Modi In Karnataka | ಅನ್ಯ ಸರ್ಕಾರಗಳಿಗೆ ವೋಟ್‌ ಬ್ಯಾಂಕ್‌ ಚಿಂತೆ; ನಮಗೆ ಅಭಿವೃದ್ಧಿಯೇ ಆದ್ಯತೆ: ಪ್ರಧಾನಿ ಮೋದಿ Vistara News
Connect with us

ಕರ್ನಾಟಕ ಎಲೆಕ್ಷನ್

Modi In Karnataka | ಅನ್ಯ ಸರ್ಕಾರಗಳಿಗೆ ವೋಟ್‌ ಬ್ಯಾಂಕ್‌ ಚಿಂತೆ; ನಮಗೆ ಅಭಿವೃದ್ಧಿಯೇ ಆದ್ಯತೆ: ಪ್ರಧಾನಿ ಮೋದಿ

ಡಬಲ್‌ ಇಂಜಿನ್‌ ಸರ್ಕಾರದ ಕಾರಣಕ್ಕೆ ಕೇಂದ್ರದ ಯೋಜನೆಗಳು ರಾಜ್ಯದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಯಾಗುತ್ತಿವೆ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದರು.

VISTARANEWS.COM


on

modi in karnataka other party govts focussed only on voteban and we focus over development says modi
Koo

ಯಾದಗಿರಿ: ವಿವಿಧ ಸರ್ಕಾರಗಳು ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸಿ ಕೇವಲ ಜಾತಿ ಮತದ ಆಧಾರದಲ್ಲಿ ಮತಬ್ಯಾಂಕ್‌ ಮೇಲೆ ಕಣ್ಣಿಟ್ಟಿದ್ದವು. 2014ರಿಂದ ಆಡಳಿತದಲ್ಲಿರುವ ನಮ್ಮ ಸರಕಾರವು ಕೇವಲ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ನಾರಾಯಣಪುರ ಎಡದಂಡೆ ಕಾಲುವೆ ವಿಸ್ತರಣೆ ಹಾಗೂ ಅಭಿವೃದ್ಧಿ ಯೋಜನೆಗೆ ಚಾಲನೆ ಸೇರಿ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದು.

ಕನ್ನಡದಲ್ಲೆ ಭಾಷಣ ಆರಂಭಿಸಿದ ಮೋದಿ, ʼಕರ್ನಾಟಕದ ಎಲ್ಲ ಸಹೋದರ ಸಹೋದರಿಯರಿಗೆ ನನ್ನ ವಂದನೆಗಳು” ಎಂದರು. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ಜನರೇ ಕಾಣುತ್ತಿದ್ದಾರೆ. ಹೆಲಿಪ್ಯಾಡ್‌ನಲ್ಲೂ, ಕಾರ್ಯಕ್ರಮದಲ್ಲಿ, ಪೆಂಡಾಲ್‌ ಹೊರಗೂ ಬಿಸಿಲಿನಲ್ಲಿ ಜನರು ನಿಂತಿದ್ದಾರೆ. ನೀವು ನೀಡುತ್ತಿರುವ ಈ ಪ್ರೀತಿ, ಆಶೀರ್ವಾದವೇ ನಮ್ಮೆಲ್ಲರ ಬಹುದೊಡ್ಡ ಶಕ್ತಿ ಎಂದು ಪ್ರಶಂಸಿಸಿದರು.

ಯಾದಗಿರಿಯು ಸಮೃದ್ಧ ಇತಿಹಾಸವನ್ನು ಒಳಗೊಂಡಿದೆ. ರಟ್ಟಿಹಳ್ಳಿ ಕೋಟೆಯು ನಮ್ಮ ಪೂರ್ವಜರ ಸಾಮರ್ಥ್ಯದ ಪ್ರತೀಕ. ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ನಂಟು ಹೊಂದಿದ ಅನೇಕ ಸ್ಥಳಗಳು ಈ ಕ್ಷೇತ್ರದಲ್ಲಿವೆ. ಮಹಾನ್‌ ರಾಜಾ ವೆಂಕಟಪ್ಪ ನಾಯಕ ತಮ್ಮ ಉತ್ತಮ ಆಡಳಿತದಿಂದಾಗಿ ಈ ಪ್ರದೇಶ ವಿಖ್ಯಾತವಾಗಿತ್ತು. ಈ ಪರಂಪರೆಯ ಮೇಲೆ ನಮಗೆ ಗೌರವವಿದೆ.

ನಾರಾಯಣಪುರ ಎಡದಂಡೆ ಕಾಲುವೆಯ ವಿಸ್ತರಣೆ ಹಾಗೂ ಆಧುನೀಕರಣದಿಂದ ಸುತ್ತಲಿನ ರೈತರಿಗೆ ನೇರವಾಗಿ ಲಾಭವಾಗಿತ್ತದೆ. ಯಾದಗಿರಿ ಬಹುಗ್ರಾಮ ಕುಡಿಯುವ ನೀರಿನಿಂದ ಶುದ್ಧ ಕುಡಿಯುವ ನೀರು ಸಿಗುತ್ತದೆ. ಸೂರತ್‌-ಚೆನ್ನೈ ಎಕನಾಮಿಕ್‌ ಕಾರಿಡಾರ್‌ ಭಾಗದ ಕಾರ್ಯ ಆರಂಭವಾಗಿದೆ. ಇದರಿಂದಾಗಿ ಯಾದಗಿರಿ-ರಾಯಚೂರು ಹಾಗೂ ಕಲಬುರಗಿ ಸಹಿತ ಈ ಕ್ಷೇತ್ರದಲ್ಲಿ ಜನರ ಜೀವನ ಸುಧಾರಿಸುತ್ತದೆ ಮತ್ತು ಉದ್ಯಮಗಳಿಗೂ ಶಕ್ತಿ ಲಭಿಸುತ್ತದೆ. ಅಭಿವೃದ್ಧಿಯ ಈ ಯೋಜನೆಗಳಿಗೆ ಯಾದಗಿರಿಯ ಹಾಗೂ ಕರ್ನಾಟಕದ ಜನರಿಗೆ ಅಭಿನಂದನೆಗಳು.

