Yadgiri News: ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಉಪಯುಕ್ತ : ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು - Vistara News

ಯಾದಗಿರಿ

Yadgiri News: ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಉಪಯುಕ್ತ : ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

Yadgiri News: ಯಾದಗಿರಿ ನಗರದ ಶಾಸಕರ ಕಚೇರಿ ಆವರಣದಲ್ಲಿ ತಾಲೂಕಾ ಆಡಳಿತ, ಶಿಶು ಅಭಿವೃದ್ಧಿ ಯೋಜನೆಯ, ಪೋಷಣ್ ಅಭಿಯಾನ ಯೋಜನೆಯಡಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ ಮಾಡಿದರು.

VISTARANEWS.COM


on

Anganwadi workers should make good use of mobile phones says MLA Channareddy Patil Thunnur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಪೋಷಣ್‌ ಅಭಿಯಾನದಡಿ ಸ್ಮಾರ್ಟ್ ಫೋನ್‌ಗಳನ್ನು ವಿತರಣೆ ಮಾಡುತ್ತಿದ್ದು, ಕಾರ್ಯಕರ್ತೆಯರು ಮೊಬೈಲ್ ಸದುಪಯೋಗ ಪಡಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ಒದಗಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು (Yadgiri News) ತಿಳಿಸಿದರು.

ನಗರದ ಶಾಸಕರ ಕಚೇರಿ ಆವರಣದಲ್ಲಿ ತಾಲೂಕಾ ಆಡಳಿತ, ಶಿಶು ಅಭಿವೃದ್ಧಿ ಯೋಜನೆಯ, ಪೋಷಣ್ ಅಭಿಯಾನ ಯೋಜನೆಯಡಿ ಹಮ್ಮಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ ಕಾರ್ಯಕ್ರಮದಲ್ಲಿ ಮೊಬೈಲ್ ವಿತರಣೆ ಮಾಡಿ ಅವರು ಮಾತನಾಡಿದರು.

ಇದನ್ನೂ ಓದಿ: Retirement Planning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

ಡಿಜಿಟಲ್ ತಂತ್ರಜ್ಞಾನ ಬಹಳಷ್ಟು ಮುಂದುವರೆದಿದೆ. ಬೆರಳು ತುದಿಯಡಿ ಎಲ್ಲಾ ಮಾಹಿತಿ ಪಡೆಯಲು ಮೊಬೈಲ್‌ಗಳ ಸಹಾಯವಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳಿಗೆ, ಬಾಣಂತಿ ಹಾಗೂ ಗರ್ಭಿಣಿಯರಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಕರ್ತರು ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದರು.

ಮೊಬೈಲ್‌ನಿಂದ ಮಕ್ಕಳ ಹಾಜರಾತಿ, ಆಹಾರ ವಿತರಣೆ, ಮಕ್ಕಳ ಬೆಳವಣಿಗೆ ಮಾಹಿತಿ, ಫಲಾನುಭವಿಗಳ ಮನೆ ಭೇಟಿ ವಿವರ, ಅಂಗನವಾಡಿ ಕೇಂದ್ರದ ದೈನಂದಿನ ಚಟುವಟಿಕೆ, ಲಸಿಕೆ ಹಾಗೂ ಇತರೆ ಕಾರ್ಯಕ್ರಮ ಬಗ್ಗೆ ಶೀಘ್ರವಾಗಿ ಮಾಹಿತಿ ಪಡೆಯಬಹುದಾಗಿದೆ ಎಂದರು.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಈ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ವನಜಾಕ್ಷಿ, ಮಲ್ಲಿಕಾರ್ಜುನ ಈಟೆ, ಉಷಾ ಬಳಗಾನೋರ್, ಮಲ್ಲಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Rain Effect : ರಾಜ್ಯಾದ್ಯಂತ ಮುಂಗಾರು ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ನಾಳೆ ಮಂಗಳವಾರವೂ (Heavy rain) ಭಾರಿ ಮಳೆಯಾಗಲಿದ್ದು, ಉಡುಪಿಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Karnataka Weather Forecast) ಮಾಡಲಾಗಿದೆ.

