Yallapura News: ಎಸ್ಎಸ್ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿ ಬದುಕಿನಲ್ಲಿ ಮುಖ್ಯ ಘಟ್ಟ: ಶ್ರೀರಾಮ ಹೆಗಡೆ - Vistara News

ಉತ್ತರ ಕನ್ನಡ

Yallapura News: ಎಸ್ಎಸ್ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿ ಬದುಕಿನಲ್ಲಿ ಮುಖ್ಯ ಘಟ್ಟ: ಶ್ರೀರಾಮ ಹೆಗಡೆ

Yallapura News: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಗಳಿಸುವ ಅವಕಾಶ ಕಲ್ಪಿಸಲು ಪ್ರೇರಣಾ ಶಿಬಿರವನ್ನು ಆಯೋಜಿಸಿರುವುದು ಮಾದರಿಯ ಸಂಗತಿಯಾಗಿದೆ ಎಂದು ಕ್ಷೇತ್ರ ಸಂಯೋಜನಾಧಿಕಾರಿ ಶ್ರೀರಾಮ ಹೆಗಡೆ ಹೇಳಿದ್ದಾರೆ.

VISTARANEWS.COM


on

Field Coordinator Sriram Hegde yallapura
ಪ್ರೇರಣಾ ಶಿಬಿರವನ್ನು ಉದ್ಘಾಟಿಸಿದ ಕ್ಷೇತ್ರ ಸಂಯೋಜನಾಧಿಕಾರಿಗಳಾದ ಶ್ರೀರಾಮ ಹೆಗಡೆ .
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ವಿದ್ಯಾರ್ಥಿ ಬದುಕಿನಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆಯು (SSLC exam) ಮುಖ್ಯವಾದ ಘಟ್ಟವಾಗಿದೆ. ಅಧ್ಯಯನ, ಮನನಗಳಿಂದ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಸಂಯೋಜನಾಧಿಕಾರಿ ಶ್ರೀರಾಮ ಹೆಗಡೆ ಅಭಿಪ್ರಾಯಪಟ್ಟರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಸಂಯೋಜನೆಯಲ್ಲಿ ತಾಲೂಕಿನ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಎಲ್ಲ ವಿಷಯಗಳಲ್ಲಿ ಉತ್ತಮ ಅಂಕ ಬರುವಲ್ಲಿ ಹಾಗೂ ಪರೀಕ್ಷಾ ಭಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪ್ರತಿ ವಾರ ಪ್ರೇರಣಾ ತರಗತಿಗಳನ್ನೂ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಸಭಾಭವನದಲ್ಲಿ ಬುಧವಾರ (ಮಾ.8) ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಲ್ಲಾಪುರ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಗಳಿಸುವ ಅವಕಾಶ ಕಲ್ಪಿಸಲು ವಿಶ್ವ ದರ್ಶನ ಶಿಕ್ಷಣ ಸಂಸ್ಥೆಯು ಎರಡು ದಿನಗಳ ಪ್ರೇರಣಾ ಶಿಬಿರವನ್ನು ಆಯೋಜಿಸಿರುವುದು ಮಾದರಿಯ ಸಂಗತಿಯಾಗಿದೆ ಎಂದರು.

ಇದನ್ನೂ ಓದಿ: High Court Recruitment 2023 : ರಾಜ್ಯ ಹೈಕೋರ್ಟ್‌ನಲ್ಲಿ 39 ಚಾಲಕ ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಶಿಕ್ಷಣ ಎಲ್ಲರ ಹಕ್ಕು. ಅದನ್ನು ಪಡೆಯುವುದು ಒಂದು ಭಾಗ್ಯವಾಗಿದೆ. ವಿದ್ಯಾರ್ಥಿಗಳು ತಜ್ಞರಿಂದ ಕಲಿತುಕೊಳ್ಳುವ ಅವಕಾಶವನ್ನು ಕಲ್ಪಿಸಿದ್ದೇವೆ. ಶಿಕ್ಷಣಕ್ಕಾಗಿ ವಲಸೆ ಹೋಗುವ ಸನ್ನಿವೇಶ ತಪ್ಪಬೇಕು. ನಾವಿರುವಲ್ಲಿಯೇ ಉತ್ತಮ ಶೈಕ್ಷಣಿಕ ಅವಕಾಶಗಳನ್ನು ತೆರೆಯಬೇಕು ಆ ಕಾರ್ಯವನ್ನು ವಿಶ್ವ ದರ್ಶನ ಶಿಕ್ಷಣ ಸಂಸ್ಥೆ ಕೈಗೆತ್ತಿಕೊಂಡಿದೆ. ವಿದ್ಯಾರ್ಥಿಗಳು ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು” ಎಂದು ಸಭಾಧ್ಯಕ್ಷತೆಯನ್ನು ನಿರ್ವಹಿಸಿದ ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ ಸಂದೇಶ ನೀಡಿದರು.

ಇದನ್ನೂ ಓದಿ: ಅಣ್ಣಾಮಲೈ ವಿರುದ್ಧ ಆಕ್ರೋಶ: ತ.ನಾಡು ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಪದಾಧಿಕಾರಿಗಳು

ಪ್ರೇರಣಾ ಶಿಬಿರದ ಸಂಯೋಜನೆ, ನೀತಿ ನಿಯಮಾವಳಿಗಳನ್ನು ಕಾಲೇಜಿನ ಪ್ರಾಚಾರ್ಯ ಡಾ. ದತ್ತಾತ್ರೇಯ ಗಾಂವ್ಕರ್ ಪ್ರಾಸ್ತಾವಿಕ ನುಡಿಯಲ್ಲಿ ತಿಳಿಸಿದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಮುಕ್ತಾ ಶಂಕರ, ಕೇಂದ್ರೀಯ ಶಾಲೆಯ ಪ್ರಾಚಾರ್ಯ ಮಹಾದೇವಿ ಭಟ್ ಉಪಸ್ಥಿತರಿದ್ದರು.