modi in karnataka PM lauds Yadagiris heritage and agriculture

ಬೊಮ್ಮಾಯಿ ಹಾಗೂ ಅವರ ತಂಡಕ್ಕೆ ಅಭಿನಂದನೆಗಳು. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ವೇಗವಾಗಿ ಕೆಲಸ ಆಗುತ್ತಿರುವುದು ಪ್ರಶಂಸನೀಯ. ಭಾರತದ ಸ್ವಾತಂತ್ರ್ಯದ 75 ವರ್ಷ ಪೂರೈಸಿದೆ. ಮುಂದಿನ 25 ವರ್ಷಗಳ ಹೊಸ ಸಂಕಲ್ಪವನ್ನು ಸಿದ್ಧಪಡಿಸಿಕೊಳ್ಳಲು ಮುಂದೆ ನಡೆಯುತ್ತಿದೆ. ಈ ಅಮೃತ ಕಾಲವು ಪ್ರತಿ ರಾಜ್ಯಕ್ಕೂ ಮಹತ್ವದ್ದು. ಈ ಅವಧಿಯಲ್ಲಿ ಅಭಿವೃದ್ಧಿ ಹೊಂದಿದ ರಾಜ್ಯವನ್ನು ನಿರ್ಮಾಣ ಮಾಡಬೇಕು. ದೇಶದ ಪ್ರತಿ ನಾಗರಿಕ, ರಾಜ್ಯವೂ ಈ ಅಭಿಯಾನದಲ್ಲಿ ಕೈಜೋಡಿಸಿದರೆ ಮಾತ್ರ ಇದು ಸಾಧ್ಯ. ಹೊಲದಲ್ಲಿ ದುಡಿಯುವ ರೈತನಿಂದ ಉದ್ಯಮಿಯವರೆಗೆ ಎಲ್ಲರ ಜೀವನವೂ ಸುಧಾರಣೆಯಾದರೆ ಮಾತ್ರ ಸಾಧ್ಯ ಎಂದರು.

ಕೆಟ್ಟ ನೀತಿಗಳಿಂದ ಕಲಿತ ಪಾಠ

ಹಿಂದಿನ ದಶಕಗಳ ಕೆಟ್ಟ ಅನುಭವಗಳು, ತಪ್ಪು ನೀತಿಗಳಿಂದ ಕಲಿಯಬೇಕು. ಅವುಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು. ಉತ್ತರ ಕರ್ನಾಟಕದ ಸಾಮರ್ಥ್ಯ ಬೇರೆ ಯಾರಿಗಿಂತಲೂ ಕಡಿಮೆ ಇಲ್ಲ. ಆದರೂ ಈ ಕ್ಷೇತ್ರ ಅಭಿವೃದ್ಧಿಯಲ್ಲಿ ಬಹಳಷ್ಟು ಹಿಂದೆ ಉಳಿದಿದೆ. ಹಿಂದನ ಸರ್ಕಾರಗಳು ಯಾದಗಿರಿ ಸಹಿತ ಅನೇಕ ಜಿಲ್ಲೆಗಳನ್ನು ಹಿಂದುಳಿದವು ಎಂದು ಘೋಷಿಸಿ ಕೈತೊಳೆದುಕೊಂಡಿದ್ದವು. ಈ ಸ್ಥಿತಿಗೆ ಕಾರಣವೇನು? ಅದನ್ನು ಪರಿಹರಿಸುವುದು ಹೇಗೆ? ಎನ್ನುವುದನ್ನು ಈ ಹಿಂದಿನ ಸರ್ಕಾರಗಳು ಆಲೋಚಿಸಲಿಲ್ಲ. ಕ್ರಮವನ್ನೂ ಕೈಗೊಳ್ಳಲಿಲ್ಲ. ರಸ್ತೆ, ವಿದ್ಯುತ್‌, ನೀರಿನ ವ್ಯವಸ್ಥೆ ಸರಿಪಡಿಸುವ ಬದಲಿಗೆ ಆಗಿನ ಪಕ್ಷಗಳ ಸರ್ಕಾರಗಳು ವೋಟ್‌ ಬ್ಯಾಂಕ್‌ ರಾಜಕಾರಣಕ್ಕೆ ಒತ್ತು ನೀಡಿದವು. ಜಾತಿ, ಧರ್ಮದ ಆಧಾರದಲ್ಲಿ ಲೆಕ್ಕ ಮಾಡಿಯೇ ಯೋಜನೆಗಳನ್ನು ರೂಪಿಸಿದವು. ಇದರ ಬಹುದೊಡ್ಡ ನಷ್ಟವು ಕರ್ನಾಟಕಕ್ಕೆ ಆಯಿತು. ಇದೆಲ್ಲದರಿಂದ ನಿಮಗೆ ನಷ್ಟವಾಯಿತು.

ನಮ್ಮ ಆದ್ಯತೆ ವೋಟ್‌ ಬ್ಯಾಂಕ್‌ ಅಲ್ಲ. ನಮ್ಮ ಆದ್ಯತೆ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ. 2014ರಲ್ಲಿ ನೀವು ನನಗೆ ಆಶೀರ್ವಾದ ಮಾಡಿದಿರಿ. ನನ್ನ ಹೆಗಲ ಮೇರೆ ಬಹುದೊಡ್ಡ ಹೊಣೆ ಹೊರಿಸಿದಿರಿ. ದೇಶದ ಯಾವುದೇ ಜಿಲ್ಲೆ ಅಭಿವೃದ್ಧಿಯಿಂದ ಹಿಂದೆ ಉಳಿದರೂ ದೇಶ ಅಭಿವೃದ್ಧಿ ಆಗುವುದಿಲ್ಲ. ಅದಕ್ಕಾಗಿಯೇ ಹಿಂದುಳಿದ ಜಿಲ್ಲೆಗಳಿಂದಲೇ ಅಭಿವೃದ್ಧಿಯನ್ನು ಕೈಗೊಂಡಿದ್ದೇವೆ. ಯಾದಗಿರಿ ಸೇರಿ ಇಂತಹ ನೂರಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೋಜನೆ ಜಾರಿ ಮಾಡುತ್ತಿದ್ದೇವೆ. ಸುಶಾಸನಕ್ಕೆ ಒತ್ತು ನೀಡಿದೆವು.