VISTARANEWS.COM


on

By

Rain Effect
Koo

ಮಹಾರಾಷ್ಟ್ರ/ಬೆಳಗಾವಿ: ಮಹಾರಾಷ್ಟ್ರದ‌ ಬುಲಡಾನ್ ಪ್ರದೇಶದಲ್ಲಿ ನಿರಂತರ ಮಳೆಯಿಂದ (Karnataka Rain) ಪ್ರವಾಸವೇ ಸೃಷ್ಟಿಯಾಗಿದೆ. ಉಕ್ಕಿ ಹರಿಯುವ ನೀರಲ್ಲಿ ಪಾನ್‌ ಶಾಪ್‌ ಹಾಗೂ ಕಾರು ಎರಡು ಕೊಚ್ಚಿ (Rain Effect) ಹೋಗಿವೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ಬೆಳಗಾವಿಯ ಗಡಿಯಲ್ಲಿ ಮಳೆಯಿಂದಾಗಿ ಪ್ರವಾಸಿಗರು ಪರದಾಟ ಅನುಭವಿಸಿದರು. ಚಂದಗಡ್ ತಾಲೂಕಿನ ತಿಲಾರಿ ಮತ್ತು ಪಾಟ್ನೆಪಾಟಾದಲ್ಲಿ ಹಿರಣ್ಯಕೇಶಿ ನದಿ ನೀರು ಏಕಾಏಕಿ ರಸ್ತೆಗೆ ಹರಿದು ಬಂದಿತ್ತು. ಪರಿಣಾಮ ಸೇತುವೆ ಮೇಲೆ ಮೂರು ಅಡಿಯಷ್ಟು ನೀರು ಹರಿದು ತಿಲಾರಿ ಬೆಳಗಾವಿ ಸಂಪರ್ಕಿಸುವ ರಸ್ತೆಯು ಹೊಳೆಯಂತಾಗಿ ಮಾರ್ಪಟ್ಟಿತ್ತು. ಕೆಲ ಪ್ರವಾಸಿಗರು ಎರಡ್ಮೂರು ಅಡಿ ನಿಂತ ನೀರಲ್ಲೇ ಕಾರು ಚಲಾಯಿಸಿಕೊಂಡು ಹೊರ ಬಂದರು. ನೀರಲ್ಲಿ ಬೈಕ್‌ ಚಲಾಯಿಸಲು ಆಗದೆ ಬೈಕ್‌ಗಳನ್ನು ತಳ್ಳಿಕೊಂಡು ಬಂದರು.

ಬೆಂಗಳೂರಿನಲ್ಲೂ ಅಬ್ಬರಿಸಿದ ಮಳೆ

ಜು.8ರ ಸಂಜೆ ರಾಜ್ಯದ ವಿವಿಧೆಡೆ ಮಳೆಯು ಆರ್ಭಟಿಸಿದೆ. ಬೆಂಗಳೂರಿನ ಮಲ್ಲೇಶ್ವರಂ, ಶಿವಾನಂದ, ಮೆಜೆಸ್ಟಿಕ್ ಹಾಗೂ ವಿಧಾನಸೌಧ, ಶಿವಾಜಿನಗರ ಸೇರಿದಂತೆ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ಇತ್ತ ವಿಜಯನಗರ ಜಿಲ್ಲೆಯಲ್ಲಿ ದಿಢೀರ್ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿತ್ತು. ವಿಜಯನಗರದ ಹೊಸಪೇಟೆಯಲ್ಲಿ ಬಿರುಗಾಳಿ ಸಹಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿತ್ತು. ದಿಢೀರ್ ಸುರಿದ ಭಾರೀ ಮಳೆಗೆ ರಸ್ತೆ ಇಕ್ಕೆಲಗಳಲ್ಲೆಲ್ಲ ನೀರು ತುಂಬಿ ಹರಿದಿತ್ತು. ಏಕಾಏಕಿ ಸುರಿದ ಮಳೆಗೆ ರಸ್ತೆ, ಚರಂಡಿಗಳು ತುಂಬಿ ಹರಿದಿತ್ತು.

ನಿರಂತರ ಮಳೆಗೆ ಉರುಳಿ ಬಿದ್ದ ಮರ; ಕಾರು ಜಖಂ

ನಿರಂತರ ಮಳೆಯಿಂದ ಬೃಹತ್‌ ಮರವೊಂದು ಬುಡಸಮೇತ ಉರುಳಿ ಕಾರಿನ ಮೇಲೆ ಬಿದ್ದಿದೆ. ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ಮುಂಭಾಗದಲ್ಲಿ ಘಟನೆ ನಡೆದಿದೆ. ದಿಲೀಪ ಪವಾರ್ ಎಂಬುವವರಿಗೆ ಸೇರಿದ ಕಾರು ಸಂಪೂರ್ಣ ಜಖಂಗೊಂಡಿದೆ. ಆಸ್ಪತ್ರೆಯಲ್ಲಿದ್ದ ರೋಗಿಯ ಭೇಟಿಗೆ ಬಂದಿದ್ದ ದಿಲೀಪ್ ಪವಾರ್, ಆಸ್ಪತ್ರೆಯ ಮುಂದೆ‌ ಕಾರು ಪಾರ್ಕ್ ಮಾಡಿದ್ದರು. ಈ ವೇಳೆ ಮರ ಬಿದ್ದಿದೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ದಾವಣಗೆರೆಯಲ್ಲಿ ಕೆಸರು ಗದ್ದೆಯಾದ ಶಾಲಾ ಆವರಣ

