Shakthi Scheme : ಖಾಸಗಿ ಬಸ್‌ಗೂ ವಿಸ್ತರಣೆ ಆಗುತ್ತಾ ಶಕ್ತಿ ಯೋಜನೆ? ಹೈಕೋರ್ಟ್‌ ಹೇಳಿದ್ದೇನು? - Vistara News

ಉಡುಪಿ

Shakthi Scheme : ಖಾಸಗಿ ಬಸ್‌ಗೂ ವಿಸ್ತರಣೆ ಆಗುತ್ತಾ ಶಕ್ತಿ ಯೋಜನೆ? ಹೈಕೋರ್ಟ್‌ ಹೇಳಿದ್ದೇನು?

Shakthi Scheme : ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆಯ ಬಗ್ಗೆ ಎರಡು ತಿಂಗಳ ಒಳಗೆ ತೀರ್ಮಾನ ಮಾಡಿ ಎಂದು ಹೈಕೋರ್ಟ್‌ ಸರ್ಕಾರಕ್ಕೆ ಸೂಚನೆ ನೀಡಿದೆ.

VISTARANEWS.COM


on

Private Buses Shakti Scheme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ (Free Bus service) ಅವಕಾಶವನ್ನು ಒದಗಿಸಿರುವ ಶಕ್ತಿ ಯೋಜನೆ (Shakthi Scheme) ಖಾಸಗಿ ಬಸ್‌ಗಳಿಗೂ (Private Buses) ವಿಸ್ತರಣೆ ಆಗಲಿದೆಯಾ? ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ಮಹತ್ವದ ಸೂಚನೆ ನೀಡಿದೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದ ಕರ್ನಾಟಕ ಹೈಕೋರ್ಟ್, ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳೊಳಗೆ ಕಾನೂನು ರೀತ್ಯಾ ಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶನ ನೀಡಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಸರ್ಕಾರಿ ಬಸ್‌ ಸೌಲಭ್ಯ ಇಲ್ಲ. ಹೀಗಾಗಿ ಅಲ್ಲಿನ ಜನರಿಗೂ ಯೋಜನೆಯ ಲಾಭ ದೊರೆಯುವಂತಾಗಲು ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ ಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆ ಕೆಲವು ಕಡೆ ಕೇಳಿಬಂದಿತ್ತು. ಇದೀಗ ಖಾಸಗಿ ಬಸ್‌ ಮಾಲೀಕರೊಬ್ಬರು ಹೈಕೋರ್ಟ್‌ ಮೆಟ್ಟಿಲು ಹತ್ತಿದ್ದಾರೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್‌ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳೊಳಗೆ ಕಾನೂನು ರೀತ್ಯಾ ಪರಿಶೀಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿ ನ್ಯಾಯಾಲಯ ಆದೇಶಿಸಿದೆ. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದಿಸಿದರು.

ಇದನ್ನೂ ಓದಿ : Shakti Scheme: ತಾಯಂದಿರಿಗೆ ಶಕ್ತಿ ಕೊಟ್ಟು, ಅವರ ಮಕ್ಕಳಿಗೆ ಕಷ್ಟ ಕೊಟ್ಟ ಸರ್ಕಾರ; ವಿಡಿಯೊ ಹಾಕಿ ಎಚ್‌ಡಿಕೆ ಕಿಡಿ

ಬಸ್‌ ಮಾಲೀಕರ ಮನವಿಯಲ್ಲಿ ಏನಿದೆ?