ರಂಜಿತಾ ನಾಯಕ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ವಿಭಾಗದ ಸಿಬ್ಬಂದಿ, ಕನ್ನಡ ಮಾಧ್ಯಮ ಪ್ರೌಢಶಾಲೆಯ ಸಿಬ್ಬಂದಿ ಕಾರ್ಯಕ್ರಮದ ಸಂಯೋಜನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ತಾಲೂಕಿನ ಸುಮಾರು 120 ವಿದ್ಯಾರ್ಥಿಗಳು ಪ್ರೇರಣಾ ತರಗತಿಯ ಪ್ರಯೋಜನವನ್ನು ಪಡೆದುಕೊಂಡರು.

ಇದನ್ನೂ ಓದಿ: 2nd PU Exam 2023: ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಶುರು; ಮೇ ಮೊದಲ ವಾರ ಫಲಿತಾಂಶ ಎಂದ ಸಚಿವ ಬಿ.ಸಿ. ನಾಗೇಶ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada Election Result 2024: ಉತ್ತರ ಕನ್ನಡದಲ್ಲಿ ಗೆದ್ದು ಬೀಗಿದ ವಿಶ್ವೇಶ್ವರ ಹೆಗಡೆ ಕಾಗೇರಿ

Uttara Kannada Election Result 2024: ಲೋಕಸಭಾ ಚುನಾವಣೆ ಹಿನ್ನೆಲೆ ಗಮನಿಸಿದರೆ ಈ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತ ಬಂದಿದೆ. ಆದರೆ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾರಮ್ಯ ಮೆರೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕಾರವಾರ, ಶಿರಸಿ, ಹಳಿಯಾಳ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಕುಮಟಾ ಮತ್ತು ಯಲ್ಲಾಪುರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಕಿತ್ತೂರಿನಲ್ಲಿ ಕಾಂಗ್ರೆಸ್‌ ಶಾಸಕರಿದ್ದರೆ, ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ್‌ ಅವರು ಈಗ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಅವರನ್ನು ಸುಮಾರು 60 ಸಾವಿರ ಮತಗಳ ಭಾರಿ ಅಂತರದಿಂದ ಪರಾಭವಗೊಳಿಸಿದ್ದರು. ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಸಮಬಲ ಹೊಂದಿದೆಯಾದರೂ, ಜನಮಾನಸದಲ್ಲಿ ಮೋದಿ ಅವರ ಮೇಲಿನ ಅಭಿಮಾನ ಜೋರಾಗಿತ್ತು.

VISTARANEWS.COM


on

Uttara Kannada Election Result 2024
Koo

ಉತ್ತರ ಕನ್ನಡ: ತೀವ್ರ ಕುತೂಹಲ, ನಿರೀಕ್ಷೆ ಹೆಚ್ಚಿಸಿದ್ದ ಉತ್ತರ ಕನ್ನಡ (Uttara Kannada Election Result 2024) ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಕರ್‌ (Anjali Nimbalkar) ಅವರ ವಿರುದ್ಧ ಕಾಗೇರಿ ಅವರು ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಲೋಕಸಭೆ ಚುನಾವಣೆಯಲ್ಲಿ 2.86 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ರಾಜಕೀಯ ಪುನರ್ಜನ್ಮ ಸಿಕ್ಕಂತಾಗಿದೆ.

ಹಿಂದೆ ಇದು ಕೆನರಾ ಕ್ಷೇತ್ರ

ಈ ಕ್ಷೇತ್ರವನ್ನು ಮೊದಲು ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು. 2008ರಲ್ಲಿ ಕ್ಷೇತ್ರ ಮರು ವಿಂಗಡಣೆ ಆದ ಬಳಿಕ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಎಂದು ಬದಲಾಯಿತು. ಈ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ವಿಶೇಷ ಅಂದರೆ ಇದರಲ್ಲಿ ಬೆಳಗಾವಿಯ ಕಿತ್ತೂರು ಮತ್ತು ಖಾನಾಪುರ ವಿಧಾನಸಭಾ ಕ್ಷೇತ್ರಗಳೂ ಸೇರಿಕೊಂಡಿವೆ.

ಲೋಕಸಭಾ ಚುನಾವಣೆ ಹಿನ್ನೆಲೆ ಗಮನಿಸಿದರೆ ಈ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತ ಬಂದಿದೆ. ಆದರೆ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾರಮ್ಯ ಮೆರೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕಾರವಾರ, ಶಿರಸಿ, ಹಳಿಯಾಳ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಕುಮಟಾ ಮತ್ತು ಯಲ್ಲಾಪುರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಕಿತ್ತೂರಿನಲ್ಲಿ ಕಾಂಗ್ರೆಸ್‌ ಶಾಸಕರಿದ್ದರೆ, ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ್‌ ಅವರು ಈಗ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಅವರನ್ನು ಸುಮಾರು 60 ಸಾವಿರ ಮತಗಳ ಭಾರಿ ಅಂತರದಿಂದ ಪರಾಭವಗೊಳಿಸಿದ್ದರು. ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಸಮಬಲ ಹೊಂದಿದೆಯಾದರೂ, ಜನಮಾನಸದಲ್ಲಿ ಮೋದಿ ಅವರ ಮೇಲಿನ ಅಭಿಮಾನ ಜೋರಾಗಿತ್ತು. ಹಾಗಾಗಿ ಬಿಜೆಪಿ ಈ ಬಾರಿಯೂ ಇಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದೆ ಎಂದೇ ಹೇಳಲಾಗುತ್ತಿತ್ತು. ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಉತ್ತರ ಕನ್ನಡದವರಲ್ಲ ಎನ್ನುವುದು ಕೂಡ ಬಿಜೆಪಿಗೆ ವರದಾನವಾಗಿತ್ತು. ಹಿಂದಿನ ಎಲ್ಲ ಚುನಾವಣೆಗಳಲ್ಲಿ ಕಿತ್ತೂರು ಮತ್ತು ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಅನಂತ್‌ ಕುಮಾರ್‌ ಹೆಗಡೆ ಅವರಿಗೆ ಭಾರೀ ಲೀಡ್‌ ಸಿಗುತ್ತಿತ್ತು. ಆದರೆ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಖಾನಾಪುರದವರು.

