Shakti Scheme : ಬಸ್‌ನಿಂದ ಕೆಳಗೆ ಬಿದ್ದಿದ್ದ ಮಹಿಳೆ ಸಾವು; ಅನಾಥ ಮಕ್ಕಳ ಪರಿಹಾರಕ್ಕೆ ಮೊರೆ - Vistara News

ಕರ್ನಾಟಕ

Shakti Scheme : ಬಸ್‌ನಿಂದ ಕೆಳಗೆ ಬಿದ್ದಿದ್ದ ಮಹಿಳೆ ಸಾವು; ಅನಾಥ ಮಕ್ಕಳ ಪರಿಹಾರಕ್ಕೆ ಮೊರೆ

Shakti Scheme : ಗದಗಿನಲ್ಲಿ ತುಂಬಿದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಕವಿತಾ ಹೆಳವರ ಎಂಬ ಮಹಿಳೆ ಕೆಳಗೆ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈಗ ಕುಟುಂಬದವರು ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

VISTARANEWS.COM


on

Gadag Bus accident wome kavita died
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಗದಗ: ಈಚೆಗೆ ಸಾರಿಗೆ ಬಸ್‌ನಲ್ಲಿ (KSRTC Bus) ಪ್ರಯಾಣ ಮಾಡುತ್ತಿದ್ದಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆ ಕವಿತಾ ಬದುಕು ಅಂತ್ಯವಾಗಿದೆ. ಹಾಸಿಗೆ ಹಿಡಿದ ಪತಿ, ಮೂವರನ್ನು ಮಕ್ಕಳನ್ನು ಬಿಟ್ಟು ತಮ್ಮ ಬದುಕಿನ ಪ್ರಯಾಣವನ್ನು ಅವರು ಅಂತ್ಯಗೊಳಿಸಿದ್ದಾರೆ. ಈಗ ಆ ಕುಟುಂಬಕ್ಕೆ ದಿಕ್ಕೇ ಇಲ್ಲದಂತಾಗಿದೆ. ಅಲ್ಲದೆ, ಆಕೆಯ ತಪ್ಪಿಲ್ಲದಿದ್ದರೂ ಸುಳ್ಳು ಕೇಸನ್ನು ಹಾಕಲಾಗಿದೆ. ಹೀಗಾಗಿ ಈ ಕುಟುಂಬಕ್ಕೆ ದಿಕ್ಕೇ ಇಲ್ಲದಂತೆ ಆಗಿದೆ. ಅನಾಥ ಮಕ್ಕಳಿಗೆ ನ್ಯಾಯ ಸಿಗಬೇಕು, ಸರ್ಕಾರದಿಂದ ಸೂಕ್ತ ನ್ಯಾಯ ಸಿಗಬೇಕು ಎಂದು ಕುಟುಂಬದವರು ಆಗ್ರಹಿಸಿದ್ದಾರೆ. ಅಲ್ಲದೆ, ಶಕ್ತಿ ಯೋಜನೆಯಿಂದ (Shakti Scheme) ಬಸ್‌ ರಶ್‌ ಆಗುತ್ತಿರುವುದೇ ಇಷ್ಟೆಲ್ಲ ಅವಘಡಕ್ಕೆ ಕಾರಣ ಎಂಬುದೂ ಕುಟುಂಬದವರ ಆರೋಪವಾಗಿದೆ.

ಜುಲೈ 17 ರಂದು ಕವಿತಾ ಹೆಳವರ (36) ಬಸ್‌ನಲ್ಲಿ ಹೋಗುವಾಗ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ವೇಳೆ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಬಳಿಕ ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಸಾವು ಬದುಕಿನ ನಡುವಿನ ಹೋರಾಟ ಕೊನೆಗೂ ಅಂತ್ಯವಾಗಿದೆ. ಚಿಕಿತ್ಸೆಗೆ ಸ್ಪಂದಿಸದ ಕವಿತಾ ಉಸಿರು ನಿಲ್ಲಿಸಿದ್ದಾರೆ.