  1. 1. ರಾಜ್ಯದಲ್ಲಿ ಖಾಸಗಿ ಬಸ್‌ಗಳ ಸಂಚಾರಕ್ಕೆ 65 ವರ್ಷಗಳ ಇತಿಹಾಸವಿದೆ. ಸುಮಾರು 16 ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಅಧಿಕ ಖಾಸಗಿ ಬಸ್‌ಗಳು ಸೇವೆ ಒದಗಿಸುತ್ತಿವೆ.
  2. 2.ರಾಜ್ಯದಲ್ಲಿ 75 ಸಾವಿರ ಕಾರ್ಮಿಕರು ಖಾಸಗಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದಾರೆ.
  3. 3. ಖಾಸಗಿ ಬಸ್ ಆಪರೇಟರ್‌ಗಳು ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿದ್ದು, ವಾರ್ಷಿಕ 1,620 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗುತ್ತಿದೆ.
  4. 4. ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ ಖಾಸಗಿ ಬಸ್ ಆಪರೇಟರ್‌ಗಳ ಸಂಕಷ್ಟ ಪ್ರಾರಂಭವಾಗಿದೆ. ಹೀಗಾಗಿ, ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ಅನ್ವಯ ಮಾಡಬೇಕು.
  5. 5.ಸರ್ಕಾರಿ ಬಸ್‌ಗಳಂತೆ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಪ್ರಯಾಣ ವೆಚ್ಚವನ್ನು ಸರ್ಕಾರ ಖಾಸಗಿ ಬಸ್ ಆಪರೇಟರ್‌ಗಳಿಗೆ ಮರು ಪಾವತಿ ಮಾಡಬೇಕು.
  6. 6. ಸರ್ಕಾರ ಹಾಗೂ ಸಾರಿಗೆ ಇಲಾಖೆಗೆ 2023ರ ಜುಲೈ 26ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಆದೇಶ ನೀಡಬೇಕು ಎಂದು ಅರ್ಜಿದಾರರು ದಾವೆಯಲ್ಲಿ ಆಗ್ರಹಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Karnataka Rain : ಭಾನುವಾರ ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ವಿಜಯನಗರ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ತಲಾ 1 ಎಮ್ಮೆ ಮೃತಪಟ್ಟಿವೆ. ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಗುರುಮಠಕಲ್‌ (karnataka weather Forecast) ಕೆರೆಯಂತಾಗಿದೆ.

VISTARANEWS.COM


on

By

Karnataka Rain
Koo

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರು ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರುಣನ ಅಬ್ಬರಕ್ಕೆ ಕೆರೆಯಂತಾದ ಗುರುಮಠಕಲ್‌

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುಮಠಕಲ್ ಹಾಗೂ ಯಾದಗಿರಿ ನಗರದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದ. ಭಾರಿ ಮಳೆಗೆ ಗುರುಮಠಕಲ್ ರಸ್ತೆ ಮೇಲೆ ನೀರು ಹರಿದು ಕೆರೆಯಂತಾಗಿತ್ತು. ಇತ್ತ ಬಿರುಗಾಳಿ ಸಹಿತ ಭಾರಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಯಾದಗಿರಿ ತಾಲೂಕಿನ ಗಣಾಪುರ ಸಮೀಪದ ಯಾದಗಿರಿ-ಗುರುಮಠಕಲ್ ರಸ್ತೆ ಮಾರ್ಗದಲ್ಲಿ ಮರಗಳು ಧರೆಗುರುಳಿತ್ತು.

ಯಾದಗಿರಿಯ ಗಣಾಪುರ ಸಮೀಪದ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಮರಗಳು ಬಿದ್ದಿತ್ತು. ಗುರುಮಠಕಲ್-ಯಾದಗಿರಿ ರಾಜ್ಯ ಹೆದ್ದಾರಿಯಲ್ಲಿ ಮರಗಳು ಉರುಳಿ ಬಿದ್ದಿತ್ತು. ಹೀಗಾಗಿ ಸ್ಥಳೀಯರು ಹಾಗೂ ಸವಾರರಿಂದಲೇ ರಸ್ತೆ ಮೇಲೆ ಬಿದ್ದಿದ್ದ ಮರಗಳ ತೆರವು ಮಾಡಲಾಯಿತು. ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡರು. ರಸ್ತೆ ಮೇಲೆ ಮರಗಳು ಬಿದ್ದ ಕಾರಣದಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇದನ್ನೂ ಓದಿ: Basavanagudi News : ಪೂಜಾ ಸಾಮಾಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಮೂವರನ್ನು ಸೆರೆ ಹಿಡಿಯಲಾಗಿದೆ.