ಇದರಿಂದಾಗಿ ಯಾದಗಿರಿಯಲ್ಲಿ ಮಕ್ಕಳ ಶೇ. 100 ಲಸಿಕೀಕರಣ ಆಗಿದೆ. ಅಪೌಷ್ಠಿಕ ಮಕ್ಕಳ ಸಂಖ್ಯೆ ಕಡಿಮೆ ಆಗಿದೆ. ಶೇ. 100 ಗ್ರಾಮಗಳು ರಸ್ತೆ ಹೊಂದಿವೆ. ಗ್ರಾಪಂಗಳಲ್ಲಿ ಕಾಮನ್‌ ಸರ್ವೀಸ್‌ ಸೆಂಟರ್‌ ಇದೆ. ಶಿಕ್ಷಣ, ಆರೋಗ್ಯ. ಸಂಪರ್ಕದಲ್ಲಿ ಯಾದಗಿರಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಇದು ಮೊದಲ 10 ಜಿಲ್ಲೆಗಳಲ್ಲಿ ಒಂದಾಗಿದೆ. ಇದಕ್ಕಾಗಿ ಯಾದಗಿರಿಯ ಜನಪ್ರತಿನಿಧಿಗಳು, ಜಿಲ್ಲಾ ಆಡಳಿತಕ್ಕೆ ಶುಭಾಶಯಗಳು.

ಡಬಲ್‌ ಇಂಜಿನ್‌ ಸರ್ಕಾರದ ಹೆಗ್ಗಳಿಕೆ

ಡಬಲ್‌ ಇಂಜಿನ್‌ ಸರ್ಕಾರವು ಅಭಿವೃದ್ಧಿಗೆ ಒತ್ತು ನೀಡುತ್ತಿದೆ. 2014ರಲ್ಲಿ ನಾವು ಅಧಿಕಾರಕ್ಕೆ ಬಂದಾಗ, ನನೆಗುದಿಗೆ ಬಿದ್ದಿದ್ದ 99 ಯೋಜನೆಗಳಿದ್ದವು. ಇದರಲ್ಲಿ ಅರ್ಧದಷ್ಟು ಯೋಜನೆಗಳನ್ನು ಪೂರೈಸಲಾಗಿದೆ. ಕರ್ನಾಟಕದಲ್ಲೂ ಅನೇಕ ಯೋಜನೆ ಜಾರಿಯಲ್ಲಿವೆ. ಡಬಲ್‌ ಇಂಜಿನ್‌ ಸರ್ಕಾರ ಹೇಗೆ ಕೆರಲಸ ಮಾಡುತ್ತಿದೆ ಎನ್ನುವುದನ್ನು ಜಲಜೀವನ ಮಿಷನ್‌ನಲ್ಲೂ ನೋಡಬಹುದು. ಈ ಯೋಜನೆ ಆರಂಭವಾದಾಗ ಕೇವಲ 3 ಕೋಟಿ ಮನೆಗಳಿಗೆ ನಲ್ಲಿಯ ಸಂಪರ್ಕವಿತ್ತು. ಈಗ 11 ಕೋಟಿ ಮನೆಗಳಿಗೆ ನಲ್ಲಿಯ ಮೂಲಕ ನೀರು ಲಭಿಸುತ್ತಿದೆ. ಕರ್ನಾಟಕದಲ್ಲಿ 35 ಲಕ್ಷ ಗ್ರಾಮೀಣ ಮನೆಗಳೂ ಇವೆ. ಮನೆಗೆ ನೀರು ಆಗಮಿಸಿದ ಕೂಡಲೆ ತಾಯಂದಿರು ಮೋದಿಯನ್ನು ಆಶೀರ್ವದಿಸುತ್ತಾರೆ. ಭಾರತದ ಜಲಜೀವನ ಮಿಷನ್‌ ಮೂಲಕ ಲಕ್ಷಾಂತರ ಮಕ್ಕಳ ಜೀವನವನ್ನು ನಾವು ಉಳಿಸಬಹುದು ಎಂದು ಅಧ್ಯಯನ ಹೇಳಿದೆ. ಈ ಕಾರ್ಯಕ್ಕೆ ಈಶ್ವರನೂ ಆಶೀರ್ವಾದ ನೀಡುತ್ತಾನೆ. ಕಲುಷಿತ ನೀರಿನಿಂದ ಮಕ್ಕಳಿಗೆ ಒದಗುತ್ತಿದ್ದ ಅಪಾಯದಿಂದ ಪಾರು ಮಾಡಿದೆ.

ಇದು ಡಬಲ್‌ ಇಂಜಿನ್‌ ಸರ್ಕಾರದ ಲಾಭ. ಡಬಲ್‌ ವೇಗದಲ್ಲಿ ಅಭಿವೃದ್ಧಿ. ಕರ್ನಾಡಕಕ್ಕೆ ಆಗುತ್ತಿರುವ ಲಾಭವನ್ನು ನೀವು ನೋಡಿದ್ದೀರ. ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಕೇಂದ್ರ ಸರ್ಕಾರ ಆರು ಸಾವಿರ ರೂ. ನೀಡಿದರೆ ಕರ್ನಾಟಕ ಸರ್ಕಾರ ನಾಲ್ಕು ಸಾವಿರ ರೂ. ಸೇರಿಸಿ 10 ಸಾವಿರ ರೂ. ನೀಡುತ್ತಿದೆ. ಇದು ಡಬಲ್‌ ಇಂಜಿನ್‌ ಸರ್ಕಾರ. ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ತಂದರೆ ಕರ್ನಾಟಕ ವಿದ್ಯಾನಿಧಿ ಯೋಜನೆ ರೂಪಿಸಿದೆ. ಕೊರೊನಾ ಹೋಗಲಾಡಿಸಲು ಕೇಂದ್ರ ಸರ್ಕಾರ ಒಂದು ಯೋಜನೆ ರೂಪಿಸಿದರೆ ಕರ್ನಾಟಕ ಇದಕ್ಕೆ ಸಹಕರಿಸುತ್ತದೆ. ನೇಕಾರರಿಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿದರೆ, ಕರ್ನಾಟಕ ಸರ್ಕಾರ ಅವರ ಸಾಲ ಮನ್ನಾ ಮಾಡುತ್ತದೆ. ಇದು ಡಬಲ್‌ ಇಂಜಿನ್‌ ಸರ್ಕಾರದ ಲಾಭ ಎಂದರು.