ಸತತ ಮಳೆಯಿಂದ ಶಾಲಾ ಆವರಣವು ಕೆಸರು ಗದ್ದೆಯಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ನೀಲಕಂಠ ನಗರದಲ್ಲಿ ಘಟನೆ ನಡೆದಿದೆ. ಒಂದನೇ ತರಗತಿ ರಿಂದ ಏಳನೇ ತರಗತಿ ವರೆಗೆ ಶಾಲೆಗೆ ಹೋಗುವ ಮಕ್ಕಳು ಪರದಾಟ ಅನುಭವಿಸುತ್ತಿದ್ದಾರೆ.

ಶಾಲಾ ಆವರಣದಲ್ಲಿ ಮಳೆ ನೀರು ಹೊರ ಹೋಗದೆ ನಿಂತಲ್ಲೇ ನಿಲ್ಲುವಂತಾಗಿದೆ. ಇದರಿಂದಾಗಿ ಮಕ್ಕಳು ಶಾಲೆ ಒಳಗೆ ಹೋಗಲು ಪರದಾಟ ಅನುಭವಿಸುವಂತಾಗಿದೆ. ಮಳೆ ಬಂದರೆ ಸಾಕು ಮಕ್ಕಳು ಶಾಲೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಆವರಣವೆಲ್ಲವೂ ಕೆಸರು ಗದ್ದೆಯಾಗಿದೆ.

ಕೊಡಗಿನ ನದಿ ತಟ್ಟದ ನಿವಾಸಿಗಳಿಗೆ ಎಚ್ಚರಿಕೆ

ಹಾರಂಗಿ ಜಲಾನಯ ಪ್ರದೇಶದಲ್ಲಿ ಮಳೆ ಮುಂದುವರಿದ್ದು, ಒಳಹರಿವು ಪ್ರಮಾಣ ಹೆಚ್ಚಳಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಹರಿಸಲು ಸಿದ್ಧತೆ ನಡೆದಿದ್ದು, ನದಿ ತಟ್ಟದ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚನೆ‌ ನೀಡಲಾಗಿದೆ. 1000 ಕ್ಯೂಸೆಕ್ಸ್ ನೀರು ನದಿಗೆ ಹರಿಸಲು ಚಿಂತನೆ ನಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಾವೇರಿ ನೀರಾವರಿ ನಿಗಮ ಆದೇಶ ಹೊರಡಿಸಿದೆ.

ಜು.9ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಎಲ್ಲಾ ತಾಲೂಕಿನ ಶಾಲಾ-ಕಾಲೇಜಿಗೆ ಜು.9 ರಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ, ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದ್ದು, ಹಾಸನದಲ್ಲಿ ಕಾರೊಂದರ ಮೇಲೆ ಬೃಹತ್‌ ಗಾತ್ರ ಮರ ಬಿದ್ದು ಜಖಂಗೊಂಡರೆ, ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ. ಚಿಕ್ಕೋಡಿಯಲ್ಲಿ ಬಾಬಾ ದರ್ಗಾ ಜಲಾವೃತಗೊಂಡಿದೆ.

VISTARANEWS.COM


on

By

Karnataka Rain Effect
Koo

ಹಾಸನ: ಭಾರಿ ಮಳೆ-ಗಾಳಿಗೆ (Karnataka Rain Effect) ಬೃಹತ್ ಗಾತ್ರದ ಮರವೊಂದು (Tree fall) ಧರೆಗುರುಳಿದೆ. ಬಿದ್ದ ರಭಸಕ್ಕೆ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಹಾಸನದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ರಾಕೇಶ್ ಎಂಬುವವರು ತಮ್ಮ ಕಾರನ್ನು ಮರದ ಕೆಳಗೆ ನಿಲ್ಲಿಸಿದ್ದರು.

karnataka rain effect

ನೋಡನೋಡುತ್ತಿದ್ದಂತೆ ಮರವು ಕಾರಿನ ಮೇಲೆ ಬಿದ್ದು ಪೂರ್ತಿ ಜಖಂಗೊಂಡಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇಲ್ಲದೆ ಇರುವುದರಿಂದ ಅನಾಹುತವೊಂದು ತಪ್ಪಿದೆ. ಸ್ಥಳಕ್ಕೆ ನಗರಸಭೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆಗೆ ಅಡ್ಡಲಾಗಿ, ಕಾರಿನ ಮೇಲೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಇತ್ತ ಕೊಪ್ಪಳದಲ್ಲಿ ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ, ಸೋಮವಾರ ಮಧ್ಯಾಹ್ನದ ಸುಮಾರು ಅರ್ಧಗಂಟೆಗೂ ಹೆಚ್ಚು ಸಮಯ ಅಬ್ಬರಿಸಿದ್ದ.

