Govt Employees Strike: ಜ್ವರವೆಂದು ಮಗುವನ್ನು ಹೊತ್ತು ಜಿಲ್ಲಾಸ್ಪತ್ರೆಗೆ ಓಡೋಡಿ ಬಂದ ಮಹಿಳೆ; ತುರ್ತು ಚಿಕಿತ್ಸೆಯನ್ನಷ್ಟೇ ಕೊಟ್ಟು ವಾಪಸ್‌ ಕಳಿಸಿದ ವೈದ್ಯರು - Vistara News

ಆರೋಗ್ಯ

Govt Employees Strike: ಜ್ವರವೆಂದು ಮಗುವನ್ನು ಹೊತ್ತು ಜಿಲ್ಲಾಸ್ಪತ್ರೆಗೆ ಓಡೋಡಿ ಬಂದ ಮಹಿಳೆ; ತುರ್ತು ಚಿಕಿತ್ಸೆಯನ್ನಷ್ಟೇ ಕೊಟ್ಟು ವಾಪಸ್‌ ಕಳಿಸಿದ ವೈದ್ಯರು

Govt Employees Strike: ರಾಜ್ಯ ಸರ್ಕಾರಿ ನೌಕರರ ಪ್ರತಿಭಟನೆ ಬಿಸಿ ರಾಜ್ಯದ ಬಹುತೇಕ ಜನರಿಗೆ ತಟ್ಟಿದೆ. ಅಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಒಪಿಡಿ ಸೇವೆಯನ್ನು ಬಂದ್‌ ಮಾಡಿದ್ದರಿಂದ ತಾಯಿಯೊಬ್ಬರು ತಮ್ಮ ಜ್ವರಪೀಡಿತ ಮಗುವಿಗೆ ಚಿಕಿತ್ಸೆ ಕೊಡಿಸಲು ಪರದಾಡಿದರು.

VISTARANEWS.COM


on

woman carrying a child with fever into district hospital Doctors gave emergency treatment and send back Govt Employees Strike updates
ಜ್ವರಪೀಡಿತ ಮಗುವಿಗೆ ತುರ್ತು ಚಿಕಿತ್ಸೆ ನೀಡಿದ ವೈದ್ಯರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: 7ನೇ ವೇತನ ಆಯೋಗದ ವರದಿ ಜಾರಿಗಾಗಿ ಬುಧವಾರ (ಮಾ.1) ಬೆಳಗ್ಗೆಯಿಂದ ರಾಜ್ಯ ಸರ್ಕಾರಿ ನೌಕಕರು ಮುಷ್ಕರ (Govt Employees Strike) ಕೈಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿದರೆ ಉಳಿದ ಸೇವೆಗಳು ಲಭ್ಯವಿರಲಿಲ್ಲ. ಇದೇ ವೇಳೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರು ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಹೊತ್ತು ಜಿಲ್ಲಾಸ್ಪತ್ರೆಗೆ ಓಡೋಡಿ ಬಂದಿದ್ದು, ತುರ್ತು ಚಿಕಿತ್ಸೆಯಷ್ಟೇ ಲಭ್ಯವಾಗಿದೆ.

ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮೆಳಾಗಟ್ಟಿ ಗ್ರಾಮದ ನಿವಾಸಿಯಾಗಿರುವ ಮಹಿಳೆಯು ರಾತ್ರಿಯಿಂದ ತೀವ್ರ ಜ್ವರದಿಂದ ಬಳಲುತ್ತಿರುವ ಮಗುವನ್ನು ಹೊತ್ತು ತಂದಿದ್ದಾರೆ. ಎಲ್ಲಿ ಬಂದರೂ ಚಿಕಿತ್ಸೆ ಇಲ್ಲ ಎನ್ನುವಂತಹ ಪರಿಸ್ಥಿತಿ ಕಂಡು ಕಂಗಾಲಾಗಿದ್ದಾರೆ.

woman carrying a child with fever into district hospital Doctors gave emergency treatment and send back Govt Employees Strike updates
ಆಸ್ಪತ್ರೆಗೆ ಓಡಿ ಬಂದ ಮಹಿಳೆ

ಇದನ್ನೂ ಓದಿ: Govt Employees Strike: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆ ಬಂದ್;‌ ರೋಗಿಗಳು ಹೈರಾಣ: ಇಲ್ಲಿದೆ ರಾಜ್ಯದ ಚಿತ್ರಣ

ಜಿಲ್ಲಾಸ್ಪತ್ರೆಯಲ್ಲಿಯೂ ಎಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದು ಅರಿಯದೇ ಅತ್ತಿಂದಿತ್ತ, ಇತ್ತಿಂದತ್ತ ಓಡಾಡಿದ್ದಾರೆ. ಬಳಿಕ ಜಿಲ್ಲಾಸ್ಪತ್ರೆಯ ತುರ್ತು ಘಟಕದಲ್ಲಿ ಜ್ವರದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ತುರ್ತು ಚಿಕಿತ್ಸೆ ನೀಡಿದ ಬಳಿಕ ವೈದ್ಯರು ಮಗುವನ್ನು ಆಸ್ಪತ್ರೆಯಲ್ಲಿ ಉಳಿಸಿಕೊಳ್ಳದೆ ವಾಪಸ್‌ ಕಳಿಸಿದ್ದಾರೆ. ಇದರಿಂದ ಕಣ್ಣೀರು ಹಾಕುತ್ತಾ ವೈದ್ಯರ ಬಳಿ ಮಗುವಿನ ಪೋಷಕರು ದುಃಖ ತೋಡಿಕೊಂಡಿದ್ದಾರೆ. ಆದರೂ, ಪ್ರತಿಭಟನೆಯ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರು ಒಪ್ಪದೇ ವಾಪಸ್‌ ಕಳುಹಿಸಿದ್ದಾರೆ. ಇದೀಗ ಪ್ರತಿಭಟನೆ ವಾಪಸ್‌ ಆಗಿರುವ ಹಿನ್ನೆಲೆಯಲ್ಲಿ ಎಂದಿನಂತೆ ಎಲ್ಲ ಸೇವೆಗಳೂ ಲಭ್ಯವಾಗುವ ನಿರೀಕ್ಷೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

World Red Cross Day: ದಾನ ಮತ್ತು ಸೇವೆಯಿಂದ ಸಂತೋಷ; ಇದು ರೆಡ್ ಕ್ರಾಸ್ ದಿನದ ಸಂದೇಶ

ಇಂದು ವಿಶ್ವದಾದ್ಯಂತ ವಿಶ್ವ ರೆಡ್ ಕ್ರಾಸ್ ದಿನವನ್ನು (World Red Cross Day) ಆಚರಿಸಲಾಗುತ್ತಿದೆ. ಇದರ ಮುಖ್ಯ ಉದ್ದೇಶ ತುರ್ತು ಮತ್ತು ಸಂಘರ್ಷದ ಸಮಯದಲ್ಲಿ ಅಗತ್ಯವಿರುವವರಿಗೆ ಸಹಾಯ ಹಸ್ತ ಚಾಚುವುದಾಗಿದೆ. ಈ ದಿನದ ವಿಶೇಷ ಏನು? ಈ ದಿನದ ಸಂದೇಶ ಏನು? ಈ ಕುರಿತ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