ಸ್ವಾತಂತ್ರ್ಯದ ಇಷ್ಟು ವರ್ಷದ ನಂತರವೂ ಯಾರಾದರೂ ಹಿಂದೆ ಉಳಿದಿದ್ದರೆ ಅವರಿಗೂ ಯೋಜನೆಯನ್ನು ತಲುಪಿಸುತ್ತೇವೆ. ಇಲ್ಲಿನ ಧಾನ್ಯವು ದೇಶದ ಆಮದನ್ನು ಕಡಿಮೆ ಮಾಡಿದೆ. ಕೇಂದ್ರ ಸರ್ಕಾರವು ಶೇ.80ಹೆಚ್ಚಿನ ಧಾನ್ಯವನ್ನು ಕೇಂದ್ರ ಸರ್ಕಾರ ಖರೀದಿಸಿದೆ. ಹಿಂದಿನ ಸರ್ಕಾರಗಳು ಕೇಲವ ಕೆಲವು ನೂರಾರು ಕೋಟಿ ರೂ. ವೆಚ್ಚದಲ್ಲಿ ಖರೀದಿ ಮಾಡುತ್ತಿದ್ದರೆ ನಾವು ಸಾವಿರಾರು ಕೋಟಿ ರೂ. ಮೊತ್ತದಲ್ಲಿ ಖರೀದಿ ಮಾಡಿದ್ದೇವೆ. ಸಿರಿಧಾನ್ಯಗಳಿಗೆ ಒತ್ತು ನೀಡುತ್ತಿದ್ದೇವೆ. ಕರ್ನಾಟಕದಲ್ಲಿ ರಾಗಿ ಹಾಗೂ ಜೋಳದ ಉತ್ಪಾದನೆ ಹೆಚ್ಚಿದೆ. ಇದನ್ನು ವಿಶ್ವಾದ್ಯಂತ ಪ್ರಚಾರ ಮಾಡಲು ಡಬಲ್‌ ಇಂಜಿನ್‌ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲೂ ಕರ್ನಾಟಕದ ರೈತರು ಮುಂಚೂಣಿಯಲ್ಲಿ ನಿಲ್ಲುತ್ತದೆ ಎಂದರು.

ಇದನ್ನೂ ಓದಿ | Modi In Karnataka | ಯುಪಿಎ ಸರ್ಕಾರದಿಂದಾಗಿ ನೀರಾವರಿ ಯೋಜನೆ ಕರ್ನಾಟಕದ ಕೈತಪ್ಪಿತ್ತು: ಸಿಎಂ ಬೊಮ್ಮಾಯಿ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ವಿಸ್ತಾರ TOP 10 NEWS: ಕರ್ನಾಟಕದ ರಾಜಕೀಯ ಪಲ್ಸ್‌ನಿಂದ, ಸಿದ್ದುಗೆ ವರುಣ ಟೆನ್ಶನ್‌ವರೆಗಿನ ಪ್ರಮುಖ ಸುದ್ದಿಗಳಿವು

ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ದಿನದ ಪ್ರಮುಖ ಬೆಳವಣಿಗೆಗಳಲ್ಲಿ ಪ್ರಮುಖ ಸುದ್ದಿಗಳ ಗುಚ್ಛವೇವಿಸ್ತಾರ TOP 10 NEWS

VISTARANEWS.COM


on

Edited by

top 10 News
Koo

1. Pulse of Karnataka 2: ಹಳೆ ಮೈಸೂರು, ಕರಾವಳಿ, ಮಲೆನಾಡು, ಮಧ್ಯಕರ್ನಾಟಕದ ಜನರ ನಾಡಿ ಮಿಡಿತ
ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಮಾರ್ಚ್‌ ಮೊದಲ ವಾರದಲ್ಲಿ ಪ್ರಕಟವಾಗಿದ್ದ ಮೊದಲ ಆವೃತ್ತಿ ನಂತರ ಇದೀಗ ಪಲ್ಸ್ ಆಫ್ ಕರ್ನಾಟಕ ಎರಡನೇ ಆವೃತ್ತಿ ಪ್ರಸಾರ ಆರಂಭವಾಗಿದೆ. ಮೊದಲ ದಿನದಂದು ಹಳೆ ಮೈಸೂರು, ಕರಾವಳಿ, ಮಲೆನಾಡು, ಮಧ್ಯಕರ್ನಾಟಕದ ಜನರ ನಾಡಿ ಮಿಡಿತವನ್ನು ಪ್ರಕಟಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಎಲ್ಲ ಪ್ರದೇಶದ ಚಿತ್ರಣವನ್ನು ನೀಡಲಾಗುತ್ತದೆ.
Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?‌
Pulse of Karnataka 2: ಮಧ್ಯ ಕರ್ನಾಟಕ: ಸೀರೆ, ಮಿಕ್ಸಿ, ಕುಕ್ಕರ್‌ ನೀಡಿದರೆ ಮತಗಳು ಸಿಗುತ್ತವೆಯೇ?
Pulse of Karnataka 2: ಕರಾವಳಿ-ಮಲೆನಾಡು: ಬಿಜೆಪಿಗೆ ಮತ ಸೆಳೆಯಲು ಬಿ.ಎಸ್‌. ಯಡಿಯೂರಪ್ಪ ಎಷ್ಟು ಅನಿವಾರ್ಯ?

2. ಕೋಲಾರ ಬಳಿಕ ವರುಣದಲ್ಲೂ ಸಿದ್ದುಗೆ ಟೆನ್ಶನ್; ವಿಜಯೇಂದ್ರ ಕಣಕ್ಕಿಳಿಸಲು ಬಿಜೆಪಿ ಮಾಸ್ಟರ್​ ಪ್ಲ್ಯಾನ್?
ಬೆಂಗಳೂರು:
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರಿಗೆ ಕೋಲಾರ ಬಳಿಕ ಇದೀಗ ಸುರಕ್ಷಿತ ಎಂದು ಹೇಳಲಾದ ವರುಣದಲ್ಲೂ ಟೆನ್ಶನ್‌ ಶುರುವಾಗಿದೆ. ಇದಕ್ಕೆ ಕಾರಣ ಬಿಜೆಪಿ ಮಾಡಿಕೊಂಡಿದೆ ಎನ್ನಲಾದ ಮಾಸ್ಟರ್‌ ಪ್ಲ್ಯಾನ್‌. ಇಲ್ಲಿ ಬಿಜೆಪಿಯು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ತಂತ್ರ ಹೂಡಿದೆ ಎನ್ನಲಾಗಿದೆ. ಇದೇ ಸಂಕೇತವನ್ನು ಬಿಎಸ್‌ವೈ ಕೂಡಾ ನೀಡಿದ್ದಾರೆ.ವಿಜಯೇಂದ್ರ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ್ದು, ಈ ಬೆಳವಣಿಗೆಗೆ ಪುಷ್ಟಿ ನೀಡಿದೆ. ಪೂರ್ಣ ವರದಿಗೆ ಕ್ಲಿಕ್‌ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ವರದಿ : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್‌.ವೈ