ಇದನ್ನೂ ಓದಿ: Rain News: ರಾಜ್ಯದಲ್ಲಿ 3 ದಿನ ಭಾರೀ ಮಳೆ, ಕರಾವಳಿಗೆ ರೆಡ್‌ ಅಲರ್ಟ್‌

ಆಕೆಗೇನು ಹುಚ್ಚು ಹಿಡಿದಿಲ್ಲ

ತುಂಬಿ ತುಳುಕುತ್ತಿದ್ದ ಬಸ್‌ನಲ್ಲಿ ನೂಕಾಡಿದ್ದರಿಂದ ಬಿದ್ದು ಮಹಿಳೆ ಮೃತಪಟ್ಟಿದ್ದಾರೆ. ಶಕ್ತಿ ಯೋಜನೆಯಿಂದ ಈಗೀಗ ಬಸ್‌ಗಳು ಸಖತ್‌ ರಶ್‌ ಆಗುತ್ತಿದ್ದು, ಇದರಿಂದ ಕವಿತಾ ಮೃತಪಟ್ಟಿದ್ದಾರೆ. ಚಲಿಸುವ ಬಸ್‌ನಿಂದ ಜಿಗಿಯಲು ಆಕೆಗೇನು ಹುಚ್ಚು ಹಿಡಿದಿಲ್ಲ. ಬದಲಾಗಿ ನೂಕಾಟದಿಂದ ಆಕೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಆದರೆ, ಕಂಡಕ್ಟರ್ ಮತ್ತು ಡ್ರೈವರ್ ತಮ್ಮ ರಕ್ಷಣೆಗಾಗಿ ಆಕೆಯೇ ಹಾರಿದ್ದಾಳೆ ಎಂಬ ರೀತಿಯಲ್ಲಿ ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಪ್ರಕರಣವನ್ನು ತಿರುಚಲು ಯತ್ನ ನಡೆದಿದೆ. ಪೊಲೀಸರು ಸಹ ನಮ್ಮ ಹೇಳಿಕೆಯ ಮೇಲೆ ಕೇಸ್ ದಾಖಲಿಸಿಲ್ಲ. ಯಾರೋ ಬೇರೆಯವರನ್ನು ಕರೆದುಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ. ಕೇಸ್ ದಾಖಲಿಸಿದ ಬಳಿಕ ನನ್ನ ಸಹಿ ಮಾಡಿಸಿದ್ದಾರೆ. ನಾನು ತುರಾತುರಿಯಲ್ಲಿ ಸಹಿ ಮಾಡಿ ಆಸ್ಪತ್ರೆಗೆ ಹೋದೆ ಎಂದು ಮೃತ ಮಹಿಳೆ ಕವಿತಾ ಅವರ ಮೈದುನ ಜಗದೀಶ್ ಹೆಳವರ ಆರೋಪ ಮಾಡಿದ್ದಾರೆ.

ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದು, ಕುಟುಂಬ ಈಗ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಕಾರಣ, ಕವಿತಾ ಅವರ ಪತಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇವರಿಗೆ ಮೂವರು ಮಕ್ಕಳಿದ್ದು, ಈಗ ಅನಾಥವಾದಂತೆ ಆಗಿದೆ. ಅವರನ್ನು ಯಾರು ಸಲಹುತ್ತಾರೆ. ಎಲ್ಲರ ಜವಾಬ್ದಾರಿಯನ್ನು ಕವಿತಾ ನಿಭಾಯಿಸುತ್ತಿದ್ದರು. ಆದರೆ, ಈಗ ಈ ಕುಟುಂಬಕ್ಕೆ ಯಾರು ದಿಕ್ಕು? ಎಂದು ಕವಿತಾ ಅತ್ತೆ ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: Rain News : ಬೀದರ್‌ನಲ್ಲೂ ಭಾರಿ ಮಳೆ; ಉಕ್ಕಿಹರಿದ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ಈ ಸಾವಿಗೆ ನ್ಯಾಯ ಸಿಗಬೇಕು. ಕವಿತಾ ನಿಧನದಿಂದ ಆ ಕುಟುಂಬಕ್ಕೆ ಈಗ ದಿಕ್ಕೇ ಇಲ್ಲವಾಗಿದೆ. ಈಗ ತಾಯಿ ಇಲ್ಲದೆ ಅನಾಥವಾಗಿರುವ ಮಕ್ಕಳಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

