Yadgiri News: ಕುಡಿಯುವ ನೀರು ಸರಬರಾಜು ಮೂಲಗಳ ಸ್ವಚ್ಛತೆ, ಶುದ್ಧಗೊಳಿಸಲು ವಿಶೇಷ ಗಮನ ನೀಡಿ: ಮನೋಜ್ ಜೈನ್ - Vistara News

ಯಾದಗಿರಿ

Yadgiri News: ಕುಡಿಯುವ ನೀರು ಸರಬರಾಜು ಮೂಲಗಳ ಸ್ವಚ್ಛತೆ, ಶುದ್ಧಗೊಳಿಸಲು ವಿಶೇಷ ಗಮನ ನೀಡಿ: ಮನೋಜ್ ಜೈನ್

Yadgiri News: ಯಾದಗಿರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

VISTARANEWS.COM


on

Progress review meeting at Yadgiri
ಯಾದಗಿರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ , ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಜಿಲ್ಲೆಯ ನಗರ (City) ಹಾಗೂ ಗ್ರಾಮಾಂತರ ಪ್ರದೇಶಗಳ (Rural areas) ವ್ಯಾಪ್ತಿಯಲ್ಲಿ ಕುಡಿಯುವ ನೀರು (Drinking Water) ಸರಬರಾಜು ಮೂಲಗಳ ಸ್ವಚ್ಛತೆಗೆ ಹಾಗೂ ಶುದ್ಧಗೊಳಿಸಲು ವಿಶೇಷ ಗಮನ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಗ್ರಾಮಾಂತರ ಹಾಗೂ ನಗರಗಳ ವ್ಯಾಪ್ತಿಯಲ್ಲಿ ನೀರು ಸರಬರಾಜು ಮೂಲಗಳ ಸ್ವಚ್ಛತೆಗೆ ಹಾಗೂ ಶುದ್ಧಗೊಳಿಸಲು ವಿಶೇಷ ಗಮನ ನೀಡಿಬೇಕು, ಎಂಟು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನೆ ನಿರ್ದೇಶಕರು ಪ್ರತಿನಿತ್ಯ ಭೇಟಿ ನೀಡಿ ಪರಿಶೀಲಿಸಬೇಕು, ಅನುದಾನ ಬಳಕೆ, ಅನುದಾನ ವೆಚ್ಚ ಹಾಗೂ ಬಾಕಿ ಅನುದಾನ ಬಗ್ಗೆ ಪರಿಶೀಲಿಸಬೇಕು, ಅದರಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಪಿಡಿಓಗಳ ಮೂಲಕ ಪರಿಶೀಲನೆ ಆಗಬೇಕು, ನೋಡಲ್ ಅಧಿಕಾರಿಗಳು ಕೂಡ ವಿಶೇಷ ಗಮನ ನೀಡಬೇಕು ಎಂದು ಸೂಚನೆ ನೀಡಿದರು.

ನಗರ ಹಾಗೂ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಕುರಿತಂತೆ ನೀರು ಸರಬರಾಜು ಅಭಿಯಂತರರ ಪ್ರತ್ಯೇಕ ತಂಡಗಳನ್ನು ರಚಿಸಿ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ವಿಶೇಷ ಗಮನ ನೀಡುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: National Nutrition Week 2023: ಈ ಆಹಾರಗಳ ಬಗ್ಗೆ ಎಷ್ಟೊಂದು ಡೌಟ್!‌ ಯಾವುದು ಸತ್ಯ? ಯಾವುದು ಸುಳ್ಳು?

ಜಿಲ್ಲೆಯಲ್ಲಿ ಜಲಜೀವನ ಮಿಷನ್ ಹಾಗೂ ಜಲ ಧಾರೆ ಯೋಜನೆಯಡಿ ಗುಣಮಟ್ಟದ ಕಾಮಗಾರಿಗಳು ನಡೆಯುವಂತೆ ನೋಡಿಕೊಳ್ಳಬೇಕು, ಜಿಲ್ಲೆಯ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದೂದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ನಿಗಮಗಳ ವ್ಯಾಪ್ತಿಯಲ್ಲಿ ವಿವಿಧ ವಸತಿ ನಿಲಯಗಳು, ವಸತಿ ಶಾಲೆಗಳ ವ್ಯಾಪ್ತಿಯಲ್ಲಿ ಅವಶ್ಯಕ ಇರುವ ಮೂಲ ಸೌಕರ್ಯಗಳ ಬಗ್ಗೆ ವಿಧಾನಸಭಾವಾರು ಪರಿಶೀಲನೆ ನಡೆಸಿ ಪ್ರಸ್ತಾವನೆ ತಕ್ಷಣ ಸಲ್ಲಿಸಬೇಕು,

