Yadgiri News: ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಡಿಸಿ ಡಾ.ಸುಶೀಲ ಬಿ. ಸೂಚನೆ - Vistara News

ಯಾದಗಿರಿ

Yadgiri News: ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಡಿಸಿ ಡಾ.ಸುಶೀಲ ಬಿ. ಸೂಚನೆ

Yadgiri News: ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸುವ ಕ್ರಮಗಳ ಕುರಿತು ಡಿಸಿ ಡಾ.ಸುಶೀಲ ಬಿ., ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

VISTARANEWS.COM


on

Respond immediately to the problem of drinking water says DC Dr Sushil B
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಕುಡಿಯುವ ನೀರಿನ (Drinking Water) ಸಮಸ್ಯೆಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಕಟ್ಟುನಿಟ್ಟಿನ ಸೂಚನೆ (Yadgiri News) ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು,

ಗ್ರಾಮೀಣ ಮತ್ತು ನಗರದ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ, ಗ್ರಾಮದ ಅಭಿವೃದ್ಧಿ ಅಧಿಕಾರಿಗಳು, ನಗರದ ಮುಖ್ಯಾಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಗೆ ತ್ವರಿತಗತಿಯಲ್ಲಿ ಸ್ಪಂದಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: Karnataka Weather : ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ವರ್ಷಧಾರೆ; ನಾಳೆ ರಭಸವಾಗಿ ‌ಬೀಸಲಿದೆ ಗಾಳಿ- ಮಳೆ

ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅವಶ್ಯಕ ಮುಂಜಾಗ್ರತೆ ವಹಿಸಲು ಡಿಸಿ ಸಲಹೆ ನೀಡಿದರು.

ನೀರು ಸರಬರಾಜಿಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆ ಉದ್ಭವಿಸಿದ್ದಲ್ಲಿ ತಕ್ಷಣ ಆದ್ಯತೆ ಮೇಲೆ ದುರಸ್ತಿ ಕಾರ್ಯ ಕೈಗೊಂಡು ನೀರು ಸರಬರಾಜಿನಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು. ನಿಯಮಿತವಾಗಿ ಟ್ಯಾಂಕ್ ಪರಿಶೀಲನೆ ನಡೆಸಿ, ನೀರು ಪೂರೈಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಟೆಂಡರ್ ಪ್ರಕ್ರಿಯೆಗಳ ಸಮಸ್ಯೆಯನ್ನು ತಕ್ಷಣ ಬಗೆಹರಿಸಿಕೊಳ್ಳಬೇಕು. ಟಾಸ್ಕ್‌ ಫೋರ್ಸ್ ಸಮಿತಿಯಲ್ಲಿ ಅನುಮೋದನೆ ಪಡೆದು ಕ್ರಮ ಕೈಗೊಳ್ಳಬೇಕು. ದುರಸ್ತಿ ಇರುವ ಪೈಪ್‌ಲೈನ್‌ಗಳನ್ನು ತಕ್ಷಣ ದುರಸ್ತಿಗೊಳಿಸಿ, ನೀರು ಪೋಲು ಆಗದಂತೆ ಎಚ್ಚರಿಕೆವಹಿಸಬೇಕು.

ವಿವಿಧ ಜಲಾಶಯ ಹಾಗೂ ನದಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಎತ್ತುವುದನ್ನು ತಡೆಯಬೇಕು. ಆಯಾ ತಹಸೀಲ್ದಾರರು, ವಿದ್ಯುತ್ ಇಲಾಖೆಯ ಅಧಿಕಾರಿಗಳು ತಕ್ಷಣ ಹಾಗೂ ತೀವ್ರ ನಿಗಾ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ, ಯಾವುದೇ ಪರಿಸ್ಥಿತಿಯಲ್ಲಿ ಜನ-ಜಾನವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಅವರು ಸೂಚನೆ ನೀಡಿದರು.