VISTARANEWS.COM


on

ಬೆಳಗಾವಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ಅವರ 893ನೇ ಜಯಂತಿ ಸಮಾರಂಭ ಭಕ್ತಿಪೂರ್ವಕವಾಗಿ ಮತ್ತು ಗೌರವಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಬಸವಣ್ಣನವರ ಭವ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ವಿಶ್ವಗುರು ಬಸವಣ್ಣನವರನ್ನು ಚಿತ್ರಪಟಗಳಿಗೆ ಸೀಮಿತಗೊಳಿಸುವುದರಿಂದ ಅವರ ಮಹತ್ತರ ತತ್ತ್ವಗಳಿಗೆ ನ್ಯಾಯ ದೊರೆಯುವುದಿಲ್ಲ. ಸಮಾಜದ ಪರಿವರ್ತನೆಗಾಗಿ ಅವರು ಪಟ್ಟ ಪರಿಶ್ರಮ, ಎದುರಿಸಿದ ಸವಾಲುಗಳು ಮತ್ತು ಸಮಾನತೆಯ ಹಾದಿಯ ಮಹತ್ವವನ್ನು ಯುವ ಪೀಳಿಗೆಗೆ ಮನವರಿಕೆ ಮಾಡಿಕೊಡುವುದು ನಮ್ಮೆಲ್ಲರ ಪ್ರಮುಖ ಜವಾಬ್ದಾರಿಯಾಗಿದೆ. ಈ ಅರಿವು ಮೂಡಿದಾಗ ಮಾತ್ರ ಬಸವ ಜಯಂತಿ ಆಚರಣೆಗೆ ನಿಜವಾದ ಅರ್ಥ ಸಿಗುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವುದು ಐತಿಹಾಸಿಕ ಹಾಗೂ ಶ್ಲಾಘನೀಯ ನಿರ್ಧಾರವಾಗಿದೆ. ಇದು ಬಸವಣ್ಣನವರ ವಚನ ಸಾಹಿತ್ಯ, ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ವಿಶ್ವದ ಮಟ್ಟಿಗೆ ಪರಿಚಯಿಸುವ ಮಹತ್ವದ ಹೆಜ್ಜೆಯಾಗಿದೆ. ಬಸವಣ್ಣನವರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೆ, ಇಡೀ ನಾಡಿನ ಗೌರವದ ಸಂಕೇತವಾಗಿ ಗುರುತಿಸಿರುವುದು ಜನಮನ ಗೆದ್ದಿದೆ.
ಬಸವಣ್ಣನವರನ್ನು ಕೇವಲ ಹಬ್ಬದ ದಿನಗಳಲ್ಲಿ ನೆನಪಿಸಿಕೊಳ್ಳುವುದಲ್ಲ, ಅವರ ಸಿದ್ಧಾಂತಗಳನ್ನು ಪ್ರತಿದಿನದ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಮಾನವತಾವಾದಿ ಚಿಂತನೆಗಳನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಸಂಕಷ್ಟದ ಸಂದರ್ಭಗಳಲ್ಲಿ ಮಾತ್ರವಲ್ಲ, ಸುಖದ ಕ್ಷಣಗಳಲ್ಲಿಯೂ ಈ ಮಹಾನ್ ಚೇತನಗಳ ಆದರ್ಶಗಳನ್ನು ಅನುಸರಿಸಿದಾಗ ಮಾತ್ರ ಶಾಶ್ವತವಾದ ಸಕಾರಾತ್ಮಕ ಬದಲಾವಣೆ ಸಾಧ್ಯ.
ಬಸವ ತತ್ವಗಳು ನಮ್ಮ ಬದುಕಿನ ದಾರಿದೀಪವಾಗಲಿ — ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ಸಮಾಜ ನಿರ್ಮಾಣವೇ ನಮ್ಮ ಗುರಿಯಾಗಲಿ ಎಂದು ಆಶಿಸಿದರು
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್‌, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ, ಪೊಲೀಸ್ ಆಯುಕ್ತ ಬೊರಸೆ ಭೂಷಣ ಗುಲಾಬರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್‌, ಬಸವ ಜಯಂತಿ ಉತ್ಸವ ಸಮಿತಿಯ ಸಂಚಾಲಕ ಬಸವರಾಜ ರೊಟ್ಟಿ ಸೇರಿದಂತೆ ಸುನಂದಾ ಎಮ್ಮಿ, ಡಾ. ರಾಜಶೇಖರ ಪಾಟೀಲ್, ಬೆಳಗಾವಿ ಪಾಲಿಕೆಯ ಉಪಮೇಯರ್ ಹನುಮಂತ ಕೊಂಗಾಲಿ, ಡಾ. ಗೀತಾ ದಯನವರ ಮತ್ತು ಇತರ ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