Uttara Kannada Lok Sabha Constituency BJP Candidate Vishweshwara Hegde Kageri latest Statement

ಕ್ಷೇತ್ರದ ಚುನಾವಣಾ ಹಿನ್ನೋಟ

1952ರ ಕೆನರಾ ಲೋಕಸಭೆ ಕ್ಷೇತ್ರದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜೋಕಿಂ ಆಳ್ವಾ ಅವರು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಇವರು ಕಾಂಗ್ರೆಸ್‌ ನಾಯಕಿಯಾಗಿದ್ದ ಮಾರ್ಗರೇಟ್ ಆಳ್ವಾ ಅವರ ಮಾವ. ಮುಂದೆ 1957, 1962ರಲ್ಲೂ ಇವರು ಜಯ ಸಾಧಿಸಿದ್ದರು. 1967ರಲ್ಲಿ ಚುಟುಕು ಖ್ಯಾತಿಯ ದಿನಕರ ದೇಸಾಯಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. 1971ರಲ್ಲಿ ಕಾಂಗ್ರೆಸ್‌ನ ಬಿ ವಿ ನಾಯ್ಕ್ ಗೆಲುವು ಸಾಧಿಸಿದರು. 1977ರಲ್ಲಿ ಕಾಂಗ್ರೆಸ್‌ನ ಬಿ ಪಿ ಕದಂ ಗೆದ್ದರು. ಆ ಬಳಿಕ 1980ರಿಂದ 1991ರವರೆಗೆ ನಿರಂತರ ನಾಲ್ಕು ಚುನಾವಣೆಗಳಲ್ಲಿ ಜಿ ದೇವರಾಯ ನಾಯ್ಕ್ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದರು. 1996ರ ನಂತರ ಹಿಂದೂ ಜಾಗರಣ ವೇದಿಕೆಯಿಂದ ಬಿಜೆಪಿ ಪ್ರವೇಶಿಸಿದ ಅನಂತ್ ಕುಮಾರ್ ಹೆಗಡೆ ಜಯಭೇರಿ ಬಾರಿಸುತ್ತ ಬಂದರು.

Ask your wives how much gas costs; Congress candidate question to BJP workers

ಘಟಾನುಘಟಿಗಳನ್ನು ಸೋಲಿಸಿದ ಕ್ಷೇತ್ರ ಇದು!

ಈ ಲೋಕಸಭಾ ಕ್ಷೇತ್ರದಲ್ಲಿ ದಿನಕರ ದೇಸಾಯಿ, ಶಿವರಾಮ ಕಾರಂತ, ರಾಮಕೃಷ್ಣ ಹೆಗಡೆ, ಅನಂತ್‌ ನಾಗ್‌ ಸೋತು ಹೋಗಿದ್ದರು! ನಾಡಿನ ಖ್ಯಾತ ಕವಿ ಮತ್ತು ಶಿಕ್ಷಣ ತಜ್ಞರಾಗಿದ್ದ ದಿನಕರ ದೇಸಾಯಿ ಅವರು 1971ರ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಎಲ್ಲ ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸದೆ ದಿನಕರ ದೇಸಾಯಿ ಅವರಿಗೆ ಬೆಂಬಲ ಘೋಷಿಸಿದ್ದವು. ಆದರೆ ದಿನಕರ ದೇಸಾಯಿ ಸೋತು ಹೋದರು. ಕಾಂಗ್ರೆಸ್‌ ಅಭ್ಯರ್ಥಿ ಬಿ ವಿ ನಾಯಕ್‌ 1,61,296 ಮತಗಳನ್ನು ಗಳಿಸಿದರೆ, ದಿನಕರ ದೇಸಾಯಿ ಅವರಿಗೆ ಬಿದ್ದಿದ್ದು ಕೇವಲ 64,517 ಮತಗಳು.

ಉತ್ತರ ಕನ್ನಡವು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹುಟ್ಟೂರು. ಆದರೆ 1977ರ ಲೋಕಸಭೆ ಚುನಾವಣೆಯಲ್ಲಿ ಜನತಾ ಪರಿವಾರದ ಭಾರತೀಯ ಲೋಕ ದಳ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಮಕೃಷ್ಣ ಹೆಗಡೆ ಅವರು ಸೋಲು ಅನುಭವಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಬಿ ಪಿ ಕದಂ 1,95,974 ಮತಗಳನ್ನು ಪಡೆದು ಗೆದ್ದರೆ, ರಾಮಕೃಷ್ಣ ಹೆಗಡೆ ಅವರಿಗೆ 1,61,580 ಮತಗಳು ಬಿದ್ದಿದ್ದವು.