3. ಕ್ರೈಸ್ತ, ಜೈನರಿಗೆ ಮೀಸಲಾತಿ ಮುಂದುವರಿಕೆ; ಮುಸ್ಲಿಮರು ಮಾತ್ರ ಹೊರಕ್ಕೆ: ವರ್ಗೀಕರಣದ ಕುರಿತು ಚರ್ಚೆ
ಎಸ್‌ಸಿಎಸ್‌ಟಿ ಸಮುದಾಯಕ್ಕೆ ಒಳಮೀಸಲಾತಿ ಹಂಚಿಕೆ ನಂತರ ಒಕ್ಕಲಿಗೆ ಹಾಗೂ ವೀರಶೈವ ಲಿಂಗಾಯತರ ಮೀಸಲಾತಿ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದರ ಕುರಿತು ಕೆಲವು ಜಿಜ್ಞಾಸೆಗಳು ಮೂಡಿವೆ. ಸಂವಿಧಾನಬಾಹಿರ ಎಂದು ಮುಸ್ಲಿಮರನ್ನು ಮೀಸಲಿನಿಂದ ಹೊರಗಿಟ್ಟ ಸರ್ಕಾರ, ಜೈನ್‌ ಹಾಗೂ ಕ್ರಿಶ್ಚಿಯನ್ನರನ್ನು ಹಾಗೆಯೇ ಉಳಿಸಿಕೊಂಡಿದೆ. ಸರ್ಕಾರದ ಈ ಸರ್ಕಸ್‌ ಭಾರಿ ಚರ್ಚೆಗೆ ಕಾರಣವಾಗಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ
ಪೂರಕ ವರದಿ : ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಯಡಿಯೂರಪ್ಪ

4.ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ಆಂತರಿಕ ಚುನಾವಣೆ
ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಇತಿಹಾಸದಲ್ಲೆ ಮೊಟ್ಟ ಮೊದಲ ಬಾರಿಗೆ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾರ್ಯಕರ್ತರ ಆಂತರಿಕ ಚುನಾವಣೆಯನ್ನು ಶುಕ್ರವಾರ ರಾಜ್ಯಾದ್ಯಂತ ನಡೆಸಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಚುನಾವಣಾ ಅಕ್ರಮ: ತುಮಕೂರು ಗ್ರಾಮಾಂತರ ಜೆಡಿಸ್‌ ಶಾಸಕ ಗೌರಿಶಂಕರ್‌ ಶಾಸಕತ್ವದಿಂದ ಅನರ್ಹ
ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಜಾತ್ಯತೀತ ಜನತಾದಳಕ್ಕೆ ತೀವ್ರ ಹಿನ್ನಡೆಯಾಗಿದೆ. ತುಮಕೂರು ಗ್ರಾಮಾಂತರದ ಜೆಡಿಎಸ್‌ ಶಾಸಕ ಗೌರಿಶಂಕರ್‌ ಅವರನ್ನು ರಾಜ್ಯ ಹೈಕೋರ್ಟ್‌ ಶಾಸಕತ್ವದಿಂದ ಅನರ್ಹಗೊಳಿಸಿದೆ. ಆದರೆ, ಈ ಆದೇಶ ಈ ಅವಧಿಗೆ ಮಾತ್ರ ಸೀಮಿತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಹಿಂದಿ ಹೇರಿಕೆ ವಿರೋಧಕ್ಕೆ ಮಣಿದ ಕೇಂದ್ರ, ಮೊಸರು ಪ್ಯಾಕೆಟ್‌ನಲ್ಲಿ ‘ದಹಿ’ ಎಂಬ ಮುದ್ರಣ ಆದೇಶ ವಾಪಸ್
ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಯತ್ನಕ್ಕೆ ಕರ್ನಾಟಕ ಹಾಗೂ ತಮಿಳುನಾಡು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೊಸರಿನ ಮೇಲೆ ಹಿಂದಿಯ ದಹಿ (Dahi Row) ಎಂಬುದಾಗಿ ಮುದ್ರಿಸಬೇಕು ಎಂಬ ಆದೇಶವನ್ನು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ(FSSAI)ವು ಹಿಂಪಡೆದಿದೆ. ಆ ಮೂಲಕ ಕರ್ನಾಟಕ ಹಾಗೂ ತಮಿಳುನಾಡು ಸೇರಿ ಹಲವೆಡೆ ವ್ಯಕ್ತವಾದ ವಿರೋಧಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಮೋದಿ ಓಡಿಸಿ, ದೇಶ ಉಳಿಸಿ ಬಳಿಕ ದೇಶಾದ್ಯಂತ ಆಪ್‌ನಿಂದ ಪೋಸ್ಟರ್ ಕ್ಯಾಂಪೇನ್ ಶುರು!
ನವದೆಹಲಿ: ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಅಭಿಯಾನದ ಬಳಿಕ ಆಮ್ ಆದ್ಮಿ ಪಾರ್ಟಿ, ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಪೋಸ್ಟರ್ ಕ್ಯಾಂಪೇನ್ ಗುರುವಾರ ಆರಂಭಿಸಿದೆ. ಒಟ್ಟು 11 ಭಾಷೆಗಳಲ್ಲಿ ದೇಶಾದ್ಯಂತ ಮೋದಿ ವಿರೋಧಿ ಪೋಸ್ಟರ್‌ಗಳನ್ನು ಪ್ರದರ್ಶಿಸಿದೆ. ಈ ಹಿಂದೆ, ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಪೋಸ್ಟರ್‌ಗಳನ್ನು ದಿಲ್ಲಿಯ ಬೀದಿಗಳಲ್ಲಿ ಅಂಟಿಸಲಾಗಿತ್ತು. ಈ ಸಂಬಂಧ ದಿಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ನೂರು ಎಫ್ಐಆರ್‌ಗಳನ್ನು ದಾಖಲಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. IPL 2023: ಆರ್​ಸಿಬಿಗೆ ಆಘಾತ; ಮೊದಲ ಪಂದ್ಯಕ್ಕೆ ಸ್ಟಾರ್​ ಆಟಗಾರರು ಅಲಭ್ಯ
ಕಳೆದ 15 ಆವೃತ್ತಿಯ ಐಪಿಎಲ್​ನಲ್ಲಿ ಈ ಸಲ ಕಪ್ ನಮ್ದೇ ಎಂದು ಹೇಳುತ್ತಲೇ ಬಂದಿರುವ ಆರ್​ಸಿಬಿ ಒಂದು ಬಾರಿಯೂ ಕಪ್​ ಗೆಲ್ಲುವಲ್ಲಿ ಯಶಸ್ಸು ಕಂಡಿಲ್ಲ. ಈ ಬಾರಿಯಾದರೂ ಕಪ್​ ಗೆಲ್ಲಬೇಕೆಂದಿದ್ದ ಆರ್​ಸಿಬಿಗೆ ಗಾಯದ ಸಮಸ್ಯೆಯೊಂದು ಅಡ್ಡಿಯಾದಂತೆ ತೋರುತ್ತಿದೆ. ಆರ್​ಸಿಬಿ ತನ್ನ ಐಪಿಎಲ್​ ಅಭಿಯಾನವನ್ನು ಏಪ್ರಿಲ್​ 2 ರಂದು ಮುಂಬೈ ಇಂಡಿಯನ್ಸ್​ ವಿರುದ್ಧ ಕಣಕ್ಕಿಳಿಯುವ ಮೂಲಕ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಸ್ಟಾರ್​ ಆಟಗಾರರಿಬ್ಬರು ಅಲಭ್ಯರಾಗಲಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿವೆ. ಪೂರ್ಣ ವರದಿಗೆ ಲಿಂಕ್‌ ಕ್ಲಿಕ್‌ ಮಾಡಿ