VISTARANEWS.COM


on

Udupi Gang War
Koo

ಉಡುಪಿ: ನಗರದಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ (Udupi Gang War) ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಪು ಮೂಲದ ಗರುಡ ಗ್ಯಾಂಗ್‌ನ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿತ್ತು. ಇದಕ್ಕೆ ಸಂಬಂಧಪಟ್ಟಂತೆ ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಮೂವರನ್ನು ಸೆರೆ ಹಿಡಿಯಲಾಗಿದೆ.

ಗರುಡ ಗ್ಯಾಂಗ್‌ನ ಮಜೀದ್, ಅಲ್ಫಾಜ್, ಶರೀಫ್ ಬಂಧಿತರು. ಈ ಮೊದಲು ಆಶಿಕ್, ರಾಕೀಬ್, ಸಕ್ಲೈನ್ ಎಂಬುವವರನ್ನು ಬಂಧಿಸಲಾಗಿತ್ತು. ಘಟನೆಯ ಗಂಭೀರತೆ ಮತ್ತು ಸಾರ್ವಜನಿಕರ ಆಗ್ರಹದ ನಡುವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮತ್ತೆ ಮೂವರನ್ನು ಬಂಧಿಸಿದ್ದಾರೆ. ಇದುವರೆಗೆ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಬಂಧಿಸಿದಂತಾಗಿದೆ.

ಇದನ್ನೂ ಓದಿ | Road Accident : ಕಾರು ಡ್ರೈವಿಂಗ್‌ ಕಲಿಯುವಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಳು; ಡೆಡ್ಲಿ ಆಕ್ಸಿಡೆಂಟ್‌ಗೆ ಬಾಲಕಿ ಬಲಿ

ಏನಿದು ಪ್ರಕರಣ?

ಮೇ 18 ರಂದು ತಡರಾತ್ರಿ ಉಡುಪಿಯ ಶಾರದಾ ಕಲ್ಯಾಣ ಮಂಟಪಕ್ಕೆ ತೆರಳುವ ರಸ್ತೆಯ ಬಳಿ ನಡೆದಿದ್ದ ಗ್ಯಾಂಗ್ ವಾರ್ (Udupi Gang War) ನಗರವನ್ನು ಬೆಚ್ಚಿಬೀಳಿಸಿತ್ತು. ಎರಡು ಕಾರುಗಳಲ್ಲಿ ಬಂದ ಯುವಕರ ನಡುವೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿತ್ತು. ಎರಡು ತಂಡಗಳ 6 ಯುವಕರು ಪರಸ್ಪರ ಕಾರುಗಳಿಂದ ಡಿಕ್ಕಿ ಹೊಡೆದುಕೊಂಡು, ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿಕೊಂಡ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿಯತ್ತು.

ಎರಡು ಕಾರುಗಳಲ್ಲಿ ಬಂದ ಯುವಕರ ನಡುವೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿತ್ತು. ಒಂದು ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು, ಅಡ್ಡ ಬಂದ ತಂಡದ ಒಬ್ಬ ಸದಸ್ಯನಿಗೂ ಕಾರು ಗುದ್ದಿತ್ತು. ಕಾಪು ಮೂಲದ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿತ್ತು. ಯುವಕರ ಮಾರಾಮಾರಿಯನ್ನು ಹತ್ತಿರದ ಕಟ್ಟಡ ಮೇಲಿಂದ ಸ್ಥಳೀಯರು ವಿಡಿಯೊ ಚಿತ್ರೀಕರಣ ಮಾಡಿದ್ದರು.