ದೇವಸ್ಥಾನ ತಡೆಗೋಡೆ ಕುಸಿತ

ಮಂಗಳೂರಿನಲ್ಲಿ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ನಿರಂತರ ಮಳೆಗೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ತಡೆಗೋಡೆ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಬಿದ್ದಿದೆ.

ಭಾರೀ ಗಾಳಿ ಮತ್ತು ಮಳೆಗೆ ತೆಂಗಿನ ಗಿಡದ ಬುಡದ ಮಣ್ಣು ಸಡಿಲಗೊಂಡಿದೆ. ಪರಿಣಾಮ ಕೆಂಪು ಕಲ್ಲಿನ ಐದಾರು ಅಡಿ ಎತ್ತರದ ತಡೆಗೋಡೆ ಕುಸಿದಿದೆ. ಪರಿಣಾಮ ವಿದ್ಯುತ್ ಕಂಬ, ಬಾವಿ ಹಾಗೂ ದೇವಸ್ಥಾನದ ಪಾರ್ಕಿಂಗ್ ಜಾಗಕ್ಕೆ ಹಾನಿಯಾಗಿದೆ. ಯಾವುದೇ ವಾಹನ ಪಾರ್ಕ್ ಮಾಡದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ. ಸದ್ಯ ಮಣ್ಣು ತೆಗೆದು ಪ್ಲಾಸ್ಟಿಕ್ ಟರ್ಪಾಲ್ ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಚಿಕ್ಕೋಡಿಯಲ್ಲಿ ಬಾಬಾ ದರ್ಗಾಕ್ಕೆ ನುಗ್ಗಿದ ನೀರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಶುರುವಾಗಿದೆ. ದೂದಗಂಗಾ ನದಿಯು ಉಕ್ಕಿ ಹರಿದಿದ್ದು, ಯಕ್ಸಂಬಾ ಬಳಿಯ ಮುಲ್ಕಾನಿ ಬಾಬಾ ದರ್ಗಾಕ್ಕೆ ನೀರು ನುಗ್ಗಿ ಜಲಾವೃತಗೊಂಡಿದೆ. ನದಿಯಲ್ಲಿ ಇನ್ನೂ ಆರು ಅಡಿ ನೀರು ಬಂದರೆ ಹಲವು ಗ್ರಾಮಕ್ಕೆ ನೀರು ನುಗ್ಗುವ ಭೀತಿ ಇದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಹಾಸನದಲ್ಲೂ ಅಬ್ಬರಿಸುತ್ತಿರುವ ಮಳೆ

ಹಾಸನ ಜಿಲ್ಲೆಯ ವಿವಿಧೆಡೆ ಸೋಮವಾರ ಭಾರಿ ಮಳೆಯಾಗಿದೆ. ಮಲೆನಾಡು ಭಾಗವಾದ ಸಕಲೇಶಪುರ, ಆಲೂರು, ಬೇಲೂರಿನಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ವಾಹನ ಸವಾರರು, ವಿದ್ಯಾರ್ಥಿಗಳು ಪರದಾಡಿದರು. ಇನ್ನೂ ಚಿಕ್ಕಮಗಳೂರು ಭಾಗದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನದ ಗೊರೂರಿನಲ್ಲಿರುವ ಜೀವನದಿ ಹೇಮಾವತಿ ನದಿಗೆ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಉತ್ತರ ಕನ್ನಡದ ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ವಿದ್ಯುತ್ ಉತ್ಪಾದನೆ ಹಾಗೂ ಕ್ರಸ್ಟ್ ಗೇಟ್ ಸೇರಿ 31,000 ಕ್ಯೂಸೆಕ್ಸ್‌ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. 34.50 ಮೀ ಗರಿಷ್ಠ ಸಾಮರ್ಥ್ಯದ ಕದ್ರಾ ಜಲಾಶಯದಿಂದ 4 ಗೇಟ್‌ಗಳಿಂದ 10,600 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