9. Import duty exemption : ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧಗಳ ದರ ಇಳಿಕೆ
ಕೇಂದ್ರ ಸರ್ಕಾರವು ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧ ಹಾಗೂ ಆಹಾರಗಳ ದರ ಇಳಿಕೆಗೆ ಪೂರಕವಾಗಿ, ಅವುಗಳಿಗೆ ಆಮದು ಸುಂಕದಿಂದ ವಿನಾಯಿತಿ (Import duty exemption) ನೀಡಿದೆ. ಏಪ್ರಿಲ್‌ 1ರಿಂದ ಈ ಆಮದು ಸುಂಕ ವಿನಾಯಿತಿ ಅನ್ವಯವಾಗಲಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

10. ‘ಲೋಕವನ್ನೇ ಗೆದ್ದವನೆ’; ಮೋದಿ ಭಾವಚಿತ್ರಕ್ಕೆ ಮುತ್ತು ಕೊಟ್ಟ ಕರ್ನಾಟಕದ ರೈತ, ವಿಡಿಯೊ ವೈರಲ್
‌ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದರೂ, ಬೆಲೆಯೇರಿಕೆ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದರೂ, ಪ್ರಧಾನಿ ಮೋದಿ ಅವರ ಮೇಲೆ ಜನರಿಗಿರುವ ಪ್ರೀತಿ, ಬೆಂಬಲದಲ್ಲಿ ಮಾತ್ರ ಕಡಿಮೆಯಾಗಿಲ್ಲ. ದೇಶದ ಯಾವುದೇ ಮೂಲೆಗೆ ಹೋದರೂ ನರೇಂದ್ರ ಮೋದಿ ಅವರಿಗೆ ಜನ ಭಾರಿ ಬೆಂಬಲ ವ್ಯಕ್ತಪಡಿಸುತ್ತಾರೆ. ಗಂಟೆಗಟ್ಟಲೆ ನಿಂತು, ಜನರ ಗದ್ದಲದ ಮಧ್ಯೆಯೂ ಮೋದಿ ಅವರನ್ನು ಕಣ್ತುಂಬಿಕೊಳ್ಳುತ್ತಾರೆ. ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ ಕರ್ನಾಟಕದ ರೈತರೊಬ್ಬರು ಬಸ್‌ ಮೇಲಿರುವ ಮೋದಿ ಅವರ ಭಾವಚಿತ್ರಕ್ಕೆ ಮುತ್ತು ಕೊಟ್ಟಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇನ್ನಷ್ಟು ಪ್ರಮುಖ ಸುದ್ದಿಗಳು

  1. Indore Temple Tragedy: ಇಂದೋರ್‌ ದೇಗುಲದಲ್ಲಿ ಮೆಟ್ಟಿಲುಬಾವಿ ಕುಸಿದು 13 ಜನ ಸಾವು; ಮೋದಿ ಸಂತಾಪ
  2. World Master Athletics: 95ನೇ ವಯಸ್ಸಿನಲ್ಲಿ ಮೂರು ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಗವಾನಿ ದೇವಿ
  3. ವಿಧಾನಸಭೆಯಲ್ಲಿ ಕುಳಿತು ಬ್ಲ್ಯೂ ಫಿಲಂ ವೀಕ್ಷಿಸಿದ ತ್ರಿಪುರಾ ಬಿಜೆಪಿ ಶಾಸಕ, ಉಗಿದು ಉಪ್ಪಿನಕಾಯಿ ಹಾಕಿದ ಜನ
  4. ಧವಳ ಧಾರಿಣಿ ಅಂಕಣ: ರಾಮನೆನ್ನುವ ನಿತ್ಯ ಆದರ್ಶ
  5. ರಾಜ ಮಾರ್ಗ ಅಂಕಣ : ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ ಭಾಗ-6, ನಿಮ್ಮದೂ ಒಂದು ಯಶೋಗಾಥೆ ಯಾಕಾಗಬಾರದು?
Continue Reading

ಕರ್ನಾಟಕ

Pulse of Karnataka 2: ಕರಾವಳಿ-ಮಲೆನಾಡು: ಬಿಜೆಪಿಗೆ ಮತ ಸೆಳೆಯಲು ಬಿ.ಎಸ್‌. ಯಡಿಯೂರಪ್ಪ ಎಷ್ಟು ಅನಿವಾರ್ಯ?