1989ರಲ್ಲಿ ಇದೇ ಕ್ಷೇತ್ರದಿಂದ ಖ್ಯಾತ ಸಾಹಿತಿ ಶಿವರಾಮ ಕಾರಂತರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಅವರ ಸ್ಪರ್ಧೆಗೂ ಒಂದು ಕಾರಣ ಇತ್ತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆಗ ಕೈಗಾ ವಿರೋಧಿ ಹೋರಾಟ ಭುಗಿಲೆದ್ದಿತ್ತು. ಶಿವರಾಮ ಕಾರಂತರು ಈ ಹೋರಾಟದ ಮುಂಚೂಣಿಯಲ್ಲಿದ್ದರು. ಪರಿಸರವಾದಿಗಳೆಲ್ಲರ ಒತ್ತಾಸೆಯ ಮೇರೆಗೆ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. ಆ ವರ್ಷ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಒಟ್ಟಿಗೇ ನಡೆದಿದ್ದವು. ಬಿಜೆಪಿ ಪಕ್ಷವು ಕೆನರಾ ಲೋಕಸಭೆಗೆ ತನ್ನ ಅಭ್ಯರ್ಥಿಯನ್ನು ನಿಲ್ಲಿಸದೆ ಶಿವರಾಮ ಕಾರಂತರಿಗೆ ಬೆಂಬಲ ನೀಡಿತು. ಶಿವರಾಮ ಕಾರಂತರ ಪರ ಪ್ರಚಾರ ಜೋರಾಗಿ ನಡೆಯಿತು. ಆದರೆ ಶಿವರಾಮ ಕಾರಂತರು ಒಂದು ದಿನವೂ ಪ್ರಚಾರದಲ್ಲಿ ಭಾಗಿಯಾಗದೆ ವಿದೇಶ ಪ್ರವಾಸಕ್ಕೆ ಹೊರಟರು! ಮತ್ತೊಂದು ವಿಶೇಷ ಏನೆಂದರೆ, ಜನತಾ ದಳದ ಅಭ್ಯರ್ಥಿಯಾಗಿ ಜನಪ್ರಿಯ ನಟ ಅನಂತ್‌ನಾಗ್‌ ಸ್ಪರ್ಧಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ದೇವರಾಯ ನಾಯ್ಕ್‌ 2,40,571 ಮತಗಳನ್ನು ಪಡೆದು ಜಯಶಾಲಿಯಾದರು. 2,೦9,003 ಮತ ಪಡೆದ ಅನಂತ್‌ನಾಗ್‌ ದ್ವಿತೀಯ ಸ್ಥಾನಿಯಾದರು. ರೈತ ಸಂಘದ ಅಭ್ಯರ್ಥಿ ಬಸಣ್ಣ 80,566 ಮತಗಳನ್ನು ಪಡೆದು ಮೂರನೇ ಸ್ಥಾನಿಯಾದರೆ, ಶಿವರಾಮ ಕಾರಂತರಿಗೆ ಸಿಕ್ಕಿದ್ದು ಕೇವಲ 58,902 ಮತಗಳು.

2014ರ ಚುನಾವಣೆ ಫಲಿತಾಂಶ
ಅನಂತ್ ಕುಮಾರ್ ಹೆಗಡೆ, ಬಿಜೆಪಿ: 5.46 ಲಕ್ಷ ಮತ
ಪ್ರಶಾಂತ್ ಆರ್ ದೇಶಪಾಂಡೆ, ಕಾಂಗ್ರೆಸ್‌: 4.06 ಲಕ್ಷ ಮತ
ಗೆಲುವಿನ ಅಂತರ: 1 ಲಕ್ಷಕ್ಕೂ ಅಧಿಕ

2019ರ ಚುನಾವಣೆ ಫಲಿತಾಂಶ
ಅನಂತ್ ಕುಮಾರ್ ಹೆಗಡೆ, ಬಿಜೆಪಿ: 7.86 ಲಕ್ಷ ಮತ
ಆನಂದ್‌ ಅಸ್ನೋಟಿಕರ್‌, ಕಾಂಗ್ರೆಸ್‌: 3.06 ಲಕ್ಷ ಮತ
ಗೆಲುವಿನ ಅಂತರ: 4.8 ಲಕ್ಷ

ಇದನ್ನೂ ಓದಿ: Dharwad Election Result 2024: ಪ್ರಲ್ಹಾದ್‌ ಜೋಶಿಗೆ ‘ಧಾರವಾಡ ಪೇಡಾ’; ಅಸೂಟಿಗೆ ಸೋಲು

Continue Reading

ಮಳೆ

Karnataka Weather : ಹವಾಮಾನ ತಜ್ಞರ ವಾರ್ನಿಂಗ್‌; ಇನ್ನೊಂದು ವಾರ ವಿಪರೀತ ಮಳೆ, ಜೂ.6ರ ವರೆಗೂ ಮೀನುಗಾರಿಕೆಗೆ ಬ್ರೇಕ್‌

Heavy Rain Warning: ರಾಜ್ಯಾದ್ಯಂತ (Karnataka Weather forecast) ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Yellow Alert) ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Waring) ನೀಡಲಾಗಿದೆ

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Monsoon rains) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಕೆಲವು ಭಾಗಗಳಲ್ಲಿ ಮುಂದುವರೆದಿದೆ. ಜೂ.4ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ (Rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ. ಜತೆಗೆ ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರದೊಂದಿಗೆ ಶುರುವಾಗಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

ಜೂ.6ರ ವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ 35- 45 ಕಿ.ಮೀ ಗಾಳಿ ಬೀಸಲಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಇದೆ. ಹೀಗಾಗಿ ಜೂನ್ 4 ರಿಂದ ಜೂನ್ 6ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಯೆಲ್ಲೋ‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Uttara Kannada News: ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.

