್ಟೆ ಅಧಿಕಾರಿಗಳ ತಂಡ ಭೇಟಿ ನೀಡುತ್ತದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ತಂಡ ಭೇಟಿ ನೀಡಲಿದ್ದು, ಜೊತೆಗೆ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ಅಬ್ಸರ್ವರ್ ಕಡ್ಡಾಯವಿದೆ. ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲನೆ ಮಾಡಲಿದ್ದು, ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ನೀಡುತ್ತದೆ.

ಈ ಎಲ್ಲಾ ಪ್ರಕ್ರಿಯೆ ವೀಡಿಯೋಗ್ರಫಿ ಮೂಲಕ ಕಡ್ಡಾಯ ಸೆರೆ ಹಿಡಿಯಲಾಗುತ್ತದೆ. ಪ್ರತಿ ಮತದಾರರ ಮನೆಗೆ ಎರಡು ಬಾರಿ ಟೀಮ್‌ ಭೇಟಿ ನೀಡಲಿದ್ದು, ಎರಡು ಬಾರಿಯೂ ಮತದಾನ ಪ್ರಕ್ರಿಯೆ ನಡೆಯದೇ ಇದ್ದರೆ ಮತ್ತೆ ಮತದಾನ ನಡೆಸಲು ಅವಕಾಶವಿರುವುದಿಲ್ಲ. ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ.

ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು

ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇಲ್ಲದಿದ್ದರೆ ಮತದಾನ ಮಾಡಲು ಅವಕಾಶವಿಲ್ಲ. ಆದರೆ, ವೋಟರ್ ಐಟಿ ಕಾರ್ಡ್‌ ಅಥವಾ ಮತದಾರರ ಫೋಟೋ ಸಹಿತ ಗುರುತಿನ ಚೀಟಿ ಕಾಣೆಯಾಗಿದ್ದರೆ ಮತದಾನ ಮಾಡಲು ಅವಕಾಶ ಇದೆ. ಆದರೆ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇರಲೇ ಬೇಕು. ಮತದಾರರು ಚುನಾವಣಾ ಆಯೋಗ ಪಟ್ಟಿ ಮಾಡಿರುವ 14 ವಿಧದ ಫೋಟೋ ಸಹಿತ ಗುರುತಿನ ಚೀಟಿಗಳ ಪೈಕಿ ಯಾವುದನ್ನಾದರೂ ತೋರಿಸಿ ಮತ ಚಲಾಯಿಸಬಹುದು. ಇದಕ್ಕಾಗಿ ಪ್ರತ್ಯೇಕವಾಗಿ ಫೋಟೋ ತೋರಿಸುವ ಅಗತ್ಯ ಇಲ್ಲ. ಆದರೆ, ಇವೆಲ್ಲವೂ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇದ್ದಾಗ ಮಾತ್ರ ಸಾಧ್ಯ.

ಇದನ್ನೂ ಓದಿ: Lok Sabha Election 2024: ವಿವಿಧ ಇಲಾಖೆಗಳ ಉದ್ಯೋಗಿಗಳಿಗೆ ಅಂಚೆ ಮತದಾನ ಸೌಲಭ್ಯ; ಯಾರಿಗೆಲ್ಲ ಇದೆ ಅವಕಾಶ?

Continue Reading
Advertisement
Instagram Reel
ದೇಶ3 mins ago

Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

IPL 2024
ಕ್ರೀಡೆ18 mins ago

IPL 2024 : ಪಾಂಡ್ಯನನ್ನು ವಿಚಿತ್ರ ನಾಯಕ ಎಂದ ಮುಂಬೈ ಇಂಡಿಯನ್ಸ್​ ಆಲ್​ರೌಂಡರ್​​

Karnataka Weather Forecast
ಮಳೆ24 mins ago

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

lok sabha Election
ಪ್ರಮುಖ ಸುದ್ದಿ47 mins ago

Lok Sabha Election : ಕಾಂಗ್ರೆಸ್​ ಪರ ಶಾರುಖ್​ ಖಾನ್​ ಪ್ರಚಾರ; ಬಿಜೆಯಿಂದ ಆಕ್ಷೇಪ!; ವಿಡಿಯೊ ಇದೆ

Road accident between bike and Bolero near Mudgal Two dead
ಕರ್ನಾಟಕ48 mins ago

Road Accident: ಮುದ್ಗಲ್‌ ಬಳಿ ಬೈಕ್‌ – ಬುಲೇರೋ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Wedding Saree Selection
ಫ್ಯಾಷನ್52 mins ago

Wedding Saree Selection: ಮದುವೆ ಸೀರೆಗಳನ್ನು ಆಯ್ಕೆ ಮಾಡುವುದು ಹೇಗೆ? ಇಲ್ಲಿದೆ ಸೀರೆ ಎಕ್ಸ್‌ಫರ್ಟ್‌ಗಳ ಟಿಪ್ಸ್

ಶಿವಮೊಗ್ಗ1 hour ago

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Wipro Q4 Results
ವಾಣಿಜ್ಯ1 hour ago

Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

Fraud Case in Bengaluru
ಬೆಂಗಳೂರು1 hour ago

Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Jackfruit benefits
ಆರೋಗ್ಯ1 hour ago

Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ3 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ13 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