By

World Red Cross Day
Koo

ರೆಡ್ ಕ್ರೆಸೆಂಟ್ ಡೇ ಅಥವಾ ವಿಶ್ವ ರೆಡ್ ಕ್ರಾಸ್ ದಿನವನ್ನು (World Red Cross Day) ವಿಶ್ವದಾದ್ಯಂತ ಮೇ 8ರಂದು ಆಚರಿಸಲಾಗುತ್ತದೆ. ಸ್ವಿಸ್ ಉದ್ಯಮಿ ಮತ್ತು ವಿಶ್ವದ ಅತಿದೊಡ್ಡ ಮಾನವೀಯ ನೆರವು ಸಂಸ್ಥೆಯಾದ ರೆಡ್ ಕ್ರಾಸ್ ನ ಸಂಸ್ಥಾಪಕ ಹೆನ್ರಿ ಡ್ಯುನಾಂಟ್ (Henry Dunant) ಅವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುತ್ತದೆ. 1901ರಲ್ಲಿ ಮೊದಲ ನೊಬೆಲ್ ಶಾಂತಿ ಪ್ರಶಸ್ತಿಯನ್ನು (Nobel Peace Prize) ಪಡೆದ ಅವರು, ರೆಡ್‌ಕ್ರಾಸ್‌ನ ಅಂತಾರಾಷ್ಟ್ರೀಯ ಸಮಿತಿಯ ಸ್ಥಾಪಕರಾಗಿದ್ದಾರೆ.

ತುರ್ತು ಮತ್ತು ಸಂಘರ್ಷದ ಸಮಯದಲ್ಲಿ ಅಗತ್ಯವಿರುವವರಿಗೆ ಬೆಂಬಲ ನೀಡುವ ಸಲುವಾಗಿ ರೆಡ್ ಕ್ರಾಸ್ ಅನ್ನು ಸ್ಥಾಪಿಸಲಾಗಿದೆ. ವಿಶ್ವ ರೆಡ್ ಕ್ರಾಸ್ ದಿನದಂದು ಸ್ವಯಂ ಸೇವಕರು 192 ದೇಶಗಳಲ್ಲಿ ರಾಷ್ಟ್ರೀಯ ಅಧ್ಯಾಯಗಳನ್ನು ಹೊಂದಿರುವ 161 ವರ್ಷ ಹಳೆಯ ಅಂತಾರಾಷ್ಟ್ರೀಯ ನೆರವು ಸಂಸ್ಥೆಯ ಧ್ಯೇಯ ಮತ್ತು ತತ್ತ್ವಗಳನ್ನು ಪ್ರಚಾರ ಮಾಡುತ್ತಾರೆ.

ವಿಶ್ವ ರೆಡ್ ಕ್ರಾಸ್ ದಿನದ ಇತಿಹಾಸ ಏನು?

ಇಟಲಿಯಲ್ಲಿನ ಸೋಲ್ಫೆರಿನೊ ಕದನದ ವೇಳೆ ಗಾಯಗೊಂಡ ಸೈನಿಕರು ಮತ್ತು ನಾಗರಿಕರಿಗೆ ಚಿಕಿತ್ಸೆ ನೀಡಲು ಕೊರತೆ ಉಂಟಾದ ಪರಿಣಾಮ ತೀವ್ರವಾಗಿ ಮನನೊಂದ ಸ್ವಿಸ್ ಉದ್ಯಮಿ ಹೆನ್ರಿ ಡ್ಯೂನಾಂಟ್ ಅವರು ಕೆಲವು ವರ್ಷಗಳ ಅನಂತರ 1863 ರಲ್ಲಿ ಡ್ಯುನಾಂಟ್ ಸ್ವಯಂಸೇವಕ-ಬೆಂಬಲಿತ ಪರಿಹಾರ ಸಂಘಗಳನ್ನು ಸಂಘಟಿಸಿದರು. ಅದು ಯುದ್ಧಕಾಲ ಅಥವಾ ಸಂಘರ್ಷದ ಸಮಯದಲ್ಲಿ ಗಾಯಗೊಂಡವರಿಗೆ ಪಕ್ಷಾತೀತ ಸಹಾಯವನ್ನು ಒದಗಿಸಲು ಬದ್ಧವಾಗಿದೆ.

ಅದೇ ವರ್ಷ ಡ್ಯೂನಾಂಟ್ ಮತ್ತು ಐದು ಸಹೋದ್ಯೋಗಿಗಳು ಗಾಯಗೊಂಡವರಿಗೆ ಪರಿಹಾರಕ್ಕಾಗಿ ಅಂತಾರಾಷ್ಟ್ರೀಯ ಸಮಿತಿಯನ್ನು ಸ್ಥಾಪಿಸಿದರು. ಇದು ರೆಡ್ ಕ್ರಾಸ್‌ನ ಅಂತಾರಾಷ್ಟ್ರೀಯ ಸಮಿತಿಯಾಗಿ ವಿಕಸನಗೊಂಡಿತು.

ಸ್ವಿಸ್ ರಾಷ್ಟ್ರೀಯ ಧ್ವಜದಿಂದ ಪ್ರೇರಿತವಾದ ಲಾಂಛನ ಪಡೆದ ಸಂಸ್ಥೆಯು ಶೀಘ್ರದಲ್ಲೇ ರೆಡ್ ಕ್ರಾಸ್ ಎಂದು ಜನಪ್ರಿಯವಾಯಿತು. ಮೊದಲನೇ ಮಹಾಯುದ್ಧ ಮತ್ತು ಎರಡನೇ ಮಹಾಯುದ್ಧದಲ್ಲಿ ಗಾಯಗೊಂಡ ನಾಗರಿಕರು ಮತ್ತು ಯುದ್ಧ ಕೈದಿಗಳಿಗೆ ಸಹಾಯ ಮಾಡುವಲ್ಲಿ ರೆಡ್ ಕ್ರಾಸ್ ಪ್ರಮುಖ ಪಾತ್ರ ವಹಿಸಿತು. ಇಂದು ಇದು ಪ್ರಪಂಚದಾದ್ಯಂತ ಅನೇಕ ಸ್ಥಳೀಯ ಮತ್ತು ರಾಷ್ಟ್ರೀಯ ಸಂಘಟನೆಗಳನ್ನು ಒಳಗೊಂಡಿದೆ.