ಅದರಂತೆ ಎಲ್ಲಾ ವಸತಿ ಶಾಲೆ ನಿಲಯಗಳಿಗೆ ಕಂಪೌಂಡ್ ಗೋಡೆಗಾಗಿ ಶೇ.60 ರಷ್ಟು ಅನುದಾನ ಒದಗಿಸಲಾಗುವುದು. ಶೇ. 40 ರಷ್ಟು ಕಾರ್ಮಿಕ ವೆಚ್ಚದ ಅನುದಾನ ಆಯಾ ಇಲಾಖೆಗಳ ವ್ಯಾಪ್ತಿಯಿಂದ ಭರಿಸಿ, ಮಾದರಿ ಯೋಜನೆ ಈ ಜಿಲ್ಲೆಯಿಂದ ಆರಂಭಿಸಲು ತಕ್ಷಣ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಆರೋಗ್ಯ ಇಲಾಖೆಯ ವ್ಯಾಪ್ತಿಯ ಆಸ್ಪತ್ರೆಗಳಿಗೆ ಸಿಟಿ ಸ್ಕ್ಯಾನರ್ ನೀಡುತ್ತಿದ್ದು, ಇದರ ಸೂಕ್ತ ನಿರ್ವಹಣೆಗೆ 3 ವರ್ಷಗಳ ಕಾಲ ಟೆಕ್ನಿಕಲ್ ಅಸಿಸ್ಟಂಟ್ ನೀಡುವ ಕುರಿತಂತೆ ಪ್ರಸ್ತಾವನೆ ಸಿದ್ಧತ ಪಡಿಸಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆಗಳು, ವಸತಿ ಶಾಲೆಗಳಿಗೆ ಮೂಲ ಸೌಕರ್ಯಗಳ ಇರುವ ಬಗ್ಗೆ ಪರಿಶೀಲನೆ ವರದಿ ಸಲ್ಲಿಸಬೇಕು, ಜಿಲ್ಲೆಯ ಆರು ತಾಲೂಕುಗಳಲ್ಲಿ ತಕ್ಷಣ ಅತಿವೃಷ್ಠಿಯಿಂದ ಹಾನಿಯಾದ ಮನೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: Home Remedies For Mosquito: ರಾಸಾಯನಿಕದ ಅಪಾಯ ಏಕೆ? ಈ ಉಪಾಯ ಬಳಸಿ ಸೊಳ್ಳೆಗಳನ್ನು ಸುಲಭವಾಗಿ ಓಡಿಸಿ!

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಸಾಮಾಜಿಕ ಭದ್ರತಾ ಯೋಜನೆ, ಕಂದಾಯ ಇಲಾಖೆ ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಸಂರಕ್ಷಣಾಧಿಕಾರಿ ಕಾಜಲ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Karnataka Weather Forecast : ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲೂ ಗುಡುಗು ಮಳೆ

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 30 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಅಲರ್ಟ್‌

ಜು.1ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಜು.1ರಿಂದ ಕೊಡಗಿಗೆ ಭಾರಿ ವಾಹನಗಳ ಓಡಾಟ ನಿಷೇಧ

ಕೊಡಗು: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ (Rain Effect), ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜುಲೈ 1 ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು. ಆದರೆ ಗುಡ್ಡದ ಬದಿಯಿಂದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ.

ಯಾವೆಲ್ಲ ವಾಹನಗಳಿಗೆ ನಿರ್ಬಂಧ?

ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.