ಲಾಕಪ್‌ ಡೆತ್‌ ಕೇಸ್; ಸಹಜ‌ ಸ್ಥಿತಿಯತ್ತ ಚನ್ನಗಿರಿ ಪಟ್ಟಣ

ದಾವಣಗೆರೆ: ಯುವಕನ ಲಾಕಪ್‌ ಡೆತ್‌ ಪ್ರಕರಣದಿಂದ ಉದ್ವಿಗ್ನಗೊಂಡಿದ್ದ ಜಿಲ್ಲೆಯ ಚನ್ನಗಿರಿ ಪಟ್ಟಣ ಸಹಜ‌ ಸ್ಥಿತಿಯತ್ತ ಮರಳುತ್ತಿದೆ. ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದ್ದರಿಂದ ಆಯ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಕಲ್ಲು ತೂರಾಟ ಮಾಡಿದ ಹಿನ್ನೆಲೆಯಲ್ಲಿ ನೆನ್ನೆ ರಾತ್ರಿಯೇ ಹತ್ತು ಜನರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಪೊಲೀಸ್ ವಶದಲ್ಲಿದ್ದ ಆದಿಲ್ (32) ಎಂಬ ವ್ಯಕ್ತಿ ಸಾವಿಗೀಡಾದ ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಇದರಿಂದ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದರು. ಈ ವೇಳೆ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. 200ಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ದಾಳಿಯಾದ ಹಿನ್ನೆಲೆ ಚನ್ನಗಿರಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು.

ಈಗ ಶವ ಪರೀಕ್ಷೆ ವರದಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದಿಲ್‌ ಪೊಲೀಸ್ ಠಾಣೆಯಲ್ಲಿದ್ದದ್ದು ಕೇವಲ‌ ಏಳು ನಿಮಿಷ. ಈ ವೇಳೆ ಕಡಿಮೆ ರಕ್ತದೊತ್ತಡದಿಂದ ಹೃದಯಾಘಾತವಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ವೈದ್ಯರು ಪ್ರಾಥಮಿಕ ವರದಿ ನೀಡುವ ಸಾಧ್ಯತೆ ಇದೆ.

Continue Reading

ಮಳೆ

Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

Monsoon 2024: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯು ಅಬ್ಬರಿಸುತ್ತಿದ್ದು, ಮುಂಗಾರು ಮಳೆಯ ದರ್ಬಾರ್‌ಗೆ ದಿನಗಣನೆ‌ ಶುರುವಾಗಿದೆ. ಈ ಬಾರಿ ಮುಂಗಾರು ಮಳೆಯು ಉತ್ತಮವಾಗಿರಲಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ.

VISTARANEWS.COM


on

By

Monsoon 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಇದನ್ನೂ ಓದಿ: Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್‌ ಘೋಷಣೆ

ಮೇ 26ರಂದು ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Karnataka Weather Forecast : ದಕ್ಷಿಣ ಒಳನಾಡಿನ ಕೆಲವಡೆ ಮಳೆಯು ಹಿಂದೆ ಸರಿದಿದ್ದು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ವೈಲೆಂಟ್‌ ಆಗಿರಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕೆಲವಡೆ ಗುಡುಗು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಎಷ್ಟು ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!

