Site icon Vistara News

ಸೋಮಣ್ಣ ಮೇಲೆ ದೂರು ದಾಖಲಿಸುವಂತೆ ಒತ್ತಡ: ಏಟು ತಿಂದ ಮಹಿಳೆ ದೂರು

somanna

ಚಾಮರಾಜನಗರ: ಸಚಿವ ವಿ.ಸೋಮಣ್ಣ ವಿರುದ್ದ ಪೋಲಿಸ್ ಕಂಪ್ಲೇಂಟ್ ಕೊಡುವಂತೆ ವಿವಿಧ ಸಂಘಟನೆಗಳಿಂದ ಬೆದರಿಕೆ ಆರೋಪ ಬರುತ್ತಿದೆ ಎಂದು ಸೋಮಣ್ಣ ಅವರಿಂದ ಏಟು ತಿಂದ ಮಹಿಳೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ವಿವಿಧ ಸಂಘಟನೆಗಳ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಕೆಂಪಮ್ಮ ದೂರು ದಾಖಲಿಸಿದ್ದಾರೆ. ಸೋಮಣ್ಣ ಹೊಡೆದಿದ್ದಾರೆಂದು ಹೇಳಿಕೆ ನೀಡು, ಹೇಳಿಕೆ ನೀಡಿದರೆ 15 ಲಕ್ಷ ರೂಪಾಯಿ ಕೊಡುತ್ತೇವೆ. ಇಲ್ಲದಿದ್ದರೆ ಇಲ್ಲಿ ವಾಸ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಾರೆ. ವಿವಿಧ ಸಂಘಟನೆಗಳಿಂದ ಪ್ರಾಣ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಿ ಎಂದು ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಗುಂಡ್ಲುಪೇಟೆ ತಾಲೂಕು ರೈತ ಸಂಘ, ತಾಲೂಕು ನಾಯಕ ಹಿತರಕ್ಷಣಾ ಸಮಿತಿ, ದಸಂಸ, ಕೆಆರ್‌ಎಸ್ ಪಾರ್ಟಿ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ | ಮಹಿಳೆಯ ಕಪಾಳಕ್ಕೆ ಹೊಡೆದ ವಿ.ಸೋಮಣ್ಣ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ: Sorry ಎಂದ ಸಚಿವ

Exit mobile version