ಇದನ್ನೂ ಓದಿ: Iran- Israel war : ಇಸ್ರೆಲ್​, ಇರಾನ್​ಗೆ ಹೋಗದಂತೆ ವಿಶೇಷ ಸೂಚನೆ ನೀಡಿದ ಭಾರತ ಸರ್ಕಾರ; ಯಾಕೆ ಗೊತ್ತೇ?

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದುರಿ, ತಹಸೀಲ್ದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ಗುಡುಗು, ಸಿಡಿಲು ಸಹಿತ ಸುರಿದ ಮಳೆಗೆ (Rain News) ಮನೆಯ ಗೋಡೆ ಕುಸಿದಿದ್ದು, ಕುಟುಂಬಸ್ಥರು ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ರಾಜ್ಯದ ಹಲವೆಡೆ ಮಳೆಯಾಗಿರುವ ವರದಿ ಆಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ದೊಡ್ಡಬಳ್ಳಾಪುರ: ಸಿಡಿಲು ಬಡಿದು ಮನೆಯ ಗೋಡೆ ಕುಸಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ (Karnataka Weather Forecast) ನಡೆದಿದೆ. ಸೋಮವಾರ ರಾತ್ರಿ ಗುಡುಗು, ಸಿಡಿಲು ಸಹಿತ ಜಡಿ (Rain News) ಮಳೆಯಾಗಿದೆ.

ಈ ವೇಳೆ ಸಿಡಿಲು ಬಡಿದ ಪರಿಣಾಮ ಗೋಡೆ ಕುಸಿತವಾಗಿದೆ. ಗಂಗರಾಜ್ ಎಂಬುವವರಿಗೆ ಸೇರಿದ ಮನೆ ಹಾನಿಯಾಗಿದೆ. ಮನೆಯ ಕುಟುಂಬಸ್ಥರು ಬೇರೆ ಕೋಣೆಯಲ್ಲಿದ್ದ ಕಾರಣ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ‌ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಲ್ಲಿ ಅಬ್ಬರ ಮಳೆ

ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ಭಾರಿ ಮಳೆಯಾಗಿದ್ದು, 8 ಸೆಂ.ಮೀ ದಾಖಲಾಗಿದೆ. ಧರ್ಮಸ್ಥಳದಲ್ಲಿ 6 ಸೆಂ.ಮೀ, ಕಾರ್ಕಳ , ಕಕ್ಕೇರಿ, ಯಗಟಿಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಹೊಸದುರ್ಗ, ಹಾರಂಗಿ, ರಾಯಲ್ಪಾಡು, ಚನ್ನಗಿರಿ, ಕೋಲಾರ, ಎಂಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿದೆ.

ಇನ್ನೂ ಮಣಿ, ಶಿರಾಲಿ, ಬೆಳ್ತಂಗಡಿ, ಕೊಣನೂರಿನಲ್ಲಿ ತಲಾ 3 ಸೆಂ.ಮೀ ಹಾಗೂ ಹೊನ್ನಾವರ, ಪುತ್ತೂರು, ಮಂಗಳೂರು, ತುಮಕೂರು, ಭಾಗಮಂಡಲ, ವಿರಾಜಪೇಟೆ, ಕುಶಾಲನಗರದಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಮಂಕಿ, ಪಣಂಬೂರು , ಮೂಲ್ಕಿ, ಉಪ್ಪಿನಂಗಡಿ, ಕುಮಟಾ, ಮಧುಗಿರಿ, ಪರಶುರಾಂಪುರ, ತೊಂಡೇಭಾವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕರಾವಳಿ ಭಾಗಕ್ಕೆ ಮಳೆ ಅಲರ್ಟ್‌

ಜೂನ್‌ 19ರಂದು ಕರಾವಳಿ ಭಾಗಕ್ಕೆ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಗರಿಷ್ಠ 30 ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಯಾದಗಿರಿ

Drowned in Water : ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ; ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದವನು ಮೃತ್ಯು

Drowned in Water : ಪ್ರತ್ಯೇಕ ಕಡೆಗಳಲ್ಲಿ ಬಾಲಕರಿಬ್ಬರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕನೊಬ್ಬ ಬಲಿಯಾದರೆ, ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೊಬ್ಬ ಬಾಲಕ ಅಸುನೀಗಿದ್ದಾನೆ.