karnataka rain Kadhra dam

ಸದ್ಯ ಜಲಾಶಯದಲ್ಲಿ 31 ಮೀ ನೀರಿನ ಸಂಗ್ರಹ ತಲುಪಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಜಲಾಶಯದಲ್ಲಿ 30 ಮೀ ನೀರು ಸಂಗ್ರಹಕ್ಕೆ ನಿಗಧಿಪಡಿಸಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದ ಜಲಾಶಯದ ಒಳಹರಿವು ಹೆಚ್ಚಿದ್ದು,22,000 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ. ಜಲಾಶಯದಿಂದ ವಿದ್ಯುತ್ ಉತ್ಪಾದಿಸಿ 21,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka Rain : ಸತತ ಮಳೆಯಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಕಂಗಲಾಗಿದ್ದಾರೆ. ಉಡುಪಿಯಲ್ಲಿ ನೆರೆಹಾವಳಿಯಿಂದ ಮಕ್ಕಳು ಶಾಲೆಗೆ ಹೋಗಲು ಆಗದೆ ಪರದಾಡುತ್ತಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ಹಿರೇಕೊಳಲೆ ಕೆರೆ ಭರ್ತಿಯಾಗಿದ್ದು, ಗಾಳಿಗೆ ವಿದ್ಯುತ್‌ ತಂತಿ ಮೇಲೆ ಮರ ಬಾಗಿ ಸಮಸ್ಯೆ (Rain Effect) ಸೃಷ್ಟಿಯಾಗಿದೆ.

VISTARANEWS.COM


on

By

Karnataka Rain
Koo

ಉಡುಪಿ: ಉಡುಪಿಯ ಬೈಂದೂರಿನಲ್ಲಿ ಮಳೆಗಾಲದ (Karnataka Rain) ಗೋಳು ಮುಗಿಯುವುದಿಲ್ಲ. ಮಳೆ (Rain News) ಬಂದರೆ ಶಾಲೆಗೆ ರಜೆ ಯಾಕೆ ಎನ್ನುವವರು ಈ ಸುದ್ದಿಯನ್ನು ಓದಲೇಬೇಕು. ಇಲ್ಲಿ ಜೋರಾಗಿ ಮಳೆ ಬಂದರೆ ಮಕ್ಕಳು ಶಾಲೆಗೆ ಗೈರು ಹಾಜರಾತಿಯೇ ಗತಿ. ಯಾಕಂದರೆ ಮಳೆ ಬಂದು ಹೋದ ಮೇಲೆ ನೆರೆಯಿಂದಾಗಿ ಹಳ್ಳ ದಾಟಿಕೊಂಡು ಶಾಲೆಗಳಿಗೆ ಹೋಗಲು ಮಕ್ಕಳು ಪರದಾಡಬೇಕಾಗುತ್ತದೆ.

ಉಡುಪಿಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಬ್ಬಾರ್ ತಡಿಯಲ್ಲಿ 25 ಮನೆಗಳಿದ್ದು, ಮಳೆ ಬಂದರೆ ಮನೆಯಲ್ಲೇ ಲಾಕ್‌ ಆಗಬೇಕಾಗುತ್ತದೆ. ಮುಖ್ಯಪೇಟೆ ಸಿದ್ದಾಪುರಕ್ಕೆ ತೆರಳಬೇಕಾದರೂ ಸಂಕಷ್ಟ ಎದುರಾಗುತ್ತದೆ. ನೀರಿನ ಪ್ರಮಾಣ ಇಳಿಕೆ ಅದರಷ್ಟೇ ಹಳ್ಳ ದಾಟಿ ಶಾಲೆಗೆ ಹೋಗಬೇಕಾಗುತ್ತದೆ.

ಇತ್ತ ಬೆಳಗ್ಗೆ ನೀರು ಇಳಿಕೆ ಆದರೆ ಸಂಜೆಗೆ ಏರಿಕೆ ಆಗುವ ಆತಂಕ ಇದೆ. ಹೀಗಾಗಿ ಶಾಲೆಗೆ ಕಳುಹಿಸಲು ಪೋಷಕರು ಮೀನಾಮೇಷ ಎಣಿಸುತ್ತಾರೆ. ಮಳೆ ಬಂದರೆ ರಜೆ ನೀಡಿ ಎನ್ನುತ್ತಿದ್ದಾರೆ. ನೌಕರಿಗೆ ತೆರಳುವವರಿಗೂ ಈ ಹಳ್ಳದ್ದೇ ಸಮಸ್ಯೆ ಇದೆ. ಇದುವರೆಗೂ ಕಿರು ಸೇತುವೆ ನಿರ್ಮಿಸಲು ಸಾಧ್ಯವಾಗಿಲ್ಲ.

ಮಳೆಗೆ ಸೇತುವೆ ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ದೂದಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಮೊದಲೇ ನಾಲ್ಕು ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿದೆ.

ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಇರುವ ಕೆಳ ಹಂತದ ಸೇತುವೆ, ದೂದಗಂಗಾ ನದಿಯ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಸೇರಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಮಾಂಜರಿ – ಭಾವನ ಸೌಂದತ್ತಿ ಸೇತುವೆಯೂ ಮುಳುಗಡೆಯಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳ ಮೂಲಕ ಜನರು ಸಂಚಾರಿಸುವಂತಾಗಿದೆ. ಕೃಷ್ಣಾ ನದಿಗೆ ಸುಮಾರು 63 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರಿನ ಒಳಹರಿವು ಬೀಡಲಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಮನವಿ ಮಾಡಿದೆ.