ಪ್ರಾಮುಖ್ಯತೆ

ಮಾನವ ಹಕ್ಕುಗಳ ಸಂರಕ್ಷಣೆಗೆ ರೆಡ್‌ಕ್ರಾಸ್‌ನ ಪ್ರಾಮುಖ್ಯತೆ ಅಗಾಧವಾಗಿದೆ. ಲಾಭರಹಿತ ಸಂಸ್ಥೆಯ ಮುಖ್ಯ ಧ್ಯೇಯ “ಪರ್ ಹ್ಯುಮಾನಿಟೇಟಮ್ ಆಡ್ ಪೇಸೆಮ್” ಅಂದರೆ “ಮಾನವೀಯತೆಯೊಂದಿಗೆ, ಶಾಂತಿಯ ಕಡೆಗೆ” ಎಂಬುದಾಗಿದೆ. ಇದು ವಿಶ್ವ ಶಾಂತಿಯ ಸಂದೇಶವನ್ನು ಪ್ರತಿಪಾದಿಸುತ್ತದೆ. ಸಂಘಟನೆಯು ಸಂಘರ್ಷ ವಲಯಗಳು ಅಥವಾ ನೈಸರ್ಗಿಕ ವಿಕೋಪಗಳ ಸ್ಥಳಗಳಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತದೆ.

196 ದೇಶಗಳಲ್ಲಿ ಸಕ್ರಿಯ

ಯುದ್ಧದ ಸಮಯದಲ್ಲಿ ಸೈನಿಕರು ಮತ್ತು ನಾಗರಿಕರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದರ ಕುರಿತು ನಾಲ್ಕು ಅಂಶಗಳ ಒಪ್ಪಂದವಾದ ಜಿನೀವಾ ಒಪ್ಪಂದಗಳನ್ನು ಕ್ರೋಡೀಕರಿಸಿದ ಕೀರ್ತಿ ವಿಶ್ವ ಸಂಸ್ಥೆಗೆ ಸಲ್ಲುತ್ತದೆ. ಪ್ರಪಂಚದ ಎಲ್ಲಾ 196 ದೇಶಗಳು ನಾಲ್ಕು ಜಿನೀವಾ ಒಪ್ಪಂದಗಳನ್ನು ಅಂಗೀಕರಿಸಿವೆ.

ಇದನ್ನೂ ಓದಿ: Flights cancelled: 300 ಸಿಬ್ಬಂದಿ ಸಾಮೂಹಿಕ ರಜೆ; 86 ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳು ಕ್ಯಾನ್ಸಲ್‌

ಜಿನೀವಾ ಒಪ್ಪಂದದ ಪ್ರಕಾರ ಎಲ್ಲಾ ನಾಗರಿಕರು ಮತ್ತು ಆಕ್ರಮಿತ ಪ್ರದೇಶದಲ್ಲಿರುವವರನ್ನು ರಕ್ಷಿಸಬೇಕು. ಯುದ್ಧ ಕೈದಿಗಳನ್ನು ಮಾನವೀಯತೆಯಿಂದ ನಡೆಸಿಕೊಳ್ಳಬೇಕು, ಸಂಘರ್ಷದ ಸಮಯದಲ್ಲಿ ಅನಾರೋಗ್ಯ, ಗಾಯಗೊಂಡ, ವೈದ್ಯಕೀಯ ಮತ್ತು ಧಾರ್ಮಿಕ ಸಿಬ್ಬಂದಿ ಮೇಲೆ ದಾಳಿ ಮಾಡಬಾರದು, ಸಮುದ್ರದಲ್ಲಿ ಯುದ್ಧದ ಸಮಯದಲ್ಲಿ ಗಾಯಗೊಂಡವರು, ರೋಗಿಗಳು ಮತ್ತು ಹಡಗು ನಾಶವಾದವರು ರಕ್ಷಿಸಬೇಕು.

ವಿಶ್ವ ರೆಡ್ ಕ್ರಾಸ್ ದಿನದ ಥೀಮ್ ಏನು?

2024ರ ವಿಶ್ವ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ದಿನದ ಥೀಮ್ “ನಾನು ಸಂತೋಷದಿಂದ ನೀಡುತ್ತೇನೆ ಮತ್ತು ನಾನು ನೀಡುವ ಸಂತೋಷವು ಬಹುಮಾನವಾಗಿದೆ”. ಇದು ದಾನ ಮತ್ತು ಸೇವೆಯ ಸಂತೋಷವನ್ನು ಪ್ರೋತ್ಸಾಹಿಸುತ್ತದೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಆಹಾರ ಸುರಕ್ಷತೆಗಾಗಿ ನಿಷೇಧ ಆದೇಶ ಹೊರಡಿಸಿದರೆ ಸಾಕೆ?

1999ರಿಂದ 2016ರವರೆಗೆ ಪ್ಲಾಸ್ಟಿಕ್ ನಿಷೇಧ ಕುರಿತು ಹಲವು ಕಾನೂನುಗಳು ಬಂದಿವೆ. ಆದರೆ, ಸಂಪೂರ್ಣವಾಗಿ ಬಳಕೆ ನಿಲ್ಲಿಸಲು ಸಾಧ್ಯವಾಗಿಲ್ಲ. 2022ರ ಜುಲೈ 1ರಿಂದ ದೇಶದಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದು ಆರೋಗ್ಯದ ಮೇಲೆ ಮಾಡುವ ದುಷ್ಪರಿಣಾಮದ ಜೊತೆಗೆ ಪರಿಸರದ ಮೇಲೆ ಮಾಡುವ ದಾಳಿಯೂ ಇದಕ್ಕೆ ಕಾರಣ. ಆದರೆ ಅದು ಕಟ್ಟುನಿಟ್ಟಾಗಿ ಜಾರಿಯಾಗಿಲ್ಲ. ಉಳಿದ ನಿಷೇಧಗಳ ಕತೆಯೂ ಇದೇ ಆಗಿದೆ.

VISTARANEWS.COM


on

Food Safety
Koo

ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ (Liquid Nitrogen) ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಇತ್ತೀಚೆಗಂತೂ ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಹೆಚ್ಚಾಗುತ್ತಿದೆ. ಜನರು ತಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಪಾಯದ ಬಾಗಿಲು ತಟ್ಟುತ್ತಿದ್ದಾರೆ. ಲಿಕ್ವಿಡ್ ನೈಟ್ರೋಜನ್ ಮೂಲಕ ಸ್ಮೋಕ್‌ ಐಸ್‌ಕ್ರೀಂ, ಸ್ಮೋಕ್‌ ಬಿಸ್ಕತ್ತು, ಬಿಯರ್‌ನಲ್ಲಿ ಬಳಸಲಾಗುತ್ತಿದ್ದು, ಇದು ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ. ಸ್ಮೋಕಿಂಗ್ ಲಿಕ್ವಿಡ್ ನೈಟ್ರೋಜನ್ ಸೇವನೆ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಮುಖ್ಯವಾಗಿ ಲಿಕ್ವಿಡ್‌ ನೈಟ್ರೋಜನ್‌ ಸೇವನೆಯಿಂದ ಕರಳು, ಗಂಟಲುಗಳಲ್ಲಿ ಹುಣ್ಣಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ. ಇದು ಸ್ವಾಗತಾರ್ಹ ನಿರ್ಧಾರ.