VISTARANEWS.COM


on

First PU Class Commencement Programme at Vishwadarshana College
Koo

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ (Uttara Kannada News) ನಡೆಯಿತು.

ವಿಶ್ವದರ್ಶನ ಶಿಕ್ಷಣ ಸಮೂಹದ ಸಿಇಒ ಅಜಯ್ ಭಾರತೀಯ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮಾಡುವ ಕಾರ್ಯ ಸ್ವಹಿತದ ಜತೆಗೆ ದೇಶದ ಹಿತವನ್ನು ಸಾಧಿಸುವಂತಿರಬೇಕು. ಶಿಕ್ಷಣ ನೀಡಬೇಕಾದ, ಪಡೆಯಬೇಕಾದ ಎಲ್ಲರೂ ರಾಷ್ಟ್ರದ ಘನತೆ, ಗೌರವವನ್ನು ಕಾಪಾಡುವ ಆಲೋಚನೆಯನ್ನು ಸದಾ ಮಾಡುತ್ತಿರಬೇಕು ಎಂದು ಹೇಳಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

ಕಾಲೇಜಿನ ಪ್ರಾಚಾರ್ಯ ಡಿ.ಕೆ. ಗಾಂವ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಿಗಾಗಿ ಸಂಪತ್ತು ಮಾಡುವುದಕ್ಕಿಂತ ಮಕ್ಕಳನ್ನೇ ಸಂಪತ್ತಾಗಿಸುವುದು ಸೂಕ್ತ. ಜ್ಞಾನ ಸಂಪತ್ತಿನಿಂದ ಮಕ್ಕಳನ್ನು ಶ್ರೀಮಂತರಾಗಿಸುವ ಮಾರ್ಗವೇ ಶ್ರೇಷ್ಠವಾದದ್ದು ಆ ಕಾರ್ಯವನ್ನು ವಿಶ್ವದರ್ಶನ ಮಾಡುತ್ತಿದೆ‌ ಎಂದರು.

ಅದಕ್ಕಾಗಿ ನಮ್ಮ ಪಿಯು ಕಾಲೇಜು ಉತ್ತಮ ಮೂಲಸೌಕರ್ಯ ಮತ್ತು ನುರಿತ ಉಪನ್ಯಾಸಕ ವರ್ಗವನ್ನು ಹೊಂದಿದೆ ಎಂದು ಹೇಳಿದರಲ್ಲದೇ, ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಕಾಲೇಜಿನ ಉಪನ್ಯಾಸಕ ವರ್ಗವನ್ನು ಪರಿಚಯಿಸಿ, ಕಾಲೇಜಿನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಮಾಜಿ ವಿದ್ಯಾರ್ಥಿಗಳಾದ ಅಪೂರ್ವ ಹಾಗೂ ಶ್ರೀಗೌರಿ ಭಟ್, ಕಾಲೇಜಿನಲ್ಲಿ ತಮ್ಮ ಅನುಭವ ಜೀವನಪೂರ್ತಿ ಸ್ಮರಿಸುವಂತದ್ದು ಎಂದು ಅನಿಸಿಕೆ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 42 ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ, ಗೌರವಿಸಲಾಯಿತು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

ಶ್ರಾವ್ಯ ಪ್ರಾರ್ಥಿಸಿದಳು. ಉಪನ್ಯಾಸಕ ಗುರುರಾಜ್ ಭಟ್ ನಿರ್ವಹಿಸಿದರು. ಉಪ ಪ್ರಾಂಶುಪಾಲ ನಾಗರಾಜ ಹೆಗಡೆ ವಂದಿಸಿದರು.

Continue Reading

ಉತ್ತರ ಕನ್ನಡ

Uttara Kannada Lok Sabha Constituency: ಉತ್ತರ ಕನ್ನಡ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ?

Uttara Kannada Lok Sabha Constituency: ಲೋಕಸಭಾ ಚುನಾವಣೆ ಹಿನ್ನೆಲೆ ಗಮನಿಸಿದರೆ ಈ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತ ಬಂದಿದೆ. ಆದರೆ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾರಮ್ಯ ಮೆರೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕಾರವಾರ, ಶಿರಸಿ, ಹಳಿಯಾಳ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಕುಮಟಾ ಮತ್ತು ಯಲ್ಲಾಪುರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಕಿತ್ತೂರಿನಲ್ಲಿ ಕಾಂಗ್ರೆಸ್‌ ಶಾಸಕರಿದ್ದರೆ, ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ್‌ ಅವರು ಈಗ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಅವರನ್ನು ಸುಮಾರು 60 ಸಾವಿರ ಮತಗಳ ಭಾರಿ ಅಂತರದಿಂದ ಪರಾಭವಗೊಳಿಸಿದ್ದರು. ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಸಮಬಲ ಹೊಂದಿದೆಯಾದರೂ, ಜನಮಾನಸದಲ್ಲಿ ಮೋದಿ ಅವರ ಮೇಲಿನ ಅಭಿಮಾನ ಜೋರಾಗಿದೆ.