VISTARANEWS.COM


on

By

Drowned in water
ಮೃತ ದುರ್ದೈವಿಗಳು
Koo

ಯಾದಗಿರಿ: ತೆರೆದ ಗುಂಡಿಯಲ್ಲಿ ಬಿದ್ದು ಬಾಲಕನೊರ್ವ (Drowned in Water) ಮೃತಪಟ್ಟಿದ್ದಾನೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ನಿನ್ನೆ ಸೋಮವಾರ ಸಂಜೆ ಘಟನೆ ನಡೆದಿದೆ. ಮನೋಜಕುಮಾರ (8) ಮೃತ ದುರ್ದೈವಿ.

ಮನೋಜಕುಮಾರ ತೋಟದ ಮನೆಯಲ್ಲಿ ಆಟವಾಡುತ್ತಿದ್ದ. ಆಟವಾಡುವಾಗ ಕಾಲು ಜಾರಿದ್ದು ತೆರೆದ ಗುಂಡಿಯಲ್ಲಿ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗುರುಮಠಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಗೇರಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹತ್ತು ವರ್ಷದ ವಸಂತ್‌ ಮೃತದುರ್ದೈವಿ.

ವಸಂತ್‌ ನೀರು ಕುಡಿಯಲು ಕೃಷಿ ಹೊಂಡಕ್ಕೆ‌ ತೆರಳಿದ್ದ ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಹೊಂಡದ ನೀರಿನ ಆಳದಲ್ಲಿ ಸಿಲುಕಿದ್ದ, ಇತ್ತ ಕೂಡಲೇ ಬಾಲಕನ ರಕ್ಷಣೆಗೆ ಗ್ರಾಮಸ್ಥರು ಮುಂದಾಗಿದ್ದರು. ಆದರೆ ಉಸಿರುಗಟ್ಟಿ ಹೊಂಡದ ನೀರಲ್ಲಿ ವಸಂತ ಪ್ರಾಣ ಬಿಟ್ಟಿದ್ದಾನೆ. ಬಳ್ಳಾರಿಯ ಸಿರಗೇರಿ‌ ಪೊಲೀಸ್ ಠಾಣೆಯಲ್ಲಿ‌ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

ಚೆನ್ನೈ : ಮಹಿಳೆಯೊಬ್ಬಳನ್ನು ಎಮ್ಮೆಯೊಂದು ರಸ್ತೆಯುದ್ದಕ್ಕೂ 500 ಮೀಗಳಷ್ಟು ದೂರ ತಿವಿದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚೆನ್ನೈನ ತಿರುವೊಟ್ರಿಯೂರ್‌ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಇದೀಗ ಸಿಕ್ಕಾಪಟ್ಟೆ ವೈರಲ್ (Video Viral) ಆಗಿದೆ.