ಚಾರಣ ಪ್ರಿಯರಿಗೆ ಮಳೆಗಾಲ ಹತ್ತಿರ ಬರುತ್ತಿದ್ದಂತೆ ಸುಗ್ಗಿ. ಒಂದೆರಡು ಮಳೆ ಬರುತ್ತಿದ್ದಂತೆ ಚಿಗುರುವ ಬೆಟ್ಟಗಳು ಹಸಿರಾಗಿ ನಳನಳಿಸಲು ಆರಂಭಿಸುತ್ತವೆ. ಹಸಿರ ಸ್ವರ್ಗದಲ್ಲಿ ನಡೆಯುತ್ತಾ ನೆಲಕ್ಕೆ ಮುತ್ತಿಕ್ಕುವ ಮಂಜಿನ ಹನಿಗಳು, ಮೋಡಗಳ ಜೊತೆ ಹೆಜ್ಜೆ ಹಾಕುತ್ತಾ ಸಾಗುವುದು ಪ್ರಕೃತಿ ಪ್ರಿಯರಿಗೆ ದೈವಿಕ ಅನುಭೂತಿ ನೀಡುವ ಕ್ಷಣಗಳಲ್ಲಿ ಒಂದು. ಅದಕ್ಕಾಗಿಯೇ, ಮಳೆಗಾಲ ಹತ್ತಿರ ಬರುತ್ತಿದ್ದಂತೆ ಈ ಚಾರಣಿಗರೆಲ್ಲ ತಮ್ಮ ಅನುಕೂಲಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಂಡು ಒಂದಲ್ಲ ಒಂದು ಚಾರಣಕ್ಕೆ ತಯಾರಾಗುತ್ತಾರೆ. ಹಿಮಾಲಯದ ಚಾರಣ ಕನಸಾದರೂ, ಹತ್ತಿರದಲ್ಲೇ ಸಿಗುವ ಕಡಿಮೆ ಅವಧಿಯಲ್ಲಿ ಮಾಡಿ ಬರಬಹುದಾದ ಚಾರಣಗಳು ಇಂತಹ ಸಂದರ್ಭ ನೆಮ್ಮದಿಯ ಅನುಭವ ನೀಡುತ್ತವೆ. ಬನ್ನಿ, ದಕ್ಷಿಣ ಭಾರತದಲ್ಲಿ ಮಳೆಗಾಲ ಸಮೀಪಿಸುತ್ತಿದ್ದಂತೆ ಮಾಡಬಹುದಾದ ಚಾರಣಗಳು (South Indian monsoon destinations) ಇಲ್ಲಿವೆ.

Meesapulimala trek, Kerala

ಮೀಸಪುಲಿಮಲ ಚಾರಣ, ಕೇರಳ

ಕೇರಳದ ಇಡುಕ್ಕಿ ಜಿಲ್ಲೆಯಲ್ಲಿರುವ ಈ ಚಾರಣ ಅತ್ಯಂತ ಸುಂದರ ಚಾರಣಗಳಲ್ಲಿ ಒಂದು. ದಕ್ಷಿಣ ಭಾರತದಲ್ಲಿ ರೋಡೋಡೆಂಡ್ರಾನ್‌ ಅರಳಿರುವುದನ್ನು ನೋಡಬೇಕಾದರೆ ಈ ಚಾರಣ ಮಾಡಬೇಕು. ಅಣ್ಣಾಮಲೈ ಹಾಗೂ ಪಳನಿ ಪರ್ವತ ಪ್ರದೇಶಗಳ ನಡುವೆ ಇರುವ ಈ ಪ್ರದೇಶದಲ್ಲಿ ಮೋಡಗಳನ್ನು ನೀವು ಮುಟ್ಟಬಹುದು. ಅತ್ಯಂತ ಚಂದದ ಹುಲ್ಲುಗಾವಲ ಮಧ್ಯದಲ್ಲಿ ಮಾಡುವ ಈ ಚಾರಣ ಸುಮಾರು ೧೮ ಕಿಮೀಗಳ ಅತ್ಯಂತ ಸುಮಧುರ ಅನುಭವ ನೀಡಬಹುದಾದದ್ದೇ ಆಗಿದೆ.