ಈ ವಾಹನಗಳಿಗೆ ವಿನಾಯಿತಿ

ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಆದೇಶ ಮೀರಿದರೆ ದಂಡ ಪ್ರಯೋಗ

ಈ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ. ಜತೆಗೆ ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸುವಂತೆ ತಿಳಿಸಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Karnataka Weather Forecast : ಭಾನುವಾರ ಬೆಂಗಳೂರು, ಕಲಬುರಗಿ, ಕೊಪ್ಪಳ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕೊಡಗಿನಲ್ಲಿ ಮಳೆ ಎಫೆಕ್ಟ್‌ನಿಂದಾಗಿ (Rain News) ಭಾರಿ ಗಾತ್ರದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಮೋಡ ಕವಿದ ವಾತಾವರಣ (Karnataka Weather Forecast) ಇತ್ತು. ಮಧ್ಯಾಹ್ನದ ಹೊತ್ತು ಕೆಲವೊಮ್ಮೆ ಜಿಟಿ ಜಿಟಿ ಮಳೆಯ (Rain News) ಸಿಂಚನವಾಗುತ್ತಿತ್ತು. ಭಾನುವಾರ ಗಾಳಿಯೊಂದಿಗೆ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್‌ವೃತ್ತ, ಕಾರ್ಪೋರೇಶನ್ ಸರ್ಕಲ್‌, ಕೆಆರ್‌ ಮಾರ್ಕೆಟ್, ಶೇಷಾದ್ರಿಪುರಂ, ಗಾಂಧಿನಗರ, ಶಿವಾಜಿನಗರ. ವಿಧಾನಸೌಧ ಸುತ್ತಮುತ್ತ ಮಳೆಯಾಗಿದೆ. ಇತ್ತ ದಿಢೀರ್‌ ಬಂದ ಮಳೆಗೆ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಯಿತು.

ಇತ್ತ ಕಲಬುರಗಿಯಲ್ಲಿ ಭಾನುವಾರ ವರುಣನ ಆರ್ಭಟ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದು,ಜನ ಜೀವನ ಅಸ್ತವ್ಯಸ್ತವಾಗಿತ್ತು. ಕೊಪ್ಪಳದಲ್ಲೂ ಕಳೆದ ಒಂದು ವಾರ ಬಿಡುವು ನೀಡಿದ್ದ ಮಳೆರಾಯ ಭಾನುವಾರ ಅಬ್ಬರಿಸಿದ್ದ. ಕೊಪ್ಪಳ ತಾಲೂಕಿನ‌ ಹಿರೇಸಿಂದೋಗಿ ಸುತ್ತಮುತ್ತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಭಾರಿ ಮಳೆ ಎಫೆಕ್ಟ್‌ ರಾ.ಹೆ 275ರಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ, ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಜುಲೈ 1ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ಗುಡ್ಡದ ಬದಿಯಿಂದ ಮಣ್ಣು ಕುಸಿತಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು.

ಭೋರ್ಗರೆದ ಧನುಷ್ ಕೋಟಿ ಜಲಪಾತ

ಮೈಸೂರಿನ ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ ಹಿನ್ನೆಲೆಯಲ್ಲಿ ಧನುಷ್ ಕೋಟಿ ಜಲಪಾತ ಭೋರ್ಗರೆದಿದೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತಕ್ಕೆ ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ.

ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಯ ಒಳಹರಿವು ಹೆಚ್ಚಳಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ, ಬಾವನಸೌದತ್ತಿ ಸಂಪರ್ಕಿಸುವ ಹಳೆ ಸೇತುವೆ ಜಲಾವೃತಗೊಂಡಿದೆ.

ಕರಾವಳಿಗೆ ಭಾರಿ ಮಳೆ ಮುನ್ಸೂಚನೆ

ಜುಲೈ 1ರಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆಯಿದೆ ಹಾಗೂ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Post: ಬಿ.ಕೆ.ಹರಿಪ್ರಸಾದ್‌ರನ್ನು ಸಿಎಂ ಮಾಡಲು ಪ್ರಣವಾನಂದ ಶ್ರೀ ಒತ್ತಾಯ; ಕೇಳೋದ್ರಲ್ಲಿ ತಪ್ಪಿಲ್ಲ ಎಂದ ಜಮೀರ್‌

CM Post: ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತರು. ಮೂಲತಃ ಅವರು ಕಾಂಗ್ರೆಸ್ಸಿಗರು, ಯಾವುದೇ ವಲಸೆ ನಾಯಕರಲ್ಲ. ಹೀಗಾಗಿ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