ವಿಡಿಯೊದಲ್ಲಿ ಮಹಿಳೆಯನ್ನು ಎಮ್ಮೆ ಎಳೆದುಕೊಂಡು ಹೋಗುತ್ತಿದ್ದು, ಅನೇಕರು ಮಹಿಳೆಗೆ ಸಹಾಯ ಮಾಡಲು ಅದರ ಹಿಂದೆ ಓಡಿ ಬರುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಮಧ್ಯಾಹ್ನದ ವೇಳೆ 35 ವರ್ಷದ ಈ ಮಹಿಳೆ ಗ್ರಾಮದ ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಗೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದು ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯನ್ನು ಎಮ್ಮೆಯಿಂದ ಬಿಡಿಸಿದ ನಂತರ ಆ ಎಮ್ಮೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಸಿಕ್ಕ ಸಿಕ್ಕ ವಾಹನಗಳನ್ನು ಕೆಡವಿದೆ. ಹಾಗಾಗಿ ಎಮ್ಮೆಯನ್ನು ಸೆರೆ ಹಿಡಿಯಲು ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅದನ್ನು ಹಿಡಿದು, ಪುಲಿಯಂಥೋಪ್‌ನಲ್ಲಿರುವ ಗ್ರೇಟರ್ ಚೆನ್ನೈ ಕಾರ್ಪೋರೇಷನ್‌ ಆಶ್ರಯಕ್ಕೆ ಕರೆದೊಯ್ಯಲಾಯಿತು ಎಂಬುದಾಗಿ ತಿಳಿದುಬಂದಿದೆ.

ಈ ವರ್ಷದ ಕಾರ್ಪೋರೇಷನ್ ಬಜೆಟ್ ಮಂಡನೆಯ ವೇಳೆ ಮೇಯರ್ ಆರ್. ಪ್ರಿಯಾ ಅವರು ನಗರದಾದ್ಯಂತ ಹಸುಗಳಿಗೆ ಪರವಾನಗಿ ಮತ್ತು ದಕ್ಷಿಣ ಚೆನ್ನೈನಲ್ಲಿ ಹೆಚ್ಚುವರಿ ಆಶ್ರಯಗಳ ಸ್ಥಾಪನೆಯ ಯೋಜನೆ ಜಾರಿಗೊಳಿಸಿದ್ದರು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಈ ಎರಡೂ ಯೋಜನೆಗಳಿಗೆ ಕೆಲಸ ಪ್ರಾರಂಭಿಸಲು ಸಾಧ್ಯವಾಗಿಲ್ಲ ಎಂಬುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ಕರಾವಳಿ ಹಾಗೂ ಉತ್ತರ ಒಳನಾಡಿನ ನೈರುತ್ಯ ಮುಂಗಾರು ಚುರುಕುಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿರಲಿದೆ. ಈ ದಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ, ಉತ್ತರ ಒಳನಾಡು ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲೂ ಗಾಳಿ ಜತೆಗೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ಇದನ್ನೂ ಓದಿ: Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

ಬೆಂಗಳೂರು: ಬೇಸಿಗೆ ಕಾಲದ ನಂತರ ಬರುವ ಮಳೆಗಾಲ ನಿಮ್ಮನ್ನು ಶಾಖದಿಂದ ಮುಕ್ತಗೊಳಿಸಿ ತಂಪನ್ನು ನೀಡುತ್ತದೆ ನಿಜ. ಆದರೆ ಈ ಸಮಯದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳ ಹಾವಳಿ ಹೆಚ್ಚಾಗಿರುತ್ತದೆ. ಹಾಗಾಗಿ ಅನೇಕ ಕಾಯಿಲೆಗಳು ಕೂಡ ಹರಡುತ್ತದೆ. ಇದರಿಂದ ನೀವು ಬಹಳ ಬೇಗನೆ ಅನಾರೋಗ್ಯಕ್ಕೊಳಗಾಗುತ್ತೀರಿ. ಹಾಗಾಗಿ ಮಳೆಗಾಲದಲ್ಲಿ ನೀವು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕಾಗುತ್ತದೆ. ಇದರಿಂದ ನೀವು ಫಿಟ್ ಆಗಿ ಆರೋಗ್ಯ (Health Tips) ವಾಗಿರಬಹುದು.