ಕಲರ್ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿಗೆ ಬಳಸುವ ಬಣ್ಣಗಳನ್ನು ಇತ್ತೀಚೆಗೆ ರಾಜ್ಯದಲ್ಲಿ ನಿಷೇಧಿಸಲಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಗೋಬಿ ಮಂಚೂರಿಯಲ್ಲಿ ಟಾರ್ಟ್ರಾಸೈನ್ ಎಂಬ ಕೃತಕ ಬಣ್ಣಕಾರಕವನ್ನು ಬಳಸಲಾಗುತ್ತದೆ. ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಕಲಬೆರಕೆ ಕಲರ್ ಬಳಕೆ ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಇಂಥ ಆಹಾರ ಈಗ ನಿಷೇಧಿತ. ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ.

ರೆಸ್ಟೋರಂಟ್‌ಗಳಲ್ಲಿ , ಬೀದಿ ಬದಿಯ ಸ್ಟಾಲ್‌ಗಳಲ್ಲಿ ಫುಡ್‌ ಪ್ರಿಯರನ್ನು ಆಕರ್ಷಿಸಲೆಂದೇ ಈ ಥರದ ಬಣ್ಣಗಳನ್ನು ಬಳಸುವುದು ರೂಢಿಯಾಗಿಬಿಟ್ಟಿದೆ. ಜನರೂ ಇದರ ಅಪಾಯದ ಅರಿವಿಲ್ಲದೆ ಬಳಸುತ್ತಲೇ ಇರುತ್ತಾರೆ. ಈ ನಡುವೆ ಚಿಕನ್‌ ಕಬಾಬ್‌ನಲ್ಲೂ ಕೆಲವರು ಬಣ್ಣಕಾರಕಗಳನ್ನು ಬಳಸುತ್ತಾರೆ. ಇದು ಕೂಡಾ ಅಪಾಯಕಾರಿ. ಆಹಾರ ಇಲಾಖೆಯ ಕಣ್ಣು ಇದರ ಮೇಲೂ ಬಿದ್ದಿದೆ. ಕಬಾಬ್ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ಕಾನೂನುಗಳನ್ನೇನೋ ಮಾಡಬಹುದು. ಆದರೆ ಅನುಷ್ಠಾನದ ಕತೆಯೇನು? ನೋಟೀಸ್ ನೀಡಿ ಬಿಟ್ಟುಬಿಟ್ಟರೆ ಜನ ಬಣ್ಣದ ಬಳಕೆ ಬಿಡುತ್ತಾರೆಯೇ? ಬೀದಿ ಬೀದಿಗಳಲ್ಲಿ ಕಲರ್‌ಫುಲ್ ಕಾಟನ್ ಕ್ಯಾಂಡಿಗಳು ಹಾಗೂ ಗೋಬಿ ಮಂಚೂರಿ ಬಳಕೆ ನಡೆದೇ ಇದೆ. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಗಾ ವ್ಯವಸ್ಥೆ ಬೇಡವೇ?

1999ರಿಂದ 2016 ರವರೆಗೆ ಪ್ಲಾಸ್ಟಿಕ್ ನಿಷೇಧ ಕುರಿತು ಹಲವು ಕಾನೂನುಗಳು ಬಂದಿವೆ. ಆದರೆ, ಸಂಪೂರ್ಣವಾಗಿ ಬಳಕೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. 2022ರ ಜುಲೈ 1ರಿಂದ ದೇಶದಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದು ಆರೋಗ್ಯದ ಮೇಲೆ ಮಾಡುವ ದುಷ್ಪರಿಣಾಮದ ಜೊತೆಗೆ ಪರಿಸರದ ಮೇಲೆ ಮಾಡುವ ದಾಳಿಯೂ ಇದಕ್ಕೆ ಕಾರಣ. ಆದರೆ ಅದು ಕಟ್ಟುನಿಟ್ಟಾಗಿ ಜಾರಿಯಾದಂತಿಲ್ಲ. ಏಕಬಳಕೆ ಪ್ಲಾಸ್ಟಿಕ್ ಮುಂದುವರಿದಿರುವುದು ಕಾಣಿಸುತ್ತದೆ.

ಇದೆಲ್ಲದರ ಬಗ್ಗೆ ಕಾನೂನು ಮಾಡಿದರೆ ಸಾಲದು, ದೃಢವಾದ ಜಾರಿ ಮಾಡುವಿಕೆ ಇರಬೇಕು. ಸಾರ್ವಜನಿಕರು ಕೂಡ ಇದನ್ನು ಮನಗಂಡು, ಈ ಹಾನಿಕರ ವಸ್ತುಗಳಿಗೆ ಉತ್ತೇಜನ ನೀಡುವುದು ನಿಲ್ಲಿಸಬೇಕು. ಆಗ ಮಾತ್ರ ತಜ್ಞರ, ಆರೋಗ್ಯ ಇಲಾಖೆಯ ಕಳಕಳಿ ಸಾರ್ಥಕ ಆಗಬಹುದು.

ಇದನ್ನೂ ಓದಿ: Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

Continue Reading

ಆರೋಗ್ಯ

Juices Side Effect: ಅಂಗಡಿಯಲ್ಲಿ ಸಿಗುವ ಜ್ಯೂಸ್‌ ಕುಡಿದರೆ ಏನಾಗುತ್ತದೆ?

ನಾವು ಮನೆಯಲ್ಲೇ ಮಾಡಿದ ಹಣ್ಣಿನ ರಸಗಳು (Juices Side Effect) ಒಮ್ಮೆ ಸಿಹಿ, ಒಮ್ಮೆ ಸಪ್ಪೆ, ಇನ್ನೊಮ್ಮೆ ಹುಳಿ- ಹೀಗೆ ನಾನಾ ರುಚಿಯಲ್ಲಿ ದೊರೆಯುತ್ತವೆ. ಆದರೆ ಬಾಟಲಿಯ ಜ್ಯೂಸ್‌ಗಳು ಸಿಹಿಯಾಗಿಯೇ ಇರುತ್ತವೆ. ರುಚಿಯಾಗಿರಲಿ ಎಂಬ ಕಾರಣಕ್ಕೆ ಹೆಚ್ಚುವರಿ ಸಕ್ಕರೆಯನ್ನು ತಯಾರಿಕೆಯ ಹಂತದಲ್ಲಿ ನಿಶ್ಚಿತವಾಗಿ ಸೇರಿಸಲಾಗುತ್ತದೆ. ಇದರಿಂದ ಆರೋಗ್ಯದ ಪಾಡೇನು? ಬಾಟಲಿಗಳಲ್ಲಿರುವ ರೆಡಿ-ಟು-ಯೂಸ್‌ ಜ್ಯೂಸ್‌ಗಳನ್ನು ಯಾಕೆ ಕುಡಿಯಬಾರದು? ಕುಡಿದರೇನಾಗುತ್ತದೆ? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Juices Side Effect
Koo

