Site icon Vistara News

Yallapura News: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ತೆಂಗಿನ ಮರ ಬಿದ್ದು ಸಾವು

sanitation worker yallapura

#image_title

ಯಲ್ಲಾಪುರ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಮೈಮೇಲೆ ತೆಂಗಿನ ಮರ (coconut tree) ಬಿದ್ದ ಕಾರಣ ಪಟ್ಟಣ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಂಗಾಮಿ ಪೌರ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಡೇವಿಡ್‌ ಮಾದರ್‌ (39) ಮೃತರು. ಮಧ್ಯಾಹ್ನ ಮಗಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಂದರ್ಭದಲ್ಲಿ ಅಕ್ಬರ್‌ ಗಲ್ಲಿಯಲ್ಲಿರುವ ಮನೆಯ ಸಮೀಪದಲ್ಲಿಯೇ ಇದ್ದ ಒಣಗಿದ ತೆಂಗಿನ ಮರವೊಂದು ಮುರಿದು ತಲೆಯ ಮೇಲೆ ಬಿದ್ದಿದ್ದು, ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Chandanavana Film Critics Academy 2023: ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತಿ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡ ಕಾಂತಾರ, ಕೆಜಿಎಫ್‌-2

Exit mobile version