Continue Reading

Latest

ಇಡಿ ದಾಳಿ; ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಸಚಿವೆ ಶೋಭಾ ಕರಂದ್ಲಾಜೆ

VISTARANEWS.COM


on

ಬೆಂಗಳೂರು: ಬಿಟ್ ಕಾಯಿನ್ ಮೂಲಕ ಬೇರೆ ಬೇರೆ ದೇಶಗಳಲ್ಲಿ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ. ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಗಂಭೀರ ಆರೋಪ ಮಾಡಿದ್ದಾರೆ.
ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್ ಅವರ ಮನೆ ಮೇಲೆ ಇಡಿ ದಾಳಿ ಕುರಿತು ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಇವರು, ನಿರಂತರವಾಗಿ ಕಾಂಗ್ರೆಸ್ ಆರ್ಥಿಕ ಅಪರಾಧಗಳನ್ನು ಮಾಡುತ್ತಲೇ ಬರುತ್ತಿದೆ. ಇದರಲ್ಲಿ ಬಿಟ್ ಕಾಯಿನ್ ಸಹ ಒಂದು. ಬಿಟ್ ಕಾಯಿನ್ ನಲ್ಲಿ ಹೂಡಿಕೆ ಆಗಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆದಿದೆ ಎಂದರು.
ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಯಾವುದೇ ನಿಖರ ಮಾಹಿತಿ ಇಲ್ಲದೆ ದಾಳಿ ನಡೆದಿಲ್ಲ. ಎಲ್ಲದರಲ್ಲೂ ಕಾಂಗ್ರೆಸ್ ನವರು ತಪ್ಪಿಸಿಕೊಳ್ತಾರೆ. ರಾಜ್ಯದಲ್ಲಿನ ಹಣವನ್ನು ಲೂಟಿ ಮಾಡಿ ಬೇರೆ ದೇಶಗಳಿಗೆ ಸಾಗಿಸಿ, ಅಲ್ಲಿ ಹೂಡಿಕೆ ಮಾಡ್ತಾರೆ. ಕಾಂಗ್ರಸ್ ಸರ್ಕಾರ ಭ್ರಷ್ಟ ಸರ್ಕಾರ ಎಂದು ಟೀಕಿಸಿದರು.