ಹಣ್ಣಿನ ರಸ (Juices Side Effect) ಒಳ್ಳೆಯದು ಎಂಬುದು ಎಲ್ಲರ ಮಾತು. ಹಾಗಂತ ಅಂಗಡಿಗಳಲ್ಲಿ ದೊರೆಯುವ ಬಾಟಲಿಯಲ್ಲಿರುವ ನಾನಾ ಕಂಪೆನಿಗಳ ಫ್ರೂಟ್‌ ಜ್ಯೂಸ್‌ಗಳ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿಲ್ಲ. ಯಾವುದೋ ಒಂದು ಬ್ರಾಂಡ್‌ ಎಂದಲ್ಲ, ಅಂಥ ಯಾವ ಜ್ಯೂಸ್‌ಗಳೂ ಬೇಡ ಎನ್ನುವುದು ಆರೋಗ್ಯದ ಕಾಳಜಿ ಇರುವಂಥ ಎಲ್ಲರೂ ಹೇಳುವ ಮಾತು. ಹಣ್ಣಿನ ರಸವನ್ನೇ ಕುಡಿಯುವುದಾದರೆ ತಾಜಾ ಸಿದ್ಧಪಡಿಸಿಕೊಂಡೇ ಕುಡಿಯಿರಿ ಎಂಬ ಕಿವಿ ಮಾತನ್ನು ಹೇಳುತ್ತಾರೆ. ಹಾಗೇಕೆ? ಬಾಟಲಿಗಳಲ್ಲಿರುವ ರೆಡಿ-ಟು-ಯೂಸ್‌ ಜ್ಯೂಸ್‌ಗಳನ್ನು ಯಾಕೆ ಕುಡಿಯಬಾರದು? ಕುಡಿದರೇನಾಗುತ್ತದೆ? ರುಚಿ ಎನ್ನುವುದಕ್ಕೆ ಬಹಳಷ್ಟು ಕಲ್ಪನೆಗಳಿವೆ. ಆದರೆ ಎಲ್ಲಕ್ಕಿಂತ ಜನಪ್ರಿಯ ಕಲ್ಪನೆಯೆಂದರೆ ʻಸಿಹಿʼ ಎಂಬುದು. ನಾವು ಮನೆಯಲ್ಲೇ ಮಾಡಿದ ಹಣ್ಣಿನ ರಸಗಳು ಒಮ್ಮೆ ಸಿಹಿ, ಒಮ್ಮೆ ಸಪ್ಪೆ, ಇನ್ನೊಮ್ಮೆ ಹುಳಿ- ಹೀಗೆ ನಾನಾ ರುಚಿಯಲ್ಲಿ ದೊರೆಯುತ್ತವೆ. ಹಣ್ಣಿನ ಮೂಲ ರುಚಿ ಹೇಗಿದೆಯೋ ಹಾಗೆಯೇ ಹಣ್ಣಿನ ರಸ ಇರುತ್ತದೆ, ಇರಬೇಕು. ಆದರೆ ಬಾಟಲಿಯ ಜ್ಯೂಸ್‌ಗಳು ಹಾಗಲ್ಲ. ಎಲ್ಲವೂ ಸಿಹಿಯಾಗಿಯೇ ಇರುತ್ತವೆ. ರುಚಿಯಾಗಿರಲಿ ಎಂಬ ಕಾರಣಕ್ಕೆ ಹೆಚ್ಚುವರಿ ಸಕ್ಕರೆಯನ್ನು ತಯಾರಿಕೆಯ ಹಂತದಲ್ಲಿ ನಿಶ್ಚಿತವಾಗಿ ಸೇರಿಸಲಾಗುತ್ತದೆ. ಅದೇ ಕಾರಣಕ್ಕಾಗಿಯೇ ಬಾಟಲಿಯ ಜ್ಯೂಸ್‌ ಬೇಡ ಎಂದು ಹೇಳುವುದು.

Lump sugar and a wooden spoon with white sugar on a wooden background.

ಎಷ್ಟು ಸಕ್ಕರೆ?

ಹೆಚ್ಚುವರಿ ಸಕ್ಕರೆ ಅಂದರೆ ಎಷ್ಟು? ಈ ಪ್ರಮಾಣ ಆಯಾ ಬ್ರಾಂಡ್‌ಗಳು ಮತ್ತು ಆಯಾ ಉತ್ಪನ್ನಗಳ ಮೇಲೆ ನಿರ್ಧಾರವಾಗುತ್ತದೆ. ಜ್ಯೂಸ್‌ನ ಪ್ರತಿಯೊಂದು ನಿಗದಿತ ಸರ್ವಿಂಗ್‌ನಲ್ಲಿ 6 ರಿಂದ 20 ಗ್ರಾಂಗಳವರೆಗೆ ಅಧಿಕ ಸಕ್ಕರೆಯನ್ನು ಸೇರಿಸಲಾಗುತ್ತದೆ. ಅಂದರೆ, ಆ ಉತ್ಪನ್ನದಲ್ಲಿ ಸೇರಿರುವ ನೈಸರ್ಗಿಕ ಸಿಹಿಯಂಶದ ಮೇಲಿನ ಸಕ್ಕರೆ ಪ್ರಮಾಣವಿದು. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ, ಒಂದು ಗ್ಲಾಸ್‌ ಜ್ಯೂಸ್‌ನಲ್ಲಿ 1.5 ಚಮಚದಿಂದ 5 ಚಮಚದವರೆಗೂ ಹೆಚ್ಚುವರಿ ಸಕ್ಕರೆಯನ್ನು ನಾವು ಸೇವಿಸುತ್ತೇವೆ. ಇದು ಕೇವಲ ಜ್ಯೂಸ್‌ ಬಗೆಗಷ್ಟೇ ಅಲ್ಲ, ಫ್ಲೇವರ್‌ ಹೊಂದಿರುವ ಕಾಫಿ, ಮಿಲ್ಕ್‌ಶೇಕ್‌, ಚಹಾ, ಎನರ್ಜಿ ಡ್ರಿಂಕ್‌ಗಳು ಅಥವಾ ಎಳನೀರಾದರೂ ಸರಿ- ಇವೆಲ್ಲದಕ್ಕೂ ಹೆಚ್ಚುವರಿ ಸಕ್ಕರೆಯನ್ನು ಸೇರಿಸಲಾಗುತ್ತದೆ. ಇದರಿಂದ ಆ ಉತ್ಪನ್ನದ ಬಣ್ಣ, ರುಚಿಯನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ.

Image Of Fruit Juices Role in Managing Blood Sugar Levels

ಏನಾಗುತ್ತದೆ?