kudremukh

ಕುದುರೆಮುಖ ಚಾರಣ

ಕುದುರೇಮುಖ ಬೆಟ್ಟಗಳ ಚಾರಣಕ್ಕೆ ಇಂಥದ್ದೇ ಎಂಬ ಸಮಯ ಇಲ್ಲದಿದ್ದರೂ ಮಳೆಗಾಲ ಅತ್ಯಂತ ಸೂಕ್ತ. ಮಳೆಗಾಲದಲ್ಲಿ ಈ ಬೆಟ್ಟದ ಸಾಲುಗಳು ಈಗಷ್ಟೇ ಮಿಂದೆದ್ದು ಹಸಿರು ಸೀರೆಯುಟ್ಟ ನವತರುಣಿಯಂತೆ ಶೋಭಿಸುತ್ತದೆ. ಸುಮಾರು ೨೦ ಕಿಮೀ ಅಂತರದ ಈ ಚಾರಣ ಶೋಲಾ ಕಾಡುಗಳ ಮದ್ಯದಿಂದ ಹಾದುಹೋಗಬೇಕಾಗುತ್ತದೆ. ಮಂಜು ಕವಿದ, ಮೋಡಗಳು ದಿನವಿಡೀ ಬೆಟ್ಟ ಚುಂಬಿಸುವ ಈ ಚಾರಣದ ಹಾದಿಯೇ ಒಂದು ಸುಮಧುರ ಅನುಭೂತಿ. ಚಾಋಣ ಪ್ರಿಯರಾರೂ ಈ ಚಾರಣವನ್ನು ಮಿಸ್‌ ಮಾಡಲು ಬಯಸುವುದಿಲ್ಲ.

Nagalapuram trek, Andhra Pradesh

ನಾಗಲಾಪುರಂ ಚಾರಣ, ಆಂಧ್ರಪ್ರದೇಶ

ಚಿತ್ತೂರು ಜಿಲ್ಲೆಯಲ್ಲಿರುವ ನಾಗಲಾಪುರಂ ಅತ್ಯಂತ ಸುಂದರ ತಾಣ. ಈ ಜಾಗ ಜಲಪಾತಗಳದದ್ದೇ ಕಾರುಬಾರು. ಚಾರಣದುದ್ದಕ್ಕೂ ಸಿಗುವ ಬಗೆಬಗೆಯ ಜಲಪಾತಗಳು ಚಾರಣಿಗರ ಮನೋಲ್ಲಾಸ ಹೆಚ್ಚಿಸುತ್ತದೆ. ದಣಿವು ಆರಿಸುತ್ತದೆ. 12 ಕಿಮೀ ದೂರದ ಈ ಚಾರಣ ಮಳೆಗಾಲದಲ್ಲಷ್ಟೇ ಅತ್ಯಂತ ಸೊಗಸಾದ ಅನುಭವ ನೀಡುತ್ತದೆ.

Kodachadri trek

ಕೊಡಚಾದ್ರಿ ಚಾರಣ

ಚಾರಣದ ಹುಚ್ಚು ಹತ್ತಿಸಿಕೊಂಡ ಮಂದಿ ಆರಂಭದ ದಿನಗಳಲ್ಲಿ ಮಾಡಬಹುದಾದ, ಮತ್ತಷ್ಟು ಚಾರಣದ ಹುಚ್ಚನ್ನು ಹತ್ತಿಸಿಕೊಳ್ಳಬಹುದಾದ ಎಲ್ಲ ಲಕ್ಷಣಗಳ್ನೂ ಹೊಂದಿದ ತಾಣ. ಮಳೆಗಾಲದಲ್ಲಿ ಈ ಜಾಗದ ಸೌಂದರ್ಯ ಸವಿಯಲು ಎರಡು ಕಣ್ಣು ಸಾಲದು. ಕೊಲ್ಲೂರಿನ ಮೂಕಾಂಬಿಕಾ ಸನ್ನಿಧಿಯಿಂದ ಮಾಡಬಹುದಾದ ಈ ಚಾರಣ ಮೂಕಾಂಬಿಕಾ ರಕ್ಷಿತಾರಣ್ಯದ ಒಳಗೆಯೇ ಇದೆ. ಆದಿ ಶಂಕರರು ಧ್ಯಾನ ಮಾಡಿದ ಸ್ಥಳದವರೆಗೆ ಚಾರಣ ಮಾಡಿ ಧ್ಯಾನವನ್ನೂ ಮಾಡಿ, ಮೋಡಗಳನ್ನು ಬೊಗಸೆ ತುಂಬಾ ಹಿಡಿದು ಮರಳಬಹುದು.

