Site icon Vistara News

Auto Rickshaw Accident: ಗೂಡ್ಸ್ ಆಟೋ ಪಲ್ಟಿಯಾಗಿ ಮಹಿಳೆ ದಾರುಣ ಸಾವು, ಇಬ್ಬರಿಗೆ ಗಾಯ

Auto Rickshaw Accident

#image_title

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಪಲ್ಟಿಯಾಗಿದ್ದರಿಂದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ (Auto Rickshaw Accident) ತಾಲೂಕಿನ ಬರಟಗಿ ಕ್ರಾಸ್ ಬಳಿ ಭಾನುವಾರ ನಡೆದಿದೆ.

ಹಾಸೀಮಬಿ ಹಕೀಮ್ (32) ಮೃತ ಮಹಿಳೆ. ರೋಹಿತ್ ಹಾಗೂ ಆಸ್ಮಾಬಿ ಗಾಯಾಳುಗಳು. ಗೂಡ್ಸ್‌ ವಾಹನ ಏಕಾಏಕಿ ಪಲ್ಟಿಯಾಗಿದ್ದರಿಂದ ತಲೆಗೆ ಗಂಭೀರ ಗಾಯವಾಗಿ ಮಹಿಳೆ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ವಾರಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆ

ಕೋಲಾರ: ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ಇರುವ ಕ್ವಾರಿಯಲ್ಲಿ ಕ್ವಾರಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಹೊಸಕೋಟೆ ತಾಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನ ದರ್ಶಿನಿ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಳ್ಳಾರಿ ಮೂಲದ ದರ್ಶಿನಿ ಸ್ನೇಹಿತರಿಗೆ ದೂರವಾಣಿ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪಿಡಿಯಾಟ್ರಿಕ್ ವಿದ್ಯಾರ್ಥಿನಿಯಾಗಿದ್ದಳು. ಅಗ್ನಿಶಾಮಕ ದಳ ಸಿಬ್ಬಂದಿ ವಿದ್ಯಾರ್ಥಿನಿಯ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Hubballi News: ಅಮ್ಮನ ಸೀರೆಯಲ್ಲಿ ನೇಣಿಗೆ ಕೊರಳೊಡ್ಡಿದ ಸಹೋದರಿಯರು

ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರ ದುರ್ಮರಣ

ಮಂಡ್ಯ: ನಾಗಮಂಗಲ ತಾಲೂಕಿನ ತಿರುಮಲಾಪುರ ಗ್ರಾಮದ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಲ್ಲಿನ ಪುಡಿ ತುಂಬಿದ್ದ ಲಾರಿಗೆ ಸ್ಯಾಂಟ್ರೋ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಗಡಿ ತಾಲೂಕಿನ ಲಕ್ಕೇನಹಳ್ಳಿಯ ಹೇಮಂತ್ (24), ತುಮಕೂರಿನ ಕಂಪನಹಳ್ಳಿ ಶರತ್ (27), ಚಂಡೂರುಪುರದ ಯೋಗೇಶ್ (25) ಹಾಗೂ ಶಿವಮೊಗ್ಗದ ಧೀರಜ್ (27) ಮೃತರು. ಭಾನುವಾರ ಮುಂಜಾನೆ ಅಪಘಾತ ನಡೆದಿದೆ. ಎರಡೂ ವಾಹನಗಳು ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣದ ಕಡೆಗೆ ಸಂಚರಿಸಿತ್ತಿದ್ದವು. ಶರತ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರು ಆದಿಚುಂಚನಗಿರಿ‌ ದೇವಸ್ಥಾನಕ್ಕೆ ತೆರಳುತ್ತಿದ್ದರು. ಇವರಿದ್ದ ಕಾರು ಲಾರಿಗೆ ಡಿಕ್ಕಿಯಾಗಿ ದುರಂತ ನಡೆದಿದೆ.

Exit mobile version