VISTARANEWS.COM


on

Uttara Kannada Lok Sabha Constituency
Koo

ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಈ ಎರಡೂ ಪಕ್ಷಗಳು ಪ್ರಬಲವಾಗಿವೆ. 1996ರವರೆಗೂ ಇಲ್ಲಿ ಕಾಂಗ್ರೆಸ್‌ ಅಧಿಪತ್ಯ ಸಾಧಿಸಿತ್ತು. ಆದರೆ 1996ರ ಲೋಕಸಭೆ ಚುನಾವಣೆಯಲ್ಲಿ ಅನಂತ್‌ ಕುಮಾರ್‌ ಹೆಗಡೆ ಗೆಲುವಿನ ಮೂಲಕ ಬಿಜೆಪಿ ಇಲ್ಲಿ ಖಾತೆ ತೆರೆಯಿತು. ಅಲ್ಲಿಂದ ಅನಂತ್‌ ಕುಮಾರ್‌ ಹೆಗಡೆ ನಿರಂತರ ಏಳು ಬಾರಿ ಸ್ಪರ್ಧಿಸಿ ಆರು ಬಾರಿ ಜಯಭೇರಿ ಬಾರಿಸಿದ್ದರು. ಒಮ್ಮೆ ಮಾತ್ರ 1999ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಾರ್ಗರೇಟ್‌ ಆಳ್ವಾ ವಿರುದ್ಧ ಪರಾಭವ ಅನುಭವಿಸಿದ್ದರು. ಆದರೆ ಈ ಬಾರಿ ಅನಂತ್‌ ಕುಮಾರ್‌ ಹೆಗಡೆ ಅವರಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನಿರಾಕರಿಸಿ ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಿದೆ. ಕಾಂಗ್ರೆಸ್‌ನಿಂದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್‌ ಅವರನ್ನು ಕಣಕ್ಕಿಳಿಸಲಾಗಿದೆ.

ಹಿಂದೆ ಇದು ಕೆನರಾ ಕ್ಷೇತ್ರ

ಈ ಕ್ಷೇತ್ರವನ್ನು ಮೊದಲು ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು. 2008ರಲ್ಲಿ ಕ್ಷೇತ್ರ ಮರು ವಿಂಗಡಣೆ ಆದ ಬಳಿಕ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಎಂದು ಬದಲಾಯಿತು. ಈ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ವಿಶೇಷ ಅಂದರೆ ಇದರಲ್ಲಿ ಬೆಳಗಾವಿಯ ಕಿತ್ತೂರು ಮತ್ತು ಖಾನಾಪುರ ವಿಧಾನಸಭಾ ಕ್ಷೇತ್ರಗಳೂ ಸೇರಿಕೊಂಡಿವೆ.

Uttara Kannada Lok Sabha Constituency BJP Candidate Vishweshwara Hegde Kageri latest Statement

ಬಿಜೆಪಿ, ಕಾಂಗ್ರೆಸ್‌ ಸಮಬಲ

ಲೋಕಸಭಾ ಚುನಾವಣೆ ಹಿನ್ನೆಲೆ ಗಮನಿಸಿದರೆ ಈ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತ ಬಂದಿದೆ. ಆದರೆ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾರಮ್ಯ ಮೆರೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕಾರವಾರ, ಶಿರಸಿ, ಹಳಿಯಾಳ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಕುಮಟಾ ಮತ್ತು ಯಲ್ಲಾಪುರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಕಿತ್ತೂರಿನಲ್ಲಿ ಕಾಂಗ್ರೆಸ್‌ ಶಾಸಕರಿದ್ದರೆ, ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ್‌ ಅವರು ಈಗ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಅವರನ್ನು ಸುಮಾರು 60 ಸಾವಿರ ಮತಗಳ ಭಾರಿ ಅಂತರದಿಂದ ಪರಾಭವಗೊಳಿಸಿದ್ದರು. ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಸಮಬಲ ಹೊಂದಿದೆಯಾದರೂ, ಜನಮಾನಸದಲ್ಲಿ ಮೋದಿ ಅವರ ಮೇಲಿನ ಅಭಿಮಾನ ಜೋರಾಗಿದೆ. ಹಾಗಾಗಿ ಬಿಜೆಪಿ ಈ ಬಾರಿಯೂ ಇಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಉತ್ತರ ಕನ್ನಡದವರಲ್ಲ ಎನ್ನುವುದು ಕೂಡ ಬಿಜೆಪಿಗೆ ವರದಾನವಾಗಿದೆ. ಹಿಂದಿನ ಎಲ್ಲ ಚುನಾವಣೆಗಳಲ್ಲಿ ಕಿತ್ತೂರು ಮತ್ತು ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಅನಂತ್‌ ಕುಮಾರ್‌ ಹೆಗಡೆ ಅವರಿಗೆ ಭಾರೀ ಲೀಡ್‌ ಸಿಗುತ್ತಿತ್ತು. ಆದರೆ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಖಾನಾಪುರದವರು. ಹಾಗಾಗಿ ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಎಷ್ಟು ಮತಗಳು ಬೀಳುತ್ತವೆ ಎನ್ನುವುದೂ ಮಹತ್ವದ್ದಾಗಿದೆ.

ಕ್ಷೇತ್ರದ ಚುನಾವಣಾ ಹಿನ್ನೋಟ

1952ರ ಕೆನರಾ ಲೋಕಸಭೆ ಕ್ಷೇತ್ರದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜೋಕಿಂ ಆಳ್ವಾ ಅವರು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಇವರು ಕಾಂಗ್ರೆಸ್‌ ನಾಯಕಿಯಾಗಿದ್ದ ಮಾರ್ಗರೇಟ್ ಆಳ್ವಾ ಅವರ ಮಾವ. ಮುಂದೆ 1957, 1962ರಲ್ಲೂ ಇವರು ಜಯ ಸಾಧಿಸಿದ್ದರು. 1967ರಲ್ಲಿ ಚುಟುಕು ಖ್ಯಾತಿಯ ದಿನಕರ ದೇಸಾಯಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. 1971ರಲ್ಲಿ ಕಾಂಗ್ರೆಸ್‌ನ ಬಿ ವಿ ನಾಯ್ಕ್ ಗೆಲುವು ಸಾಧಿಸಿದರು. 1977ರಲ್ಲಿ ಕಾಂಗ್ರೆಸ್‌ನ ಬಿ ಪಿ ಕದಂ ಗೆದ್ದರು. ಆ ಬಳಿಕ 1980ರಿಂದ 1991ರವರೆಗೆ ನಿರಂತರ ನಾಲ್ಕು ಚುನಾವಣೆಗಳಲ್ಲಿ ಜಿ ದೇವರಾಯ ನಾಯ್ಕ್ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದರು. 1996ರ ನಂತರ ಹಿಂದೂ ಜಾಗರಣ ವೇದಿಕೆಯಿಂದ ಬಿಜೆಪಿ ಪ್ರವೇಶಿಸಿದ ಅನಂತ್ ಕುಮಾರ್ ಹೆಗಡೆ ಜಯಭೇರಿ ಬಾರಿಸುತ್ತ ಬಂದರು.