Chembara Peak Trek, Wayanad

ಚೆಂಬಾರ ಪೀಕ್‌ ಚಾರಣ, ವಯನಾಡು

ವಯನಾಡಿನ ಚೆಂಬಾರ ಪೀಕ್‌ ಚಾರಣ ಕೂಡಾ ಮಳೆಗಾಲದ ಅದ್ಭುತಗಳಲ್ಲಿ ಒಂದು. ದಟ್ಟಾರಣ್ಯದ ಮಧ್ಯದಲ್ಲಿರುವ ಈ ಚಾರಣಕ್ಕೆ ಅರಣ್ಯಾಧಿಕಾರಿಗಳ ಅನುಮತಿ ಬೇಕು. ಸರಳವಾದ, ಆದರೆ ಮನಮೋಹಕ ದೃಶ್ಯಗಳನ್ನು ಅನುಭವಗಳನ್ನು ಕಣ್ತುಂಬಿಕೊಳ್ಳಬಹುದಾದ ನಾಲ್ಕೈದು ಗಂಟೆಗಳಲ್ಲಿ ಮುಗಿಸಬಹುದಾದ ಚಾರಣವಿದು. ಆರಂಭಿಕ ಚಾರಣಿಗರಿಗೆ ಬೆಸ್ಟ್‌.

Ombattu gudda trek

ಒಂಭತ್ತು ಗುಡ್ಡ ಚಾರಣ

ಏಳೆಂಟು ಗಂಟೆಗಳ ಈ ಚಾರಣ ಸ್ವಲ್ಪ ಸವಾಲೇ ಆದರೂ, ಅತ್ಯಂತ ಸುಂದರ ಚಾರಣಗಳಲ್ಲಿ ಒಂದು. ಹಾಸನ ಹಾಗೂ ಚಿಕ್ಕಮಗಳೂರಿನ ಸರಹದ್ದಿನಲ್ಲಿ ಬರುವ ಈ ಸ್ಥಳದಲ್ಲಿ ಬಗೆಬಗೆಯ ಸಸ್ಯವೈವಿಧ್ಯವನ್ನೂ ಕಣ್ತುಂಬಿಕೊಳ್ಳಬಹುದು. ರೋಮಾಂಚಕ ಹಾಗೂ ನಿಗೂಢವಾದ ಅನುಭವಗಳನ್ನು ನೀಡಬಲ್ಲ ಈ ಚಾರಣದಲ್ಲಿ ಈ ಅನುಭವಗಳನ್ನು ಪಡೆಯಲು ಮಳೆಗಾಲದಲ್ಲೇ ಚಾರಣ ಮಾಡಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Varanasi
ದೇಶ15 mins ago

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Virat kohli
ಕ್ರೀಡೆ18 mins ago

Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

IPL 2024 Final
ಪ್ರಮುಖ ಸುದ್ದಿ44 mins ago

IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

The Kapil Sharma Show
ದೇಶ1 hour ago

Physical Abuse: ಕಪಿಲ್‌ ಶರ್ಮಾ ಶೋನಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

IPL 2024
ಕ್ರೀಡೆ1 hour ago

IPL 2024 Final : ಐಪಿಎಲ್ ಫೈನಲ್​​ನಲ್ಲಿ ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​

Hardik Pandya
ಕ್ರೀಡೆ2 hours ago

Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

Rain News
ಕರ್ನಾಟಕ2 hours ago

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Phalody Satta Bazar
ದೇಶ2 hours ago

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Shivamogga News
ಕರ್ನಾಟಕ3 hours ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

turbulence
ಪ್ರಮುಖ ಸುದ್ದಿ3 hours ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ಮತ್ತೊಂದು ವಿಮಾನ; 12 ಮಂದಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