2018 ರಲ್ಲಿ ಬಿಜೆಪಿ -24 , ಕಾಂಗ್ರೆಸ್ -3 ಸ್ಥಾನ ಗಳಿಸಿತ್ತು. 27ರಲ್ಲಿ 24 ಅಂದರೆ ಸರಿಸುಮಾರು ಶೇ.90 ಸ್ಥಾನಗಳಲ್ಲಿ ಬಿಜೆಪಿ ಜಯಿಸಿ, ಸರಳ ಬಹುಮತಕ್ಕೆ ಹತ್ತಿರವಾಗಲು ಬಹುದೊಡ್ಡ ಕಾಣಿಕೆ ನೀಡಿತ್ತು.

VISTARANEWS.COM


on

Edited by

pulse of karnataka vistara akhada survey Malenadu and coastal karnataka
Koo

ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಚುನಾವಣಾ ಪರ್ವಕಾಲ. ಸದ್ಯ ಜನರ ಒಲವು ಯಾವ ಪಕ್ಷದ ಕಡೆಗಿದೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ.? ವಲಯವಾರು ಯಾವ ರಿಸಲ್ಟ್ ಬರಬಹುದು.? ಹೀಗೆ ಒಟ್ಟು 12 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತ ಅರಿಯೋ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಮಾರ್ಚ್‌ ಮೊದಲ ವಾರದಲ್ಲಿ ಪ್ರಕಟವಾಗಿದ್ದ ಪಲ್ಸ್‌ ಆಫ್‌ ಕರ್ನಾಟಕ ಸಮೀಕ್ಷೆಯ ನಂತರ ಇದೀಗ ಎರಡನೇ ಆವೃತ್ತಿ ಸಮೀಕ್ಷೆ ನಡೆದಿದೆ.

ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ.

ಪಲ್ಸ್ ಆಫ್ ಕರ್ನಾಟಕ ಸರ್ವೇಯಲ್ಲಿ ವಿಸ್ತಾರ ನ್ಯೂಸ್​ನ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಉದ್ಯಮಿಗಳು, ಸರ್ಕಾರಿ ನೌಕರರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲಾ ವರ್ಗ, ಸಮುದಾಯದ ಜನರನ್ನ ಮಾತನಾಡಿಸಿ ಸಮೀಕ್ಷೆ ನಡೆಸಲಾಗಿದೆ.

ಇದೀಗ ಕರಾವಳಿ ಹಾಗೂ ಮಲೆನಾಡು ಕರ್ನಾಟಕ ಭಾಗದ ಜನರ ನಾಡಿ ಮಿಡಿತವನ್ನು ಪ್ರಸ್ತುತಪಡಿಸಲಾಗುತ್ತಿದೆ.

ಇದನ್ನೂ ಓದಿ: Pulse of Karnataka 2: ಮಧ್ಯ ಕರ್ನಾಟಕ: ಸೀರೆ, ಮಿಕ್ಸಿ, ಕುಕ್ಕರ್‌ ನೀಡಿದರೆ ಮತಗಳು ಸಿಗುತ್ತವೆಯೇ?

Continue Reading

ಕರ್ನಾಟಕ

Pulse of Karnataka 2: ಮಧ್ಯ ಕರ್ನಾಟಕ: ಸೀರೆ, ಮಿಕ್ಸಿ, ಕುಕ್ಕರ್‌ ನೀಡಿದರೆ ಮತಗಳು ಸಿಗುತ್ತವೆಯೇ?

2018 ರಲ್ಲಿ ಜಿಜೆಪಿ – 19, ಕಾಂಗ್ರೆಸ್ -07, ಜೆಡಿಎಸ್ -4 ಸ್ಥಾನಗಳಲ್ಲಿ ಜಯಗಳಿಸಿತ್ತು. ಶಿರಾ ಶಾಸಕ ಸತ್ಯನಾರಾಯಣ ಅಕಾಲಿಕ ಮರಣದ ಕಾರಣ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ರಾಜೇಶ್ ಗೌಡ ಗೆಲುವು ಸಾಧಿಸಿದ ಪರಿಣಾಮ ಬಿಜೆಪಿ ಸಂಖ್ಯೆ 20ಕ್ಕೆ ಏರಿಕೆ, ಜೆಡಿಎಸ್ ಸಂಖ್ಯೆ 03ಕ್ಕೆ ಇಳಿಕೆಯಾಗಿದೆ.

VISTARANEWS.COM


on

Edited by

pulse of karnataka vistara Akhada election Survey Mid Karnataka
Koo

ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಚುನಾವಣಾ ಪರ್ವಕಾಲ. ಸದ್ಯ ಜನರ ಒಲವು ಯಾವ ಪಕ್ಷದ ಕಡೆಗಿದೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ.? ವಲಯವಾರು ಯಾವ ರಿಸಲ್ಟ್ ಬರಬಹುದು.? ಹೀಗೆ ಒಟ್ಟು 12 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತ ಅರಿಯೋ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಮಾರ್ಚ್‌ ಮೊದಲ ವಾರದಲ್ಲಿ ಪ್ರಕಟವಾಗಿದ್ದ ಪಲ್ಸ್‌ ಆಫ್‌ ಕರ್ನಾಟಕ ಸಮೀಕ್ಷೆಯ ನಂತರ ಇದೀಗ ಎರಡನೇ ಆವೃತ್ತಿ ಸಮೀಕ್ಷೆ ನಡೆದಿದೆ.

ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ.

ಪಲ್ಸ್ ಆಫ್ ಕರ್ನಾಟಕ ಸರ್ವೇಯಲ್ಲಿ ವಿಸ್ತಾರ ನ್ಯೂಸ್​ನ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಉದ್ಯಮಿಗಳು, ಸರ್ಕಾರಿ ನೌಕರರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲಾ ವರ್ಗ, ಸಮುದಾಯದ ಜನರನ್ನ ಮಾತನಾಡಿಸಿ ಸಮೀಕ್ಷೆ ನಡೆಸಲಾಗಿದೆ.