VISTARANEWS.COM


on

Koo

ಯಾದಗಿರಿ: ಬಿ.ಕೆ. ಹರಿಪ್ರಸಾದ್ ಅವರನ್ನು ಸಿಎಂ ಮಾಡುವಂತೆ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ (Pranavananda Swamiji) ಅವರು ಪುನರುಚ್ಚರಿಸಿದ್ದಾರೆ. ಬಿ.ಕೆ. ಹರಿಪ್ರಸಾದ್‌ರನ್ನು (BK hariprasad) ಸಿಎಂ ಅಥವಾ ಡಿಸಿಎಂ ಮಾಡುವಂತೆ ಒತ್ತಾಯ ಮಾಡಿರುವ ಅವರು, ಈಡಿಗ ಸಮುದಾಯವು ತನ್ನದೇ ರಾಜಕೀಯ ಪ್ರಾಬಲ್ಯ ಹೊಂದಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಿದ್ದರೆ ಬಿ.ಕೆ.ಹರಿಪ್ರಸಾದ್ ಅವರನ್ನೇ ಸಿಎಂ (CM Post) ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಅವರ ಹಿಂದೆ ಹಿಂದುಳಿದ ಸಮಾಜ ಇದೆ, ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತೇನೆ. ಸಿಎಂ, ಡಿಸಿಎಂ ಸ್ಥಾನ ಬದಲಾದರೆ ಬಿ.ಕೆ.ಹರಿಪ್ರಸಾದ್ ಅವರಿಗೆ ಸಿಎಂ ಸ್ಥಾನ‌ ನೀಡಬೇಕು. ಇಲ್ಲದಿದ್ದರೆ ಡಿಸಿಎಂ ಆಗಿ ತೆಗೆದುಕೊಳ್ಳಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದರೆ ಹರಿಪ್ರಸಾದ್ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

ಸ್ವಾಮೀಜಿಗಳು ರಾಜಕೀಯಕ್ಕೆ ಬರಬೇಡಿ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಸ್ವಾಮೀಜಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸುವಾಗ ಮಂತ್ರಿಗಳು, ರಾಜಕೀಯ ನಾಯಕರು ಅಪಮಾನ ಮಾಡಬಾರದು. ಅಪಮಾನ ಮಾಡಿದರೆ ಮುಂದಿನ ದಿನಗಳಲ್ಲಿ ನೀವು ಮಠಕ್ಕೆ ಕಾಲಿಡಬೇಡಿ. ನೀವು ಮಾಡಿದ್ದೆಲ್ಲಾ ಸರಿ ಅಂತ ಒಪ್ಪಿಕೊಳ್ಳೋಕೆ ಸಮುದಾಯದ ಸ್ವಾಮೀಜಿಗಳು ಸಿದ್ಧರಿಲ್ಲ. ನೀವು ಧೈರ್ಯವಾಗಿ ಹೇಳಿ ಮಠಕ್ಕೆ ಕಾಲಿಡಲ್ಲ ಅಂತ, ಆಗ ನಾವು ರಾಜಕೀಯಕ್ಕೆ ಬರಲ್ಲ ಎಂದು ಸವಾಲು ಹಾಕಿದರು.

ಚಂದ್ರಶೇಖರ ಸ್ವಾಮೀಜಿಗಳು ಹೇಳಿದಾಗ ಎಲ್ಲರೂ ಸ್ವಾಗತ ಮಾಡಿದರು. ಡಿ.ಕೆ.ಸುರೇಶ್‌, ಬಾಲಕೃಷ್ಣ ಹಾಗೂ ಚಲುವರಾಯಸ್ವಾಮಿ ಸ್ವಾಗತ ಮಾಡಿದರು. ಒಂದು ಕಡೆ ಸ್ವಾಗತ ಮಾಡೋದು, ಮತ್ತೊಂದು ಕಡೆ ರಾಜಕೀಯಕ್ಕೆ ಬರಬೇಡಿ ಅಂತ ಹೇಳೋದು. ಇದು ಡಿ.ಕೆ.ಶಿವಕುಮಾರ ಅವರ ರಾಜಕೀಯ ಗಿಮಿಕ್, ನಮಗೆ ನೋವಾಗಿದ್ದಕ್ಕೆ ನಾವು ಹೇಳುತ್ತಿದ್ದೇವೆ. ನಮಗೆ ಯಾರು ಡಿಸಿಎಂ ಸ್ಥಾನ ಕೊಟ್ಟಿಲ್ಲ, ಈಗಾಗಲೇ ಡಿಕೆಶಿ ಡಿಸಿಎಂ ಇದ್ದಾರೆ. ಜೊತೆಗೆ ಒಕ್ಕಲಿಗ ಸಮುದಾಯದ ಸಚಿವರು ಇದ್ದಾರೆ. ಚಂದ್ರಶೇಖರ ಸ್ವಾಮೀಜಿಯವರು ಅವರ ಸಮುದಾಯದ ಬಗ್ಗೆ ಮಾತನಾಡಿದ್ದಾರೆ. ಆದರೆ ಡಿ.ಕೆ.ಶಿವಕುಮಾರ ಅವರದ್ದು ರಾಜಕೀಯ ಗಿಮಿಕ್‌ನ ಭಾಗ ಎಂದು ಕಿಡಿಕಾರಿದರು.