ಹಿರೇಕೊಳಲೆ ಕೆರೆ ಭರ್ತಿ! ವಿದ್ಯುತ್‌ ತಂತಿ ಮೇಲೆ ಬಾಗಿದ ಮರ

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆಯಿಂದಾಗಿ ಹಿರೇ ಕೊಳಲೆ ಕೆರೆ ತುಂಬುವ ಹಂತಕ್ಕೆ ತಲುಪಿದೆ. ಚಿಕ್ಕಮಗಳೂರು ನಗರಕ್ಕೆ ನೀರು ಪೂರೈಸುವ ಬೃಹತ್ ಕೆರೆ ಇದಾಗಿದ್ದು, ಕೆರೆಗೆ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇತ್ತ ವೀಕ್ಷಣಾ ಗೋಪುರ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವೀಕ್ಷಣ ಗೋಪುರದ ಬಳಿ ಪ್ರವಾಸಗರಿಗೆ ನಿಷೇಧ ಹೇರಲಾಗಿದೆ. ಪೊಲೀಸರು ಗೋಪುರದ ಹಾದಿಗೆ ಅಡ್ಡಲಾಗಿ ಬೇಲಿ ಹಾಕಿದ್ದಾರೆ. ಕೆರೆ ಕೋಡಿ ಬೀಳಲು ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ಅಡಿಕೆ ಮರಗಳು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ತಂತಿಯ ಮೇಲೆ ಬಾಗಿವೆ. ಪರಿಣಾಮ ವಿದ್ಯುತ್ ತಂತಿಗೆ ಹಾನಿಯಾಗಿವೆ. ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದ ಬಳಿ ಘಟನೆ ನಡೆದಿದೆ. ಮತ್ತಷ್ಟು ಅಡಿಕೆ ಮರಗಳು ವಿದ್ಯುತ್ ತಂತಿಯ ಮೇಲೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Karnataka Rain : ಸಮುದ್ರಕ್ಕೆ ಇಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಲೈಫ್‌ಗಾರ್ಡ್‌ಗಳು ಬಿಸಿ ಮುಟ್ಟಿಸಿದ್ದಾರೆ. ಅಪಾಯವನ್ನು ಲೆಕ್ಕಿಸದೇ ಈಜುತ್ತಿದ್ದವರನ್ನು ದಡಕ್ಕೆ ಎಳೆದು ತಂದು ಥಳಿಸಿದ್ದಾರೆ.

VISTARANEWS.COM


on

By

Karnataka weather Forecast
Koo

ಕಾರವಾರ: ಭಾರಿ ಮಳೆ (Karnataka Rain) ನಡುವೆ ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರನ್ನು ದರದರನೇ ಎಳೆದುತಂದು ಲೈಫ್‌ಗಾರ್ಡ್‌ ಸಿಬ್ಬಂದಿ ಥಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಘಟನೆ ನಡೆದಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಅಬ್ಬರ ಒಂದೆಡೆ ಸಮುದ್ರತೀರದಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಅಪಾಯದ ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಕೆಲ ಪ್ರವಾಸಿಗರು ಸಮುದ್ರಕ್ಕಿಳಿದು, ಈಜುತ್ತಿದ್ದರು. ಅಪಾಯಕಾರಿ ರೀತಿಯಲ್ಲಿ ಅಲೆಗಳು ಅಪ್ಪಳಿಸುತ್ತಿದ್ದರೂ ಲೆಕ್ಕಿಸದೇ ಮೋಜು ಮಸ್ತಿ ಮಾಡುತ್ತಿದ್ದರು.

ಹೀಗಾಗಿ ನೀರಲ್ಲಿ ಈಜಲು ತೆರಳಿದ್ದ ಪ್ರವಾಸಿಗರಿಗೆ ಥಳಿಸಿ ಲೈಫ್‌ಗಾರ್ಡ್‌ಗಳು ದಡಕ್ಕೆ ಕರೆತಂದಿದ್ದಾರೆ. ಬಳಿಕ ಸೂಚನೆಯನ್ನು ನಿರ್ಲಕ್ಷ್ಯಿಸಿ ನೀರಿಗಿಳಿದಿದ್ದಕ್ಕೆ ಹೊಡೆದು ಬುದ್ಧಿ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿಯೇ ನೀರಿಗಿಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಲಾಗಿದೆ.

ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ ಅಧೋಗತಿ

ಚಿಕ್ಕಮಗಳೂರಿನಲ್ಲಿ ರಣಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರಕ್ಕೆ ಚಾರ್ಮಾಡಿ, ಕೊಟ್ಟಿಗೆಹಾರದಲ್ಲಿ ಕೇವಲ 7 ದಿನಕ್ಕೆ 96 ಇಂಚು ಪ್ರಮಾಣದ ಮಳೆ ದಾಖಲಾಗಿದೆ. ಇತ್ತ ನಿರಂತರ ಮಳೆಯಿಂದಾಗಿ ಚಾರ್ಮಾಡಿ ಹೆದ್ದಾರಿ ಸಂಚಾರ ಅಧೋಗತಿ ತಲುಪಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ವಾಹನ ಚಲಾಯಿಸಲು ಚಾಲಕರು ಪರದಾಡುತ್ತಿದ್ದಾರೆ. ಮಂಜು ಮಿಶ್ರಿತ ಮಳೆಯಿಂದಾಗಿ ಸಂಚಾರಕ್ಕೆ ಅಡೆತಡೆಯಾಗಿದ್ದು ಜತೆಗೆ ಗುಡ್ಡ ಕುಸಿತದ ಆತಂಕವು ಹೆಚ್ಚಿದೆ. ಕಳೆದ ಭಾನುವಾರ ರಾತ್ರಿ ಚಾರ್ಮಾಡಿಯ ಆಲೆಖಾನ್ ಬಳಿ ಗುಡ್ಡ ಕುಸಿದಿತ್ತು.

ಇದನ್ನೂ ಓದಿ: Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಮನೆಗಳಿಗೆ ನುಗ್ಗುತ್ತಿರುವ ನೀರು, ಕೆರೆಯಂತಾದ ಜಮೀನು

ಉತ್ತರಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ. ಅಂಕೋಲಾ ತಾಲ್ಲೂಕಿನ ಅವರ್ಸಾದಲ್ಲಿ ಹೆದ್ದಾರಿ ಪಕ್ಕದ ಜಮೀನು ಕೆರೆಯಂತಾಗಿತ್ತು. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗುಡ್ಡ ಕುಸಿಯುವ ಭೀತಿಯಲ್ಲಿ ಜನರು ಕಾಲಕಳೆಯುತ್ತಿದ್ದಾರೆ. ಕಾರವಾರ, ಅಂಕೋಲಾ ಭಾಗದಲ್ಲಿ ಸಮುದ್ರಕ್ಕೆ ನೀರು ಹರಿದುಹೋಗದೇ ಹಲವೆಡೆ ಅವಾಂತರವೇ ಸೃಷ್ಟಿಯಾಗಿದೆ.