ಇದೀಗ ಮಧ್ಯ ಕರ್ನಾಟಕ ಭಾಗದ ಜನರ ನಾಡಿ ಮಿಡಿತವನ್ನು ಪ್ರಸ್ತುತಪಡಿಸಲಾಗುತ್ತಿದೆ. ಈ ಭಾಗದಲ್ಲಿ ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳನ್ನ ತೆಗೆದುಕೊಳ್ಳಲಾಗಿದೆ

ಇದನ್ನೂ ಓದಿ: Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?‌

Continue Reading

ಕರ್ನಾಟಕ

Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?‌

ಹಳೆ ಮೈಸೂರು ಪ್ರಾಂತ್ಯ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಈ ಭಾಗದಲ್ಲಿ ಒಟ್ಟು 44 ವಿಧಾನಸಭಾ ಕ್ಷೇತ್ರಗಳಿವೆ. 2018ರಲ್ಲಿ ಜಿಜೆಪಿ – 05, ಕಾಂಗ್ರೆಸ್ -15, ಜೆಡಿಎಸ್ -22, ಇತರೆ -2 ಸ್ಥಾನ ಗೆಲ್ಲಲಾಗಿತ್ತು. ನಂತರ ಉಪಚುನಾವಣೆಯಲ್ಲಿ ಬಿಜೆಪಿ ಸಂಖ್ಯೆ ಹೆಚ್ಚಳವಾಗಿತ್ತು.

VISTARANEWS.COM


on

Edited by

pulse of karnataka vistara akhada survey Old Mysuru Region of Karnataka
Koo

ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಚುನಾವಣಾ ಪರ್ವಕಾಲ. ಸದ್ಯ ಜನರ ಒಲವು ಯಾವ ಪಕ್ಷದ ಕಡೆಗಿದೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ.? ವಲಯವಾರು ಯಾವ ರಿಸಲ್ಟ್ ಬರಬಹುದು.? ಹೀಗೆ ಒಟ್ಟು 12 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತ ಅರಿಯೋ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಮಾರ್ಚ್‌ ಮೊದಲ ವಾರದಲ್ಲಿ ಪ್ರಕಟವಾಗಿದ್ದ ಪಲ್ಸ್‌ ಆಫ್‌ ಕರ್ನಾಟಕ ಸಮೀಕ್ಷೆಯ ನಂತರ ಇದೀಗ ಎರಡನೇ ಆವೃತ್ತಿ ಸಮೀಕ್ಷೆ ನಡೆದಿದೆ.

ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ.

ಪಲ್ಸ್ ಆಫ್ ಕರ್ನಾಟಕ ಸರ್ವೇಯಲ್ಲಿ ವಿಸ್ತಾರ ನ್ಯೂಸ್​ನ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಉದ್ಯಮಿಗಳು, ಸರ್ಕಾರಿ ನೌಕರರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲಾ ವರ್ಗ, ಸಮುದಾಯದ ಜನರನ್ನ ಮಾತನಾಡಿಸಿ ಸಮೀಕ್ಷೆ ನಡೆಸಲಾಗಿದೆ.

ಮೊದಲ ಹಂತದಲ್ಲಿ ಹಳೆ ಮೈಸೂರು ಭಾಗದ ಜನರ ಪಲ್ಸ್ ಹೇಗಿದೆ ಎನ್ನುವುದನ್ನು ಪ್ರಸ್ತುತಪಡಿಸುತ್ತಿದ್ದೇವೆ. ಹಳೆ ಮೈಸೂರು ಭಾಗದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?‌

Continue Reading
Advertisement
Man commits suicide after wife commits suicide in Srirangapatna
ಕರ್ನಾಟಕ2 hours ago

Suicide Case: ಕೌಟುಂಬಿಕ ಕಲಹ; ಪತ್ನಿ ಆತ್ಮಹತ್ಯೆ ಕಂಡು ಪತಿಯೂ ನೇಣಿಗೆ ಶರಣು

Amid wedding rumours, AAP MP Raghav Chadha picks up Parineeti Chopra from Delhi airport
ದೇಶ2 hours ago

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Do you know how much marks Virat Kohli got in iron pea maths?
ಕ್ರಿಕೆಟ್2 hours ago

Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ?

Manmohan Lalwani says Solar powered system best tool to cross digital gap
ಕರ್ನಾಟಕ2 hours ago

SELCO India: ಡಿಜಿಟಲ್ ಕಂದಕ ದಾಟಲು ಸೌರಚಾಲಿತ ವ್ಯವಸ್ಥೆ ಅತ್ಯುತ್ತಮ ಸಾಧನ: ಮನಮೋಹನ್ ಲಾಲ್ವಾನಿ

Four farmers seriously injured in lathi charge by forest department personnel
ಕರ್ನಾಟಕ2 hours ago

Tumkur News: ಒತ್ತುವರಿ ತೆರವಿಗೆ ಆಕ್ಷೇಪಿಸಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ ಅರಣ್ಯ ಸಿಬ್ಬಂದಿ; 4 ರೈತರಿಗೆ ಗಂಭೀರ ಗಾಯ

Bengaluru company to gift ChatGPT Plus subscription to employees after seeing rise in productivity
ಕರ್ನಾಟಕ2 hours ago

ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

No prejudice about Hindi, such imposition is not worth it
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು

Google Layoffs: Some employees may get up to Rs 2.60 crore in severance pay
ದೇಶ3 hours ago

Google Layoffs: ಗೂಗಲ್‌ನಿಂದ ವಜಾಗೊಂಡ ನೌಕರರಿಗೆ ಸಿಗಲಿದೆ 2.6 ಕೋಟಿ ರೂ., ಇವರಿಗೆ ಬೇರೆ ನೌಕರಿಯೇ ಬೇಕಿಲ್ಲ

Former bowler of Rajasthan Royals who joined Chennai Super Kings
ಕ್ರಿಕೆಟ್3 hours ago

IPL 2023 : ಚೆನ್ನೈ ಸೂಪರ್​ ಕಿಂಗ್ಸ್​ ಬಳಗ ಸೇರಿದ ರಾಜಸ್ಥಾನ್​ ರಾಯಲ್ಸ್​ನ ಮಾಜಿ ಬೌಲರ್​

ಕರ್ನಾಟಕ4 hours ago

Prof. Madhav Kulkarni: ಖ್ಯಾತ ಲೇಖಕ, ವಿಮರ್ಶಕ ಪ್ರೊ. ಮಾಧವ ಕುಲಕರ್ಣಿ ಇನ್ನಿಲ್ಲ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ8 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ14 hours ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ3 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 weeks ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

ಟ್ರೆಂಡಿಂಗ್‌

error: Content is protected !!