ಶುದ್ಧ ಮತ್ತು ಕುದಿಸಿದ ನೀರನ್ನು ಕುಡಿಯಿರಿ

ಮಳೆಗಾಲದಲ್ಲಿ ನೀರು ತುಂಬಾ ಕಲುಷಿತವಾಗಿರುತ್ತದೆ. ಹಾಗಾಗಿ ಅದರಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಈ ನೀರನ್ನು ನೀವು ಹಾಗೇ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಜ್ವರದಂತಹ ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ ಮಳೆಗಾಲದಲ್ಲಿ ಶುದ್ಧವಾದ ನೀರನ್ನು ಬಳಸಿ ಮತ್ತು ಕುದಿಸಿ ಆರಿಸಿದ ನೀರನ್ನೇ ಕುಡಿಯಿರಿ. ಹಾಗೇ ಹೊರಗಡೆ ಹೋದಾಗ ಅಲ್ಲಲ್ಲಿ ನೀರನ್ನು ಕುಡಿಯುವ ಬದಲು ಮನೆಯ ನೀರನ್ನು ತೆಗೆದುಕೊಂಡು ಹೋಗಿ ಬಳಸಿ.

Health Tips

ಬೀದಿ ಬದಿಯ ಆಹಾರ ಮತ್ತು ಜಂಕ್ ಫುಡ್ ಸೇವನೆಯನ್ನು ತಪ್ಪಿಸಿ

ಹೆಚ್ಚಿನ ಜನರು ಬೀದಿಗಳಲ್ಲಿ ಮಾರಾಟ ಮಾಡುತ್ತಿರುವ ಆಹಾರವನ್ನು ಸೇವಿಸುತ್ತಾರೆ. ಆದರೆ ಬೀದಿಗಳಲ್ಲಿ ಆಹಾರಗಳನ್ನು ತೆರೆದಿಡುತ್ತಾರೆ. ಹಾಗಾಗಿ ಅದರಲ್ಲಿ ಬ್ಯಾಕ್ಟೀರಿಯಾಗಳು ಸೇರಿಕೊಳ್ಳುತ್ತದೆ. ಅದನ್ನು ಸೇವಿಸಿದರೆ ನಿಮ್ಮ ಆರೋಗ್ಯ ಕೆಡುತ್ತದೆ. ಹಾಗಾಗಿ ಅವುಗಳನ್ನು ತಿನ್ನುವುದನ್ನು ತಪ್ಪಿಸಿ.

ಮನೆಯ ಸುತ್ತಮುತ್ತ ನೀರು ನಿಲ್ಲುವುದನ್ನು ತಪ್ಪಿಸಿ

ಮಳೆಗಾಲದಲ್ಲಿ ಮನೆಯ ಸುತ್ತಮುತ್ತಲಿರುವ ಹೊಂಡಗಳು, ಮಡಿಕೆಗಳು, ಪ್ಲಾಸ್ಟಿಕ್ ಡಬ್ಬಗಳು, ಬಾಟಲಿಗಳು ಮುಂತಾದವುಗಳಲ್ಲಿ ನೀರು ಸಂಗ್ರಹವಾಗುತ್ತದೆ. ಹಾಗಾಗಿ ಇಂತಹ ನೀರಿನಲ್ಲಿ ಸೊಳ್ಳೆಗಳು ಮೊಟ್ಟಯಿಟ್ಟು ಮರಿ ಮಾಡುತ್ತವೆ. ಈ ಸೊಳ್ಳೆಗಳ ಕಡಿತದಿಂದ ಡೆಂಗ್ಯೂ, ಮಲೇರಿಯಾದಂತಹ ಹಲವಾರು ಕಾಯಿಲೆಗಳು ಹರಡುತ್ತವೆ. ಹಾಗಾಗಿ ಈ ನೀರು ಶೇಖರಣೆಯಾಗುವುದನ್ನು ತಪ್ಪಿಸಿ.