ಘಟಾನುಘಟಿಗಳನ್ನು ಸೋಲಿಸಿದ ಕ್ಷೇತ್ರ ಇದು!

ಈ ಲೋಕಸಭಾ ಕ್ಷೇತ್ರದಲ್ಲಿ ದಿನಕರ ದೇಸಾಯಿ, ಶಿವರಾಮ ಕಾರಂತ, ರಾಮಕೃಷ್ಣ ಹೆಗಡೆ, ಅನಂತ್‌ ನಾಗ್‌ ಸೋತು ಹೋಗಿದ್ದರು! ನಾಡಿನ ಖ್ಯಾತ ಕವಿ ಮತ್ತು ಶಿಕ್ಷಣ ತಜ್ಞರಾಗಿದ್ದ ದಿನಕರ ದೇಸಾಯಿ ಅವರು 1971ರ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಎಲ್ಲ ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸದೆ ದಿನಕರ ದೇಸಾಯಿ ಅವರಿಗೆ ಬೆಂಬಲ ಘೋಷಿಸಿದ್ದವು. ಆದರೆ ದಿನಕರ ದೇಸಾಯಿ ಸೋತು ಹೋದರು. ಕಾಂಗ್ರೆಸ್‌ ಅಭ್ಯರ್ಥಿ ಬಿ ವಿ ನಾಯಕ್‌ 1,61,296 ಮತಗಳನ್ನು ಗಳಿಸಿದರೆ, ದಿನಕರ ದೇಸಾಯಿ ಅವರಿಗೆ ಬಿದ್ದಿದ್ದು ಕೇವಲ 64,517 ಮತಗಳು.

ಉತ್ತರ ಕನ್ನಡವು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹುಟ್ಟೂರು. ಆದರೆ 1977ರ ಲೋಕಸಭೆ ಚುನಾವಣೆಯಲ್ಲಿ ಜನತಾ ಪರಿವಾರದ ಭಾರತೀಯ ಲೋಕ ದಳ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಮಕೃಷ್ಣ ಹೆಗಡೆ ಅವರು ಸೋಲು ಅನುಭವಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಬಿ ಪಿ ಕದಂ 1,95,974 ಮತಗಳನ್ನು ಪಡೆದು ಗೆದ್ದರೆ, ರಾಮಕೃಷ್ಣ ಹೆಗಡೆ ಅವರಿಗೆ 1,61,580 ಮತಗಳು ಬಿದ್ದಿದ್ದವು.

1989ರಲ್ಲಿ ಇದೇ ಕ್ಷೇತ್ರದಿಂದ ಖ್ಯಾತ ಸಾಹಿತಿ ಶಿವರಾಮ ಕಾರಂತರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಅವರ ಸ್ಪರ್ಧೆಗೂ ಒಂದು ಕಾರಣ ಇತ್ತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆಗ ಕೈಗಾ ವಿರೋಧಿ ಹೋರಾಟ ಭುಗಿಲೆದ್ದಿತ್ತು. ಶಿವರಾಮ ಕಾರಂತರು ಈ ಹೋರಾಟದ ಮುಂಚೂಣಿಯಲ್ಲಿದ್ದರು. ಪರಿಸರವಾದಿಗಳೆಲ್ಲರ ಒತ್ತಾಸೆಯ ಮೇರೆಗೆ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. ಆ ವರ್ಷ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಒಟ್ಟಿಗೇ ನಡೆದಿದ್ದವು. ಬಿಜೆಪಿ ಪಕ್ಷವು ಕೆನರಾ ಲೋಕಸಭೆಗೆ ತನ್ನ ಅಭ್ಯರ್ಥಿಯನ್ನು ನಿಲ್ಲಿಸದೆ ಶಿವರಾಮ ಕಾರಂತರಿಗೆ ಬೆಂಬಲ ನೀಡಿತು. ಶಿವರಾಮ ಕಾರಂತರ ಪರ ಪ್ರಚಾರ ಜೋರಾಗಿ ನಡೆಯಿತು. ಆದರೆ ಶಿವರಾಮ ಕಾರಂತರು ಒಂದು ದಿನವೂ ಪ್ರಚಾರದಲ್ಲಿ ಭಾಗಿಯಾಗದೆ ವಿದೇಶ ಪ್ರವಾಸಕ್ಕೆ ಹೊರಟರು! ಮತ್ತೊಂದು ವಿಶೇಷ ಏನೆಂದರೆ, ಜನತಾ ದಳದ ಅಭ್ಯರ್ಥಿಯಾಗಿ ಜನಪ್ರಿಯ ನಟ ಅನಂತ್‌ನಾಗ್‌ ಸ್ಪರ್ಧಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ದೇವರಾಯ ನಾಯ್ಕ್‌ 2,40,571 ಮತಗಳನ್ನು ಪಡೆದು ಜಯಶಾಲಿಯಾದರು. 2,೦9,003 ಮತ ಪಡೆದ ಅನಂತ್‌ನಾಗ್‌ ದ್ವಿತೀಯ ಸ್ಥಾನಿಯಾದರು. ರೈತ ಸಂಘದ ಅಭ್ಯರ್ಥಿ ಬಸಣ್ಣ 80,566 ಮತಗಳನ್ನು ಪಡೆದು ಮೂರನೇ ಸ್ಥಾನಿಯಾದರೆ, ಶಿವರಾಮ ಕಾರಂತರಿಗೆ ಸಿಕ್ಕಿದ್ದು ಕೇವಲ 58,902 ಮತಗಳು.