ಬೇಸಿಗೆಯಲ್ಲಿ ಹಣ್ಣಿನ ರಸಗಳನ್ನು ಹೆಚ್ಚೆಚ್ಚು ಕುಡಿಯಬೇಕೆಂಬ ಬಯಕೆ ಇರುವುದು ಸಹಜ. ಆದರೆ ಒಂದೊಂದು ಗ್ಲಾಸ್‌ನಲ್ಲೂ ಇಷ್ಟೊಂದು ಪ್ರಮಾಣದ ಸಕ್ಕರೆ ದೇಹ ಸೇರುತ್ತದೆ ಎಂದಾದರೆ, ಆರೋಗ್ಯದ ಗತಿ ಏನು? ತೂಕ ಹೆಚ್ಚುವುದು, ಇನ್‌ಸುಲಿನ್‌ ಪ್ರತಿರೋಧಕತೆ, ಹೃದಯದ ಸಮಸ್ಯೆಗಳು- ಹೀಗೆ ತರಹೇವಾರಿ ತೊಂದರೆಗಳು ಸಾಲುಗಟ್ಟುತ್ತವೆ. ಅದರಲ್ಲೂ ಮಧುಮೇಹ ಇರುವವರು ಇಂಥವನ್ನು ನಿಯಮಿತವಾಗಿ ಕುಡಿದರೆ, ಸಕ್ಕರೆ ಕಾಯಿಲೆಯನ್ನು ನಿಯಂತ್ರಣಕ್ಕೆ ತರುವುದು ಬಹಳ ಕಷ್ಟವಾಗುತ್ತದೆ.

ಏನು ಮಾಡಬೇಕು?

ಎಲ್ಲಕ್ಕಿಂತ ಸುರಕ್ಷಿತವೆಂದರೆ ತಾಜಾ ಹಣ್ಣಿನ ರಸದ ಸೇವನೆ. ಯಾವುದೇ ಸಕ್ಕರೆ-ಬೆಲ್ಲಗಳನ್ನೆಲ್ಲ ಸೇರಿಸದಿದ್ದರೂ, ಹಣ್ಣಿನ ತಾಜಾ ಪರಿಮಳವೇ ಇದಕ್ಕೆ ಅದ್ಭುತ ರುಚಿಯನ್ನು ಒದಗಿಸುತ್ತದೆ. ಜ್ಯೂಸ್‌ ಮಾತ್ರವಲ್ಲ, ಸ್ಮೂದಿ, ಮಿಲ್ಕ್‌ಶೇಕ್‌ ಮುಂತಾದ ಯಾವುದನ್ನೂ ಮಾಡಿಕೊಳ್ಳುವುದು ಕಷ್ಟವಲ್ಲ. ಆರೋಗ್ಯ ಏನಾದೀತೊ ಎಂಬ ಚಿಂತೆ ಬಿಟ್ಟು ಹಾಯಾಗಿ ಇವುಗಳನ್ನು ಗುಟುಕರಿಸಬಹುದು.

Juices

ಗಮನಿಸಿ

ಒಂದೊಮ್ಮೆ ಬಾಟಲಿಯ ಜ್ಯೂಸ್‌ಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ ಎಂದಾದರೆ, ಅವುಗಳನ್ನು ಖರೀದಿಸುವಾಗ ಬಾಟಲಿಯ ಮೇಲಿನ ಸ್ಟಿಕ್ಕರ್‌ ಗಮನಿಸಿ. ಇದರಲ್ಲಿ ಹೆಚ್ಚುವರಿ ಸಕ್ಕರೆ ಎಷ್ಟಿದೆ ಎಂಬುದನ್ನು ನೋಡಿ. ಈ ಪೈಕಿ ಯಾವುದರಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಸೇರಿಸಲಾಗಿದೆ ಎಂಬುದನ್ನು ಇದರಿಂದ ತಿಳಿಯಬಹುದು. ಕಡಿಮೆ ಸಕ್ಕರೆ ಇರುವುದನ್ನೇ ಖರೀದಿಸಿ. ಇರುವುದರಲ್ಲಿ ಇದು ಒಳ್ಳೆಯ ಉಪಾಯ.

ಇದನ್ನೂ ಓದಿ: Tips To Find The Juiciest Lemon: ಜ್ಯೂಸಿಯಾದ ನಿಂಬೆಹಣ್ಣನ್ನು ಮಾರುಕಟ್ಟೆಯಿಂದ ಆರಿಸಿ ತರುವುದೂ ಒಂದು ಕಲೆ! ಇಲ್ಲಿವೆ ಟಿಪ್ಸ್

ಪರ್ಯಾಯಗಳು

ಬೇಸಿಗೆಯ ದಾಹ ತಣಿಸಿಕೊಳ್ಳುವುದಕ್ಕೆ ಆರೋಗ್ಯಕರ ಪರ್ಯಾಯಗಳಿವೆ. ಅವುಗಳತ್ತ ನಾವು ಗಮನ ನೀಡಬೇಕಷ್ಟೆ. ಘಮಘಮಿಸುವ ಹರ್ಬಲ್‌ ಚಹಾಗಳು, ಗ್ರೀನ್‌ ಟೀಗಳು ದೇಹಕ್ಕೆ ಆರಾಮ ನೀಡುತ್ತವೆ. ಸುಡು ಬೇಸಿಗೆಯಲ್ಲಿ ಈ ಬಿಸಿ ಪೇಯಗಳನ್ನು ಹೇಗೆ ಕುಡಿಯುವುದೆಂಬ ಚಿಂತೆ ಇದ್ದರೆ, ಇವುಗಳನ್ನು ಆರಿಸಿ, ಫ್ರಿಜ್‌ನಲ್ಲಿರಿಸಿಯೂ ಸೇವಿಸಬಹುದು. ಪುದೀನಾ, ಅನಾನಸ್‌ ಮುಂತಾದವುಗಳನ್ನು ನೀರಿಗೆ ಸೇರಿಸಿದ ಇನ್‌ಫ್ಯೂಸ್ಡ್‌ ವಾಟರ್‌ ತಯಾರಿಸಿಕೊಳ್ಳಬಹುದು. ಮನೆಯಿಂದ ನಾಲ್ಕು ಹೆಜ್ಜೆ ಹೊರ ನಡೆದು ಎಳನೀರು ದೊರೆಯುತ್ತದೋ ನೋಡಿ. ಇವೆಲ್ಲ ಹೆಚ್ಚುವರಿ ಸಕ್ಕರೆ ಇಲ್ಲದೆಯೆ, ನೈಸರ್ಗಿಕವಾಗಿ ದೇಹವನ್ನು ತಂಪಾಗಿಡುವ ಮಾರ್ಗಗಳು.

Continue Reading

ಆರೋಗ್ಯ

Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

ಸೀಬೆಯ ಎಲೆಯಿಂದ (guava leaves benefits) ನಿಮ್ಮ ಕೂದಲೂ ಸೇರಿದಂತೆ ನಿತ್ಯವೂ ಕಾಡುವ ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣದಂತಹ ಉತ್ತರವಿದೆ. ಇದರಿಂದ ಆಗಬಹುದಾದ ಲಾಭಗಳನ್ನು ನೀವು ತಿಳಿದುಕೊಂಡರೆ ಖಂಡಿತಾ ನೀವು ಸೀಬೆ ಮರವನ್ನು ಅರಸಿಕೊಂಡು ಹೋಗುವುದರಲ್ಲಿ ಯಾವ ಸಂಶಯವೂ ಇಲ್ಲ. ಬನ್ನಿ ಸೀಬೆ ಮರದ ಎಲೆಯ ಲಾಭಗಳನ್ನು ತಿಳಿದುಕೊಳ್ಳೋಣ.