Health Tips

ಹಣ್ಣುಗಳು-ತರಕಾರಿಗಳನ್ನು ತೊಳೆದು ಬಳಸಿ

ಮಾರುಕಟ್ಟೆಯಿಂದ ತಂದ ಹಣ್ಣುಗಳು ಮತ್ತು ತರಕಾರಿಗಳ ಮೇಲ್ಮೈ ಮೇಲೆ ಬ್ಯಾಕ್ಟೀರಿಯಾಗಳು ಇರುತ್ತವೆ. ಇದನ್ನು ಹಾಗೇ ಸೇವಿಸಿದರೆ ಹೊಟ್ಟೆ ಕೆಡುತ್ತದೆ. ಹಾಗಾಗಿ ಅವುಗಳನ್ನು ಉಪ್ಪನ್ನು ಬೆರೆಸಿದ ನೀರಿನಲ್ಲಿ ಚೆನ್ನಾಗಿ ತೊಳೆದು ಉಪಯೋಗಿಸಿ. ಮತ್ತು ತರಕಾರಿಗಳನ್ನು ಚೆನ್ನಾಗಿ ಬೇಯಿಸಿ ತಿನ್ನಿ. ಹಸಿ ತರಕಾರಿ ತಿನ್ನುವುದನ್ನು ತಪ್ಪಿಸಿ.

Health Tips

ಸುಖಕರವಾಗಿ ನಿದ್ರೆ ಮಾಡಿ

ನಿದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ತಡವಾಗಿ ನಿದ್ರೆ ಮಾಡುವುದು , ಕಡಿಮೆ ನಿದ್ರೆ ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ನೀವು ಜ್ವರ, ಶೀತದಂತಹ ಸಾಮಾನ್ಯ ಕಾಯಿಲೆಯಿಂದ ಬಳಲುತ್ತೀರಿ. ಹಾಗಾಗಿ ದಿನದಲ್ಲಿ 8 ಗಂಟೆಗಳ ಕಾಲ ನಿದ್ರಿಸಿ.

Health Tips

ನಿಯಮಿತವಾದ ವ್ಯಾಯಾಮ

ಮಳೆಗಾಲದಲ್ಲಿ ಹೊರಗಡೆ ಮಳೆ ಸುರಿಯುವುದರಿಂದ ವಾಕಿಂಗ್, ಸೈಕ್ಲಿಂಗ್, ಯೋಗ ಮುಂತಾದ ವ್ಯಾಯಾಮಗಳನ್ನು ಮಾಡಲು ಅಡ್ಡಿಯಾಗುತ್ತದೆ. ಆದರೆ ನೀವು ಪ್ರತಿದಿನದ ವ್ಯಾಯಾಮವನ್ನು ತಪ್ಪಿಸಬೇಡಿ. ಮನೆಯೊಳಗೆ ನಿಮಗೆ ಸಾಧ್ಯವಾದಷ್ಟು ವ್ಯಾಯಾಮ ಮಾಡಿ. ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗೂ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.

ನಿಮ್ಮ ಕೈಗಳನ್ನು ಚೆನ್ನಾಗಿ ತೊಳೆಯಿರಿ

ನೀವು ಹೊರಗಡೆಯಿಂದ ಬಂದಾಗ ಕೈಕಾಲುಗಳನ್ನು ಸ್ವಚ್ಛ ಗೊಳಿಸುವುದನ್ನು ಮರೆಯಬೇಡಿ. ಹಾಗೇ ಯಾವುದೇ ಆಹಾರವನ್ನು ಸೇವಿಸುವ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯಿರಿ. ಇದು ನಿಮ್ಮನ್ನು ಹಾನಿಕಾರಕ ಬ್ಯಾಕ್ಟೀರಿಯಾಗಳಿಂದ ಕಾಪಾಡುತ್ತದೆ.