ಇನ್ನೂ ಉತ್ತರಕನ್ನಡದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಸೂಪಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಿದೆ. ಜೋಯಿಡಾದ ಗಣೇಶಗುಡಿಯಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೂಪಾ ಜಲಾಶಯದ ಗರಿಷ್ಠ 564 ಮೀ ಸಾಮರ್ಥ್ಯ ಇದ್ದು, ಸದ್ಯ ಜಲಾಶಯದಲ್ಲಿ 532.32 ಮೀ ನೀರು ಸಂಗ್ರಹವಾಗಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಗುಂಡಬಾಳ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ತೀರ ಪ್ರದೇಶದ ತೋಟ, ಮನೆಗಳಿಗೆ ನೀರು ನುಗ್ಗಿದೆ. ನೆರೆಯಿಂದಾಗಿ ಗ್ರಾಮದ ಜನರು ಸಂತ್ರಸ್ತರಾಗುವ ಆತಂಕ ಎದುರಾಗಿದೆ. ಮಲೆನಾಡಿನಲ್ಲಿ ಹೆಚ್ಚು ಮಳೆಯಾದ ಕಾರಣ ಗುಂಡಬಾಳ ನದಿ ನೀರಿನಮಟ್ಟ ಏರಿಕೆ ಆಗಿದೆ. ನದಿ ಪಾತ್ರದ ನಿವಾಸಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯಾಡಳಿತದಿಂದ ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶ, ಗದ್ದೆ ಸಾಲುಗಳಿಗೆ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದೆ. ಜನವಸತಿ ಪ್ರದೇಶಗಳತ್ತ ನೀರು ನುಗ್ಗಿ, ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ. ಸಗ್ರಿ, ಗುಂಡಿಬೈಲು, ಚಕ್ರತೀರ್ಥ ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜತೆಗೆ ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿದೆ. ಬೈಲಕೆರೆ ಸಮೀಪ ಮನೆಗಳಿಗೆ ನೀರು ನುಗ್ಗಿ ನೆರೆ ಸೃಷ್ಟಿಯಾಗಿತ್ತು. ಹೀಗಾಗಿ ಗುಂಡಿಬೈಲು ಸಮೀಪ ಐದಾರು ಕುಟುಂಬಗಳ ಸದಸ್ಯರನ್ನು ಅಗ್ನಿಶಾಮಕ ದಳದಿಂದ ರಕ್ಷಣೆ ಮಾಡಲಾಗಿದೆ. ಒಂದು ಮನೆಯ ಮೂವರನ್ನು ರಕ್ಷಣೆ ಮಾಡಿ, ಪಾಡಿಗಾರು ಸಮೀಪ ನಾಲ್ಕು ಮನೆಗಳ ಜನರನ್ನು ಎತ್ತರ ಪ್ರದೇಶಕ್ಕೆ ಶಿಫ್ಟ್ ಮಾಡಿದ್ದಾರೆ. ಉಡುಪಿ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿ ಸಂಪೂರ್ಣ ನೆರೆಯಾಗಿದೆ. ಉಡುಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಬಹುಮುಖ್ಯ ರಸ್ತೆಯಲ್ಲಿ ನೀರು ನಿಂತಿದ್ದು, ನಗರದ ಗುಂಡಿಬೈಲು ವಾಹನ ಸಂಚಾರ ದುಸ್ತರ ಪರಿಸ್ಥಿತಿಯಲ್ಲಿ ಇದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ಸಮಸ್ಯೆಯಾಗಿದೆ. ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದಿನವು ಇಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಅಂಡರ್ ಪಾಸ್ ಕಾಮಗಾರಿ ವೇಳೆ ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಸರ್ವಿಸ್ ರಸ್ತೆ ಬ್ಲಾಕ್ ಆಗಿದೆ ಎಂದು ಸ್ಥಳೀಯರು ಕಿಡಿಕಾರಿದರು. ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪರಿಸ್ಥಿತಿ ಅವಲೋಕಿಸಿದರು. ತಕ್ಷಣ ಈ ಸಮಸ್ಯೆಗೆ ತುರ್ತು ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು. ಸರ್ವಿಸ್ ರಸ್ತೆ ಪಕ್ಕದಲ್ಲಿರುವ ಚರಂಡಿ ವ್ಯವಸ್ಥೆ, ಸರಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಂಸರಿಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
land fraud
ಕರ್ನಾಟಕ32 seconds ago

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

Golden Star Ganesh starring Krishnam Pranaya Sakhi movie releasing on 15th August
ಕರ್ನಾಟಕ6 mins ago

Kannada New Movie: ಗಣೇಶ್‌ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ʼಕೃಷ್ಣಂ ಪ್ರಣಯ ಸಖಿʼ

Heavy rain in coastal areas of Uttara Kannada district
ಉತ್ತರ ಕನ್ನಡ7 mins ago

Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

Sri Kyatha Lingeshwara Swamy new temple Inauguration on 13th August
ತುಮಕೂರು10 mins ago

Shira News: ಆ.13ರಂದು ಶ್ರೀ ಕ್ಯಾತಲಿಂಗೇಶ್ವರ ಸ್ವಾಮಿ ನೂತನ ದೇವಾಲಯದ ಜೀರ್ಣೋದ್ಧಾರ ಸಮಾರಂಭ

defrauding the government in Quarry Mine Royalty CM Siddaramaiah instructs for strict action
ಕರ್ನಾಟಕ11 mins ago

CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

New Medical Colleges
ಕರ್ನಾಟಕ14 mins ago

New Medical Colleges: ಕರ್ನಾಟಕಕ್ಕೆ 3 ಪದವಿಪೂರ್ವ ವೈದ್ಯಕೀಯ ಕಾಲೇಜು ಮಂಜೂರು; 350 ಸೀಟುಗಳು ಲಭ್ಯ

Jay Shah
ಕ್ರೀಡೆ19 mins ago

Jay Shah: ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ನೀಡಲು ಮುಂದಾದ ಜಯ್ ಶಾ; ಕಾರಣವೇನು?

Terrorists Attack
ಪ್ರಮುಖ ಸುದ್ದಿ26 mins ago

Terrorists Attack: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ನಾಲ್ವರು ಯೋಧರು ಹುತಾತ್ಮ, 6 ಸೈನಿಕರಿಗೆ ಗಾಯ

Union Budget 2024
ದೇಶ31 mins ago

Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Tej Pratap Yadav
ದೇಶ45 mins ago

Tej Pratap Yadav: ಶಿವಲಿಂಗವನ್ನು ತಬ್ಬಿ ಕುಳಿತು ಭಕ್ತಿ ಪ್ರದರ್ಶಿಸಿದ ಲಾಲು ಪ್ರಸಾದ್‌ ಯಾದವ್ ಪುತ್ರ; Video ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ3 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ8 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು9 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