Continue Reading

ರಾಜಕೀಯ

ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್‌ ವಾಗ್ದಾಳಿ

VISTARANEWS.COM


on

ಬೆಂಗಳೂರು: ಕಲಬುರಗಿ-ಯಾದಗಿರಿ ರಸ್ತೆಯ 90 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದೇ ಒಂದು ಬಸ್ ನಿಲ್ದಾಣವಿಲ್ಲದೆ ಸಾರ್ವಜನಿಕರು ಒದ್ದಾಡುತ್ತಿದ್ದಾರೆ. ಆದರೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಟ್ವಿಟರ್ ನಲ್ಲಿ ನಿರತರಾಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ @PriyankKharge ಅವರೇ, ಕಲಬುರಗಿ-ಯಾದಗಿರಿ ರಸ್ತೆಯ 90 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದೇ ಒಂದು ಬಸ್ ನಿಲ್ದಾಣವಿಲ್ಲದೆ ಜನಸಾಮಾನ್ಯರು ರಣ ಬಿಸಿಲಲ್ಲಿ ಸುಡುತ್ತಿದ್ದಾರೆ ಎನ್ನುವ ಸುದ್ದಿ ನಿಜಕ್ಕೂ ಆಘಾತ ಮೂಡಿಸಿದೆ. ಇದೇನು ಸಾಮಾನ್ಯ ಕೊರತೆಯೋ ಅಥವಾ ವೈಫಲ್ಯವೋ ಅಲ್ಲ. ದಶಕಗಳಿಂದ ಕಲ್ಯಾಣ ಕರ್ನಾಟಕವನ್ನ ಸ್ವಂತ “ಜಹಗೀರು” ಅಂದುಕೊಂಡಿರುವ ನಿಮ್ಮ ಕುಟುಂಬ ಈ ಭಾಗದ ಜನರಿಗೆ ಮಾಡಿದ ಘೋರ ಅನ್ಯಾಯ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸುಡುವ 45 ಡಿಗ್ರಿ ಬಿಸಿಲಿನಲ್ಲಿ ಮಕ್ಕಳು, ಗರ್ಭಿಣಿಯರು, ವಯೋವೃದ್ಧರು ನೆರಳಿಲ್ಲದೆ ರಸ್ತೆ ಬದಿಯಲ್ಲಿ ನರಳುತ್ತಿದ್ದಾರೆ. ಕುಡಿಯಲು ಹನಿ ನೀರಿಲ್ಲ, ಶೌಚಾಲಯದ ವ್ಯವಸ್ಥೆಯಿಲ್ಲ. ಇದೇನಾ ನಿಮ್ಮ ಕಾರ್ಯವೈಖರಿ? ದಿನಾ ಬೆಳಗಾದರೆ ಸಾಮಾಜಿಕ ಜಾಲತಾಣಗಳಲ್ಲಿ ಬಿಟ್ಟಿ ಉಪದೇಶ ಮಾಡುವ ತಮಗೆ ನಿಮ್ಮ ಸ್ವಂತ ಜಿಲ್ಲೆಯ ಜನರ ಈ ನರಕಯಾತನೆ ಕಣ್ಣಿಗೆ ಕಾಣಿಸುತ್ತಿಲ್ಲವೇ ಸ್ವಾಮಿ?
“ಮತ ನಿಮ್ಮದು, ಮಜ ನಮ್ಮದು” ಎನ್ನುವ ಎನ್ನುವಂತಾಗಿದೆ ನಿಮ್ಮ ಧೋರಣೆ. ಈ ಭಾಗದ ಜನ ನಿಮ್ಮನ್ನ ನಂಬಿ ವೋಟ್ ಹಾಕಿದ್ದು ಅವರು ರಸ್ತೆ ಬದಿಯಲ್ಲಿ ನಿಲ್ಲಲಿ ಅಂತಲ್ಲ, ನೀವು ಬೆಂಗಳೂರು-ದೆಹಲಿಯಲ್ಲಿ ರಾಜಾತಿಥ್ಯ ಅನುಭವಿಸಲಿ ಅಂತಲೂ ಅಲ್ಲ.
ದಶಕಗಳಿಂದ ನೀವು ಮಾಡಿದ್ದು “ಜನ ಕಲ್ಯಾಣ”ವಲ್ಲ, ಬರೀ “ಖರ್ಗೆ ಕುಟುಂಬ ಕಲ್ಯಾಣ”. ಜನರ ಹೆಸರಲ್ಲಿ ಅಧಿಕಾರ ಅನುಭವಿಸಿ, ಅದೇ ಜನರಿಗೆ ಒಂದು ಬಸ್ ತಂಗುದಾಣ ಕೊಡಲಾಗದ ನೀವು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತೀರಿ?
ನಿಮ್ಮ ಪ್ರಚಾರದ ಗೀಳು, ಗಿಮಿಕ್‌ಗಳು ಇನ್ನು ನಡೆಯಲ್ಲ. ತಕ್ಷಣ ಈ ಮಾರ್ಗದಲ್ಲಿ ಬಸ್ ನಿಲ್ದಾಣ ಮತ್ತು ಮೂಲಸೌಕರ್ಯ ಕಲ್ಪಿಸದಿದ್ದರೆ, ಕಲ್ಯಾಣ ಕರ್ನಾಟಕದ ಜನರೇ ನಿಮ್ಮನ್ನ ಅಧಿಕಾರದಿಂದ ಕೆಳಗಿಳಿಸಿ ಮನೆಗೆ ಕಳುಹಿಸುವುದು ಗ್ಯಾರಂಟಿ ಎಂದು ಲೇವಡಿ ಮಾಡಿದ್ದಾರೆ.

Continue Reading

Latest

ಪಿಎನ್‌ಎಸ್‌ ವಿಸ್ತಾರ ಮುಂಚೂಣಿ ಸುದ್ದಿವಾಹಿನಿಯಾಗಲಿ: ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ವಿಶ್ವಾಸ