ಆಗಾಗ ಮಳೆಯಲ್ಲಿ ನೆನೆಯುವುದನ್ನು ತಪ್ಪಿಸಿ

ಮಳೆಗಾಲದಲ್ಲಿ ಹೊರಗಡೆ ಮಳೆ ಧಾರಕಾರವಾಗಿ ಸುರಿಯುತ್ತಿರುತ್ತದೆ. ಹಾಗಾಗಿ ನೀವು ಹೊರಗಡೆ ಹೋಗುವಾಗ ಛತ್ರಿ, ರೈನ್ ಕೋಟ್ ಧರಿಸುವುದನ್ನು ಮರೆಯಬೇಡಿ. ಇಲ್ಲವಾದರೆ ನೀವು ಮಳೆಯಲ್ಲಿ ನೆನೆಯಬೇಕಾಗುತ್ತದೆ. ಇದರಿಂದ ನೀವು ಅನಾರೋಗ್ಯಕ್ಕೊಳಗಾಗಬಹುದು. ಹಾಗಾಗಿ ಮಳೆಗಾಲದಲ್ಲಿ ನೀವು ಆರೋಗ್ಯವಾಗಿರಲು ಪ್ರಯತ್ನಿಸಿ. ಅದಕ್ಕಾಗಿ ಈ ಸಲಹೆಗಳನ್ನು ತಪ್ಪದೇ ಪಾಲಿಸಿ. ಇವು ನಿಮ್ಮನ್ನು ರೋಗಗಳಿಂದ ಕಾಪಾಡಲು ಸಹಾಯ ಮಾಡುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು, ಚಿಕ್ಕಮಗಳೂರಲ್ಲಿ (Rain News) ಮಳೆಯಾಗಿದ್ದು, ನಾಳೆ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು:ಕಳೆದೊಂದು ವಾರದಿಂದ ಮಲೆನಾಡು ಭಾಗದಲ್ಲಿ ಬಿಡುವು ಕೊಟ್ಟಿದ್ದ ವರುಣ ಸೋಮವಾರ (Karnataka weather Forecast) ಅಬ್ಬರಿಸಿದ್ದ. ಕಾಫಿನಾಡು ಚಿಕ್ಕಮಗಳೂರಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆ (Rain News) ಸುರಿದಿದೆ. ಗಾಳಿ ಸಹಿತ ಮಳೆಗೆ ಸವಾರರು ಹೆಡ್ ಲೈಟ್ ಹಾಕಿಕೊಂಡೇ ವಾಹನ ಚಾಲನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಬಣಕಲ್, ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರೀ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಅದರಲ್ಲೂ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಮಂದಗತಿಯಲ್ಲಿ ಸಾಗಿದ್ದವು. ಭಾರಿ ಮಳೆಗೆ ರಸ್ತೆ ಕಾಣದೆ ಹಲವರು ರಸ್ತೆ ಬದಿ ವಾಹನ ನಿಲ್ಲಿಸಿಕೊಂಡಿದ್ದರು.

ಬೆಂಗಳೂರಲ್ಲಿ ಸಣ್ಣ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ಕಳೆದ ನಾಲ್ಕೈದು ದಿನಗಳಿಂದ ಮಳೆಯು ಮಾಯವಾಗಿತ್ತು. ನಗರದ ಹಲವು ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಶುರುವಾಗಿತ್ತು. ಮುಖ್ಯವಾಗಿ ಕಾರ್ಪೋರೇಶನ್, ಕೆಆರ್‌ ಮಾರ್ಕೆಟ್, ಮೆಜೆಸ್ಟಿಕ್, ಶೇಷಾದ್ರಿಪುರಂ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯುನ್ನುಂಟಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕುಮಟಾದಲ್ಲಿ ಅತಿ ಹೆಚ್ಚು ಮಳೆ ದಾಖಲು

ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ಉತ್ತರ ಕನ್ನಡದ ಕುಮಟಾದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 9 ಸೆಂ.ಮೀ ದಾಖಲಾಗಿದೆ.