VISTARANEWS.COM


on

guava leaves benefits
Koo

ಪೇರಳೆ ಅಥವಾ ಸೀಬೆ ಹಣ್ಣಿನ (guava leaves benefits) ಮಹತ್ವದ ಬಗ್ಗೆ ನಿಮಗೆ ಕೇಳಿ ಗೊತ್ತಿರಬಹುದು. ಅದರ ಆರೋಗ್ಯದ ಲಾಭಗಳನ್ನು ನೀವು ಕೇಳಿ ತಿಳಿದುಕೊಂಡು ತಿನ್ನುತ್ತಲೂ ಇರಬಹುದು. ಆದರೆ ಸೀಬೆಕಾಯಿಯ ಎಲೆಯ ಲಾಭಗಳ ಬಗ್ಗೆ ನಿಮಗೆ ಗೊತ್ತೇ? ಸೀಬೆಯ ಎಲೆಯಿಂದ ನಿಮ್ಮ ಕೂದಲೂ ಸೇರಿದಂತೆ ನಿತ್ಯವೂ ಕಾಡುವ ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣದಂತಹ ಉತ್ತರವಿದೆ. ಇದರಿಂದ ಆಗಬಹುದಾದ ಲಾಭಗಳನ್ನು ನೀವು ತಿಳಿದುಕೊಂಡರೆ ಖಂಡಿತಾ ನೀವು ಸೀಬೆ ಮರವನ್ನು ಅರಸಿಕೊಂಡು ಹೋಗುವುದರಲ್ಲಿ ಯಾವ ಸಂಶಯವೂ ಇಲ್ಲ. ಬನ್ನಿ ಸೀಬೆ ಮರದ ಎಲೆಯ ಲಾಭಗಳನ್ನು ತಿಳಿದುಕೊಳ್ಳೋಣ.

Guava Leaves

ಪೋಷಕಾಂಶಗಳು

ಸೀಬೆಯ ಎಲೆಯಲ್ಲಿ ಸಾಕಷ್ಟು ವಿಟಮಿನ್‌ಗಳೂ ಪೋಷಕಾಂಶಗಳೂ ಇರುವುದರಿಂದ ಕೂದಲನ್ನು ಶಕ್ತಿಯುತವಾಗಿಸುವಲ್ಲಿ ಇದರ ಪಾತ್ರ ದೊಡ್ಡದು. ಕೂದಲನ್ನು ಬೇರಿನಿಂದಲೇ ಶಕ್ತಿಯುತಗೊಳಿಸಿ ಗಟ್ಟಿಗೊಳಿಸುತ್ತದೆ. ಬುಡದಿಂದಲೇ ಕೂದಲನ್ನು ಆರೋಗ್ಯಯುತವಾಗಿಸಿ ಕೂದಲುದುರುವಿಕೆಯನ್ನು ತಡೆಯುತ್ತದೆ. ಕೂದಲು ಸೊಂಪಾಗಿ ದೃಢವಾಗಿ ಬೆಳೆಯುತ್ತದೆ.

ಕೂದಲು ದೃಢ

ಫ್ರೀ ರ್ಯಾಡಿಕಲ್ಸ್‌ ವಿರುದ್ಧ ಹೋರಾಡುವ ಗುಣವನ್ನು ಇದು ಹೊಂದಿರುವುದರಿಂದ ಕೂದಲಿನ ಬುಡಕ್ಕಾಗುವ ಹಾನಿಯನ್ನು ಇದು ತಪ್ಪಿಸುತ್ತದೆ. ಆ ಮೂಲಕ ಕೂದಲು ದೃಢವಾಗಿ ಬೆಳೆಯುತ್ತದೆ.

Image Of Guava Leaves Benefits

ರಕ್ತ ಸಂಚಾರ ಚುರುಕು

ಸೀಬೆ ಎಲೆಯು ಕೂದಲ ಬುಡದಲ್ಲಿ ರಕ್ತಸಂಚಾರವನ್ನು ಚುರುಕುಗೊಳಿಸುವಲ್ಲಿ ನೆರವಾಗುತ್ತದೆ. ಇದರಿಂದ ಕೂದಲ ಆರೋಗ್ಯ ಹೆಚ್ಚುತ್ತದೆ. ಕೂದಲಿಗೆ ಪೋಷಣೆ ಸರಿಯಾಗಿ ಆಗುವ ಮೂಲಕ ಸಂಪೂರ್ಣವಾಗಿ ಕೂದಲ ಆರೋಗ್ಯ ದ್ವಿಗುಣಗೊಳ್ಳುತ್ತದೆ.

ಕೂದಲ ಹೊಟ್ಟು ನಿವಾರಣೆ

ನಿಮಗೆ ಕೂದಲ ಹೊಟ್ಟಿನ ಸಮಸ್ಯೆ ಇದ್ದರೆ ಸೀಬೆ ಎಲೆ ಅತ್ಯುತ್ತಮ ಮನೆಮದ್ದು. ಸೀಬೆ ಎಲೆಯು ಕೂದಲ ಹೊಟ್ಟನ್ನು ತರುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡಿ ಕೂದಲ ಬುಡವನ್ನು ನಯವಾಗಿಸುತ್ತದೆ. ಕೂದಲ ಬುಡದ ಚರ್ಮ ಒಣಗಿ ಏಳುವುದನ್ನು ಇದು ತಡೆಯುತ್ತದೆ. ತುರಿಕೆ ಮತ್ತು ಕಜ್ಜಿಯ ಸಮಸ್ಯೆಗಳಿಗೂ ಇದು ಒಳ್ಳೆಯದು.

Hair Growth Tips

ಕೂದಲ ಬೆಳವಣಿಗೆ

ಸೀಬೆ ಎಲೆಯನ್ನು ಆಗಾಗ ಬಳಸುವ ಮೂಲಕ ಕೂದಲ ತುದಿ ಕವಲೊಡೆಯವ ಸಮಸ್ಯೆಯಿಂದಲೂ ಮುಕ್ತಿ ಪಡೆಯಬಹುದು. ಕೂದಲು ನಯವಾಗಿ ಉದ್ದ ಬೆಳೆಯುತ್ತದೆ.

ಮಿದುಳಿನ ಆರೋಗ್ಯಕ್ಕೆ ಸಹಕಾರಿ

ಸೀಬೆ ಎಲೆಯಲ್ಲಿ ವಿಟಮಿನ್‌ ಬಿ3 ಹಾಗೂ ಬಿ6 ಇರುವುದರಿಂದ ಮಿದುಳಿನ ಆರೋಗ್ಯಕ್ಕೂ ಇದು ಒಳ್ಳೆಯದು.