2014ರ ಚುನಾವಣೆ ಫಲಿತಾಂಶ
ಅನಂತ್ ಕುಮಾರ್ ಹೆಗಡೆ, ಬಿಜೆಪಿ: 5.46 ಲಕ್ಷ ಮತ
ಪ್ರಶಾಂತ್ ಆರ್ ದೇಶಪಾಂಡೆ, ಕಾಂಗ್ರೆಸ್‌: 4.06 ಲಕ್ಷ ಮತ
ಗೆಲುವಿನ ಅಂತರ: 1 ಲಕ್ಷಕ್ಕೂ ಅಧಿಕ

2019ರ ಚುನಾವಣೆ ಫಲಿತಾಂಶ
ಅನಂತ್ ಕುಮಾರ್ ಹೆಗಡೆ, ಬಿಜೆಪಿ: 7.86 ಲಕ್ಷ ಮತ
ಆನಂದ್‌ ಅಸ್ನೋಟಿಕರ್‌, ಕಾಂಗ್ರೆಸ್‌: 3.06 ಲಕ್ಷ ಮತ
ಗೆಲುವಿನ ಅಂತರ: 4.8 ಲಕ್ಷ

ಇದನ್ನೂ ಓದಿ: Shivamogga Lok Sabha Constituency: ತ್ರಿಕೋನ ಕದನದ ಶಿವಮೊಗ್ಗದಲ್ಲಿ ಯಾರಿಗೆ ವಿಜಯದ ಮಾಲೆ?

Continue Reading
Advertisement
Bagalkot Election Result 2024
ಬಾಗಲಕೋಟೆ2 mins ago

Bagalkot Election Result 2024: ಬಾಗಲಕೋಟೆಯಲ್ಲಿ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ಗೆ ಜಯ

Tumkur Result 2024
ಪ್ರಮುಖ ಸುದ್ದಿ2 mins ago

Tumkur Result 2024 : ತುಮಕೂರಿನಲ್ಲಿ ಸೋಮಣ್ಣಗೆ ಗೆಲುವು, ಕಾಂಗ್ರೆಸ್​ಗೆ ಹಿನ್ನಡೆ

Election Results 2024
Lok Sabha Election 20243 mins ago

Election Results 2024: ಮೈತ್ರಿಕೂಟಕ್ಕೆ ಕಡಿಮೆ ಸ್ಥಾನ; ವಿಷಯ ತಿಳಿದು ಬಿಜೆಪಿ ಅಭಿಮಾನಿ ಹೃದಯಾಘಾತಕ್ಕೆ ಬಲಿ

Rahul Dravid
ಕ್ರೀಡೆ6 mins ago

Rahul Dravid: ಕೋಚ್ ಹುದ್ದೆಯಲ್ಲಿ ಮುಂದುವರಿಯಲ್ಲ; ಅಧಿಕೃತ ಹೇಳಿಕೆ ನೀಡಿದ ದ್ರಾವಿಡ್

Dakshina Kannada Result 2024
ಪ್ರಮುಖ ಸುದ್ದಿ9 mins ago

Dakshina Kannada Result 2024 : ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್​ ಚೌಟಾಗೆ ಭರ್ಜರಿ ವಿಜಯ

Phone Cooling Tips
ಗ್ಯಾಜೆಟ್ಸ್10 mins ago

Phone Cooling Tips: ಸ್ಮಾರ್ಟ್ ಫೋನ್ ಹೆಚ್ಚು ಬಿಸಿಯಾಗುತ್ತಿದೆಯೇ? ಹಾಗಿದ್ದರೆ ಈ 5 ಟಿಪ್ಸ್ ಫಾಲೋ ಮಾಡಿ

Uttara Kannada Election Result 2024
ಉತ್ತರ ಕನ್ನಡ13 mins ago

Uttara Kannada Election Result 2024: ಉತ್ತರ ಕನ್ನಡದಲ್ಲಿ ಗೆದ್ದು ಬೀಗಿದ ವಿಶ್ವೇಶ್ವರ ಹೆಗಡೆ ಕಾಗೇರಿ

Election Results 2024
Lok Sabha Election 202418 mins ago

Election Results 2024: ಕೇರಳದಲ್ಲಿ ಕೊನೆಗೂ ಅರಳಿದ ಕಮಲ; ತ್ರಿಶೂರ್‌ನಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಭರ್ಜರಿ ಜಯ

Dharwad Election Result 2024
ಧಾರವಾಡ20 mins ago

Dharwad Election Result 2024: ಪ್ರಲ್ಹಾದ್‌ ಜೋಶಿಗೆ ‘ಧಾರವಾಡ ಪೇಡಾ’; ಅಸೂಟಿಗೆ ಸೋಲು

Shivamogga Election Result 2024
ಶಿವಮೊಗ್ಗ26 mins ago

Shivamogga Election Result 2024: ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರಗೆ ವಿಜಯಮಾಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ7 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ22 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ22 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