VISTARANEWS.COM


on

ಬೆಂಗಳೂರು: ಪಿಎನ್‌ ಎಸ್‌ ವಿಸ್ತಾರ ಸುದ್ದಿವಾಹಿನಿಗೆ ಬೆಂಗಳೂರಿನ ಬಿಜೆಪಿ ಮುಖಂಡ, ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.‌ ಆರ್.‌ ರಮೇಶ್‌ ಶುಭ ಹಾರೈಸಿದ್ದಾರೆ.
ಇಂಡಿಯನ್‌ ಎಕ್ಸ್‌ ಪ್ರೆಸ್‌ ಕಟ್ಟಡದಲ್ಲಿರುವ ಚಾನೆಲ್‌ ನ ಕಚೇರಿಗೆ ಆಗಮಿಸಿ ಶುಭ ಕೋರಿದ ಅವರು, ಪಿಎನ್‌ ಎಸ್‌ ವಿಸ್ತಾರ ಚಾನೆಲ್‌ ಮುಂಚೂಣಿ ಸುದ್ದಿವಾಹಿನಿಯಾಗಿ ಪರಿವರ್ತನೆಯಾಗಲಿ ಎಂದು ಹಾರೈಸಿದರು.
ಚಾನೆಲ್‌ ಹೊಸ ಆಡಳಿತ ಮಂಡಳಿಯೊಂದಿಗೆ ಕಾರ್ಯಾರಂಭ ಮಾಡುತ್ತಿರುವುದು ಹೆಮ್ಮೆಯ ವಿಷಯ. ಈ ಚಾನೆಲ್‌ ನಿಷ್ಪಕ್ಷಪಾತ, ಸಮಾಜಮುಖಿ ಸುದ್ದಿಗಳನ್ನು ಯಾವುದೇ ಪೂರ್ವಾಗ್ರಹಪೀಡಿತವಾಗದೆ ಬಿತ್ತರಿಸಲಿ. ನೈಜ, ಸತ್ಯ ವರದಿಗಳನ್ನು ದಾಖಲೆಗಳ ಸಹಿತ ವೀಕ್ಷಕರಿಗೆ ಮುಟ್ಟಿಸಲಿ ಎಂದರು. ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವ, ಅವರ ಜೀವನಕ್ಕೆ ನೆರವಾಗುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತೆಯೂ ಅವರು ಕೋರಿದರು.
ಚಾನೆಲ್‌ ನ ಧ್ಯೇಯೋದ್ದೇಶಗಳನ್ನು ತಿಳಿದುಕೊಂಡ ರಮೇಶ್‌ ಅವರು ಮೆಚ್ಚುಗೆ ಸೂಚಿಸಿದರು.

Continue Reading
Advertisement
Latest2 ನಿಮಿಷಗಳು ago

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

Latest6 ನಿಮಿಷಗಳು ago

ಇಡಿ ದಾಳಿ; ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಸಚಿವೆ ಶೋಭಾ ಕರಂದ್ಲಾಜೆ

ರಾಜಕೀಯ14 ನಿಮಿಷಗಳು ago

ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್‌ ವಾಗ್ದಾಳಿ

Latest51 ನಿಮಿಷಗಳು ago

ಪಿಎನ್‌ಎಸ್‌ ವಿಸ್ತಾರ ಮುಂಚೂಣಿ ಸುದ್ದಿವಾಹಿನಿಯಾಗಲಿ: ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ವಿಶ್ವಾಸ

ಫ್ಯಾಷನ್58 ನಿಮಿಷಗಳು ago

ದೇಶದ ಗಮನ ಸೆಳೆದ ಕಾರವಾರದ ಪ್ರತಿಭೆ: ಶಾಸಕ ಸತೀಶ್ ಸೈಲ್ ಪುತ್ರಿಗೆ ‘ಮಿಸ್ ಇಂಡಿಯಾ’ ಕಿರೀಟದ ಗರಿ.

Latest1 ಗಂಟೆ ago

ಹುಬ್ಬಳ್ಳಿ ರನ್-ವೇ ಬದಲಿಗೆ ಬೆಂಗಳೂರಲ್ಲಿ ಲ್ಯಾಂಡ್ ಆದ ಫ್ಲೈಟ್: ಆಗಸದಲ್ಲಿ ವಿಮಾನ ಸುತ್ತಾಡಿದ್ದೇಕೆ?

ಕರ್ನಾಟಕ2 ಗಂಟೆಗಳು ago

SSLC ಫಲಿತಾಂಶ ಪ್ರಕಟ ಯಾವಾಗ? ತಡ ಆಗುತ್ತಿರುವುದು ಏಕೆ?; ಇಲ್ಲಿದೆ ಮಾಹಿತಿ

Latest2 ಗಂಟೆಗಳು ago

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌, ಪುತ್ರ ನಲಪಾಡ್‌ಗೆ ಇಡಿ ಶಾಕ್!

Latest2 ಗಂಟೆಗಳು ago

ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು

ರಾಜಕೀಯ2 ಗಂಟೆಗಳು ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಸಿದ್ದರಾಮಯ್ಯ ಕರೆ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