ಯಾರು ಬೇಕಾದ್ರು ಅಭಿಪ್ರಾಯ ಹೇಳಬಹುದು ಎಂದ ಜಮೀರ್‌ ಅಹ್ಮದ್‌

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಮಂಡ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿ, ಯಾರು ಬೇಕಾದರೂ ಅವರ ಅಭಿಪ್ರಾಯ ಹೇಳಬಹುದು. ಆದರೆ ನಿರ್ಧಾರ ಮಾಡುವುದು ಪಕ್ಷದ ಹೈ ಕಮಾಂಡ್. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಖಾಲಿ‌ ಇದ್ದಾಗ ಆ ಬಗ್ಗೆ ಚರ್ಚೆ ಮಾಡಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Pradeep Eshwar: ವಿಪಕ್ಷ ನಾಯಕರು ಸಿದ್ದರಾಮಯ್ಯ ಬಳಿ ಕೋಚಿಂಗ್‌ ಪಡೆಯಲಿ: ಅಶೋಕ್‌ಗೆ ಪ್ರದೀಪ್‌ ಈಶ್ವರ್‌ ಸಲಹೆ

ಸ್ವಾಮೀಜಿ‌ ಅವರು ಅವರ ಅಭಿಪ್ರಾಯ ಹೇಳಿದ್ದಾರೆ. ಯಾರು ಬೇಕಾದ್ರು ಅವರ ಅಭಿಪ್ರಾಯ ಹೇಳಬಹುದು. ಹೈ ಕಮಾಂಡ್ ತೀರ್ಮಾನ ಮಾಡಿ ಸಿದ್ದರಾಮಯ್ಯರನ್ನು ಸಿಎಂ ಮಾಡಿದ್ದಾರೆ. ಎಲ್ಲಾ ಸಮುದಾಯದವರೂ ಸಿಎಂ ಸ್ಥಾನ ಕೇಳುತ್ತಾರೆ, ಅದು ಅವರವರ ಅಭಿಪ್ರಾಯ. ಸಿಎಂ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ ಎಂದು ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಜುಲೈ ಮೊದಲ ವಾರ ಮತ್ತಷ್ಟು ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Rain News : ಜೂ.30ರಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಐಎಂಡಿ ಯೆಲ್ಲೋ ಅಲರ್ಟ್‌ ಘೋಷಣೆ (Karnataka Weather Forecast) ಮಾಡಿದೆ. ಜುಲೈ ಮೊದಲ ವಾರ ಮತ್ತಷ್ಟು ತೀವ್ರಗೊಳ್ಳಲಿದ್ದು, ಜು.3ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಭಾನುವಾರ ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ , ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ ಸಣ್ಣ ಪ್ರಮಾಣದಲ್ಲಿ ಮಳೆಯ ಸಿಂಚನವಾಗಲಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಭಾರಿ ಮಳೆಯೊಂದಿಗೆ ಗುಡುಗು ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 3ರವರೆಗೆ ಮೀನುಗಾರರು ಮೀನುಗಾರಿಗೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rohit Sharma
ಪ್ರಮುಖ ಸುದ್ದಿ18 mins ago

Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

LPG Price Cut
ವಾಣಿಜ್ಯ18 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

kidanp case
ಕ್ರೈಂ25 mins ago

Kidnap Case: ಹಿಂದೂ ಹುಡುಗನ ಜೊತೆಗೆ ಮುಸ್ಲಿಂ ಹುಡುಗಿ ನಾಪತ್ತೆ, ಕಿಡ್ನಾಪ್‌ ದೂರು

Rakshak Bullet Washed His Father grave
ಸ್ಯಾಂಡಲ್ ವುಡ್30 mins ago

Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್

Team India Captain
ಕ್ರೀಡೆ41 mins ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Water tank Collapsed
ದೇಶ43 mins ago

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

New Criminal Law
ದೇಶ54 mins ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Actor Darshan In Central Jail remembering mother and son
ಕ್ರೈಂ55 mins ago

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Rakshit Shetty Visited Koragajja Temple And Prayed
ಸಿನಿಮಾ1 hour ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ1 hour ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು22 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