ಹೊಟ್ಟೆ ನೋವಿಗೆ ಪರಿಹಾರ

ಕೇವಲ ಇವಷ್ಟೇ ಅಲ್ಲ, ಸೀಬೆಯ ಎಲೆಗಳಿಂದ ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ ಕಾಣಬಹುದು. ಹೊಟ್ಟೆಯಲ್ಲಿ ಹುಣ್ಣು, ಅಲ್ಸರ್‌, ಹೊಟ್ಟೆ ನೋವು ಮತ್ತಿತರ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಸೀಬೆ ಎಲೆಗಿದೆ.

heart attack and Diabetes control

ಮಧುಮೇಹಕ್ಕೂ ಮದ್ದು

ಸೀಬೆ ಎಲೆ ಮಧುಮೇಹಕ್ಕೆ ಒಳ್ಳೆಯ ಮನೆಮದ್ದು. ಸೀಬೆ ಎಲೆಯ ಚಹಾ ಮಾಡಿ ಕುಡಿಯುವುದರಿಂದ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ಸಮತೋಲನಕ್ಕೆ ತರಬಹುದು.

ಗಾಯಕ್ಕೆ ಔಷಧ

ಗಾಯ ಮಾಗಲು, ಗುಣವಾಗಲು, ನೋವು ನಿವಾರಕವಾಗಿ, ರೋಗ ನಿರೋಧಕವಾಗಿಯೂ ಸೀಬೆ ಎಲೆಯು ಸಹಾಯ ಮಾಡುತ್ತದೆ.

Anti-inflammatory properties Guava Leaves Benefits

ಬಾಯಿ ಹುಣ್ಣು ನಿವಾರಣೆ

ಬಾಯಿಯ ಆರೋಗ್ಯಕ್ಕೂ ಸೀಬೆ ಎಲೆ ಒಳ್ಳೆಯದು. ಬಾಯಿಹುಣ್ಣು, ಹಲ್ಲು ನೋವು, ವಸಡಿನ ಸಮಸ್ಯೆ ಮತ್ತಿತರ ಸಮಸ್ಯೆಗಳಿಗೆ ಸೀಬೆ ಎಲೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಒಂದೆಡರಡು ಸೀಬೆ ಎಲೆಯನ್ನು ಅಥವಾ ಸೀಬೆಯ ಎಳೆ ಎಲೆಯನ್ನು ಬಾಯಲ್ಲಿಟ್ಟು ಜಗಿಯುವ ಮೂಲಕ ಇದರ ಪ್ರಯೋಜನ ಪಡೆಯಬಹುದು.

ಭೇದಿಗೆ ತಡೆ

ಭೇದಿಯ ಸಮಸ್ಯೆಗೆ ಸೀಬೆ ಎಲೆ ಒಳ್ಳೆಯ ಮನೆಮದ್ದು. ಇದು ಬೇದಿಯನ್ನು ತರುವ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ತಡೆಯುವ ಮೂಲಕ ಭೇದಿಯನ್ನು ತಡೆಯುತ್ತದೆ. ಖಾಲಿ ಹೊಟ್ಟೆಯಲ್ಲಿ ಸೀಬೆ ಎಲೆಯ ಟೀ ಮಾಡಿ ಕುಡಿಯುವ ಮೂಲಕ ಪರಿಹಾರ ಕಾಣಬಹುದು.

happy woman hand in heart

ಹೃದಯ ಆರೋಗ್ಯಕ್ಕೆ ಪೂರಕ

ಹೃದಯದ ಆರೋಗ್ಯಕ್ಕೂ ಸೀಬೆ ಎಲೆಯ ಉಪಯೋಗದಿಂದ ಫಲ ಕಾಣಬಹುದು. ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುವುದಲ್ಲದೆ, ಕೊಲೆಸ್ಟೆರಾಲ್‌ ಅನ್ನೂ ಕಡಿಮೆಗೊಳಿಸುವ ತಾಕತ್ತನ್ನು ಹೊಂದಿದೆ.

Continue Reading
Advertisement
gold rate today tapasi
ಚಿನ್ನದ ದರ11 mins ago

Gold Rate today: ಇದು ಚಿನ್ನದಂಥಾ ವಿಷಯ! ಬಂಗಾರದ ಬೆಲೆ ತುಸು ಇಳಿಕೆ; ಎಷ್ಟಿದೆ ಇಂದು?

IPL 2024 Points Table
ಕ್ರಿಕೆಟ್27 mins ago

IPL 2024 Points Table: ಡೆಲ್ಲಿಗೆ ಗೆಲುವು ಅಂಕಪಟ್ಟಿಯಲ್ಲಿ ಕುಸಿತ ಕಂಡ ಲಕ್ನೋ

sam pitroda pm narendra modi
ಪ್ರಮುಖ ಸುದ್ದಿ37 mins ago

PM Narendra Modi: “ಚರ್ಮದ ಬಣ್ಣದ ಮೇಲಿನ ಈ ಅವಮಾನವನ್ನು ಸಹಿಸುವುದಿಲ್ಲ…” ಪಿತ್ರೋಡಾಗೆ ಮೋದಿ ತಪರಾಕಿ

ವೈರಲ್ ನ್ಯೂಸ್53 mins ago

Viral Video: ಅಬ್ಬಾ.. ಎಂಥಾ ಭೀಕರ ದೃಶ್ಯ! ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು

Double Murder Fakirappa stabs brothers to death for falling behind daughter
ಕ್ರೈಂ56 mins ago

Double Murder: ಮಗಳ ಹಿಂದೆ ಬಿದ್ದಿದ್ದಕ್ಕೆ ಸಹೋದರರನ್ನೇ ಚಾಕುವಿನಿಂದ ಇರಿದು ಕೊಂದ ಫಕೀರಪ್ಪ!

SSLC Exam Result 2024 to be declared tomorrow Here are the details
ಶಿಕ್ಷಣ1 hour ago

SSLC Exam Result 2024: ನಾಳೆ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Srinidhi Shetty Attends Daiva Kola Festivities in Mangalore
ಸ್ಯಾಂಡಲ್ ವುಡ್1 hour ago

Srinidhi Shetty: ಕೋಲ ಸೇವೆ ಸಲ್ಲಿಸಿದ ಕೆಜಿಎಫ್‌ ಬೆಡಗಿ; ಶ್ರೀನಿಧಿ ಶೆಟ್ಟಿಗೆ ದೈವ ಅಭಯ ನೀಡಿದ್ದೇನು?

Pepper spray
ಕರ್ನಾಟಕ1 hour ago

Pepper Spray: ಪೆಪ್ಪರ್‌ ಸ್ಪ್ರೇ ಬಹಳ ಡೇಂಜರ್‌..ಅದನ್ನು ರಕ್ಷಣೆಗೆ ಬಳಸುವಂತಿಲ್ಲ- ಹೈಕೋರ್ಟ್‌

Prajwal Revanna Case Will resign says DK Shivakumar and slams HD Kumaraswamy
ರಾಜಕೀಯ1 hour ago

Prajwal Revanna Case: ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ; ಕೊಡ್ತೇನೆ ಅಂದ್ರ ಡಿಕೆಶಿ!

Sam Pitroda
ದೇಶ2 hours ago

Sam Pitroda: “ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ…” ಸ್ಯಾಮ್‌ ಪಿತ್ರೋಡಾ ಮತ್ತೊಂದು ಆತ್ಮಹತ್ಯಾ ಬಾಂಬ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ18 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ21 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ23 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