ಉಳಿದಂತೆ ಗೇರ್ಸೊಪ್ಪ, ಗೋಕರ್ಣ, ಅಂಕೋಲಾ, ಗದಗದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಕಿ, ಹಳಿಯಾಳ, ಶಿರಾಲಿ ಪಿಟಿಒ, ಸಂಕೇಶ್ವರ , ಕುಶಾಲನಗರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಇನ್ನೂ ಕಾರವಾರ, ಹೊನ್ನಾವರ, ನಿಪ್ಪಾಣಿಯಲ್ಲಿ 3 ಸೆಂ.ಮೀ ಹಾಗೂ ಯಲ್ಲಾಪುರ, ಮುಂಡಗೋಡು , ಚಿಕ್ಕೋಡಿ , ಹಿಡಕಲ್ ಅಣೆಕಟ್ಟು, ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲದಲ್ಲಿ 2 ಸೆಂ.ಮೀ ಮಳೆಯಾಗಿದೆ. ಬೆಳ್ತಂಗಡಿ, ಸಿದ್ದಾಪುರ, ಜಗಲಬೆಟ್, ಕೋಟ, ಕಿರವ, ಕದ್ರಾ, ಲೋಂಡಾ, ಹಾವೇರಿ ಪಿಟಿಒ, ಔರಾದ್ , ಧಾರವಾಡ ಹಾಗೂ ಕುಂದಗೋಳ, ಚಿಂತಾಮಣಿ, ರಾಯಲ್ಪಾಡು, ಸೋಮವಾರಪೇಟೆ, ಕೊಡಗು, ಹಾರಂಗಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಜೂನ್‌ 18ರಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿಯು ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Union Budget 2024
ದೇಶ3 mins ago

Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

Wild boar hunting in Hebbatti village Arrest of two accused
ಉತ್ತರ ಕನ್ನಡ9 mins ago

Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

a successful kidney transplanted for 32 year old woman at Fortis Hospital
ಕರ್ನಾಟಕ11 mins ago

Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ

Saved Goats
ದೇಶ14 mins ago

Bakrid: ಬಕ್ರೀದ್ ವೇಳೆ ಜೈನರು ಮುಸ್ಲಿಮರ ವೇಷ ಧರಿಸಿ 124 ಮೇಕೆ ಖರೀದಿಸಿದರು! ಉದ್ದೇಶ ಹೃದಯಸ್ಪರ್ಶಿ

Self Harming
ಕರ್ನಾಟಕ23 mins ago

Self Harming: ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Adequately deposit the crop insurance amount in the farmers account says MLA Shivaram Hebbar
ಉತ್ತರ ಕನ್ನಡ23 mins ago

Uttara Kannada News: ಬೆಳೆ ವಿಮೆ ಮೊತ್ತ ಸಮರ್ಪಕವಾಗಿ ರೈತರ ಖಾತೆಗೆ ಜಮಾ ಮಾಡಿ; ಹೆಬ್ಬಾರ್

Youth Empowerment and Sports Department Progress Review Meeting by CM Siddaramaiah
ಕರ್ನಾಟಕ30 mins ago

Bengaluru News: ಎಲ್ಲ ಕಾಮಗಾರಿಗಳಿಗೂ ಟೆಂಡರ್‌; ಸಿದ್ದರಾಮಯ್ಯ ಸೂಚನೆ

JDS protest against petrol diesel price hike in bengaluru
ಕರ್ನಾಟಕ33 mins ago

Petrol Deisel Price Hike: ಟಾಂಗಾ, ಸೈಕಲ್ ಸವಾರಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಜೆಡಿಎಸ್ ನಾಯಕರು!

Protest demanding adequate bus facility in Shira
ತುಮಕೂರು35 mins ago

Shira News: ಶಿರಾದಲ್ಲಿ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

Two bears were spotted in Devasamudra village of Kampli
ಕರ್ನಾಟಕ38 mins ago

Ballari News: ಕಂಪ್ಲಿಯ ದೇವಸಮುದ್ರ ಗ್ರಾಮದಲ್ಲಿ ಎರಡು ಕರಡಿ ಪ್ರತ್ಯಕ್ಷ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